Tag: ಸ್ಪಂದನಾ

  • ವಿಜಯ್ ಪತ್ನಿ ಮರಣೋತ್ತರ ಪರೀಕ್ಷೆ ಮುಕ್ತಾಯ, ಬೆಂಗಳೂರಿಗೆ ಯಾವಾಗ?

    ವಿಜಯ್ ಪತ್ನಿ ಮರಣೋತ್ತರ ಪರೀಕ್ಷೆ ಮುಕ್ತಾಯ, ಬೆಂಗಳೂರಿಗೆ ಯಾವಾಗ?

    ವಿಜಯ್ ರಾಘವೇಂದ್ರ (Vijay Raghavendra) ಪತ್ನಿ ಸ್ಪಂದನಾ (Spandana) ಬಾರದ ಲೋಕಕ್ಕೆ ತೆರಳಿದ್ದಾರೆ. ಥೈಲ್ಯಾಂಡ್ ಪ್ರವಾಸದಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಸಾವನಪ್ಪಿದ್ದಾರೆ. ಈಗಾಗಲೇ ಥೈಲ್ಯಾಂಡ್‌ನಲ್ಲೇ ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ಇಂದು ತಡರಾತ್ರಿ ಮೃತದೇಹ ಬೆಂಗಳೂರಿಗೆ ರವಾನೆ ಆಗಲಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಸ್ಪಂದನಾರನ್ನ ನೋಡಬೇಕು ಎಂದು ಕಣ್ಣೀರಿಟ್ಟಿದ್ದರು ಚಿನ್ನಾರಿಮುತ್ತ ವಿಜಯ್

    ವಿಜಯ್ ಪತ್ನಿ ಹೃದಯಘಾತವಾದಾಗ ಅವರನ್ನು ಬ್ಯಾಂಕಾಕ್‌ನ ಕಿಂಗ್ ಚುಲಾಲಾಂಗ್‌ಕಾರ್ನ್ ಮೆಮೋರಿಯಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೀಗಾಗಿ ಅಲ್ಲಿಯೇ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಇಂದು (ಆಗಸ್ಟ್ 08) ಮಧ್ಯಾಹ್ನದ ವೇಳೆಗೆ ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಸ್ಪಂದನಾ ಮೃತದೇಹ ಹಸ್ತಾಂತರವಾಗಲಿದೆ. ಇಂದು ತಡ ರಾತ್ರಿ 1 ಗಂಟೆಗೆ ಸ್ಪಂದನಾ ಮೃತದೇಹ ಬೆಂಗಳೂರಿನ (Bengaluru) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದೆ ಎಂದು ತಿಳಿದುಬಂದಿದೆ.

    ಮನೆಯ ಬಳಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಆಗಸ್ಟ್ 9ರ ಮಧ್ಯಾಹ್ನದವರೆಗೂ ಅಂತಿಮ ದರ್ಶನದ ವ್ಯವಸ್ಥೆ ಇರಲಿದೆ. ನಂತರ ಹರಿಶ್ಚಂದ್ರ ಘಾಟ್‌ನಲ್ಲಿ ಈಡಿಗ ಪದ್ಧತಿಯಂತೆ ಅಂತ್ಯ ಸಂಸ್ಥಾರ ನೆರವೇರಲಿದೆ.

    ‘ನಿನಗಾಗಿ’ ಸಿನಿಮಾ ಮಾಡುವಾಗ ಮಂಗಳೂರಿನ ಹುಡುಗಿಯೇ ಬೇಕು ಎಂದು ವಿಜಯ್‌ಗೆ ಅನಿಸಿತ್ತು. ಅದರಂತೆಯೇ ಬೆಳ್ತಂಗಡಿಯ ಹುಡುಗಿ ಸ್ಪಂದನಾ ಅವರನ್ನ ನೋಡಿ ವಿಜಯ್ ಬೋಲ್ಡ್ ಆಗಿದ್ದರು. ಇಬ್ಬರ ಪರಿಚಯ ಪ್ರೀತಿಗೆ ತಿರುಗಿ ಎರಡು ಕುಟುಂಬದ ಒಪ್ಪಿಗೆ ಪಡೆದು 2007ರಲ್ಲಿ ವೈವಾಹಿಕ ಜೀವನಕ್ಕೆ ವಿಜಯ್- ಸ್ಪಂದನಾ ಕಾಲಿಟ್ಟಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪ್ಪು ನಿಧನರಾದಾಗ Life is Unpreditable ಎಂದು ಸ್ಪಂದನಾ ಕಣ್ಣೀರಿಟ್ಟಿದ್ದರು- ಸ್ನೇಹಿತೆ ನೇತ್ರಾ

    ಅಪ್ಪು ನಿಧನರಾದಾಗ Life is Unpreditable ಎಂದು ಸ್ಪಂದನಾ ಕಣ್ಣೀರಿಟ್ಟಿದ್ದರು- ಸ್ನೇಹಿತೆ ನೇತ್ರಾ

    ಚಿತ್ರರಂಗದಲ್ಲಿ ಸೂತಕದ ವಾತಾವರಣ ಮನೆ ಮಾಡಿದೆ. ಚಿರಂಜೀವಿ ಸರ್ಜಾ, ಸಂಚಾರಿ ವಿಜಯ್, ಪುನೀತ್ ರಾಜ್‌ಕುಮಾರ್ (Puneeth Rajkumar) ನಿಧನ ವಿಚಾರ ಕುಟುಂಬಸ್ಥರಿಗೆ ಆಪ್ತರಿಗೆ ಶಾಕ್ ಕೊಟ್ಟಿದೆ. ಹೀಗಿರುವಾಗ ವಿಜಯ್ ರಾಘವೇಂದ್ರ (Vijay Raghavendra) ಪತ್ನಿ ಸಾವು ಅನೇಕರಿಗೆ ಆಘಾತವುಂಟು ಮಾಡಿದೆ. ವಿಜಯ್ ಪತ್ನಿ ಸ್ಪಂದನಾ (Spadana) ಇನ್ನಿಲ್ಲ. ಮುದ್ದಾದ ಸೌಮ್ಯ ಸ್ವಭಾವದ ಹೆಣ್ಣು ಮಗಳನ್ನು ಕಳೆದುಕೊಂಡಿರುವ ಕುಟುಂಬಸ್ಥರು ಮತ್ತು ಸ್ನೇಹಿತರು ದುಖಃದಲ್ಲಿದ್ದಾರೆ. ಸ್ಪಂದನಾ ಜೊತೆ ಕಾಲೇಜ್ ದಿನಗಳಿಂದ ಒಟ್ಟಿಗೆ ಕಳೆದ ಮಾಜಿ ಕಾಪೋರೇಟರ್ ನೇತ್ರಾ ಪಲ್ಲವಿ ರಿಯಾಕ್ಟ್ ಮಾಡಿದ್ದಾರೆ.

    ಸ್ಪಂದನಾ ಸಾವು ವಿಜಯ್ ಕುಟುಂಬಕ್ಕೆ ಮತ್ತು ಆಪ್ತರಿಗೆ ಬರಸಿಡಿಲು ಬಡಿದಂತೆ ಆಗಿದೆ. ಸ್ಪಂದನಾ ಇಲ್ಲದೇ ವಿಜಯ್ ಜೀವನ ಹೇಗೋ ಏನೋ ಎಂದು ಚಿಂತಿಸುವಂತೆ ಆಗಿದೆ. ಚೆಂದದ ಜೋಡಿ ಬದುಕಿಲ್ಲಿ ವಿಧಿ ಆಟ ನೋಡಿ ಶಾಕ್ ಆಗಿದ್ದಾರೆ. ಈಗ ಸ್ನೇಹಿತೆ ಸ್ಪಂದನಾ ಬಗ್ಗೆ ನೇತ್ರಾ ಪಲ್ಲವಿ ಅವರು ಮಾತನಾಡಿದ್ದಾರೆ.

    ಸ್ಪಂದನಾ ಹೈಪರ್ ಆಕ್ಟಿವ್ ಹುಡುಗಿಯಾಗಿದ್ದರು. ಆಕೆ ಜೊತೆ ನಾನು ಪಿಯುಸಿ ಮತ್ತು ಡಿಗ್ರಿ ವ್ಯಾಸಂಗ ಮಾಡಿರುವೆ. ಪ್ರತಿಯೊಂದು ಕಾರ್ಯಕ್ರಮದಲ್ಲೂ ಆಕೆ ಭಾಗಿಯಾಗುತ್ತಿದ್ದರು. ಯಾರೇ ಸಮಸ್ಯೆಯಲ್ಲಿದ್ದರೂ ಆಕೆ ಹೋಗಿ ಸ್ಪಂದಿಸುತ್ತಿದ್ದಳು. ೧೫ ದಿನಗಳ ಹಿಂದೆ ಆಕೆ ನನಗೆ ಕರೆ ಮಾಡಿ ಯಾರಿಗೋ ಸಮಸ್ಯೆ ಆಗಿದೆ ನಿನ್ನ ಕ್ಷೇತ್ರದಲ್ಲಿ ಸಹಾಯ ಮಾಡಲು ಆಗುತ್ತಾ ನೋಡಿ ಎಂದು ಮನವಿ ಮಾಡಿದ್ದಳು. ಆ ಹುಡುಗನಿಗೆ ಸಣ್ಣ ಗಾಯ ಆಗಿತ್ತು ಅಷ್ಟು ಕೇರ್ ಮಾಡುತ್ತಾರೆ. ಪ್ರತಿಯೊಬ್ಬರಿಗೂ ಕಪಲ್ ಸ್ಪೂರ್ತಿಯಾಗುತ್ತಾರೆ. ೨೦ ವರ್ಷಗಳಿಂದ ಸಾವು ಸ್ನೇಹಿತರು’ ಎಂದು ನೇತ್ರಾ ಪಲ್ಲವಿ ಮಾತನಾಡಿದ್ದಾರೆ.

    ಯಾರು ಹೇಗಿರುತ್ತಾರೆ ಹಾಗೇ ಇದ್ದರೆ ಚೆನ್ನ. ಆಕೆ ಮೊದಲಿನಿಂದಲೂ ಮುದ್ದು ಮುದ್ದಾಗಿದ್ದಳು. ನಾನು ಅವಳು ಮೊದಲಿನಿಂದಲೂ ದಪ್ಪನೇ ಇರುವುದು. ನಮ್ಮ ಗುಂಪಿನಲ್ಲಿ ಬಬ್ಲಿನೆಸ್ ಹೆಚ್ಚಿತ್ತು. ಸ್ಪಂದನಾ ಸಣ್ಣಗಾಗಲು ಅಡ್ಡ ದಾರಿ ಆಯ್ಕೆ ಮಾಡಿಕೊಂಡಿಲ್ಲ. ಆಕೆ ಹೇಗೆ ಅನ್ನೋದು ನನಗೆ ಚೆನ್ನಾಗಿ ಗೊತ್ತಿದೆ. ಎಲ್ಲರಂತೆ ಜಿಮ್ ಮಾಡಿಕೊಂಡು ಇತ್ತೀಚಿಗೆ ಸಣ್ಣಗಾಗಿ ಸಖತ್ ಆಗಿದ್ದಳು ನೋಡಲು ನಾವೇ ಸ್ನೇಹಿತರು ಮಾತನಾಡುತ್ತಿದ್ವಿ. ಜಿಮ್ ಮಾಡುವುದರಿಂದ ಯಾರೂ ಸಾಯುವುದಿಲ್ಲ ಎಂದು ನೇತ್ರಾ ಪಲ್ಲವಿ (Nethra Pallavi) ಹೇಳಿದ್ದಾರೆ.

    ಪುನೀತ್ ರಾಜ್‌ಕುಮಾರ್ ಅಗಲಿದ ದಿನ ತುಂಬಾ ಬೇಸರ ಮಾಡಿಕೊಂಡಿದ್ದಳು. ಯಾವುದೋ ಒಂದು ವಿಚಾರಕ್ಕೆ ನಾನು ಕರೆ ಮಾಡಿದೆ. ಆಗ ಪುನೀತ್ ಅವರ ವಿಚಾರ ತೆಗೆದಾಗ ನನಗ ಅದರ ಬಗ್ಗೆ ಮಾತನಾಡಲು ಶಕ್ತಿನೂ ಇಲ್ಲ. Life is Unpreditable ಯಾರಿಗೆ ಏನಾಗುತ್ತದೆ ಅನ್ನೋದು ಗೊತ್ತಿಲ್ಲ ಎಂದಳು. ಆಕೆಗೆ 14 ವರ್ಷದ ಮುದ್ದಾಗ ಮಗ ಇದ್ದಾನೆ. ಆತನಿಗೆ ಈ ನೋವು ತಡೆಯಲು ಶಕ್ತಿ ಕೊಡಬೇಕು. ತಾಯಿ ಕರಳು ಹೊಂದಿರುವ ವ್ಯಕ್ತಿ ಸ್ಪಂದನಾ ಎಂದು ನೇತ್ರಾ ಪಲ್ಲವಿ ಮಾತನಾಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಸ್ಪಂದನಾರನ್ನ ನೋಡಬೇಕು ಎಂದು ಕಣ್ಣೀರಿಟ್ಟಿದ್ದರು ಚಿನ್ನಾರಿಮುತ್ತ ವಿಜಯ್

    ಆಗಸ್ಟ್ 26ಕ್ಕೆ ವಿಜಯ್-ಸ್ಪಂದನಾ ಮದುವೆ ವಾರ್ಷಿಕೋತ್ಸವವಾಗಿದೆ. ಮದುವೆ ಆ್ಯನಿವರ್ಸರಿಗೆ 18 ದಿನ ಬಾಕಿರುವಾಗ ಬಾರದ ಲೋಕಕ್ಕೆ ಸ್ಪಂದನಾ ಹೋಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಗ್ ಬಾಸ್ ಮನೆಯಲ್ಲಿ ಸ್ಪಂದನಾರನ್ನ ನೋಡಬೇಕು ಎಂದು ಕಣ್ಣೀರಿಟ್ಟಿದ್ದರು ಚಿನ್ನಾರಿಮುತ್ತ ವಿಜಯ್

    ಬಿಗ್ ಬಾಸ್ ಮನೆಯಲ್ಲಿ ಸ್ಪಂದನಾರನ್ನ ನೋಡಬೇಕು ಎಂದು ಕಣ್ಣೀರಿಟ್ಟಿದ್ದರು ಚಿನ್ನಾರಿಮುತ್ತ ವಿಜಯ್

    ಚಿನ್ನಾರಿಮುತ್ತ ವಿಜಯ್ ರಾಘವೇಂದ್ರ (Vijay Raghavendra) ಅವರು ಮುದ್ದಿನ ಪತ್ನಿ ಸ್ಪಂದನಾರನ್ನು ಕಳೆದುಕೊಂಡಿದ್ದಾರೆ. ಸ್ಪಂದನಾ ಅವರು 37ನೇ ವಯಸ್ಸಿಗೆ ಹೃದಯಾಘಾತದಿಂದ (Heart Attack)  ಆಗಸ್ಟ್ 7ರಂದು ವಿಧಿವಶರಾಗಿದ್ದಾರೆ. ವಿಜಯ್ ಹಾಗೂ ಸ್ಪಂದನಾ ಸ್ಯಾಂಡಲ್‌ವುಡ್‌ನ ಚೆಂದದ ಜೋಡಿ. ವಿಜಯ್ ತಮ್ಮ ಪತ್ನಿಯನ್ನು ತುಂಬಾ ಹಚ್ಚಿಕೊಂಡಿದ್ದರು. ಅದಕ್ಕೆ ದೊಡ್ಮನೆಯಲ್ಲಿ ಕಣ್ಣೀರು ಹಾಕಿದ್ದೇ ಸಾಕ್ಷಿ. ಇದನ್ನೂ ಓದಿ:ಸ್ಪಂದನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    ವಿಜಯ್ ರಾಘವೇಂದ್ರ ಅವರು 2013ರಲ್ಲಿ ಬಿಗ್ ಬಾಸ್ ಸೀಸನ್ 1 (Bigg Boss Kannada) ಶೋನಲ್ಲಿ ಭಾಗವಹಿಸಿ, ಗೆದ್ದು ಬೀಗಿದ್ದರು. ಈ ಶೋನಲ್ಲಿ ವಿಜಯ್ ಅವರ ಗುಣ ವೀಕ್ಷಕರಿಗೆ ಇಷ್ಟ ಆಗಿತ್ತು. 100 ದಿನಗಳಿಗೂ ಅಧಿಕ ಕಾಲ ವಿಜಯ್ ಅವರು ಕುಟುಂಬವನ್ನು ಬಿಟ್ಟು ಬಿಗ್ ಬಾಸ್ ಮನೆಯಲ್ಲಿ ಆಟ ಆಡಿದ್ದರು. ಇದೇ ಮೊದಲ ಬಾರಿಗೆ ಅವರು ಪತ್ನಿಯನ್ನು ನೋಡದೆ, ಫೋನ್‌ನಲ್ಲಿ ಮಾತನಾಡದೆ ಇದ್ದಿದ್ದು. ಆ ವೇಳೆ ವಿಜಯ್ ಅವರು ಪದೇ ಪದೇ ನನ್ನ ಹೆಂಡ್ತಿ ನೋಡಬೇಕು, ಪ್ಲೀಸ್ ಕರೆಸಿ ಅಂತ ಸಾಕಷ್ಟು ಬಾರಿ ಕಣ್ಣೀರಿಟ್ಟಿದ್ದರು, ಮನವಿ ಮಾಡಿದ್ದರು.

    ಅಷ್ಟರ ಮಟ್ಟಿಗೆ ವಿಜಯ್, ತಮ್ಮ ಪತ್ನಿಯನ್ನು ಪ್ರೀತಿಸುತ್ತಿದ್ದರು. ಪದೇ ಪದೇ ನನ್ನ ಹೆಂಡ್ತಿ ನೋಡಬೇಕು ಅಂತ ಹೇಳುತ್ತಿದ್ದ ವಿಜಯ್ ಇನ್ನೊಮ್ಮೆ ಪದೇ ಪದೇ ಹೆಂಡ್ತಿ ಕರೆಸಿ ಅಂತ ಹೇಳೋದು ನನಗೂ ಮುಜುಗರ ಆಗ್ತಿದೆ. ಆದರೆ ನನ್ನ ಹೆಂಡ್ತಿಯನ್ನೊಮ್ಮೆ ನೋಡಬೇಕು. ದಯವಿಟ್ಟು ಕರೆಸಿ ಬಿಗ್ ಬಾಸ್ ಅಂತ ಮಗುವಿನ ರೀತಿ ವಿಜಯ್ ಕಣ್ಣೀರಿಟ್ಟಿದ್ದರು. ವಿಜಯ್ ಮನವಿಗೆ ಬಿಗ್ ಬಾಸ್ ಸ್ಪಂದಿಸಿ, ಅವರ ಪತ್ನಿಯನ್ನು ಆ ನಂತರ ಬಿಗ್ ಬಾಸ್ ಮನೆಗೆ ಕಳುಹಿಸಿದ್ದರು. ಸ್ಪಂದನಾ (Spadana) ಎಂಟ್ರಿ ನೋಡಿ ವಿಜಯ್ ಅಂದು ಸಂಭ್ರಮಿಸಿದ್ದರು.

    ‘ನಿನಗಾಗಿ’ ಸಿನಿಮಾ ಮಾಡುವಾಗ ಮಂಗಳೂರಿನ ಹುಡುಗಿಯೇ ಬೇಕು ಎಂದು ವಿಜಯ್‌ಗೆ ಅನಿಸಿತ್ತು. ಅದರಂತೆಯೇ ಬೆಳ್ತಂಗಡಿಯ ಹುಡುಗಿ ಸ್ಪಂದನಾ ಅವರನ್ನ ನೋಡಿ ವಿಜಯ್ ಬೋಲ್ಡ್ ಆಗಿದ್ದರು. ಇಬ್ಬರ ಪರಿಚಯ ಪ್ರೀತಿಗೆ ತಿರುಗಿ ಎರಡು ಕುಟುಂಬದ ಒಪ್ಪಿಗೆ ಪಡೆದು 2007ರಲ್ಲಿ ವೈವಾಹಿಕ ಜೀವನಕ್ಕೆ ವಿಜಯ್- ಸ್ಪಂದನಾ ಕಾಲಿಟ್ಟಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಂದನಾ ಮೃತದೇಹ ಇಂದು ತಡ ರಾತ್ರಿ ಬೆಂಗಳೂರಿಗೆ, ಅಂತಿಮ ದರ್ಶನಕ್ಕೆ ಅವಕಾಶ

    ಸ್ಪಂದನಾ ಮೃತದೇಹ ಇಂದು ತಡ ರಾತ್ರಿ ಬೆಂಗಳೂರಿಗೆ, ಅಂತಿಮ ದರ್ಶನಕ್ಕೆ ಅವಕಾಶ

    ಟ ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ (Spadana) ಅವರ ನಿಧನ ಇಡೀ ಕುಟುಂಬಕ್ಕೆ ಮತ್ತು ಅನೇಕರಿಗೆ ಶಾಕ್ ನೀಡಿದೆ. ಹೃದಯಾಘಾತದಿಂದ ಸ್ಪಂದನಾ ನಿಧನರಾಗಿದ್ದಾರೆ. ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್‌ನಲ್ಲಿ ಮುಗಿದಿದ್ದು, ಮೃತ ದೇಹವನ್ನು ಇಂದು ಮಧ್ಯರಾತ್ರಿ 1 ಗಂಟೆಗೆ ಬೆಂಗಳೂರಿಗೆ ತರಲಾಗುತ್ತಿದೆ.

    ಸ್ಪಂದನಾ ಸಾವಿನ ಕುರಿತಂತೆ ಬ್ಯಾಂಕಾಕ್‌ನಲ್ಲಿ ಎಲ್ಲಾ ಪ್ರಕ್ರಿಯೆ ಮುಗಿದಿದೆ. ಆಗಸ್ಟ್ 8ರ ತಡರಾತ್ರಿ ಸ್ಪಂದನಾ ದೇಹ ಆಗಮಿಸೋ ಸಾಧ್ಯತೆಯಿದೆ. ನೇರವಾಗಿ ವಿಮಾನ ನಿಲ್ದಾಣದ ಕಾರ್ಗೋಗೆ ಬರಲಿರೋ ಪಾರ್ಥಿವ ಶರೀರದ ಜೊತೆ ವಿಜಯ್ ರಾಘವೇಂದ್ರ ಕೂಡ ಬರಲಿದ್ದು, ನಾಳೆ ಮಧ್ಯಾಹ್ನದವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಮಲ್ಲೇಶ್ವರಂ ಆಟದ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡೋ ಪ್ಲ್ಯಾನ್ ಮಾಡಲಾಗಿದೆ.

    ಸ್ಪಂದನಾ ಅವರು ಸಂಬಂಧಿಗಳ ಜೊತೆ ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಈ ಆಘಾತಕಾರಿ ಘಟನೆ ನಡೆದಿದೆ. ಎಂದೂ ಬಾರದ ಲೋಕಕ್ಕೆ ಸ್ಪಂದನಾ ಹೋಗಿದ್ದಾರೆ.

    ನಿನ್ನೆಯೇ ವಿಜಯ ರಾಘವೇಂದ್ರ ಕುಟುಂಬ ಮತ್ತು ಸ್ಪಂದನಾ ಅವರ ಕುಟುಂಬ ಬ್ಯಾಂಕಾಕ್‌ಗೆ ತೆರಳಿದೆ. ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ್ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥೈಲ್ಯಾಂಡ್‌ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್‌ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ:ವಾಮನ ಸಿನಿಮಾದ ‘ರಾಕ್ಷಸಿ’ ಹಾಡು ರಿಲೀಸ್ ಮಾಡಿದ ಅಭಿಷೇಕ್

    ವಿಜಯ್- ಸ್ಪಂದನಾ ವಿವಾಹ ಮಹೋತ್ಸವಕ್ಕೆ 18 ದಿನ ಬಾಕಿ ಇರುವಾಗಲೇ ಈ ಆಘಾತಕಾರಿ ಘಟನೆ ನಡೆದಿದೆ. 2007 ಆಗಸ್ಟ್ 26ರಂದು ವಿಜಯ್- ಸ್ಪಂದನಾ ಜೋಡಿ ಹಸೆಮಣೆ ಏರಿತ್ತು. ಶೌರ್ಯ ಎಂಬ ಮುದ್ದಾದ ಮಗನಿದ್ದಾನೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ

    ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಂದನಾ ಮೃತದೇಹ ನಾಳೆ ಬೆಂಗಳೂರಿಗೆ, ಬುಧವಾರ ಅಂತ್ಯಕ್ರಿಯೆ

    ಸ್ಪಂದನಾ ಮೃತದೇಹ ನಾಳೆ ಬೆಂಗಳೂರಿಗೆ, ಬುಧವಾರ ಅಂತ್ಯಕ್ರಿಯೆ

    ಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana) ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್ ನಲ್ಲಿ ಮುಗಿದಿದ್ದು, ಮೃತ ದೇಹವನ್ನು (Dead Body) ನಾಳೆ ಸಾಯಂಕಾಲ ಬೆಂಗಳೂರಿಗೆ ತರಲಾಗುವುದು ಎಂದಿದ್ದಾರೆ ಸ್ಪಂದನಾ ಚಿಕ್ಕಪ್ಪ ಬಿ.ಕೆ. ಹರಿಪ್ರಸಾದ್. ಇಂದು ಮರಣೋತ್ತರ (Postmortem) ಪರೀಕ್ಷೆ ಮುಗಿದಿದ್ದರೂ, ಇನ್ನೂ ಹಲವು ವಿದೇಶಿ ಪ್ರಕ್ರಿಯೆಗಳು ನಡೆಯಬೇಕಿವೆ. ಅವು ನಾಳೆ ಮಧ್ಯಾಹ್ನ ಪೂರ್ಣಗೊಳ್ಳಲಿವೆಯಂತೆ.

    ‘ಸ್ಪಂದನಾ ಸಾವಿನ ಕುರಿತಂತೆ ಬ್ಯಾಂಕಾಕ್ ಪ್ರಕ್ರಿಯೆಗಳು ಮುಗಿಯಲು ನಾಳೆ ಮಧ್ಯಾಹ್ನ ಆಗುತ್ತದೆ. ಆದ್ದರಿಂದ ಪ್ರಕ್ರಿಯೆಗಳು ಮುಗಿಸಿ ಮೃತದೇಹ ಸಂಜೆ ಹೊರಡಲಾಗುತ್ತದೆ. ರಾತ್ರಿಯ ಒಳಗೆ ಮೃತ ದೇಹ ಬೆಂಗಳೂರಿಗೆ ಬರಲಿದೆ. ಬೆಂಗಳೂರಿನಿಂದ (Bangalore) ಕೆಲವರು ಅಲ್ಲಿಗೆ ಹೋಗೋಣ ಎಂದುಕೊಂಡಿದ್ದೆವು. ಆದ್ರೆ ನಾವು ಹೋಗೋ ಅಷ್ಟರಲ್ಲಿ ಸಮಯ ಆಗುತ್ತೆ. ಆದ್ರಿಂದ ನಾವ್ಯಾರೂ ಇಲ್ಲಿಂದ ಹೋಗ್ತಾ ಇಲ್ಲ. ನಾಳೆ ರಾತ್ರಿ 11:30ರ ಹೊತ್ತಿಗೆ ಮೃತ ದೇಹ ಬರಬಹುದು. ಬುಧವಾರ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ’ ಎಂದಿದ್ದಾರೆ ಹರಿಪ್ರಸಾದ್.

    ಅಂತ್ಯಸಂಸ್ಕಾರ (Funeral) ಎಲ್ಲಿ ನಡೆಯಬೇಕು ಎನ್ನುವ ಕುರಿತು ಯಾವುದೇ ನಿರ್ಧಾರ ಈವರೆಗೂ ತೆಗೆದುಕೊಂಡಿಲ್ಲ ಎಂದಿರುವ ಹರಿಪ್ರಸಾದ್, ಯಾವ ಸ್ಥಳದಲ್ಲಿ ಮತ್ತು ಸಮಯದಲ್ಲಿ ಅಂತ್ಯ ಸಂಸ್ಕಾರ ಮಾಡಬೇಕು ಎನ್ನುವುದನ್ನು ಚರ್ಚಿಸಿ ತಿಳಿಸುತ್ತೇವೆ ಎಂದಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಅದನ್ನು ಮಾಧ್ಯಮಗಳಿಗೆ ನೀಡುವ ಕುರಿತು ಮಾತನಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Photo Album- ಸ್ಪಂದನಾ-ವಿಜಯ ರಾಘವೇಂದ್ರ ಮುದ್ದಾದ ಜೋಡಿಯ ಫೋಟೋ ಆಲ್ಬಂ

    Photo Album- ಸ್ಪಂದನಾ-ವಿಜಯ ರಾಘವೇಂದ್ರ ಮುದ್ದಾದ ಜೋಡಿಯ ಫೋಟೋ ಆಲ್ಬಂ

    ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ (Vijaya Raghavendra) ಪತ್ನಿ ಸ್ಪಂದನಾ (Spandana)  ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು.

    ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಸ್ಪಂದನಾ ಸಾವಿನ ವಿಚಾರ ಕುರಿತಂತೆ ನಟ ಶ್ರೀಮುರಳಿ ಪ್ರತಿಕ್ರಿಯೆ ನೀಡಿದ್ದು,’ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೆ. ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ. ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ. ಅತ್ತಿಗೆಯ ಅಗಲಿಗೆ ಆಘಾತ ಮೂಡಿಸಿದೆ’ ಎಂದು ಹೇಳಿದರು.

    ಸ್ಪಂದನಾ ಅವರು ಸಂಬಂಧಿಗಳ ಜೊತೆ ಪ್ರವಾಸಕ್ಕೆ ತೆರಳಿದ್ದರು. ಶೂಟಿಂಗ್ ಮುಗಿಸಿಕೊಂಡು ವಿಜಯ ರಾಘವೇಂದ್ರ ಕೂಡ ಅವರೊಂದಿಗೆ ಭಾಗಿಯಾಗಿದ್ದರು. ನಿನ್ನೆಯಷ್ಟೇ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಸರಿಯಾದ ಮಾಹಿತಿ ಇನ್ನೂ ಅವರ ಕುಟುಂಬಕ್ಕೆ ತಲುಪಿಲ್ಲ.

    ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಟ್ವೀಟ್ ಮಾಡಿ, ‘ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ (Death) ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಟ್ವೀಟ್ ಮಾಡಿದ್ದಾರೆ.

    ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಅನೇಕ ಗಣ್ಯರು ಸತಾಪ ವ್ಯಕ್ತ ಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡ್ಯೂರಪ್ಪ, ಬಸವರಾಜ ಬೊಮ್ಮಾಯಿ, ನಟಿ-ಸಂಸದೆ ಸುಮಲತಾ ಅಂಬರೀಶ್, ನಟಿ ರಾಗಿಣಿ, ನಿರ್ದೇಶಕ ನಾಗಭರಣ್, ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.

    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ‘ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಆ ದೇವರು ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ. ವಿಜಯ ರಾಘವೇಂದ್ರ ಮತ್ತು ಬಿ.ಕೆ. ಶಿವರಾಮ್ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ’ ಎಂದಿದ್ದಾರೆ.

    ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ  ಧರ್ಮಪತ್ನಿ ಬ್ಯಾಂಕಾಕ್  ಪ್ರವಾಸದಲ್ಲಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಮೃತರಾಗಿದ್ದಾರೆ. ಅವರ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದೋರು ಇಂತಹ ಸಾವು ಆಗಿರೋದು ಯಾರು ನಿರೀಕ್ಷೆ ಮಾಡಿರಲಿಲ್ಲ. ಅವರ ಕುಟುಂಬದರು ನಿರೀಕ್ಷೆ ಮಾಡಿರಲಿಲ್ಲ. ಇದೊಂದ ಆಘಾತಕಾರಿ ಘಟನೆ’ ಎಂದಿದ್ದಾರೆ.

    ವಿಜಯ ರಾಘವೇಂದ್ರ ಚಿತ್ರಗಳ ನಿರ್ದೇಶಕ ಹಾಗೂ ಅವರ ಪುತ್ರನಿಗೆ ನೃತ್ಯ ಹೇಳಿಕೊಡುತ್ತಿರುವ ಹಿರಿಯ ನಿರ್ದೇಶಕ ನಾಗಾಭರಣ ಮಾಧ್ಯಮಗಳ ಜೊತೆ ಮಾತನಾಡಿ, ‘ನೀವು ಆ ಸುದ್ದಿ ಹೇಳಿದ ತಕ್ಷಣ ನಾನು ಗೌರವ ಡಾಕ್ಟರೇಟ್ ಪಡೆದ ಸಂತೋಷ 100 ಪಟ್ಟು ಕುಸಿಯಿತು. ವಿಜಯ ರಾಘವೇಂದ್ರ ಕುಟುಂಬದ ಜೊತೆ ಬಹಳ ದೊಡ್ಡ ಒಡನಾಟ ಇತ್ತು. ಚಿನ್ನಾರಿ ಮುತ್ತ ಸಿನೆಮಾದಿಂದ ವಿಜಯ ರಾಘವೇಂದ್ರ ಬೆಳವಣಿಗೆ ಕಂಡವನು. ನನ್ನ ಚಿನ್ನಾರಿ ಮುತ್ತನನ್ನು ಅವನಲ್ಲಿ ಕಂಡಿದ್ದೆ. ಆ ಸುದ್ದಿ ಕೇಳಿ ನನಗೆ ನಿಜವಾಗಿಯೂ ಶಾಕ್ ಆಗಿದೆ’ ಎಂದು ತುಮಕೂರಿನಿಂದ ಮಾತನಾಡಿದ್ದಾರೆ.

    ತೀವ್ರ ಹೃದಯಾಘಾತದಿಂದ ನಿಧನರಾಗಿರುವ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಟಿ ಹಾಗೂ ನಿರ್ಮಾಪಕಿಯೂ ಆಗಿ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ರವಿಚಂದ್ರನ್ ನಟಿಸಿ, ನಿರ್ದೇಶನ ಮಾಡಿದ್ದ ಅಪೂರ್ವ ಸಿನಿಮಾದಲ್ಲಿ ಸ್ಪಂದನಾ ಅತಿಥಿ ಪಾತ್ರವೊಂದನ್ನು ನಿರ್ವಹಿಸಿದ್ದರು. ಈ ಸಿನಿಮಾದಲ್ಲಿ ವಿಜಯ ರಾಘವೇಂದ್ರ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

    ಜೊತೆಗೆ ಪತಿ ವಿಜಯ ರಾಘವೇಂದ್ರ ನಟಿಸಿದ್ದ ‘ಕಿಸ್ಮತ್’ ಚಿತ್ರಕ್ಕೆ ಸ್ಪಂದನಾ ನಿರ್ಮಾಪಕಿ. 2018ರಲ್ಲಿ ತೆರೆ ಕಂಡಿದ್ದ ಈ ಸಿನಿಮಾಗೆ ಸ್ಪಂದನಾ ಹಣ ಹೂಡಿದ್ದರು. ಪತಿಗಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ನಟನೆಯನ್ನು ವೃತ್ತಿಯಾಗಿ ಸ್ವೀಕಾರ ಮಾಡದೇ ಇದ್ದರೂ, ಕಲಾವಿದರಿಗೆ ಸ್ಪಂದನಾ ಸಾಕಷ್ಟು ಗೌರವವನ್ನು ನೀಡುತ್ತಿದ್ದರು.

    ಸ್ಪಂದನಾ ಅಸಿಸ್ಟೆಂಟ್ ಪೊಲೀಸ್ ಕಮಿಷ್ನರ್ ಬಿ.ಕೆ. ಶಿವರಾಮ್ ಅವರ ಮಗಳು. ಆನಂತರ ವಿಜಯ ರಾಘವೇಂದ್ರ ಅವರನ್ನು ಪ್ರೀತಿಸಿ ಆಗಸ್ಟ್ 26, 2007ರಲ್ಲಿ ಮದುವೆಯಾಗಿದ್ದರು. ಇದೊಂದು ಅಪರೂಪದ ಜೋಡಿ ಎಂದೇ ಬಣ್ಣಿಸಲಾಗುತ್ತಿತ್ತು. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಹೆಂಡತಿಯನ್ನು ಸಾಕಷ್ಟು ಕೊಂಡಾಡಿದ್ದರು ವಿಜಯ ರಾಘವೇಂದ್ರ. ತಮ್ಮ ಪ್ರೀತಿಯ ದಿನಗಳನ್ನೂ ಅವರು ಮೆಲುಕು ಹಾಕಿದ್ದರು.

     

    ಸ್ಪಂದನಾ ಮತ್ತು ವಿಜಯ ರಾಘವೇಂದ್ರ ದಂಪತಿಗೆ ಮುದ್ದಾದ ಒಬ್ಬ ಮಗನಿದ್ದಾನೆ. ಅವನಿಗೆ ಅಭಿಮಾನಿದಂದಲೇ ಶೌರ್ಯ ಎಂದು ಹೆಸರಿಟ್ಟಿದ್ದರು ದಂಪತಿ. ಶೌರ್ಯ ಇದೀಗ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಂದನಾ ವಿಜಯ ರಾಘವೇಂದ್ರ ನಿಧನಕ್ಕೆ ಗಣ್ಯರು ಸಂತಾಪ

    ಸ್ಪಂದನಾ ವಿಜಯ ರಾಘವೇಂದ್ರ ನಿಧನಕ್ಕೆ ಗಣ್ಯರು ಸಂತಾಪ

    ಟ ವಿಜಯ ರಾಘವೇಂದ್ರ (Vijaya Raghavendra) ಪತ್ನಿ ಸ್ಪಂದನಾ (Spandana) ನಿಧನಕ್ಕೆ ಅನೇಕ ಗಣ್ಯರು ಸಂತಾಪ (Condolence) ವ್ಯಕ್ತ ಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡ್ಯೂರಪ್ಪ, ಬಸವರಾಜ ಬೊಮ್ಮಾಯಿ, ನಟಿ-ಸಂಸದೆ ಸುಮಲತಾ ಅಂಬರೀಶ್, ನಟಿ ರಾಗಿಣಿ, ನಿರ್ದೇಶಕ ನಾಗಭರಣ್, ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.

    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ‘ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಆ ದೇವರು ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ. ವಿಜಯ ರಾಘವೇಂದ್ರ ಮತ್ತು ಬಿ.ಕೆ. ಶಿವರಾಮ್ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ’ ಎಂದಿದ್ದಾರೆ. ಇದನ್ನೂ ಓದಿ:ಬಿಪಾಶಾ ಬಸು ಮಗಳ ಹಾರ್ಟ್‌ನಲ್ಲಿ ಹೋಲ್- ಕಣ್ಣೀರಿಟ್ಟ ನಟಿ

    ವಿಜಯ ರಾಘವೇಂದ್ರ ಚಿತ್ರಗಳ ನಿರ್ದೇಶಕ ಹಾಗೂ ಅವರ ಪುತ್ರನಿಗೆ ನೃತ್ಯ ಹೇಳಿಕೊಡುತ್ತಿರುವ ಹಿರಿಯ ನಿರ್ದೇಶಕ ನಾಗಭರಣ ಮಾಧ್ಯಮಗಳ ಜೊತೆ ಮಾತನಾಡಿ, ‘ನೀವು ಆ ಸುದ್ದಿ ಹೇಳಿದ ತಕ್ಷಣ ನಾನು ಗೌರವ ಡಾಕ್ಟರೇಟ್ ಪಡೆದ ಸಂತೋಷ 100 ಪಟ್ಟು ಕುಸಿಯಿತು. ವಿಜಯರಾಘವೇಂದ್ರ ಕುಟುಂಬದ ಜೊತೆ ಬಹಳ ದೊಡ್ಡ ಒಡನಾಟ ಇತ್ತು. ಚಿನ್ನಾರಿ ಮುತ್ತ ಸಿನೆಮಾದಿಂದ ವಿಜಯ ರಾಘವೇಂದ್ರ ಬೆಳವಣಿಗೆ ಕಂಡವನು. ನನ್ನ ಚಿನ್ನಾರಿಮುತ್ತವನ್ನು ಅವನಲ್ಲಿ ಕಂಡಿದ್ದೆ. ಆ ಸುದ್ದಿ ಕೇಳಿ ನನಗೆ ನಿಜವಾಗಿಯೂ ಶಾಕ್ ಆಗಿದೆ’ ಎಂದು ತಮಕೂರಿನಿಂದ ಮಾತನಾಡಿದ್ದಾರೆ.

    ಮುಂದುವರೆದು ಮಾತನಾಡಿದ ನಾಗಭರಣ, ‘ನಿನ್ನೆ ಅವರ ಮಗು ಶೌರ್ಯನಿಗೆ ನಾನು ಪಾಠ ಹೇಳುತ್ತಿದ್ದೆ. ಅದನ್ನು ಮುಗಿಸಿಕೊಂಡು ಸಂಜೆ 5.30ಕ್ಕೆ ವಿಜಯರಾಘವೇಂದ್ರ ಮಗುವನ್ನು ಪಿಕ್ ಮಾಡಿದ್ದ. ನಿಜವಾಗಿಯೂ ಪರಿತಾಪ ಪಡುವ ವಿಚಾರ ಇದು. ನನಗೆ ರಿಯಾಕ್ಟ್ ಮಾಡೋಕೆ ಆಗ್ತಿಲ್ಲ. ಬಹಳ ಬಹಳ‌ ದುಃಖದ ಸಂಗತಿ. ಯಾಕೋ ಆ ಕುಟುಂಬದ ಸುತ್ತ ಛಾಯೆಗಳು ನಿರಂತರವಾಗಿ ಎರಗ್ತಿದಿಯಲ್ಲ ಅನ್ನೋದೆ ಬಹಳ ದುಃಖದ ವಿಷಯ. ಯಾರನ್ನು ಕಳೆದುಕೊಳ್ಳಬಾರದು ಅಂತ ಇಷ್ಟಪಡ್ತಿವೋ ಅವರನ್ನ ಕಳೆದುಕೊಳ್ತಿದ್ದೇವೆ. ಒಂದೇ ಕುಟುಂಬದಲ್ಲಿ ಈ ರೀತಿಯಾಗಿ ಆಗ್ತಿದಿಯಲ್ಲಾ ಅನ್ನೋದೆ ದುಃಖದ ಸಂಗತಿ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಹಾಗೂ ನಿರ್ಮಾಪಕಿಯೂ ಆಗಿದ್ದರು ಸ್ಪಂದನಾ

    ನಟಿ ಹಾಗೂ ನಿರ್ಮಾಪಕಿಯೂ ಆಗಿದ್ದರು ಸ್ಪಂದನಾ

    ತೀವ್ರ ಹೃದಯಾಘಾತದಿಂದ ನಿಧನರಾಗಿರುವ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಟಿ ಹಾಗೂ ನಿರ್ಮಾಪಕಿಯೂ ಆಗಿ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ರವಿಚಂದ್ರನ್ ನಟಿಸಿ, ನಿರ್ದೇಶನ ಮಾಡಿದ್ದ ಅಪೂರ್ವ ಸಿನಿಮಾದಲ್ಲಿ ಸ್ಪಂದನಾ ಅತಿಥಿ ಪಾತ್ರವೊಂದನ್ನು ನಿರ್ವಹಿಸಿದ್ದರು. ಈ ಸಿನಿಮಾದಲ್ಲಿ ವಿಜಯ ರಾಘವೇಂದ್ರ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

    ಜೊತೆಗೆ ಪತಿ ವಿಜಯ ರಾಘವೇಂದ್ರ ನಟಿಸಿದ್ದ ‘ಕಿಸ್ಮತ್’ ಚಿತ್ರಕ್ಕೆ ಸ್ಪಂದನಾ ನಿರ್ಮಾಪಕಿ. 2018ರಲ್ಲಿ ತೆರೆ ಕಂಡಿದ್ದ ಈ ಸಿನಿಮಾಗೆ ಸ್ಪಂದನಾ ಹಣ ಹೂಡಿದ್ದರು. ಪತಿಗಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ನಟನೆಯನ್ನು ವೃತ್ತಿಯಾಗಿ ಸ್ವೀಕಾರ ಮಾಡದೇ ಇದ್ದರೂ, ಕಲಾವಿದರಿಗೆ ಸ್ಪಂದನಾ ಸಾಕಷ್ಟು ಗೌರವವನ್ನು ನೀಡುತ್ತಿದ್ದರು. ಇದನ್ನೂ ಓದಿ:ಬಿಪಾಶಾ ಬಸು ಮಗಳ ಹಾರ್ಟ್‌ನಲ್ಲಿ ಹೋಲ್- ಕಣ್ಣೀರಿಟ್ಟ ನಟಿ

    ಸ್ಪಂದನಾ ಅಸಿಸ್ಟೆಂಟ್ ಪೊಲೀಸ್ ಕಮಿಷ್ನರ್ ಬಿ.ಕೆ. ಶಿವರಾಮ್ ಅವರ ಮಗಳು. ಆನಂತರ ವಿಜಯ ರಾಘವೇಂದ್ರ ಅವರನ್ನು ಪ್ರೀತಿಸಿ ಆಗಸ್ಟ್ 26, 2007ರಲ್ಲಿ ಮದುವೆಯಾಗಿದ್ದರು. ಇದೊಂದು ಅಪರೂಪದ ಜೋಡಿ ಎಂದೇ ಬಣ್ಣಿಸಲಾಗುತ್ತಿತ್ತು. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಹೆಂಡತಿಯನ್ನು ಸಾಕಷ್ಟು ಕೊಂಡಾಡಿದ್ದರು ವಿಜಯ ರಾಘವೇಂದ್ರ. ತಮ್ಮ ಪ್ರೀತಿಯ ದಿನಗಳನ್ನೂ ಅವರು ಮೆಲುಕು ಹಾಕಿದ್ದರು.

     

    ಸ್ಪಂದನಾ ಮತ್ತು ವಿಜಯ ರಾಘವೇಂದ್ರ ದಂಪತಿಗೆ ಮುದ್ದಾದ ಒಬ್ಬ ಮಗನಿದ್ದಾನೆ. ಅವನಿಗೆ ಅಭಿಮಾನಿದಂದಲೇ ಶೌರ್ಯ ಎಂದು ಹೆಸರಿಟ್ಟಿದ್ದರು ದಂಪತಿ. ಶೌರ್ಯ ಇದೀಗ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಂದನಾ ನಿಧನ: ಕೋವಿಡ್ ನಂತರ ಹೃದಯಾಘಾತ ಹೆಚ್ಚಾಗುತ್ತಿವೆ ಎಂದ ಮಾಜಿ ಸಿಎಂ ಕುಮಾರಸ್ವಾಮಿ

    ಸ್ಪಂದನಾ ನಿಧನ: ಕೋವಿಡ್ ನಂತರ ಹೃದಯಾಘಾತ ಹೆಚ್ಚಾಗುತ್ತಿವೆ ಎಂದ ಮಾಜಿ ಸಿಎಂ ಕುಮಾರಸ್ವಾಮಿ

    ಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana) ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ  ಧರ್ಮಪತ್ನಿ ಬ್ಯಾಂಕಾಕ್  ಪ್ರವಾಸದಲ್ಲಿದ್ದಾಗ ಹೃದಯಾಘಾತಕ್ಕೆ (Hear Attack) ಒಳಗಾಗಿ ಮೃತರಾಗಿದ್ದಾರೆ. ಅವರ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದೋರು ಇಂತಹ ಸಾವು ಆಗಿರೋದು ಯಾರು ನಿರೀಕ್ಷೆ ಮಾಡಿರಲಿಲ್ಲ. ಅವರ ಕುಟುಂಬದವರೂ ನಿರೀಕ್ಷೆ ಮಾಡಿರಲಿಲ್ಲ. ಇದೊಂದು ಆಘಾತಕಾರಿ ಘಟನೆ’ ಎಂದಿದ್ದಾರೆ.

    ಮುಂದುವರಿದು ಮಾತನಾಡಿದ ಕುಮಾರಸ್ವಾಮಿ, ‘ಇತ್ತೀಚಿನ ದಿನಗಳಲ್ಲಿ ಕೋವಿಡ್ ನಂತರ ಇಂತಹ ಘಟನೆಗಳು ಅಚ್ಚರಿ ರೂಪದಲ್ಲಿ ಆಗುತ್ತಿವೆ. ಇದರ ಮೂಲ ಹಿನ್ನೆಲೆ ಕೋವಿಡ್ (COVID 19) ನಂತರ ಆದ ಕೆಲ ಸಮಸ್ಯೆ, ಮನುಷ್ಯನ ದೇಹದ ಮೇಲೆ ಆಗಿರೋ ಸಮಸ್ಯೆಗಳಿಂದ ಹೀಗೆ ಆಗ್ತಿದೆ. ಪ್ರತಿಯೊಬ್ಬರೂ ಎಚ್ಚರಿಕೆಯಿಂದ, ಜಾಗೃತೆಯಿಂದ ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕು. ಆಗಾಗ ಚೆಕಪ್ ಮಾಡಿಸಿಕೊಳ್ಳುವ ಕೆಲಸವೂ ಆಗಬೇಕು’ ಎಂದರು. ಇದನ್ನೂ ಓದಿ:ಟೈಗರ್ ಶ್ರಾಫ್ ಜೊತೆ ಬ್ರೇಕಪ್? ಹೊಸ ಬಾಯ್‌ಫ್ರೆಂಡ್ ಬಗ್ಗೆ ಬಾಯ್ಬಿಟ್ಟ ದಿಶಾ

    ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಕುಟುಂಬದಲ್ಲಿ ದೊಡ್ಡ ನೋವು ತರಿಸಿದೆ. ಆ ನೋವಿನಿಂದ ಹೊರ ಬರೋದು ತುಂಬಾ ಕಷ್ಟ. ಅವರ ಕುಟುಂಬಕ್ಕೆ ಆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

     

    ಈಗಾಗಲೇ ವಿಜಯ ರಾಘವೇಂದ್ರ (Vijaya Raghavendra) ಕುಟುಂಬ ಮತ್ತು ಸ್ಪಂದನಾ ಅವರ ಕುಟುಂಬ ಬ್ಯಾಂಕಾಕ್ (Bangkok)ಗೆ ತೆರಳಿದೆ.  ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ (Passedway) ವೈದ್ಯರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]