Tag: ಸ್ಪೀಕರ್

  • ಸಿಎಂ ಆಗಿರೋವಾಗ ನೀವಿರೋದು ನನ್ನ ಜೀವನದ ಅವಿಸ್ಮರಣೀಯ ಕ್ಷಣ: ಸ್ಪೀಕರ್ ಗೆ ಎಚ್‍ಡಿಕೆ ಅಭಿನಂದನೆ

    ಸಿಎಂ ಆಗಿರೋವಾಗ ನೀವಿರೋದು ನನ್ನ ಜೀವನದ ಅವಿಸ್ಮರಣೀಯ ಕ್ಷಣ: ಸ್ಪೀಕರ್ ಗೆ ಎಚ್‍ಡಿಕೆ ಅಭಿನಂದನೆ

    ಬೆಂಗಳೂರು: ನೂತನ ಸ್ಪೀಕರ್ ಆಗಿ ಆಯ್ಕೆಯಾದ ಕೆ.ಆರ್.ರಮೇಶ್‍ಕುಮಾರ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

    ಅವಿರೋಧವಾಗಿ ಆಯ್ಕೆಯಾದ ಬಳಿಕ ಸದನದಲ್ಲಿ ಮಾತನಾಡಿದ ಅವರು, ಐದು ವರ್ಷಗಳ ನಡೆಸುವ ನಮ್ಮ ಸರ್ಕಾರಕ್ಕೆ ಸೂಕ್ತ ಮಾರ್ಗವನ್ನು ತೋರಿಸಬೇಕು. ನಿಮ್ಮ ಅನುಭವ ಎಲ್ಲರಿಗೂ ಮಾದರಿಯಾಗಿರಬೇಕು. ಇಂದು ನೀವು ನಮ್ಮೊಂದಿಗೆ ನೀವಿರುವುದು ನಮ್ಮೆಲ್ಲರ ಸೌಭಾಗ್ಯ. ವಿರೋಧ ಪಕ್ಷದ ನಾಯಕರು ಸಹ ನಿಮ್ಮನ್ನು ಸರ್ವಾನುಮತದಿಂದ ಆಯ್ಕೆ ಮಾಡಿದಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ ಎಂದರು.

    1994ರಲ್ಲಿ ನೀವು ಸ್ಪೀಕರ್ ಆಗಿದ್ದಾಗ ನನ್ನ ಸ್ಥಾನದಲ್ಲಿ ನಮ್ಮ ತಂದೆಯವರಾದ ದೇವೇಗೌಡರು ಇದ್ದರು. ಇಂದು ಕಾಕತಾಳೀಯವಾಗಿ ಆ ಸ್ಥಾನದಲ್ಲಿ ನಾನಿದ್ದೇನೆ. ಹಾಗಾಗಿ ಇದು ನನ್ನ ಜೀವನದ ಅವಿಸ್ಮರಣೀಯ ಕ್ಷಣ ಅಂತಾ ಬಣ್ಣಿಸಿದ್ರು.

    ಇದೇ ವೇಳೆ ಮೈಸೂರು ರಾಜರ ಆಳ್ವಿಕೆಯನ್ನು ಮೆಲಕು ಹಾಕಿಕೊಂಡ ಎಚ್‍ಡಿಕೆ ದೇಶದಲ್ಲಿಯೇ ಮೈಸೂರು ಆಳ್ವಿಕೆಗೆ ಹೆಸರು ವಾಸಿಯಾಗಿದೆ. ಸದನದ ಘನತೆ ಗೌರವವನ್ನು ಎತ್ತಿ ಹಿಡಿಯುವುದು ನಮ್ಮ ಕರ್ತವ್ಯ ಅಂತಾ ಹೇಳಿದ್ರು.

    ವಿರೋಧ ಪಕ್ಷದ ನಾಯಕರಾದ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ನೀವು ಸ್ಪೀಕರ್ ಆಗಿ ಆಯ್ಕೆಯಾಗಿರುವುದು ನಮ್ಮಲ್ಲಿ ಸಂಭ್ರಮ ಮನೆ ಮಾಡಿದೆ. ಸ್ಪೀಕರ್ ಸ್ಥಾನ ಅತಿ ದೊಡ್ಡ ಸ್ಥಾನ ಆಗಿರುವದರಿಂದ ನಮ್ಮ ಅಭ್ಯರ್ಥಿ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ. 1994 ರಿಂದ 99ರಲ್ಲಿಯೂ ನೀವು ಸ್ಪೀಕರ್ ಆಗಿ ಕೆಲಸ ಮಾಡಿರುವುದನ್ನು ನಾವು ನೋಡಿದ್ದೇವೆ. ನಿಮಗೆ ಪಕ್ಷದ ಎಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಅಂತಾ ತಿಳಿಸಿದ್ರು.

  • ವಿಶ್ವಾಸಮತಕ್ಕೂ ಮುನ್ನ ಸ್ಪೀಕರ್ ಆಯ್ಕೆ- ಕೈ, ದಳಕ್ಕೆ ತಲೆನೋವು ತಂದ ಬಿಜೆಪಿ ಸ್ಪರ್ಧೆ

    ವಿಶ್ವಾಸಮತಕ್ಕೂ ಮುನ್ನ ಸ್ಪೀಕರ್ ಆಯ್ಕೆ- ಕೈ, ದಳಕ್ಕೆ ತಲೆನೋವು ತಂದ ಬಿಜೆಪಿ ಸ್ಪರ್ಧೆ

    ಬೆಂಗಳೂರು: ವಿಶ್ವಾಸಮತ ಯಾಚನೆಗೂ ಮುನ್ನ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹಿರಿಯ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ನೂತನ ಸ್ಪೀಕರ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

    ಈ ಸ್ಥಾನಕ್ಕೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುರೇಶ್ ಕುಮಾರ್ ಅಭ್ಯರ್ಥಿಯಾಗಿ ಅರ್ಜಿ ಸಲ್ಲಿಸಿದ್ದು, ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ತಲೆ ನೋವು ತಂದಿದೆ. ಮಧ್ಯಾಹ್ನ ಸುಮಾರು 12.15ಕ್ಕೆ ಸದನ ಆರಂಭವಾಗಲಿದ್ದು, ಸದನದ ನೇತೃತ್ವವನ್ನು ಹಂಗಾಮಿ ಸ್ಪೀಕರ್ ಕೆ.ಜೆ ಬೋಪಯ್ಯ ವಹಿಸಿಕೊಳ್ಳಲಿದ್ದಾರೆ.

    ಇಬ್ಬರು ಸದಸ್ಯರು ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವುದರಿಂದ ಇಬ್ಬರಲ್ಲಿ ಒಬ್ಬರ ನಾಮಪತ್ರ ವಾಪಾಸ್ ಗೆ ಕಾಲಾವಕಾಶ ನೀಡುವ ಸಾಧ್ಯತೆ ಇದೆ. ಇಬ್ಬರೂ ವಾಪಸ್ ಪಡೆಯದಿದ್ದರೆ, ಸದನದಲ್ಲಿ ಸ್ಪೀಕರ್ ಆಯ್ಕೆ ಸಂಬಂಧ ಚುನಾವಣೆ ನಡೆಯಲಿದೆ.

    ಸದನದ ಸದಸ್ಯರು ಎದ್ದು ನಿಲ್ಲುವ ಮೂಲಕ ಅಥವಾ ಕೈ ಎತ್ತುವ ಮೂಲಕ ಸ್ಪೀಕರ್ ಚುನಾವಣೆಯಲ್ಲಿ ಸ್ಪೀಕರ್ ಆಯ್ಕೆಯಾಗಿರುತ್ತಾರೆ.

  • ಸ್ಪೀಕರ್ ಚುನಾವಣೆ: ಬಿಜೆಪಿಯಿಂದ ಸುರೇಶ್ ಕುಮಾರ್ ಕಣಕ್ಕೆ

    ಸ್ಪೀಕರ್ ಚುನಾವಣೆ: ಬಿಜೆಪಿಯಿಂದ ಸುರೇಶ್ ಕುಮಾರ್ ಕಣಕ್ಕೆ

    ಬೆಂಗಳೂರು: ವಿಧಾನಸಭಾ ಸ್ಪೀಕರ್ ಚುನಾವಣೆಗೆ ಕಾಂಗ್ರೆಸ್ ನಿಂದ ರಮೇಶ್ ಕುಮಾರ್ ಕಣದಲ್ಲಿದ್ದರೆ, ಬಿಜೆಪಿ ಸುರೇಶ್ ಕುಮಾರ್ ಅವರನ್ನು ನಿಲ್ಲಿಸಿದೆ.

    ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೊಂಡ ಹಿನ್ನೆಲೆಯಲ್ಲಿ ಸಂಖ್ಯಾಬಲ ಇರುವ ಕಾರಣ ರಮೇಶ್ ಕುಮಾರ್ ಅವಿರೋಧವಾಗಿ ಆಯ್ಕೆ ಆಗಬಹುದು. ಬಿಜೆಪಿ ಸದನದಲ್ಲಿ ಬಹುಮತ ಸಾಬೀತು ಪಡಿಸದ ಕಾರಣ ಸ್ಪೀಕರ್ ಹುದ್ದೆಗೆ ಸ್ಪರ್ಧಿಸುತ್ತಿಲ್ಲ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಕೊನೆ ಕ್ಷಣದಲ್ಲಿ ಬಿಜೆಪಿ ಸುರೇಶ್ ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದ್ದು, ಕುತೂಹಲ ಹೆಚ್ಚಾಗಿದೆ.

    ಗುರುವಾರ ಮಧ್ಯಾಹ್ನ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶ ಇರುವ ಕಾರಣ ಸುರೇಶ್ ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.

    ನಾಳೆ ನಡೆಯಲಿರುವ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಮತ್ತಿತರ ಹಿರಿಯರ ಸೂಚನೆಯ ಮೇರೆಗೆ ಅಭ್ಯರ್ಥಿಯಾಗಿ ನಾನು ಇಂದು ನಾಮಪತ್ರ ಸಲ್ಲಿಸಿದೆ. ನಾಮಪತ್ರಕ್ಕೆ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಹಾಗೂ ಮಲ್ಲೇಶ್ವರ ಕ್ಷೇತ್ರದ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ರವರು ಸಹಿ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

     

  • ಸ್ಪೀಕರ್ ಸ್ಥಾನ ನಮಗೆ ಬೇಕೆಂದು ಜೆಡಿಎಸ್ ಪಟ್ಟು!

    ಸ್ಪೀಕರ್ ಸ್ಥಾನ ನಮಗೆ ಬೇಕೆಂದು ಜೆಡಿಎಸ್ ಪಟ್ಟು!

    ಬೆಂಗಳೂರು: ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಸ್ಥಾನಕ್ಕೆ ಜೆಡಿಎಸ್ ಬೇಡಿಕೆ ಇಟ್ಟಿದೆ. ಮುಂದಿನ ದಿನಗಳಲ್ಲಿ ಸದನದಲ್ಲಿ ಏನಾದರು ಗೊಂದಲ ಆದರೆ ಮೈತ್ರಿ ಪಕ್ಷದಲ್ಲಿ ವ್ಯತ್ಯಾಸಗಳು ಕಂಡು ಬಂದರೆ ನೆರವಿಗೆ ಇರಲಿ ಎಂಬ ಕಾರಣಕ್ಕೆ ಸ್ಪೀಕರ್ ಸ್ಥಾನ ತಮಗಿರಲಿ ಎಂದು ಜೆಡಿಎಸ್ ಪಟ್ಟು ಹಿಡಿದಿದೆ ಎನ್ನಲಾಗಿದೆ.

    ಸಂಪುಟ ಸ್ಥಾನ ಹಂಚಿಕೆ ಗೊಂದಲದಲ್ಲಿರುವ ಕಾಂಗ್ರೆಸ್ ಗೆ ಸ್ಪೀಕರ್ ಸ್ಥಾನ ಬಿಟ್ಟುಕೊಡಬೇಕೇ ಅಥವಾ ಬೇಡವೇ ಎನ್ನುವ ಹೊಸ ಗೊಂದಲ ಈಗ ಆರಂಭವಾಗಿದೆ.

    ಇನ್ನು ಎರಡು ದಿನದ ಒಳಗೆ ನೂತನ ಸ್ಪೀಕರ್ ಪ್ರಮಾಣವಚನ ನಡೆಯಬೇಕಿರುವುದರಿಂದ ಆದಷ್ಟು ಬೇಗ ಸ್ಪೀಕರ್ ಗೊಂದಲ ಬಗೆಹರಿಯಬೇಕಿದೆ. ಆದರೆ ಈಗ ಸಂಪುಟ ಸ್ಥಾನ ಹಂಚಿಕೆ ಗೊಂದಲದಲ್ಲಿರುವ ಕಾಂಗ್ರೆಸ್ಸಿಗೆ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

    ಜೆಡಿಎಸ್ ಸ್ಪೀಕರ್ ಹುದ್ದೆ ನಮ್ಮದೆ ಎಂದು ಶಾಸಕರಲ್ಲಿ ಹಿರಿಯರಾದ ಹಾಗೂ ಅನುಭವಿಗಳಾದವರ ಹುಡುಕಾಟದಲ್ಲಿ ತೊಡಗಿದೆ.

    ಸರ್ಕಾರ ರಚನೆಯಾದಾಗ 78 ಶಾಸಕರನ್ನು ಹೊಂದಿರುವ ಕಾಂಗ್ರೆಸ್‍ಗೆ ಸ್ಪೀಕರ್ ಸ್ಥಾನ ಸಿಗಬಹುದು ಎನ್ನುವ ಮಾತು ಕೇಳಿ ಬಂದಿತ್ತು. ಸದನದ ಹಿರಿಯ ಸದಸ್ಯರಾದ ಆರ್.ವಿ.ದೇಶಪಾಂಡೆ ಮತ್ತು ರಮೇಶ್ ಕುಮಾರ್ ಹೆಸರು ಮುಂಚೂಣಿಯಲ್ಲಿದೆ. ಈಗ ಜೆಡಿಎಸ್ ಸ್ಪೀಕರ್ ಸ್ಥಾನಕ್ಕೆ ಪಟ್ಟು ಹಿಡಿದ ಕಾರಣ ಮುಂದೆ ಯಾರು ಸ್ಪೀಕರ್ ಆಗಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ.ಇದನ್ನೂ ಓದಿ:ಮೈತ್ರಿ ಸರ್ಕಾರ ರಚನೆಗೂ ಮುನ್ನವೇ ಕಾಂಗ್ರೆಸ್- ಜೆಡಿಎಸ್‍ನಲ್ಲಿ ಭಿನ್ನರಾಗ!

  • ಸ್ಪೀಕರ್ ಸ್ಥಾನಕ್ಕಾಗಿ ಕಾಂಗ್ರೆಸ್, ಜೆಡಿಎಸ್ ಮಧ್ಯೆ ಫೈಟ್!

    ಸ್ಪೀಕರ್ ಸ್ಥಾನಕ್ಕಾಗಿ ಕಾಂಗ್ರೆಸ್, ಜೆಡಿಎಸ್ ಮಧ್ಯೆ ಫೈಟ್!

    ಬೆಂಗಳೂರು: ಸಂಪುಟ ರಚನೆ ವಿಚಾರವೇ ಇನ್ನೂ ಬಗೆಹರಿದಿಲ್ಲ. ಇದರ ಮಧ್ಯೆ ಸ್ಪೀಕರ್ ಸ್ಥಾನಕ್ಕಾಗಿ ದೋಸ್ತಿ ಪಕ್ಷಗಳ ನಡುವೆ ಫೈಟ್ ನಡೆದಿದೆ.

    ಸಿಎಂ ಸ್ಥಾನವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದೀವಿ. ಸ್ಪೀಕರ್ ಸ್ಥಾನವನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಿ ಎಂದು ಕೈ ನಾಯಕರು ಕೇಳುತ್ತಿದ್ದಾರೆ. ಆದ್ರೆ ಜೆಡಿಎಸ್ ನವರು ಅದೂ ಕೂಡ ನಮಗೇ ಬೇಕು ಅಂತಾ ಬಿಗಿಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಹಗ್ಗಜಗ್ಗಾಟ ಮುಂದುವರೆದಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

    ಕಾಂಗ್ರೆಸ್ ಪಕ್ಷ, ಅನುಭವಿ ರಾಜಕಾರಣಿ ರಮೇಶ್ ಕುಮಾರ್ ಅವರನ್ನು ಸ್ಪೀಕರ್ ಸ್ಥಾನದಲ್ಲಿ ಕೂರಿಸಲು ಬಯಸುತ್ತಿದೆ ಎನ್ನಲಾಗಿದೆ. ಅತ್ತ ಜೆಡಿಎಸ್ ಕೂಡ ಸಜ್ಜನ ರಾಜಕಾರಣಿ ಎಟಿ ರಾಮಸ್ವಾಮಿಯವರನ್ನ ಸಭಾಧ್ಯಕ್ಷರನ್ನು ಮಾಡಲು ಬಯಸುತ್ತಿದೆ ಎನ್ನಲಾಗಿದೆ. ಇದನ್ನೂ ಓದಿ: ಸರ್ಕಾರ ರಚನೆಗೆ ಮುನ್ನವೇ ಸಂಪುಟ ಸಂಕಟ – ಅಧಿಕಾರ ಹಂಚಿಕೆಯಲ್ಲಿ ಇನ್ನೂ ಮೂಡಿಲ್ಲ ಒಮ್ಮತ!

    ಒಂದು ವೇಳೆ ಭವಿಷ್ಯದಲ್ಲಿ ದೋಸ್ತಿಗಳ ನಡುವೆ ಬಿರುಕು ಉಂಟಾದ್ರೆ, ಆಗ ಸದನದಲ್ಲಿ ಮಹತ್ವದ ಪಾತ್ರ ವಹಿಸೋದು ಸ್ಪೀಕರ್ ಅವರೇ. ಹೀಗಾಗಿ ಎರಡೂ ಪಕ್ಷಗಳು ಈ ಮಹ್ವತದ ಸ್ಥಾನದ ಮೇಲೆ ಕಣ್ಣಿಟ್ಟಿವೆ. ಇದನ್ನೂ ಓದಿ: ದೋಸ್ತಿಗಳಿಗೆ ಆಪರೇಷನ್ ಕಮಲದ ಭೀತಿ – ಇನ್ನೂ ನಾಲ್ಕು ದಿನ ರೆಸಾರ್ಟ್ ನಲ್ಲೇ ಇರಲಿದ್ದಾರೆ ಶಾಸಕರು!

  • ವಿಕಲಚೇತನರಿಗೆ ಟ್ರೈಸಿಕಲ್ ವಿತರಣೆ ಮಾಡುವ ಕಾರ್ಯವನ್ನು ಅರ್ಧದಲ್ಲೇ ಕೈಬಿಟ್ಟ ಸ್ಪೀಕರ್!

    ವಿಕಲಚೇತನರಿಗೆ ಟ್ರೈಸಿಕಲ್ ವಿತರಣೆ ಮಾಡುವ ಕಾರ್ಯವನ್ನು ಅರ್ಧದಲ್ಲೇ ಕೈಬಿಟ್ಟ ಸ್ಪೀಕರ್!

    ಹಾವೇರಿ: ಸ್ಪೀಕರ್ ಕೆ.ಬಿ ಕೋಳಿವಾಡ ಒಂದಲ್ಲಾ ಒಂದು ವಿವಾದದಲ್ಲಿ ಸುದ್ದಿಯಾಗುತ್ತಾರೆ. ಮೊನ್ನೆ-ಮೊನ್ನೆಯಷ್ಟೇ ವಿಧಾನಸೌಧದ ವಜ್ರಮಹೋತ್ಸವದ ಸಾಕ್ಷ್ಯಚಿತ್ರ ನಿರ್ಮಾಣಕ್ಕಾಗಿ ಆತುರದ ನಿರ್ಧಾರ ತೆಗೆದುಕೊಂಡಿದ್ದರು. ಈಗ ರಾಣೇಬೆನ್ನೂರು ಕ್ಷೇತ್ರದಲ್ಲೂ ಒಂದು ಎಡವಟ್ಟು ಮಾಡಿದ್ದಾರೆ.

    ಸ್ಪೀಕರ್ ಕೆ.ಬಿ ಕೋಳಿವಾಡ ಅವರು ಮುಖ್ಯಮಂತ್ರಿಗಳಿಂದ ಶಹಾಬ್ಬಾಸ್ ಗಿರಿ ಪಡೆಯೋಕೆ ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ. ನವಂಬರ್ 5 ರಂದು ಕೋಳಿವಾಡ ಅವರ ಜನ್ಮದಿನ ಇತ್ತು. ಅಲ್ಲದೇ ಅವತ್ತು ಹಾವೇರಿಯ ಅವರ ಕ್ಷೇತ್ರ ರಾಣೇಬೆನ್ನೂರಿನಲ್ಲಿ ಸರ್ಕಾರದ ವಿವಿಧ ಕಾಮಗಾರಿಗಳಿಗೆ ಚಾಲನೆ ಕೊಡೋಕೆ ಸಿಎಂ ಸಾಹೇಬ್ರು ಬಂದಿದ್ದರು.

    ಈ ವೇಳೆ ಮುಖ್ಯಮಂತ್ರಿಗಳಿಂದ ಭೇಶ್ ಅನ್ನಿಸಿಕೊಳ್ಳೋಕೆ ಸ್ಪೀಕರ್ ಸಾಹೇಬ್ರು ವಿಕಲಚೇತನರಿಗೆ ಟ್ರೈಸಿಕಲ್ ವಿತರಣೆ ಮಾಡುವ ಕಾರ್ಯ ಹಮ್ಮಿಕೊಂಡಿದ್ದರು. ಇದಕ್ಕಾಗಿ 125 ಟ್ರೈಸಿಕಲ್ ಗಳನ್ನು ನಗರದ ಮೈದಾನಕ್ಕೆ ತಂದು ನಿಲ್ಲಿಸಿದ್ದರು. ಸಾಂಕೇತಿಕವಾಗಿ ಸಿಎಂ ಕಡೆಯಿಂದ ಒಂದಿಬ್ಬರಿಗೆ ಟ್ರೈಸಿಕಲ್ ಕಿ ಕೊಡಿಸಿದ್ದರು. ಅದು ಬಿಟ್ಟರೆ ಇಲ್ಲಿವರೆಗೂ ಯಾರಿಗೂ ಟ್ರೈಸಿಕಲ್ ವಿತರಿಸಿಲ್ಲ. 123 ಟ್ರೈಸಿಕಲ್ ಗಳು ಬಿಸಿಲಲ್ಲೇ ನಿಂತಿವೆ.

    ವಿಧಾನಸೌಧ ವಜ್ರಮಹೋತ್ಸವ ವೇಳೆ ಸಾಕ್ಷ್ಯಚಿತ್ರದ ನಿರ್ಮಾಣಕ್ಕೆ ಆತುರಾತುರ ನಿರ್ಧಾರ ಕೈಗೊಂಡಿದ್ದ ಸ್ಪೀಕರ್ ಸಾಹೇಬ್ರು ವಿಕಲಚೇತನರಿಗೆ ಟ್ರೈಸಿಕಲ್ ವಿತರಣೆ ಮಾಡುವ ಕಾಳಜಿ ತೋರಿಸುತ್ತಿಲ್ಲ. ಇಲ್ಲಿವರೆಗೂ ಟ್ರೈಸಿಕಲ್ ವಿತರಣೆ ಆಗಿವೆಯೋ ಇಲ್ವೋ ಎಂದು ವಿಚಾರಿಸುವ ಸೌಜನ್ಯವೂ ತೋರಿಸಿಲ್ಲ. ಇದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

     

     

  • ನಮ್ಮ ವಿಧಾನಸಭೆ ಸ್ಪೀಕರ್ ಸಿಕ್ಕಾಪಟ್ಟೆ ಕಾಸ್ಟ್ಲಿ: ಆ ಕಾಸ್ಟ್ಲಿ ವಸ್ತುಗಳ ಬೆಲೆ ಕೇಳಿದ್ರೆ ನಿಮ್ಗೆ ಶಾಕ್ ಆಗುತ್ತೆ!

    ನಮ್ಮ ವಿಧಾನಸಭೆ ಸ್ಪೀಕರ್ ಸಿಕ್ಕಾಪಟ್ಟೆ ಕಾಸ್ಟ್ಲಿ: ಆ ಕಾಸ್ಟ್ಲಿ ವಸ್ತುಗಳ ಬೆಲೆ ಕೇಳಿದ್ರೆ ನಿಮ್ಗೆ ಶಾಕ್ ಆಗುತ್ತೆ!

    ಬೆಂಗಳೂರು: ವಿಧಾನಸಭೆಯ ಸ್ಪೀಕರ್ ಕೋಳಿವಾಡ ಅವರು ವಿಧಾನ ಸೌಧದ ತಮ್ಮ ಕೊಠಡಿಯನ್ನ ನವೀಕರಣ ಬರೋಬ್ಬರಿ 75 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಮಾಡಿದ್ದಾರೆ.

    ಹೌದು. ಬರಗಾಲದಲ್ಲೂ ಇಂತಹ ಖರ್ಚುಬೇಕಿತ್ತಾ ಅಂತ ವಿರೋಧಗಳು ಬಂದಿದ್ದರೂ ತಮ್ಮ ನಿಲುವನ್ನು ಸ್ಪೀಕರ್ ಸಮರ್ಥನೆ ಮಾಡಿಕೊಂಡಿದ್ದರು. ಆದರೆ ಈಗ ನಮ್ಮ ಸ್ಪೀಕರ್ ಅವರು ನವೀಕರಣಕ್ಕೆ ಎಷ್ಟು ಹಣವನ್ನು ಖರ್ಚು ಮಾಡಿದ್ದಾರೆ ಎನ್ನುವುವುದು ಮಾಹಿತಿ ಹಕ್ಕಿನ ಅಡಿ ಬೆಳಕಿಗೆ ಬಂದಿದೆ.

    ಸುಮಾರು 75. ಲಕ್ಷ ರೂ. ವೆಚ್ಚದಲ್ಲಿ ನಡೆದ ನವೀಕರಣದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹೈಟೆಕ್ ವಸ್ತುಗಳನ್ನ ಸ್ಪೀಕರ್ ಕೊಠಡಿಗೆ ಹಾಕಲಾಗಿದೆ.

    ಯಾವುದಕ್ಕೆ ಎಷ್ಟು ವೆಚ್ಚ?
    * ಸ್ಪೀಕರ್ ಕುಳಿತುಕೊಳ್ಳೊಕೆ ಸಿಂಗಲ್ ಲೆದರ್ ಛೇರ್ – 1.5 ಲಕ್ಷ ರೂ.
    * ತ್ರಿಬಲ್ ಸೋಫಾ ಸೆಟ್ – 4 ಲಕ್ಷ. ರೂ.
    * ಸ್ಪೀಕರ್ ರೂಂ ನಲ್ಲಿ ಕಾಫಿ ಕುಡಿಯೋ ಟೇಬಲ್ – 35 ಸಾವಿರ ರೂ.
    * ಸ್ಪೀಕರ್ ಮೀಟಿಂಗ್ ಮಾಡೋಕೆ ಬಳಸೊ ಟೇಬಲ್ ಗೆ – 5 ಲಕ್ಷ ರೂ., ವಿಸಿಟರ್ ಚೇರ್ ಗೆ 4.5 ಲಕ್ಷ ರೂ.
    * ಬುಕ್ ಸ್ಟೋರ್ ಮಾಡೋಕೆ ಬುಕ್ ಸ್ಟೋರೇಜ್ ಗೆ 2.5 ಲಕ್ಷ. ರೂ.
    * ಡಬಲ್ ಕಾಟ್ ಮ್ಯಾಟ್ರಸ್ ಗೆ -1.75 ಲಕ್ಷ. ರೂ.
    * ಸೈಡ್ ಟೇಬಲ್, ಎಕ್ಸಿಕ್ಯೂಟೀವ್ ಟೇಬಲ್, ವಿವಿಧ ಮಾದರಿಯ ಟೇಬಲ್ ಗೆ 5 ಲಕ್ಷ ರೂ.

    ಗುತ್ತಿಗೆಯಲ್ಲಿ ಅಕ್ರಮದ ವಾಸನೆ: ಸ್ಪೀಕರ್ ಕೋಳಿವಾಡರ ಕಾಸ್ಟ್ಲಿ ದುನಿಯಾ ಒಂದು ಕಡೆಯಾದ್ರೆ ಮತ್ತೊಂದು ಕಡೆ ಈ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಅಕ್ರಮ ಅಂತಾ ಲೋಕೋಪಯೋಗಿ ಇಲಾಖೆಯನ್ನ ಬಿಟ್ಟು ಸ್ವತಃ ಸ್ಪೀಕರ್ ಕಚೇರಿಯವರೇ ಟೆಂಡರ್ ಕರೆದಿದ್ರು. ಗುತ್ತಿಗೆಯನ್ನ ರಿಯಾಜ್ ಅಹಮದ್ ಅನ್ನೋರಿಗೆ ನೀಡಲಾಗಿತ್ತು.

    ಅಸಲಿಗೆ ಈ ರಿಯಾಜ್ ಅಹಮದ್ ಕೇವಲ ಎಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದಾರೆ. ನಿಯಮದ ಪ್ರಕಾರ ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ಗೆ ಸಿವಿಲ್ ಕಾಮಗಾರಿ ನಿಡುವ ಹಾಗಿಲ್ಲ. ಆದ್ರೆ ಶಾಸಕರ ಭವನದ ಅಧಿಕಾರಿ ಮೊಹಮದ್ ಗೌಸ್ ಅನ್ನೋರ ಸಂಬಂಧಿ ಆಗಿರೋದ್ರೀಂದ ನಿಯಮ ಮೀರಿ ಗುತ್ತಿಗೆ ನೀಡಿದ್ದಾರೆ ಅನ್ನೋ ದೊಡ್ಡ ಆರೋಪವೊಂದು ಕೇಳಿ ಬಂದಿದೆ.

    ದುಂದು ವೆಚ್ವ ಹಾಗೂ ನಿಯಮ ಮೀರಿ ಗುತ್ತಿಗೆ ನೀಡಿರುವ ಕುರಿತು ತನಿಖೆಗೆ ಒತ್ತಾಯಿಸಿ ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಸಾಮಾಜಿಕ ಕಾರ್ಯಕರ್ತ ಮರಿ ಲಿಂಗೇಗೌಡ ಮಾಲೀಪಾಟೀಲ್ ದೂರು ನೀಡಿದ್ದಾರೆ. ಸರ್ಕಾರ ಏನ್ ಕ್ರಮ ತೆಗೆದುಕೊಳ್ಳುತ್ತೋ ನೋಡೋಣ.

  • ನಾಲ್ವರು ಪುತ್ರಿಯರ ಹೆಸರಲ್ಲಿ ಸೈಟ್- ಸ್ಪೀಕರ್ ಕೋಳಿವಾಡ ವಿರುದ್ಧ ನಿವೇಶನ ಅಕ್ರಮ ಆರೋಪ

    ನಾಲ್ವರು ಪುತ್ರಿಯರ ಹೆಸರಲ್ಲಿ ಸೈಟ್- ಸ್ಪೀಕರ್ ಕೋಳಿವಾಡ ವಿರುದ್ಧ ನಿವೇಶನ ಅಕ್ರಮ ಆರೋಪ

    ಬೆಂಗಳೂರು: ವಿಧಾನಸಭಾ ಸ್ಪೀಕರ್ ಕೆ.ಬಿ.ಕೋಳಿವಾಡ ಪುತ್ರಿಯರು ನಿಯಮ ಉಲ್ಲಂಘಿಸಿ ನಿವೇಶನ ಪಡೆದ ಆರೋಪ ಕೇಳಿಬಂದಿದೆ.

    ಯಲಹಂಕ ಸಮೀಪದ ಗಸ್ತಿ ಕೆಂಪನಹಳ್ಳಿ, ಅಗ್ರಹಾರಗಳಲ್ಲಿ ಕೆಬಿ ಕೋಳಿವಾಡ ಅವರ ನಾಲ್ವರು ಪುತ್ರಿಯರು ನಿವೇಶನ ಪಡೆದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಇವು ಕರ್ನಾಟಕ ವಿಧಾನಮಂಡಲ ಕಾರ್ಯಾಲಯ ನೌಕರರ ಗೃಹ ನಿರ್ಮಾಣ ಸಂಘದ ನಿವೇಶನಗಳಾಗಿವೆ. ಒಂದೇ ದಿನ ಕೋಳಿವಾಡ ಅವರ ನಾಲ್ವರು ಪುತ್ರಿಯರಿಗೆ ನಿವೇಶನ ನೋಂದಣಿಯಾಗಿದೆ.

    ಕೋಳಿವಾಡ ಅವರ ಪುತ್ರಿಯರಾದ ಸಪ್ನಾ ಪಾಟೀಲ್, ಪ್ರತಿಭಾ ದೊಡ್ಡಮನಿ, ಸುನೀತಾ ಮೂಲಿಮನಿ ಹಾಗೂ ಸುಷ್ಮಾ ಮಂಜುನಾಥ್ ನಿವೇಶನ ಪಡೆದಿದ್ದಾರೆ. ಸುಷ್ಮಾ ಮಂಜುನಾಥ್ ಕೋಳಿವಾಡ ಅವರ ರಾಣೆಬೆನ್ನೂರು ಮನೆ ವಿಳಾಸ ನೀಡಿದ್ರೆ, ಉಳಿದ ಮೂವರು ಪುತ್ರಿಯರು ಕೋಳಿವಾಡ ಅವರ ಬೆಂಗಳೂರಿನ ಆರ್‍ಎಂವಿ ಲೇಔಟ್‍ನ ನಿವಾಸದ ವಿಳಾಸ ಕೊಟ್ಟಿದ್ದಾರೆ. 2016ರ ನವೆಂಬರ್ 7 ರಂದು ವಿಧಾನಮಂಡಲ ಕಾರ್ಯಾಲಯ ನೌಕರರ ಗೃಹ ನಿರ್ಮಾಣ ಸಂಘದ ಕಾರ್ಯಕಾರಿ ಸಭೆ ನಡೆದಿದ್ದು, ಈ ಸಭೆಯಲ್ಲೇ ಕೋಳಿವಾಡ ಪುತ್ರಿಯರಿಗೆ ನಿವೇಶನ ಹಂಚಿಕೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಬಳಿಕ ನವೆಂಬರ್ 14ರಂದೇ ನಾಲ್ವರು ಪುತ್ರಿಯರಿಗೆ ನಿವೇಶನ ನೋಂದಣಿ ಆಗಿದೆ. ಈ ನಾಲ್ವರು ಒಂದೇ ಬ್ಯಾಂಕಿನಲ್ಲಿ ಸಿಡಿ ತೆಗೆದಿದ್ದಾರೆ.

    ಸಂಘದ ಬೈಲಾ ಪ್ರಕಾರ ವಿಧಾನಸಭೆ ಕಾರ್ಯಾಲಯದ ನೌಕರರು ಮಾತ್ರ ಸಂಘದ ಸದಸ್ಯರಾಗಬೇಕು. ಆದ್ರೆ ಕೋಳಿವಾಡ ಪುತ್ರಿಯರು ನೌಕರರಲ್ಲ. 2004-05 ರಲ್ಲಿ ಸಂಘದಿಂದ ಲೇಔಟ್ ಮಾಡಲು ವಂತಿಗೆ ಸಂಗ್ರಹಿಸಲಾಗಿದ್ದು, ಕೇವಲ 120 ಜನರಿಗೆ ಮಾತ್ರ ನಿವೇಶನ ಹಂಚಲಾಗಿದೆ. ಈ ಹಿಂದೆಯೂ ವಿಧಾನಸಭೆ ನೌಕರರ ಕಾರ್ಯಾಲಯ ಸಂಘ ಸದಸ್ಯರಲ್ಲದವರಿಗೂ ನಿವೇಶನ ಹಂಚಿಕೆ ಮಾಡಿದ ಆರೋಪ ಕೇಳಿಬಂದಿತ್ತು.