Tag: ಸ್ಪಿರಿಟ್

  • ‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ

    ‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ

    ‘ಅನಿಮಲ್’ ಖ್ಯಾತಿಯ (Animal) ನಟಿ ತೃಪ್ತಿ ದಿಮ್ರಿಗೆ (Tripti Dimri) ಬಿಗ್ ಚಾನ್ಸ್‌ವೊಂದು ಸಿಕ್ಕಿದೆ. ಸೂಪರ್ ಸ್ಟಾರ್ ಪ್ರಭಾಸ್‌ಗೆ ನಾಯಕಿಯಾಗಿ ತೃಪ್ತಿ ದಿಮ್ರಿ ನಟಿಸಲಿದ್ದಾರೆ. ಈ ಕುರಿತು ಚಿತ್ರತಂಡವೇ ಅಧಿಕೃತ ಘೋಷಣೆ ಮಾಡಿದೆ. ಇದನ್ನೂ ಓದಿ:‘ಬಿಗ್ ಬಾಸ್’ ಬಳಿಕ ಬಿಗ್ ನ್ಯೂಸ್ ಕೊಟ್ರು ಮೋಕ್ಷಿತಾ ಪೈ!

    ಡಾರ್ಲಿಂಗ್ ಪ್ರಭಾಸ್ (Prabhas) ಜೊತೆ ತೃಪ್ತಿ ದಿಮ್ರಿ ರೊಮ್ಯಾನ್ಸ್ ಮಾಡಲಿದ್ದಾರೆ. ‘ಸ್ಪಿರಿಟ್‌’ಗೆ (Spirit) ತೃಪ್ತಿ ನಾಯಕಿ ಎಂದು 9 ಭಾಷೆಗಳಲ್ಲಿ ಪೋಸ್ಟರ್ ಮೂಲಕ ಚಿತ್ರತಂಡ ತಿಳಿಸಿದೆ. ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕೆ ಧನ್ಯವಾದಗಳು. ಈ ಚಿತ್ರದ ಭಾಗವಾಗಲು ಹೆಮ್ಮೆಯಾಗುತ್ತಿದೆ. ‘ಅನಿಮಲ್’ ಬಳಿಕ ಮತ್ತೆ ‘ಸ್ಪಿರಿಟ್’ ಅವಕಾಶ ಕೊಟ್ಟಿದ್ದಕ್ಕೆ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾಗೆ (Sandeep Reddy Vanga) ನಟಿ ಥ್ಯಾಂಕ್ಯೂ ಎಂದಿದ್ದಾರೆ.

     

    View this post on Instagram

     

    A post shared by Triptii Dimri (@tripti_dimri)

    ನಾಯಕಿ ತೃಪ್ತಿ ಹೆಸರನ್ನು 9 ಭಾಷೆಗಳಲ್ಲಿ ಉಲ್ಲೇಖಿಸಿ ಅನೌನ್ಸ್ ಮಾಡಿರೋದ್ದಕ್ಕೆ ‘ಸ್ಪಿರಿಟ್’ ಸಿನಿಮಾ 9 ಭಾಷೆಗಳಲ್ಲಿ ಮೂಡಿ ಬರಲಿದ್ಯಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಇದನ್ನೂ ಓದಿ:‘ಮಾರ್ನಮಿ’ಗೆ ಮೋಹಕ ತಾರೆ ರಮ್ಯಾ ಸಾಥ್ – ರಿವೀಲಾಯ್ತು ಚೈತ್ರಾ ಆಚಾರ್ ರೋಲ್

    ಈ ಚಿತ್ರದಲ್ಲಿ ಪ್ರಭಾಸ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ತಿದ್ದಾರೆ. ಹೀಗಾಗಿ ತೃಪ್ತಿ ಪಾತ್ರ ಈ ಚಿತ್ರದಲ್ಲಿ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

  • ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?

    ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?

    ನ್ನಡದ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರಿಗೆ ಸೌತ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ. ಪ್ರಭಾಸ್ (Prabhas) ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ (Spirit) ರುಕ್ಮಿಣಿ ವಸಂತ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ಎಲ್ಲಾ ಸಂದರ್ಭಕ್ಕೂ ನಗುವೇ ಒಳ್ಳೆಯ ಉತ್ತರ – ದರ್ಶನ್ ಭೇಟಿ ಬಳಿಕ ಪವಿತ್ರಾ ಪೋಸ್ಟ್!

    ‘ಭೈರತಿ ರಣಗಲ್, ಭಘೀರ’ ಸಿನಿಮಾದ ಬಳಿಕ ರುಕ್ಮಿಣಿ ವಸಂತ್‌ಗೆ (Rukmini Vasanth) ತೆಲುಗು, ತಮಿಳಿನಿಂದ ಭರ್ಜರಿ ಆಫರ್ಸ್‌ ಅರಸಿ ಬರುತ್ತಿವೆ. ಪ್ರಭಾಸ್ ಜೊತೆ ನಟಿಸುವ ಆಫರ್ ರುಕ್ಮಿಣಿಗೆ ಸಿಕ್ಕಿದೆಯಂತೆ. ಮೊದಲಿಗೆ ‘ಸ್ಪಿರಿಟ್’ ಸಿನಿಮಾಗೆ ದೀಪಿಕಾ ಪಡುಕೋಣೆ ಆಯ್ಕೆ ಆಗಿದ್ದರು. ಆದರೆ ಅವರು ಹೆಚ್ಚಿನ ಸಂಭಾವನೆ ಕೇಳಿದ್ದಕ್ಕೆ ರುಕ್ಮಿಣಿ ಅವರನ್ನು ನಟಿಸಲು ಕೇಳಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಒಟ್ನಲ್ಲಿ ಕನ್ನಡದ ನಟಿಯನ್ನ ಪ್ರಭಾಸ್ ಜೊತೆಗೆ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ಇದನ್ನೂ ಓದಿ:ನಮ್ಮ ಜಗಳ ನಮ್ಮಲ್ಲೇ ಇರಬೇಕಿತ್ತು, ನಾನು ಸತ್ತರೂ ಯಾರೂ ಕಾರಣರಲ್ಲ: ಸಹ ಕಲಾವಿದೆ

    ವಿಜಯ್ ಸೇತುಪತಿ, ರುಕ್ಮಿಣಿ ನಟನೆಯ ‘ಏಸ್’ ಚಿತ್ರ ಇಂದು ರಿಲೀಸ್ ಆಗಿದೆ. ಅಮರನ್ ನಟ ಶಿವಕಾರ್ತಿಕೇಯನ್ ಜೊತೆಗಿನ ‘ಮದರಾಸಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಮ್ ಚರಣ್ ಜೊತೆಗೆ ನಟಿಸಲು ಕೂಡ ನಟಿಯ ಜೊತೆ ಮಾತುಕತೆ ಆಗಿದೆ ಎನ್ನಲಾಗಿದೆ.

    ಕರ್ನಾಟಕದಿಂದ ರಶ್ಮಿಕಾ ಮಂದಣ್ಣ (Rashmika Mandanna), ಶ್ರೀಲೀಲಾ ಅವರಂತೆಯೇ ರುಕ್ಮಿಣಿ ವಸಂತ್ ಕೂಡ ಸಕ್ಸಸ್‌ಗಾಗಿ ಸಿನಿಮಾ ಆಯ್ಕೆಯಲ್ಲಿ ಚ್ಯುಸಿಯಾಗಿದ್ದಾರೆ. ಹೀಗೆ ಸೌತ್‌ನಿಂದ ಸಾಕಷ್ಟು ಸಿನಿಮಾ ಅವಕಾಶಗಳು ನಟಿಯನ್ನು ಅರಸಿ ಬರುತ್ತಿವೆ.

  • ‘ಸಿಕಂದರ್’ ಸೋಲಿನ ಹಿನ್ನೆಲೆ ಪ್ರಭಾಸ್ ಚಿತ್ರದಿಂದ ರಶ್ಮಿಕಾ ಮಂದಣ್ಣ ಔಟ್?

    ‘ಸಿಕಂದರ್’ ಸೋಲಿನ ಹಿನ್ನೆಲೆ ಪ್ರಭಾಸ್ ಚಿತ್ರದಿಂದ ರಶ್ಮಿಕಾ ಮಂದಣ್ಣ ಔಟ್?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ ‘ಸಿಕಂದರ್’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕಲೆಕ್ಷನ್ ಮಾಡೋದ್ರಲ್ಲಿ ಸೋತಿದೆ. ಈ ಬೆನ್ನಲ್ಲೇ ಪ್ರಭಾಸ್ ನಟನೆಯ ‘ಸ್ಪಿರಿಟ್’ (Spirit) ಚಿತ್ರದಿಂದ ರಶ್ಮಿಕಾ ಹೊರಬಿದ್ದಿದ್ದಾರೆ ಎನ್ನಲಾದ ಸುದ್ದಿಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಏ.16ರಿಂದ ‘ಬಿಲ್ಲ ರಂಗ ಭಾಷಾ’ ಚಿತ್ರದ ಶೂಟಿಂಗ್ ಆರಂಭ- ಅಪ್‌ಡೇಟ್ ಕೊಟ್ರು ಕಿಚ್ಚ

    ಸಲ್ಮಾನ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಕ್ಸಸ್‌ಫುಲ್ ಸಿನಿಮಾ ಕೊಟ್ಟು ಗೆದ್ದ ರಶ್ಮಿಕಾ ಮಂದಣ್ಣ ಇದ್ರೂ ಕೂಡ ‘ಸಿಕಂದರ್’ (Sikandar) ಚಿತ್ರ ಗೆಲ್ಲೋದ್ರಲ್ಲಿ ವಿಫಲವಾಯ್ತು. ಈ ಸೋಲಿನ ಕಹಿಯ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಕಿದೆ. ಪ್ರಭಾಸ್ (Prabhas) ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ ರಶ್ಮಿಕಾನೇ ನಾಯಕಿ ಎಂಬ ವಿಚಾರ ದಟ್ಟವಾಗಿ ಕೇಳಿ ಬಂದಿತ್ತು. ಸಿಕಂದರ್ ಸೋಲಿನ ಹಿನ್ನೆಲೆ ಚಿತ್ರತಂಡ ಬೇರೆ ನಾಯಕಿಯನ್ನು ಆಯ್ಕೆ ಮಾಡಿಕೊಳ್ಳಲು ನಿರ್ಧರಿಸಿದೆ ಎನ್ನಲಾಗಿದೆ. ಸದ್ಯ ಈ ಸುದ್ದಿ ಕೇಳಿ ಶ್ರೀವಲ್ಲಿ ಫ್ಯಾನ್ಸ್‌ಗೆ ಬೇಸರದಲ್ಲಿದ್ದಾರೆ. ಇದನ್ನೂ ಓದಿ:ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾ ಕೊಟ್ಟಿದ್ದ ರಶ್ಮಿಕಾಗೆ ಶುರುವಾಯ್ತಾ ಬ್ಯಾಡ್ ಟೈಮ್?

    ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನದ ‘ಸ್ಪಿರಿಟ್’ ಸಿನಿಮಾ ಇದೇ ಮೇ ರಿಂದ ಶುರುವಾಗಲಿದೆ. ಥೈಲ್ಯಾಂಡ್‌ನಲ್ಲಿ ಶೂಟಿಂಗ್ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಮುಂದಿನ ರಿಲೀಸ್‌ಗೆ ತಂಡ ಯೋಜನೆ ಹಾಕಿಕೊಂಡಿದೆ. ದಿ ರಾಜಾ ಸಾಬ್ ಸಿನಿಮಾ ಮುಗಿಸಿ ಸದ್ಯದಲ್ಲೇ ಪ್ರಭಾಸ್ ಸ್ಪಿರಿಟ್ ತಂಡವನ್ನು ಸೇರಿಕೊಳ್ಳಲಿದ್ದಾರೆ.

  • ದಕ್ಷಿಣದಲ್ಲಿ ಅಧೀರನಿಗೆ ಭಾರೀ ಬೇಡಿಕೆ- ಪ್ರಭಾಸ್ ಸಿನಿಮಾದಲ್ಲಿ ಸಂಜಯ್ ದತ್

    ದಕ್ಷಿಣದಲ್ಲಿ ಅಧೀರನಿಗೆ ಭಾರೀ ಬೇಡಿಕೆ- ಪ್ರಭಾಸ್ ಸಿನಿಮಾದಲ್ಲಿ ಸಂಜಯ್ ದತ್

    ‘ಕೆಜಿಎಫ್ 2′ ಹಿಟ್ ಆದ್ಮೇಲೆ ಸಂಜಯ್ ದತ್‌ಗೆ (Sanjay Dutt) ಸೌತ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ. ಬಾಲಿವುಡ್‌ಗಿಂತ ದಕ್ಷಿಣದ ಸಿನಿಮಾಗಳಿಗೆ ನಟ ಹೆಚ್ಚು ಪ್ರಾಮುಖ್ಯತೆ ಕೊಡ್ತಿದ್ದಾರೆ. ಸದ್ಯ ಪ್ರಭಾಸ್ (Prabhas) ನಟನೆಯ ಹೊಸ ಸಿನಿಮಾದಲ್ಲಿ ಸಂಜಯ್ ದತ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:’ಸಿಕಂದರ್‌’ ಚಿತ್ರದ ಟ್ರೈಲರ್‌ನಲ್ಲಿ ಮಿಂಚಿದ ಕನ್ನಡಿಗ ಕಿಶೋರ್

    ಸೌತ್‌ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಸಂಜಯ್ ದತ್ ಬ್ಯುಸಿಯಾಗಿದ್ದಾರೆ. ಸದ್ಯ ‘ಅನಿಮಲ್’ (Animal) ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ನಲ್ಲಿ ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ಸಂಜಯ್ ದತ್ ಅವರು ಪ್ರಭಾಸ್‌ಗೆ ಅಣ್ಣನಾಗಿ ಬಣ್ಣ ಹಚ್ಚಲಿದ್ದಾರೆ ಎನ್ನಲಾದ ಸುದ್ದಿಯೊಂದು ಟಾಲಿವುಡ್‌ನಲ್ಲಿ ಕೇಳಿ ಬರುತ್ತಿದೆ.

    ಸಂದೀಪ್ ಮಾರ್ಕ್ ಅನ್ನೋ ಪಾತ್ರಕ್ಕೆ ಸಂಜಯ್‌ರನ್ನು ಚಿತ್ರತಂಡ ಸಂಪರ್ಕಿಸಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಟನಾಗಲಿ, ಚಿತ್ರತಂಡದ ಕಡೆಯಿಂದ ಆಗಲಿ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಅದಷ್ಟೇ ಅಲ್ಲ, ಪ್ರಭಾಸ್ ನಟನೆಯ ರಾಜಾ ಸಾಬ್ ಸಿನಿಮಾದಲ್ಲೂ ಸಂಜಯ್ ದತ್ ವಿಲನ್ ಆಗಿ ನಟಿಸಿದ್ದಾರೆ ಎಂಬ ಸುದ್ದಿ ಕೂಡ ಇದೆ. ಚಿತ್ರತಂಡದ ಕಡೆಯಿಂದ ಅಫಿಷಿಯಲ್ ಅಪ್‌ಡೇಟ್ ಸಿಗುವವರೆಗೂ ಕಾದುನೋಡಬೇಕಿದೆ.

    ಇನ್ನೂ ಕನ್ನಡದ ನಟ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಪವರ್‌ಫುಲ್ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ರಿಲೀಸ್‌ಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

  • ಚಿತ್ರದುರ್ಗ| ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೇ ಹೊತ್ತಿ ಉರಿದ ಟ್ಯಾಂಕರ್ – ಚಾಲಕ, ನಿರ್ವಾಹಕ ಪಾರು

    ಚಿತ್ರದುರ್ಗ| ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೇ ಹೊತ್ತಿ ಉರಿದ ಟ್ಯಾಂಕರ್ – ಚಾಲಕ, ನಿರ್ವಾಹಕ ಪಾರು

    ಚಿತ್ರದುರ್ಗ: ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ಸ್ಪಿರಿಟ್ ತರಲು ತೆರಳುತ್ತಿದ್ದ ಟ್ಯಾಂಕರ್‌ಗೆ (Tanker) ಬೆಂಕಿ ಹತ್ತಿಕೊಂಡು ಧಗಧಗನೇ ಹೊತ್ತಿ ಉರಿದ ಘಟನೆ ಚಿತ್ರದುರ್ಗದ (Chitradurga) ಸರೋಜಬಾಯಿ ಕಲ್ಯಾಣ ಮಂಟಪದ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

    ಟ್ಯಾಂಕರ್ ಚಿತ್ರದುರ್ಗದಿಂದ ಬೆಳಗಾವಿಗೆ ಸ್ಪಿರಿಟ್ ತರುವ ಸಲುವಾಗಿ ತೆರಳುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ. ಘಟನೆ ವೇಳೆ ಟ್ಯಾಂಕರ್‌ನಲ್ಲಿದ್ದ ಚಾಲಕ, ನಿರ್ವಾಹಕ ಬೆಂಕಿಯಿಂದ ಪಾರಾಗಿದ್ದಾರೆ. ಘಟನೆಯ ಪರಿಣಾಮ ಟ್ಯಾಂಕರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ಕೊಡಬೇಕು: ಜೈರಾಮ್ ರಮೇಶ್ ಆಗ್ರಹ

    ಲಾರಿ ಹೊತ್ತಿ ಉರಿದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಮುಡಾ ಸಣ್ಣ ಕೇಸ್, ಚುನಾವಣಾ ಬಾಂಡ್ ದೊಡ್ಡ ಹಗರಣ; ಪ್ರಧಾನಿಯಿಂದ ಎಲ್ಲಾ ಸಚಿವರು ಬರ್ತಾರೆ: ಶರಣಪ್ರಕಾಶ ಪಾಟೀಲ್

  • ಪ್ರಭಾಸ್‌ಗೆ ವಿಲನ್ ಆದ ತ್ರಿಷಾ

    ಪ್ರಭಾಸ್‌ಗೆ ವಿಲನ್ ಆದ ತ್ರಿಷಾ

    ‘ಕಲ್ಕಿ’ (Kalki 2898 AD) ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಪ್ರಭಾಸ್ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದರ ನಡುವೆ ಪ್ರಭಾಸ್ (Prabhas) ಮುಂಬರುವ ಸಿನಿಮಾ ಬಗ್ಗೆ ಇಂಟರೆಸ್ಟಿಂಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಪ್ರಭಾಸ್‌ಗೆ ವಿಲನ್ ಆಗಿ ನಟಿ ತ್ರಿಷಾ ಕಾಣಿಸಿಕೊಳ್ಳಲಿದ್ದಾರೆ.

    ತ್ರಿಷಾಗೆ (Trisha) ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಾಗಿದೆ. ಸಿನಿಮಾದಿಂದ ಸಿನಿಮಾಗೆ ಬಗೆ ಬಗೆಯ ಪಾತ್ರಗಳನ್ನು ನಟಿ ಆಯ್ಕೆ ಮಾಡಿಕೊಳ್ತಿದ್ದಾರೆ. ‘ಸ್ಪಿರಿಟ್’ (Spirit) ಸಿನಿಮಾದಲ್ಲಿ ಪ್ರಭಾಸ್ ಡಬಲ್ ರೋಲ್‌ನಲ್ಲಿ ನಟಿಸುತ್ತಿದ್ದಾರೆ. ಹೀರೋ ಮತ್ತು ವಿಲನ್ ಎರಡು ಪಾತ್ರಕ್ಕೆ ಪ್ರಭಾಸ್ ಜೀವ ತುಂಬಲಿದ್ದಾರೆ. ಇದನ್ನೂ ಓದಿ:‘ಸ್ತ್ರೀ 2’ ಚಿತ್ರದಿಂದ ಗೆಲುವಿನ ಟ್ರ್ಯಾಕ್‌ಗೆ ಮರಳಿದ ಶ್ರದ್ಧಾ ಕಪೂರ್

    ವಿಲನ್ ಪ್ರಭಾಸ್ ಪಾತ್ರಕ್ಕೆ ತ್ರಿಷಾ ಜೋಡಿಯಾಗ್ತಿದ್ದಾರಂತೆ. ಅವರು ಕೂಡ ಲೇಡಿ ವಿಲನ್ ಆಗಿ ಮಿಂಚಲಿದ್ದಾರೆ ಎಂಬುದು ಸದ್ಯ ಹರಿದಾಡುತ್ತಿರುವ ಸುದ್ದಿ. ಈ ವಿಚಾರ ನಿಜನಾ? ಎಂಬುದನ್ನು ಚಿತ್ರತಂಡವೇ ಸ್ಪಷ್ಟನೆ ನೀಡಬೇಕಿದೆ. ಇದನ್ನೂ ಓದಿ:ಜೀವಂತ ಇದ್ದಾಗಲೇ ಶ್ರೇಯಸ್ ತಲ್ಪಾಡೆ ಸಾವಿನ ಸುದ್ದಿ ವೈರಲ್- ಮೌನ ಮುರಿದ ನಟ

    ಇನ್ನೂ ತ್ರಿಷಾರನ್ನು ಈಗಾಗಲೇ ‘ಅನಿಮಲ್’ (Animal) ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಭೇಟಿಯಾಗಿ ಸಿನಿಮಾದ ಕಥೆ ಹೇಳಿದ್ದಾರೆ. ಸಿನಿಮಾ ಕುರಿತು ಮಾತುಕತೆಯಾಗಿದ್ದು, ಸದ್ಯದಲ್ಲೇ ಚಿತ್ರತಂಡ ಈ ಕುರಿತು ಘೋಷಣೆ ಮಾಡಬೇಕಿದೆ. ಸದ್ಯ ‘ಸ್ಪಿರಿಟ್’ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ.

    ಪ್ರಭಾಸ್ ಮತ್ತು ತ್ರಿಷಾ ಇಬ್ಬರೂ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. `ದಿ ರಾಜಾ ಸಾಬ್’ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ ಜೊತೆ ಚಿತ್ರತಂಡ ಸೇರಿಕೊಳ್ಳಲಿದ್ದಾರೆ ಪ್ರಭಾಸ್. ಸದ್ಯ ಈ ಚಿತ್ರದ ಅಪ್‌ಡೇಟ್ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • ಹಾವೇರಿಯಲ್ಲಿ ಸ್ಪಿರಿಟ್ ಲಾರಿಯ ಟೈಯರ್ ಬ್ಲಾಸ್ಟ್ – ತಪ್ಪಿದ ದೊಡ್ಡ ದುರಂತ!

    ಹಾವೇರಿಯಲ್ಲಿ ಸ್ಪಿರಿಟ್ ಲಾರಿಯ ಟೈಯರ್ ಬ್ಲಾಸ್ಟ್ – ತಪ್ಪಿದ ದೊಡ್ಡ ದುರಂತ!

    ಹಾವೇರಿ: ಸ್ಪಿರಿಟ್ ತುಂಬಿದ ಲಾರಿಯ ಟೈಯರ್ ಬ್ಲಾಸ್ಟ್ (Lorry Spirit Tire Blast), ಲಾರಿಗೆ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಾಚರಣೆಯಿಂದ ದೊಡ್ಡ ದುರಂತವೊಂದು ತಪ್ಪಿರುವ ಘಟನೆ ಹಾವೇರಿಯ ತೋಟದಯಲ್ಲಾಪುರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ-48 (National Highway 48) ರಲ್ಲಿ ನಡೆದಿದೆ.

    ಸ್ಪಿರಿಟ್ ತುಂಬಿದ ಲಾರಿ ಬೆಳಗಾವಿಯಿಂದ ಬೆಂಗಳೂರು ಕಡೆ ಹೊರಟ್ಟಿತ್ತು. ಲಾರಿಯಲ್ಲಿ ಸುಮಾರು 24 ಲಕ್ಷ ರೂ. ಮೌಲ್ಯದ ವೈಟ್ ಸ್ಪಿರಿಟ್ ತುಂಬಿತ್ತು. ಇದನ್ನೂ ಓದಿ: ದರ್ಶನ್‌ ಬಳಿ 70 ಲಕ್ಷ ರೂ. ಪತ್ತೆ – ʻದಾಸʼನಿಗೆ ಕೊಲೆ ಆರೋಪದ ಜೊತೆಗೆ ಐಟಿ ಸಂಕಷ್ಟ!

    ಲಾರಿಯ ಟೈಯರ್ ಹೀಟ್‌ ಆಗಿದ್ದರಿಂದ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸಮಯಪ್ರಜ್ಞೆಯಿಂದ ಮುಂದಾಗುವ ದುರಂತ ತಪ್ಪಿಸಿದ್ದಾರೆ.

    ಹೆದ್ದಾರಿಯಲ್ಲಿ ಸ್ವಲ್ಪ ದೂರದಲ್ಲೇ ಎಲ್ಲಾ ವಾಹನಗಳನ್ನು ನಿಲ್ಲಿಸಿ, ಅಗ್ನಿಶಾಮಕ ದಳದ ಸಿಬ್ಬಂದಿ ಪೊಲೀಸರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರೇಣುಕಸ್ವಾಮಿ ಕೊಲೆಗೆ ಸಂಚು ರೂಪಿಸಿದ್ದೇ ಪವಿತ್ರಾಗೌಡ – ಹೊಸ ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?

  • ಡಾರ್ಲಿಂಗ್‌ ಪ್ರಭಾಸ್‌ ಜೊತೆ ರಶ್ಮಿಕಾ ಮಂದಣ್ಣ ರೊಮ್ಯಾನ್ಸ್

    ಡಾರ್ಲಿಂಗ್‌ ಪ್ರಭಾಸ್‌ ಜೊತೆ ರಶ್ಮಿಕಾ ಮಂದಣ್ಣ ರೊಮ್ಯಾನ್ಸ್

    ಶ್ಮಿಕಾ (Rashmika Mandanna) ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸಲಿದ್ದಾರಾ? ಹೌದು ಎನ್ನುತ್ತದೆ ಬಾಲಿವುಡ್ ಅಂಗಳ. ಕಾರಣ ಇದೆ. ಈಗಾಗಲೇ ‘ಅನಿಮಲ್’ (Animal) ಸಿನಿಮಾದಿಂದ ಭರ್ಜರಿ ಹೆಸರು ಮಾಡಿರುವ ಸಾನ್ವಿಗೆ ಅವಕಾಶ ಹುಡುಕಿಕೊಂಡು ಬರುತ್ತಿವೆ. ನಾಲ್ಕು ಕೋಟಿ ಸಂಭಾವನೆ ಪಡೆಯುತ್ತಿದ್ದರೂ ನಿರ್ಮಾಪಕರು ಈಕೆಯನ್ನು ಬಿಡುತ್ತಿಲ್ಲ. ಹಾಗಿದ್ದರೆ ಇನ್ಯಾವ ಸಿನಿಮಾಗೆ ರಶ್ಮಿಕಾಗೆ ಬುಲಾವ್ ಬಂದಿದೆ? ಯಾರು ಹೀರೋ? ಡಾರ್ಲಿಂಗ್‌ ಪ್ರಭಾಸ್ (Prabhas) ಮೊದಲ ಬಾರಿ ಜಂಟಿಯಾಗಲಿದ್ದಾರಾ ಶ್ರೀವಲ್ಲಿ? ಇಲ್ಲಿದೆ ಮಾಹಿತಿ.

    ರಶ್ಮಿಕಾ ಮಂದಣ್ಣ ಇದೀಗ ಬಹುಬೇಡಿಕೆಯ ನಟಿ, ಅವರನ್ನು ಹಿಡಿಯೋರು ಇಲ್ಲ. ‘ಅನಿಮಲ್’ ಸಿನಿಮಾದಿಂದ ಟಾಕ್ ಆಫ್ ದಿ ಇಂಡಿಯಾ ಆಗಿರುವ ಸಾನ್ವಿಗೆ ಒಂದರ ಹಿಂದೊಂದು ಅವಕಾಶ ಹುಡುಕಿಕೊಂಡು ಬರುತ್ತಿವೆ. ಆದರೆ ಡೇಟ್ ಸಿಗಬೇಕಲ್ಲವೇ? ಹೀಗಾಗಿಯೇ ಒಂದಲ್ಲ ಎರಡಲ್ಲ ಭರ್ತಿ 4 ಕೋಟಿ ಕೊಟ್ಟು ಬುಕ್ ಮಾಡುತ್ತಿದ್ದಾರೆ. ಆದರೆ ರಶ್ಮಿಕಾ ಮಾತ್ರ ನಾನು 4 ಕೋಟಿ ಸಂಭಾವನೆ ಪಡೆಯುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಎಲ್ಲವೂ ಇನ್‌ಕಮ್ ಟ್ಯಾಕ್ಸ್ ಮಹಿಮೆ. ಏನಾದರಾಗಲಿ ರಶ್ಮಿಕಾ ಮಾತ್ರ ಪ್ರಭಾಸ್ ಜೊತೆ ಹೆಜ್ಜೆ ಹಾಕಲು ಸಜ್ಜಾಗಿದ್ದಾರೆ. ಇದು ಬಾಲಿವುಡ್ ಮಾಹಿತಿ. ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನದ ‘ಸ್ಪಿರಿಟ್’ (Spirit Film) ಚಿತ್ರಕ್ಕೆ ರಶ್ಮಿಕಾ ಬುಕ್ ಆಗಿದ್ದಾರೆ. ಇದನ್ನೂ ಓದಿ:Exclusive: ತೆಲುಗಿನತ್ತ ಕನ್ನಡದ ನಟ- ಬಾಲಯ್ಯಗೆ ರಿಷಿ ವಿಲನ್

    ‘ಅನಿಮಲ್’ ಸಿನಿಮಾದಿಂದ ಸಂದೀಪ್ ಹಾಗೂ ರಶ್ಮಿಕಾ ಒಂದಾಗಿದ್ದಾರೆ. ಅಂದರೆ ಹತ್ತಿರವಾಗಿದ್ದಾರೆ. ಹೀಗಾಗಿಯೇ ಸಂದೀಪ್ ಹೊಸ ಚಿತ್ರಕ್ಕೆ ಕನ್ನಡದ ನಟಿ ರಶ್ಮಿಕಾ ನಾಯಕಿ ಎಂದೇ ಹೇಳಲಾಗುತ್ತಿದೆ. ಇದನ್ನು ಯಾರೂ ಅಧಿಕೃತವಾಗಿ ಹೇಳಿಲ್ಲ. ಅದು ನಿಜವಾದರೂ ಅಚ್ಚರಿ ಇಲ್ಲ. ಕಾರಣ ‘ಅನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಅಷ್ಟೊಂದು ಅದ್ಭುತವಾಗಿ ನಟಿಸಿದ್ದರು. ಜನರು ಮಾತ್ರ ಅಲ್ಲ. ರಶ್ಮಿಕಾ ನಿಜಕ್ಕೂ ಇಷ್ಟೊಂದು ಅದ್ಭುತವಾಗಿ ನಟಿಸುತ್ತಾರಾ ಎಂದು ಬಾಲಿವುಡ್ ಕೂಡ ಅಚ್ಚರಿ ಪಟ್ಟಿತ್ತು. ಅದನ್ನು ಸಾಬೀತು ಪಡಿಸಲು ಮತ್ತೆ ಅವಕಾಶ ಕೊಡುವ ಸಾಧ್ಯತೆ ಇದೆ. ಪ್ರಭಾಸ್‌ ಜೊತೆ ರಶ್ಮಿಕಾ ರೊಮ್ಯಾನ್ಸ್‌ ಮಾಡೋದ್ದಕ್ಕೆ ರೆಡಿಯಾಗಿದ್ದಾರೆ.

    ಎಲ್ಲಾ ಸೂಪರ್ ಸ್ಟಾರ್‌ಗಳ ಜೊತೆ ನಟಿಸಿರುವ ರಶ್ಮಿಕಾ ಈಗ ಮೊದಲ ಬಾರಿಗೆ ಡಾರ್ಲಿಂಗ್ ಪ್ರಭಾಸ್‌ಗೆ  ಕನ್ನಡದ ನಟಿ ಜೋಡಿಯಾಗುತ್ತಿದ್ದಾರೆ. ಇವರಿಬ್ಬರ ಕಾಂಬೋ ತೆರೆಯ ಮೇಲೆ ವರ್ಕ್ ಆಗುತ್ತಾ ಕಾಯಬೇಕಿದೆ.

  • ‘ಸಲಾರ್ 2’ ಚಿತ್ರಕ್ಕೂ ಮುನ್ನ ಖಾಕಿ ಧರಿಸಲಿದ್ದಾರೆ ಪ್ರಭಾಸ್

    ‘ಸಲಾರ್ 2’ ಚಿತ್ರಕ್ಕೂ ಮುನ್ನ ಖಾಕಿ ಧರಿಸಲಿದ್ದಾರೆ ಪ್ರಭಾಸ್

    ಗತ್ತಿನಾದ್ಯಂತ ಸಲಾರ್ (Salaar) ಸಿನಿಮಾ ತನ್ನ ಯಶಸ್ಸಿನ ಯಶೋಗಾಥೆಯನ್ನು ಮುಂದುವರೆಸಿದೆ. ಆರು ದಿನಕ್ಕೆ ಅಂದಾಜು ಐನೂರು ಕೋಟಿ ಕಲೆಕ್ಷನ್ ಮಾಡಿದೆ ಎಂದು ಸಿನಿ ಪಂಡಿತರ ಲೆಕ್ಕಾಚಾರ. ಒಂದು ಕಡೆದ ದಕ್ಷಿಣದ ಈ ಸಿನಿಮಾ ಜಗತ್ತನ್ನೇ ಗೆಲ್ಲಲು ಹೊರಟಿದ್ದರೆ, ಮತ್ತೊಂದು ಹಿಂದಿ ಸಿನಿಮಾ ಎನಿಮಲ್ ಕೂಡ ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡಿದೆ. ಹೀಗಾಗಿ ಪ್ರಭಾಸ್ (Prabhas) ಮೇಲೆ ಒತ್ತಡ ಹೆಚ್ಚಾಗಿದೆ.

    ಸಲಾರ್ ಭಾರೀ ಗೆಲುವಿನ ನಂತರ ಸಲಾರ್ 2 ಬಗ್ಗೆ ಈಗಾಗಲೇ ಅಭಿಮಾನಿಗಳು ಅಪ್ ಡೇಟ್ ಕೇಳುತ್ತಿದ್ದಾರೆ. ಆದರೆ, ಸಲಾರ್ ಮಧ್ಯಯೂ ಪ್ರಭಾಸ್ ಅನಿಮಲ್ ಸಿನಿಮಾದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy) ಅವರಿಗೆ ಡೇಟ್ ಕೊಟ್ಟಿದ್ದಾರೆ. ಈ ಚಿತ್ರಕ್ಕೆ ಸ್ಪಿರಿಟ್ (Spirit) ಎಂದು ಹೆಸರಿಡಲಾಗಿದೆ. ಒಂದು ಕಡೆ ಯಶಸ್ಸಿನ ಪ್ರಶಾಂತ್ ನೀಲ್ (Prashant Neel). ಮತ್ತೊಂದು ಕಡೆ ಎನಿಮಲ್ ಗೆಲ್ಲಿಸಿದ ಸಂದೀಪ್ ರೆಡ್ಡಿ. ಪ್ರಭಾಸ್ ಡೇಟ್ ಕೊಡೋದು ಯಾರಿಗೆ ಅನ್ನುವ ಚರ್ಚೆ ಕೂಡ ನಡೆದಿದೆ.

    ಈ ನಡುವೆ ಸಂದೀಪ್ ರೆಡ್ಡಿ ತಮ್ಮ ಸ್ಪಿರಿಟ್ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಹೊಸ ಅಪ್ ಡೇಟ್ ನೀಡಿದ್ದಾರೆ. ತಮ್ಮ ಸಿನಿಮಾದಲ್ಲಿ ಪ್ರಭಾಸ್ ಪೊಲೀಸ್ ಅಧಿಕಾರಿಯ ಪಾತ್ರ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಹಾಗಾಗಿ ಪೊಲೀಸ್ ವೇಷದಲ್ಲಿ ತಮ್ಮ ನೆಚ್ಚಿನ ನಟನ ಪಾತ್ರವನ್ನು ನೋಡಲು ಪ್ರಭಾಸ್ ಅಭಿಮಾನಿ ತುದಿಗಾಲಲ್ಲಿ ನಿಂತಿದ್ದಾರೆ.

     

    ಈ ವರ್ಷದ ಗೆಲುವಿನ ಸಿನಿಮಾಗಳಲ್ಲಿ ಅನಿಮಲ್ ಮತ್ತು ಸಲಾರ್ ಸಿನಿಮಾ ಸೇರಿವೆ. ಎರಡೂ ಸಿನಿಮಾಗಳು ಭರ್ಜರಿ ಗೆಲುವನ್ನೇ ಸಾಧಿಸಿವೆ. ಹೀಗಾಗಿ ಪ್ರಭಾಸ್ ಯಾರಿಗೆ ತಮ್ಮ ಮುಂದಿನ ಡೇಟ್ಸ್ ಕೊಡ್ತಾರೆ ಎನ್ನುವ ಕುತೂಹಲ ಮೂಡಿದೆ. ಮುಂದಿನ ದಿನಗಳಲ್ಲಿ ಈ ಎಲ್ಲದಕ್ಕೂ ಉತ್ತರ ಸಿಗಬಹುದು.

  • ಹುಟ್ಟುಹಬ್ಬಕ್ಕೆ ಮೊದಲೇ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಪ್ರಭಾಸ್

    ಹುಟ್ಟುಹಬ್ಬಕ್ಕೆ ಮೊದಲೇ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಪ್ರಭಾಸ್

    ಚೆನ್ನೈ: ಟಾಲಿವುಡ್ ನಟ ಪ್ರಭಾಸ್ ತಮ್ಮ 25 ನೇ ಚಿತ್ರಕ್ಕೆ ಅರ್ಜುನ್ ರೆಡ್ಡಿ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ.

     

    View this post on Instagram

     

    A post shared by Prabhas (@actorprabhas)

    ಪ್ರಭಾಸ್ ಅ.23 ರಂದು 42 ನೇ ವಸಂತಕ್ಕೆ ಕಾಲಿಡುತ್ತಿದ್ದು, ಇನ್ನೂ ಹುಟ್ಟುಹಬ್ಬ ಹತ್ತಿರ ಇರುವಾಗಲೇ ಅಭಿಮಾನಿಗಳಿಗೆ ತಮ್ಮ 25ನೇ ಸಿನಿಮಾದ ನಿರ್ದೇಶಕರ ಬಗ್ಗೆ ಹೇಳಿದ್ದಾರೆ. ಭೂಷಣ್ ಕುಮಾರ್ ಅವರ ಭದ್ರಕಾಳಿ ಪಿಕ್ಚರ್ಸ್ ನಲ್ಲಿ ನಿರ್ಮಾಣವಾಗುತ್ತಿರುವ ‘ಸ್ಪಿರಿಟ್’ ಚಿತ್ರದಲ್ಲಿ ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರವನ್ನು ಸಂದೀಪ್ ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ:  ಕೊನೆ ಕ್ಷಣದಲ್ಲಿ ಅಜಯ್ ದೇವ್‍ಗನ್ ಜೊತೆ ಶೂಟ್ ಬೇಡವೆಂದ ನಟ ಶಾರೂಖ್

    ಈ ಕುರಿತು ಪ್ರಭಾಸ್ ಇನ್‍ಸ್ಟಾಗ್ರಾಮ್ ನಲ್ಲಿ, ‘ಸ್ಪಿರಿಟ್’ ನೊಂದಿಗೆ ನನ್ನ ಪ್ರಯಾಣವನ್ನು ಆರಂಭಿಸಿದ್ದೇನೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮತ್ತು ಭೂಷಣ್ ಕುಮಾರ್ ಅವರ ಭದ್ರಕಾಳಿ ಪಿಕ್ಚರ್ಸ್ ನಿರ್ಮಾಣ #Prabhas25SandeepReddyVanga ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

    ತಮ್ಮ ಹೊಸ ಚಿತ್ರ ಕುರಿತು ಮಾತನಾಡಿದ ಪ್ರಭಾಸ್, ಸ್ಪಿರಿಟ್ ಕಥೆ ‘ಅದ್ಭುತ’ವಾಗಿದೆ. ಚಿತ್ರದ ಶೂಟಿಂಗ್ ಆರಂಭಿಸಲು ಕಾಯಲು ಸಾಧ್ಯವಿಲ್ಲ. ಭೂಷಣ್ ಕುಮಾರ್ ಜೊತೆ ಕೆಲಸ ಮಾಡುವುದು ಯಾವಾಗಲೂ ಸುಲಭ ಮತ್ತು ಸಂತೋಷ ನೀಡುತ್ತದೆ. ಅವರು ನಮ್ಮಲ್ಲಿರುವ ಅತ್ಯುತ್ತಮ ನಿರ್ಮಾಪಕರಲ್ಲಿ ಒಬ್ಬರು, ನಾನು ಅವರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದೇನೆ. ಸಂದೀಪ್ ಅವರ ಜೊತೆ ಕೆಲಸ ಮಾಡಬೇಕೆಂದು ಎಲ್ಲರಿಗೂ ಇಷ್ಟವಿರುತ್ತೆ. ಈಗ ಸ್ಪಿರಿಟ್‍ನೊಂದಿಗೆ, ಅಂತಹ ಪ್ರತಿಭೆ ಜೊತೆಗೆ ಅಭಿನಯಿಸುವ ಅವಕಾಶವನ್ನು ಪಡೆದುಕೊಂಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ:  ನವರಾತ್ರಿಯ ಮೊದಲದಿನ ಶೈಲಪುತ್ರಿಯ ಆರಾಧನೆ

    ಪ್ರಭಾಸ್ ಬಹುನಿರೀಕ್ಷಿತ ರಾಧೆ ಶ್ಯಾಮ್, ಆದಿಪುರುಷ ಮತ್ತು ಸಲಾರ್ ಸಿನಿಮಾಗಳ ಸಾಲಿಗೆ ಈ ಸಿನಿಮಾ ಸಹ ಸೇರಿಕೊಂಡಿದೆ. ‘ಸ್ಪಿರಿಟ್’ ವಿಶ್ವಾದ್ಯಂತ ಹಿಂದಿ, ತೆಲುಗು, ತಮಿಳು, ಮಲಯಾಳಂ, ಕನ್ನಡ, ಜಪಾನೀಸ್, ಚೈನೀಸ್ ಮತ್ತು ಕೊರಿಯನ್ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಈ ಚಿತ್ರದ ಇತರ ಪಾತ್ರಗಳ ಬಗ್ಗೆ ಮತ್ತು ನಟರ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿಯನ್ನು ನೀಡಿಲ್ಲ.