Tag: ಸ್ಪಾ

  • ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

    ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

    ಬೆಂಗಳೂರು: ಅಮೃತಹಳ್ಳಿ (Amruthahalli) ಸ್ಪಾದಲ್ಲಿ (Spa) ಯುವತಿಯರಿಂದ ವ್ಯಕ್ತಿಯ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಕಾವ್ಯಳಿಗೆ ರೌಡಿಸಂ (Rowdisam) ಲಿಂಕ್ ಇರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

    ಆರೋಪಿ ಕಾವ್ಯ ರೌಡಿಶೀಟರ್ ಮುನಿಕೃಷ್ಣ ಅಲಿಯಾಸ್ ಅಮೃತಹಳ್ಳಿ ಕಪ್ಪೆ ಎಂಬಾತನ ಪ್ರಿಯತಮೆಯಾಗಿದ್ದು, ಆತನ ಹೆಸರಿನಲ್ಲಿ ಫೈನಾನ್ಸ್ ನಡೆಸುತ್ತಿದ್ದಳು. ಸದ್ಯ ರೌಡಿಶೀಟರ್ ಮುನಿಕೃಷ್ಣ ಗೂಂಡಾ ಕಾಯ್ದೆಯಡಿ ಬಂಧನವಾಗಿ ಗುಲ್ಬರ್ಗ ಜೈಲಿನಲ್ಲಿದ್ದಾನೆ. ಆದರೂ ಕೂಡ ಕಾವ್ಯ ಪ್ರಿಯತಮನ ಹೆಸರಿನಲ್ಲಿ ಫೈನಾನ್ಸ್ ಮಾಡಿ ರೌಡಿಸಂ ಮಾಡುತ್ತಿದ್ದಳು. ಇದನ್ನೂ ಓದಿ: ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

    ಸ್ಪಾದಲ್ಲಿ ವ್ಯಕ್ತಿ ಮೇಲೆ ಹಲ್ಲೆ ಕೇಸಲ್ಲೂ ಕಾವ್ಯಳಿಗೆ ವ್ಯಕ್ತಿ ಜೊತೆ ಯಾವುದೇ ಸಂಬಂಧವಿರಲಿಲ್ಲ. ಆದರೂ ನಿಶಾ ಜೊತೆಗೆ ಹೋಗಿ ಕಾವ್ಯ ಆತನ ಮೇಲೆ ಹಲ್ಲೆ ಮಾಡಿದ್ದಳು. ಅಲ್ಲದೇ ಕೈಯಲ್ಲಿ ಸಿಗರೆಟ್ ಹಿಡಿದು ಅವಾಜ್ ಕೂಡ ಹಾಕಿದ್ದಳು. ಸದ್ಯ ಪ್ರಿಯತಮ ಮುನಿಕೃಷ್ಣ ಕಪ್ಪೆ ಜೈಲಲ್ಲಿದ್ದು, ಪ್ರಿಯತಮನ ಹೆಸರಲ್ಲಿ ಹವಾ ಮೈಂಟೇನ್ ಮಾಡುತ್ತಿದ್ದ ಕಾವ್ಯ ಕೂಡ ಜೈಲುಪಾಲಾಗಿದ್ದಾಳೆ. ಇದನ್ನೂ ಓದಿ: ಹಾಸನದಲ್ಲಿ ಮುಂದುವರಿದ ಮಳೆ – ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವು

    ಪ್ರಕರಣ ಏನು?
    ಸಂಜು ಅನ್ನೋ 40 ವರ್ಷದ ವ್ಯಕ್ತಿ, ಕೊಡಿಗೆಹಳ್ಳಿ ಸಮೀಪದ ಸಾರಾ ಸ್ಪಾನಲ್ಲಿ ಕೆಲಸ ಮಾಡ್ತಿದ್ದ. ಅಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದರಿಂದ ಅಲ್ಲಿ ಕೆಲಸ ಬಿಟ್ಟು ಸ್ವಂತ ಸಲೂನ್ ಮಾಡಿಕೊಂಡಿದ್ದ. ಇದರಿಂದ ಕೋಪಗೊಂಡ ಸಾರಾ ಸ್ಪಾ ಓನರ್ ನಿಶಾ, ಗ್ಯಾಂಗ್ ಕಟ್ಟಿಕೊಂಡು ಬಂದು, ಸಂಜು ನಡೆಸ್ತಿದ್ದ ಸಲೂನ್‌ಗೆ ನುಗ್ಗಿ ಧಾಂಧಲೆ ನಡೆಸಿದ್ದಾರೆ. 10-15 ನಿಮಿಷಗಳ ಕಾಲ ಮನಸೋಇಚ್ಛೆ ಥಳಿಸಿ ಸಲೂನ್‌ನಿಂದ ನೀಲಿ ಬಣ್ಣದ ಕಾರಿನಲ್ಲಿ ಎತ್ತಾಕ್ಕೊಂಡು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಸಂಜು ದೂರು ನೀಡಿದ್ದಾರೆ. ಇದನ್ನೂ ಓದಿ: ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

    ಸಾರಾ ಸ್ಪಾ ಓನರ್ ನಿಶಾ, ಸ್ನೇಹಿತೆ ಕಾವ್ಯ, ಮೊಹಮ್ಮದ್ ಹಾಗೂ ಅಪರಿಚಿತರಿಬ್ಬರ ಮೇಲೆ ದೂರು ದಾಖಲಾಗಿದೆ. ದಾಸರಹಳ್ಳಿ ಮುಖ್ಯರಸ್ತೆ ಮೂಲಕ ಜಕ್ಕೂರು ಕಡೆ ಕರೆದುಕೊಂಡು ಹೋಗಿ, ಡ್ರ‍್ಯಾಗನ್, ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಸಲೂನ್‌ಗೆ ನುಗ್ಗಿ ಹಲ್ಲೆ ಮಾಡಿರುವ ದೃಶ್ಯಗಳನ್ನ ಸಂಜು ಪತ್ನಿ ಮೊಬೈಲ್‌ನಲ್ಲಿ ಸಿಸಿಟಿವಿ ದೃಶ್ಯಗಳನ್ನ ನೋಡಿ ಅಮೃತಹಳ್ಳಿ ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ. ಕಿಡ್ನ್ಯಾಪ್ ಮಾಡಿದ ಗ್ಯಾಂಗ್‌ನಲ್ಲಿದ್ದ ಓರ್ವರನ್ನ ಪೊಲೀಸರು ಗುರ್ತಿಸಿ, ಫೋನ್ ಮಾಡಿ ಎಚ್ಚರಿಕೆ ನೀಡಿದ್ದಾರೆ. ಆ ಬಳಿಕ ಠಾಣೆಯ ಮುಂದೆ ಸಂಜುನನ್ನ ಬಿಟ್ಟೋಗಿದ್ದಾರೆ. ಕಣ್ಣು, ಕಿವಿ, ತಲೆ, ಹೊಟ್ಟೆ ಭಾಗಕ್ಕೆ ಗಾಯಗಳಾಗಿದ್ದು, ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಸಂಜು ಚಿಕಿತ್ಸೆ ಪಡೆದು ಪೊಲೀಸರಿಗೆ ದೂರು ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಪೆಟ್ರೋಲ್ ಸುರಿದು ಸುಟ್ಟಾಕ್ತಿನಿ ಎಂದು ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕೊಡಗು | ಪೊನ್ನಂಪೇಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

    ರೌಡಿ ಪಟಾಲಂ ವಿರುದ್ಧ ಅಮೃತಹಳ್ಳಿ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಮೂವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೋವಿಡ್ ಆಕ್ಟೀವ್ ಕೇಸ್

  • ಹೊರರಾಜ್ಯದ ಯುವತಿಯರನ್ನ ಕರೆಸಿ ಬೆಂಗ್ಳೂರಲ್ಲಿ ಹೈಟೆಕ್ ವೇಶ್ಯವಾಟಿಕೆ ದಂಧೆ – ಆರೋಪಿ ಅಂದರ್‌

    ಹೊರರಾಜ್ಯದ ಯುವತಿಯರನ್ನ ಕರೆಸಿ ಬೆಂಗ್ಳೂರಲ್ಲಿ ಹೈಟೆಕ್ ವೇಶ್ಯವಾಟಿಕೆ ದಂಧೆ – ಆರೋಪಿ ಅಂದರ್‌

    ಬೆಂಗಳೂರು: ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ.

    ಅನಿಲ್‌ ಕುಮಾರ್‌ ರೆಡ್ಡಿ ಬಂಧಿತ ಆರೋಪಿ. ಈತ ಸ್ಪಾಗಳಲ್ಲಿ ದಂಧೆ ನಡೆಸುತ್ತಿದ್ದ, ಹೊರರಾಜ್ಯಗಳಿಂದ ಯುವತಿಯರನ್ನ ಕರೆಸಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಸದ್ಯ ಆರೋಪಿ ವಿರುದ್ಧ ಮಾನವ ಕಳ್ಳಸಾಗಣೆ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ. ಗೂಂಡಾಕಾಯ್ದೆ ಅಡಿ ಬಂಧಿಸಿದ್ದು, ಬಳ್ಳಾರಿ ಜೈಲಿಗಟ್ಟುವಂತೆ (Bellary Jail) ಪೊಲೀಸ್‌ ಆಯುಕ್ತರು ಆದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸದನದೊಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ: ಬಸವರಾಜ ಹೊರಟ್ಟಿ

    ಆರೋಪಿ ಸಿಕ್ಕಿಬಿದ್ದದ್ದು ಹೇಗೆ?
    ಕಳೆದ ಜನವರಿಯಲ್ಲೇ ಕೆ.ಆರ್‌ ಪುರದ ಟಿನ್‌ ಫ್ಯಾಕ್ಟರಿ ಬಳಿಯಿದ್ದ ನಿರ್ವಣ ಇಂಟರ್‌ನ್ಯಾಷನಲ್‌ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಥೈಲ್ಯಾಂಡ್‌ ಮಹಿಳೆಯರು ಸೇರಿದಂತೆ 44 ಮಹಿಳೆಯರನ್ನ ರಕ್ಷಣೆ ಮಾಡಲಾಗಿತ್ತು. ದಾಳಿ ಬಳಿಕ ಸ್ಪಾ ಅನ್ನು ಬಂದ್‌ ಮಾಡಲಾಗಿತ್ತು. ಇದನ್ನೂ ಓದಿ: ವೈಟ್ ಹೌಸ್ AI ವಿಭಾಗದ ನೀತಿ ಸಲಹೆಗಾರನಾಗಿ ಭಾರತ ಮೂಲದ ಶ್ರೀರಾಮ್‌ ಕೃಷ್ಣನ್ ನೇಮಕ

    ಇನ್ನೂ ಆರೋಪಿಯು ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳದಿಂದ ಯುವತಿಯರನ್ನ ಕರೆಸುತ್ತಿದ್ದ. ಬೆಂಗಳೂರಿನಲ್ಲಿ ಕೆಲಸಕ್ಕೆಂದು ಕರೆಸಿ ಬಂದು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಅನಿಲ್‌ ರೆಡ್ಡಿ ವಿರುದ್ಧ ರೇಪ್‌ ಸೇರಿ ಇತರೇ ಪ್ರಕರಣಗಳು ದಾಖಲಾಗಿದ್ದರಿಂದ, ಮಹದೇವಪುರ ಪೊಲೀಸರು ಗೂಂಡಾ ಕಾಯ್ದೆ ರಿಪೋರ್ಟ್ ತಯಾರಿಸಿದ್ದರು. ವರದಿ ಆಧರಿಸಿ ಪೊಲೀಸ್‌ ಆಯುಕ್ತರು ಅನಿಲ್ ರೆಡ್ಡಿ ವಿರುದ್ಧ ಗೂಂಡಾ ಕಾಯ್ದೆ ಜಾರಿ ಮಾಡಿದ್ದಾರೆ ಎಂದು ಪೊಲೀಸರು ಕಂಪ್ಲೀಟ್‌ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಿನ್ನದಂಗಡಿ ಮಾಲೀಕರಿಗೆ ಮಹಿಳೆಯಿಂದ ವಂಚನೆ – ಇಂದು ವರ್ತೂರ್ ಪ್ರಕಾಶ್ ವಿಚಾರಣೆಗೆ ಹಾಜರು

  • ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ- 44 ಯುವತಿಯರ ರಕ್ಷಣೆ

    ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ- 44 ಯುವತಿಯರ ರಕ್ಷಣೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಭರ್ಜರಿ ಬೇಟೆಯಾಡಿದೆ. ಸ್ಪಾ (Spa) ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ (Prostitue) ದಂಧೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

    ಸುಮಾರು 10 ಜನ ಸಿಸಿಬಿ ಅಧಿಕಾರಿಗಳ (CCB Officers) ತಂಡ ಟಿನ್ ಫ್ಯಾಕ್ಟರಿ ಬಳಿ ಇರುವ ನಿರ್ವಾನ್ ಇಂಟರ್ ನ್ಯಾಷನಲ್ ಸ್ಪಾನ ಫಸ್ಟ್ ಫ್ಲೋರ್ ಹಾಗೂ 6ನೇ ಫ್ಲೋರ್ ನಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಹೊರ ರಾಜ್ಯದಿಂದ ಬಂದು ಅನಿಲ್ ಎಂಬಾತ ಸ್ಪಾ ನಡೆಸುತ್ತಿದ್ದ.

    ಒಟ್ಟು 34 ರೂಂಗಳನ್ನು ಒಳಗೊಂಡ ಬಹುಮಹಡಿ ಕಟ್ಟಡದಲ್ಲಿ ಹೊರ ರಾಜ್ಯ, ಹೊರ ದೇಶದಿಂದ ಯುವತಿಯರು, ಮಹಿಳೆಯರನ್ನು ಕರೆಸಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ. ಸದ್ಯ ಮಾಲೀಕ ಅನಿಲ್ ಸೇರಿ ಒಟ್ಟು 44 ಮಹಿಳೆಯರು, 34 ಗಿರಾಕಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಿಂದ 26 ಬಾಲಕಿಯರು ನಾಪತ್ತೆ

    ಮಾಲೀಕ ಅನಿಲ್‍ಗೆ ಸೇರಿದ ಮೂರುವರೆ ಕೋಟಿ ಮೌಲ್ಯದ ಬೆನ್ಜ್ ಕಾರನ್ನು ಸಿಸಿಬಿ ಸೀಜ್ ಮಾಡಿದೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ – ಕಾಂಗ್ರೆಸ್ ಮುಖಂಡನ ಬಂಧನ

    ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ – ಕಾಂಗ್ರೆಸ್ ಮುಖಂಡನ ಬಂಧನ

    ಧಾರವಾಡ: ತನ್ನದೇ ಸ್ಪಾದಲ್ಲಿ (Spa) ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಕಾಂಗ್ರೆಸ್ ಮುಖಂಡನಿಗೆ(Congress leader) ಯುವತಿ(Young Women) ಸ್ನೇಹಿತರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

    ಹೌದು, ಧಾರವಾಡದ ಕಾಂಗ್ರೆಸ್ ಮುಖಂಡ ಮನೋಜ್‍ ಕರ್ಜಗಿ(Manoj Karjagi) ಎಂಬಾತ ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕ ಆಗಿದ್ದ. ಈತ ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಅವರ ಪರಮ ಆಪ್ತ. ಕರ್ಜಗಿ ವೃತ್ತಿಯಿಂದ ಧಾರವಾಡದ (Darwad) ವಿದ್ಯಾಗಿರಿ ಬಡಾವಣೆಯಲ್ಲಿ ಲೇಮೋಸ್ ಯುನಿಸೆಕ್ಸ್ ಸಲೂನ್ ಆ್ಯಂಡ್ ಸ್ಪಾ ನಡೆಸುತ್ತಿದ್ದಾನೆ. ಇದನ್ನೂ ಓದಿ: ನನ್ನ ನೋಡಿ ಬೊಗಳುತ್ತೆ – ನಾಯಿಯನ್ನು ಅಟ್ಟಾಡಿಸಿಕೊಂಡು ಗುಂಡಿಕ್ಕಿ ಕೊಂದ

    ಭಾನುವಾರ (Sunday) ಮಧ್ಯಾಹ್ನ ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಬ್ಯೂಟಿಷಿಯನ್ (Beautician) ಜೊತೆ ಸ್ಪಾ ಕ್ಲೀನ್ ಆಗಿ ಇಟ್ಟಿಲ್ಲ ಎಂಬ ವಿಚಾರವಾಗಿ ಕಿರಿಕ್ ಮಾಡಿದ್ದಾನೆ. ಬಳಿಕ ಆಕೆಯನ್ನು ತಬ್ಬಿಕೊಂಡು ಮುತ್ತು ಕೊಡಲು ಯತ್ನಿಸಿದ್ದಾನೆ. ಈ ವೇಳೆ ಅಲ್ಲಿಂದ ಕೂಗಾಡುತ್ತಾ ಹೊರ ಬಂದ ಯುವತಿ, ತನ್ನ ಸ್ನೇಹಿತರನ್ನು (Friends) ಅಲ್ಲಿಗೆ ಕರೆಯಿಸಿಕೊಂಡಿದ್ದಾಳೆ. ಆಗ ಸ್ಪಾಗೆ ಬಂದ ಯುವತಿಯ ಸ್ನೇಹಿತರ ಗುಂಪು ಮನೋಜ್‍ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಯುವತಿಗೆ ಕ್ಷಮೆ ಕೇಳಿ ಎಲ್ಲವೂ ಮುಗಿದಿತ್ತು.

    ಹೀಗಿದ್ದರೂ ತಾನು ಸಾಚಾ ಎಂದು ತೋರಿಸಿಕೊಳ್ಳಲು ಹೋಗಿ ಕಾಂಗ್ರೆಸ್ ಮುಖಂಡ ತಾನೇ ತೋಡಿದ ಖೆಡ್ಡಾದಲ್ಲಿ ತಾನೇ ಬಿದ್ದಿದ್ದಾನೆ. ಗಲಾಟೆ ವೇಳೆ ಆಯನ್ ನದಾಫ್(Ayan Nadaf) ಎಂಬಾತನಿಗೆ ಗಾಯವಾಗಿದ್ದು, ಈತನೊಂದಿಗೆ ಮನೋಜ್‍ ಕರ್ಜಗಿ ನಮ್ಮ ಮೇಲೆ ಗುಂಪೊಂದು ಹಲ್ಲೆ ಮಾಡಿ ಪರಾರಿಯಾಗಿದೆ ಅಂತಾ ಎಂಎಲ್‍ಸಿ(MLC) ಮಾಡಿಸಿ ಚಿಕಿತ್ಸೆ ಪಡೆದುಕೊಂಡಿದ್ದರು. ಘಟನೆಯಲ್ಲಿ ಕರ್ಜಗಿ ಕೈಗೆ ಏಟಾಗಿದ್ದರೆ, ಆಯನ್ ಬೆನ್ನಿಗೆ ಇರಿತ ಆಗಿದೆ. ಕರ್ಜಗಿ ಇತ್ತ ಎಂಎಲ್‍ಸಿ ಮಾಡಿಸುತ್ತಿದ್ದಂತೆಯೇ ವಿದ್ಯಾಗಿರಿ ಠಾಣೆಗೆ ಬಂದ ಯುವತಿ, ಮನೋಜ್‍ ಕರ್ಜಗಿ ವಿರುದ್ಧ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಿದ್ದು, ಸದ್ಯ ಕರ್ಜಗಿಯನ್ನು ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಮತ್ತೊಂದು ಕಡೆ ಅಯಾನ್ ಹಾಗೂ ಕರ್ಜಗಿ ಮೇಲೆ ಹಲ್ಲೆ ಮಾಡಿದವರ ಮೇಲೂ ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಈ ಸಂಬಂಧ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಸ್ಮಾರ್ಟ್ ಫೋನ್ ಬಳಕೆದಾರರೇ ಎಚ್ಚರ! – ಎಂಟ್ರಿಕೊಟ್ಟಿದೆ ರಷ್ಯಾದ ಸೋವಾ-5.0 ವೈರಸ್

    Live Tv
    [brid partner=56869869 player=32851 video=960834 autoplay=true]

  • 14ರ ಬಾಲಕಿಯ ಮೇಲೆ 10-15 ಮಂದಿ ರೇಪ್

    14ರ ಬಾಲಕಿಯ ಮೇಲೆ 10-15 ಮಂದಿ ರೇಪ್

    ಲಕ್ನೋ: 14 ವರ್ಷದ ಬಾಲಕಿಯ ಮೇಲೆ 10-15 ಪುರುಷರು ಅನೇಕ ಬಾರಿ ಅತ್ಯಾಚಾರವೆಸಗಿದ ಘಟನೆ ಗುರುಗ್ರಾಮದ(Gurugram) ಸ್ಥಳೀಯ ಸ್ಪಾವೊಂದರಲ್ಲಿ(Spa) ನಡೆದಿದೆ.

    ಅಪ್ರಾಪ್ತೆಯ ದೂರಿನ ಆಧಾರದ ಮೇಲೆ ಸ್ಪಾ ಆಪರೇಟರ್, ಮಹಿಳೆ ಸೇರಿದಂತೆ ನಾಲ್ವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಜುಮಾ, ಪೂಜಾ, ರುಬೆಲ್ ಹಾಗೂ ಸದ್ದಾಂ ಎಂದು ಗುರುತಿಸಲಾಗಿದೆ.

    ಘಟನೆಗೆ ಸಂಬಂಧಿಸಿ ಬಾಲಕಿಯು ಮಾತನಾಡಿ, ಇದು ಪೊಲೀಸರಿಗೆ(Police) ನೀಡುತ್ತಿರುವ 2ನೇ ದೂರಾಗಿದೆ. ಮೊದಲನೇ ಬಾರಿಗೆ ಆರೋಪಿಗಳಲ್ಲಿ ಒಬ್ಬಾತ ತನ್ನನ್ನು ಪ್ರೀತಿಸುವುದಾಗಿ ಹೇಳಿದ್ದು, ಇದರಿಂದಾಗಿ ಮದುವೆಯಾಗುವುದಾಗಿಯೂ ಭರವಸೆ ನೀಡಿದ್ದ. ಈ ಹಿನ್ನೆಲೆಯಲ್ಲಿ ದೂರನ್ನು ಹಿಂತೆಗೆದುಕೊಂಡಿದ್ದೆ. ಆದರೆ ದೂರು ಹಿಂತೆಗೆದುಕೊಂಡ ನಂತರ ಆರೋಪಿಯು ತನ್ನನ್ನು ಮದುವೆ ಆಗಲು ನಿರಾಕರಿಸಿದ್ದಾನೆ. ಅಷ್ಟೇ ಅಲ್ಲದೇ ತನ್ನನ್ನು ಹಾಗೂ ತನ್ನ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಾಳೆ. ಇದನ್ನೂ ಓದಿ: ನಮ್ಮ ಪ್ರಯತ್ನದಿಂದಾಗಿ ಚೀತಾ ಭಾರತಕ್ಕೆ ಬಂದಿವೆ: ಕಾಂಗ್ರೆಸ್

    ಬಾಲಕಿಯು ನೀಡಿರುವ ದೂರಿನ ಪ್ರಕಾರ, ಆರೋಪಿ ಪೂಜಾ ಎಂಬಾಕೆ ಒಂದು ತಿಂಗಳ ಹಿಂದೆ ಕ್ಲಿನಿಕ್‍ವೊಂದರಲ್ಲಿ ಕೆಲಸ ನೀಡಿದ್ದರು. ಆದರೆ ಕೇವಲ 2 ದಿನಗಳ ನಂತರ ಕೆಲಸದಿಂದ ತೆಗೆದುಹಾಕಲಾಯಿತು. ಅದಾದ ಬಳಿಕ ಪೂಜಾಳನ್ನು ಮತ್ತೆ ಭೇಟಿಯಾದಾಗ ಗುರುಗ್ರಾಮದ ಮಾಲವೊಂದರಲ್ಲಿರುವ ಸ್ಪಾದಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ನೀಡಿದ್ದಳು.

    STOP RAPE

    ಅಲ್ಲಿ ಹೋದ ಮೊದಲ ದಿನದಿಂದಲೇ ನನ್ನ ಮೇಲೆ ಅತ್ಯಾಚಾರ ನಡೆದಿದೆ. ಅಲ್ಲಿ ವ್ಯಕ್ತಿಯೊಬ್ಬನೊಂದಿಗೆ ನನ್ನನ್ನು ಬಲವಂತವಾಗಿ ಸ್ಪಾದ ಕೊಠಡಿಯೊಳಗೆ ಕಳುಹಿಸಿದ್ದರು. ಅಲ್ಲಿ ಆತ ಬಲವಂತವಾಗಿ ಅಶ್ಲೀಲ ವೀಡಿಯೋವನ್ನು ತೊರಿಸುವುದರ ಮೂಲಕ ಅತ್ಯಾಚಾರವೆಸಗಿದ್ದಾನೆ. ಹೀಗೆ ಕೇವಲ 5 ದಿನಗಳಲ್ಲಿ 10-15 ವ್ಯಕ್ತಿಗಳು ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ದಿವಂಗತ ಉಮೇಶ್ ಕತ್ತಿ ನಿವಾಸಕ್ಕೆ ಈಶ್ವರ ಖಂಡ್ರೆ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

    ಘಟನೆಗೆ ಸಂಬಂಧಿಸಿ ಗುರುಗ್ರಾಮ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಲ್ವರು ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿಯಲ್ಲಿ ಎಫ್‍ಐಆರ್(FIR) ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸ್ಪಾ ಮ್ಯಾನೇಜರ್, ಗ್ರಾಹಕರು ಸೇರಿ ಯುವತಿ ಮೇಲೆ ಅತ್ಯಾಚಾರ – ಪೊಲೀಸರಿಗೆ ನೋಟಿಸ್

    ಸ್ಪಾ ಮ್ಯಾನೇಜರ್, ಗ್ರಾಹಕರು ಸೇರಿ ಯುವತಿ ಮೇಲೆ ಅತ್ಯಾಚಾರ – ಪೊಲೀಸರಿಗೆ ನೋಟಿಸ್

    ನವದೆಹಲಿ: ಪಿತಾಂಪುರದಲ್ಲಿರುವ ಸ್ಪಾವೊಂದರ ಮ್ಯಾನೇಜರ್ ಮತ್ತು ಗ್ರಾಹಕರು 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

    ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಘಟನೆಯ ಕುರಿತು ದೆಹಲಿ ಪೊಲೀಸರು ಮತ್ತು ದೆಹಲಿ ಮುನ್ಸಿಪಲ್ ಕಾಪೋರೇಷನ್(ಎಂಸಿಡಿ)ಗೆ ನೋಟಿಸ್ ನೀಡಿದ್ದಾರೆ. ಈ ಕುರಿತು ಸಂತ್ರಸ್ತೆ ಮಾತನಾಡಿದ್ದು, ನಾನು ಕೆಲಸ ಮಾಡುತ್ತಿದ್ದ ಪಿತಾಂಪುರದ ದಿ ಓಷನ್ ಸ್ಪಾದಲ್ಲಿ ಈ ಘಟನೆ ನಡೆದಿದೆ. ಸ್ಪಾ ಮ್ಯಾನೇಜರ್ ನನ್ನನ್ನು ಕ್ಲೈಂಟ್‍ಗೆ ಪರಿಚಯಿಸಿದನು. ನಂತರ ನನಗೆ ಅಮಲು ಬೆರೆಸಿದ ಪಾನೀಯವನ್ನು ಕೊಟ್ಟು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ವಿವರಿಸಿದಳು. ಇದನ್ನೂ ಓದಿ: ಐವರ ಪ್ರಾಣ ಉಳಿಸಿದೆ ಅಂಗಾಂಗ ದಾನ – ಮಗನ ಸಾವಿನಲ್ಲಿ ಸಾರ್ಥಕತೆ ಕಂಡ ಕುಟುಂಬ 

    ಘಟನೆಯ ಕುರಿತು ಪೊಲೀಸರಿಗೆ ನಾನು ತಿಳಿಸುತ್ತೇನೆ ಎಂದು ನಾನು ಪ್ರಯತ್ನಿಸಿದಾಗ ಸ್ಪಾ ಮಾಲೀಕರು ನಾನು ಮೌನವಾಗಿರಲು ಲಂಚ ನೀಡಲು ಪ್ರಯತ್ನಿಸಿದರು. ಆದರೆ ನಾನು ಮಹಿಳಾ ಆಯೋಗಕ್ಕೆ ದೂರು ಕೊಟ್ಟೆ. ಆಯೋಗವು ಈ ವಿಷಯವನ್ನು ತಕ್ಷಣವೇ ಗಮನಕ್ಕೆ ತೆಗೆದುಕೊಂಡಿತು. ಎಂಸಿಡಿ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿತು. ಅವರಿಂದ ಕ್ರಮ-ತೆಗೆದುಕೊಂಡು ವರದಿ ಕೇಳಿದೆ. ದೆಹಲಿ ಪೊಲೀಸರಿಗೆ ಕಳುಹಿಸಿದ ನೋಟಿಸ್‍ನಲ್ಲಿ, ಸ್ವಾತಿ ಮಲಿವಾಲ್ ಅವರು ಎಫ್‍ಐಆರ್‍ನ ಪ್ರತಿಯನ್ನು ಮತ್ತು ಈ ವಿಷಯದಲ್ಲಿ ಬಂಧಿತ ಆರೋಪಿಗಳ ವಿವರಗಳನ್ನು ಕೋರಿದ್ದಾರೆ.

    ಇದಲ್ಲದೆ, ಸ್ಪಾಗೆ ಮಾನ್ಯವಾದ ಪರವಾನಗಿ ಇದೆಯೇ ಎಂದು ಆಯೋಗವು ಅಧಿಕಾರಿಗಳಿಂದ ವಿಚಾರಣೆ ನಡೆಸಿತು. ಎಲ್ಲ ವಿವರಗಳನ್ನು ಮಹಿಳಾ ಸಮಿತಿಯು ಆಗಸ್ಟ್ 8 ರೊಳಗೆ ನೀಡುವಂತೆ ಕೇಳಿದೆ. ಸ್ವಾತಿ ಮಲಿವಾಲ್ ಮಾತನಾಡಿದ ಅವರು, ದೆಹಲಿಯಾದ್ಯಂತ ಸ್ಪಾಗಳ ನೆಪದಲ್ಲಿ ಸೆಕ್ಸ್ ರಾಕೆಟ್ ನಡೆಸಲಾಗುತ್ತಿದೆ. ಆರೋಪಿಗಳು ಹುಡುಗಿಯರ ಬಾಯಿ ಮುಚ್ಚಿಸಲು ಬೆದರಿಕೆ ಮತ್ತು ಬ್ಲ್ಯಾಕ್‍ಮೇಲ್ ಮಾಡುವುದರಿಂದ ಈ ಹೆಚ್ಚಿನ ಪ್ರಕರಣಗಳು ವರದಿಯಾಗಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸುಖವಾಗಿರಬಹುದೆಂದು ಪತಿ ಜೊತೆಗೆ ವಿದೇಶಕ್ಕೆ ಹೋದ್ಲು – ಕಿರುಕುಳ ತಡೆಯದೆ ಮಸಣ ಸೇರಿದ್ಲು

    ಅಕ್ರಮ ಸ್ಪಾಗಳನ್ನು ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಲು ಏಕೆ ವಿಫಲರಾಗಿದ್ದಾರೆ ಎಂದು ಪ್ರಶ್ನಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸ್ಪಾವೊಂದರ ಜಾಹೀರಾತು ಬೋರ್ಡ್‍ನಲ್ಲಿ ರಾಜಾರೋಷವಾಗಿ ಸೆಕ್ಸ್ ರಾಕೆಟ್ ಪ್ರಚಾರ..!

    ಸ್ಪಾವೊಂದರ ಜಾಹೀರಾತು ಬೋರ್ಡ್‍ನಲ್ಲಿ ರಾಜಾರೋಷವಾಗಿ ಸೆಕ್ಸ್ ರಾಕೆಟ್ ಪ್ರಚಾರ..!

    ನವದೆಹಲಿ: ಸ್ಪಾವೊಂದರ ಜಾಹೀರಾತು ಬೋರ್ಡ್ ನಲ್ಲಿ ಸೆಕ್ಸ್ ರಾಕೆಟ್ ಪ್ರಚಾರ ಮಾಡಿರುವ ವಿಲಕ್ಷಣ ಘಟನೆ ರಾಷ್ಟ್ರ ರಾಜದಾನಿಯಲ್ಲಿ ಬೆಳಕಿಗೆ ಬಂದಿದೆ.

    ಸೆಕ್ಟ್ ರಾಕೆಟ್ ಪ್ರಚಾರ ಮಾಡಿರುವ ಜಾಹೀರಾತು ಬೋರ್ಡ್ ವೀಡಿಯೋವನ್ನು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.ಅಲ್ಲದೆ ದೆಹಲಿ ಮುನ್ಸಿಪಲ್ ಕಾಪೋರೇಷನ್ ಮತ್ತು ದೆಹಲಿ ಪೊಲೀಸರು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

    ವೀಡಿಯೋದಲ್ಲಿ ಏನಿದೆ..? ಎಲ್‍ಇಡಿ ಬೋರ್ಡ್ ನಲ್ಲಿ ಆಕ್ಷೇಪಾರ್ಹ ಜಾಹೀರಾತು ಪ್ರದರ್ಶಿಸಿರುವುದನ್ನು ಕಾಣಬಹುದಾಗಿದೆ. ಸೆಕ್ಸ್ ರಾಕೆಟ್‍ನಡೆಯುತ್ತಿದೆ ಎಂದು ಬೋರ್ಡ್ ನಲ್ಲಿದೆ. ರಷ್ಯನ್ @ ರೂ. 20,000.. ಸೆಕ್ಸ್ ಮಾರ್ಕೆಟ್, ರೂ. 2000 ನಲ್ಲಿ ಎಂದೆಲ್ಲ ಬರೆಯಲಾಗಿದೆ.

    ಸ್ಪಾಗಳು ಸೆಕ್ಸ್ ರಾಕೆಟ್ ನಡೆಸುತ್ತಿರುವುದು ನಾಚಿಗೇಡಿನ ವಿಚಾರ. ದೆಹಲಿ ಮಹಿಳಾ ಆಯೋಗ ಮತ್ತು ಪೊಲೀಸರಿಗೆ ಇವರು ಹೆದರುತ್ತಿಲ್ಲ. ಹೀಗಾಗಿ ಬೀದಿಯಲ್ಲೇ ರಾಜರೋಷವಾಗಿ ಇಂತಹ ಪ್ರಚಾರ ಕೊಡುತ್ತಿದ್ದಾರೆ ಎಂದು ಟ್ವೀಟ್‍ನಲ್ಲಿ ಆಕ್ರೊಶ ಹೊರಹಾಕಿದ್ದಾರೆ.

    https://twitter.com/LTEorNR/status/1512006525392330759

    ಒಟ್ಟಿನಲ್ಲಿ ಕೆಲವರು ಜಾಹೀರಾತನ್ನು ಟೀಸಿಕದರೆ ಇನ್ನೂ ಕೆಲವರು ಸ್ಥಳೀಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ ಮತ್ತೂ ಕೆಲವರು ಇದೊಮದು ನಕಲಿ ವೀಡಿಯೋ ಆಗಿದ್ದು, ಸುಳ್ಳು ಸುದ್ದಿ ಹಬ್ಬಿಸಲು ಈ ರೀತಿ ಮಾಡಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

  • ಸುಂದರಿಗಾಗಿ ಸ್ಪಾಗೆ ಹೋದವರು ಹನಿಟ್ರ್ಯಾಪ್ ಖೆಡ್ಡಾಕ್ಕೆ

    ಸುಂದರಿಗಾಗಿ ಸ್ಪಾಗೆ ಹೋದವರು ಹನಿಟ್ರ್ಯಾಪ್ ಖೆಡ್ಡಾಕ್ಕೆ

    – ಶ್ರೀಮಂತರ ಮಕ್ಕಳೇ ಇವರ ಟಾರ್ಗೆಟ್

    ಬೆಳಗಾವಿ: ಹನಿಟ್ರ್ಯಾಪ್ ಗ್ಯಾಂಗ್ ಮೇಲೆ ಸಿಇಎನ್ ಪೊಲೀಸರು ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕುಂದಾನಗರಿಯಲ್ಲಿ ನಡೆದಿದೆ.

    ಗ್ಯಾಂಗ್‍ವೊಂದು ಮಸಾಜ್ ಮತ್ತು ಸ್ಪಾ ಸೆಂಟರ್ ನಡೆಸುವುದಾಗಿ ಅನುಮತಿ ಪಡೆದು ಅನೈತಿಕ ಚಟುವಟಿಕೆ ನಡೆಸುತ್ತಿರುವುದು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಬೆಳಗಾವಿಯ ಕಾಂಗ್ರೆಸ್ ರಸ್ತೆಯಲ್ಲಿದ್ದ ನ್ಯೂ ಗೆಟ್ ವೇ ಯುನಿಸೆಕ್ಸ್ ಸ್ಪಾ ಹೆಸರಿನಲ್ಲಿರುವ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕೇದಾರಿ ಶಿಂಧೆ, ಪ್ರಕಾಶ್ ಯಳ್ಳೂರ್ಕರ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಬಳಿಕ ತನಿಖೆ ವೇಳೆ ಈ ಗ್ಯಾಂಗ್‍ನ ಪ್ರಮುಖ ಟಾರ್ಗೆಟ್ ಶ್ರೀಮಂತ ಯುವಕರು ಎಂದು ತಿಳಿದು ಬಂದಿದೆ. ಆನ್‍ಲೈನ್ ಮೂಲಕ ಬಣ್ಣ ಬಣ್ಣದ ಹುಡುಗಿಯರ ಫೋಟೋ ತೋರಿಸುವ ಮೂಲಕ ಶ್ರೀಮಂತ ಯುವಕರನ್ನು ಬಲೆಗೆ ಹಾಕಿಕೊಂಡು ಹನಿಟ್ರ್ಯಾಪ್ ನಡೆಸುತ್ತಿದ್ದರು ಎಂಬ ಅಸಲಿ ಸತ್ಯ ಬಯಲಾಗಿದೆ.

    ಇನ್ನೂ ಘಟನೆಯಲ್ಲಿ ಪೊಲೀಸರು ಮೂವರು ಯುವತಿಯರನ್ನು ರಕ್ಷಣೆ ಮಾಡಿ ಅವರನ್ನು ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ಇದೀಗ ಪ್ರಕರಣ ಕುರಿತಂತೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

  • ಗ್ರಾಹಕನಾಗಿ ಸ್ಪಾಗೆ ಹೋದ ಪೊಲೀಸ್ – ಬಯಲಾಯ್ತು ಸೆಕ್ಸ್ ದಂಧೆಯ ಕರಾಳ ಮುಖ

    ಗ್ರಾಹಕನಾಗಿ ಸ್ಪಾಗೆ ಹೋದ ಪೊಲೀಸ್ – ಬಯಲಾಯ್ತು ಸೆಕ್ಸ್ ದಂಧೆಯ ಕರಾಳ ಮುಖ

    – 9 ಯುವತಿಯರು ಸೇರಿದಂತೆ 12 ಜನ ಅರೆಸ್ಟ್
    – ದೆಹಲಿ, ಅಸ್ಸಾಂ, ಪ.ಬಂಗಾಳ ಮೂಲದ ಯುವತಿಯರಿಂದ ದಂಧೆ

    ಜೈಪುರ: ಸ್ಪಾ, ಮಸಾಜ್ ಹೆಸರಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, 12 ಜನರನ್ನ ಬಂಧಿಸಿದ್ದಾರೆ. ರಾಜಸ್ಥಾನದ ಅಲ್ವಾರ ಜಿಲ್ಲೆಯ ಬಿವಢಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ದಾಳಿ ವೇಳೆ ಬಂಧಿಸಿರುವ 9 ಯುವತಿಯರು ಸೇರಿದಂತೆ 12 ಜನರನ್ನ ಫೂಲ್‍ಬಾಗ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ನಡೆಸಲಾಗುತ್ತಿದೆ. 12 ಜನರಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದು, ಯಾರ ಜೊತೆ ಸಂಪರ್ಕದಲ್ಲಿದ್ದರು ಎಂಬುದರ ಕುರಿತು ತನಿಖೆ ನಡೆಸಲಾಗ್ತಿದೆ. ದೆಹಲಿ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಿಂದ ಯುವತಿಯರನ್ನ ದಂಧೆಗೆ ಕರೆಸಿಕೊಳ್ಳಲಾಗುತ್ತಿತ್ತು. ಇದನ್ನೂ ಓದಿ: ‘ನಾನು ದಂಧೆ ಮಾಡೋಳು ಏನ್ ಮಾಡ್ಕೋತ್ತೀರಿ’- ಆಂಟಿಯ ಹೈಟೆಕ್ ಸೆಕ್ಸ್ ದಂಧೆ

    ಸ್ಪಾ ಹೆಸರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮೌಖಿಕ ದೂರುಗಳು ಬಂದಿದ್ದವು. ಈ ಹಿನ್ನೆಲೆ ಪೊಲೀಸರೊಬ್ಬರು ಗ್ರಾಹಕರಾಗಿ ಹೋದಾಗ ಒಳಗಿನ ರಹಸ್ಯ ಬಯಲಾಗಿದೆ. ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆ ಶನಿವಾರ ದಾಳಿ ನಡೆಸಿ 12 ಜನರನ್ನ ಬಂಧಿಸಲಾಗಿದೆ. ಇದನ್ನೂ ಓದಿ:ಹೈ ಪ್ರೊಫೈಲ್ ಸೆಕ್ಸ್ ದಂಧೆ – ಒಬ್ಬಳು ಅರೆಸ್ಟ್, ಮೂವರು ನಟಿಮಣಿಯರ ರಕ್ಷಣೆ

    ದೇಶದ ರಾಜಧಾನಿಯ ತಿಲಕ್ ನಗರದಲ್ಲಿ ಸ್ಪಾ ಹೆಸರಲ್ಲಿ ನಡೆಯುತ್ತಿದ್ದ ಸೆಕ್ಸ್ ದಂಧೆಯ ಮೇಲೆ ದೆಹಲಿಯ ಮಹಿಳಾ ಆಯೋಗ ಸೆಪ್ಟೆಂಬರ್ ನಲ್ಲಿ ದಾಳಿ ನಡೆಸಿತ್ತು. ದೆಹಲಿ ಮಹಿಳಾ ಆಯೋಗದ ಹೆಲ್ಪ್ ಲೈನ್ 181 ಸಂಖ್ಯೆಗೆ ಕರೆ ಮಾಡಿದ ಅನಾಮಧೇಯ ವ್ಯಕ್ತಿ ತಿಲಕ್ ನಗರದ ಸ್ಪಾದಲ್ಲಿ ನಡೆಯುತ್ತಿರೋ ಸೆಕ್ಸ್ ದಂಧೆಯ ಮಾಹಿತಿ ನೀಡಿದ್ದರು. ಮಾಹಿತಿ ಪಡೆದ ಮಹಿಳಾ ಅಯೋಗದವರು ದೆಹಲಿ ಪೊಲೀಸರ ಜೊತೆ ಮಾಂಸದಂಧೆಯ ಅಡ್ಡೆಯ ಮೇಲೆ ದಾಳಿ ನಡೆಸಿದ್ದರು. ಇದನ್ನೂ ಓದಿ:20 ರೂ. ಪೌಡರ್ ಇಟ್ಕೊಂಡು ಮಸಾಜ್ ಹೆಸ್ರಲ್ಲಿ ಸೆಕ್ಸ್ ದಂಧೆ!- ವೃದ್ಧಾಶ್ರಮ ಹೆಸರಲ್ಲಿ ಮಸಾಜ್ ಪಾರ್ಲರ್ 

  • ಹೈ ಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ

    ಹೈ ಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ

    ಬೆಂಗಳೂರು: ಸಿಲಿಕಾನ್ ಸಿಟಿಯ ಸದಾಶಿವನಗರದಲ್ಲಿ ನಡೆಯುತ್ತಿದ್ದ ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

    ಬೆಂಗಳೂರಿನ ಸದಾಶಿವನಗರದಲ್ಲಿ ಸಮ್ಮರ್ ಸ್ಪಾ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಯುವತಿಯರು ಮತ್ತು ಮಾಲೀಕನನ್ನ ಬಂಧಿಸಿದ್ದಾರೆ. ಕೊರೊನಾ ಲಾಕ್‍ಡೌನ್ ನಿಂದ ಸ್ಪಾಗಳನ್ನನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದ್ರೂ ಸ್ಪಾಗಳ ಹೆಸರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರಿಂದ ದಾಳಿ ನಡೆದಿದೆ. ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಂಗಳವಾರ ದೆಹಲಿಯಲ್ಲಿ ಸ್ಪಾಗಳ ಹೆಸರಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆಗಳ ಮೇಲೆ ಮಹಿಳಾ ಆಯೋಗ ಪೊಲೀಸರ ಸಹಾಯದೊಂದಿಗೆ ದಾಳಿ ನಡೆಸಿತ್ತು. ಈ ವೇಳೆ ಸ್ಪಾದಲ್ಲಿದ್ದ ಐವರು ಗ್ರಾಹಕರು ಮತ್ತು ಹುಡುಗಿಯರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.