Tag: ಸ್ನೇಹಮಹಿ ಕೃಷ್ಣ

  • ಹರಕೆ ಸೀರೆ ಮಾರಾಟ ಆರೋಪ – ಅದು ಸೀರೆಯಲ್ಲ, ಸೀರೆಯಲ್ಲಿ ಕಟ್ಟಿದ ಕಡತ: ಕಾರ್ಯದರ್ಶಿ ರೂಪಾ

    ಹರಕೆ ಸೀರೆ ಮಾರಾಟ ಆರೋಪ – ಅದು ಸೀರೆಯಲ್ಲ, ಸೀರೆಯಲ್ಲಿ ಕಟ್ಟಿದ ಕಡತ: ಕಾರ್ಯದರ್ಶಿ ರೂಪಾ

    ಮೈಸೂರು: ಚಾಮುಂಡಿ ತಾಯಿಗೆ (Chamundeshwari) ಹರಕೆಯಾಗಿ ಕೊಟ್ಟ ಸೀರೆಗಳು ಕಾಳಸಂತೆಯಲ್ಲಿ ಮಾರಾಟವಾಗ್ತಿದೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪಾ (Chamundibetta Development Authority Secretary Roopa) ಪ್ರತಿಕ್ರಿಯೆ ನೀಡಿದ್ದಾರೆ. ಉನ್ನತ ಅಧಿಕಾರಿಯಾಗಿ ನಾನೇಕೆ ಸೀರೆ ಕದಿಯಲಿ? ಅದು ಸೀರೆಯಲ್ಲ ಕಡತ ಎಂದು ಸ್ಪಷ್ಟನೆ ನೀಡಿದ್ದಾರೆ.

    `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಅವರು, ನಾನು ಕಾರಿನಲ್ಲಿ ತೆಗೆದುಕೊಂಡು ಹೋಗಿರುವುದು ಸೀರೆಯಲ್ಲ, ಸೀರೆಯಲ್ಲಿ ಕಟ್ಟಿದ ಕಡತಗಳು. ಕಡತಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಪರಿಶೀಲನೆ ನಡೆಸಿದ್ದೇನೆ. ಅದಕ್ಕೆ ಅವಕಾಶವಿದೆ. ಇಲ್ಲಿ ಮಾತ್ರವಲ್ಲ. ಎಲ್ಲಾ ಇಲಾಖೆಯಲ್ಲಿಯೂ ಅವಕಾಶವಿರುತ್ತದೆ. ಅದೇ ರೀತಿ ನಾನು ಆ ಕಡತವನ್ನು ಮನೆಗೆ ತೆಗೆದುಕೊಂಡು ಹೋಗಿದ್ದೇನೆ ಎಂದು ಹೇಳಿದರು.ಇದನ್ನೂ ಓದಿ: ಪಾನಮತ್ತರಾಗಿ ನಶೆಯಲ್ಲೇ ಆಸ್ಪತ್ರೆಗೆ ಬರುತ್ತಿದ್ದ ತಾಲೂಕು ವೈದ್ಯಾಧಿಕಾರಿ ಅಮಾನತು

    ನನ್ನ ಮೇಲೆ ಬಂದ ಆರೋಪ ಸಂಪೂರ್ಣ ಸುಳ್ಳಿನಿಂದ ಕೂಡಿದೆ. ಒಬ್ಬ ಉನ್ನತ ಅಧಿಕಾರಿಯಾಗಿ ನಾನೇಕೆ ಸೀರೆ ಕದಿಯಲಿ? ಚಾಮುಂಡಿಬೆಟ್ಟದಲ್ಲಿ ನಾನು ಅಧಿಕಾರ ವಹಿಸಿಕೊಂಡಾಗಿನಿಂದಲೂ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಇದು ಕೂಡ ಅದರ ಒಂದು ಭಾಗ. ಕೇವಲ ಸೀರೆ ಕೌಂಟರ್ ಮಾತ್ರವಲ್ಲ, ಲಡ್ಡು ವಿಭಾಗ ಸೇರಿ ಮುಖ್ಯದ್ವಾರದಲ್ಲಿ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ನಾನು ಬಂದ ಆರಂಭದಿಂದಲು ನನ್ನನ್ನು ಹೊರಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಜಿಲ್ಲಾಧಿಕಾರಿ ಹಾಗೂ ಪೊಲೀಸರ ಜೊತೆ ಮಾತನಾಡಿ ಮುಂದಿನ ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.

    ಏನಿದು ಪ್ರಕರಣ?
    ಚಾಮುಂಡಿ ತಾಯಿಗೆ ಹರಕೆಯಾಗಿ ಕೊಟ್ಟ ಸೀರೆಗಳು ಕಾಳಸಂತೆಯಲ್ಲಿ ಮಾರಾಟ ಆಗ್ತಿದ್ಯಾ ಅನ್ನೋ ಅನುಮಾನ ಮೂಡಿತ್ತು. ಇದರ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ (Snehamayi Krishan) ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದರು.

    ವಿಡಿಯೋದಲ್ಲಿ ಚಾಮುಂಡಿ ದೇವಸ್ಥಾನದಲ್ಲಿನ ಸೀರೆಗಳನ್ನು ಅಲ್ಲಿನ ನೌಕರ ದೊಡ್ಡ ಮೂಟೆ ಕಟ್ಟಿ ದೇವಸ್ಥಾನದ ಕಾರ್ಯದರ್ಶಿ ರೂಪ ಕಾರಿನಲ್ಲಿ ಇಡುತ್ತಿದ್ದರು. ಹಾಗೇ ವೀಡಿಯೋ ಸಮೇತ ದೇವಸ್ಥಾನದ ಕಾರ್ಯದರ್ಶಿ ರೂಪ ಮೇಲೆ ಮೈಸೂರಿನ ಕೆ.ಆರ್. ಪೊಲೀಸ್ ಠಾಣೆಗೆ ದೂರು ಕೂಡ ನೀಡಿದ್ದು, ಭಕ್ತರು ಕೊಟ್ಟ ಸ್ಟೀಕರ್ ಸಮೇತ ಸೀರೆಗಳನ್ನು ಸುಲಭವಾಗಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು.ಇದನ್ನೂ ಓದಿ: ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆ ಅನುಮೋದನೆಗೆ ಮನವಿ

  • ಚಾಮುಂಡಿ ದೇವಿಗೆ ಕೊಟ್ಟ ಹರಕೆ ಸೀರೆ ಕಾಳಸಂತೆಯಲ್ಲಿ ಮಾರಾಟ ಆರೋಪ – ಸ್ನೇಹಮಯಿ ಕಷ್ಣ ದೂರು

    ಚಾಮುಂಡಿ ದೇವಿಗೆ ಕೊಟ್ಟ ಹರಕೆ ಸೀರೆ ಕಾಳಸಂತೆಯಲ್ಲಿ ಮಾರಾಟ ಆರೋಪ – ಸ್ನೇಹಮಯಿ ಕಷ್ಣ ದೂರು

    ಮೈಸೂರು: ಚಾಮುಂಡಿ ತಾಯಿಗೆ (Chamundeshwari) ಹರಕೆಯಾಗಿ ಕೊಟ್ಟ ಸೀರೆಗಳು ಕಾಳಸಂತೆಯಲ್ಲಿ ಮಾರಾಟ ಆಗ್ತಿದ್ಯಾ ಅನ್ನೋ ಅನುಮಾನ ಮೂಡಿಸಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ (Snehamayi Krishna) ಬಿಡುಗಡೆ ಮಾಡಿರುವ ವೀಡಿಯೋ ಈ ಅನುಮಾನಕ್ಕೆ ಪುಷ್ಟಿ ನೀಡಿದೆ.

    ಚಾಮುಂಡಿ ದೇವಸ್ಥಾನದಲ್ಲಿನ ಸೀರೆಗಳನ್ನು ಅಲ್ಲಿನ ನೌಕರ ದೊಡ್ಡ ಮೂಟೆ ಕಟ್ಟಿ ದೇವಸ್ಥಾನದ ಕಾರ್ಯದರ್ಶಿ ರೂಪ ಕಾರಿನಲ್ಲಿ ಇಡುತ್ತಿರುವ ವೀಡಿಯೋವನ್ನು ಸ್ನೇಹಮಹಿ ಕೃಷ್ಣ ಬಿಡುಗಡೆ ಮಾಡಿದ್ದಾರೆ. ಹಾಗೇ ವೀಡಿಯೋ ಸಮೇತ ದೇವಸ್ಥಾನದ ಕಾರ್ಯದರ್ಶಿ ರೂಪ ಮೇಲೆ ಮೈಸೂರಿನ ಕೆ.ಆರ್. ಪೊಲೀಸ್ ಠಾಣೆಗೆ (KR Police Station) ದೂರು ಕೂಡ ನೀಡಿದ್ದಾರೆ.ಇದನ್ನೂ ಓದಿ: ದರ್ಶನ್‌ ಜಾಮೀನು ಭವಿಷ್ಯ ಇಂದು – ಜೈಲೋ ಬೇಲೋ?

    ಚಾಮುಂಡಿ ದೇವಸ್ಥಾನದ ಕಾರ್ಯದರ್ಶಿ ರೂಪ ಮೇಲೆಯೇ ಈಗಾಗಲೇ ಹತ್ತು ಹಲವು ಆರೋಪಗಳು ಕೇಳಿ ಬಂದಿವೆ. ಹರಕೆ ರೂಪದಲ್ಲಿ ಚಾಮುಂಡಿ ತಾಯಿಗೆ ಸೀರೆ ಕೊಡುವಾಗ ಸೀರೆ ಖರೀದಿಯ ಬಿಲ್, ಸೀರೆ ಮೇಲಿನ ಸ್ಟೀಕರ್ ಎಲ್ಲವೂ ಇರಬೇಕು ಎಂಬುದು ಕಡ್ಡಾಯ. ಇದೇ ಕಡ್ಡಾಯದ ನಿಯಮವೇ ದೇವಸ್ಥಾನದ ಅಧಿಕಾರಿಗಳಿಗೆ ವರದಾನವಾಗಿದೆ. ಭಕ್ತರು ಕೊಟ್ಟ ಸ್ಟೀಕರ್ ಸಮೇತ ಸೀರೆಗಳನ್ನು ಸುಲಭವಾಗಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ.

    ಮೊದಲು ತಾಯಿ ಚಾಮುಂಡಿಗೆ ಉಡಿಸಿದ ಎಲ್ಲಾ ಸೀರೆಗಳನ್ನು ದೇವಸ್ಥಾನದಿಂದಲೇ ಹರಾಜು ಹಾಕಲಾಗುತ್ತಿತ್ತು. ದಿಢೀರನೆ ಸೀರೆ ಹರಾಜು ಪ್ರಕ್ರಿಯೆಗೆ ತಡೆ ನೀಡಲಾಗಿದೆ. ಸೀರೆಗಳು ಯಾರ ಮನೆ ಸೇರುತ್ತಿವೆ ಎಂಬ ಲೆಕ್ಕವೇ ದೇವಸ್ಥಾನದಲ್ಲಿ ಇಲ್ಲ. ಇನ್ನೂ ಭಕ್ತರು ಕೊಟ್ಟ ಸೀರೆಗಳಿಗೆ ದೇವಸ್ಥಾನದಲ್ಲಿ ಲೆಕ್ಕವೇ ಸಿಕ್ಕಿಲ್ಲ ಎನ್ನಲಾಗುತ್ತಿದೆ. ಚಾಮುಂಡಿ ಬೆಟ್ಟದ ಕಾರ್ಯದರ್ಶಿ ರೂಪ ಮೇಲೆ ಸಾಕಷ್ಟು ಆರೋಪ ಕೇಳಿಬಂದಿದೆ.ಇದನ್ನೂ ಓದಿ: ರಾಜ್ಯ ಹವಾಮಾನ ವರದಿ 13-12-2024

  • ಒಳ ಒಪ್ಪಂದದ ರೀತಿ ಲೋಕಾಯುಕ್ತ ಎಸ್ಪಿ ಸಿಎಂ ವಿಚಾರಣೆ ಮಾಡಿದ್ದಾರೆ: ಸ್ನೇಹಮಹಿ ಕೃಷ್ಣ ದೂರು

    ಒಳ ಒಪ್ಪಂದದ ರೀತಿ ಲೋಕಾಯುಕ್ತ ಎಸ್ಪಿ ಸಿಎಂ ವಿಚಾರಣೆ ಮಾಡಿದ್ದಾರೆ: ಸ್ನೇಹಮಹಿ ಕೃಷ್ಣ ದೂರು

    – ತನಿಖೆ ಸರಿಯಾದ ಟ್ರ‍್ಯಾಕ್‌ನಲ್ಲಿ ಇಲ್ಲ

    ಮೈಸೂರು: ಒಳ ಒಪ್ಪಂದದ ರೀತಿ ಲೋಕಾಯುಕ್ತ ಎಸ್ಪಿ ಸಿಎಂ ವಿಚಾರಣೆ ಮಾಡಿದ್ದಾರೆ. ತನಿಖೆ ಸರಿಯಾದ ಟ್ರ‍್ಯಾಕ್‌ನಲ್ಲಿ ಇಲ್ಲ ಎಂದು ಲೋಕಾಯುಕ್ತ ಎಸ್ಪಿ ವಿರುದ್ಧ ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ದೂರುದಾರ ಸ್ನೇಹಮಹಿ ಕೃಷ್ಣ (Snehamayi Krishna) ದೂರು ನೀಡಿದ್ದಾರೆ.

    ಎಸ್ಪಿ ಉದೇಶ್ ಕರ್ತವ್ಯಲೋಪ ಎಸಗಿದ್ದಾರೆ. ನಿನ್ನೆ ನಡೆದ ಸಿಎಂ ವಿಚಾರಣೆ ಒಳ ಒಪ್ಪಂದದ ರೀತಿ ಇದೆ. ಇದುವರೆಗೆ ಪ್ರಕರಣದಲ್ಲಿ ಒಬ್ಬನೇ ಒಬ್ಬ ಆರೋಪಿಯನ್ನು ಲೋಕಾಯುಕ್ತರು ವಶಕ್ಕೆ ಪಡೆದಿಲ್ಲ. ದಾಖಲೆಗಳ ಮಹಜರ್ ಸರಿಯಾಗಿ ಆಗಿಲ್ಲ. ಹೀಗಾಗಿ ವಿಚಾರಣೆ ಸರಿಯಾದ ಟ್ರ‍್ಯಾಕ್‌ಗೆ ತನ್ನಿ ಎಂದು ದೂರಿನಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ದೆಹಲಿ, ಮುಂಬೈ ಮೂಲದ ಕಂಪನಿಗಳ ಮೇಲೆ ಐಟಿ ದಾಳಿ

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಅವರನ್ನು ವಿಚಾರಣೆ ಪಡಿಸುವ ನಿಟ್ಟಿನಲ್ಲಿ ಹಲವಾರು ದಾಖಲೆಗಳನ್ನು ಇಟ್ಟುಕೊಂಡು ನಾನು ಮನವಿ ಪತ್ರವನ್ನು ಕೊಟ್ಟಿದ್ದೇನೆ. ಜೊತೆಗೆ ಕೆಲವೊಂದು ಸಾಕ್ಷ್ಯ ಪತ್ರಗಳನ್ನು ಅವರು ಸಂಗ್ರಹ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಸಿಎಂ ಅವರನ್ನು ವಿವರವಾಗಿ ವಿಚಾರಣೆಗೆ ಒಳಪಡಿಸಬೇಕಾಗಿತ್ತು. ಆ ರೀತಿ ವಿಚಾರಣೆ ಮಾಡಬೇಕಾದರೆ ಹಲವಾರು ಗಂಟೆಗಳ ಸಮಯಾವಕಾಶ ಬೇಕಾಗುತ್ತದೆ. ಆದರೆ ಇಲ್ಲಿ ಮೊದಲೇ ಆರೋಪಿ ಹಾಗೂ ತನಿಖಾಧಿಕಾರಿ ಸಂಚು ರೂಪಿಸಿದ್ದಾರೆ ಅನ್ನೋ ರೀತಿಯಲ್ಲಿ ವಿಚಾರಣೆಗೆ ಹಾಜರಾಗುವ ಸಮಯವನ್ನು ತನಿಖಾಧಿಕಾರಿ ನಿಗದಿ ಮಾಡುತ್ತಾರೆ. ವಿಚಾರಣೆಯಿಂದ ಹೋಗುವ ಸಮಯವನ್ನು ಸಿಎಂ ನಿಗದಿ ಮಾಡಿದ್ದಾರೆ ಅನ್ನುವ ರೀತಿಯಲ್ಲಿ ಅವರು 12 ಗಂಟೆಗೆ ಹೊರಡುವ ಹಾಗೆ 1 ದಿನ ಮುಂಚೆಯೆ ಸಿಎಂ ಪ್ರವಾಸ ಕಾರ್ಯಕ್ರಮ ನಿಗದಿಯಾಗಿರುತ್ತದೆ. ಅದೇ ರೀತಿಯಲ್ಲಿ ವಿಚಾರಣೆ ಮುಗಿಸಿ ಅವರನ್ನು ಕಳುಹಿಸಿ ಕೊಡುತ್ತಾರೆ. ಇದನ್ನೆಲ್ಲಾ ನೋಡುವಾಗ ಸಾಕಷ್ಟು ಅನುಮಾನಗಳು ಬರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕಮರ್ಷಿಯಲ್ ಸ್ಟ್ರೀಟ್ ಒಳಗಡೆ ಆಟೋ, ಸರಕು ವಾಹನಗಳ ಪ್ರವೇಶ ನಿಷೇಧ

    ಇನ್ನೊಂದು ವಿಚಾರವೇನೆಂದರೆ ಎ2, ಎ3, ಎ4 ಆರೋಪಿಗಳನ್ನು ವಿಚಾರಣೆ ಮಾಡಿ ಹಲವಾರು ದಿನ ಆಗಿದೆ. ಆದರೆ ಎ1 ಆರೋಪಿಯನ್ನು ವಿಚಾರಣೆಗೆ ಒಳಪಡಿಸಿರಲಿಲ್ಲ. ಈ ಕೇಸನ್ನು ಹೈಕೋರ್ಟ್‌ನಲ್ಲಿ ಸಿಬಿಐಗೆ (CBI) ವಹಿಸಬೇಕು ಎಂದು ಮನವಿ ಮಾಡಿದ್ದೆವು. ಆ ಕಾರಣದಿಂದಾಗಿ ಈ ವಿಚಾರಣೆ ಆಗಿದೆ. ಇಲ್ಲದಿದ್ದರೆ ಇವರು ಮಾಡುತ್ತಿರಲಿಲ್ಲ ಎಂದರು. ಇದನ್ನೂ ಓದಿ: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್

    ಈವರೆಗೆ ನಡೆದ ತನಿಖೆಯ ಬಗ್ಗೆ ನನಗೆ ತೃಪ್ತಿ ಇಲ್ಲ. ಇಷ್ಟು ದೊಡ್ಡ ಹಗರಣ ಮಾಡಿರುವಾಗ ಒಬ್ಬರನ್ನಾದರೂ ಬಂಧಿಸಬೇಕಿತ್ತು. ಆದರೆ ಇಲ್ಲಿ ಯಾರನ್ನು ಬಂಧಿಸಿಲ್ಲ. ಅದೇ ಲೋಕಾಯುಕ್ತದವರು ಬರೀ 1000 ರೂ., 2000 ರೂ., ಲಂಚ ತೆಗೆದುಕೊಂಡರು ಅನ್ನುವ ಕಾರಣಕ್ಕೆ ಕೂಡಲೇ ಬಂಧಿಸುತ್ತಾರೆ. ಅದೇ ರೀತಿ ಇಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ವ್ಯವಹಾರ ನಡೆದಿದೆ. ಸರ್ಕಾರಿ ಆಸ್ತಿ ಕಬಳಿಸಿದ್ದಾರೆ. ಆದರೂ ಕೂಡ ಯಾರನ್ನು ಬಂಧಿಸುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಸೇನೆಯ ಗುಂಡಿಗೆ ಉಗ್ರ ಬಲಿ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

  • ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ: ದೂರುದಾರ ಸ್ನೇಹಮಯಿ ಕೃಷ್ಣ

    ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ: ದೂರುದಾರ ಸ್ನೇಹಮಯಿ ಕೃಷ್ಣ

    – ಮುಡಾ ಕೇಸ್ ಸಿಬಿಐ ತನಿಖೆ ಆದೇಶಿಸಿ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕ್ತೇವೆ

    ಮೈಸೂರು: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಇಂದೇ ಎಫ್‌ಐಆರ್ ದಾಖಲಾಗಬೇಕು. ವೆಬ್‌ಸೈಟ್‌ನಲ್ಲಿನ ಆದೇಶ ಪ್ರತಿಯಿಂದಲೇ ಎಫ್‌ಐಆರ್ ಮಾಡಿಕೊಳ್ಳಬಹುದು. ಇವತ್ತೇ ಎಫ್‌ಐಆರ್ ದಾಖಲಾಗುತ್ತದೆ ಎಂದು ದೂರುದಾರ ಸ್ನೇಹಮಯಿ  ಕೃಷ್ಣ (Snehamayi Krishna) ಮೈಸೂರಿನಲ್ಲಿ (Mysuru) ಹೇಳಿದ್ದಾರೆ.

    ಈ ಬಗ್ಗೆ ‘ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದ ಅವರು, ನಮಗೆ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ಹೀಗಾಗಿ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ (CBI) ಕೊಡಿ ಎಂದು ಹೈಕೋರ್ಟ್‌ಗೆ ಇವತ್ತು ಅಥವಾ ನಾಳೆ ಅರ್ಜಿ ಸಲ್ಲಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆಗೆ ನಾಲ್ವರು ಸಾವು; ಶಾಲಾ-ಕಾಲೇಜುಗಳಿಗೆ ರಜೆ

    ಸಿಎಂ ಮೇಲಿನ ಮುಡಾ ಕೇಸ್‌ನಲ್ಲಿ (MUDA Scam) ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ. ಹೀಗಾಗಿ, ವಿಚಾರಣೆ ಸಿಬಿಐಗೆ ಕೊಡಿ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕುವುದಾಗಿ ತಿಳಿಸಿದ್ದಾರೆ.

    ಮುಡಾ ನಿವೇಶನ ಹಂಚಿಕೆಯಲ್ಲಿ ಪ್ರಭಾವ ಬೀರಿದ್ದಾರೆಂಬ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತಗೆ ಹೈಕೋರ್ಟ್ ಆದೇಶ ಹೊರಡಿಸಿದೆ. 3 ತಿಂಗಳ ಒಳಗೆ ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ಗಡುವು ವಿಧಿಸಿದೆ. ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಥೈಲ್ಯಾಂಡ್‌ ಗ್ರೀನ್‌ ಸಿಗ್ನಲ್‌ – ಸಲಿಂಗ ವಿವಾಹ ಮಸೂದೆಗೆ ಸಹಿ ಹಾಕಿದ ರಾಜ

    ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಹೊರಬೀಳುತ್ತಿದ್ದಂತೆ ಬಿಜೆಪಿ-ಜೆಡಿಎಸ್ ನಾಯಕರು, ಸಿಎಂ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ ಸಂಕಷ್ಟ; ಹೈಕಮಾಂಡ್‌ಗೆ ವರದಿ ನೀಡಿದ ಸಿಎಂ ಸಿದ್ದರಾಮಯ್ಯ