Tag: ಸ್ಯಾನಿಟೈಸ್

  • ನಮ್ಮ ಮಕ್ಕಳು ತಪ್ಪು ಮಾಡಿಲ್ಲ, ಬಿಟ್ಟುಬಿಡಿ – ಠಾಣೆ ಮುಂದೆ ಗಲಭೆಕೋರರ ಪೋಷಕರು ಕಣ್ಣೀರು

    ನಮ್ಮ ಮಕ್ಕಳು ತಪ್ಪು ಮಾಡಿಲ್ಲ, ಬಿಟ್ಟುಬಿಡಿ – ಠಾಣೆ ಮುಂದೆ ಗಲಭೆಕೋರರ ಪೋಷಕರು ಕಣ್ಣೀರು

    ಬೆಂಗಳೂರು: ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 300ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಡಿಜೆ ಹಳ್ಳಿ ಪೊಲೀಸ್ ಠಾಣೆ ಮುಂದೆ ಗಲಭೆಕೋರರ ಪೋಷಕರು ಜಮಾಯಿಸಿದ್ದಾರೆ.

    ಗಲಭೆ ಪ್ರಕರಣ ನಡೆದ ದಿನದಿಂದ ಡಿಜೆ ಹಳ್ಳಿ ಪೊಲೀಸರು ಮಿಡ್‍ನೈಟ್ ಕಾರ್ಯಾಚರಣೆ ಮಾಡುವ ಮೂಲಕ ಪ್ರತಿದಿನ ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಶನಿವಾರ ರಾತ್ರಿಯೂ ಸುಮಾರು 57 ಮಂದಿ ಗಲಭೆಕೋರರನ್ನ ಬಂಧಿಸಿದ್ದಾರೆ. ಆದ್ದರಿಂದ ಗಲಭೆಕೋರರ ಪೋಷಕರು ಡಿಜೆ ಹಳ್ಳಿ ಪೊಲೀಸ್ ಠಾಣೆ ಮುಂದೆ ಬಂದು ಗಲಾಟೆ ಮಾಡಿದ್ದಾರೆ.

    ನಮ್ಮ ಮಕ್ಕಳು ಗಲಾಟೆ ನಡೆದ ದಿನ ಇರಲಿಲ್ಲ. ಕೆಲಸ ಮುಗಿಸಿ ಬಂದು ಮಕ್ಕಳು ಮಲಗಿದ್ದರು. ಆದರೆ ಪೊಲೀಸರು ಮಧ್ಯರಾತ್ರಿ ಬಂದು ಮಲಗಿದ್ದವರನ್ನು ಕರೆದುಕೊಂಡು ಬಂದಿದ್ದಾರೆ. ಅವರನ್ನು ನೋಡಲು, ಮಾತನಾಡಲು ಬಿಡುತ್ತಿಲ್ಲ. ನಮ್ಮ ಮಕ್ಕಳು ತಪ್ಪು ಮಾಡಿಲ್ಲ. ಅವರನ್ನ ಬಿಟ್ಟು ಬಿಡಿ ಎಂದು ಸ್ಟೇಷನ್ ಮುಂದೆ ಪೋಷಕರು ಕಣ್ಣೀರು ಹಾಕಿದ್ದಾರೆ.

    ಪೋಷಕರನ್ನ ಠಾಣೆ ಮುಂದೆ ಜಮಾಯಿಸದಂತೆ ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಗಲಭೆ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಇರುವ ಹಿನ್ನಲೆಯಲ್ಲಿ ಯಾವುದೇ ಗುಂಪು, ಜಮಾವಣೆ ಮಾಡದಂತೆ ಪೋಷಕರನ್ನ ವಾಪಸ್ ಕಳಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪ್ರತಿ ದಿನ ಸ್ಟೇಷನ್ ಮುಂದೆ ಪೋಷಕರು ಬರುತ್ತಿದ್ದಾರೆ.

    ಇತ್ತ ಡಿಜೆ ಹಳ್ಳಿ ಪೊಲೀಸ್ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಡಿಜೆ ಹಳ್ಳಿ ಪೊಲೀಸರು ಗಲಭೆ ಆರೋಪಿಗಳನ್ನ ಬಂಧಿಸಿದ್ದರು. ಕೆಲವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಠಾಣೆ ಆವರಣ, ಒಳಗೆ, ಮುಂಭಾಗ ಸ್ಯಾನಿಟೈಸ್ ಮಾಡಲಾಗುತ್ತಿದೆ.

  • ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ

    ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ

    -ಧಾರ್ಮಿಕ ಕ್ಷೇತಗಳಲ್ಲಿ ಪ್ರಸಾದ, ತೀರ್ಥ ನೀಡುವಂತಿಲ್ಲ

    ನವದೆಹಲಿ: ಕೇಂದ್ರ ಸರ್ಕಾರ ಎಲ್ಲಾ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಕಂಟೈನ್ಮೆಂಟ್ ಝೋನ್‍ಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಿದೆ. ಜೂನ್ 8ರಿಂದ ಮಂದಿರ, ಮಸೀದಿ, ಚರ್ಚ್ ತೆರೆಯಲಿದೆ.

    ಕೇಂದ್ರದ ಮಾರ್ಗಸೂಚಿಯಂತೆ ಧಾರ್ಮಿಕ ಕ್ಷೇತಗಳಲ್ಲಿ ಪ್ರಸಾದ, ತೀರ್ಥ ನೀಡುವಂತಿಲ್ಲ ಎಂದು ತಿಳಿಸಿದ್ದು, 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನ ಮಕ್ಕಳನ್ನು ಧಾರ್ಮಿಕ ಕೇಂದ್ರಗಳಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ಫೇಸ್ ಕವರ್ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ. ಸಾಮೂಹಿಕ ಪ್ರಾರ್ಥನೆ ಬದಲಾಗಿ, ವೈಯಕ್ತಿಕ ಪೂಜೆಗಳಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದೆ.

    ಧಾರ್ಮಿಕ ಕ್ಷೇತ್ರವನ್ನು ನಿಯಮಿತವಾಗಿ ಸ್ವಚ್ಛ ಮಾಡುವುದು, ನಿಯಮಿತವಾಗಿ ಕೈ ಸ್ಯಾನಿಟೈಸ್ ಅಥವಾ ಸಾಬೂನಿಂದ ಕೈ ತೊಳೆದುಕೊಳ್ಳಲು ತಿಳಿಸಿದೆ. ಕೆಮ್ಮುವಾಗ ಸೀನುವಾಗ ಟಿಶು, ಕರವಸ್ತ್ರ ಬಳಸಿದ ಬಳಿಕ ಸೂಕ್ತವಾಗಿ ವಿಲೇವಾರಿ ಮಾಡಬೇಕು. ಧಾರ್ಮಿಕ ಕೇಂದ್ರ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮತ್ತು ಕೈ ಸ್ವಚ್ಛ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ರೋಗದ ಗುಣಲಕ್ಷಣಗಳ ಇಲ್ಲದವರಿಗೆ ಮಾತ್ರ ಪ್ರವೇಶ ನೀಡಲು ಸೂಚನೆ ನೀಡಿದೆ. ಧಾರ್ಮಿಕ ಕ್ಷೇತ್ರಗಳಲ್ಲಿ ಕೊರೊನಾ ಮುನ್ನೆಚ್ಚರಿಕೆಗಳ ಬಗ್ಗೆ ಭಿತ್ತಿ ಪತ್ರ ಪೋಸ್ಟರ್ ಪ್ರದರ್ಶನ ಮಾಡುವುದು. ವಿಡಿಯೋ, ಆಡಿಯೋಗಳನ್ನು ಪ್ಲೇ ಮಾಡುವುದು ಕಡ್ಡಾಯ ಮಾಡಲಾಗಿದೆ.

    ಧಾರ್ಮಿಕ ಕೇಂದ್ರಗಳಲ್ಲಿ ಪ್ರವೇಶವನ್ನು ನಿಯಂತ್ರಿಸಣ, ಸಮಯದ ಆಧಾರದಲ್ಲಿ ಶಿಫ್ಟ್ ಗಳನ್ನು ಮಾಡಲು ತಿಳಿಸಿದೆ. ಅಲ್ಲದೇ ಶೂ ಚಪ್ಪಲಿಗಳನ್ನು ಭಕ್ತರು ವಾಹನದಲ್ಲಿ ಇಟ್ಟುಕೊಳ್ಳಬೇಕು, ಧಾರ್ಮಿಕ ಕ್ಷೇತ್ರದ ಒಳ ತರುವಂತಿಲ್ಲ, ಅನಿವಾರ್ಯವಾದರೆ ಚಪ್ಪಲಿಗಳನ್ನು ಪ್ರತ್ಯೇಕಿಸಿ ಇಡಬೇಕು ಎಂದು ಸೂಚಿಸಿದೆ.

    ಧಾರ್ಮಿಕ ಕ್ಷೇತ್ರದೊಳಗೆ ಸಾಮಾಜಿಕ ಅಂತರಕ್ಕೆ ಸೂಕ್ತ ಮಾರ್ಕ್ ಮಾಡುವುದು. ಧಾರ್ಮಿಕ ಕೇಂದ್ರದ ಆವರಣದೊಳಗಿನ ಅಂಗಡಿಗಳು, ಹೋಟೆಲ್, ಪಾರ್ಕಿಂಗ್ ಪ್ರದೇಶದಲ್ಲಿ ಅಂತರ ಕಾಯ್ದುಕೊಳ್ಳಬೇಕು. ಧಾರ್ಮಿಕ ಸ್ಥಳಗಳ ಪ್ರವೇಶ ಮತ್ತು ನಿರ್ಗಮನ ಪ್ರತ್ಯೇಕವಾಗಿಡುವ ಸಲಹೆಯನ್ನು ನೀಡಿದೆ. ಯಾವುದೇ ಸ್ಥಳದಲ್ಲಿ ಎಸಿಗಳ ಬಳಕೆ ಬಿಟ್ಟು ನೈಸರ್ಗಿಕ ಗಾಳಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದೆ.