Tag: ಸ್ಥಗಿತ

  • ಶೂಟಿಂಗ್ ನಿಲ್ಲಿಸಿದ ಪುಷ್ಪ 2 ಟೀಮ್ : ಇಡಿ, ಐಟಿ ದಾಳಿ ಎಫೆಕ್ಟ್

    ಶೂಟಿಂಗ್ ನಿಲ್ಲಿಸಿದ ಪುಷ್ಪ 2 ಟೀಮ್ : ಇಡಿ, ಐಟಿ ದಾಳಿ ಎಫೆಕ್ಟ್

    ಲ್ಲು ಅರ್ಜುನ್ (Allu Arjun) ನಾಯಕನಾಗಿ ನಟಿಸುತ್ತಿರುವ ಪುಷ್ಪ 2 (Pushpa 2) ಸಿನಿಮಾದ ಶೂಟಿಂಗ್ (Shooting) ನಿಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಈ ಸಿನಿಮಾದ ನಿರ್ಮಾಪಕರು ಹಾಗೂ ನಿರ್ದೇಶಕರ ಮನೆ ಹಾಗೂ ಕಚೇರಿಯ ಮೇಲೆ ಇಡಿ ಹಾಗೂ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಶೂಟಿಂಗ್ ಸ್ಥಗಿತ ಮಾಡಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

    ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ (Mythri Movie Makers)ಈ ಸಿನಿಮಾವನ್ನು ನಿರ್ಮಾಣ ಮಾಡಿತ್ತು. ನವೀನ್ ಯೆರ್ನೇನಿ ಹಾಗೂ ಯಲಮಂಚಿಲಿ ರವಿಶಂಕರ್ ಈ ಸಂಸ್ಥೆಯ ನಿರ್ಮಾಪಕರು. ಮೊನ್ನೆ ಬೆಳಗಿನ ಜಾವ ಇವರ ಮನೆ ಹಾಗೂ ಕಚೇರಿಯಲ್ಲಿ ಇಡಿ (ED) ಅಧಿಕಾರಿಗಳು ದಾಳಿ ಮಾಡಿದ್ದು. ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ

    ವಾಲ್ತೇರು ವೀರಯ್ಯ, ವೀರಸಿಂಹ ರೆಡ್ಡಿ ಅಂತ ಬಹುಕೋಟಿ ವೆಚ್ಚದ ಸಿನಿಮಾಗಳನ್ನು ಈ ಸಂಸ್ಥೆ ನಿರ್ಮಾಣ ಮಾಡಿದ್ದು ವಿದೇಶಗಳಲ್ಲಿ ದೊಡ್ಡಬಜೆಟ್ ನ ಚಿತ್ರಗಳನ್ನು ವಿತರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಲಾ ಮಾರ್ಗದಲ್ಲಿ ಹಣದ ಸಂಗ್ರಹಣೆ ಮೂಲಕ ಪ್ರಮೋಟರ್ಸ್ ಮನಿ ಲ್ಯಾಂಡರಿಂಗ್ ಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.

    ಇಷ್ಟೇ ಅಲ್ಲದೇ ಆದಾಯ ತೆರಿಗೆ (IT) ಪಾವತಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಇಡಿ ಅಧಿಕಾರಿಗಳ ಜೊತೆ ಐಟಿ ಅಧಿಕಾರಿಗಳು ಕೂಡ ಜೊತೆಯಾಗಿ ಶೋಧ ಕಾರ್ಯ ನಡೆಸಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸಿನಿಮಾ ನಿರ್ಮಾಣ ಸಂಸ್ಥೆಯ ಜೊತೆಗೆ ಪುಷ್ಪ ಚಿತ್ರದ ಸುಕುಮಾರನ್ ಮನೆಯಲ್ಲೂ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.

  • ಅಪ್ಘಾನಿಸ್ತಾನದಲ್ಲಿ ಆನ್‌ಲೈನ್ ಶಾಪಿಂಗ್ ಸ್ಥಗಿತ

    ಅಪ್ಘಾನಿಸ್ತಾನದಲ್ಲಿ ಆನ್‌ಲೈನ್ ಶಾಪಿಂಗ್ ಸ್ಥಗಿತ

    ಕಾಬೂಲ್: ತಾಲಿಬಾನ್ ವಶಪಡಿಸಿಕೊಂಡ ಬಳಿಕ ಹಾಗೂ ಭೀಕರ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಅಫ್ಘಾನಿಸ್ತಾನದ ಬಹುತೇಕ ಎಲ್ಲಾ ಪ್ರಮುಖ ಆನ್‌ಲೈನ್ ಶಾಪಿಂಗ್ ಸೇವೆಗಳು ಸ್ಥಗಿತಗೊಂಡಿರುವುದಾಗಿ ವರದಿಯಾಗಿದೆ.

    ಇತ್ತೀಚೆಗೆ ಅಫ್ಘಾನಿಸ್ತಾನದ 2 ಅತಿ ದೊಡ್ಡ ಆನ್‌ಲೈನ್ ಶಾಪಿಂಗ್ ಸೇವೆಗಳಾದ Click.af ಮತ್ತು Baqal ದೇಶದ ಆರ್ಥಿಕ ಪ್ರಕ್ಷುಬ್ಧತೆಯ ಕಾರಣದಿಂದಾಗಿ ಮುಚ್ಚುವುದಾಗಿ ಘೋಷಿಸಿತ್ತು. ಇದೀಗ ಬಹುತೇಕ ಎಲ್ಲಾ ಆನ್‌ಲೈನ್ ಶಾಪಿಂಗ್ ಸೇವೆಗಳು ಸ್ಥಗಿತಗೊಂಡಿವೆ. ಇದನ್ನೂ ಓದಿ: ಸಿಧು ಹತ್ಯಾ ಪ್ರಕರಣ – ಉತ್ತರ ಭಾರತದಾದ್ಯಂತ 50 ಕಡೆಗಳಲ್ಲಿ ಎನ್‌ಐಎ ದಾಳಿ

    ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಅಫ್ಘಾನಿಸ್ತಾನ ಈಗ 1 ವರ್ಷದಿಂದ ಸಂಪೂರ್ಣ ಪ್ರಕ್ಷುಬ್ಧ ಸ್ಥಿತಿಯಲ್ಲಿದೆ. ತಾಲಿಬಾನ್ ಲಿಂಗ ಆಧಾರಿತ ಹಿಂಸಾಚಾರವನ್ನು ಪರಿಹರಿಸಲು ವ್ಯವಸ್ಥೆಯನ್ನು ಕಿತ್ತುಹಾಕಿದ್ದು ಮಾತ್ರವಲ್ಲದೇ ಮಹಿಳೆಯರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೊಸ ಅಡೆತಡೆಗಳನ್ನು ನಿರ್ಮಿಸಿತು. ಮಹಿಳಾ ಹಕ್ಕುಗಳ ಪ್ರತಿಭಟನಾಕಾರರ ಮೇಲೆ ದಾಳಿಯನ್ನೂ ಮಾಡಿತು. ಇದನ್ನೂ ಓದಿ: ಟ್ರಾಫಿಕ್‍ನಲ್ಲಿ ಸಿಲುಕಿದ್ದ ಕಾರನ್ನು ಅಲ್ಲೇ ಬಿಟ್ಟರು – 3 ಕಿ.ಮೀ ಓಡಿ ಶಸ್ತ್ರಚಿಕಿತ್ಸೆ ಮಾಡಿ ರೋಗಿಯ ಪ್ರಾಣ ಉಳಿಸಿದ ಡಾಕ್ಟರ್

    ಆನ್‌ಲೈನ್ ಶಾಪಿಂಗ್ ಅಪ್ಲಿಕೇಶನ್ ಆಗಿರುವ Click.af ಶನಿವಾರ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಸಂಸ್ಥೆ ತನ್ನ ಫೇಸ್‌ಬುಕ್ ಪುಟದಲ್ಲಿ ಹಣಕಾಸಿನ ಸಮಸ್ಯೆಗಳಿಂದ ಮುಚ್ಚಲಾಗಿದೆ ಎಂದು ಸಂದೇಶವನ್ನು ಪೋಸ್ಟ್ ಮಾಡಿದೆ.

    3 ವರ್ಷಗಳ ಹಳೆಯ Baqal ಕಂಪನಿ ಭಾನುವಾರ ಆರ್ಥಿಕ ತೊಂದರೆಗಳಿಂದಾಗಿ ಸೇವೆಗಳನ್ನು ಮುಚ್ಚುತ್ತಿರುವುದಾಗಿ ಘೋಷಿಸಿತು.

    Live Tv
    [brid partner=56869869 player=32851 video=960834 autoplay=true]

  • 27 ವರ್ಷಗಳ ಸೇವೆ ಬಳಿಕ ಮೈಕ್ರೋಸಾಫ್ಟ್‌ನ ಇಂಟರ್‌ನೆಟ್ ಎಕ್ಸ್‌ಪ್ಲೋರರ್ ನಿವೃತ್ತಿ

    27 ವರ್ಷಗಳ ಸೇವೆ ಬಳಿಕ ಮೈಕ್ರೋಸಾಫ್ಟ್‌ನ ಇಂಟರ್‌ನೆಟ್ ಎಕ್ಸ್‌ಪ್ಲೋರರ್ ನಿವೃತ್ತಿ

    ವಾಷಿಂಗ್ಟನ್: ಮೈಕ್ರೋಸಾಫ್ಟ್‌ನ ಹಳೆಯ ಬ್ರೌಸರ್ ಇಂಟರ್‌ನೆಟ್ ಎಕ್ಸ್‌ಪ್ಲೋರರ್ ತನ್ನ ನಿವೃತ್ತಿಯನ್ನು ಘೋಷಿಸಿದೆ. 27 ವರ್ಷಗಳ ಸುದೀರ್ಘ ಸೇವೆಯ ಬಳಿಕ ಇಂಟರ್‌ನೆಟ್ ಎಕ್ಸ್‌ಪ್ಲೋರರ್ ಅಂತಿಮವಾಗಿ ಜೂನ್ 15ರಂದು ಸ್ಥಗಿತಗೊಳ್ಳಲಿದೆ.

    ಇಂಟರ್‌ನೆಟ್ ಎಕ್ಸ್‌ಪ್ಲೋರರ್ ಅನ್ನು ಮೊದಲು 1995 ರಲ್ಲಿ ವಿಂಡೋಸ್ 95 ಗಾಗಿ ಆಡ್ ಆನ್ ಪ್ಯಾಕೇಜ್ ಆಗಿ ಬಿಡುಗಡೆ ಮಾಡಲಾಗಿತ್ತು. ಬಳಿಕ ಕಂಪನಿ ಪ್ಯಾಕೇಜ್‌ನ ಭಾಗವಾಗಿ ಬ್ರೌಸರ್ ಅನ್ನು ಉಚಿತವಾಗಿ ನೀಡಲು ಪ್ರಾರಂಭಿಸಿತು.

    2003ರಲ್ಲಿ ಶೇ.95 ರಷ್ಟು ಬಳಕೆಯನ್ನು ಮಾಡಲಾಗುತ್ತಿದ್ದು, ಇಂಟರ್‌ನೆಟ್ ಲೋಕದಲ್ಲೇ ಉತ್ತುಂಗಕ್ಕೇರಿತ್ತು. ಬಳಿಕ ಇತರ ಬ್ರೌಸರ್‌ಗಳು ಪ್ರಸಿದ್ಧಿ ಪಡೆದು, ಇಂಟರ್‌ನೆಟ್ ಎಕ್ಸ್‌ಪ್ಲೋರರ್ ಅನ್ನು ಹಿಂದಿಕ್ಕಿದವು. ಈ ಕಾರಣ ಅದು ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಮಹಿಳಾ ಉದ್ಯೋಗಿಗಳಿಗೆ ತಾರತಮ್ಯ – 921 ಕೋಟಿ ನೀಡಲು ಮುಂದಾದ ಗೂಗಲ್‌

    ಅನೇಕ ಬ್ರೌಸರ್‌ಗಳು ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ನ ಬಳಿಕ ಹುಟ್ಟಿಕೊಂಡಿದ್ದು, ಅವು ಬಳಕೆದಾರರಿಗೆ ಉತ್ತಮ ಇಂಟರ್‌ಫೇಸ್, ವೇಗದ ಇಂಟರ್‌ನೆಟ್ ಹಾಗೂ ಉತ್ತಮ ಕಾರ್ಯಕ್ಷಮತೆಯನ್ನೂ ನೀಡಲು ಪ್ರಾರಂಭಿಸಿತು. ಈ ಕಾರಣ ಇಂಟರ್‌ನೆಟ್ ಎಕ್ಸ್‌ಪ್ಲೋರರ್ ಇತರ ಬ್ರೌಸರ್‌ಗಳೊಂದಿಗೆ ಸ್ಪರ್ಧೆಯನ್ನು ಮುಂದುವರಿಸಲು ಸಾಧ್ಯವಾಗದೇ ಕೇವಲ ಡೀಫಾಲ್ಟ್ ಆಗಿ ಕಾಣಿಸಿಕೊಳ್ಳುತ್ತಿತ್ತು. ಇದನ್ನೂ ಓದಿ: ಪಕ್ಷಿಗಳಿಗೆ ಆಹಾರವಿಡುವ ಟ್ರೇ ಹೊಂದಿದ್ದಕ್ಕೆ 3 ವಾರದಲ್ಲಿ 3 ಬಾರಿ ವ್ಯಕ್ತಿ ಅರೆಸ್ಟ್

    ಇದೀಗ ವಿಂಡೋಸ್ 10ನ ಕೆಲವು ನಿರ್ದಿಷ್ಟ ಆವೃತ್ತಿಗಳಲ್ಲಿ ಇಂಟರ್‌ನೆಟ್ ಎಕ್ಸ್‌ಪ್ಲೋರರ್ ಕಾರ್ಯನಿರ್ವಹಿಸುವುದು ಸ್ಥಗಿತಗೊಳ್ಳಲಿದ್ದು, ಇನ್ನೂ ಬಳಕೆ ಮಾಡುತ್ತಿರುವ ಗ್ರಾಹಕರಿಗೆ ಮೈಕ್ರೋಸಾಫ್ಟ್ ಎಡ್ಜ್‌ಗೆ ವರ್ಗಾವಣೆಯಾಗುವಂತೆ ಸೂಚಿಸಿದೆ.

  • ಮೇ 3ರವರೆಗೂ ರೈಲು, ಮೆಟ್ರೋ ಸಂಚಾರ ನಿಷೇಧ ವಿಸ್ತರಣೆ

    ಮೇ 3ರವರೆಗೂ ರೈಲು, ಮೆಟ್ರೋ ಸಂಚಾರ ನಿಷೇಧ ವಿಸ್ತರಣೆ

    ನವದೆಹಲಿ: ಮೇ 3ರ ವರೆಗೂ ದೇಶದ್ಯಾಂತ ಪ್ಯಾಸೆಂಜರ್ ರೈಲುಗಳ ಸಂಚಾರ ನಿಷೇಧ ವಿಸ್ತರಿಸಿ ಭಾರತೀಯ ರೈಲು ಸಚಿವಾಲಯ ಆದೇಶ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಭಾಷಣದ ಬಳಿಕ ರೈಲು ಇಲಾಖೆ ಈ ನಿರ್ಧಾರ ಪ್ರಕಟಿಸಿದೆ.

    ಲಾಕ್ ಡೌನ್ ವಿಸ್ತರಿಸಿ ಪ್ರಧಾನಿ ನರೇಂದ್ರ ಅಧಿಕೃತ ಘೋಷಣೆ ಮಾಡಿದ ಹಿನ್ನೆಲೆ ಏಪ್ರಿಲ್ 14ವರೆಗೂ ವಿಧಿಸಿದ್ದ ನಿರ್ಬಂಧವನ್ನು ಮೇ 3ರವರೆಗೂ ವಿಸ್ತರಿಸಿದೆ. ಹಿಂದಿನಂತೆ ದೇಶದ್ಯಾಂತ ಗೂಡ್ಸ್ ರೈಲುಗಳ ಸಂಚಾರ ಇರಲಿದ್ದು ಅಗತ್ಯ ವಸ್ತುಗಳ ಸಾಗಾಟ ಕೆಲಸ ಎಂದಿನಂತೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಬುಕ್ ಮಾಡಿರುವ ಟಿಕೆಟ್ ಗಳನ್ನು ಗ್ರಾಹಕರು ಕ್ಯಾನ್ಸಲ್ ಮಾಡುವ ಅವಶ್ಯಕತೆ ಇಲ್ಲ. ಟಿಕೆಟ್ ತನ್ನಿಂದಾತಾನೇ ರದ್ದಗಾಲಿದ್ದು ಐಆರ್‍ಸಿಟಿಸಿ ಖಾತೆಯಿಂದ ಹಣ ಜಮಾವಣೆಯಾಗಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಇದರ ಜೊತೆಗೆ ದೇಶಾಯಂತ ಎಲ್ಲ ಮಹಾ ನಗರಗಳಲ್ಲಿರುವ ಮೆಟ್ರೋ ಸಂಚಾರ ಕೂಡಾ ಮೇ 3ರವರೆಗೂ ರದ್ದಾಗಲಿದೆ ಎಂದು ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಡಿಎಸ್ ಮಿಶ್ರಾ ಹೇಳಿದ್ದಾರೆ.

    ಇದರ ಜೊತೆಗೆ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನ ಹಾರಾಟ ಮೇ 3ರವರೆಗೂ ಸ್ಥಗಿತಗೊಳ್ಳಲಿದೆ. ಕೊರೊನಾ ನಿಯಂತ್ರಣಕ್ಕೆ ಬಂದ ನಂತರ ವಿಮಾನ ಸೇವೆಯ ಬಗ್ಗೆ ನಿರ್ಧರಿಸಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆಯ ಸಚಿವ ಹರ್‍ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

  • ಅಭ್ಯರ್ಥಿಗಳ ಪಟ್ಟಿ ಪ್ರಕಟ: ಬಿಜೆಪಿ ವೆಬ್‍ಸೈಟ್ ಬಗ್ಗೆ ರಮ್ಯಾ ಲೇವಡಿ

    ಅಭ್ಯರ್ಥಿಗಳ ಪಟ್ಟಿ ಪ್ರಕಟ: ಬಿಜೆಪಿ ವೆಬ್‍ಸೈಟ್ ಬಗ್ಗೆ ರಮ್ಯಾ ಲೇವಡಿ

    ಬೆಂಗಳೂರು: ಬಿಜೆಪಿ ವೆಬ್‍ಸೈಟ್ ನಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗದ್ದಕ್ಕೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಟ್ವೀಟ್ ಮಾಡಿ ಲೇವಡಿ ಮಾಡಿದ್ದಾರೆ.

    ಬಹುಶಃ ವಿಜೇತರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಬಹುದು ಎಂದು ಬರೆದು ರಮ್ಯಾ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

    ಬಿಜೆಪಿ ವೆಬ್‍ಸೈಟಿನಲ್ಲಿ,”ನಾವು ಶೀಘ್ರವೇ ವಾಪಸ್ ಬರುತ್ತೇವೆ” ಎಂದು ಸಂದೇಶ ಪೇಜ್ ಲಿಂಕ್ ಓಪನ್ ಮಾಡಿದಾಗ ಕಾಣಸಿಗುತ್ತಿದೆ. ಈ ವಿಚಾರವನ್ನೇ ಮುಂದಿಟ್ಟುಕೊಂಡು ರಮ್ಯಾ ಬಿಜೆಪಿ ವೆಬ್‍ಸೈಟನ್ನು ಲೇವಡಿ ಮಾಡಿದ್ದಾರೆ.

    ಮಾರ್ಚ್ 5 ರಂದು ಬಿಜೆಪಿ ವೆಬ್‍ಸೈಟ್ ಹ್ಯಾಕ್ ಆಗಿತ್ತು. ಹ್ಯಾಕ್ ಆದ ವಿಚಾರವನ್ನು ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಪ್ರಸ್ತಾಪಿಸಿ ಕಾಲೆಳೆದಿದ್ದಾರೆ.

    ಭಾಯಿ ಔರ್ ಬೆಹನೋ.. ಈಗ ಬಿಜೆಪಿ ವೆಬ್ ಸೈಟನ್ನು ಒಂದು ಬಾರಿ ನೋಡಿ ಎಂದು ಹೇಳಿ ಕಾಲೆಳೆದಿದ್ದರು. ಕೂಡಲೇ ಪ್ರತಿಕ್ರಿಯಿಸಿದ ಬಿಜೆಪಿ, ಕೆಲವೇ ಕ್ಷಣಗಳಲ್ಲಿ ಬಿಜೆಪಿ ವೆಬ್ ಸೈಟ್ ಸರಿಹೋಗಲಿದೆ ಎಂದು ಸ್ಪಷ್ಟಪಡಿಸಿತ್ತು.

     

  • ಚೀನಾದಲ್ಲಿ ಜನರಲ್ ಮೋಟಾರ್ಸ್ ಸಂಸ್ಥೆಯ ಕಾರು ಉತ್ಪಾದನೆ ನಿಲ್ಲಿಸಿ: ಡೊನಾಲ್ಡ್ ಟ್ರಂಪ್

    ಚೀನಾದಲ್ಲಿ ಜನರಲ್ ಮೋಟಾರ್ಸ್ ಸಂಸ್ಥೆಯ ಕಾರು ಉತ್ಪಾದನೆ ನಿಲ್ಲಿಸಿ: ಡೊನಾಲ್ಡ್ ಟ್ರಂಪ್

    ವಾಷಿಂಗ್ಟನ್: ಅಮೆರಿಕ ಮೂಲದ ಕಾರು ಉತ್ಪಾದಕ ಸಂಸ್ಥೆ ಜನರಲ್ ಮೋಟಾರ್ಸ್ ಗೆ ಚೀನಾದಲ್ಲಿ ಉತ್ಪಾದನೆ ನಿಲ್ಲಿಸುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಅಮೆರಿಕದ ಪ್ರಖ್ಯಾತ ಕಾರು ತಯಾರಿಕಾ ಸಂಸ್ಥೆಯಾದ ಜನರಲ್ ಮೋಟಾರ್ಸ್ ಚೀನಾದಲ್ಲಿ ಉತ್ಪಾದನಾ ಘಟಕವನ್ನು ಹೊಂದಿದೆ. ಆದರೆ ಈಗ ಈ ಘಟಕವನ್ನು ಸ್ಥಗಿತಗೊಳಿಸಿ ಅಮೆರಿಕದ ಬಹಿಯೊ ರಾಜ್ಯದಲ್ಲಿ ಘಟಕ ಸ್ಥಾಪಿಸಲು ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

    ಚೀನಾದಲ್ಲಿ ಸ್ಥಗಿತ ಮಾಡಲು ಹೇಳಿದ್ದೇಕೆ?
    ಇತ್ತೀಚೆಗೆ ಜನರಲ್ ಮೋಟಾರ್ಸ್ ಕಂಪನಿ ತನ್ನ ಅಮೆರಿಕ ಮತ್ತು ಕೆನಡಾ ಘಟಕಗಳಲ್ಲಿರುವ 14,800 ಉದ್ಯೋಗಗಳನ್ನು ಕಡಿತಗೊಳಿಸಲು ಚಿಂತನೆ ನಡೆಸುತ್ತಿದ್ದು, ಇದರಿಂದಾಗಿ 2020ರ ಅಂತ್ಯಕ್ಕೆ ಕಂಪನಿಗೆ ಸುಮಾರು 4.5 ಬಿಲಿಯನ್ ಡಾಲರ್ ಉಳಿತಾಯವಾಗುತ್ತದೆಂದು ಘೋಷಿಸಿತ್ತು.ಕಂಪನಿಯ ನಿರ್ಧಾರವನ್ನು ಡೊನಾಲ್ಡ್ ಟ್ರಂಪ್ ಖುದ್ದು ಶ್ವೇತ ಭವನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಜನರಲ್ ಮೋಟಾರ್ಸ್ ತೀರ್ಮಾನ ನಮಗೆ ಒಪ್ಪಿಗೆ ಆಗಲಿಲ್ಲ ಅಂತ ಅಸಮಾಧಾನ ಹೊರಹಾಕಿದ್ದರು.

    ಕಂಪನಿಯ ನಿರ್ಣಯದಿಂದ ಅಮೆರಿಕಾದ ಬಹಿಯೊ ಮತ್ತು ಮಿಚಿಗನ್ ರಾಜ್ಯಗಳ ಜನರ ಉದ್ಯೋಗದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಹೀಗಾಗಿ ಜನರಲ್ ಮೋಟಾರ್ಸ್ ಚೀನಾದಲ್ಲಿರುವ ತಮ್ಮ ಉತ್ಪಾದನಾ ಘಟಕವನ್ನು ಸ್ಥಗಿತಗೊಳಿಸಿ ಬಹಿಯೊದಲ್ಲಿ ಹೊಸ ಘಟಕವನ್ನು ಸ್ಥಾಪಿಸುವಂತೆ ಹೇಳಿತ್ತು. ಈ ಬಗ್ಗೆ ಜನರಲ್ ಮೋಟಾರ್ಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬರ್ರೆ ಅವರಿಗೆ ತಿಳಿಸಿದ್ದಾರೆಂದು ಸ್ಥಳೀಯ ಸಂಸ್ಥೆಯೊಂದು ವರದಿ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗಳೂರಿನಲ್ಲಿ ದಿಢೀರ್ ಸ್ಥಗಿತಗೊಂಡ ನಮ್ಮ ಮೆಟ್ರೋ

    ಬೆಂಗಳೂರಿನಲ್ಲಿ ದಿಢೀರ್ ಸ್ಥಗಿತಗೊಂಡ ನಮ್ಮ ಮೆಟ್ರೋ

    ಬೆಂಗಳೂರು: ತರಬೇತಿ ನೌಕರರು ಮೆಟ್ರೋ ಚಾಲನೆ ನೀಡಿದ್ದ ಪರಿಣಾಮ ರೈಲು 30 ನಿಮಿಷ ಸ್ಥಗಿತವಾಗಿದ್ದು, ಪ್ರಯಾಣಿಕರು ಪರದಾಡಿದರು.

    ಭಾನುವಾರ ಮಧ್ಯಾಹ್ನ ಉತ್ತರ ದಕ್ಷಿಣ ಮಾರ್ಗದಲ್ಲಿ ಹೊರಟಿದ್ದ ರೈಲು ರಾಜಾಜಿನಗರ ಮೆಟ್ರೋ ಸ್ಟೇಶನ್‍ನಲ್ಲಿ ದಿಢೀರ್ ನಿಂತಿತ್ತು. ಹೀಗಾಗಿ ಪ್ರಯಾಣಿಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಸ್ಥಳಕ್ಕೆ ಬಂದ ನುರಿತ ಚಾಲಕನಿಂದ ಸಂಚಾರ ಪ್ರಾರಂಭಿಸಲಾಯಿತು.

    ನಡೆದದ್ದು ಏನು?
    ರೈಲ್ವೆ ಬೋರ್ಡ್ ಅನುಮತಿ ನೀಡದಿದ್ದರೂ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಟ್ (ಬಿಎಂಆರ್‌ಸಿಎಲ್‌) ಅಧಿಕಾರಿಗಳು ಇಂದು ತರಬೇತಿ ನೌಕರರಿಗೆ ಮೆಟ್ರೋ ರೈಲು ಚಾಲನೆಗೆ ಕೊಟ್ಟಿದ್ದರು. ತರಬೇತಿ ನೌಕರ ಕಮಲೇಶ್ ರಾಯ್ ಸೇರಿದಂತೆ ಹಲವರು ರೈಲು ಸಂಚಾರ ನಡೆಸಿದ್ದರು. ರಾಜಾಜಿನಗರ ಮೆಟ್ರೋ ಸ್ಟೇಶನ್‍ನಲ್ಲಿ ರೈಲು ಬಂದು ನಿಲ್ಲುತ್ತಿದ್ದಂತೆ, ಕಮಲೇಶ್ ರಾಯ್‍ಗೆ ಆಪರೇಟ್ ಮಾಡಲು ತಿಳಿಯದೆ ದಿಢೀರ್ ಸ್ಥಗಿತವಾಗಿತ್ತು.

    30 ನಿಮಿಷ ರೈಲು ನಿಂತಿದ್ದರಿಂದ ಪ್ರಯಾಣಿಕರು ಸ್ಟೇಶನ್‍ನಲ್ಲಿ ಕಾಯುತ್ತ ನಿಲ್ಲುವಂತಾಯಿತು. ಬೇಜವಾಬ್ದಾರಿ ತೋರಿದ ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಭಾರೀ ಆಕ್ರೋಶ ಹೊರಹಾಕಿದರು. ಬಳಿಕ ನುರಿತ ಚಾಲಕನನ್ನು ಕರೆಸಿಕೊಂಡ ಅಧಿಕಾರಿಗಳು, ರೈಲು ಸಂಚಾರವನ್ನು ಯಥಾಸ್ಥಿತಿಗೆ ತಂದರು. ಇತ್ತ ಅಧಿಕಾರಿಗಳು ತರಬೇತಿ ನೌಕರರಿಗೆ ಮೆಟ್ರೋ ರೈಲು ಚಾಲನೆಗೆ ನೀಡಿದ್ದರಿಂದ ಬಿಎಂಆರ್‌ಸಿಎಲ್‌ ನೌಕರರ ಸಂಘವು ಕಿಡಿಕಾರಿದೆ.

  • ವಿಶ್ವದ ಅಗ್ಗದ ಕಾರು `ನ್ಯಾನೋ’ ಸ್ಥಗಿತಕ್ಕೆ ಟಾಟಾ ಮೋಟಾರ್ಸ್ ತೀರ್ಮಾನ?

    ವಿಶ್ವದ ಅಗ್ಗದ ಕಾರು `ನ್ಯಾನೋ’ ಸ್ಥಗಿತಕ್ಕೆ ಟಾಟಾ ಮೋಟಾರ್ಸ್ ತೀರ್ಮಾನ?

    ನವದೆಹಲಿ: ಅಗ್ಗದ ಕಾರು ಎಂದೇ ಹೆಸರುಗಳಿಸಿದ್ದ ನ್ಯಾನೋ ಕಾರು ಸದ್ಯ ಮಾರುಕಟ್ಟೆಯಿಂದ ಮರೆಯಾಗುವ ಎಲ್ಲಾ ಲಕ್ಷಣಗಳು ಕಂಡುಬಂದಿದ್ದು, ನ್ಯಾನೋ ಮಾರಾಟದಲ್ಲಿ ದೀರ್ಘ ಕುಸಿತ ಕಂಡುಬಂದ ಹಿನ್ನೆಲೆಯಲ್ಲಿ ಟಾಟಾ ಮೋಟಾರ್ಸ್ ನ್ಯಾನೋ ಉತ್ಪಾದನೆಯನ್ನು ಸ್ಥಗಿತಗೊಳಿಸುವ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.

    ಟಾಟಾ ನ್ಯಾನೋ ಕಾರಿನ ಸ್ಥಗಿತ ಕುರಿತು ಇದುವರೆಗೂ ಯಾವುದೇ ಹೇಳಿಕೆಗಳನ್ನು ಟಾಟಾ ಕಂಪನಿ ನೀಡಿಲ್ಲ. ಆದರೆ ನ್ಯಾನೋ ಉತ್ಪಾದನೆ ಮಾಡುವ ಎಲ್ಲಾ ಘಟಕಗಳನ್ನು ಒಂದೊಂದಾಗಿ ನಿಲ್ಲಿಸುತ್ತಿರುವುದು ನ್ಯಾನೋ ಉತ್ಪಾದನೆಯ ಸ್ಥಗಿತ ಕುರಿತು ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ.

    ಜೂನ್ ತಿಂಗಳಿನಲ್ಲಿ ಕೇವಲ 1 ನ್ಯಾನೋ ಕಾರು ಉತ್ಪಾದನೆಯಾಗಿದೆ. ಅಲ್ಲದೇ ಕಳೆದ ವರ್ಷ 2017ಕ್ಕೆ ಹೊಲಿಸಿದರೆ ಒಟ್ಟು 275 ಕಾರುಗಳನ್ನು ರಫ್ತಾಗಿದ್ದರೆ, ಈ ವರ್ಷ ಜೂನ್ ತಿಂಗಳಲ್ಲಿ ಕೇವಲ 25 ಕಾರುಗಳನ್ನು ರಫ್ತುಮಾಡಿದೆ. ಅಲ್ಲದೇ 2017ರಲ್ಲಿ ಒಟ್ಟು 167 ಕಾರುಗಳನ್ನು ಮಾರಾಟಗೊಂಡಿದ್ದವು. ಆದರೆ ಇಂದು 2018ರ ಜೂನ್ ತಿಂಗಳಲ್ಲಿ ನ್ಯಾನೋದ ಕೇವಲ ಮೂರು ಕಾರುಗಳು ಮಾರಾಟಗೊಂಡಿವೆ.

    ಈ ಕುರಿತು ಪ್ರತಿಕ್ರಿಯಿಸಿ ಟಾಟಾ ಮೋಟಾರ್ಸ್ ಕಂಪೆನಿಯ ಅಧಿಕಾರಿಗಳು, ಸದ್ಯ ಮಾರುಕಟ್ಟೆಯಲ್ಲಿರುವ ಪರಿಸ್ಥಿತಿಯಿಂದಾಗಿ ನ್ಯಾನೋ ನಿರ್ಮಾಣವನ್ನು 2019ಕ್ಕೆ ಮುಂದುವರಿಸಲು ಸಾಧ್ಯವಿಲ್ಲ. ಅಲ್ಲದೇ ನ್ಯಾನೋ ಸ್ಥಗಿತಗೊಳಿಸುವ ಕುರಿತು ಸಂಸ್ಥೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಗ್ರಾಹಕರ ಬೇಡಿಕೆಯನ್ನು ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.

    2008ರ ಆಟೋ ಎಕ್ಸ್-ಪೋನಲ್ಲಿ ಮೊದಲ ಬಾರಿ ನ್ಯಾನೋ ಕಾರು ಕಾಣಿಸಿಕೊಂಡು 2009ರಲ್ಲಿ ವಿಶ್ವದ ಮಾರುಕಟ್ಟೆಗೆ ಲಗ್ಗೆ ಇಟ್ಟಿತ್ತು. ರತನ್ ಟಾಟಾರವರು ಭಾರತೀಯರಿಗೆ ಕೊಟ್ಟಿದ್ದ ಮಾತಿನಂತೆ 1 ಲಕ್ಷ ರೂಪಾಯಿಗೆ ನ್ಯಾನೋ ಕಾರನ್ನು ಗ್ರಾಹಕರಿಗೆ ನೀಡಿತ್ತು. ನ್ಯಾನೋ ಕಾರು ವಿಶ್ವದಲ್ಲಿಯೇ ಅಗ್ಗದ ಕಾರು ಎಂಬ ಹೆಸರು ಸಹ ಪಡೆದುಕೊಂಡಿತ್ತು.

    ಟಾಟಾ ಸನ್ಸ್ ಮಾಜಿ ಮುಖ್ಯಸ್ಥ ಸೈರಸ್ ಮಿಸ್ತ್ರಿ ಈ ಹಿಂದೆ, ಟಾಟಾ ನ್ಯಾನೋ ಉತ್ಪಾದನೆಯಿಂದ ಸಂಸ್ಥೆಗೆ 1,000 ಸಾವಿರ ಕೋಟಿ ರೂಪಾಯಿ ನಷ್ಟವಾಗಿದ್ದು, ನ್ಯಾನೋ ಕಾರು ಉತ್ಪಾದನೆಯಿಂದ ಸಂಸ್ಥೆಗೆ ಯಾವುದೇ ರೀತಿಯ ಲಾಭ ಸಹ ಗಳಿಸಿಲ್ಲ. ರತನ್ ಟಾಟಾರವರ ಕನಸಿನ ಕೂಸಗಿದ್ದರಿಂದ ನ್ಯಾನೋ ಕಾರನ್ನು ಭಾವನಾತ್ಮಕ ಕಾರಣಗಳಿಂದಾಗಿ ಇನ್ನೂ ಉತ್ಪಾದನೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದರು.

  • ಕಾಶಿನಾಥ್ ನಿಧನ – ‘ದಿ ವಿಲನ್’ ಶೂಟಿಂಗ್ ಸ್ಥಗಿತ

    ಕಾಶಿನಾಥ್ ನಿಧನ – ‘ದಿ ವಿಲನ್’ ಶೂಟಿಂಗ್ ಸ್ಥಗಿತ

    ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಾಶಿನಾಥ್ ನಿಧನರಾಗಿದ್ದು, 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.

    ಕನ್ನಡ ಚಿತ್ರರಂಗ ಕಂಡ ಅತ್ಯುತ್ತಮ ನಟ, ನಿರ್ದೇಶಕರಲ್ಲಿ ಕಾಶಿನಾಥ್ ಕೂಡ ಒಬ್ಬರು. ಡಬಲ್ ಮಿನಿಂಗ್ ಡೈಲಾಗ್‍ನಿಂದಲೇ ಫೇಮಸ್ ಆದ ಇವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯುವಪ್ರತಿಭೆಗಳಗೆ ಅವಕಾಶ ನೀಡಿದ್ದಾರೆ. ಕಾಶಿನಾಥ್ ಸಾವಿನ ಸುದ್ದಿ ಕೇಳಿ ಸಿನಿರಂಗ ಹಾಗೂ ರಾಜಕೀಯ ರಂಗದ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದು, ‘ದಿ-ವಿಲನ್’ ಚಿತ್ರತಂಡ ಚಿತ್ರೀಕರಣವನ್ನು ಸ್ಥಗಿತಗೊಳಿಸಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ.

    ಕಾಶಿನಾಥ್ ರವರಿಗೆ ದಿ-ವಿಲನ್ ಚಿತ್ರತಂಡದಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಚಿತ್ರೀಕರಣವನ್ನು ಸ್ಥಗಿತಗೊಳಿಸಿದ್ದೇವೆ. ನೀವು ನಮ್ಮಿಂದ ಯಾವತ್ತೂ ದೂರವಾಗೋದಿಲ್ಲ ಎಂದು ದಿ- ವಿಲನ್ ಚಿತ್ರತಂಡ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

    ಕಾಶಿನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ನಟ ಉಪೇಂದ್ರ, ಶಿವರಾಜ್‍ಕುಮಾರ್, ಸುದೀಪ್, ತರುಣ್ ಸುಧೀರ್, ವಿ. ಮನೋಹರ್, ಬಿಗ್‍ಬಾಸ್ ಪ್ರಥಮ್, ಸೇರಿದಂತೆ ಹಲವಾರು ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದಿದ್ದಾರೆ. ಕಾಶಿನಾಥ್ ಅವರ ಮಗಳು ದುಬೈನಿಂದ ಬಂದ ನಂತರ ಅಂತಿಮ ವಿಧಿವಿಧಾನ ನಡೆಯಲಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಚಾಮರಾಜಪೇಟೆಯ ಟಿಆರ್ ಮಿಲ್‍ನಲ್ಲಿನ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.