Tag: ಸ್ವಚ್ಛತಾ ಆಂದೋಲನ

  • ಸ್ವಚ್ಛತಾ ಕಾರ್ಯ ಮಾಡಿ ಜಾಗೃತಿ ಮೂಡಿಸಿದ ಶ್ರೀಗಳು

    ಸ್ವಚ್ಛತಾ ಕಾರ್ಯ ಮಾಡಿ ಜಾಗೃತಿ ಮೂಡಿಸಿದ ಶ್ರೀಗಳು

    ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರಿನಲ್ಲಿ ಗ್ರಾಮಪಂಚಾಯ್ತಿ ವತಿಯಿಂದ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸ್ವಚ್ಛತಾ ಕಾರ್ಯದಲ್ಲಿ ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀ, ಮಾಸೂರಿನ ಮಹಾಂತ ಶ್ರೀ ಹಾಗೂ ಕೂಡಲಮಠದ ಶ್ರೀಗಳು ಪೂರಕೆ ಹಿಡಿದು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

    ಮಾಸೂರಿನ ವರಕವಿ ಸರ್ವಜ್ಞನ ಪ್ರತಿಮೆ ಸುತ್ತಮುತ್ತವಿರುವ ಕಸ ತೆಗೆದು ಸ್ವಚ್ಛಗೊಳಿಸಲಾಯಿತು. ಹುಕ್ಕೇರಿ ಮಠದ ಶ್ರೀಗಳಿಗೆ ತಿಪ್ಪಾಯಿಕೊಪ್ಪದ ಮಹಂತದೇವರು, ಹಾವೇರಿ ಕೂಡಲದ ಗುರುನಂಜೇಶ್ವರ ಮಠದ ಮಹೇಶ್ವರ ಸ್ವಾಮೀಜಿಗಳು ಸ್ವಚ್ಛತಾ ಕಾರ್ಯಕ್ಕೆ ಸಾಥ್ ನೀಡಿದರು. ಅಲ್ಲದೆ ಈ ಕಾರ್ಯದಲ್ಲಿ ಗ್ರಾಮ ಪಂಚಾಯ್ತಿ ಸಿಬ್ಬಂದಿ ಹಾಗೂ ಕೆಲ ಜನರು ಭಾಗವಹಿಸಿದ್ದು ವಿಶೇಷವಾಗಿತ್ತು.

    ಈ ಸಂದರ್ಭದಲ್ಲಿ ಹುಕ್ಕೇರಿಮಠದ ಸದಾಶಿವಶ್ರೀಗಳು ಮಾತನಾಡಿ, ಪ್ರತಿಯೊಬ್ಬರು ಸ್ವಚ್ಛತಾ ಕಾರ್ಯಕ್ರಮ ನಡೆಸುವ ಮೂಲಕ ಆರೋಗ್ಯಕರ ವಾತಾವರಣ ನಿರ್ಮಿಸಿಕೊಳ್ಳುವಂತೆ ತಿಳಿಸಿದರು.

  • ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಯುವಕರ ಸ್ವಚ್ಛತಾ ಆಂದೋಲನ

    ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಯುವಕರ ಸ್ವಚ್ಛತಾ ಆಂದೋಲನ

    ಹಾವೇರಿ: ಗ್ರಾಮದ ನೈರ್ಮಲ್ಯ ಹಾಗೂ ಸ್ವಚ್ಛತೆ ಬಹಳ ಪ್ರಮುಖ ಪಾತ್ರವಹಿಸುತ್ತದೆ. ಹಾಗಾಗಿ ಹಾವೇರಿ ತಾಲೂಕು ಬೆಳವಿಗಿ ಗ್ರಾಮದಲ್ಲಿ ಯುವಕರ ತಂಡ ಹಾಗೂ ಕರವೇ ಕಾರ್ಯಕರ್ತರು ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವಚ್ಛತಾ ಆಂದೋಲನ ನಡೆಸಿದರು.

    ಯುವಶಕ್ತಿಯ ಪಡೆಯನ್ನ ಕಟ್ಟಿಕೊಂಡು ಗ್ರಾಮದ ಪ್ರಮುಖ ರಸ್ತೆಗಳ ಸ್ವಚ್ಛತಾ ಕಾರ್ಯ ಹಾಗೂ ಸುಮಾರು ದಿನಗಳಿಂದ ತುಂಬಿ ನಿಂತಿರುವ ಚರಂಡಿಗಳನ್ನು ಕ್ಲೀನ್ ಮಾಡುವ ಕಾರ್ಯ ಮಾಡಿದರು. ಗ್ರಾಮದ ಶಾಲಾ ಆವರಣದ ಸುತ್ತಮುತ್ತಲು. ಬಸ್ ನಿಲ್ದಾಣದ ಬಳಿ ಹಾಗೂ ಗ್ರಾಮಕ್ಕೆ ಬರುವ ಪ್ರಮುಖ ರಸ್ತೆಯನ್ನು ಗ್ರಾಮ ಪಂಚಾಯತಿ ಸಿಬ್ಬಂದಿ ಸೇರಿದಂತೆ ಹಲವು 20 ಕ್ಕೂ ಅಧಿಕ ಗ್ರಾಮದ ಯುವಕರ ತಂಡ ಸ್ವಚ್ಛತಾ ಅಭಿಯಾನ ಮಾಡಿದರು.

    ಗ್ರಾಮದ ಹೊರಗೆ ಇರೋ ರಸ್ತೆಯಲ್ಲಿ ಬರ್ಹಿದೆಸೆ ಹೋಗುವುದನ್ನ ನಿಲ್ಲಿಸಿ, ಮನೆಗೆ ಒಂದು ಶೌಚಾಲಯ ನಿರ್ಮಾಣ ಮಾಡಿಕೊಳ್ಳಿ, ಯಾವುದೇ ರೋಗ ರುಜಿನಗಳು ಬರೋದಿಲ್ಲ. ಬೆಳವಿಗಿ ಗ್ರಾಮವನ್ನ ಮುಂದಿನ ದಿನಗಳಲ್ಲಿ ಸ್ವಚ್ಛ ಸುಂದರ ಗ್ರಾಮವನ್ನಾಗಿ ಮಾಡುವ ಗುರಿಯನ್ನು ಯುವಕರ ತಂಡ ಹೊಂದಿದೆ. ಈ ತಂಡದ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.