Tag: ಸ್ಪಂದನಾ

  • ಮಲ್ಲೇಶ್ವರಂ ಮನೆ ತಲುಪಿದ ಸ್ಪಂದನಾ ಮೃತದೇಹ – ಶಿವಣ್ಣ ದಂಪತಿ ಆಗಮನ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

    ಮಲ್ಲೇಶ್ವರಂ ಮನೆ ತಲುಪಿದ ಸ್ಪಂದನಾ ಮೃತದೇಹ – ಶಿವಣ್ಣ ದಂಪತಿ ಆಗಮನ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

    ಬೆಂಗಳೂರು: ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ತಡರಾತ್ರಿ 1 ಗಂಟೆ ವೇಳೆಗೆ ಮಲ್ಲೇಶ್ವರಂನ ತವರು ಮನೆ ತಲುಪಿದೆ. ಸಾವಿನಿಂದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಗಣ್ಯರು, ಆಪ್ತರು, ಸ್ನೇಹಿತರು ಹಾಗೂ ಸಿನಿ ತಾರೆಯರು ಕಂಬನಿ ಮಿಡಿದಿದ್ದಾರೆ. ಮೃತದೇಹ ನೋಡುತ್ತಿದ್ದಂತೆಯೇ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು.

    ನಟ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಹಾಗೂ ಸ್ಪಂದನಾ ಸ್ನೇಹಿತೆ ನಟಿ ಅನು ಪ್ರಭಾಕರ್‌ ಸೇರಿದಂತೆ ಹಲವು ಗಣ್ಯಮಾನ್ಯರು ಮಲ್ಲೇಶ್ವರಂನ ಮನೆಗೆ ಆಗಮಿಸಿದ್ದಾರೆ. ನಟ ವಿಜಯರಾಘವೇಂದ್ರ, ಶ್ರೀಮುರಳಿ, ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್‌, ಶಾಸಕ ಮುನಿರತ್ನ, ಮಾವ ಚಿನ್ನೇಗೌಡ ಹಲವು ಪ್ರಮುಖರು ಸ್ಥಳದಲ್ಲಿದ್ದಾರೆ. ಅಂಬುಲೆನ್ಸ್‌ ಮಲ್ಲೇಶ್ವರಂನ ತವರು ಮನೆ ತಲುಪುತ್ತಿದ್ದಂತೆ ಮೃತದೇಹ ನೋಡಲು ನೆರೆದಿದ್ದ ಜನ ಮುಗಿಬಿದ್ದರು. ಅಂಬುಲೆನ್ಸ್‌ ಬಳಿ ತಳ್ಳಾಟ, ನೂಕಾಟ ನಡೆಯಿತು.

    ಮಲ್ಲೇಶ್ವರಂನ ಮನೆಗೆ ಪಾರ್ಥಿವ ಶರೀರ ತರಲಾಗಿದ್ದು ಪಾರ್ಥಿವ ಶರೀರ ಪೂಜೆಗೆ ಸಿದ್ಧತೆ ನಡೆಯುತ್ತಿದೆ, ಸ್ಪಂದನಾ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಸ್ನೇಹಿತರು, ಆಪ್ತರು ಈಗಾಗಲೇ ಮಲ್ಲೇಶ್ವರಂನ ಮನೆಯ ಮುಂದೆ ಜಮಾಯಿಸಿದ್ದಾರೆ. ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ, ಮಾವ ಚಿನ್ನೇಗೌಡ ನೇತೃತ್ವದಲ್ಲಿ ಅಂತಿಮ ದರ್ಶನಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ವಿಜಯ ರಾಘವೇಂದ್ರ ಕುಟುಂಬ ಕೂಡ ಸ್ಪಂದನಾ ಅವರ ತವರು ಮನೆಗೆ ಆಗಮಿಸಿದೆ.

    ಬುಧವಾರ (ಆ.9) ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಪಾರ್ಥಿವ ಶರೀರವನ್ನ ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಟುಂಬಸ್ಥರಿಗೆ ಸ್ಪಂದನಾ ಮೃತದೇಹ ಹಸ್ತಾಂತರ – ಮಲ್ಲೇಶ್ವರಂ ಮನೆಯಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ

    ಕುಟುಂಬಸ್ಥರಿಗೆ ಸ್ಪಂದನಾ ಮೃತದೇಹ ಹಸ್ತಾಂತರ – ಮಲ್ಲೇಶ್ವರಂ ಮನೆಯಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ

    ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರವನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬ್ಯಾಂಕಾಕ್‌ನಿಂದ ಕಾರ್ಗೋ ವಿಮಾನದಲ್ಲಿ ತಂದ ಮೃತದೇಹವನ್ನ ಸುಮಾರು 30 ನಿಮಿಷಗಳ ಕಸ್ಟಮ್ಸ್‌ ಕ್ಲಿಯರೆನ್ಸ್‌ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.


    ಬ್ಯಾಂಕಾಕ್‌ನಿಂದ ಪಾರ್ಥಿವ ಶರೀರ ಹೊತ್ತ ವಿಮಾನ ಬಂದಿಳಿಯುತ್ತಿದ್ದಂತೆ ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ಕಾರ್ಯ ನಡೆಸಿದರು. ಸುಮಾರು 30 ನಿಮಿಷಗಳ ಕಾಲ ಬಾಕ್ಸ್‌ನಲ್ಲಿ ತಂದಿದ್ದ ಮೃಹದೇಹವನ್ನ ಸ್ಕ್ಯಾನಿಂಗ್‌ ಮಾಡಿ ತಪಾಸಣೆ ಮಾಡಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ನಂತರ ಸ್ಪಂದನಾ ಮೃತದೇಹ ಹೊತ್ತ ಅಂಬುಲೆನ್ಸ್‌ ಏರ್ಪೋರ್ಟ್‌ನಿಂದ ಮಲ್ಲೇಶ್ವರಂ ಮನೆಕಡೆಗೆ ಹೊರಟಿತು.

    ನಟ ವಿಜಯರಾಘವೇಂದ್ರ, ಶ್ರೀಮುರಳಿ, ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್‌, ಶಾಸಕ ಮುನಿರತ್ನ, ಮಾವ ಚಿನ್ನೇಗೌಡ ಹಲವು ಪ್ರಮುಖರು ಏರ್ಪೋರ್ಟ್‌ನಲ್ಲೇ ಇದ್ದು ಮೃತದೇಹವನ್ನ ಸ್ವೀಕರಿಸಿದ್ದಾರೆ. ಮೃತದೇಹ ಹಸ್ತಾಂತರಿಸುತ್ತಿದ್ದಂತೆ ಮಲ್ಲೇಶ್ವರಂ ಮನೆಗೆ ತೆರಳಿದ ವಿಜಯ ರಾಘವೇಂದ್ರ ಪುತ್ರ ಶೌರ್ಯನನ್ನ ಕೈ ಹಿಡಿದೆ ಕರೆತಂದಿದ್ದಾರೆ. ಮಲ್ಲೇಶ್ವರಂನ ಮನೆಗೆ ಪಾರ್ಥಿವ ಶರೀರ ತರಲಾಗುತ್ತಿದ್ದು, ಪಾರ್ಥಿವ ಶರೀರಕ್ಕೆ ಪೂಜೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪೂಜಾ ವಿಧಿವಿಧಾನ ನೇರವೇರಿದ ಬಳಿಕ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಸ್ನೇಹಿತರು, ಆಪ್ತರು ಈಗಾಗಲೇ ಮಲ್ಲೇಶ್ವರಂನ ಮನೆಯ ಮುಂದೆ ಜಮಾಯಿಸಿದ್ದಾರೆ.

    ಸ್ಪಂದನಾ ಅವರ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂ ಸ್ಪಂದನಾ ನಿವಾಸದ ಮುಂಭಾಗ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ, ಮಾವ ಚಿನ್ನೇಗೌಡ ನೇತೃತ್ವದಲ್ಲಿ ಅಂತಿಮ ದರ್ಶನಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ವಿಜಯ ರಾಘವೇಂದ್ರ ಕುಟುಂಬ ಕೂಡ ಸ್ಪಂದನಾ ಅವರ ತವರು ಮನೆಗೆ ಆಗಮಿಸಿದೆ. ಇದನ್ನೂ ಓದಿ: Breaking: ಸ್ಪಂದನಾ ಪಾರ್ಥಿವ ಶರೀರ ಹೊತ್ತ ವಿಮಾನ, ಬೆಂಗಳೂರಿಗೆ ಆಗಮನ

    ಬುಧವಾರ (ಆ.9) ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಪಾರ್ಥಿವ ಶರೀರವನ್ನ ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಕೆಲವೇ ಗಂಟೆಗಳಲ್ಲಿ ಸ್ಪಂದನಾ ಮೃತದೇಹ ಬೆಂಗಳೂರಿಗೆ: ಅಂತಿಮ ದರ್ಶನಕ್ಕೆ ಸಿದ್ಧತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Breaking: ಸ್ಪಂದನಾ ಪಾರ್ಥಿವ ಶರೀರ ಹೊತ್ತ ವಿಮಾನ, ಬೆಂಗಳೂರಿಗೆ ಆಗಮನ

    Breaking: ಸ್ಪಂದನಾ ಪಾರ್ಥಿವ ಶರೀರ ಹೊತ್ತ ವಿಮಾನ, ಬೆಂಗಳೂರಿಗೆ ಆಗಮನ

    ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಹೊತ್ತ ವಿಮಾನ ಬೆಂಗಳೂರಿಗೆ ಆಗಮಿಸಿದೆ. ಬ್ಯಾಂಕಾಕ್‌ನಿಂದ ಕಾರ್ಗೋ ವಿಮಾನದಲ್ಲಿ ತರಲಾದ ಮೃತದೇಹವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುಮಾರು 30 ನಿಮಿಷಗಳ ಕಸ್ಟಮ್ಸ್‌ ಕ್ಲಿಯರೆನ್ಸ್‌ ಪ್ರಕ್ರಿಯೆ ಮುಗಿಸಿದ ಬಳಿಕ ಪಾರ್ಥಿವ ಶರೀರವನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು.

    ಸ್ಪಂದನಾ ಅವರ ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್‌, ಶಾಸಕ ಮುನಿರತ್ನ, ಮಾವ ಚಿನ್ನೇಗೌಡ ಸೇರಿದಂತೆ ಹಲವರು ಸ್ಥಳದಲ್ಲಿದ್ದು ಮೃತದೇಹವನ್ನ ಪಡೆದುಕೊಳ್ಳಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪ್ರಕ್ರಿಯೆ ಮುಗಿಸಿ ಮಲ್ಲೇಶ್ವರಂಗೆ ಮೃತದೇಹ ರವಾನೆ ಮಾಡಲಾಗುವುದು ಸ್ಪಂದನಾ, ಅಂತಿಮ ದರ್ಶನಕ್ಕಾಗಿ ಮಲ್ಲೇಶ್ವರಂ ಮನೆಗೆ ಆಪ್ತರು ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಬ್ಯಾಂಕಾಕ್ ಏರ್ ಪೋರ್ಟಿಗೆ ಬಂದ ಸ್ಪಂದನಾ ಮೃತದೇಹ: 8.30ಕ್ಕೆ ಹೊರಡಲಿದೆ ವಿಮಾನ

    ಸ್ಪಂದನಾ ಅವರ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂ ಸ್ಪಂದನಾ ನಿವಾಸದ ಮುಂಭಾಗ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ, ಮಾವ ಚಿನ್ನೇಗೌಡ ನೇತೃತ್ವದಲ್ಲಿ ಅಂತಿಮ ದರ್ಶನಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ವಿಜಯ ರಾಘವೇಂದ್ರ ಕುಟುಂಬ ಕೂಡ ಸ್ಪಂದನಾ ಅವರ ತವರು ಮನೆಗೆ ಆಗಮಿಸಿದೆ. ಇದನ್ನೂ ಓದಿ: ರಜನಿ ‘ಜೈಲರ್’ ಬಿಡುಗಡೆ: ರಜೆ ಘೋಷಿಸಿ, ಸಿಬ್ಬಂದಿಗೆ ಉಚಿತ ಟಿಕೆಟ್ ನೀಡಿದ ಕಂಪನಿ

    ಬುಧವಾರ (ಆ.9) ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಪಾರ್ಥಿವ ಶರೀರವನ್ನ ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಹೇಳಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಲವೇ ಗಂಟೆಗಳಲ್ಲಿ ಸ್ಪಂದನಾ ಮೃತದೇಹ ಬೆಂಗಳೂರಿಗೆ: ಅಂತಿಮ ದರ್ಶನಕ್ಕೆ ಸಿದ್ಧತೆ

    ಕೆಲವೇ ಗಂಟೆಗಳಲ್ಲಿ ಸ್ಪಂದನಾ ಮೃತದೇಹ ಬೆಂಗಳೂರಿಗೆ: ಅಂತಿಮ ದರ್ಶನಕ್ಕೆ ಸಿದ್ಧತೆ

    ಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ (Spandana) ಮೃತದೇಹ ಕೆಲವೇ ಗಂಟೆಗಳಲ್ಲಿ ಬೆಂಗಳೂರಿಗೆ (Bangalore) ಬರಲಿದೆ. ಮೃತದೇಹ ಹೊತ್ತ ವಿಮಾನ ಈಗಾಗಲೇ ಬ್ಯಾಂಕಾಕ್ (Bangkok) ನಿಂದ ಹೊರಟಿದ್ದು, ರಾತ್ರಿ 11.30ರ ಹೊತ್ತಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅದು ಬಂದು ತಲುಪಲಿದೆ. ಈಗಾಗಲೇ ಸ್ಪಂದನಾ ಚಿಕ್ಕಪ್ಪ ಬಿ.ಕೆ.ಹರಿಪ್ರಸಾದ್, ಮಾವ ಚಿನ್ನೇಗೌಡ ಸೇರಿದಂತೆ ಹಲವರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

    ಇತ್ತ ಸ್ಪಂದನಾ ಅವರ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂ (Malleswaram) ಸ್ಪಂದನಾ ನಿವಾಸದ ಮುಂಭಾಗ ಸಿದ್ದತೆ ಮಾಡಿಕೊಳ್ಳಲಾಗಿದೆ. ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ, ಮಾವ ಚಿನ್ನೇಗೌಡ ನೇತೃತ್ವದಲ್ಲಿ ಅಂತಿಮ ದರ್ಶನಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ವಿಜಯ ರಾಘವೇಂದ್ರ ಕುಟುಂಬ ಕೂಡ ಸ್ಪಂದನಾ ಅವರ ತವರು ಮನೆಗೆ ಆಗಮಿಸಿದೆ. ಇದನ್ನೂ ಓದಿ:ಸ್ಪಂದನಾ ನಿಧನ: ಮಲ್ಲೇಶ್ವರಂನಲ್ಲಿ ದರ್ಶನ, ಹರಿಶ್ಚಂದ್ರ ಘಾಟ್‍ ನಲ್ಲಿ ಅಂತಿಮ ಸಂಸ್ಕಾರ

    ಸ್ಪಂದನಾ ಅವರ ತಂದೆಯ ಮನೆಗೆ ಬಹುತೇಕರು ಆಗಮಿಸುತ್ತಿದ್ದು,  ಬಿ.ಕೆ ಶಿವರಾಂ ಮನೆಯಲ್ಲಿ ಕುಟುಂಬಸ್ಥರನ್ನ ಸಮಾಧಾನಿಸುವ ದೃಶ್ಯ ಎಂಥವರನ್ನೂ ಭಾವುಕರನ್ನಾಗಿಸುತ್ತಿದೆ. ಇತ್ತ ಸೊಸೆ ಸ್ಪಂದನಾ ನೆನೆದು ಮಾವ ಚಿನ್ನೇಗೌಡ ಕೂಡ ಭಾವುಕರಾಗಿದ್ದಾರೆ.

    ಇಂದು ರಾತ್ರಿಯಿಂದ ನಾಳೆ ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಹೇಳಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ಯಾಂಕಾಕ್ ಏರ್ ಪೋರ್ಟಿಗೆ ಬಂದ ಸ್ಪಂದನಾ ಮೃತದೇಹ: 8.30ಕ್ಕೆ ಹೊರಡಲಿದೆ ವಿಮಾನ

    ಬ್ಯಾಂಕಾಕ್ ಏರ್ ಪೋರ್ಟಿಗೆ ಬಂದ ಸ್ಪಂದನಾ ಮೃತದೇಹ: 8.30ಕ್ಕೆ ಹೊರಡಲಿದೆ ವಿಮಾನ

    ನಿನ್ನೆಯಷ್ಟೇ ಬ್ಯಾಂಕಾಕ್ (Bangkok) ನಲ್ಲಿ ನಿಧನರಾದ ಸ್ಪಂದನಾ (Spandana) ಮೃತದೇಹವನ್ನು ಬ್ಯಾಂಕಾಕ್ ನ ಸುವರ್ಣಭೂಮಿ ವಿಮಾನ ನಿಲ್ದಾಣಕ್ಕೆ ತರಲಾಗಿದೆ. ಆ ವಿಮಾನವು 8.30ಕ್ಕೆ ಬ್ಯಾಂಕಾಕ್ ನಿಂದ ಹೊರಡಲಿದ್ದು, ಬೆಂಗಳೂರಿಗೆ 11.20ಕ್ಕೆ ಆಗಮಿಸಲಿದೆ. ಅದೇ ವಿಮಾನದಲ್ಲೇ ವಿಜಯ ರಾಘವೇಂದ್ರ ಮತ್ತು ಸ್ಪಂದನಾ ಜೊತೆ ಪ್ರವಾಸಕ್ಕೆ ತೆರಳಿದ್ದ ಸಂಬಂಧಿಕರು ಕೂಡ ಬೆಂಗಳೂರಿಗೆ  (Bangalore) ಆಗಮಿಸಲಿದ್ದಾರೆ.

    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಕ್ರಿಯೆಗಳನ್ನು ಸುಗಮಗೊಳಿಸುವುದಕ್ಕಾಗಿ ಮತ್ತು ಆದಷ್ಟು ಬೇಗ ಮೃತದೇಹವನ್ನು ಪಡೆಯುವುದಕ್ಕಾಗಿ ಈಗಾಗಲೇ ಸ್ಪಂದನಾ ಕುಟುಂಬಸ್ಥರು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಹೊರಟಿದ್ದಾರೆ. ಸ್ಪಂದನಾ ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್ ಮತ್ತು ಇತರರು ರಾತ್ರಿ 9 ಗಂಟೆಯ ಹೊತ್ತಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಿದ್ದಾರೆ. ಇದನ್ನೂ ಓದಿ:ಕುಟುಂಬಕ್ಕೆ ಸ್ಪಂದನಾ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪೂರ್ಣ

    ಬೆಂಗಳೂರು ವಿಮಾನ ನಿಲ್ದಾಣದಿಂದ ಮಧ್ಯರಾತ್ರಿ 12 ಗಂಟೆಯ ಹೊತ್ತಿಗೆ ಅಂಬುಲೆನ್ಸ್ ಮೂಲಕ ಮೃತದೇಹವನ್ನು ಸ್ಪಂದನಾ ಅವರ ತಂದೆಯ ಮನೆಗೆ ತರಲಾಗುತ್ತಿದೆ. ಮಲ್ಲೇಶ್ವರಂನಲ್ಲಿರುವ (Malleswaram) ಬಿ.ಕೆ.ಶಿವರಾಮ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾತ್ರಿಯಿಂದಲೇ ಅಂತಿಮ ದರ್ಶನ ಪಡೆಯಬಹುದಾಗಿದೆ.

     

    ಇಂದು ರಾತ್ರಿಯಿಂದ ನಾಳೆ ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಹೇಳಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಸಲಿಗೆ ಆಗಿದ್ದೇನು ಚಿನ್ನಾರಿ ಮುತ್ತನ ಮನದರಸಿಗೆ..!?

    ಅಸಲಿಗೆ ಆಗಿದ್ದೇನು ಚಿನ್ನಾರಿ ಮುತ್ತನ ಮನದರಸಿಗೆ..!?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಟುಂಬಕ್ಕೆ ಸ್ಪಂದನಾ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪೂರ್ಣ

    ಕುಟುಂಬಕ್ಕೆ ಸ್ಪಂದನಾ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪೂರ್ಣ

    ಟ ವಿಜಯ ರಾಘವೇಂದ್ರ  (Vijaya Raghavendra) ಪತ್ನಿ ಸ್ಪಂದನಾ (Spandana) ಅವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆ ಇದೀಗ ಪೂರ್ಣಗೊಂಡಿದೆ. ಮರಣೋತ್ತರ ಪರೀಕ್ಷೆಯ ವರದಿ ಬರುತ್ತಿದ್ದಂತೆಯೇ ಮುಂದಿನ ಪ್ರಕ್ರಿಯೆಗಳು ಚುರುಕುಗೊಂಡಿದ್ದರಿಂದ ಇದೀಗ ಸ್ಪಂದನಾ ಅವರ ಮೃತದೇಹವನ್ನು ಬೆಂಗಳೂರಿಗೆ ತರುವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಾತ್ರಿ 8.30ರ ಹೊತ್ತಿಗೆ ಮೃತದೇಹ ಹೊತ್ತ ವಿಮಾನ ಬ್ಯಾಂಕಾಕ್ (Bangkok) ನಿಂದ ಹೊರಟರೆ, ಬೆಂಗಳೂರಿಗೆ (Bangalore) 11.15ಕ್ಕೆ ವಿಮಾನ ಆಗಮನವಾಗಲಿದೆ.

    ಬೆಂಗಳೂರಿನಲ್ಲೂ ಅಂತಿಮ ದರ್ಶನಕ್ಕೆ ಸ್ಪಂದನಾ ಅವರ ತವರು ಮನೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮಲ್ಲೇಶ್ವರಂ ಆಟದ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಇವತ್ತು ರಾತ್ರಿಯಿಂದಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಮಧ್ಯಾಹ್ನದವರೆಗೂ ಅಂತಿಮ ದರ್ಶನ ಮಾಡಬಹುದಾಗಿದೆ.

    ಮರಣೋತ್ತರ ಪರೀಕ್ಷೆಯ ನಂತರದ ಪ್ರಕ್ರಿಯೆಗಳು ಏನಿದ್ದವು?

    ಕನ್ನಡದ ಹೆಸರಾಂತ ನಟ ವಿಜಯ ರಾಘವೇಂದ್ರ ಪತ್ನಿ ಹಾಗೂ ನಿರ್ಮಾಪಕಿ ಸ್ಪಂದನಾ ಸೋಮವಾರ ಬೆಳಗ್ಗೆ ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆದರೂ ಈವರೆಗೂ ಅವರ ಮೃತದೇಹ ಭಾರತಕ್ಕೆ ತರಲಾಗಿಲ್ಲ. ಕಾರಣ, ವಿದೇಶದಲ್ಲಿ ಯಾವುದೇ ಪ್ರಜೆ ನಿಧನ ಹೊಂದಿದರೂ, ಅವರ ಮೃತದೇಹ ತರುವುದು ಸುಲಭವಲ್ಲ. ಅದರಲ್ಲೂ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ನಿಧನ ಹೊಂದಿದರೆ ಪ್ರಕ್ರಿಯೆ ಇನ್ನೂ ಕಠಿಣವಾಗಿರುತ್ತದೆ.

    ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಪ್ರವಾಸಕ್ಕೆಂದು ಬಂದು ಮೃತರಾದ ವ್ಯಕ್ತಿಗಳ ಮರಣೋತ್ತರ ಪರೀಕ್ಷೆ ತಡವಾಗುವುದು ಸಾಮಾನ್ಯ. ಭಾರತದಂತೆಯೇ ಅಲ್ಲಿಯೂ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಆ ವರದಿಯನ್ನು ಮೊದಲು ಪೊಲೀಸರು ಪಡೆದುಕೊಳ್ಳುತ್ತಾರೆ. ಸಾವಿಗೆ ಕಾರಣ ಏನು ಎನ್ನುವುದು ಮೊದಲು ಗೊತ್ತಾಗುವುದು ಅಲ್ಲಿನ ಪೊಲೀಸ್ ವ್ಯವಸ್ಥೆಗೆ.

    ಪೊಲೀಸರಿಗೆ ಮರಣೋತ್ತರ ವರದಿ ಬಂದ ತಕ್ಷಣವೇ ಪರಿಶೀಲಿಸಿ ಅದು ಸಹಜ ಸಾವು ಅಂದ ಬಳಿಕವಷ್ಟೇ ಕುಟುಂಬಸ್ಥರಿಗೆ ಮೃತದೇಹವನ್ನು ನೀಡಲಾಗುತ್ತದೆ. ನಂತರ ಕುಟುಂಬದವರು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುತ್ತಾರೆ. ಮರಣೋತ್ತರ ವರದಿ, ಮರಣ ಪ್ರಮಾಣ ಪತ್ರ ಹಾಗೂ ಪೊಲೀಸ್ ವರದಿಗಳನ್ನು ಪಡೆದುಕೊಂಡು ಆಯಾ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಬೇಕಾಗುತ್ತದೆ.

    ಸ್ಪಂದನಾ ಬ್ಯಾಂಕಾಕ್ ನಲ್ಲಿ ನಿಧನರಾಗಿದ್ದರಿಂದ ಅವರ ಕುಟುಂಬವು ಈ ಎಲ್ಲ ವರದಿಗಳನ್ನು ಪಡೆದುಕೊಂಡು ಬ್ಯಾಂಕಾಕ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ನೀಡಬೇಕು. ರಾಯಭಾರಿ ಕಚೇರಿ ಮತ್ತು ಸ್ಥಳೀಯ ಆಡಳಿತ ಸೇರಿಕೊಂಡು ಕಸ್ಟಮ್ಸ್ ಕ್ಲಿಯರೆನ್ಸ್ ಪಡೆದುಕೊಳ್ಳಲಾಗುತ್ತದೆ.

    ಈ ಸಮಯದಲ್ಲಿ ಸ್ಪಂದನಾ ಅವರ ಪಾಸ್ ಪೋರ್ಟ್ ಮತ್ತೆ ವೀಸಾವನ್ನು ವಾಪಸ್‌ ಪಡೆದುಕೊಳ್ಳಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಗಿದ ನಂತರವಷ್ಟೇ ಮೃತದೇಹವನ್ನು ವಿಮಾನ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಲು ಅನುಮತಿಸಲಾಗುತ್ತದೆ.

    ಏರ್‌ಪೋರ್ಟ್‌ಗೆ ಮೃತದೇಹ ತಂದ ತಕ್ಷಣವೇ ಅಲ್ಲೂ  ಹಲವು ಪ್ರಕ್ರಿಯೆಗಳು ನಡೆಯಲಿವೆ. ಅಲ್ಲಿಯೂ ಕೂಡ ರಾಯಭಾರಿ ಕಚೇರಿಯಿಂದ ಪಡೆದಿರುವಂತಹ ಎಲ್ಲ ವರದಿಗಳನ್ನೂ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ನೀಡಬೇಕು. ಆನಂತರವಷ್ಟೇ ಮೃತದೇಹವನ್ನು ವಿಮಾನದಲ್ಲಿ ಸಾಗಿಸಲು ಪರವಾನಿಗೆ ದೊರೆಯುತ್ತದೆ. ಈ ಎಲ್ಲಾ ಕಾರಣದಿಂದಾಗಿ ಸ್ಪಂದನಾ ಅವರ ಮೃತ ದೇಹ ಬೆಂಗಳೂರಿಗೆ ತರಲು ತಡವಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಂದನಾ ಮೇಲೆ ವಿಜಯ್ ಡಿಪೆಂಡ್ ಆಗ್ತಿದ್ದ, ದೇವರು ಅನ್ಯಾಯ ಮಾಡಿದ- ಗಿರಿಜಾ ಲೋಕೇಶ್

    ಸ್ಪಂದನಾ ಮೇಲೆ ವಿಜಯ್ ಡಿಪೆಂಡ್ ಆಗ್ತಿದ್ದ, ದೇವರು ಅನ್ಯಾಯ ಮಾಡಿದ- ಗಿರಿಜಾ ಲೋಕೇಶ್

    ಸ್ಯಾಂಡಲ್‌ವುಡ್ (Sandalwood) ನಟ ವಿಜಯ್ ರಾಘವೇಂದ್ರ (Vijay Raghavendra) ಪತ್ನಿ ಸ್ಪಂದನಾ (Spandana) ನಿಧನರಾಗಿದ್ದಾರೆ. ವಿಜಯ್ ಪತ್ನಿಯ ಬಗ್ಗೆ ಹಿರಿಯ ನಟಿ ಗಿರಿಜಾ ಲೋಕೇಶ್ (Girija Lokesh)  ಅವರು ಭಾವುಕರಾಗಿದ್ದಾರೆ. ಸ್ಪಂದನಾ ಸಾವಿನಿಂದ ರಾಘು ಅವರ ಜೀವನ ಮುಂದೇ ಹೇಗೆ ಎಂದು ನಟಿ ರಿಯಾಕ್ಟ್ ಮಾತನಾಡಿದ್ದಾರೆ.

    ಮೊನ್ನೆ ಶೂಟಿಂಗ್ ಮುಗಿಸಿ ಮನೆಗೆ ಬಂದು ಊಟ ಮಾಡಿ ಮಲ್ಕೊಂಡೆ. ಬೆಳಿಗ್ಗೆ ಎದ್ದಾಗ ನನ್ನ ಸೊಸೆ ಗ್ರೀಷ್ಮಾ (Greeshma) ಹೇಳಿದ್ದರು. ಸ್ಪಂದನಾ ಸಾವಿನ ವಿಚಾರ, ಈ ವಿಚಾರ ಕೇಳಿದಾಗ ನಂಬಲಾಗಲಿಲ್ಲ. ಸುದ್ದಿ ಕೇಳಿದ ಕೂಡಲೇ ನಾನು ಕಿರುಚಿಕೊಂಡೆ. ಅಷ್ಟು ಫಿಟ್ ಆಗಿರುವ ಹುಡುಗಿ, ಇಷ್ಟು ಚಿಕ್ಕ ವಯಸ್ಸಿಗೆ ಹೋದರು. ದೇವರ ಮಾಡಿದ ಅನ್ಯಾಯ ಇದು ಎಂದು ನಟಿ ಗಿರಿಜಾ ಲೋಕೇಶ್ ಹೇಳಿದ್ದಾರೆ. ಇದನ್ನೂ ಓದಿ:ಸ್ಪಂದನಾ ನಿಧನ: ಮಲ್ಲೇಶ್ವರಂನಲ್ಲಿ ದರ್ಶನ, ಹರಿಶ್ಚಂದ್ರ ಘಾಟ್‍ ನಲ್ಲಿ ಅಂತಿಮ ಸಂಸ್ಕಾರ

    ತುಂಬಾನೇ ನೋವಾಗುತ್ತೆ, ನಾವು ಇರುವವರೆಗೂ ಈ ನೋವನ್ನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ವಿಜಯ್ ಮನೆಯಲ್ಲಿ ತಂದೆ- ತಾಯಿ ಎಲ್ಲರೂ ವಯಸ್ಸಾದವರು ಹೇಗೆ ಸಹಿಸಿಕೊಳ್ಳುವುದು. ಸ್ಪಂದನಾ ಹಿರಿಯ ಸೊಸೆ ಎಲ್ಲರ ಜವಬ್ದಾರಿ ಆಕೆಯ ಮೇಲಿತ್ತು. ಸಂಸಾರದಲ್ಲಿ ಗಂಡು ಇಲ್ಲಾ ಅಂದರೆ ಬದುಕಬಹುದು. ಆದರೆ ಒಂದು ಹೆಣ್ಣಿಲ್ಲ ಅಂದರೆ ಬದುಕೋದು ಕಷ್ಟ. ವಿಜಯ್ ಎಲ್ಲದ್ದಕ್ಕೂ ಸ್ಪಂದನಾ ಮೇಲೆ ಡಿಪೆಂಡ್ ಆಗಿದ್ದ, ಪತ್ನಿಯ ನಡೆಗೆ ವಿಜಯ್ ಕೂಡ ಬೆಂಬಲಿಸುತ್ತಿದ್ದರು.

    ಸ್ಪಂದನಾ ಸುಂದರವಾದ ಹೆಣ್ಣು, ಸರಳವಾದ ಅವರ ವ್ಯಕ್ತಿತ್ವ. ಸ್ಪಂದನಾಳಲ್ಲಿ ಯಾವುದೇ ನಿಶಕಲ್ಮಶ ಇರಲಿಲ್ಲ. ಆಕೆಯ ನಗುವಿನಲ್ಲೇ ನಿಶಕಲ್ಮಶ ಗುಣ ಗೊತ್ತಾಗುತ್ತಿತ್ತು. ನನ್ನ ಮಗ ಸೃಜನ್ (Srujan Lokesh) ಮತ್ತು ಸ್ಪಂದನಾ ಬರ್ತ್‌ಡೇ ಒಂದೇ ದಿನ, ಜೂನ್ 28ರಂದು ಇಬ್ಬರು ಒಟ್ಟಿಗೆ ಹುಟ್ಟುಹಬ್ಬ ಆಚರಿಸುತ್ತಿದ್ದರು. ಇಲ್ಲಿ ಬಂದು ಕೇಕ್ ಕಟ್ ಮಾಡ್ತಿದ್ದರು. ಆ ದಿನಗಳನ್ನ ಮರಿಯೋಕೆ ಸಾಧ್ಯವಿಲ್ಲ. ನಮ್ಮ ಕುಟುಂಬದ ಜೊತೆ ಸ್ಪಂದನಾಗೆ (Spandana)  ಒಳ್ಳೆಯ ಬಾಂದವ್ಯವಿತ್ತು.

    ನಾನು ರಾಘುನ ಚಿಕ್ಕ ವಯಸ್ಸಿನಿಂದ ನೋಡಿದ್ದೀನಿ. ಆಗಿನಿಂದಲೂ ಅವನಿಗೆ ಅಗಾಧವಾದ ಪ್ರತಿಭೆಯಿದೆ. ಶಂಕರ್‌ನಾಗ್ ತೀರಿಕೊಂಡ ಸಮಯದಲ್ಲಿ ನಾನು ವಿಜಯ್ ಮನೆಯಲ್ಲಿಯೇ ಇದ್ದೆ, ಮೈಸೂರಿನಿಂದ ಅಲ್ಲಿಗೆ ಬರೋಕೆ ಆಗಲ್ಲ ಅಂತಾ. ಆಗ ರಾಘು ಎಲ್ಲಾ ಮಕ್ಕಳನ್ನ ಸೇರಿಸಿಕೊಂಡು ಹಾಡು- ಡ್ಯಾನ್ಸ್ ಮಾಡುತ್ತಿದ್ದ. ರಾಘು ಮನಸ್ಸಿಗೆ ಶತ್ರುಗಳೇ ಇರಲಿಲ್ಲ. ರಾಘು ತುಂಬಾ ಹಂಬಲ್ ವ್ಯಕ್ತಿಯಾಗಿದ್ದರು. ದೇವರು ವಿಜಯ್‌ಗೆ ಅನ್ಯಾಯ ಮಾಡಿದ್ದಾರೆ. ಸ್ಪಂದನಾ ಸಾವನ್ನ ಚೇತರಿಕೊಳ್ಳುವ ಶಕ್ತಿ ಆ ಕುಟುಂಬಕ್ಕೆ ಕೊಡಲಿ ಎಂದು ಗಿರಿಜಾ ಲೋಕೇಶ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಂದನಾ ಮೃತದೇಹ ತರಲು ತಡವಾಗುತ್ತಿರುವುದೇಕೆ? ಸುಲಭವಲ್ಲ ಪ್ರಕ್ರಿಯೆ

    ಸ್ಪಂದನಾ ಮೃತದೇಹ ತರಲು ತಡವಾಗುತ್ತಿರುವುದೇಕೆ? ಸುಲಭವಲ್ಲ ಪ್ರಕ್ರಿಯೆ

    ನ್ನಡದ ಹೆಸರಾಂತ ನಟ ವಿಜಯ ರಾಘವೇಂದ್ರ (Vijaya Raghavendra) ಪತ್ನಿ ಹಾಗೂ ನಿರ್ಮಾಪಕಿ ಸ್ಪಂದನಾ (Spandana) ಸೋಮವಾರ ಬೆಳಗ್ಗೆ ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆದರೂ ಈವರೆಗೂ ಅವರ ಮೃತದೇಹ ಭಾರತಕ್ಕೆ ತರಲಾಗಿಲ್ಲ. ಕಾರಣ, ವಿದೇಶದಲ್ಲಿ ಯಾವುದೇ ಪ್ರಜೆ ನಿಧನ ಹೊಂದಿದರೂ, ಅವರ ಮೃತದೇಹ ತರುವುದು ಸುಲಭವಲ್ಲ. ಅದರಲ್ಲೂ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ನಿಧನ ಹೊಂದಿದರೆ ಪ್ರಕ್ರಿಯೆ ಇನ್ನೂ ಕಠಿಣವಾಗಿರುತ್ತದೆ.

    ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಪ್ರವಾಸಕ್ಕೆಂದು ಬಂದು ಮೃತರಾದ ವ್ಯಕ್ತಿಗಳ ಮರಣೋತ್ತರ ಪರೀಕ್ಷೆ (Postmortem) ತಡವಾಗುವುದು ಸಾಮಾನ್ಯ. ಭಾರತದಂತೆಯೇ ಅಲ್ಲಿಯೂ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಆ ವರದಿಯನ್ನು ಮೊದಲು ಪೊಲೀಸರು ಪಡೆದುಕೊಳ್ಳುತ್ತಾರೆ. ಸಾವಿಗೆ ಕಾರಣ ಏನು ಎನ್ನುವುದು ಮೊದಲು ಗೊತ್ತಾಗುವುದು ಅಲ್ಲಿನ ಪೊಲೀಸ್ ವ್ಯವಸ್ಥೆಗೆ.

    ಪೊಲೀಸರಿಗೆ ಮರಣೋತ್ತರ ವರದಿ ಬಂದ ತಕ್ಷಣವೇ ಪರಿಶೀಲಿಸಿ ಅದು ಸಹಜ ಸಾವು ಅಂದ ಬಳಿಕವಷ್ಟೇ ಕುಟುಂಬಸ್ಥರಿಗೆ ಮೃತದೇಹವನ್ನು ನೀಡಲಾಗುತ್ತದೆ. ನಂತರ ಕುಟುಂಬದವರು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುತ್ತಾರೆ. ಮರಣೋತ್ತರ ವರದಿ, ಮರಣ ಪ್ರಮಾಣ ಪತ್ರ ಹಾಗೂ ಪೊಲೀಸ್ ವರದಿಗಳನ್ನು ಪಡೆದುಕೊಂಡು ಆಯಾ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಬೇಕಾಗುತ್ತದೆ.

    ಸ್ಪಂದನಾ ಬ್ಯಾಂಕಾಕ್ (Bangkok) ನಲ್ಲಿ ನಿಧನರಾಗಿದ್ದರಿಂದ ಅವರ ಕುಟುಂಬವು ಈ ಎಲ್ಲ ವರದಿಗಳನ್ನು ಪಡೆದುಕೊಂಡು ಬ್ಯಾಂಕಾಕ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ನೀಡಬೇಕು. ರಾಯಭಾರಿ ಕಚೇರಿ ಮತ್ತು ಸ್ಥಳೀಯ ಆಡಳಿತ ಸೇರಿಕೊಂಡು ಕಸ್ಟಮ್ಸ್ ಕ್ಲಿಯರೆನ್ಸ್ ಪಡೆದುಕೊಳ್ಳಲಾಗುತ್ತದೆ.

    ಈ ಸಮಯದಲ್ಲಿ ಸ್ಪಂದನಾ ಅವರ ಪಾಸ್ ಪೋರ್ಟ್ ಮತ್ತೆ ವೀಸಾವನ್ನು ವಾಪಸ್‌ ಪಡೆದುಕೊಳ್ಳಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಗಿದ ನಂತರವಷ್ಟೇ ಮೃತದೇಹವನ್ನು ವಿಮಾನ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಲು ಅನುಮತಿಸಲಾಗುತ್ತದೆ.

    ಏರ್‌ಪೋರ್ಟ್‌ಗೆ ಮೃತದೇಹ ತಂದ ತಕ್ಷಣವೇ ಅಲ್ಲೂ  ಹಲವು ಪ್ರಕ್ರಿಯೆಗಳು ನಡೆಯಲಿವೆ. ಅಲ್ಲಿಯೂ ಕೂಡ ರಾಯಭಾರಿ ಕಚೇರಿಯಿಂದ ಪಡೆದಿರುವಂತಹ ಎಲ್ಲ ವರದಿಗಳನ್ನೂ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ನೀಡಬೇಕು. ಆನಂತರವಷ್ಟೇ ಮೃತದೇಹವನ್ನು ವಿಮಾನದಲ್ಲಿ ಸಾಗಿಸಲು ಪರವಾನಿಗೆ ದೊರೆಯುತ್ತದೆ. ಈ ಎಲ್ಲಾ ಕಾರಣದಿಂದಾಗಿ ಸ್ಪಂದನಾ ಅವರ ಮೃತ ದೇಹ ಬೆಂಗಳೂರಿಗೆ ತರಲು ತಡವಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಂದನಾ ನಿಧನ: ಮಲ್ಲೇಶ್ವರಂನಲ್ಲಿ ದರ್ಶನ, ಹರಿಶ್ಚಂದ್ರ ಘಾಟ್‍ ನಲ್ಲಿ ಅಂತಿಮ ಸಂಸ್ಕಾರ

    ಸ್ಪಂದನಾ ನಿಧನ: ಮಲ್ಲೇಶ್ವರಂನಲ್ಲಿ ದರ್ಶನ, ಹರಿಶ್ಚಂದ್ರ ಘಾಟ್‍ ನಲ್ಲಿ ಅಂತಿಮ ಸಂಸ್ಕಾರ

    ಟ ವಿಜಯ ರಾಘವೇಂದ್ರ (Vijaya Raghavendra) ಪತ್ನಿ ಸ್ಪಂದನಾ (Spandana) ಅವರ ಮೃತದೇಹ ರಾತ್ರಿ 11 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಅಲ್ಲಿಂದ ಸ್ಪಂದನಾ ಅವರ ನಿವಾಸಕ್ಕೆ ಮೃತದೇಹ ಬರಲಿದ್ದು, ಅಲ್ಲಿ ಪೂಜೆಯ ನಂತರ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಮಲ್ಲೇಶ್ವರಂ (Malleswaram) ಆಟ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಪಂದನಾ ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್ ತಿಳಿಸಿದ್ದಾರೆ.

    ರಾತ್ರಿಯಿಂದಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹರಿಶ್ಚಂದ್ರ ಘಾಟ್‍ ನಲ್ಲಿ ಈಡಿಗ ಸಂಪ್ರದಾಯದಂತೆ ಅಂತಿಮ ಸಂಸ್ಕಾರ (Cremation) ಮಾಡಲಾಗುವುದು ಎಂದು ಬಿ.ಕೆ ಹರಿಪ್ರಸಾದ್ ಹೇಳಿದರು. ಇಂದು ಮಧ್ಯಾಹ್ನದವರೆಗೂ ಥೈಲ್ಯಾಂಡ್ ನ ದೇಶದ ಕಸ್ಟಮ್ ಕ್ಲಿಯರೆನ್ಸ್ ಪ್ರಕ್ರಿಯೆಗಳು ನಡೆಯಲಿವೆ. ತದನಂತರ ಸ್ಪಂದನಾ ಮೃತದೇಹ ಕುಟುಂಬಕ್ಕೆ ಹಸ್ತಾಂತರವಾಗಲಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಸ್ಪಂದನಾರನ್ನ ನೋಡಬೇಕು ಎಂದು ಕಣ್ಣೀರಿಟ್ಟಿದ್ದರು ಚಿನ್ನಾರಿಮುತ್ತ ವಿಜಯ್

    ಕಳೆದ ಒಂದು ವಾರದಿಂದ ಸ್ಪಂದನಾ ಸೋದರ ಸಂಬಂಧಿಗಳ ಜೊತೆ ಬ್ಯಾಂಕಾಕ್ (Bangkok) ಪ್ರವಾಸದಲ್ಲಿದ್ದರು. ಭಾನುವಾರ ಅವರಿಗೆ ಹೃದಯನೋವು ಕಾಣಿಸಿಕೊಂಡಿದೆ. ರಾತ್ರಿ ಮಲಗಿದವರು ಎದ್ದೇಳಲಿಲ್ಲ ಎನ್ನುವ ಮಾಹಿತಿಯನ್ನು ಅವರ ಕುಟುಂವಸ್ಥರು ತಿಳಿಸಿದ್ದಾರೆ.  ಈ ವಿಷಯ ತಿಳಿಯುತ್ತಿದ್ದಂತೆಯೇ ಭಾನುವಾರ ರಾತ್ರಿಯೇ ವಿಜಯ ರಾಘವೇಂದ್ರ ಬ್ಯಾಂಕಾಕ್ ಗೆ ತೆರಳಿದ್ದಾರೆ.

     

    ಭಾನುವಾರ ರಾತ್ರಿ ಬ್ಯಾಂಕಾಕ್ ಹೊರಟ ವಿಜಯ ರಾಘವೇಂದ್ರ, ಸೋಮವಾರ ಬೆಳಗ್ಗೆ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆಯೇ ಎರಡೂ ಕುಟುಂಬ ಆಘಾತಕ್ಕೆ ಒಳಗಾಗಿದೆ. ಜೊತೆಗೆ ವಿಜಯ ರಾಘವೇಂದ್ರ ಜೊತೆ ಸಂಪರ್ಕದಲ್ಲಿದ್ದು, ಅಲ್ಲಿನ ಪ್ರಕ್ರಿಯೆಗಳನ್ನು ಮುಗಿಸಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]