Tag: ಸ್ನಾತಕೋತ್ತರ ಪದವಿ

  • ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ನಾಳೆ ಚಾಲನೆ – ಪಿಜಿ ಕಾಲೇಜ್‌, ಕೋರ್ಸ್‌ ವಿವರ ತಿಳಿದುಕೊಳ್ಳಿ

    ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ನಾಳೆ ಚಾಲನೆ – ಪಿಜಿ ಕಾಲೇಜ್‌, ಕೋರ್ಸ್‌ ವಿವರ ತಿಳಿದುಕೊಳ್ಳಿ

    –  ಶನಿವಾರ, ಭಾನುವಾರ ನಡೆಯಲಿದೆ ಕಾರ್ಯಕ್ರಮ
    – ವಿದ್ಯಾರ್ಥಿಗಳಿಗೆ, ಪೋಷಕರಿಗೆ ಉಚಿತ ಪ್ರವೇಶ

    ಬೆಂಗಳೂರು: ಡಿಗ್ರಿ ಮುಗಿದ ಬಳಿಕ ಬಹುತೇಕ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ (Post Graduation) ಓದುವುದು ಈಗಿನ ಹೊಸ ಟ್ರೆಂಡ್‌. ಸ್ನಾತಕೋತ್ತರ ಪದವಿಗೆ ಸೇರುವ ಸಂದರ್ಭದಲ್ಲಿ ಯಾವ ಕಾಲೇಜಿನಲ್ಲಿ (College) ಯಾವ ಕೋರ್ಸ್‌ ಇದೆ? ಶುಲ್ಕ ಎಷ್ಟಿದೆ? ಹಾಸ್ಟೆಲ್‌ ಸೌಲಭ್ಯ ಹೇಗೆ? ಇತ್ಯಾದಿ ಪ್ರಶ್ನೆಗಳು ಮಕ್ಕಳಿಗೆ ಮತ್ತು ಪೋಷಕರಿಗೆ ಬರುತ್ತದೆ. ಈ ಎಲ್ಲಾ ಪ್ರಶ್ನೆಗಳಿಗೆ ನೀವು ಪಬ್ಲಿಕ್‌ ಟಿವಿ (PUBLiC TV) ಆಯೋಜಿಸುತ್ತಿರುವ ವಿದ್ಯಾಮಂದಿರಕ್ಕೆ (VidhyaMandira) ಆಗಮಿಸಿ ಸುಲಭವಾಗಿ ಉತ್ತರವನ್ನು ಪಡೆಯಬಹುದು.

    ಪ್ರಬ್ಲಿಕ್‌ ಟಿವಿ ಪ್ರಸ್ತುತ ಪಡಿಸುವ Ad6 ಸಹಯೋಗದಲ್ಲಿ ಶನಿವಾರ ಮತ್ತು ಭಾನುವಾರ ಎರಡನೇ ಅವೃತ್ತಿಯ ʼವಿದ್ಯಾಮಂದಿರʼ ಶೈಕ್ಷಣಿಕ ಮೇಳ ಮಲ್ಲೇಶ್ವರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಬೆಳಗ್ಗೆ 9:30 ರಿಂದ ಆರಂಭಗೊಂಡು ಸಂಜೆ 6 ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಲಿದ್ದು ವಿದ್ಯಾರ್ಥಿಗಳು ತಮ್ಮ ಉನ್ನತ ವಿದ್ಯಾಭ್ಯಾಸದ ಬಗ್ಗೆ ಇರುವ ಗೊಂದಲಗಳಿಗೆ ಈ ವೇದಿಕೆ ಉತ್ತರ ನೀಡಲಿದೆ. ಇದನ್ನೂ ಓದಿ: ಮೆಟ್ರೋದಲ್ಲಿ ಗೋಬಿ ತಿಂದವನಿಗೆ ಬಿತ್ತು 500 ರೂ. ದಂಡ!

    ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶವಿರುತ್ತದೆ. ಶೈಕ್ಷಣಿಕ ಮೇಳದಲ್ಲಿ ರಾಜ್ಯದ ನಾನಾ ಭಾಗಗಳ 36+ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಭಾಗಿಯಾಗಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಅವಕಾಶ ಇದೆ.

    ಲ್ಯಾಪ್‌ಟಾಪ್‌, ಮೊಬೈಲ್‌ ಬಹುಮಾನ ಗೆಲ್ಲಿ:
    ಈ ಮೇಳದಲ್ಲಿ ಆಯೋಜಿಸಿದ ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನವಾಗಿ ಲ್ಯಾಪ್‌ಟಾಪ್‌ ಮತ್ತು ಮೊಬೈಲ್‌ಗಳನ್ನು ನೀಡಲಾಗುತ್ತದೆ. ಅಷ್ಟೇ ಅಲ್ಲದೆ ಸರ್‌ಪ್ರೈಸ್‌ ಗಿಫ್ಟ್‌ ಸಹ ಸಿಗಲಿದೆ.

    ವಿದ್ಯಾಮಂದಿರದ ಪ್ಲಾಟಿನಂ ಪ್ರಾಯೋಜಕರು
    ರೇವಾ ಯುನಿವರ್ಸಿಟಿ, ಕೇಂಬ್ರಿಡ್ಜ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ರಾಮಯ್ಯ ಯುನಿವರ್ಸಿಟಿ, ನಾಗಾರ್ಜುನ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌

    ಗೋಲ್ಡ್‌ ಪ್ರಾಯೋಜಕರು:
    ಈಸ್ಟ್ ಗ್ರೂಪ್ ಆಫ್ ಪಾಯಿಂಟ್ ಇನ್‌ಸ್ಟಿಟ್ಯೂಷನ್ಸ್‌, ಸಿಎಂಆರ್‌ ಯುನಿವರ್ಸಿಟಿ, ಆರ್‌ವಿ ಯುನಿವರ್ಸಿಟಿ, ಏಮ್ಸ್ ಇನ್‌ಸ್ಟಿಟ್ಯೂಷನ್ಸ್‌, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ಯುನಿವರ್ಸಿಟಿ, SEA ಸಮೂಹ ಸಂಸ್ಥೆಗಳು,

    ಸಿಲ್ವರ್ ಪ್ರಾಯೋಜಕರು
    ರಾಮಯ್ಯ ಆಫೀಸರ್ಸ್‌ ಐಎಎಸ್‌ ಅಕಾಡೆಮಿ, ಆಕ್ಸ್‌ಫರ್ಡ್‌ ಎಜುಕೇಶನ್‌ ಇನ್‌ಸ್ಟಿಟ್ಯೂಷನ್ಸ್‌, ಪಿಇಎಸ್‌ ವಿಶ್ವವಿದ್ಯಾಲಯ, ರಾಜರಾಜೇಶ್ವರಿ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌, ಶ್ರೀನಿವಾಸ ವಿಶ್ವವಿದ್ಯಾನಿಲಯ, ಯೂನಿವರ್ಸಿಟಿ ಹಬ್, ಹರ್ಷಾ ಇನ್‌ಸ್ಟಿಟ್ಯೂಷನ್ಸ್‌, ಸೌಂದರ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌, ಪ್ರೆಸಿಡೆನ್ಸಿ ಯೂನಿವರ್ಸಿಟಿ

    ವಿಶೇಷ ಪೆವಿಲಿಯನ್: ರಾಮಯ್ಯ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್ಮೆಂಟ್,
    ಕ್ರಿಯೇಟಿವ್‌ ಸ್ಟಾಲ್‌ : ಆರ್‌ಆರ್‌ ಇನ್‌ಸ್ಟಿಟ್ಯೂಷನ್ಸ್‌,
    ಗಿಫ್ಟ್‌ ಪ್ರಾಯೋಜಕರು : ಜೀನಿ ಮಿಲ್ಲೆಟ್‌
    ಪಾನೀಯ ಪ್ರಾಯೋಜಕರು: ನಂದಿನಿ, ಬಾಯರ್ಸ್‌ ಕಾಫಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ಬನ್ನಿ – ಪಿಜಿ ಕಾಲೇಜ್‌, ಕೋರ್ಸ್‌ ವಿವರ ತಿಳಿದುಕೊಳ್ಳಿ

    ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ಬನ್ನಿ – ಪಿಜಿ ಕಾಲೇಜ್‌, ಕೋರ್ಸ್‌ ವಿವರ ತಿಳಿದುಕೊಳ್ಳಿ

    – ಶನಿವಾರ, ಭಾನುವಾರ ನಡೆಯಲಿದೆ ಕಾರ್ಯಕ್ರಮ
    – ವಿದ್ಯಾರ್ಥಿಗಳಿಗೆ, ಪೋಷಕರಿಗೆ ಉಚಿತ ಪ್ರವೇಶ

    ಬೆಂಗಳೂರು: ಡಿಗ್ರಿ ಮುಗಿದ ಬಳಿಕ ಬಹುತೇಕ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ (Post Graduation) ಓದುವುದು ಈಗಿನ ಹೊಸ ಟ್ರೆಂಡ್‌. ಸ್ನಾತಕೋತ್ತರ ಪದವಿಗೆ ಸೇರುವ ಸಂದರ್ಭದಲ್ಲಿ ಯಾವ ಕಾಲೇಜಿನಲ್ಲಿ (College) ಯಾವ ಕೋರ್ಸ್‌ ಇದೆ? ಶುಲ್ಕ ಎಷ್ಟಿದೆ? ಹಾಸ್ಟೆಲ್‌ ಸೌಲಭ್ಯ ಹೇಗೆ? ಇತ್ಯಾದಿ ಪ್ರಶ್ನೆಗಳು ಮಕ್ಕಳಿಗೆ ಮತ್ತು ಪೋಷಕರಿಗೆ ಬರುತ್ತದೆ. ಈ ಎಲ್ಲಾ ಪ್ರಶ್ನೆಗಳಿಗೆ ನೀವು ಪಬ್ಲಿಕ್‌ ಟಿವಿ (PUBLiC TV) ಆಯೋಜಿಸುತ್ತಿರುವ ವಿದ್ಯಾಮಂದಿರಕ್ಕೆ (VidhyaMandira) ಆಗಮಿಸಿ ಸುಲಭವಾಗಿ ಉತ್ತರವನ್ನು ಪಡೆಯಬಹುದು.

    ಪ್ರಬ್ಲಿಕ್‌ ಟಿವಿ ಪ್ರಸ್ತುತ ಪಡಿಸುವ Ad6 ಸಹಯೋಗದಲ್ಲಿ ಇದೇ ಅಕ್ಟೋಬರ್‌ 7 ಮತ್ತು 8 ರಂದು ಶನಿವಾರ ಮತ್ತು ಭಾನುವಾರ ಎರಡನೇ ಅವೃತ್ತಿಯ ʼವಿದ್ಯಾಮಂದಿರʼ ಶೈಕ್ಷಣಿಕ ಮೇಳ ಮಲ್ಲೇಶ್ವರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಬೆಳಗ್ಗೆ 9:30 ರಿಂದ ಆರಂಭಗೊಂಡು ಸಂಜೆ 6 ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಲಿದ್ದು ವಿದ್ಯಾರ್ಥಿಗಳು ತಮ್ಮ ಉನ್ನತ ವಿದ್ಯಾಭ್ಯಾಸದ ಬಗ್ಗೆ ಇರುವ ಗೊಂದಲಗಳಿಗೆ ಈ ವೇದಿಕೆ ಉತ್ತರ ನೀಡಲಿದೆ.

    ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶವಿರುತ್ತದೆ. ಶೈಕ್ಷಣಿಕ ಮೇಳದಲ್ಲಿ ರಾಜ್ಯದ ನಾನಾ ಭಾಗಗಳ 36+ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಭಾಗಿಯಾಗಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಅವಕಾಶ ಇದೆ.

    ಲ್ಯಾಪ್‌ಟಾಪ್‌, ಮೊಬೈಲ್‌ ಬಹುಮಾನ ಗೆಲ್ಲಿ:
    ಈ ಮೇಳದಲ್ಲಿ ಆಯೋಜಿಸಿದ ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನವಾಗಿ ಲ್ಯಾಪ್‌ಟಾಪ್‌ ಮತ್ತು ಮೊಬೈಲ್‌ಗಳನ್ನು ನೀಡಲಾಗುತ್ತದೆ. ಅಷ್ಟೇ ಅಲ್ಲದೆ ಸರ್‌ಪ್ರೈಸ್‌ ಗಿಫ್ಟ್‌ ಸಹ ಸಿಗಲಿದೆ. ಇದನ್ನೂ ಓದಿ: Asian Games 2023 – ಒಟ್ಟು 71 ಪದಕ ಗೆದ್ದು ದಾಖಲೆ ಬರೆದ ಭಾರತ

    ವಿದ್ಯಾಮಂದಿರದ ಪ್ಲಾಟಿನಂ ಪ್ರಾಯೋಜಕರು
    ರೇವಾ ಯುನಿವರ್ಸಿಟಿ, ಕೇಂಬ್ರಿಡ್ಜ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ರಾಮಯ್ಯ ಯುನಿವರ್ಸಿಟಿ, ನಾಗಾರ್ಜುನ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌

    ಗೋಲ್ಡ್‌ ಪ್ರಾಯೋಜಕರು:
    ಈಸ್ಟ್ ಗ್ರೂಪ್ ಆಫ್ ಪಾಯಿಂಟ್ ಇನ್‌ಸ್ಟಿಟ್ಯೂಷನ್ಸ್‌, ಸಿಎಂಆರ್‌ ಯುನಿವರ್ಸಿಟಿ, ಆರ್‌ವಿ ಯುನಿವರ್ಸಿಟಿ, ಏಮ್ಸ್ ಇನ್‌ಸ್ಟಿಟ್ಯೂಷನ್ಸ್‌, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ಯುನಿವರ್ಸಿಟಿ, SEA ಸಮೂಹ ಸಂಸ್ಥೆಗಳು,

    ಸಿಲ್ವರ್ ಪ್ರಾಯೋಜಕರು
    ರಾಮಯ್ಯ ಆಫೀಸರ್ಸ್‌ ಐಎಎಸ್‌ ಅಕಾಡೆಮಿ, ಆಕ್ಸ್‌ಫರ್ಡ್‌ ಎಜುಕೇಶನ್‌ ಇನ್‌ಸ್ಟಿಟ್ಯೂಷನ್ಸ್‌, ಪಿಇಎಸ್‌ ವಿಶ್ವವಿದ್ಯಾಲಯ, ರಾಜರಾಜೇಶ್ವರಿ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌, ಶ್ರೀನಿವಾಸ ವಿಶ್ವವಿದ್ಯಾನಿಲಯ, ಯೂನಿವರ್ಸಿಟಿ ಹಬ್, ಹರ್ಷಾ ಇನ್‌ಸ್ಟಿಟ್ಯೂಷನ್ಸ್‌, ಸೌಂದರ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌, ಪ್ರೆಸಿಡೆನ್ಸಿ ಯೂನಿವರ್ಸಿಟಿ

    ವಿಶೇಷ ಪೆವಿಲಿಯನ್: ರಾಮಯ್ಯ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್ಮೆಂಟ್,
    ಕ್ರಿಯೇಟಿವ್‌ ಸ್ಟಾಲ್‌ : ಆರ್‌ಆರ್‌ ಇನ್‌ಸ್ಟಿಟ್ಯೂಷನ್ಸ್‌,
    ಗಿಫ್ಟ್‌ ಪ್ರಾಯೋಜಕರು : ಜೀನಿ ಮಿಲ್ಲೆಟ್‌
    ಪಾನೀಯ ಪ್ರಾಯೋಜಕರು: ನಂದಿನಿ, ಬಾಯರ್ಸ್‌ ಕಾಫಿ

     

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಂಗೂ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪಿಜಿ ಮಾಡಬೇಕು ಅನಿಸಿದೆ: ಹೆಚ್. ಆರ್ ರಂಗನಾಥ್

    ನಂಗೂ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪಿಜಿ ಮಾಡಬೇಕು ಅನಿಸಿದೆ: ಹೆಚ್. ಆರ್ ರಂಗನಾಥ್

    ಬೆಂಗಳೂರು: ನಾನು ಸ್ನಾತಕೋತ್ತರ ಪದವಿ ಪಡೆದಿಲ್ಲ. ಅಂದಿನ ಸ್ಥಿತಿಯಲ್ಲಿ ನನಗೆ ಪಿಜಿ ಮಾಡಲು ಆಗಲೇ ಇಲ್ಲ. ಇದಕ್ಕೆ ಹಲವಾರು ಕಾರಣಗಳಿವೆ ಎಂದು ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್. ಆರ್ ರಂಗನಾಥ್ ಹೇಳಿದರು.

    ಇಂದು ಪಬ್ಲಿಕ್ ಟಿವಿ ಪ್ರಸ್ತುತ ಪಡೆಸುತ್ತಿರುವ ವಿದ್ಯಾಮಂದಿರ ಎಜುಕೇಶನ್ ಎಕ್ಸ್ ಪೋ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಕಾಲದ ಶಿಕ್ಷಣಕ್ಕೂ ಈಗನ ಶಿಕ್ಷಣಕ್ಕೂ ಇರುವ ವ್ಯತ್ಯಾಸಗಳನ್ನು ವಿವರಿಸಿದರು. ನಾನು ಡಿಗ್ರಿಯಲ್ಲಿ ಫೈನಲ್ ಇಯರ್ ಪರೀಕ್ಷೆ ಬರೆಯುವ ಮೊದಲೇ ನನಗೆ ಕೆಲಸ ಕೊಟ್ಟರು. ಬಮದು ಕೆಲಸ ಮಾಡಿ ಪರೀಕ್ಷೆಗೆ ರಜೆ ತೆಗೆದುಕೊಂಡು ಹೋಗಿ ಡಿಗ್ರಿ ಪರೀಕ್ಷೆ ಬರೆದು ಬಂದೆ. ಹೀಗಾಗಿ ಆಗ ನಾನು ಸ್ನಾತಕೋತ್ತರ ಪದವಿ ಪಡೆದಿದ್ದರೆ ಚೆನ್ನಾಗಿತ್ತು ಅಂತ ಅನಿಸಿತ್ತು. ಆದರೆ ಈಗ ಕಾಲ ಮುಗಿದಿದೆ. ಈವಾಗಲೂ ನಾನು ಅದನ್ನು ಮಾಡಬಲ್ಲೆ. ಪತ್ರಿಕೋದ್ಯಮದಲ್ಲಿಯೇ ಯಾವುದಾದರೂ ಒಂದು ಒಳ್ಳೆಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪಡೆಯಬೇಕೆಂದು ಅನಿಸ್ತಿದೆ. ಆದರೆ ಅಲ್ಲಿ ನಾನು ಅಲ್ಲಿ ತುಂಬಾ ತಂದರೆ ಕೊಡುವ ವಿದ್ಯಾರ್ಥಿ ಆಗಬಹುದು. ಇದು ತುಂಬಾ ಕಷ್ಟವಾಗಬಹುದೆಂದು ನಕ್ಕರು.

    ಬಹಳ ಹಿಂದೆ ಪೊಲೀಸ್ ಆಗೋಕೆ 8ನೇ ಕ್ಲಾಸ್ ಆದವರು ಸಾಕು ಎಂಬ ಜಾಹೀರಾತು ಬರುತ್ತಿತ್ತು. ಆದರೆ ಇಂದು ಪೊಲೀಸ್ ಕಾನ್ಸ್ ಟೇಬಲ್‍ಗೆ 60 ಪರ್ಸೆಂಟ್ ಪದವಿ ಪಡೆದವರು, 20-21 ಪರ್ಸೆಂಟ್ ಪಿಜಿ ಮಾಡಿವರು ಅಪ್ಲೈ ಮಾಡುತ್ತಿದ್ದಾರೆ. ಈ ಮೂಲಕ ಉದ್ಯೋಗಕ್ಕೆ ಬೇಕಾದ ತಯಾರಿ ಇಲ್ಲದ ಶಿಕ್ಷಣ ಸಿಗುತ್ತಿದೆ ಅಂತ ಉದ್ಯೋಗ ಬೇಕು ಅಂದ್ರೆ ಹೆಚ್ಚಿನ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಕೆಲವೊಂದು ಉದ್ಯೋಗಗಳಿಗೆ ಪಿಜಿ ಮುಗಿಸಿರಲೇಬೇಕು ಎಂಬಂತಾಗಿದೆ. ಹೀಗಾಗಿ ಡಿಗ್ರಿ ಮಾಡದವರಿಗೆ ಮುಂದೊಂದು ದಿನ ಕೆಲಸ ಸಿಗುವುದು ಕೂಡ ಕಷ್ಟವಾಗಬಹುದು ಎಂದು ಎಚ್ಚರಿಸಿದರು. ಇದನ್ನೂ ಓದಿ: ಡಿಗ್ರಿ ಬಳಿಕ ಡಾಕ್ಟರೇಟ್ ಕೋರ್ಸ್‍ಗಳ ಕಡೆ ಯುವಕರು ಹೆಚ್ಚು ಗಮನ ಹರಿಸಬೇಕು: ಅಶ್ವಥ್ ನಾರಾಯಣ್

     ಪಿಜಿ ಹಾಗೂ ರಿಸರ್ಚ್ ಶಿಕ್ಷಣದಲ್ಲಿ ಕರ್ನಾಟಕ ಈಗ ಒಂದು ಹೆಜ್ಜೆ ಮುಂದೆಯೇ ಇದೆ ಎಂದನಿಸುತ್ತದೆ. ನಮ್ಮ ಶಿಕ್ಷಣ ಸಂಸ್ಥೆಗಳು ಕೂಡ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುತ್ತಿವೆ. ಹೀಗಾಗಿ ಮುಂದೆ ಈ ಶಿಕ್ಷಣಕ್ಕೆ ಸಹಾಯ ಆಗಬಹುದೆಂಬ ನಿಟ್ಟಿನಲ್ಲಿ ಎರಡು ದಿನಗಳ ಈ ಎಕ್ಸ್ ಪೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಶಿಕ್ಷಣ ಸಚಿವರಾಗಿರುವ ಅಶ್ವಥ್ ನಾರಾಯಣ್ ಕೂಡ ಶಿಕ್ಷಣದಲ್ಲಿ ಸಾಕಷ್ಟು ಬದಲಾವಣೆಗಳನ್ನು ತರುವ ಮೂಲಕ ಹೆಚ್ಚಿನ ಕೊಡುಗೆಗಳನ್ನು ಕೊಡುತ್ತಿದ್ದಾರೆ.

    ಎರಡು ದಿನವಿರಲಿದೆ ವಿದ್ಯಮಂದಿರ: ವಿದ್ಯಾಮಂದಿರ ಶೈಕ್ಷಣಿಕ ಮೇಳದಲ್ಲಿ 36ಕ್ಕೂ ಹೆಚ್ಚು ವಿದ್ಯಾ ಸಂಸ್ಥೆಗಳು ಭಾಗವಹಿಸುತ್ತಿವೆ. ಡಿಗ್ರಿ ನಂತ್ರ ಏನ್ ಮಾಡಬೇಕು, ಯಾವ ಕೋರ್ಸ್, ಯಾವ ಕಾಲೇಜ್ ಆಯ್ಕೆ ಮಾಡಿಕೊಳ್ಳಬಹುದು.. ಹೀಗೆ ಹಲವು ಅನುಮಾನಗಳಿಗೆ ಪೋಷಕರು, ವಿದ್ಯಾರ್ಥಿಗಳು ಇಲ್ಲಿ ಉತ್ತರ ಕಂಡುಕೊಳ್ಳಬಹುದಾಗಿದೆ. ವಿದ್ಯಾಮಂದಿರದಲ್ಲಿ ಹಲವು ವಿಚಾರಗಳ ಬಗ್ಗೆ ವಿಷಯ ತಜ್ಞರಿಂದ ವಿಶೇಷ ಸೆಮಿನಾರ್ ಇರುತ್ತೆ. ಹಾಗೇ, ಶೈಕ್ಷಣಿಕ ಮೇಳಕ್ಕೆ ಬಂದವರಿಗೆ ಆಪ್‍ಕೆ ಇವಿ ಸಂಸ್ಥೆಯ ಎಲೆಕ್ಟ್ರಿಕ್ ಬೈಕ್ ಸೇರಿ ಹಲವು ಬಂಪರ್ ಬಹುಮಾನಗಳು ಇದೆ. ಹೀಗಾಗಿ ತಪ್ಪದೇ ವಿದ್ಯಾಮಂದಿರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ.. ಬಹುಮಾನ ಗೆಲ್ಲಿ.. ವಿದ್ಯಾಮಂದಿರವನ್ನ ಸದುಪಯೋಗಪಡಿಸಿಕೊಳ್ಳಿ.

    Live Tv
    [brid partner=56869869 player=32851 video=960834 autoplay=true]

  • ಶನಿವಾರ ವಿದ್ಯಾಮಂದಿರಕ್ಕೆ ಚಾಲನೆ – ಸ್ನಾತಕೋತ್ತರ ಪದವಿ ಮೆಗಾ ಎಜ್ಯುಕೇಶನ್‌ ಎಕ್ಸ್‌ಪೋ

    ಶನಿವಾರ ವಿದ್ಯಾಮಂದಿರಕ್ಕೆ ಚಾಲನೆ – ಸ್ನಾತಕೋತ್ತರ ಪದವಿ ಮೆಗಾ ಎಜ್ಯುಕೇಶನ್‌ ಎಕ್ಸ್‌ಪೋ

    ಬೆಂಗಳೂರು:  ಪಬ್ಲಿಕ್‌ ಟಿವಿ ಆಯೋಜಿಸುತ್ತಿರುವ ವಿದ್ಯಾಮಂದಿರ-2022(Vidhya Mandira) ಸ್ನಾತಕೋತ್ತರ ಪದವಿ ಮೆಗಾ ಎಜ್ಯುಕೇಷನ್ ಎಕ್ಸ್‌ಪೋಗೆ(PG Education Expo) ಶನಿವಾರ ಚಾಲನೆ ಸಿಗಲಿದೆ.

    ಮಲ್ಲೇಶ್ವರಂನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಬೆಳಗ್ಗೆ 10.30ಕ್ಕೆ ʼವಿದ್ಯಾಮಂದಿರʼ ಶೈಕ್ಷಣಿಕ ಮೇಳಕ್ಕೆ ಚಾಲನೆ ಸಿಗಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್‍ಆರ್ ರಂಗನಾಥ್, ಸಚಿವ ಅಶ್ವಥ್‍ನಾರಾಯಣ್, ಬಿಜಿಎಸ್ ಸಂಸ್ಥೆ ಎಂಡಿ ಪ್ರಕಾಶನಾಥ ಸ್ವಾಮೀಜಿ, ರೇವಾ ವಿವಿ ಪ್ರೋ-ಚಾನ್ಸಲರ್ ಉಮೇಶ್ ಎಸ್ ರಾಜು, ಪ್ರೋ ವಿಸಿ ವಿದ್ಯಾಶಂಕರ ಶೆಟ್ಟಿ, ಕೇಂಬ್ರಿಡ್ಜ್ ಶಿಕ್ಷಣ ಸಂಸ್ಥೆಗಳ ಚೇರ್ಮನ್ ಡಿಕೆ ಮೋಹನ್ ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.

    ಶನಿವಾರ ಮತ್ತು ಭಾನುವಾರ ನಡೆಯಲಿರುವ ವಿದ್ಯಾಮಂದಿರ ಶೈಕ್ಷಣಿಕ ಮೇಳದಲ್ಲಿ 36ಕ್ಕೂ ಹೆಚ್ಚು ವಿದ್ಯಾ ಸಂಸ್ಥೆಗಳು ಭಾಗವಹಿಸುತ್ತಿವೆ. ಡಿಗ್ರಿ ನಂತ್ರ ಏನುಮಾಡಬೇಕು? ಯಾವ ಕೋರ್ಸ್? ಯಾವ ಕಾಲೇಜ್ ಆಯ್ಕೆ ಮಾಡಿಕೊಳ್ಳಬಹುದು? ಹೀಗೆ ಹಲವು ಅನುಮಾನಗಳಿಗೆ ಪೋಷಕರು, ವಿದ್ಯಾರ್ಥಿಗಳು ಇಲ್ಲಿ ಉತ್ತರ ಕಂಡುಕೊಳ್ಳಬಹುದಾಗಿದೆ.

    ಹಲವು ವಿಚಾರಗಳ ಬಗ್ಗೆ ವಿಷಯ ತಜ್ಞರಿಂದ ವಿಶೇಷ ಸೆಮಿನಾರ್ ಇರುತ್ತದೆ. ಶೈಕ್ಷಣಿಕ ಮೇಳಕ್ಕೆ ಬಂದವರಿಗೆ ಆ್ಯಪ್‍ಕೆ ಇವಿ ಸಂಸ್ಥೆಯ ಎಲೆಕ್ಟ್ರಿಕ್ ಬೈಕ್ ಸೇರಿ ಹಲವು ಬಂಪರ್ ಬಹುಮಾನಗಳು ಇದೆ.

    ದಿನಾಂಕ: ನವೆಂಬರ್ 12 ಮತ್ತು 13
    ಸ್ಥಳ: ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನ, ಮಲ್ಲೇಶ್ವರಂ, ಬೆಂಗಳೂರು
    ಸಮಯ: ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ

    ಯಾರೆಲ್ಲ ಆಗಮಿಸಬಹುದು?:
    ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು

    ಪ್ಲಾಟಿನಂ ಪ್ರಾಯೋಜಕರು:
    ರೇವಾ ಯುನಿವರ್ಸಿಟಿ, ಬಿಜಿಎಸ್ & ಎಸ್‍ಜೆಬಿ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಗಾರ್ಡನ್ ಸಿಟಿ ಯುನಿವರ್ಸಿಟಿ, ರಾಮಯ್ಯ ಯುನಿವರ್ಸಿಟಿ

    ಗೋಲ್ಡ್ ಪ್ರಾಯೋಜಕರು:
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಈಸ್ಟ್‌ ವೆಸ್ಟ್‌ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌, ಎಮ್ಸ್ ಇನ್‍ಸ್ಟಿಟ್ಯೂಷನ್, ಕೇಂಬ್ರಿಡ್ಜ್ ಇನ್‍ಸ್ಟಿಟ್ಯೂಷನ್ ಆಫ್ ಟೆಕ್ನಾಲಜಿ, ಸಿ ಗ್ರೂಪ್ ಇನ್‍ಸ್ಟಿಟ್ಯೂಷನ್

    ಸಿಲ್ವರ್ ಪ್ರಾಯೋಜಕರು:
    ಕೆಎಲ್‍ಇ ಟೆಕ್ನಾಲಜಿಕಲ್ ಯುನಿವರ್ಸಿಟಿ, ಆರ್ ಆರ್ ಇನ್‍ಸ್ಟಿಟ್ಯೂಷನ್ ಆಫ್ ಟೆಕ್ನಾಲಜಿ, ರಾಮಯ್ಯ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಇಂಡಿಯನ್ ಅಕಾಡಮಿ ಆಫ್ ಇನ್‍ಸ್ಟಿಟ್ಯೂಷನ್, ರಾಮಯ್ಯ ಇನ್‍ಸ್ಟಿಟ್ಯೂಷನ್ ಆಫ್ ಮೆನೆಜ್‍ಮೆಂಟ್, ಸಿಎಂಆರ್ ಯುನಿವರ್ಸಿಟಿ, ಆಚಾರ್ಯ ಬೆಂಗಳೂರು ಬ್ಯುಸಿನೆಸ್ ಯುನಿವರ್ಸಿಟಿ

    ಸ್ಪೆಷಲ್‌ ಪೆವಿಲಿಯನ್‌:
    ರಾಮಯ್ಯ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌

    ಕ್ರಿಯೇಟಿವ್‌ ಸ್ಟಾಲ್‌:
    ಆರ್‌ ಆರ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ

    Live Tv
    [brid partner=56869869 player=32851 video=960834 autoplay=true]

  • ಪದವಿ, ಸ್ನಾತಕೋತ್ತರ ಕೋರ್ಸ್‌ಗೆ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ: ಅಶ್ವಥ್ ನಾರಾಯಣ

    ಪದವಿ, ಸ್ನಾತಕೋತ್ತರ ಕೋರ್ಸ್‌ಗೆ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ: ಅಶ್ವಥ್ ನಾರಾಯಣ

    ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

    ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಪರಿಸರ ಸಂರಕ್ಷಣೆಗೆ ಯುವಪೀಳಿಗೆಯನ್ನು ಜಾಗೃತಗೊಳಿಸಲು ರಾಜ್ಯಪಾಲರ ಕರೆ

    EDUCATION
    ಸಾಂದರ್ಭಿಕ ಚಿತ್ರ

    ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ ಎಂದು ಅವರು ಹೇಳಿದ್ದಾರೆ.

    ಈ ವೇಳಾಪಟ್ಟಿಯಲ್ಲಿ ಪ್ರತೀ ಸೆಮಿಸ್ಟರುಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶಾತಿ ಅವಧಿ, ಪ್ರತಿ ಸೆಮಿಸ್ಟರುಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನೆಲ್ಲ ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

    ಈ ಪಟ್ಟಿಯಲ್ಲಿ ಪದವಿಯ 6, ಸ್ನಾತಕೋತ್ತರ ಮಟ್ಟದ 4 ಮತ್ತು ವೃತ್ತಿಪರ ಕೋರ್ಸುಗಳ 8 ಸೆಮಿಸ್ಟರುಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಸ್ಟರ್ ಮುಗಿದ ನಂತರದ ರಜೆ ಅವಧಿಯಲ್ಲಿ ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಅಮರನಾಥಕ್ಕೆ ರಾಜ್ಯದಿಂದ 100ಕ್ಕೂ ಹೆಚ್ಚು ಯಾತ್ರಿಕರು ಭೇಟಿ: ಎಲ್ಲ ಕನ್ನಡಿಗರ ರಕ್ಷಣೆಗೆ ಕ್ರಮ: ಸಿಎಂ ಬೊಮ್ಮಾಯಿ

    ಉನ್ನತ ಶಿಕ್ಷಣ ಪರಿಷತ್ ಮುಖ್ಯಸ್ಥರಾದ ಬಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಇದೇ 7ರಂದು ಎಲ್ಲಾ ವಿ.ವಿ.ಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್ಸ್ ಜತೆ ವರ್ಚುಯಲ್ ಸಭೆ ನಡೆಸಿ, ಸಮಾಲೋಚನೆ ನಡೆಸಲಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯುಜಿ, ಪಿಜಿ ವಿದ್ಯಾರ್ಥಿಗಳಿಗೆ ಓಪನ್ ಬುಕ್ ಎಕ್ಸಾಂ ಘೋಷಿಸಿದ ಮಧ್ಯಪ್ರದೇಶ

    ಯುಜಿ, ಪಿಜಿ ವಿದ್ಯಾರ್ಥಿಗಳಿಗೆ ಓಪನ್ ಬುಕ್ ಎಕ್ಸಾಂ ಘೋಷಿಸಿದ ಮಧ್ಯಪ್ರದೇಶ

    ಭೋಪಾಲ್: ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಪದವಿ ಪೂರ್ವ ಹಾಗೂ ಸ್ನಾತಕೋತ್ತರ ಪದವಿಗಳನ್ನು ವ್ಯಾಸಂಗ ಮಾಡುತ್ತಿರುವ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಓಪನ್ ಬುಕ್(ತೆರೆದ ಪುಸ್ತಕ)ಪರೀಕ್ಷೆ ನೀಡಲು ಮಧ್ಯ ಪ್ರದೇಶದ ಸರ್ಕಾರ ನಿರ್ಧರಿಸಿದೆ. ಈ ಮುನ್ನ ಸರ್ಕಾರ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂ ಓಪನ್ ಬುಕ್ ಎಕ್ಸಾಂ ಘೋಷಿಸಿತ್ತು.

    ಈ ಕುರಿತಂತೆ ಮಧ್ಯಪ್ರದೇಶದ ಶಿಕ್ಷಣ ಸಚಿವ ಮೋಹನ್ ಯಾದವ್, ಕಾಲೇಜು ಹಾಗೂ ವಿಶ್ವ ವಿದ್ಯಾಲಯದಲ್ಲಿ ಯಾವುದೇ ರೀತಿಯ ದೈಹಿಕ ಪರೀಕ್ಷೆಗಳು ಇರುವುದಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮೊದಲ ಹಾಗೂ ಎರಡನೇ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದಂತೆಯೇ, ಯುಜಿ ಹಾಗೂ ಪಿಜಿ ಅಂತಿಮ ವರ್ಷದ ವಿದ್ಯಾರ್ಥಿಗಳು ಓಪನ್ ಬುಕ್ ಪರೀಕ್ಷೆಗಳು ನಡೆಸಲಾಗುತ್ತದೆ. ಆದರೆ ಕಾಲೇಜಿನಲ್ಲಿ ಯಾವುದೇ ಪರೀಕ್ಷೆ ಇರುವುದಿಲ್ಲ. ಜುಲೈ ಹೊತ್ತಿಗೆ ಎಲ್ಲ ಸಹಜ ಸ್ಥಿತಿಗೆ ಬರುತ್ತದೆ ಎಂದು ಭಾವಿಸುತ್ತೇನೆ ಎಂದು ಹೇಳಿದರು.

    ಮಧ್ಯ ಪ್ರದೇಶದ ಶಾಲಾ ಶಿಕ್ಷಣ ಇಲಾಖೆ ಈಗಾಗಲೇ 9 ಮತ್ತು 11ನೇ ತರಗತಿಯ ಅಂತಿಮ ಪರೀಕ್ಷೆಗಳನ್ನು ರದ್ದುಗೊಳಿಸಿದೆ.

  • ಕುವೆಂಪು ವಿವಿ ಪರೀಕ್ಷಾ ಶುಲ್ಕ ಪಾವತಿ ಕೊನೆಯ ದಿನಾಂಕ ಜು.07 ರವರೆಗೆ ವಿಸ್ತರಣೆ

    ಕುವೆಂಪು ವಿವಿ ಪರೀಕ್ಷಾ ಶುಲ್ಕ ಪಾವತಿ ಕೊನೆಯ ದಿನಾಂಕ ಜು.07 ರವರೆಗೆ ವಿಸ್ತರಣೆ

    ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷಾ ಶುಲ್ಕ ಭರಿಸಲು ನೀಡಲಾಗಿದ್ದ ಕೊನೆಯ ದಿನಾಂಕವನ್ನು ಜುಲೈ 07ರ ವರೆಗೆ ವಿಸ್ತರಿಸಲಾಗಿದೆ.

    ವಿವಿಯ ಎಲ್ಲ ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಶುಲ್ಕ ಭರಿಸಲು ಈ ಹಿಂದೆ ಜೂನ್ 23ರಂದು ಕೊನೆಯ ದಿನಾಂಕ ನಿಗಧಿ ಮಾಡಲಾಗಿತ್ತು. ಕೋವಿಡ್-19ನ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಯಾವುದೇ ವಿಳಂಬ ಶುಲ್ಕವಿಲ್ಲದೆ ಪರೀಕ್ಷಾ ಶುಲ್ಕ ಭರಿಸಲು ಜುಲೈ 07ರ ವರೆಗೆ ಕಾಲಾವಕಾಶ ನೀಡಲಾಗಿದೆ.

    ಇನ್ನುಳಿದಂತೆ ಬಿ.ಎ., ಬಿ.ಎಸ್ಸಿ., ಬಿ.ಕಾಂ., ಬಿ.ಬಿ.ಎಂ., ಬಿ.ಬಿ.ಎ., ಬಿ.ಟಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ. (ಆನರ್ಸ್), ಬಿ.ಎಡ್., ಹಾಗೂ ಬಿ.ಪಿ.ಎಡ್. ಸ್ನಾತಕ ಪದವಿಗಳ ಪರೀಕ್ಷೆಗೆ ಶುಲ್ಕ ಭರಿಸಲು ಈಗಾಗಲೇ ಅವಧಿ ಮುಕ್ತಾಯವಾಗಿದ್ದು, ಇದುವರೆವಿಗೂ ಶುಲ್ಕ ಪಾವತಿಸದ ವಿದ್ಯಾರ್ಥಿಗಳು ಕೂಡ ಜುಲೈ 07 ರವರೆಗೆ ಪರೀಕ್ಷಾ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಂ.ವೆಂಕಟೇಶ್ವರಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯು.ಜಿ.ಸಿ.)ದ ನಿಬಂಧನೆಗಳಿಗೆ ಒಳಪಟ್ಟು ಪರೀಕ್ಷಾ ಶುಲ್ಕ ಪಾವತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಯಾವುದೇ ವಿದ್ಯಾರ್ಥಿಗೆ ಪರೀಕ್ಷಾ ಶುಲ್ಕ ಭರಿಸಲು ತಾಂತ್ರಿಕ ಅಥವಾ ಇನ್ನಿತರೆ ಸಮಸ್ಯೆಗಳಿದ್ದಲ್ಲಿ ವಿವಿಯ ಪರೀಕ್ಷಾಂಗ ಕುಲಸಚಿವರ ಅನುಮತಿಯ ಮೇರೆಗೆ ಪರೀಕ್ಷಾ ಶುಲ್ಕ ಪಾವತಿಸಬಹುದು ಎಂದು ತಿಳಿಸಿದ್ದಾರೆ.

    ಪರೀಕ್ಷೆಗಳನ್ನು ನಡೆಸಲು ವಿಶ್ವವಿದ್ಯಾಲಯ ಸಂಪೂರ್ಣ ಸನ್ನದ್ಧವಾಗಿದೆ. ಸರ್ಕಾರದ ಸೂಚನೆ ಬಂದ ಬಳಿಕ ವಿದ್ಯಾರ್ಥಿಗಳಿಗೆ ಸೂಕ್ತ ಕಾಲಾವಕಾಶ ನೀಡಿ ಪರೀಕ್ಷೆಗಳನ್ನು ನಡೆಸಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನು ಎಂದಾದರೂ ಪಾವತಿಸಲೇಬೇಕು. ಈ ವಿಷಯದಲ್ಲಿ ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

  • 16 ವರ್ಷದ ಈಕೆ ಈಗ ಏಷ್ಯಾದಲ್ಲೇ ಅತ್ಯಂತ ಕಿರಿಯ ಸ್ನಾತಕೋತ್ತರ ಪದವೀಧರೆ

    16 ವರ್ಷದ ಈಕೆ ಈಗ ಏಷ್ಯಾದಲ್ಲೇ ಅತ್ಯಂತ ಕಿರಿಯ ಸ್ನಾತಕೋತ್ತರ ಪದವೀಧರೆ

    ಹೈದರಾಬಾದ್: ಸಾಧನೆಗೆ ವಯಸ್ಸಿನ ಹಂಗಿಲ್ಲ ಅಂತಾರೆ. ಈ ಮಾತನ್ನು ನಿಜವಾಗಿಸಿದ್ದಾಳೆ ಹೈದರಾಬಾದ್‍ನ ಈ ಯುವತಿ. ಹೌದು. ನೈನಾ ಜೈಸ್ವಾಲ್(16) ಎಂಬ ಈ ಯುವತಿ ಅತೀ ಕಿರಿಯ ವಯಸ್ಸಿನಲ್ಲಿಯೇ ಏಷ್ಯಾದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾಳೆ.

    ಈಕೆ ತನ್ನ 15ನೇ ವಯಸ್ಸಿನಲ್ಲಿ ಏಷ್ಯಾದ ಒಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ್ದು, ಅತ್ಯಂತ ಕಿರಿಯ ವಯಸ್ಸಿನಲ್ಲಿ ಪದವಿ ಪಡೆದ ಏಕೈಕ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ. ಇಷ್ಟು ಮಾತ್ರವಲ್ಲದೇ ನೈನಾ ತನ್ನ 13ನೇ ವಯಸ್ಸಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದು, ದೇಶದಲ್ಲೇ ಅತ್ಯಂತ ಕಿರಿಯ ವಯಸ್ಸಿನಲ್ಲಿ ಪದವಿ ಪಡೆದ ಮೊದಲ ವಿದ್ಯಾರ್ಥಿನಿ ಎಂಬ ಶ್ರೇಯಸ್ಸು ಈಕೆಯದ್ದು.

    ಕೇವಲ ಓದಿನಲ್ಲಿ ಮಾತ್ರವಲ್ಲದೇ ಪಠ್ಯೇತರ ಚಟುವಟಿಕೆಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವ ಈಕೆ ವೃತ್ತಿಪರ ಟೇಬಲ್ ಟೆನ್ನಿಸ್ ಆಟಗಾರ್ತಿಯೂ ಹೌದು. ಟೇಬಲ್ ಟೆನ್ನಿಸ್‍ನಲ್ಲಿ ನೈನಾ ಈಗಾಗಲೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾಳೆ.

    ನೈನಾ ಜೇಸ್ವಾಲ್ ಕುಟುಂಬದಲ್ಲಿ ಕಿರಿಯ ವಯಸ್ಸಿನಲ್ಲಿ ಸಾಧನೆ ಮಾಡಿರುವುದು ಇದು ಮೊದಲೇನಲ್ಲ. ಇತ್ತೀಚೆಗಷ್ಟೇ ಈಕೆಯ ತಮ್ಮ ಅಗಸ್ತ್ಯ ಜೈಸ್ವಾಲ್ 11 ವರ್ಷದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಸುದ್ದಿಯಾಗಿದ್ದ. ಈ ಬೆನ್ನಲ್ಲೇ ಇದೀಗ ನೈನಾ ಕೂಡ ತನ್ನ ಸಾಧನೆಯ ಮೂಲಕ ಸುದ್ದಿಯಾಗಿದ್ದಾಳೆ. ಇವರ ತಂದೆ ಜಸ್ವಾಲ್ ಕೂಡಾ 15 ವರ್ಷ ವಯಸ್ಸಿನಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.