Tag: ಸ್ವಚ್ಛ ಸರ್ವೇಕ್ಷಣ್-2020

  • ಸ್ವಚ್ಛ ಭಾರತ- 10 ಲಕ್ಷ ಜನ ನಗರ ಪಟ್ಟಿಯಲ್ಲಿ ಮೈಸೂರು ಬೆಸ್ಟ್

    ಸ್ವಚ್ಛ ಭಾರತ- 10 ಲಕ್ಷ ಜನ ನಗರ ಪಟ್ಟಿಯಲ್ಲಿ ಮೈಸೂರು ಬೆಸ್ಟ್

    ನವದೆಹಲಿ: ಕೇಂದ್ರ ನಗರಾಭಿವೃದ್ಧಿ ಇಲಾಖೆ ಸ್ವಚ್ಛ ಸರ್ವೇಕ್ಷಣ್-2020 ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, 10 ಲಕ್ಷದೊಳಗಿನ ಜನಸಂಖ್ಯೆಯುಳ್ಳ ಸ್ವಚ್ಛ ನಗರಗಳ ವಿಭಾಗದಲ್ಲಿ ಮೈಸೂರು ಮೊದಲ ಸ್ಥಾನ ಪಡೆದಿದೆ.

    ದೇಶದಲ್ಲೇ ಅತ್ಯಂತ ಸ್ವಚ್ಛ ನಗರ ಎಂಬ ಗರಿಮೆಗೆ ಸತತ ನಾಲ್ಕನೇ ಬಾರಿ ಮಧ್ಯಪ್ರದೇಶದ ಇಂದೋರ್ ಪಾತ್ರವಾಗಿದೆ. ಎರಡನೇ ಸ್ಥಾನದಲ್ಲಿ ಸೂರತ್, ಮೂರನೇ ಸ್ಥಾನದಲ್ಲಿ ನವೀ ಮುಂಬೈ ಇದೆ.

    ಟಾಪ್ 20 ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಯಾವುದೇ ನಗರ ಸ್ಥಾನ ಪಡೆದಿಲ್ಲ. ಆದರೆ 10 ಲಕ್ಷದೊಳಗಿನ ಜನಸಂಖ್ಯೆಯುಳ್ಳ ಸ್ವಚ್ಛ ನಗರಗಳ ವಿಭಾಗದಲ್ಲಿ ಮೈಸೂರು ಮೊದಲ ಸ್ಥಾನ ಪಡೆದಿದೆ. ಬೆಂಗಳೂರು ನಗರಕ್ಕೆ ಅತ್ಯುತ್ತಮ ಸ್ವಸುಸ್ಥಿರ ನಗರ ಪ್ರಶಸ್ತಿ ದೊರೆತಿದೆ.

    ಸ್ವಚ್ಛ ನಗರಗಳ ಪಟ್ಟಿ ಪ್ರಕಟಿಸಿದ ಕೇಂದ್ರ ಸಚಿವ ಹರ್‍ದೀಪ್ ಪುರಿ ಮೈಸೂರಿನ ಪೌರ ಕಾರ್ಮಿಕರ ಜೊತೆ ಸಂವಾದ ನಡೆಸಿದ್ರು. ಈ ವೇಳೆ ಮಂಜುಳಾ ನಂಜುಂಡ ಸ್ವಾಮಿ ಅವರು ಸಮುದಾಯಕ್ಕೆ ಟಾಯ್ಲೇಟ್ ಮಾಡಿ ಕೊಡಬೇಕು ಎಂದು ಮನವಿ ಮಾಡಿಕೊಂಡರು. ಬಳಿಕ ಸಚಿವರು ಪೌರ ಕಾರ್ಮಿಕ ನಂಜುಂಡ ಸ್ವಾಮಿ ಜೊತೆ ಮಾತುಕತೆ ನಡೆಸಿದರು. ನಂಜುಂಡ ಸ್ವಾಮಿ ಕೊರೊನಾ ಪಾಸಿಟಿವ್ ಆಗಿ ಗುಣಮುಖರಾಗಿದ್ದಾರೆ. ಕೊರೊನಾದಿಂದ ಪಾಸಿಟಿವ್ ಆಗಿ ಮತ್ತೆ ಬಂದು ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ. ನಂಜುಂಡ ಸ್ವಾಮಿ ಮಾಹಿತಿಯಿಂದ ಸಚಿವರು ಪುಲ್ ಖುಷಿಯಾದರು. ಸಚಿವರ ತಂಡ ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದೆ.

  • ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು ಅಗ್ರಸ್ಥಾನಕ್ಕೇರಲು ಕೈಜೋಡಿಸಿ: ಸುತ್ತೂರು ಶ್ರೀಗಳು

    ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು ಅಗ್ರಸ್ಥಾನಕ್ಕೇರಲು ಕೈಜೋಡಿಸಿ: ಸುತ್ತೂರು ಶ್ರೀಗಳು

    ಮೈಸೂರು: ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು ಮೊದಲ ಸ್ಥಾನ ಗಳಿಸಲು ಪ್ರತಿಯೊಬ್ಬ ನಾಗರಿಕರು ಕೈ ಜೋಡಿಸಬೇಕು ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಹೇಳಿದ್ದಾರೆ.

    ಸ್ವಚ್ಛ ಸರ್ವೇಕ್ಷಣ್-2020 ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಮೈಸೂರು ನಗರವನ್ನು ನಂಬರ್ ಒನ್ ಸ್ವಚ್ಛ ನಗರವನ್ನಾಗಿಸಲು ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಇದರ ಮುಂದುವರಿದ ಭಾಗವಾಗಿ ಇಂದು ಸರ್ವಧರ್ಮ ಗುರುಗಳ ಸಭೆಯು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ನಡೆಯಿತು.

    ಈ ಸಭೆಯಲ್ಲಿ ಸುತ್ತೂರು ಮಠಾಧಿಪತಿ ಶ್ರೀ ಶಿವರಾತ್ರೀಶ್ವರ ಸ್ವಾಮೀಜಿ, ಹೊಸ ಮಠದ ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮನಾಥ ಸ್ವಾಮೀಜಿ ಸೇರಿದಂತೆ ಇತರ ಧರ್ಮಗುರುಗಳು ಭಾಗಿಯಾಗಿದ್ದರು. ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್, ಮೇಯರ್ ಪುಷ್ಪಲತಾ ಜಗನ್ನಾಥ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಮೈಸೂರು ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

    ಈ ವೇಳೆ ಮಾತನಾಡಿದ ಸುತ್ತೂರು ಮಠದ ಶ್ರೀಗಳು, ಪ್ಲಾಸ್ಟಿಕ್ ಬಳಕೆ ಮೇಲಿನ ನಿರ್ಬಂಧವನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಸುರಿಯುತ್ತಿರುವ ಪ್ರವೃತ್ತಿ ಬಿಡಬೇಕು. ಶಾಲಾ ಮಟ್ಟದಲ್ಲಿಯೂ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಸ್ವಚ್ಛ ಸರ್ವೇಕ್ಷಣೆಯಲ್ಲಿ ಸಾರ್ವಜನಿಕರ ಪಾತ್ರವೂ ಪ್ರಮುಖವಾಗಿದೆ ಎಂದು ತಿಳಿಸಿದರು.

    ಸ್ವಚ್ಛ ಸರ್ವೇಕ್ಷಣಾ-2019 ಪ್ರಶಸ್ತಿಯನ್ನು ಮಧ್ಯಪ್ರದೇಶದ ಇಂದೋರ್ ಪಡೆದಿತ್ತು. ಈ ಮೂಲಕ ದೇಶದ ಅತ್ಯಂತ ಸ್ವಚ್ಛ ನಗರಿ ಎಂಬ ಹಿರಿಮೆಯನ್ನು ಇಂದೋರ್ ಸತತ ಮೂರನೇ ವರ್ಷವೂ ಉಳಿಸಿಕೊಂಡಿತ್ತು. ಹಾಗೆಯೇ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‍ಗೆ ‘ಸ್ವಚ್ಛ ರಾಜಧಾನಿ’ ಪ್ರಶಸ್ತಿ ಸಂದಿತ್ತು. ಟಾಪ್ 10 ಸ್ವಚ್ಛ ನಗರಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಛತ್ತೀಸ್‍ಗಢದ ಅಂಬಿಕಾಪುರಿ ಹಾಗೂ ಮೂರನೇ ಸ್ಥಾನವನ್ನು ಅರಮನೆ ನಗರಿ ಮೈಸೂರು ಇದ್ದವು.
    ಕೊಂಡಿದೆ.