Tag: ಸ್ಫೋಟಕ

  • ಮಂಗಳೂರಿನ ಕುಕ್ಕೇಡಿಯಲ್ಲಿ ಪಟಾಕಿ ಗೋಡೌನ್‌ ಸ್ಫೋಟಕ್ಕೆ ಕಾರಣ ಏನು? – ತನಿಖೆಯಲ್ಲಿ ರಹಸ್ಯ ಬಯಲು

    ಮಂಗಳೂರಿನ ಕುಕ್ಕೇಡಿಯಲ್ಲಿ ಪಟಾಕಿ ಗೋಡೌನ್‌ ಸ್ಫೋಟಕ್ಕೆ ಕಾರಣ ಏನು? – ತನಿಖೆಯಲ್ಲಿ ರಹಸ್ಯ ಬಯಲು

    ಮಂಗಳೂರು: ವೇಣೂರಿನ ಕುಕ್ಕೇಡಿ ಪಟಾಕಿ ಘಟಕ (Firecracker Godown) ಸ್ಪೋಟದಿಂದ ಮೂವರ ಸಾವು ಪ್ರಕರಣದಲ್ಲಿ ಸತ್ಯಾಂಶ ಬಯಲಾಗಿದೆ. ಪಟಾಕಿ ಘಟಕ ಸ್ಫೋಟಕ್ಕೆ ನಿಯಮ ಮೀರಿ 100 Kg ಗನ್ ಪೌಡರ್ ದಾಸ್ತಾನು ಇರಿಸಿದ್ದೇ ಕಾರಣ ಎಂಬ ರಹಸ್ಯ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

    ಈ ಪಟಾಕಿ‌ ತಯಾರಿಕಾ ಘಟಕಕ್ಕೆ 15 ಕೆಜಿ ಸ್ಫೋಟಕ (Explosives) ಸಂಗ್ರಹಿಸಿಟ್ಟುಕೊಳ್ಳಲು ಮಾತ್ರ ಅನುಮತಿ ನೀಡಲಾಗಿತ್ತು. ಆದ್ರೆ ಅಂಗಡಿ ಆರೋಪಿ ಬಶೀರ್‌, 100 ಕೆ.ಜಿ ಸ್ಟಾಕ್ ಇಟ್ಟಿದ್ದ. ಪಟಾಕಿ ತಯಾರಿಕೆಗಾಗಿ ಪೊಟ್ಯಾಶಿಯಂ ಕ್ಲೋರೈಡ್‌, ಪೊಟ್ಯಾಶಿಯಂ ನೈಟ್ರೇಟ್ ಬಳಕೆ ಮಾಡುತ್ತಿದ್ದ. ಇದರಿಂದ ಪಟಾಕಿ ಲೋಡಿಂಗ್ ವೇಳೆ ಒತ್ತಡ ಉಂಟಾಗಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶೆಟ್ಟರ್ ಡೀಸೆಂಟ್ ಜಂಟಲ್‍ ಮ್ಯಾನ್, ಕಾಂಗ್ರೆಸ್ಸಿಗರು ಉಳಿಸಿಕೊಳ್ಳಬೇಕಾಗಿತ್ತು: ಹರಿಪ್ರಸಾದ್

    ಅತಿಯಾಗಿ ಸ್ಫೋಟಕ ದಾಸ್ತಾನು ಇಟ್ಟಿದ್ದ ಕಾರಣಕ್ಕೆ ಇಂತಹ ಭೀಕರ ಸ್ಫೋಟ ಉಂಟಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಸದ್ಯ ಚಾರ್ಕೋಲ್, ಗಂಧಕ, ಅಲ್ಯೂಮಿನಿಯಂ ಪೌಡರ್ ಸಹಿತ 85ಕ್ಕೂ ಹೆಚ್ಚು ಸ್ಯಾಂಪಲ್‌ಗಳನ್ನ ಎಫ್ಎಸ್ಎಲ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆಗೆ ಕಿರುಕುಳ; ಅನ್ಯಕೋಮಿನ ಯುವಕ ಅರೆಸ್ಟ್ – ಹಿಂದೂ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ

    ಫೈರ್ ಸೇಫ್ಟಿ ಬಳಕೆ ಮಾಡದೇ ನಿಯಮ ಉಲ್ಲಂಘಿಸಿ ಪಟಾಕಿ ತಯಾರಿಸುತ್ತಿದ್ದು, ಮೈಸೂರು ಭಾಗದ ಕಾರ್ಯಕ್ರಮದಲ್ಲಿ ಸಂಭ್ರಮಿಸಲು ಪಟಾಕಿ ತಯಾರಿಸುತ್ತಿದ್ದ ಎನ್ನಲಾಗಿದೆ. ಇದಕ್ಕಾಗಿಯೇ ನಿಯಮ ಬಾಹಿರವಾಗಿ ಭಾರೀ ಪ್ರಮಾಣದ ಸ್ಫೋಟಕವನ್ನು ದಾಸ್ತಾನು ಇಟ್ಟಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಮಂಗಳೂರು ವಿವಿ ಭಾಗಿಯಾಗಿರುವ ಶಂಕೆ – ಇಡಿ ವಿಚಾರಣೆ

  • ಬೆಂಗ್ಳೂರಿನ 2 ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಪತ್ತೆ

    ಬೆಂಗ್ಳೂರಿನ 2 ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಪತ್ತೆ

    ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ (Bengaluru) ಅಪಾರ ಪ್ರಮಾಣದ ಸ್ಫೋಟಕ (Explosion) ವಸ್ತು ಪತ್ತೆಯಾಗಿದೆ. ನಗರದ ಸೋಲದೇವನಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಸ್ಫೋಟಕ ವಶಪಡಿಸಿಕೊಂಡಿದ್ದಾರೆ.

    ಹೆಸರಘಟ್ಟದ ಕಲ್ಲುಗುಡ್ಡದಹಳ್ಳಿ ಹಾಗೂ ದಾಸೇನಹಳ್ಳಿ ಬಳಿಯ ಎರಡು ಮನೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಅನುಮತಿ ಇಲ್ಲದೆ ಮನೆಯಲ್ಲಿ ಆಡಗಿಸಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ವಿಸಿ ನಾಲೆಗೆ ಬಿತ್ತು ಕಾರು – ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು

    ಎರಡೂ ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಸಾಮಗ್ರಿ ಪತ್ತೆಯಾಗಿದೆ. ಎರಡೂವರೆ ಕೆಜಿ ಸಲ್ಫರ್ ಪೌಡರ್, 250 ಗ್ರಾಂ ಎಕ್ಸ್‌ಪ್ಲೋಸಿವ್‌ ಜೆಲ್, 45 ಕೆಜಿ ಪೊಟಾಶಿಯಂ ನೈಟ್ರೇಟ್ ವೈಟ್ ಪೌಢರ್ ಹಾಗೂ ಸ್ಫೋಟಕ ಮದ್ದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿದ್ದ ಶಂಕರ್ ಹಾಗೂ ಕುಮಾರ್ ಎಂಬಿಬ್ಬರನ್ನು ಸೋಲದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ ದಾಸೇನಹಳ್ಳಿಯ ರಾಘವೇಂದ್ರ ಲೇಔಟ್‌ನ ಮನೆ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಶ್ರೀನಿವಾಸ್ ಎಂಬಾತನ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲೂ ಕೆಜಿಗಟ್ಟಲೆ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಇದನ್ನೂ ಓದಿ: ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ – ಪುಣೆ ಎಟಿಎಸ್‌ನಿಂದ ಇಬ್ಬರು ಶಂಕಿತ ಉಗ್ರರ ಬಂಧನ

    1.860 ಕೆಜಿ ತೂಕದ ಎಕ್ಸ್‌ಪ್ಲೋಸಿವ್‌ ಜೆಲ್, 1.950 ಗ್ರಾಂ ತೂಕದ ಕಾರ್ಕೋಲ ಫೌಡರ್, 7.850 ಗ್ರಾಂ ಸಲ್ಫರ್ ಫೌಡರ್, 13 ಕೆಜಿ ಪೊಟಾಶಿಯಂ ನೈಟ್ರೇಟ್ ಪತ್ತೆಯಾಗಿದೆ. ಪೊಲೀ0ಸರ ವಿಚಾರಣೆ ವೇಳೆ ಕಲ್ಲು ಕ್ವಾರಿಗಾಗಿ ಸಂಗ್ರಹ ಮಾಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ. ಅಕ್ರಮವಾಗಿ ಸ್ಫೋಟಕ ಸಂಗ್ರಹ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಪ್ಪಿದ ಭಾರೀ ದುರಂತ – ಮಿನಿ ಬಸ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನ ಪತ್ತೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೊಲೀಸರು ಶುಕ್ರವಾರ ರಾಂಬನ್ (Ramban) ಜಿಲ್ಲೆಯಲ್ಲಿ ಮಿನಿ ಬಸ್‌ನಲ್ಲಿ (Mini Bus) ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧನವನ್ನು (IED) ವಶಪಡಿಸಿಕೊಂಡು, ಅದನ್ನು ನಿಷ್ಕ್ರಿಯಗೊಳಿಸಿರುವುದಾಗಿ ತಿಳಿಸಿದ್ದಾರೆ.

    ಸುಮಾರು 20 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್‌ನಲ್ಲಿ ಅನುಮಾನಾಸ್ಪದ ವಸ್ತುವನ್ನು ಸಾಗಿಸುತ್ತಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ಬಳಿಕ ಮಿನಿ ಬಸ್ ಒಂದನ್ನು ತಪಾಸಣೆಗೆ ಒಳಪಡಿಸಲಾಯಿತು ಎಂದು ಎಸ್‌ಎಸ್‌ಪಿ ಮೋಹಿತಾ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಕಚೇರಿಯಿಂದ ಕಾಣೆಯಾಯ್ತಾ ಬಿಬಿಎಂಪಿ ಫೈಲ್? – ಸಾವಿರಾರು ಕೋಟಿ ರೂ. ವ್ಯವಹಾರದ ಕಡತ ನಾಪತ್ತೆ

    ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಮೊದಲಿಗೆ ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಬಳಿಕ ಬಸ್ ಅನ್ನು ಸಂಪೂರ್ಣವಾಗಿ ಶೋಧಿಸಲಾಯಿತು. ಹುಡುಕಾಟದ ವೇಳೆ ಅನುಮಾನಾಸ್ಪದ ಬ್ಯಾಗ್ ಒಂದು ಪತ್ತೆಯಾಗಿದ್ದು, ಅದನ್ನು ತೆರೆದು ನೋಡಿದಾಗ ಅದರಲ್ಲಿ ಐಇಡಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಬಣ ಸಂಘರ್ಷ – ಡಿಕೆಶಿ ನಡೆಗೆ ಸಿದ್ದರಾಮಯ್ಯ ಕೊತಕೊತ!

    ಐಇಡಿ ಪತ್ತೆಯಾಗುತ್ತಲೇ ಸಿಆರ್‌ಪಿಎಫ್ ಮತ್ತು ಸೇನೆಯ ತಂಡ ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ಈ ಮೂಲಕ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಾರಿನ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ – ಭಯೋತ್ಪಾದನೆ ಲಿಂಕ್

    ಕಾರಿನ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ – ಭಯೋತ್ಪಾದನೆ ಲಿಂಕ್

    ಚೆನ್ನೈ: ಭಾನುವಾರ ತಮಿಳುನಾಡಿನ (Tamilnadu) ಕೊಯಮತ್ತೂರಿನಲ್ಲಿ (Coimbatore) ಕಾರಿನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Blast) 25 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಡೆದಿತ್ತು. ಆದರೆ ಈ ಘಟನೆ ಇದೀಗ ಭಯೋತ್ಪಾದನೆಯ (Terrorism) ತಿರುವು ಪಡೆದುಕೊಂಡಿದೆ.

    ನಿನ್ನೆ ಕೊಯಮತ್ತೂರಿನ ದೇವಾಲಯವೊಂದರ ಬಳಿ ಕಾರಿನ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿ ಜೆಮಿಶಾ ಮುಬೀನ್ ಅವರ ಮನೆಯಲ್ಲಿ ಇದೀಗ ಪೊಲೀಸರು ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಹಚ್ಚಿದ್ದಾರೆ.

    2019ರಲ್ಲಿ ಶ್ರೀಲಂಕಾದ ಈಸ್ಟರ್ ಸಂಡೇ ಸ್ಫೋಟದ ಮಾಸ್ಟರ್ ಮೈಂಡ್ ಜಹ್ರಾನ್ ಹಾಶಿಮ್‌ಗೆ ಸಂಬಂಧಿಸಿದ ಜಾಲದೊಂದಿಗೆ ಜೆಮಿಶಾ ಮುಬೀನ್ ಸಂಬಂಧ ಹೊಂದಿದ್ದ ಎನ್ನಲಾಗಿದ್ದು, ಆತನನ್ನು ಅಧಿಕಾರಿಗಳು ಈ ಹಿಂದೆ ವಿಚಾರಿಸಿದ್ದರು. ಇದೀಗ ಅದೇ ವ್ಯಕ್ತಿ ಸಿಲಿಂಡರ್ ಸ್ಫೋಟದಿಂದ ಸಾವನ್ನಪ್ಪಿದ್ದು, ಈ ಬಗ್ಗೆ ಭಯೋತ್ಪಾದನಾ ಸಂಚಿನ ಕೋನದಲ್ಲಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಸವಲಿಂಗ ಶ್ರೀಗಳ ಸಾವಿನ ಸುತ್ತ ಅನುಮಾನಗಳ ಹುತ್ತ – 3 ಪುಟಗಳ ಡೆತ್‍ನೋಟ್ ರಹಸ್ಯ ಬಯಲು!

    ಘಟನೆಯ ಬಗ್ಗೆ ರಾಜ್ಯ ಪೊಲೀಸ್ ಮುಖ್ಯಸ್ಥ ಸಿ ಶೈಲೇಂದ್ರ ಬಾಬು ಅವರು ಮಾತನಾಡಿ, ತನಿಖೆಯಲ್ಲಿ ಉತ್ತಮ ಪ್ರಗತಿ ಕಂಡುಬಂದಿದೆ. ಈ ಘಟನೆಯ ಬಗ್ಗೆ ಎನ್‌ಐಎ ತನಿಖೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ತನಿಖೆ ಪೂರ್ಣವಾದ ಬಳಿಕ ನಿಜಾಂಶ ಏನೆಂಬುದು ತಿಳಿದುಬರಲಿದೆ ಎಂದಿದ್ದಾರೆ.

    ಮುಬೀನ್ ಅವರನ್ನು ಈ ಹಿಂದೆ ಎನ್‌ಐಎ ವಿಚಾರಣೆ ನಡೆಸಿತ್ತು. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಲ್ಲಿ ಭಾರೀ ಪ್ರಮಾಣ ಸ್ಫೋಟಕ ಪತ್ತೆ – ಆರೋಪಿ ಬಂಧನ

    ಮಂಗಳೂರಲ್ಲಿ ಭಾರೀ ಪ್ರಮಾಣ ಸ್ಫೋಟಕ ಪತ್ತೆ – ಆರೋಪಿ ಬಂಧನ

    ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ. ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ಸ್ಫೋಟಕಗಳನ್ನು ನೋಡಿ ಪೊಲೀಸರು ಶಾಕ್ ಆಗಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಡ್ರಿಲ್ ಶುರು ಮಾಡಿದ್ದಾರೆ.

    ಮಂಗಳೂರು ನಗರದ ಬಂದರು ಠಾಣಾ ವ್ಯಾಪ್ತಿಯ ಅಜೀಜುದ್ದೀನ್ ರಸ್ತೆಯ ಗಾಂಧಿ ಸನ್ಸ್ ಕಟ್ಟಡದಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ. ಜನವಸತಿ ಇರುವ ಕಟ್ಟಡದ ಸ್ಟೆಪ್‍ನ ಬಳಿ ಇದ್ದ ರೂಂ ಒಂದರಲ್ಲಿ 1,725 ಕೆ.ಜಿ ಗೂ ಹೆಚ್ಚು ಸ್ಟೋಟಕ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಸ್ಫೋಟಕವನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಮುಡಿಪುವಿನ ನಿವಾಸಿ ಆನಂದ್ ಗಟ್ಟಿ ಎಂಬಾತ ಇದನ್ನು ಅಕ್ರಮವಾಗಿ ದಾಸ್ತಾನು ಇಟ್ಟುಕೊಂಡಿದ್ದ. ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

    ಒಟ್ಟು 1ಲಕ್ಷದ 11 ಸಾವಿರ ಮೌಲ್ಯದ ಸ್ಫೋಟಕ ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಸಲ್ಫರ್ ಪೌಡರ್ 400 ಕೆ.ಜಿ ಪೊಟ್ಯಾಸಿಯಮ್ ನೈಟ್ರೇಟ್ 350 ಕೆ.ಜಿ ಬೇರಿಯಂ ನೈಟ್ರೇಟ್ 50 ಕೆ.ಜಿ ಪೊಟ್ಯಾಸಿಯಮ್ ಕ್ಲೋರೈಟ್ 395 ಕೆ.ಜಿ, ಅಲ್ಯೂಮಿನಿಯಂ ಪೌಡರ್ 260 ಕೆ.ಜಿ ಚಾರ್ ಕೋಲ್ 240 ಕೆ.ಜಿ ಲೀಡ್ ಬಾಲ್ಸ್ 30 ಕೆ.ಜಿ ಯರ್ ಪಿಸ್ತೂಲ್ ಪೆಲೆಟ್ಸ್ ವಶಕ್ಕೆ ಪಡೆಯಲಾಗಿದೆ. ಆರೋಪಿ ಬಂದರು ಏರಿಯಾದಲ್ಲೇ ಗನ್ ಶಾಪ್ ಹೊಂದಿದ್ದು ತನಿಖೆ ಸಂದರ್ಭ ಕಲ್ಲು ಕ್ವಾರೆಯವರಿಗೆ, ಬಾವಿ ತೋಡುವವರಿಗೆ ಈ ಸ್ಫೋಟಕಗಳನ್ನು ನೀಡುತ್ತಿರುವುದಾಗಿ ಹೇಳಿಕೊಂಡಿದ್ದಾನೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    ಆರೋಪಿಗೆ ಎಲ್ಲಿಂದ ಈ ರೀತಿಯ ಸ್ಫೋಟಕ ಕಚ್ಛಾ ವಸ್ತುಗಳು ಬರ್ತಿತ್ತು, ಯಾರ್ಯಾರು ಇಲ್ಲಿಂದ ಖರೀದಿ ಮಾಡ್ತಿದ್ರು ಎಂಬ ಬಗ್ಗೆಯು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಇಷ್ಟು ಸುಲಭವಾಗಿ ಸ್ಫೋಟಕ ಕಚ್ಛಾವಸ್ತುಗಳು ಸಿಗುತ್ತೆ ಎಂಬುದು ನಿಜಕ್ಕೂ ಆತಂಕಕಾರಿ ವಿಷಯ.

  • ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಫೋಟಕ ವಶ

    ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಫೋಟಕ ವಶ

    ಹಾವೇರಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಫೋಟಕ ವಸ್ತುಗಳು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಕೋಡಮಗ್ಗಿಯಲ್ಲಿ ಪತ್ತೆಯಾಗಿವೆ.

    ಗ್ರಾಮದ ರಾಜು ಅಣ್ಣಪ್ಪನವರ ಜಮೀನಿನಲ್ಲಿದ್ದ ಕೋಳಿ ಶೆಡ್ ಹಿಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಸ್ಫೋಟಕ ವಸ್ತುಗಳಾದ ಎಲೆಕ್ಟ್ರಿಕ್ ಜೆಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸುರೇಶ್, ಶೌಕತ್ ಮತ್ತು ಧನರಾಜ್ ಎಂಬವರು ಈ ಸ್ಫೋಟಕಗಳನ್ನು ಅಡಗಿಸಿಟ್ಟಿದ್ದರು.

    ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯ ಸಿಪಿಐ ಸಂತೋಷ ಪವಾರ ದಾಳಿ ನಡೆಸಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸಲು ಆರೋಪಿಗಳು ಈ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದರು. ಈ ಕುರಿತಂತೆ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ – ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿ ಅರೆಸ್ಟ್

    ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ – ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿ ಅರೆಸ್ಟ್

    ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಸಂಸ್ಥೆ 12 ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

    ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಜಿಲೆಟಿನ್ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ¸ ವಾಜಿರನ್ನು ವಶಪಡೆದು 12 ಗಂಟೆಗಳ ಕಾಲ ವಿಚಾರಣೆ ನಡೆಸಿ ನಂತರ ಶನಿವಾರ ರಾತ್ರಿ 11.50ಕ್ಕೆ ಬಂಧಿಸಿದ್ದಾರೆ. ಅಲ್ಲದೆ ಭಾನುವಾರ ಸಚಿನ್ ವಾಜಿರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತದೆ.

    ಫೆಬ್ರವರಿ 25 ರಂದು ಮುಕೇಶ್ ಅಂಬಾನಿ ನಿವಾಸದ ಬಳಿ ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಕಾರು ಹಾಗೂ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಸಚಿನ್ ವಾಜಿರವರಿಗೆ ತನಿಖೆ ನಡೆಸಲು ಸೂಚಿಸಲಾಗಿತ್ತು, ಆದರೆ ಬಳಿಕ ಅವರನ್ನು ತೆಗೆದು ಹಾಕಿ ಪ್ರಕರಣ ಕುರಿತಂತೆ ತನಿಖೆ ನಡೆಸಲು ಎನ್‍ಐಎ ಮುಂದಾಗಿದೆ.

    ಎನ್‍ಐಎ ವಕ್ತಾರರ ಪ್ರಕಾರ, “ಫೆಬ್ರವರಿ 25 ರಂದು ಕಾರ್ಮೈಕಲ್ ರಸ್ತೆ ಬಳಿ ಸ್ಫೋಟಕಗಳಿಂದ ತುಂಬಿದ್ದ ವಾಹನವನ್ನು ಇರಿಸುವಲ್ಲಿ ಸಚಿನ್ ವಾಜಿರವರ ಪಾತ್ರವಿರುವುದರಿಂದ ಸೆಕ್ಷನ್ 286 ( ಸ್ಫೋಟಕ ವಸ್ತುವಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ವರ್ತನೆ), 465(ಖೋಟಾ ಶಿಕ್ಷೆ), 473 (ನಕಲಿ ಮುದ್ರೆಯನ್ನು ತಯಾರಿಸುವುದು ಅಥವಾ ಹೊಂದಿರುವುದು ಇತ್ಯಾದಿ), 502 (2)(ಕ್ರಿಮಿನಲ್ ಬೆದರಿಕೆ), 120 ಬಿ ಅಡಿಯಲ್ಲಿ ಸಚಿನ್ ವಾಜಿರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಅಂಬಾನಿ ನಿವಾಸದ ಬಳಿ ಪತ್ತೆಯಾಗಿದ್ದ ಸ್ಕಾರ್ಪಿಯೋ ಕಾರಿನ ಮಾಲೀಕ ಥಾಣೆ ಉದ್ಯಮಿ ಮನ್ಸುಖ್ ಹಿರಾನ್ ಸಾವಿಗೆ ಸಂಬಂಧಿಸಿದಂತೆ ಸಚಿನ್ ವಾಜಿ ಅವರ ಪಾತ್ರವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

  • ‘ಶೇಕಿಂಗ್‌ ಡೆಲ್ಲಿ’ ಟಾಸ್ಕ್‌ – ಉಗ್ರನ ಮನೆಯಲ್ಲಿ ಸಿಕ್ಕಿದ 19 ವಸ್ತುಗಳ ಪೂರ್ಣ ಮಾಹಿತಿ ಇಲ್ಲಿದೆ

    ‘ಶೇಕಿಂಗ್‌ ಡೆಲ್ಲಿ’ ಟಾಸ್ಕ್‌ – ಉಗ್ರನ ಮನೆಯಲ್ಲಿ ಸಿಕ್ಕಿದ 19 ವಸ್ತುಗಳ ಪೂರ್ಣ ಮಾಹಿತಿ ಇಲ್ಲಿದೆ

    ನವದೆಹಲಿ: ಏಕಾಂಗಿಯಾಗಿ ದೆಹಲಿಯಲ್ಲಿ ಭಾರೀ ಪ್ರಮಾಣದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಐಸಿಸ್‌ ಉಗ್ರನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಆತನ ಮನೆಯಲ್ಲಿರುವ ಸೆರೆ ಸಿಕ್ಕಿದ ಸ್ಫೋಟಕಗಳನ್ನು ನೋಡಿ ಭದ್ರತಾ ಪಡೆಯ ಸಿಬ್ಬಂದಿಯೇ ಶಾಕ್‌ ಆಗಿದ್ದಾರೆ.

    ಮುಸ್ತಾಕೀನ್‌ ಖಾನ್‌ ಅಲಿಯಾಸ್‌ ಅಬು ಯೂಸುಫ್‌ ಬೈಕ್‌ನಲ್ಲಿ 2 ತೀವ್ರ ಸ್ಫೋಟ ಸಾಮರ್ಥ್ಯದ ಪ್ರೆಷರ್‌ ಕುಕ್ಕರ್‌ ಬಾಂಬ್‌ಗಳನ್ನು ಒಯ್ಯುತ್ತಿದ್ದಾಗ ದೆಹಲಿ ಪೊಲೀಸರು ರೆಡ್‌ ಹ್ಯಾಂಡ್‌ ಆಗಿ ಬಂಧಿಸಿದ್ದಾರೆ. ಅವನಿಂದ ಎರಡು ಸಜೀವ ಬಾಂಬ್‌ಗಳ ಜೊತೆಗೆ ಒಂದು ಪಿಸ್ತೂಲ್‌ ಹಾಗೂ ಗುಂಡುಗಳು ಮತ್ತು ಮೋಟರ್‌ಸೈಕಲ್‌ ವಶಪಡಿಸಿಕೊಳ್ಳಲಾಗಿದೆ.  ಇದನ್ನೂ ಓದಿ: ‘ಶೇಕಿಂಗ್‌ ಡೆಲ್ಲಿ’ ಟಾಸ್ಕ್‌ – ಉಗ್ರನಿಗೆ ಭಟ್ಕಳ ಮೂಲದ ಸಫಿ ಅರ್ಮರ್‌ ಜೊತೆ ನಿಕಟ ಸಂಪರ್ಕ 

    ವಿಶೇಷ ಘಟಕದ ಡಿಸಿಪಿ ಪಿ.ಎಸ್‌.ಕುಶ್ವಾಹ ಪ್ರತಿಕ್ರಿಯಿಸಿ, ಆ.15ರಂದು ಸ್ವಾತಂತ್ರ್ಯೋತ್ಸವದ ವೇಳೆ ಈತ ದೆಹಲಿಯಲ್ಲಿ ದಾಳಿ ನಡೆಸಲು ಮುಂದಾಗಿದ್ದ. ಆದರೆ ಭಾರಿ ಭದ್ರತೆ ಇದ್ದ ಕಾರಣ ಆತನಿಗೆ ಕೃತ್ಯ ಎಸಗಲು ಸಾಧ್ಯವಾಗಿರಲಿಲ್ಲ. ಈಗ ಭದ್ರತೆ ಕಡಿಮೆ ಇದೆ ಎಂದು ತಿಳಿದು ದಾಳಿಗೆ ಮುಂದಾಗಿದ್ದ. ಈತನ ಬಳಿಯಿರುವ ಬಾಂಬ್‌ಗಳು ಸ್ಫೋಟಕ್ಕೆ ಸಿದ್ಧಗೊಂಡ ಸ್ಥಿತಿಯಲ್ಲಿದ್ದವು. ಟೈಮರ್‌ ಅಳವಡಿಕೆ ಮಾತ್ರ ಬಾಕಿಯಿತ್ತು ಎಂದು ತಿಳಿಸಿದ್ದಾರೆ.

    ಆರಂಭದಲ್ಲಿ ಬಾಂಬ್‌ ದಾಳಿ ನಡೆಸಿದ ಬಳಿಕ ಆತ ಆತ್ಮಹುತಿ ದಾಳಿ ನಡೆಸುವ ಪ್ಲಾನ್‌ ಮಾಡಿದ್ದ. ಈತನ ಚಲನವಲನ ಬಗ್ಗೆ ಕಳೆದ 1 ವರ್ಷದಿಂದ ನಿಗಾ ಇಟ್ಟಿದ್ದೆವು. ಈಗ ಬಾಂಬ್‌ನೊಂದಿಗೆ ಅಬು ಯೂಸುಫ್‌ನನ್ನು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ. ಉತ್ತರಪ್ರದೇಶದ ಮನೆಯಲ್ಲಿ ದೆಹಲಿ ಪೊಲೀಸರು ಶೋಧ ನಡೆಸಿ ಅಪಾರ ಪ್ರಮಾಣದ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

    ಏನು ಸಿಕ್ಕಿದೆ?
    1. 3 ಸ್ಫೋಟಕ ಪ್ಯಾಕೆಟ್‌ಗಳನ್ನು ಹೊಂದಿರುವ ಒಂದು ಕಂದು ಬಣ್ಣದ ಜಾಕೆಟ್
    2. 4 ಸ್ಫೋಟಕ ಪ್ಯಾಕೆಟ್‌ಗಳನ್ನು ಹೊಂದಿರುವ ಒಂದು ನೀಲಿ ಬಣ್ಣದ ಚೆಕ್ ವಿನ್ಯಾಸದ ಜಾಕೆಟ್(ಪ್ರತಿ ಸ್ಫೋಟಕ ಪ್ಯಾಕೆಟ್‌ಗಳನ್ನು ಜಾಕೆಟ್‌ಗಳಿಂದ ತೆಗೆದು ನಿಷ್ಕ್ರಿಯಗೊಳಿಸಲಾಗಿದೆ. ಈ ಸ್ಫೋಟಕಗಳ ಪ್ಯಾಕೆಟ್‌ಗಳನ್ನು ಪಾರದರ್ಶಕ ಟೇಪ್‌ನಿಂದ ಸುತ್ತಿಡಲಾಗಿತ್ತು)
    3. ಸರಿಸುಮಾರು ಮೂರು ಕಿ.ಗ್ರಾಂ ತೂಕದ ಸ್ಫೋಟಕಗಳನ್ನು ಹೊಂದಿರುವ ಒಂದು ಚರ್ಮದ ಬೆಲ್ಟ್‌
    4. 4 ವಿಭಿನ್ನ ಪಾಲಿಥಿನ್‌ಗಳಲ್ಲಿ 8-9 ಕಿ.ಗ್ರಾಂ ತೂಕದ ಸ್ಫೋಟಕ.
    5. ಸಿಲಿಂಡರಾಕಾರದ ಲೋಹದ ಪೆಟ್ಟಿಗೆಗಳು, ಇದರಲ್ಲಿ ಸ್ಫೋಟಕ ಮತ್ತು ಎಲೆಕ್ಟ್ರಿಕ್‌ ವಯರ್‌ಗಳು ಇತ್ತು.

    6. ಎರಡು ಸಿಲಿಂಡರಾಕಾರದ ಲೋಹದ ಪೆಟ್ಟಿಗೆಗಳು ಇದರಲ್ಲಿ ಬಾಲ್ ಬೇರಿಂಗ್‌ಗಳನ್ನು ಇಡಲಾಗಿತ್ತು.
    7. ಒಂದು ಮರದ ಮುರಿದ ಪೆಟ್ಟಿಗೆ (ಪಿಸ್ತೂಲಿನಿಂದ ಟಾರ್ಗೆಟ್‌ ಶೂಟ್‌ ಮಾಡಲು ಬಳಕೆ)
    8. ಒಂದು ಐಸಿಸ್ ಧ್ವಜ
    9. ವಿಭಿನ್ನ ವ್ಯಾಸ ಹೊಂದಿರುವ 30 ಬಾಲ್ ಬೇರಿಂಗ್‌ಗಳು
    10. 12 ಬಾಲ್‌ ಬೇರಿಂಗ್‌ ಪ್ಯಾಕೆಟ್‌ ಇರುವ ಒಂದು ಸಣ್ಣ ಪೆಟ್ಟಿಗೆ

    11. ತಲಾ 4 ವೋಲ್ಟ್‌ನ ಎರಡು ಲಿಥಿಯಂ ಬ್ಯಾಟರಿಗಳು
    12. 9 ವೋಲ್ಟ್‌ನ ಒಂದು ಲಿಥಿಯಂ ಬ್ಯಾಟರಿ
    13. ಎರಡು ಸಿಲಿಂಡರಾಕಾರದ ಲೋಹದ ಪೆಟ್ಟಿಗೆಗಳು
    14. ಹಳದಿ ಬಣ್ಣದ ಒಂದು ಆಂಪಿಯರ್ ಮೀಟರ್
    15. ಎರಡು ಕಬ್ಬಿಣದ ಬ್ಲೇಡ್‌ಗಳು. ಎರಡೂ ಬದಿಗಳು ವಿದ್ಯುತ್ ತಂತಿಗಳಿಗೆ ಸಂಪರ್ಕ ಹೊಂದುವಂತೆ ಜೋಡಣೆ

    16. ಒಂದು ತಂತಿ ಕಟ್ಟರ್
    17. ಎರಡು ಮೊಬೈಲ್ ಚಾರ್ಜರ್‌ಗಳು
    18. ವಿದ್ಯುತ್ ತಂತಿಗಳೊಂದಿಗೆ ಜೋಡಿಸಲಾದ ಟೇಬಲ್ ಅಲಾರಾಂ ವಾಚ್
    19. ಒಂದು ಕಪ್ಪು ಬಣ್ಣದ ಟೇಪ್

  • ಪಾಕ್ ಸ್ಫೋಟಕ ನಾಶಗೊಳಿಸಿದ ಭಾರತೀಯ ಯೋಧರು – ವಿಡಿಯೋಗೆ ಭಾರೀ ಮೆಚ್ಚುಗೆ

    ಪಾಕ್ ಸ್ಫೋಟಕ ನಾಶಗೊಳಿಸಿದ ಭಾರತೀಯ ಯೋಧರು – ವಿಡಿಯೋಗೆ ಭಾರೀ ಮೆಚ್ಚುಗೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ಗಡಿ ನಿಯಂತ್ರಣ ರೇಖೆ ಬಳಿ ಬಿದ್ದಿದ್ದ ಪಾಕಿಸ್ತಾನ ಸೇನೆಯ ಸ್ಫೋಟಕವನ್ನು ಭಾರತೀಯ ಯೋಧರು ನಾಶಗೊಳಿಸಿರುವ ವಿಡಿಯೋ ವೈರಲ್ ಆಗಿದೆ.

    ಭಾನುವಾರ ಮೇಂದಾರ್ ಸೆಕ್ಟರ್ ನ ಬಾಲಕೋಟ್ ಪ್ರದೇಶದ ಮನೆಯೊಂದರ ಬಳಿ ಸ್ಫೋಟಕದ ಶೆಲ್ ಬಿದ್ದಿತ್ತು. ಇದನ್ನು ಕೆಲ ಗ್ರಾಮಸ್ಥರು ಗಮನಿಸಿದ್ದು, ಈ ಬಗ್ಗೆ ಸೇನಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷವೇ ಸೇನೆಯಲ್ಲಿನ ತಜ್ಞರು ಸ್ಥಳಕ್ಕೆ ಬಂದು ಸ್ಫೋಟಿಸದ ಮಾರ್ಟರ್ ಶೆಲ್ ಅನ್ನು ಸುರಕ್ಷಿತವಾಗಿ ನಾಶಗೊಳಿಸಿದ್ದಾರೆ.

    ಇಬ್ಬರು ಸೈನಿಕರು ಸ್ಫೋಟಕವನ್ನು ನಾಶ ಮಾಡಿದ ಕಾರ್ಯಾಚರಣೆಯ ವಿಡಿಯೋವನ್ನು ಭಾರತೀಯ ಸೇನೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದ್ದು ಯೋಧರ ಧೈರ್ಯ, ಶೌರ್ಯಕ್ಕೆ ಭಾರತೀಯರು ಸಲಂ ಹೊಡೆದಿದ್ದಾರೆ.

    ಪಾಕಿಸ್ತಾನ ಪಡೆಗಳು ಶನಿವಾರ ಬಾಲಕೋಟ್ ಸೇರಿ ವಿವಿಧ ಕಡೆಗಳಲ್ಲಿ ಗ್ರಾಮಗಳನ್ನು ಗುರಿಯಾಗಿಸಿ ಅಪ್ರಚೋದಿತವಾಗಿ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆ ಕೂಡಾ ಪ್ರತಿದಾಳಿ ನಡೆಸಿದೆ. ಆ ಬಳಿಕ ಭಾರತೀಯ ಶಿಬಿರವನ್ನು ಗುರಿಯಾಗಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮವನ್ನು ಉಲ್ಲಂಘಿಸಿತ್ತು. ಪಾಕಿಸ್ತಾನ ಸೇನೆ ಭಾನುವಾರ ರಾತ್ರಿ 10:30ರ ಹೊತ್ತಿಗೆ ಪೂಂಚ್ ಜಿಲ್ಲೆಯ ಬಾಲಕೋಟ್ ಸೆಕ್ಟರ್ ನಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತೀಯ ಭದ್ರತಾ ಪಡೆಗಳೂ ಕೂಡ ತಕ್ಕ ಪ್ರತ್ಯುತ್ತರ ಕೊಟ್ಟಿದೆ.

    ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರರು ಮಾತನಾಡಿ, ಈ ವರ್ಷ ಪಾಕಿಸ್ತಾನ 2,050 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ತಿಳಿಸಿದ್ದಾರೆ. ಈ ದಾಳಿಗಳಲ್ಲಿ 21 ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

    2003 ರ ಕದನ ವಿರಾಮ ಒಪ್ಪಂದಕ್ಕೆ ಬದ್ಧರಾಗಿರಲು ಮತ್ತು ಅಂತರರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆಯಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು ಭಾರತವು ಪಾಕಿಸ್ತಾನಕ್ಕೆ ಪದೇ ಪದೇ ಕರೆ ನೀಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜೊತೆಗೆ ಹೀಗೆ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದರೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ ತಯಾರಾಗಿದೆ ಎಂದು ಎಚ್ಚರಿಸಿದ್ದಾರೆ.

  • ವಿಡಿಯೋ: 10 ಸೆಕೆಂಡ್ ನಲ್ಲಿ 15 ಅಂತಸ್ತಿನ ಕಟ್ಟಡ ನೆಲಸಮ!

    ವಿಡಿಯೋ: 10 ಸೆಕೆಂಡ್ ನಲ್ಲಿ 15 ಅಂತಸ್ತಿನ ಕಟ್ಟಡ ನೆಲಸಮ!

    ಬೀಜಿಂಗ್: 15 ಅಂತಸ್ತಿನ ಕಟ್ಟಡವನ್ನು ಕೇವಲ 10 ಸೆಕೆಂಡ್ ಗಳಲ್ಲಿ ನೆಲಸಮ ಮಾಡಿರುವ ಘಟನೆ ಚೀನಾದಲ್ಲಿ ನಡೆದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಕಳೆದ ಕೆಲ ದಿನಗಳ ಹಿಂದೆ ಚೀನಾದ ಚೆಂಗ್ಡು ನಗರದಲ್ಲಿ 20 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದ ವಸ್ತು ಪ್ರದರ್ಶನ ಕಟ್ಟಡವನ್ನು ಸ್ಫೋಟಕ ಬಳಸಿ ಕೆಡವಲಾಗಿದೆ. ಕೇವಲ 10 ಸೆಕೆಂಡ್ ಗಳಲ್ಲಿ ನಡೆದ ಈ ಪ್ರಕ್ರಿಯೆಯಿಂದಾಗಿ ಕ್ಷಣ ಮಾತ್ರದಲ್ಲಿ ಸುತ್ತಲಿನ ಪ್ರದೇಶವ ಸಂಪೂರ್ಣ ದೂಳಿನಿಂದ ಆವೃತ್ತವಾಗಿತ್ತು.

    ಈ ದೃಶ್ಯಗಳನ್ನು ಸ್ಥಳೀಯ ವ್ಯಕ್ತಿ ತನ್ನ ಮೊಬೈಲ್ ನಲ್ಲಿ ಸೆರೆಡಿದಿದ್ದಾನೆ. ಕಟ್ಟಡ ನೆಲಸಮವಾದ ಬಳಿಕ ದೂಳಿನ ಪ್ರಮಾಣ ಕಡಿಮೆ ಮಾಡಲು ಕಾರ್ಮಿಕರು ಕಟ್ಟಡದ ಅವಶೇಷಗಳ ಮೇಲೆ ನೀರು ಸುರಿದಿದ್ದಾರೆ. ಸ್ಫೋಟಕ ಬಳಸಿ ಕಟ್ಟಡ ನೆಲ ಸಮ ಮಾಡುವ ವೇಳೆ ಹೊಗೆ ನಿರೋಧಕ ಫಿರಂಗಿಗಳನ್ನು ಬಳಕೆ ಮಾಡಲಾಗಿದೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.