Tag: ಸ್ವಯಂಘೋಷಿತ ದೇವಮಾನವ

  • ಭಕ್ತೆ ಮೇಲೆ ಅತ್ಯಾಚಾರ – ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಅರೆಸ್ಟ್‌

    ಭಕ್ತೆ ಮೇಲೆ ಅತ್ಯಾಚಾರ – ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಅರೆಸ್ಟ್‌

    ಭೋಪಾಲ್: ಮಧ್ಯಪ್ರದೇಶದ ರಾಜಧಾನಿಯಲ್ಲಿ ಮಹಿಳಾ ಭಕ್ತೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಗಿರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

    ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮಿ ವೈರಾಗ್ಯಾನಂದ ಗಿರಿ ಅವರನ್ನು ಗ್ವಾಲಿಯರ್‌ನಲ್ಲಿ ಬಂಧಿಸಿದ್ದು, ಅವರನ್ನು ಭೋಪಾಲ್‌ಗೆ ಕರೆತರಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಎಸಿಪಿ) ರಿಚಾ ಚೌಬೆ ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ತಿ ವಿವರ ಘೋಷಿಸಿಕೊಂಡ ಪ್ರಧಾನಿ ಮೋದಿ – ಎಷ್ಟಿದೆ ಗೊತ್ತಾ?

    ಜುಲೈ 17 ರಂದು ಆರೋಪಿ ದೇವಮಾನವ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೋಮವಾರ ಭಕ್ತೆ ದೂರು ನೀಡಿ ನೀಡಿದ್ದಾರೆ.

    ಮದುವೆಯಾಗಿ ಬಹಳ ದಿನಗಳಿಂದ ಮಕ್ಕಳಾಗಿರಲಿಲ್ಲ. ಕೆಲವು ವಿಧಿವಿಧಾನಗಳ ಮೂಲಕ ಗರ್ಭಿಣಿಯಾಗುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ವೈರಾಗ್ಯಾನಂದರ ಆಶೀರ್ವಾದ ಪಡೆಯಲು ಹೋಗಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ- ಜೆಡಿಯು ಮೈತ್ರಿಗೆ ಗುಡ್‌ಬೈ – ನಿತೀಶ್‌ ರಾಜೀನಾಮೆಗೆ ಕಾರಣ ಏನು?

    ವೈರಾಗ್ಯಾನಂದ ನೀಡಿದ ನೈವೇದ್ಯವನ್ನು ಸೇವಿಸಿ ಮೂರ್ಛೆ ಹೋದಾಗ ದೇವಮಾನವ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಸಾಮಾಜಿಕ ಕಳಂಕದ ಭಯದಿಂದ ತಕ್ಷಣ ದೂರು ನೀಡಲು ಸಾಧ್ಯವಾಗಲಿಲ್ಲ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಗಿರಿ ಕಳೆದ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ದಿಗ್ವಿಜಯ ಸಿಂಗ್ ಅವರ ಗೆಲುವಿಗಾಗಿ ದೇವಮಾನವ ಯಜ್ಞ ಕೂಡ ಆಯೋಜಿಸಿದ್ದ. ಇದನ್ನೂ ಓದಿ: ಬಿಜೆಪಿ- ಜೆಡಿಯು ಮೈತ್ರಿಗೆ ಗುಡ್‌ಬೈ – ನಿತೀಶ್‌ ರಾಜೀನಾಮೆಗೆ ಕಾರಣ ಏನು?

    Live Tv
    [brid partner=56869869 player=32851 video=960834 autoplay=true]

  • ಸ್ವಯಂಘೋಷಿತ ದೇವಮಾನವ ದಾತಿ ಮಹರಾಜ್ ಆಶ್ರಮದಿಂದ 600 ಹೆಣ್ಣು ಮಕ್ಕಳು ನಾಪತ್ತೆ!

    ಸ್ವಯಂಘೋಷಿತ ದೇವಮಾನವ ದಾತಿ ಮಹರಾಜ್ ಆಶ್ರಮದಿಂದ 600 ಹೆಣ್ಣು ಮಕ್ಕಳು ನಾಪತ್ತೆ!

    ನವದೆಹಲಿ: ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಜಸ್ಥಾನ ಸ್ವಯಂಘೋಷಿತ ದೇವಮಾನವ ದಾತಿ ಮಹಾರಾಜ್ ಆಶ್ರಮದಿಂದ 600 ಹೆಣ್ಣು ಮಕ್ಕಳು ಕಾಣೆಯಾಗಿರುವ ಅಂಶ ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.

    ಸದ್ಯ ರಾಜಸ್ಥಾನದ ಅಲವಾಸ್ ಪ್ರದೇಶದಲ್ಲಿರುವ ಆಶ್ರಮದಲ್ಲಿ 100 ಮಂದಿ ಹೆಣ್ಣು ಮಕ್ಕಳು ಮಾತ್ರ ಇದ್ದು, ಈ ಹಿಂದೆ ದಾತಿ ಮಹಾರಾಜ್ ತನ್ನ ಆಶ್ರಮದಲ್ಲಿ 700 ಮಂದಿ ಹೆಣ್ಣು ಮಕ್ಕಳಿರುವುದಾಗಿ ಹೇಳಿಕೆ ನೀಡಿದ್ದ. ಈ ಕುರಿತು ಪೊಲೀಸರು ತನಿಖೆ ನಡೆಸಿದ ವೇಳೆ ಬಾಲಕಿಯರು ನಾಪತ್ತೆ ಆಗಿರುವ ಕುರಿತ ಅಂಶ ಬೆಳಕಿಗೆ ಬಂದಿದೆ.

    ಆಶ್ರಮದಲ್ಲಿರುವ ಬಾಲಕಿಯರು ಆಶ್ರಮದಿಂದ ಹೊರ ನಡೆದಿದ್ದರಾ ಅಥವಾ ತಮ್ಮ ಮನೆಗಳಿಗೆ ಹಿಂದಿರುಗಿದ್ದರಾ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಅಲ್ಲದೇ ಸದ್ಯ ದಾತಿ ಮಹಾರಾಜ್ ಸಹ ಆಶ್ರಮದಿಂದ ಕಾಣೆಯಾಗಿದ್ದು, ಕ್ರೈಂ ಬ್ರಾಂಚ್ ಪೊಲೀಸರು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

    ಏನಿದು ಪ್ರಕರಣ: ಸ್ವಯಂಘೋಷಿತ ದೇವಮಾನವ ದಾತಿ ಮಹಾರಾಜ್ ವಿರುದ್ಧ 25 ವರ್ಷದ ಯುವತಿಯೊಬ್ಬರು ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ದೂರಿನಲ್ಲಿ ತಮ್ಮ ಮೇಲೆ ದಾತಿ ಮಹಾರಾಜ್ ಹಾಗೂ ಆಶ್ರಮದ ಮತ್ತಿಬ್ಬರು ಸೇವಕರು ಸಹ ಅತ್ಯಾಚಾರ ನಡೆಸಿದ್ದಾಗಿ ಉಲ್ಲೇಖಿಸಿದ್ದರು.

    ಅಂದಹಾಗೇ ದೆಹಲಿ ಹಾಗೂ ರಾಜಸ್ಥಾನ ಆಶ್ರಮದಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಮಾಡಿದ್ದು, ಬಳಿಕ ಯುವತಿ ಘಟನೆಯಿಂದ ಅಘಾತಕ್ಕೆ ಒಳಗಾಗಿ ಆಶ್ರಮ ತೊರೆದಿದ್ದರು. 2 ವರ್ಷದ ಬಳಿಕ ಘಟನೆಯಿಂದ ಚೇತರಿಸಿಕೊಂಡ ಯುವತಿ ಕೃತ್ಯದ ಕುರಿತು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದರು. ಮಗಳ ಮೇಲೆ ನಡೆದ ಅವಮಾನಿಯ ಕೃತ್ಯದ ಕುರಿತು ಪೋಷಕರು ದೆಹಲಿ ಮಹಿಳಾ ಆಯೋಗದ ಸಹಕಾರ ಪಡೆದು ಪೊಲೀಸರಿಗೆ ದೂರು ನೀಡಿದ್ದರು.

    ಈ ವೇಳೆ ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ದಾತಿ ಮಹಾರಾಜ್ ದೂರು ನೀಡಿದ ಯುವತಿ ತನ್ನ ಮಗಳ ಸಮಾನ, ತನ್ನ ವಿರುದ್ಧ ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದರು.