Tag: ಸ್ಫೋಟಕ ವಸ್ತು

  • ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಳಿ ಸ್ಫೋಟಕ ವಸ್ತುಗಳು ಪತ್ತೆ

    ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಳಿ ಸ್ಫೋಟಕ ವಸ್ತುಗಳು ಪತ್ತೆ

    ಶಿವಮೊಗ್ಗ: ಜಿಲ್ಲೆಯ ಸೋಗಾನೆ ಸಮೀಪ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸುಮಾರು 3,200 ಡಿಟೋನೇಟರ್ ಹಾಗೂ 36 ಬಾಕ್ಸ್ ಜಿಲೆಟಿನ್ ಪೇಸ್ಟ್ ಕಂಡು ಬಂದಿದೆ.

    ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗುತಿತ್ತು. ಆದರೆ ಹುಣಸೋಡು ಬ್ಲಾಸ್ಟ್ ನಂತರ ಜಲ್ಲಿ ಕ್ರಷರ್ ಘಟಕಗಳು ಸ್ಥಗಿತಗೊಂಡಿವೆ. ಈ ಕಾರಣದಿಂದಾಗಿ ಕಾಮಗಾರಿಗೆ ಅಗತ್ಯವಾಗಿ ಬೇಕಾಗಿದ್ದ ಜಲ್ಲಿ ಕೊರತೆ ಉಂಟಾಗಿತ್ತು. ಜೊತೆಗೆ ಜಲ್ಲಿ ಕೊರತೆಯಿಂದಾಗಿ ಕಾಮಗಾರಿ ಸ್ಥಗಿತಗೊಳ್ಳಬಹುದು ಎಂಬ ಆತಂಕ ಕೂಡ ಎದುರಾಗಿತ್ತು. ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಜಲ್ಲಿ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದರು. ಜಲ್ಲಿ ಸಮಸ್ಯೆಯಿಂದ ಕಾಮಗಾರಿ ನಿಲ್ಲಬಾರದು ಎಂಬ ಕಾರಣದಿಂದಾಗಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ 4 ಎಕರೆ ಪ್ರದೇಶದಲ್ಲಿ ಜಲ್ಲಿ ಕ್ವಾರಿ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಅನುಮತಿ ನೀಡಿದ್ದರು.

    ಹೀಗಾಗಿಯೇ ವಿಮಾನ ನಿಲ್ದಾಣ ಕಾಮಗಾರಿಗೆ ಬೇಕಾದ ಜಲ್ಲಿ ಮತ್ತಿತ್ತರ ಸಾಮಾಗ್ರಿಯ ಬಳಕೆಗೆ ಸ್ಫೋಟಿಸುವ ಸಲುವಾಗಿ ಸ್ಫೋಟಕಗಳನ್ನು ಅಧಿಕೃತವಾಗಿಯೇ ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯೋರ್ವ ಪೂರೈಕೆ ಮಾಡಿದ್ದರು. 200 ಕಿ.ಮೀ. ದೂರಕ್ಕಿಂತ ಹೆಚ್ಚು ದೂರದ ಸ್ಥಳಕ್ಕೆ ಸ್ಫೋಟಕ ಸಾಮಾಗ್ರಿ ಸಾಗಾಟ ಮಾಡಬಾರದು ಎಂಬ ನಿಯಮ ಇದೆ. ಆದರೆ ಸ್ಫೋಟಕ ಸರಬರಾಜು ಸಂಬಂಧ ಪರವಾನಗಿ ಇದ್ದರೂ ಹೆಚ್ಚು ದೂರ ಸಾಗಾಟ ಮಾಡಿದ ಪರಿಣಾಮ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

    ಹುಣಸೋಡು ಘಟನೆ ಬಳಿಕ ಜಿಲ್ಲಾಡಳಿತ ಸ್ಫೋಟಕ ವಸ್ತುವನ್ನು ಸ್ಫೋಟಿಸಲು ಅನುಮತಿ ನಿರಾಕರಿಸಿತ್ತು. ಜಿಲ್ಲಾಡಳಿತದಿಂದ ಅನುಮತಿ ದೊರೆಯದ ಕಾರಣ ಸ್ಫೋಟಕ ಸರಬರಾಜುದಾರ ಸ್ಫೋಟಕವನ್ನು ಸ್ಥಳದಲ್ಲೇ ಬಿಟ್ಟು ತೆರಳಿದ್ದಾನೆ. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ತುಂಗಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಬೆಂಗಳೂರಿನ ಬಿಡಿಡಿಎಸ್ ಹಾಗೂ ಎಎಸ್‍ಸಿ ತಂಡ ಜಂಟಿ ಪರಿಶೀಲನೆ ನಡೆಸಿ, ನ್ಯಾಯಾಲಯದ ಅನುಮತಿ ಪಡೆದು ಸ್ಫೋಟಕ ನಿಷ್ಕ್ರಿಯಗೊಳಿಸಿದ್ದಾರೆ.

  • ಎಕೆ-47, 1,918 ಗುಂಡು, 2 ಹ್ಯಾಂಡ್ ಗ್ರೆನೆಡ್ -ಅಪಾರ ಪ್ರಮಾಣದ ಸ್ಫೋಟಕ ಪತ್ತೆ

    ಎಕೆ-47, 1,918 ಗುಂಡು, 2 ಹ್ಯಾಂಡ್ ಗ್ರೆನೆಡ್ -ಅಪಾರ ಪ್ರಮಾಣದ ಸ್ಫೋಟಕ ಪತ್ತೆ

    ಶ್ರೀನಗರ: ಉಗ್ರ ಸಂಘಟನೆ ಬಚ್ಚಿಟ್ಟದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಜಮ್ಮು -ಕಾಶ್ಮೀರದ ಅವಂತಿಪುರದಲ್ಲಿ ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

    ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಈ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಆಗಸ್ಟ್ 12 ರ ಮಧ್ಯರಾತ್ರಿ ನಡೆಸಿದ ಶೋಧ ಕಾರ್ಯದಲ್ಲಿ ಸ್ಫೋಟಕ ವಸ್ತುಗಳು ಲಭ್ಯವಾಗಿವೆ.

    ಗುರುವಾರ ಬೆಳಗ್ಗೆ ನಿಷೇಧಿತ ಸಂಘಟನೆಯ ಎರಡು ಅಡಗು ತಾಣಗಳ ಮೇಲೆ ದಾಳಿ ನಡೆಸಲಾಗಿತ್ತು. ಅಡಗು ತಾಣದಲ್ಲಿ ಮದ್ದುಗುಂಡು ಮತ್ತು ಸ್ಫೋಟಕ ವಸ್ತುಗಳ ಸಂಗ್ರಹ ಸ್ಥಳ ಪತ್ತೆಯಾಗಿದೆ. ಎಕೆ 47, 1,918 ಗುಂಡುಗಳು, ಎರಡು ಹ್ಯಾಂಡ್ ಗ್ರೆನೆಡ್, ಯಬಿಜಿಎಲ್ ಥ್ರೋವರ್, ಅಲ್ಯುಮಿನಿಯಂ ನೈಟ್ರೇಟ್ ತುಂಬಿದ ಬ್ಯಾಗ್, ಐದು ಜಿಲೆಟಿನ್ ಕಟ್ಟಿ, ಕ್ರೂಡ್ ಪೈಪ್ ಬಾಂಬ್ ಮತ್ತು ಮೂರು ಕೋಡ್ ಶೀಟ್ಸ್ ಲಭ್ಯವಾಗಿದೆ.

  • ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಗಳ ಬಂಧನ

    ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಗಳ ಬಂಧನ

    ದಾವಣಗೆರೆ: ಸ್ಕಾರ್ಪಿಯೋ ವಾಹನದಲ್ಲಿ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿಯಲ್ಲಿದ್ದ ಸ್ಫೋಟಕ ವಸ್ತುಗಳನ್ನು ದಾವಣಗೆರೆಯ ಜಿಲ್ಲೆಯ ಚನ್ನಗಿರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಆಂಧ್ರಪ್ರದೇಶದ ಅನಂತಪುರ ಮೂಲದ ವಿಜಯ್ ಗಣೇಶ (36) ಹಾಗೂ ಬಂಗರಾಜ್ (42) ಬಂಧಿತ ಆರೋಪಿಗಳು. ಚನ್ನಗಿರಿ ಪಟ್ಟಣದ ಚಿತ್ರದುರ್ಗ-ಶಿವಮೊಗ್ಗ ರಾಜ್ಯ ಹೆದ್ದಾರಿಯ ಗರಗ ಕ್ರಾಸ್‍ನಲ್ಲಿ ಈ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ 8800 ಜಿಲೆಟಿನ್ ಕಡ್ಡಿಗಳು, 3700 ಎಲೆಕ್ಟ್ರಾನಿಕ್ ಡಿಟೊನೇಟರ್, ಸ್ಕಾರ್ಪಿಯೋ ಕಾರು ಮತ್ತು 6 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.

    ಯಾವ ಕಾರಣಕ್ಕೆ ಸ್ಪೋಟಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆ ನಂತರ ತಿಳಿದು ಬರಬೇಕಿದೆ. ಡಿವೈಎಸ್ಪಿ ಪ್ರಶಾಂತ್ ಮನ್ನೋಳಿ ಮಾರ್ಗದರ್ಶನದಲ್ಲಿ ಸಿಪಿಐ ಆರ್. ಆರ್. ಪಾಟೀಲ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.