Tag: ಸ್ಥಳಿಯ ಸಂಸ್ಥೆಗಳ ಚುನಾವಣೆ

  • ಬಿಜೆಪಿಗೆ ಡಬಲ್ ಸೀಟ್, ಸರ್ಕಾರದ ಕೌಂಟ್‍ಡೌನ್ ಆರಂಭ: ಆರ್. ಅಶೋಕ್

    ಬಿಜೆಪಿಗೆ ಡಬಲ್ ಸೀಟ್, ಸರ್ಕಾರದ ಕೌಂಟ್‍ಡೌನ್ ಆರಂಭ: ಆರ್. ಅಶೋಕ್

    ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ನೋಡುವಾಗ ಈ ಸಮ್ಮಿಶ್ರ ಸರ್ಕಾರದ ಕೌಂಟ್‍ಡೌನ್ ಶುರುವಾಗಿದೆ ಎಂದು ಬಿಜೆಪಿ ಮುಖಂಡ ಆರ್. ಆಶೋಕ್ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಂದಿದ್ದ ಹೊಸ ಸರ್ಕಾರಕ್ಕೆ ಬೆಂಬಲ ಸಿಗುತ್ತದೆ. ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಇಡೀ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಅಂತ ಹೇಳಿದ್ದರು. ಆದರೆ ಈ ಸ್ಥಳೀಯ ಸಂಸ್ಥೆಗಳ ಚುನವಾಣೆಯಲ್ಲಿ ಜೆಡಿಎಸ್ ಒಂದು ರೀತಿ ಹೀನಾಯ ಸ್ಥಿತಿಗೆ ಹೋಗಿರುವುದು ಗೊತ್ತಾಗುತ್ತಿದೆ ಎಂದು ವ್ಯಂಗ್ಯವಾಗಿ ಹೇಳಿದರು.

    ಕಾಂಗ್ರೆಸ್ ಕೂಡ ಕಳೆದ ಬಾರಿ ಗೆದ್ದಿದ್ದ ಸ್ಥಾನಕ್ಕಿಂತ ಕಡಿಮೆ ಸ್ಥಾನವನ್ನು ಗಳಿಸಿದ್ದು, ಸ್ಥಾನಗಳನ್ನು ಕಳೆದುಕೊಂಡಿರುವುದು ಕಾಣುತ್ತದೆ. ಕೆಲವು ಮಹಾನಗರ ಪಾಲಿಕೆ, ಪುರಸಭೆ ಮತ್ತು ನಗರಸಭೆಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತವನ್ನು ಗಳಿಸಿದೆ. ಕಳೆದ ಬಾರಿಗಿಂತ ಡಬಲ್ ಸೀಟುಗಳು ಬಿಜೆಪಿ ಕಡೆ ವಾಲಿದೆ. ಆದ್ದರಿಂದ ನನಗೆ ಎಲ್ಲೋ ಒಂದು ಕಡೆ ಈ ಸರ್ಕಾರದ ಕೌಂಟ್‍ಡೌನ್ ಶುರುವಾಗಿದೆ ಅನ್ನಿಸುತ್ತದೆ ಎಂದು ಹೇಳಿದ್ದಾರೆ.

    ಈ ಫಲಿತಾಂಶಕ್ಕೆ ಜೆಡಿಎಸ್ ನ ಪ್ರಾಬಲ್ಯ ಮತ್ತು ಕಾಂಗ್ರೆಸ್ಸಿನ ಜಗಳ ಇರಬಹುದು. ಇವರ ಮಧ್ಯೆ ಇಂದು ರಾಜ್ಯದ ಜನರು, ಸಾಮಾನ್ಯವಾಗಿ ಯಾವ ಸರ್ಕಾರ ಅಧಿಕಾರದಲ್ಲಿ ಇರುತ್ತದೋ ಆ ಸರ್ಕಾರಕ್ಕೆ ಸಾರ್ವಜನಿಕರು ಬೆಂಬಲ ಕೊಡುತ್ತಾರೆ. ಆದ್ದರಿಂದ ಈ ಚುನಾವಣೆಯಲ್ಲಿ ಜನರು ಬೆಂಬಲ ಕೊಡುವುದು ಸರ್ವೇ ಸಾಮಾನ್ಯ. ಆದರೆ ಎಲ್ಲೂ ಕೂಡ ಈ ಸರ್ಕಾರಕ್ಕೆ ಸ್ಪಷ್ಟ ಬಹುಮತ ಬಂದಿಲ್ಲ ಎಂದ್ರು.

    ಮೈಸೂರಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಸ್ಪಷ್ಟ ಬಹುಮತ ಲಭಿಸಿಲ್ಲ. ಜೆಡಿಎಸ್ ನ ಭದ್ರಕೋಟೆಯಾದ ಹಾಸನದಲ್ಲೂ ಸ್ಪಷ್ಟ ಬಹುಮತ ಸಿಗಲಿಲ್ಲ. ಶಿವಮೊಗ್ಗದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಇದೆಲ್ಲವನ್ನು ನೋಡಿದರೆ ಈ ಸರ್ಕಾರಕ್ಕೆ ಜನ ಬೆಂಬಲ ಇಲ್ಲ ಎಂದು ಅನಿಸುತ್ತದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರು ದಾಖಲು

    ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರು ದಾಖಲು

    ಕೊಪ್ಪಳ: ಮತದಾರರಿಗೆ ಹಣದ ಆಮಿಷವೊಡ್ಡಿದ ಆರೋಪದಡಿ ಮಾಜಿ ಶಾಸಕ ಮತ್ತು ನಗರಸಭೆ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರು ದಾಖಲಾಗಿದೆ.

    ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ನಗರಸಭೆ ಕಾಂಗ್ರೆಸ್ ಅಭ್ಯರ್ಥಿ ಖಾಸಿಂ ಸಾಬ್ ಗದ್ವಾಲ್ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಎಂ.ಸಿ.ಸಿ ತಂಡದ ಪರಸಪ್ಪರಿಂದ ಅನ್ಸಾರಿ ಹಾಗೂ ಖಾಸಿಂ ಸಾಬ್ ವಿರುದ್ಧ ದೂರು ದಾಖಲಿಸಿದ್ದಾರೆ.

    ಕೆಲವು ದಿನಗಳ ಹಿಂದೆ ಸ್ಥಳೀಯ ಸಂಸ್ಥೆಗಳ ಚುನವಾಣೆ ಪ್ರಚಾರದಲ್ಲಿ ಇಕ್ಬಾಲ್ ಅನ್ಸಾರಿ ಹಣದ ಆಮಿಷ ನೀಡುವ ಬಗ್ಗೆ ಭಾಷಣ ಮಾಡಿದ್ದರು. ಹಾಲಿ ಶಾಸಕ ಪರಣ್ಣ ಮುನವಳ್ಳಿಗೆ ಟಾಂಗ್ ಕೊಡಲು ಹೋಗಿ ಹಣದ ಆಮಿಷ ಒಡ್ಡಿದ್ದರು.

    ನಿಮಗೆ ಖೋಟಾ ನೋಟು ಬೇಕಾ ಅಥವಾ ಅನ್ಸಾರಿ ಹಾಗೂ ಖಾಸಿಂ ಸಾಬ್‍ನ ಅಸಲಿ ನೋಟು ಬೇಕಾ ಎಂದು ಭಾಷಣ ಮಾಡಿದ್ದಾರೆ. ನಿಮಗೆ ಅಸಲಿ 100 ನೋಟು ಬೇಕಾ ಅಥವಾ ವಿರೋಧ ಪಕ್ಷಗಳು ಕೊಡುವ  500 ಮತ್ತು 1000 ರೂ. ಖೋಟಾ ನೋಟು ಬೇಕಾ ಎಂದು ಬಹಿರಂಗವಾಗಿ ಹೇಳಿದ್ದಾರೆ.

    ಇದೇ 25 ರಂದು ವಾರ್ಡ್ ನಂ8 ರಲ್ಲಿ ಭಾಷಣ ಮಾಡಿದ್ದರು. ಆದ್ದರಿಂದ ಈ ರೀತಿ ಭಾಷಣ ಮಾಡಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವುದರಿಂದ ಅವರ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಗಂಗಾವತಿ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 171(ಇ) ಅಡಿಯಲ್ಲಿ ದೂರು ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv