Tag: ಸ್ಪೈಸ್ ಜೆಟ್ ವಿಮಾನ

  • ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಕರೆ – ಬ್ರಿಟಿಷ್ ಏರ್‌ವೇಸ್ ಟ್ರೈನಿ ಅರೆಸ್ಟ್

    ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಕರೆ – ಬ್ರಿಟಿಷ್ ಏರ್‌ವೇಸ್ ಟ್ರೈನಿ ಅರೆಸ್ಟ್

    ನವದೆಹಲಿ: ಸ್ಪೈಸ್ ಜೆಟ್ ವಿಮಾನಕ್ಕೆ (Spice Jet flight) ಗುರುವಾರ ಬಾಂಬ್ ಕರೆ (Bomb Threat) ನೀಡಿದ್ದ ಬ್ರಿಟಿಷ್ ಏರ್‌ವೇಸ್‌ನ (British Airways) ಟ್ರೈನಿ ಟಿಕೆಟ್ ಏಜೆಂಟ್‌ನನ್ನು ಶುಕ್ರವಾರ ಅಧಿಕಾರಿಗಳು ಬಂಧಿಸಿದ್ದಾರೆ.

    ಗುರುವಾರ ಸಂಜೆ ದೆಹಲಿಯಿಂದ (Delhi) ಪುಣೆಗೆ (Pune) ಹೋಗಬೇಕಿದ್ದ ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆ ಅಧಿಕಾರಿಗಳು ತೀವ್ರವಾಗಿ ಶೋಧ ನಡೆಸಿದ್ದರು. ಆದರೆ ವಿಮಾನದಲ್ಲಿ ಅಂತಹ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗದ ಇನ್ನೆಲೆ ಇದನ್ನು ಹುಸಿ ಬಾಂಬ್ ಕರೆ ಎಂದು ಘೋಷಿಸಲಾಯಿತು.

    ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಪೊಲೀಸರು ವಿಶೇಷ ತಂಡವನ್ನು ರಚಿಸಿ, ಕರೆ ಮಾಡಿದ ವ್ಯಕ್ತಿಯ ಪತ್ತೆಗೆ ಕಾರ್ಯಾಚರಣೆ ಪ್ರಾರಂಭಿಸಿರು. ಬಳಿಕ ಕರೆ ಮಾಡಿದ ವ್ಯಕ್ತಿಯನ್ನು ಬ್ರಿಟಿಷ್ ಏರ್‌ವೇಸ್ ಟಿಕೆಟ್ ಕೌಂಟರ್‌ನಲ್ಲಿ ತರಬೇತಿ ಪಡೆಯುತ್ತಿದ್ದ ಅಭಿನವ್ ಪ್ರಕಾಶ್ (24) ಎಂದು ಗುರುತಿಸಿದ್ದಾರೆ.

    ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಳಿಕ ಆರೋಪಿ ಬಾಂಬ್ ಬೆದರಿಕೆ ಕರೆ ನೀಡಲು ಕಾರಣವೇನು ಎಂಬ ಸತ್ಯವನ್ನು ಬಾಯಿ ಬಿಟ್ಟಿದ್ದಾನೆ. ತನ್ನ ಬಾಲ್ಯದ ಗೆಳೆಯರಾದ ರಾಕೇಶ್ ಹಾಗೂ ಕುನಾಲ್ ಸೆಹ್ರಾವತ್‌ಗೆ ತಮ್ಮ ಗೆಳತಿಯರೊಂದಿಗೆ ಇನ್ನಷ್ಟು ಸಮಯ ಕಳೆಯಲು ಅವಕಾಶ ಮಾಡಿಕೊಡುವ ಸಲುವಾಗಿ ಬೆದರಿಕೆ ಕರೆ ಮಾಡಿದ್ದೆ. ಆ ಇಬ್ಬರು ಗೆಳತಿಯರು ಗುರುವಾರ ಬೆದರಿಕೆ ಹಾಕಲಾದ ಸ್ಪೈಸ್ ಜೆಟ್ ವಿಮಾನದಲ್ಲಿಯೇ ಪುಣೆಗೆ ತೆರಳಬೇಕಿತ್ತು ಎಂದು ಬಹಿರಂಗಪಡಿಸಿದ್ದಾನೆ. ಇದನ್ನೂ ಓದಿ: ತಿರುಪತಿಗೆ ಹುಂಡಿಯಿಂದಲೇ 1,450 ಕೋಟಿ ರೂ. ಸಂಗ್ರಹ

    ನನ್ನ ಗೆಳೆಯರು ತಮ್ಮ ಗೆಳತಿಯರೊಂದಿಗೆ ಸ್ವಲ್ಪ ಸಮಯ ಕಳೆಯಲು ಬಯಸಿದ್ದಾಗಿ ಹೇಳಿದ್ದು, ವಿಮಾನವನ್ನು ವಿಳಂಬಗೊಳಿಸಲು ಉಪಾಯ ಹುಡುಕುವಂತೆ ನನ್ನನ್ನು ಒತ್ತಾಯಿಸಿದ್ದರು. ಬಳಿಕ ನಾವು ಸ್ಪೈಸ್ ಜೆಟ್ ಏರ್‌ಲೈನ್ಸ್ನ ಕಾಲ್ ಸೆಂಟರ್‌ಗೆ ಕರೆ ಮಾಡಿ ಹುಸಿ ಬಾಂಬ್ ಬೆದರಿಕೆ ಹಾಕಲು ಸಂಚು ರೂಪಿಸಿದೆವು ಎಂದು ಆರೋಪಿ ತಿಳಿಸಿದ್ದಾನೆ.

    ಗುರುವಾರ ಸಂಜೆ 6:30ಕ್ಕೆ ದೆಹಲಿ-ಪುಣೆ ಸ್ಪೈಸ್ ಜೆಟ್ ವಿಮಾನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಬೇಕಿತ್ತು. ಆದರೆ ವಿಮಾನ ಟೇಕ್ ಆಫ್ ಆಗುವುದಕ್ಕೂ ಕೆಲವೇ ನಿಮಿಷಗಳ ಮೊದಲು ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು. ತಕ್ಷಣವೇ ಪ್ರಯಾಣಿಕರ ಬೋರ್ಡಿಂಗ್ ಅನ್ನು ನಿಲ್ಲಿಸಿ, ವಿಮಾನದಲ್ಲಿ ತೀವ್ರವಾದ ತಪಾಸಣೆ ಮಾಡಲಾಗಿತ್ತು. ಇದನ್ನೂ ಓದಿ: 15 ಸಿಮ್‌ ಕಾರ್ಡ್‌ ಬದಲಾಯಿಸಿ, ವಿಗ್‌ ತೆಗೆದು, ಮೀಸೆ ಬೋಳಿಸಿದ್ದ ಸ್ಯಾಟ್ರೋ ರವಿ ಕೊನೆಗೂ ಸಿಕ್ಕಿಬಿದ್ದ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 8 ಗಂಟೆ ವಿಳಂಬ, ಕೊನೆ ಕ್ಷಣದಲ್ಲಿ ವಿಮಾನ ರದ್ದು – ಮತ್ತೊಮ್ಮೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾದ ಸ್ಪೈಸ್ ಜೆಟ್

    8 ಗಂಟೆ ವಿಳಂಬ, ಕೊನೆ ಕ್ಷಣದಲ್ಲಿ ವಿಮಾನ ರದ್ದು – ಮತ್ತೊಮ್ಮೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾದ ಸ್ಪೈಸ್ ಜೆಟ್

    ನವದೆಹಲಿ: ಸದಾ ವಿವಾದಗಳಿಂದ ಸದ್ದು ಮಾಡುವ ಸ್ಪೈಸ್ ಜೆಟ್ (Spice Jet) ಏರ್‌ಲೈನ್ಸ್ ಈಗ ಮತ್ತೊಮ್ಮೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪುಣೆಯಿಂದ (Pune) ಅಹಮದಾಬಾದ್ ತೆರಳಬೇಕಿದ್ದ ವಿಮಾನ ತಡವಾಗಿದ್ದು, ಎಂಟೂವರೆ ಗಂಟೆಗಳ ಕಾಲ ಕಾಯಿಸಿದ್ದಲ್ಲದೇ ಕಡೆ ಕ್ಷಣದಲ್ಲಿ ರದ್ದು ಮಾಡಿ ಹೊಸ ಟೀಕೆಗೆ ಕಾರಣವಾಗಿದೆ.

    ಬುಧವಾರ ರಾತ್ರಿ 8:30ಕ್ಕೆ ಪುಣೆಯಿಂದ ಅಹಮದಾಬಾದ್‌ಗೆ ತೆರಳಬೇಕಿದ್ದ ವಿಮಾನ ತಾಂತ್ರಿಕ ಕಾರಣಗಳಿಂದ (Technical Issues) ಎಂಟೂವರೆ ಗಂಟೆಗಳ ಕಾಲ ತಡ ಮಾಡಿತ್ತು. ಬಳಿಕ ಗುರುವಾರ ಮುಂಜಾನೆ 4:30ಕ್ಕೆ ಟೇಕ್ ಆಫ್ ಮಾಡಲಾಗಿತ್ತು. ಆದರೆ ದಟ್ಟವಾದ ಮಂಜಿನ ಕಾರಣ ಹೇಳಿ 10 ನಿಮಿಷಗಳಲ್ಲಿ ಮತ್ತೆ ಲ್ಯಾಂಡ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ʼಸರ್‌ʼ, ʼಮೇಡಂʼ ಅನ್ನುವಂತಿಲ್ಲ.. ʼಟೀಚರ್‌ʼ ಎನ್ನಬೇಕು – ಕೇರಳ ಮಕ್ಕಳ ಹಕ್ಕುಗಳ ಆಯೋಗ

    ಸ್ಪೈಸ್ ಜೆಟ್ ವರ್ತನೆಯಿಂದ ಪ್ರಯಾಣಿಕರು ಗರಂ ಆಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪ್ರಯಾಣಿಕರೊಬ್ಬರು, ತಾಂತ್ರಿಕ ಕಾರಣದಿಂದ ವಿಮಾನ 4 ಗಂಟೆಗಳ ಕಾಲ ವಿಳಂಬವಾಗಿದೆ ಮತ್ತು 12:30ಕ್ಕೆ ಹೊರಡಲಿದೆ ಎಂದು ಏರ್‌ಲೈನ್ಸ್‌ನ ನೆಲದ ಸಿಬ್ಬಂದಿ ನಮಗೆ ತಿಳಿಸಿದ್ದರು. ಬಳಿಕ ವಿಮಾನ ಮಧ್ಯರಾತ್ರಿ 3.30ರ ಸುಮಾರಿಗೆ ಟೇಕ್‌ಆಫ್ ಆಗಲಿದೆ ಎಂದು ಹೇಳಿದರು. ಆದರೆ ಮುಂಜಾನೆ 4.30ರ ವೇಳೆಗೆ ಟೇಕ್ ಆಫ್ ಮಾಡಲಾಯಿತು ಎಂದು ಹೇಳಿದರು.

    ವಿಮಾನ ಹಾರಾಟ ಪ್ರಾರಂಭವಾದರೂ ಅದು ನಿಗದಿತ ಎತ್ತರಕ್ಕೆ ಹಾರಲಿಲ್ಲ. ವಿಮಾನದಲ್ಲಿ ದೊಡ್ಡ ಪ್ರಮಾಣದಲ್ಲಿ ಜರ್ಕ್ ಕಂಡು ಬಂತು. ಇದಾದ 7 ನಿಮಿಷಕ್ಕೆ ಪುಣೆಯಲ್ಲಿ ಮರಳಿ ಲ್ಯಾಂಡ್ ಮಾಡಲಾಯಿತು. ಬಳಿಕ ತಾಂತ್ರಿಕ ಸಮಸ್ಯೆ ಕಂಡು ಬಂದಿದೆ ಎಂದು ವಿಮಾನವನ್ನು ರದ್ದು ಮಾಡಲಾಯಿತು. ಟಿಕೆಟ್ ಹಣವನ್ನು ಮರಳಿಸುವ ಭರವಸೆ ನೀಡಿದ್ದಾರೆ ಎಂದು ಪ್ರಯಾಣಿಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೆಹಲಿ ಬಳಿಕ ಕರ್ನಾಟಕದಲ್ಲೂ ಆಪ್ `ಟಿಕೆಟ್ ಫಾರ್ ಸೇಲ್’ – ಸುಕೇಶ್ ಚಂದ್ರಶೇಖರ್ ಗಂಭೀರ ಆರೋಪ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಮಾನದೊಳಗೆ ಸಿಗರೇಟ್ ಸೇದುತ್ತಾ ಪೋಸ್ ಕೊಟ್ಟ ವ್ಯಕ್ತಿ – ಸಿಂಧಿಯಾಗೆ ಬೆಂಡೆತ್ತಿದ ನೆಟ್ಟಿಗರು!

    ವಿಮಾನದೊಳಗೆ ಸಿಗರೇಟ್ ಸೇದುತ್ತಾ ಪೋಸ್ ಕೊಟ್ಟ ವ್ಯಕ್ತಿ – ಸಿಂಧಿಯಾಗೆ ಬೆಂಡೆತ್ತಿದ ನೆಟ್ಟಿಗರು!

    ನವದೆಹಲಿ: ಸ್ಪೈಸ್‍ಜೆಟ್ ವಿಮಾನದೊಳಗೆ ವ್ಯಕ್ತಿಯೋರ್ವ ಸಿಗರೇಟ್ ಸೇದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇದೀಗ ಆತನ ವಿರುದ್ಧ ಪೊಲೀಸರಿಗೆ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

    ಇನ್‍ಸ್ಟಾಗ್ರಾಮ್‍ನಲ್ಲಿ 6.30 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‍ಗಳನ್ನು ಹೊಂದಿರುವ ಗುಗಾರ್ಂವ್ ನಿವಾಸಿ ಬಾಬಿ ಕಟಾರಿಯಾ ವಿಮಾನದ ಸೀಟಿನ ಮೇಲೆ ಶೂನಲ್ಲಿಯೇ ಮಲಗಿಕೊಂಡು ಆರಾಮದಾಯಕವಾಗಿ, ಲೈಟರ್‌ನಲ್ಲಿ ಸಿಗರೇಟ್ ಅನ್ನು ಹೊತ್ತಿಸಿಕೊಂಡು, ನಿಟ್ಟುಸಿರು ಬಿಡುತ್ತಾ ಸಿಗರೇಟ್ ಸೇದುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಭೇಟಿಗೆಂದು ಕಬ್ಬನ್ ಪಾರ್ಕ್‍ಗೆ ಕರೆಸಿ ಸಂಬಂಧಿ ಯುವತಿ ಮೇಲೆ ಅತ್ಯಾಚಾರ!

    ಈ ವೀಡಿಯೋವನ್ನು ಜನರು ಟ್ವಿಟ್ಟರ್‍ನಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಟ್ಯಾಗ್ ಮಾಡಿ ಟೀಕೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಅವರು ಪ್ರತಿಕ್ರಿಯೆ ಸಹ ನೀಡಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ ಈ ವೀಡಿಯೋ 2022 ಜನವರಿ 23ರದ್ದಾಗಿದೆ. ವಿಮಾನದೊಳಗೆ ಸಿಗರೇಟ್ ಸೇದುಕೊಂಡಿದ್ದ ವ್ಯಕ್ತಿಯ ಹೆಸರು ಬಲ್ವಿಂದರ್ ಕಟಾರಿಯಾ ಅಲಿಯಾಸ್ ಬಾಬಿ ಕಟಾರಿಯಾ. ಗುರುವಾರದಿಂದ ಈ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 2022ರ ಜನವರಿ 23 ರಂದು, ಬಲ್ವಿಂದರ್ ಕಟಾರಿಯಾ ಅವರು ಸ್ಪೈಸ್ ಜೆಟ್ ವಿಮಾನದಲ್ಲಿ ದುಬೈನಿಂದ ದೆಹಲಿಗೆ ಪ್ರಯಾಣಿಸಿದ್ದ ವೇಳೆ ಈ ವಿಡಿಯೋ ಮಾಡಲಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

    ಇದೀಗ ವ್ಯಕ್ತಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದ್ದು, ಈ ಪ್ರಕರಣ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಬಡವರಿಗೆ ತೆರಿಗೆ ಹೊರೆ; ಶ್ರೀಮಂತರಿಗೆ ಮಾತ್ರ ವಿನಾಯಿತಿ – ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

    Live Tv
    [brid partner=56869869 player=32851 video=960834 autoplay=true]