Tag: ಸ್ವಚ್ಛತೆ

  • ಬಸ್ ನಿಲ್ದಾಣ ಸ್ವಚ್ಛ ಮಾಡಿದ್ರು NWKRTC ಅಧಿಕಾರಿಗಳು..!

    ಬಸ್ ನಿಲ್ದಾಣ ಸ್ವಚ್ಛ ಮಾಡಿದ್ರು NWKRTC ಅಧಿಕಾರಿಗಳು..!

    ಗದಗ: ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಕಾರ್ಮಿಕರ ಮುಷ್ಕರ ಹಿನ್ನೆಲೆ ಸ್ವಚ್ಛತಾ ಸಿಬ್ಬಂದಿ ಬಾರದೆ ಸ್ವತಃ NWKRTC ಅಧಿಕಾರಿಗಳೇ ಜಿಲ್ಲೆಯ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಿದ್ದಾರೆ.

    ಇಂದು ಮತ್ತು ನಾಳೆ ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ಕೊಟ್ಟಿವೆ. ಈ ಮುಷ್ಕರಕ್ಕೆ ಬಹುತೇಕ ಕಾರ್ಮಿಕರು ಬೆಂಬಲ ನೀಡುತ್ತಿದ್ದು, ಇಂದು ಕೆಲಸ ನಿರ್ವಹಿಸಲು ನಿರಾಕರಿಸಿದ್ದಾರೆ. ಹೀಗಾಗಿ ಇಂದು ಜಿಲ್ಲೆಯ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಮಾಡಲು ಸಿಬ್ಬಂದಿ ಬರದಿದ್ದ ಕಾರಣ ಸ್ವತಃ ಅಧಿಕಾರಿಗಳೇ ನಿಲ್ದಾಣವನ್ನು ಸ್ವಚ್ಛಗೊಳಿಸಲು ಮುಂದಾದರು. ಕೈಯಲ್ಲಿ ಪೊರಕೆ ಹಿಡಿದು ಬಸ್ ನಿಲ್ದಾಣದ ಮೇಲ್ವಿಚಾರಕರು ಹಾಗೂ ಇತರೇ ಅಧಿಕಾರಿಗಳು ಸ್ವಚ್ಛತಾ ಕಾರ್ಯವನ್ನು ಮಾಡಿದ್ದಾರೆ.

    ಭಾರತ್ ಬಂದ್ ಹಿನ್ನಲೆಯಲ್ಲಿ ಬಸ್ ಸಂಚಾರ ಸ್ಥಗಿತವಾಗಿದೆ. ಆದ್ರೆ ಬಸ್ ನಿಲ್ದಾಣದಲ್ಲಿ ಕಸವಿದ್ದ ಕಾರಣಕ್ಕೆ, ಇಡೀ ಬಸ್ ನಿಲ್ದಾಣಕ್ಕೆ ನೀರು ಹೊಡೆದು ಕಸ ಗುಡಿಸಿ ಸಾರಿಗೆ ಅಧಿಕಾರಿಗಳು ಸ್ವಚ್ಛ ಮಾಡಿದ್ದಾರೆ. ಬೆಳಿಗ್ಗೆಯಿಂದ ಬಸ್ ಹಾಗೂ ಪ್ರಯಾಣಿಕರು ಇಲ್ಲದೇ ಬಣಗುಡುತ್ತಿರುವ ಬಸ್ ನಿಲ್ದಾಣದ ಸ್ವಚ್ಛತೆ ಕಾಪಾಡಿದ ಅಧಿಕಾರಿಗಳ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಸ್ತೆಯಲ್ಲಿದ್ದ ತಲೆಕೂದಲಿನ ರಾಶಿ ಗುಡಿಸಿ ಸ್ವಚ್ಛಗೊಳಿಸಿದ ಶಾಸಕ

    ರಸ್ತೆಯಲ್ಲಿದ್ದ ತಲೆಕೂದಲಿನ ರಾಶಿ ಗುಡಿಸಿ ಸ್ವಚ್ಛಗೊಳಿಸಿದ ಶಾಸಕ

    ಬೆಂಗಳೂರು: ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಬೆಳ್ಳಂಬೆಳಗ್ಗೆ ಪೌರಕಾರ್ಮಿಕರಾಗಿ, ಉತ್ತಮ ಕೆಲಸದ ಮೂಲಕ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

    ಶಾಸಕ ಸುರೇಶ್ ಕುಮಾರ್ ಅವರು ಇಂದು ಬೆಳಗ್ಗೆ 4.30ರ ವೇಳೆಗೆ ವಾಕಿಂಗ್ ತೆರಳಿದ್ದರು. ಆಗ ಕಾಮಾಕ್ಷಿಪಾಳ್ಯದ ಆಲದ ಪಾರ್ಕ್ ನ ಪಶ್ಚಿಮ ರಸ್ತೆಯಲ್ಲಿ ತಲೆ ಕೂದಲಿನ ರಾಶಿ ರಸ್ತೆ ತುಂಬಾ ಹರಡಿತ್ತು. ಇದು ವಾಕಿಂಗ್ ಬರುವವರಿಗೆ ಮುಜುಗುರ ಉಂಟು ಮಾಡುತ್ತದೆ ಅಂತ ಅರಿತ ಶಾಸಕರು, ಪಕ್ಷದ ಕಾರ್ಯಕರ್ತ ಉಮೇಶ್ ಜೊತೆಗೆ ಸೇರಿ ಸ್ವಚ್ಛಗೊಳಿಸಿದ್ದಾರೆ. ಪೊರಕೆಯಿಂದ ಗುಡಿಸಿ, ಬರಿ ಕೈಯಲ್ಲೇ ಕಸವನ್ನು ಎತ್ತಿ ಹಾಕಿದ್ದಾರೆ.

    ಈ ಕುರಿತು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಫೋಟೋ ಹಾಗೂ ಮಾಹಿತಿ ನೀಡಿ ಪೋಸ್ಟ್ ಮಾಡಿದ್ದಾರೆ. ಸುರೇಶ್ ಕುಮಾರ್ ಅವರ ಕೆಲಸವನ್ನು ಮೆಚ್ಚಿ ಅನೇಕ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಪೋಸ್ಟ್ 7 ಗಂಟೆಯಲ್ಲಿ 1,700 ಜನರು ಲೈಕ್ ಮಾಡಿದ್ದು, 381 ಜನ ಕಮೆಂಟ್ ಹಾಗೂ 282 ಜನರು ಶೇರ್ ಮಾಡಿಕೊಂಡಿದ್ದಾರೆ.

    ನಿಮ್ಮಂತಹ ಮಾದರಿ ಶಾಸಕರು ರಾಜ್ಯಕ್ಕೆ ಬೇಕು. ನೀವು ಸರಳ, ಸಜ್ಜನಿಕೆಯ ರಾಜಕಾರಣಿ. ನಿಮ್ಮ ಕೆಲಸದ ಮೂಲಕ ನಿಮ್ಮ ಬೆಂಬಲಿಗರನ್ನು, ಕಾರ್ಯಕರ್ತರನ್ನು ಪ್ರೋತ್ಸಾಹಿಸುತ್ತಿರುವಿರಿ ಎಂದು ಅನೇಕ ನೆಟ್ಟಿಗರು ಅಭಿನಂದನೆ ಸಲ್ಲಿಸಿ ಗುಣಗಾನ ಮಾಡಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?:
    ಇಂದು ಬೆಳಗಿನ ಜಾವವೇ ಸಮಾಧಾನ ಕೊಟ್ಟ ಕೆಲಸವಿದು. ಸುಮಾರು 4.30 ಗಂಟೆಗೆ ಬೆಳಗಿನ ನಡಿಗೆಯಲ್ಲಿ ತೊಡಗಿದ್ದಾಗ ಕಾಮಾಕ್ಷಿಪಾಳ್ಯದ ಆಲದ ಪಾರ್ಕ್ ನ ಪಶ್ಚಿಮ ರಸ್ತೆಯಲ್ಲಿ ತಲೆ ಕೂದಲಿನ ರಾಶಿ ರಸ್ತೆ ತುಂಬಾ ಹರಡಿತ್ತು. ಇದು ಹತ್ತಿರದ ಹೇರ್ ಡ್ರೆಸ್ಸಿಂಗ್ ಸಲೂನ್ ಕೃಪೆ ಮತ್ತು ಬೀದಿ ನಾಯಿಗಳ ಕೊಡುಗೆ. ಈ ಭಾಗದಲ್ಲಿ ಬಹಳ ಸಂಖ್ಯೆಯಲ್ಲಿ ನಾಗರಿಕರು ಬೆಳಗ್ಗೆ ವಾಕಿಂಗ್ ಬರುವುದರಿಂದ ಅವರಿಗೆ ಅಸಹ್ಯ ಉಂಟಾಗುವ ಸಂಭವ ಮನಗಂಡೆ. ತಕ್ಷಣ ಹತ್ತಿರವೇ ವಾಸವಿರುವ ನಮ್ಮ ಪಕ್ಷದ ಕಾರ್ಯಕರ್ತ ಉಮೇಶ್ ಅವರಿಗೆ ಫೋನ್ ಮಾಡಿ ಎರಡು ಪೊರಕೆ ತರುವಂತೆ ಮನವಿ ಮಾಡಿದೆ.

    ಉಮೇಶ್ ಅವರು ಬಂದ ನಂತರ ಇಬ್ಬರೂ ಸೇರಿ ಅದನ್ನು ಗುಡಿಸಿ ಒಂದು ಚೀಲದಲ್ಲಿ ತುಂಬಿ ಅಲ್ಲಿಂದ ರವಾನೆ ಮಾಡಿದೆವು. ನಮ್ಮ ನಾಗರಿಕರಿಗೆ ಅಸಹ್ಯ ವಾತಾವರಣವಾಗದಂತೆ ಸ್ವಚ್ಛ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. ಆ ಕೂದಲ ರಾಶಿಯನ್ನೆಲ್ಲಾ ನಾವಿಬ್ಬರು ಬರಿ ಕೈಯಲ್ಲೇ ಎತ್ತಿ ತುಂಬುತ್ತಿದ್ದಾಗ ಅಲ್ಲಿ ಬಂದ ಒಂದಿಬ್ಬರು ಆಶ್ಚರ್ಯ ಮತ್ತು ಆಕ್ಷೇಪಣೆ ವ್ಯಕ್ತಪಡಿಸಿದರು. ಆದರೆ ವಿಧಿಯಿರಲಿಲ್ಲ. ಖುಷಿ ಕೊಟ್ಟ “ಸ್ವಚ್ಛತಾ ಕಾರ್ಯಕ್ರಮ” ವಿದು. ಈ ಕೆಲಸಕ್ಕೆ ಸಹಾಯ ಮಾಡಿದ ಉಮೇಶ್ ಅವರಿಗೆ ಧನ್ಯವಾದಗಳು ಎಂದು ಬರೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಿರಣ್ಯಕೇಶಿ ನದಿ, ಹೂಳೆಮ್ಮ ದೇವಾಲಯದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ!

    ಹಿರಣ್ಯಕೇಶಿ ನದಿ, ಹೂಳೆಮ್ಮ ದೇವಾಲಯದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ!

    ಬೆಳಗಾವಿ(ಚಿಕ್ಕೋಡಿ): ಹುಕ್ಕೇರಿ ಹಿರೇಮಠದಿಂದ ಆಯೋಜಿಸಿರುವ ಪ್ಲಾಸ್ಟಿಕ್ ಮುಕ್ತ ಭಾರತ ಅಭಿಯಾನದಡಿಯಲ್ಲಿ ಶುಕ್ರವಾರ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿ ಹಾಗೂ ಸುಕ್ಷೇತ್ರ ಹೊಳೆಮ್ಮ ದೇವಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು.

    ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ರಾಮಚಂದ್ರ ರಾವ್ ಅಭಿಯಾನಕ್ಕೆ ಚಾಲನೆ ನೀಡಿದರು. ಸ್ವತಃ ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ರಾಮಚಂದ್ರನ ನದಿ ಸ್ವಚ್ಛತೆಯನ್ನು ಮಾಡಿದರು. ಸ್ವಚ್ಛತೆ ಸಂದರ್ಭದಲ್ಲಿ ಹುಕ್ಕೇರಿ ಸ್ವಾಮೀಜಿ ಅವರ ಬೆರಳಿಗೆ ಗಾಜು ಚುಚ್ಚಿ ರಕ್ತ ಬಂದ ಘಟನೆ ನಡೆಯಿತು.

    ನದಿ ತಟದಲ್ಲಿರುವ ಸುಕ್ಷೇತ್ರ ಹೊಳೆಮ್ಮ ದೇವಸ್ಥಾನವನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ನಿಟ್ಟಿನಲ್ಲಿ 25 ಸಾವಿರ ಬಟ್ಟೆಯ ಬ್ಯಾಗ್ ಗಳನ್ನು ಹುಕ್ಕೇರಿ ಹಿರೇಮಠದ ವತಿಯಿಂದ ಅಂಗಡಿ ಮಾಲೀಕರಿಗೆ ನೀಡಲಾಯಿತು. ಪ್ಲಾಸ್ಟಿಕ್ ಎಲ್ಲರಿಗೂ ಮಾರಕವಾಗಿದ್ದು ಪ್ಲಾಸ್ಟಿಕ್ ಬಳಸುವುದನ್ನು ಜನ ನಿಲ್ಲಿಸಬೇಕು ಎಂದು ಸ್ವಾಮೀಜಿ ವಿನಂತಿಸಿಕೊಂಡರು.

    ಕೇವಲ ದಂಡ ಹಾಕಿದರೆ ಪ್ಲಾಸ್ಟಿಕ್ ನಿಷೇಧ ಆಗುವುದಿಲ್ಲ. ಪ್ರೀತಿಯಿಂದ ಜನ ಪ್ಲಾಸ್ಟಿಕ್ ನಿಷೇಧ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಜಿಲ್ಲೆಯ 9 ನದಿಗಳ ಸ್ವಚ್ಛತೆ ಕಡೆ ಗಮನ ಹರಿಸುವುದರ ಜೊತೆಗೆ ಜಾಗೃತಿ ಮೂಡಿಸಲಾಗುವುದು ಎಂದು ಸಿಇಒ ರಾಮಚಂದ್ರ ರಾವ್ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪುರಾಣ ಪ್ರಸಿದ್ಧ ಭೋಗನಂದೀಶ್ವರ ದೇಗುಲದಲ್ಲಿ ದೀಪ ಬೆಳಗಲು ಬ್ರೇಕ್!

    ಪುರಾಣ ಪ್ರಸಿದ್ಧ ಭೋಗನಂದೀಶ್ವರ ದೇಗುಲದಲ್ಲಿ ದೀಪ ಬೆಳಗಲು ಬ್ರೇಕ್!

    – ಶಿವನ ಭಕ್ತರ ಭಾವನೆಗೆ ನೋವು ತಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ!
    – ದೀಪ ಹಚ್ಚುವ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ್ದಕ್ಕೆ ಭಕ್ತರ ಆಕ್ರೋಶ

    ಚಿಕ್ಕಬಳ್ಳಾಪುರ: ನೂರಾರು ವರ್ಷಗಳ ಇತಿಹಾಸವಿರುವ ಪುರಾಣಪ್ರಸಿದ್ಧ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುತ್ತಿರುವ ಭೋಗನಂದೀಶ್ವರ ದೇವಾಲಯದಲ್ಲಿ ದೀಪವನ್ನು ಬೆಳಗದಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದ್ದಕ್ಕೆ ಭಕ್ತರಿಂದ ಆಕ್ರೋಶ ಕೇಳಿ ಬಂದಿದೆ.

    ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿರುವ ಪುರಾತನ ಐತಿಹಾಸ ಪ್ರಸಿದ್ಧ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಶಿವ ಪಾರ್ವತಿ, ಅರುಣಾಚಲೇಶ್ವರ, ಗಿರಿಜಾಂಭ ಸೇರಿದಂತೆ ಪ್ರಮುಖ ದೇವರುಗಳು ನೆಲೆಸಿದ್ದಾರೆ ಎನ್ನುವ ನಂಬಿಕೆಯಿದೆ.

    ಬೆಂಗಳೂರಿಗೆ ಹತ್ತಿರದಲ್ಲಿರುವ ಶಿವ ದೇವಸ್ಥಾನ ಎನ್ನುವ ಕಾರಣಕ್ಕೆ ಪ್ರತಿದಿನ ಸಾವಿರಾರು ಜನ ಶಿವನ ಭಕ್ತರು ಈ ದೇವಸ್ಥಾನಕ್ಕೆ ಬರುತ್ತಾರೆ. ಕಾರ್ತಿಕ ಮಾಸ ಬಂದರೆ ಸಾಕು ಪ್ರತಿದಿನ ಜನಜಾತ್ರೆ ಇಲ್ಲಿರುತ್ತದೆ. ಅದರಲ್ಲೂ ಕಾರ್ತಿಕ ಮಾಸದ ಸೋಮವಾರ ದಿನವಂತೂ ಜನಜಂಗುಳಿಯೇ ಇಲ್ಲಿರುತ್ತದೆ.

    ದೇವಸ್ಥಾನಕ್ಕೆ ಬಂದ ಶಿವನ ಭಕ್ತರು, ದೇವಾಲಯದ ವರಾಂಡದಲ್ಲಿ, ಒಳಾಂಗಣ ಪ್ರಾಂಗಣದಲ್ಲಿ ತಮ್ಮ ಇಷ್ಟಾರ್ಥ ಕೋರಿಕೆಗಳನ್ನು ಈಡೇರಿಸುವಂತೆ ಪ್ರಾರ್ಥಿಸಿ, ತುಪ್ಪ, ಎಳ್ಳೆಣ್ಣೆ, ಅರಳೆಣ್ಣೆ ದೀಪ ಹಚ್ಚುವುದು ವಾಡಿಕೆ. ಆದರೆ ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ದೇವಸ್ಥಾನದ ಒಳಾಂಗಣದ ಪ್ರಾಂಗಣದಲ್ಲಿ ದೀಪ ಹಚ್ಚುವುದನ್ನು ನಿಷೇಧಿಸಿದೆ.

    ನಿಷೇಧ ಯಾಕೆ?
    ಶ್ರೀ ಭೋಗನಂದೀಶ್ವರ ದೇವಾಲಯ ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣ ಇಲಾಖೆ ಅಧೀನದಲ್ಲಿದೆ. ಆದರೆ ದೇವಸ್ಥಾನದ ಪೂಜಾ ಕೈಕಂರ್ಯಗಳು ಮಾತ್ರ ಮುಜರಾಯಿ ಇಲಾಖೆಯ ಅಧೀನದಲ್ಲಿದೆ. ಇವರಿಬ್ಬರ ಮಧ್ಯೆ ದೇವಸ್ಥಾನದ ಸ್ವಚ್ಛತೆಯನ್ನು ನೀವು ಮಾಡಿ ತಾವು ಮಾಡಿ ಅಂತ ಭಿನ್ನಾಭಿಪ್ರಾಯಗಳಿವೆ. ಹೀಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದೀಪ ಹಚ್ಚುವುದನ್ನು ದೇವಸ್ಥಾನದ ಪ್ರಾಂಗಣದಲ್ಲಿ ಅವಕಾಶ ಕೊಟ್ಟರೆ ಎಣ್ಣೆಯ ಹೊಳೆ ಹರಿದು ಕೊನೆಗೆ ದೇವಸ್ಥಾನಕ್ಕೆ ಧಕ್ಕೆ ಆಗುತ್ತದೆ. ಈ ಕಾರಣಕ್ಕೆ ದೇವಸ್ಥಾನ ಸಂರಕ್ಷಣೆಗೆ ಕಠಿಣ ನಿರ್ಧಾರ ಕೈಗೊಳ್ಳಬೇಕಾಯಿತು. ಭಕ್ತರು ಸಹಕರಿಸುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಮನವಿ ಮಾಡಿದ್ದಾರೆ.

    ದೇವಸ್ಥಾನ ಸಂರಕ್ಷಣೆ ಹಿತ ದೃಷ್ಟಿಯಿಂದ ದೇವಸ್ಥಾನ ಒಳಾಂಗಣ ಪ್ರಾಂಗಣದಲ್ಲಿ ದೀಪದ ಎಣ್ಣೆ ಹಚ್ಚುವುದನ್ನು ಚಿಕ್ಕಬಳ್ಳಾಪರ ಜಿಲ್ಲಾಡಳಿತ ನಿಷೇಧ ಮಾಡಿದೆ. ಆದರೆ ವಾಡಿಕೆಯಂತೆ ದೇವಸ್ಥಾನದಲ್ಲಿ ದೀಪ ಹಚ್ಚಲು ಬಂದ ಶಿವನ ಭಕ್ತರು, ಈ ಬದಲಾವಣೆಯಿಂದ ಅಸಮಾಧಾನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವರ ಮೇಲಿನ ಭಕ್ತಿಯಿಂದ ಬಯಲು ಪ್ರದೇಶದಲ್ಲಿ ದೀಪ ಹಚ್ಚಲು ಹೋದರೆ ದೀಪ ನಿಲ್ಲದೆ ಗಾಳಿಗೆ ಹಾರಿ ಹೋಗುತ್ತಿದ್ದು ಮತ್ತೊಂದೆಡೆ ಚಪ್ಪಲಿ ಬಿಡೋ ಜಾಗದಲ್ಲಿ ದೀಪ ಹಚ್ಚೋದು ಹೇಗೆ ಎನ್ನುವುದು ಭಕ್ತರ ಪ್ರಶ್ನೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮದ್ವೆಗೂ ಮುನ್ನ ವಧುವಿನಿಂದ ಷರತ್ತು – ಕಂಡಿಷನ್ ಕೇಳಿ ನಾಚಿ ನೀರಾದ ವರ

    ಮದ್ವೆಗೂ ಮುನ್ನ ವಧುವಿನಿಂದ ಷರತ್ತು – ಕಂಡಿಷನ್ ಕೇಳಿ ನಾಚಿ ನೀರಾದ ವರ

    ಪಾಟ್ನಾ: ಇತ್ತೀಚಿನ ದಿನಗಳಲ್ಲಿ ಮದುವೆಗೂ ಮುಂಚೆ ವಧು ಷರತ್ತು ಹಾಕುವುದು ಸಾಮಾನ್ಯವಾಗಿದೆ. ಅದೇ ರೀತಿ ವಧುವೊಬ್ಬಳು ತಾನು ಮದುವೆಯಾಗುವ ವರನಿಗೆ ಎರಡು ಷರತ್ತುಗಳನ್ನು ವಿಧಿಸಿ ಸುದ್ದಿಯಾಗಿದ್ದಾಳೆ.

    ಬಿಹಾರದ ಪೂರ್ನಿಯಾ ಜಿಲ್ಲೆಯಲ್ಲಿ ನವೆಂಬರ್ 19 ರಂದು ಅಂದರೆ ನಾಳೆ ವರ ಕೈಸರ್ ಹಾಗೂ ವಧು ಸೋನಿ ಜೋಡಿಯ ಮದುವೆ ನಿಶ್ಚಯವಾಗಿದೆ. ಆದರೆ ವಧು ಮದುವೆಗೂ ಮುನ್ನ ವರನಿಗೆ ಎರಡು ಷರತ್ತುಗಳನ್ನು ಹಾಕಿದ್ದಾಳೆ.

    ಮನೆಯಲ್ಲಿ ಶೌಚಾಲಯ ನಿರ್ಮಾಣವಾಗಬೇಕು. ಇದು ಆಕೆಯ ಮೊದಲನೇಯ ಷರತ್ತು. ಮದುವೆಯ ಪತ್ರಿಕೆಯಲ್ಲಿ ಕುಟುಂಬ ಯೋಜನೆ (ಫ್ಯಾಮಿಲಿ ಪ್ಲ್ಯಾನಿಂಗ್) ಬಗ್ಗೆ ಸಂದೇಶ ನೀಡಬೇಕು ಎರಡನೇ ಷರತ್ತು ಹಾಕಿದ್ದಾಳೆ. ಎರಡನೇ ಕಂಡೀಷನ್ ಕೇಳಿ ವರ ನಾಚಿಕೊಂಡು ನಕ್ಕಿದ್ದಾನೆ.

    ವಧು ಸೋನುವಿನ ಎರಡು ಷರತ್ತಿಗೂ ವರ ಒಪ್ಪಿಗೆ ಸೂಚಿಸಿದ್ದಾನೆ. ಅಷ್ಟೇ ಅಲ್ಲದೇ ವಧು ಮದುವೆ ಕಾರ್ಡ್ ನಲ್ಲಿ ಕುಟುಂಬ ಯೋಜನೆ ಸ್ಲೋಗನ್ ಜೊತೆ ಸ್ವಚ್ಛತೆ ಬಗ್ಗೆ ಜಾಗೃತಿ ಹಾಗೂ ಬೇಟಿ ಬಚಾವೋ ಬೇಟಿ ಪಡಾವೋ ಬಗ್ಗೆ ಸಂದೇಶ ಹಾಕಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾಳೆ.

    ವರ ಕೈಸರ್ ಭಾವಿ ಪತ್ನಿಯ ಎಲ್ಲ ಮನವಿ ಹಾಗೂ ಷರತ್ತಿಗೂ ಖುಷಿಯಾಗಿ ಒಪ್ಪಿಕೊಂಡಿದ್ದಾನೆ. ವಧು ಸೋನು ಈ ರೀತಿಯ ಜಾಗೃತಿಯ ಸಂದೇಶವನ್ನು ಸಾರಲು ಮುಂದಾಗಿದ್ದಕ್ಕೆ ವರ ಕೈಸರ್ ತುಂಬಾ ಸಂತಸವನ್ನು ವ್ಯಕ್ತಪಡಿಸಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಭರಾಟೆ ಶೂಟಿಂಗ್ ವೇಳೆ ಮೇಲುಕೋಟೆ ಕಲ್ಯಾಣಿ ಅಶುಚಿತ್ವ –  ಶ್ರೀ ಮುರುಳಿ ಸ್ಪಷ್ಟನೆ

    ಭರಾಟೆ ಶೂಟಿಂಗ್ ವೇಳೆ ಮೇಲುಕೋಟೆ ಕಲ್ಯಾಣಿ ಅಶುಚಿತ್ವ – ಶ್ರೀ ಮುರುಳಿ ಸ್ಪಷ್ಟನೆ

    ಬೆಂಗಳೂರು: ಈ ವಾರ ನಟ ಶ್ರೀ ಮುರುಳಿ ನಟಿಸುತ್ತಿರುವ `ಭರಾಟೆ’ ಚಿತ್ರ ಶೂಟಿಂಗ್ ಮೇಲುಕೋಟೆಯ ಕಲ್ಯಾಣಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದಿತ್ತು. ಈ ವೇಳೆ ಕಲ್ಯಾಣಿ ಅಶುಚಿತ್ವವಾಗಿದೆ ಎಂದು ಅಭಿಮಾನಿಯೊಬ್ಬರು ಪ್ರಶ್ನೆ ಮಾಡಿದ್ದರು. ಈಗ ಅಭಿಮಾನಿಯ ಪ್ರಶ್ನೆಗೆ ನಟ ಶ್ರೀ ಮುರುಳಿಯವರು ಸ್ಪಷ್ಟನೆ ಕೊಟ್ಟಿದ್ದಾರೆ.

    ಭರಾಟೆ ಚಿತ್ರಿಕರಣದ ವೇಳೆ ಅಶುಚಿತ್ವವಾಗಿದ್ದ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದರಿಂದ ನಮೋ ಹಿಂದುಸ್ತಾನಿ ಎಂಬವರು ಅಶುಚಿತ್ವವಾಗಿರುವ ಕಲ್ಯಾಣಿಯ ಫೋಟೋ ಹಾಕಿ “ಭರಾಟೆ ಚಿತ್ರ ತಂಡ, ಸಿನಿಮಾ ಬರುತ್ತಿರುವುದಕ್ಕೆ ಖುಷಿ ಇದೆ. ಹಾಗಂತ ನೀವು ಚಿತ್ರೀಕರಣ ಸಮಯದಲ್ಲಿ ಮೇಲುಕೋಟೆ ಕಲ್ಯಾಣಿ ಸುತ್ತಮುತ್ತ ಮಾಡಿರುವ ಅಶುಚಿತ್ವಕ್ಕೆ ಯಾರು ಹೊಣೆ. ಶ್ರೀ ಮುರುಳಿಯವರೇ ನಿಮ್ಮ ಚಿತ್ರತಂಡದವರೆಲ್ಲ ಸೇರಿ ಕಲ್ಯಾಣಿ ಸ್ವಚ್ಛತಾ ಕಾರ್ಯ ಮಾಡಿ” ಎಂದು ಟ್ವೀಟ್ ಮಾಡಿದ್ದರು.

    ಅಭಿಮಾನಿ ಟ್ವೀಟ್ ಗೆ ನಟ ಶ್ರಿಮುರುಳಿಯವರು,”ನಿಮ್ಮ ಪ್ರೀತಿಗೆ ಧನ್ಯವಾದಗಳು. ಕೆಲಸದ ಸಮಯದಲ್ಲಿ ವಾತಾವರಣ ಹೀಗೆ ಆಗಿರಬಹುದು. ಕ್ಷಮಿಸಿ, ಆದರೆ ನಮ್ಮ ಕೆಲಸದ ಮುನ್ನ ಈ ಜಾಗವನ್ನು ಸ್ವಚ್ಛ ಮಾಡುವಾಗ ನಮಗೆ ಕಂಡದ್ದು ಬೇರೆಯೇ. ತುಂಬಾ ಕೆಟ್ಟದಾಗಿ ನಿರ್ವಹಣೆ ಮಾಡಲಾಗಿತ್ತು. ಹಾಗೆ ನಮ್ಮ ಕೆಲಸದ ನಂತರ ಈ ಜಾಗವನ್ನು ನಾವು ಕ್ಲೀನ್ ಮಾಡಿರುವ ಫೋಟೋಗಳನ್ನು ಶೇರ್ ಮಾಡುತ್ತೇನೆ. ಚಿಂತೆ ಮಾಡಬೇಡಿ” ಎಂದು ರೀಟ್ವೀಟ್ ಮಾಡಿದ್ದಾರೆ.

    ಮತ್ತೊಬ್ಬ ಅಭಿಮಾನಿ, ಭರಾಟೆ ಚಿತ್ರತಂಡ ಮೇಲುಕೋಟೆಯಲ್ಲಿ ಕೆಲವು ಸ್ಥಳಗಳನ್ನು ಹಾಳು ಮಾಡಿವೆ ಎಂಬ ಸುದ್ದಿಯನ್ನು ನೋಡಿದೆ. ಆದ್ದರಿಂದ ನಮಗೆ ಸತ್ಯ ಗೊತ್ತಾಗಬೇಕು ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಮುರಳಿಯವರು, “ಯಾವ ಕಾರಣಕ್ಕೂ ಇಲ್ಲ. ನಿಜ ಹೇಳಬೇಕು ಎಂದರೆ ಈ ಜಾಗವನ್ನು ನಮ್ಮ ಚಿತ್ರತಂಡ ಸ್ವಚ್ಛ ಮಾಡಿತ್ತು. ಚಿತ್ರಿಕರಣ ಆದಮೇಲು ಸಹ ನಾವೇ ಕ್ಲೀನ್ ಮಾಡಿದ್ದೇವೆ. ಆಗ ಅಲ್ಲಿನ ಸ್ಥಳೀಯರು ಹೀಗೂ ಸ್ವಚ್ಛವಾಗಿ ನೋಡಿಕೊಳ್ಳಬಹುದು ಎಂದು ಪ್ರಶಂಸಿದರು. ಸ್ವಚ್ಛವಾಗಿರದ ಫೋಟೊಗಳನ್ನು ಶೇರ್ ಮಾಡಬೇಡಿ” ಎಂದು ಹುಡುಗರಿಗೆ ಹೇಳಿದ್ದಾರೆ.

    ಏನಿದು ಆರೋಪ?
    `ಭರಾಟೆ’ ಚಿತ್ರತಂಡ ಸರ್ಕಾರದಿಂದ ಅನುಮತಿಯನ್ನು ಪಡೆದುಕೊಂಡು ನವೆಂಬರ್ 11 ರಿಂದ 14ರವರೆಗೆ ಶೂಟಿಂಗ್ ಮಾಡಲು ಸರ್ಕಾರಕ್ಕೆ 96 ಸಾವಿರ ರೂ. ಬಿಲ್ ಪಾವತಿಸಲಾಗಿತ್ತು. ಅನುಮತಿ ಪಡೆದುಕೊಂಡಿರುವ ಚಿತ್ರತಂಡಕ್ಕೆ ಮೂಲ ಸ್ವರೂಪಕ್ಕೆ ಧಕ್ಕೆಯಾಗದ ರೀತಿಯಲ್ಲಿ ಚಿತ್ರೀಕರಣ ಮಾಡಿ ಎಂದೂ ಹೇಳಲಾಗಿದ್ದರೂ ಚಿತ್ರತಂಡ ಕಲ್ಯಾಣಿಯ ತುಂಬಾ ಕೇಸರಿ ಬಣ್ಣದ ಬಟ್ಟೆಗಳನ್ನ ಕಟ್ಟಿ ಕೇಸರಿಕರಣ ಮಾಡಿತ್ತು ಎನ್ನುವ ಆರೋಪ ಕೇಳಿ ಬಂದಿತ್ತು.

    ಜೊತೆಗೆ ಕಲ್ಯಾಣಿಯಲ್ಲೇ ವಿಶೇಷವಾದ ಸೆಟ್ ಹಾಕಿದ್ದು ಚೌಡೇಶ್ವರಿ ದೇವಿ ವಿಗ್ರಹವನ್ನು ತಾತ್ಕಾಲಿಕವಾಗಿ ಪ್ರತಿಷ್ಠಾಪಿಸಲಾಗಿತ್ತು. ಇದು ಈಗ ವಿವಾದಕ್ಕೆ ಕಾರಣವಾಗಿದ್ದು, ಒಂದು ಶಕ್ತಿ ಕೇಂದ್ರವಾಗಿರುವ ಮೇಲುಕೋಟೆಯಲ್ಲಿ, ತಾತ್ಕಾಲಿಕವಾಗಿಯಾದರೂ ಬೇರೊಂದು ಶಕ್ತಿ ದೇವರನ್ನ ಪ್ರತಿಷ್ಠಾಪಿಸಿದರೆ ಮೂಲ ದೇವರ ಶಕ್ತಿ ಕುಂದುಂಟಾಗುತ್ತದೆ. ಅದು ತಕ್ಷಣ ಪರಿಣಾಮ ಬೀರದೇ ಇದ್ದರೂ ಭವಿಷ್ಯದಲ್ಲಿ ಪರಿಣಾಮ ಬೀರುತ್ತದೆ ಎಂದು ದೇವಾಲಯದ ಅರ್ಚಕ ಸಂಪತ್ ಕುಮಾರ್ ಹೇಳಿದ್ದರು.

    ಮೇಲುಕೋಟೆಯ ಶ್ರೀ ಚಲುವನಾರಾಯಣಸ್ವಾಮಿ ದೇವಾಲಯದಲ್ಲಿ ವರ್ಷದ ಪ್ರತೀ ದಿನವೂ ಒಂದಲ್ಲಾ ಒಂದು ವಿಶೇಷವಾದ ಪೂಜೆಗಳು ನಡೆಯುತ್ತಿರುತ್ತವೆ. ಹೀಗೆ ನಡೆಯುವ ಪೂಜೆಗಳಿಗೆ ಪವಿತ್ರ ಕಲ್ಯಾಣಿಯಿಂದಲೇ ನೀರನ್ನು ತೆಗೆದುಕೊಂಡು ಹೋಗಿ ಅಭಿಷೇಕ ಮಾಡಲಾಗುತ್ತದೆ. ದೇವಾಲಯ ಮಾತ್ರವಲ್ಲದೆ ಕಲ್ಯಾಣಿಯಲ್ಲೂ ಹಲವು ದೇವರುಗಳಿದ್ದು ಎಲ್ಲಾ ದೇವರಿಗೂ ಪೂಜೆ ಅಭಿಷೇಕ ಮಾಡಬೇಕಾಗುತ್ತದೆ. ಹಾಗೆಯೇ ಕಳೆದ ಭಾನುವಾರ ಮೇಲುಕೋಟೆ ದೇವಾಲಯಕ್ಕೆ ಸಂಬಂಧ ಪಟ್ಟಂತಹ, ಮಹಾಮುನಿ ಜೀಯರ್ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಅಭಿಷೇಕ ನಡೆಯಬೇಕಾಗಿತ್ತು. ಕಲ್ಯಾಣಿಯಿಂದ ನೀರನ್ನು ತಂದು ಅಭಿಷೇಕ ನೆರವೇರಿಸಬೇಕಿತ್ತು. ಆದರೆ ಕಲ್ಯಾಣಿಯ ಬಳಿ ಚಿತ್ರ ತಂಡ ಸೆಟ್ ಹಾಕಿದ್ದರಿಂದ, ಕಳೆದ 600 ವರ್ಷಗಳಿಂದಲೂ ನಡೆದುಕೊಂಡು ಬಂದಿದ್ದ ಅಭಿಷೇಕಕ್ಕೆ ತೊಂದರೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮೋರಿ ಸ್ವಚ್ಛ ಮಾಡಿ ಜನರಲ್ಲಿ ಜಾಗೃತಿ- ಸಿಎಂ ವಿಡಿಯೋ ವೈರಲ್

    ಮೋರಿ ಸ್ವಚ್ಛ ಮಾಡಿ ಜನರಲ್ಲಿ ಜಾಗೃತಿ- ಸಿಎಂ ವಿಡಿಯೋ ವೈರಲ್

    ನವದೆಹಲಿ: ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅವರು ಮೋರಿಯನ್ನು ಸ್ವಚ್ಛಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಮುಖ್ಯಮಂತ್ರಿಯ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸ್ವಚ್ಛತಾ ಹಾಯ್ ಸೇವಾ ಯೋಜನೆಗೆ ಕಳೆದ ತಿಂಗಳು ಚಾಲನೆ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.

    ಈ ವಿಡಿಯೋದಲ್ಲಿ ಪುದುಚೇರಿಯ ಮುಖ್ಯಮಂತ್ರಿ ಬಿಳಿ ಬಟ್ಟೆ ಮತ್ತು ಪಂಚೆಯನ್ನು ತೊಟ್ಟಿದ್ದು, ರಸ್ತೆಯ ಬದಿಯಿದ್ದ ಮೋರಿಯಲ್ಲಿರುವ ಕೊಳೆ ನೀರನ್ನು ಸಲ್ಕೆಯಿಂದ ಹೊರತೆಗೆಯುವ ಮೂಲಕ ಜನರಲ್ಲಿ ಸ್ವಚ್ಛತೆಯ ಬಗ್ಗೆ ತಿಳುವಳಿಕೆ ಮೂಡಿಸಿದರು.

    ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ಮತ್ತು ಸಮರ್ಪಿತ ಪ್ರಯತ್ನಗಳನ್ನು ನೋಡಿದಾಗ ನಿಜವಾಗಿಯೂ ಸಂತೋಷವಾಗಿದೆ. ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ನೀವು ಮಾದರಿಯಾಗಿದ್ದೀರಿ. ನಮ್ಮ ದೇಶಕ್ಕೆ ಹೆಚ್ಚು ಸೇವೆ ನೀಡಲು ದೇವರು ನಿಮಗೆ ಹೆಚ್ಚಿನ ಶಕ್ತಿ ನೀಡಲಿ ಎಂದು ಟ್ವಿಟರ್‌ನಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಬರೆದುಕೊಂಡಿದ್ದರು.

    ಕಳೆದ ನಾಲ್ಕು ವರ್ಷಗಳಲ್ಲಿ ಒಂಬತ್ತು ಕೋಟಿ ಶೌಚಾಲಯಗಳನ್ನು ಕಟ್ಟಲಾಗಿದೆ ಮತ್ತು 4.5 ಲಕ್ಷಕ್ಕಿಂತ ಹೆಚ್ಚು ಹಳ್ಳಿಗಳನ್ನು ತೆರೆದ ಮಲವಿಸರ್ಜನೆ ಮುಕ್ತ ಮಾಡಲಾಗಿದೆ ಎಂದು ಘೋಷಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ವಚ್ಛತೆ ವೇಳೆ ಸಿಕ್ಕ ಬಿಯರ್ ಬಾಟಲಿ ಹಿಡಿದು ಅಮ್ಮನ ಬಳಿ ಓಡಿ ಹೋದ ಬಾಲಕ!

    ಸ್ವಚ್ಛತೆ ವೇಳೆ ಸಿಕ್ಕ ಬಿಯರ್ ಬಾಟಲಿ ಹಿಡಿದು ಅಮ್ಮನ ಬಳಿ ಓಡಿ ಹೋದ ಬಾಲಕ!

    – ಉಡುಪಿಯಲ್ಲಿ ಗಾಂಧಿಜಯಂತಿಯಂದು ಬಾಲಕ ಕಕ್ಕಾಬಿಕ್ಕಿ

    ಉಡುಪಿ: ಮಹಾತ್ಮ ಗಾಂಧೀಜಿಯವರ 150ನೇ ಜಯಂತಿಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಉಡುಪಿಯಲ್ಲಿ ಮಾತಾ ಅಮೃತಾನಂದಮಯಿ ಸಂಸ್ಥೆ ಸ್ವಚ್ಛತಾ ಅಭಿಯಾನ ಮಾಡಿದರು. ಈ ಸಂದರ್ಭದಲ್ಲಿ ಸಿಕ್ಕ ಬಿಯರ್ ಬಾಟಲಿ ಎತ್ತಿದ ಬಾಲಕ ಕಕ್ಕಾಬಿಕ್ಕಿಯಾಗಿದ್ದಾನೆ.

    ಗಾಂಧಿಜಯಂತಿ ಹಿನ್ನೆಲೆಯಲ್ಲಿ ಇಂದು ಎಲ್ಲೆಡೆ ವಿಭಿನ್ನ ರೀತಿಯಲ್ಲಿ ರಾಷ್ಟ್ರಪಿತನ ಹುಟುಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಉಡುಪಿಯ ಮಾತಾ ಅಮೃತಾನಂದಮಯಿ ಸಂಸ್ಥೆಯ ನೂರಕ್ಕೂ ಹೆಚ್ಚು ಜನ ಉಡುಪಿ ನಗರದಾದ್ಯಂತ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಮಹಿಳೆಯರು-ಯುವಕರು, ಮಕ್ಕಳು-ವೃದ್ಧರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

    ಬೆಳಗ್ಗೆ 7 ಗಂಟೆಗೆ ಆರಂಭವಾದ ಸ್ವಚ್ಛತಾ ಅಭಿಯಾನ ಉಡುಪಿಯ ಕಲ್ಸಂಕಕ್ಕೆ ಬಂದಿತ್ತು. ವೈನ್ ಗೇಟ್ ಮುಂದೆ ಸ್ವಚ್ಛತಾ ಅಭಿಯಾನ ಮಾಡುವಾಗ ಪುಟ್ಟ ಬಾಲಕನಿಗೆ ಬಿಯರ್ ಬಾಟಲಿಯೊಂದು ಸಿಕ್ಕಿದೆ. ಬಿಯರ್ ಬಾಟಲಿ ಎತ್ತಿದ ಬಾಲಕ, ಬಿಯರ್ ಬಿಯರ್ ಅಂತ ಅಮ್ಮನ ಬಳಿ ಓಡಿ ಹೋಗಿದ್ದಾನೆ. ಅಮ್ಮ ಬಾಟಲಿ ಇಲ್ಲಿ ಹಾಕ್ಬೇಡ ಅಂತ ಹೇಳಿದ್ದಾರೆ.

    ಬಿಯರ್ ಬಾಟಲಿ ಬಿಸಾಕಲೂ ಆಗದೇ, ಅಲ್ಲೇ ಇಡಲೂ ಆಗದೇ ಕೊನೆಗೆ ಬಾಲಕ ಖಾಲಿ ಬಾಟಲಿಯನ್ನು ಕಸದ ಬುಟ್ಟಿಗೆ ತುಂಬಿದ್ದಾನೆ. ಸಾರಾಯಿ ವಿರುದ್ಧ ಸಮರ ಸಾರಿದ್ದ ಗಾಂಧೀಜಿ ಈ ಸಂದರ್ಭದಲ್ಲಿ ಎಲ್ಲರಿಗೂ ನೆನಪಾದರು. ಈ ಮೂಲಕ ಮದ್ಯ ವಿರೋಧಿ ಅಭಿಯಾನಕ್ಕೆ ಯುವ ಪೀಳಿಗೆ ಮುಂದಾಗಬೇಕು ಎಂಬ ನೇರ ಸಂದೇಶವನ್ನು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗಾಂಧಿ ಜಯಂತಿ ಅಂಗವಾಗಿ ಚರಂಡಿ ಸ್ವಚ್ಛಗೊಳಿಸಿದ ಗದಗ್ ಜಿಲ್ಲಾಧಿಕಾರಿ

    ಗಾಂಧಿ ಜಯಂತಿ ಅಂಗವಾಗಿ ಚರಂಡಿ ಸ್ವಚ್ಛಗೊಳಿಸಿದ ಗದಗ್ ಜಿಲ್ಲಾಧಿಕಾರಿ

    ಗದಗ: ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಅಂಗವಾಗಿ ಗದಗ್ ನಲ್ಲಿ ನಡೆದ ಸ್ವಚ್ಛತಾ ಶ್ರಮದಾನಕ್ಕೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಚರಂಡಿ ಸ್ವಚ್ಛಗೊಳಿಸುವ ಮೂಲಕ ಚಾಲನೆ ನೀಡಿದರು.

    ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆ ವತಿಯಿಂದ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಹಿರೇಮಠ ಹ್ಯಾಂಡ್ ಗ್ಲೌಸ್ ಹಾಗೂ ಮಾಸ್ಕ್ ಹಾಕಿಕೊಂಡು ಪೊರಕೆ ಹಿಡಿದು ಮುಂದಾಳತ್ವ ವಹಿಸಿ ಕ್ಲೀನ್ ಮಾಡಲು ಮುಂದಾದರು. ನಗರ ಮುಳಗುಂದ ನಾಕಾ, ಹಸಿರುಕೆರಿ, ಚನ್ನಮ್ಮ ವೃತ್ತ ಸೇರಿದಂತೆ ಅನೇಕ ಕಡೆಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

    ಈ ಮೂಲಕ ಸ್ಥಳೀಯ ಸಾರ್ವಜನಿಕರಿಗೆ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಿದರು. ಪ್ರತಿಯೊಬ್ಬರೂ ಕಾಳಜಿ ನಿಷ್ಠೆಯಿಂದ ಸ್ವಚ್ಛತೆ ಕೆಲಸ ಮಾಡಬೇಕು. ಮನೆ, ಓಣಿ, ಊರು ಸುತ್ತಲಿನ ಪರಿಸರ ಹಾಗೂ ಮಾಲಿನ್ಯ ಹಾಳಾಗದಂತೆ ನೋಡಿಕೊಳ್ಳಬೇಕು. ಇದು ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರುಗಳಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಹೇಳಿದರು.

    ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ್, ಉಪವಿಭಾಗಾಧಿಕಾರಿ ಪಿ.ಎಸ್ ಮಂಜುನಾಥ್, ನಗರಸಭೆ ಪೌರಾಯುಕ್ತ ಮನ್ಸೂರ ಅಲಿ ಸೇರಿದಂತೆ ವಿವಿಧ ಶಾಲಾ-ಕಾಲೇಜಿನ ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ಸ್ವಯಂ ಸೇವಕರು ಇದರಲ್ಲಿ ಪಾಲ್ಗೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ವಿದ್ಯಾರ್ಥಿಗಳಿಂದಲೇ ಶೌಚಾಲಯ ಕ್ಲೀನ್- ಗ್ರಾಮಸ್ಥರ ಆಕ್ರೋಶ

    ವಿದ್ಯಾರ್ಥಿಗಳಿಂದಲೇ ಶೌಚಾಲಯ ಕ್ಲೀನ್- ಗ್ರಾಮಸ್ಥರ ಆಕ್ರೋಶ

    ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಶಾಲೆಗೆ ಬರೋದು ಪಾಠ ಪ್ರವಚನ ಕೇಳೋಕಾ ಅಥವಾ ಶೌಚಾಲಯ ಕ್ಲೀನ್ ಮಾಡೋಕಾ ಎನ್ನುವ ಅನುಮಾನ ಶುರುವಾಗಿದೆ. ಯಾವುದೇ ಕ್ರಮ ಕೈಗೊಳ್ಳದೇ ವಿದ್ಯಾರ್ಥಿಗಳಿಂದಲೇ ಗಬ್ಬುನಾರುತ್ತಿರುವ ಶೌಚಾಲಯಗಳನ್ನು ಸ್ವಚ್ಛತೆ ಮಾಡಿಸಲಾಗಿದೆ.

    ಗಬ್ಬುನಾರುತ್ತಿದ್ದ ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದಲೇ ಕ್ಲೀನ್ ಮಾಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ನಗರಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲಾ ವಿದ್ಯಾರ್ಥಿಗಳಿದಂಲೇ ಶಿಕ್ಷಕರು ಕಸ ಕಡ್ಡಿಯಿಂದ ಗಬ್ಬು ನಾರುತ್ತಿರುವ ಶೌಚಾಲಯಗಳ ಸ್ವಚ್ಚತೆ ಮಾಡಿಸಿದ್ದು, ಇದನ್ನ ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

    ಪೆನ್ನು ಪುಸ್ತಕ ಹಿಡಿಯಬೇಕಾದ ವಿದ್ಯಾರ್ಥಿಗಳು ಪೊರಕೆ ಹಿಡಿದು ಟಾಯ್ಲೆಟ್ ಕ್ಲೀನ್ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಶಿಕ್ಷಕರ ನಡೆ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಕ್ಲೀನ್ ಮಾಡಿಸಿರೋದಲ್ಲದೆ ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿಲ್ಲ. ಸ್ವಚ್ಚತೆಗೆ ಬಳಸಬೇಕಾದ ಪರಿಕರಗಳನ್ನು ಬಳಸದೆ ಶಿಕ್ಷಕರ ವಿದ್ಯಾರ್ಥಿಗಳ ಆರೋಗ್ಯದ ಜೊತೆ ಚೆಲ್ಲಾಟ ಆಡಿದ್ದಾರೆ ಎಂದು ಅಕ್ರೋಶ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv