Tag: ಸ್ವಯಂಭು

  • ನಿಜ ಜೀವನದಲ್ಲೂ ಹೀರೋ ಆದ ನಿಖಿಲ್- ವರ್ಷಗಳಿಂದ ಮುಚ್ಚಿದ ದೇವಸ್ಥಾನ ತೆರೆಸಿದ ನಟ

    ನಿಜ ಜೀವನದಲ್ಲೂ ಹೀರೋ ಆದ ನಿಖಿಲ್- ವರ್ಷಗಳಿಂದ ಮುಚ್ಚಿದ ದೇವಸ್ಥಾನ ತೆರೆಸಿದ ನಟ

    ಕಾರ್ತಿಕೇಯ, ಕಾರ್ತಿಕೇಯ 2 (Karthikeya 2) ಸಿನಿಮಾಗಳ ಮೂಲಕ ಗಮನ ಸೆಳೆದಿರುವ ನಟ ನಿಖಿಲ್ ಸಿದ್ಧಾರ್ಥ್ (Nikhil Siddarth) ಇದೀಗ ಸಿನಿಮಾದಲ್ಲಿ ಮಾತ್ರವಲ್ಲ, ರಿಯಲ್ ಲೈಫ್‌ನಲ್ಲೂ ಹೀರೋ ಆಗಿದ್ದಾರೆ. ಕೆಲ ವರ್ಷಗಳಿಂದ ಮುಚ್ಚಿದ ದೇವಸ್ಥಾನ (Temple) ನಿಖಿಲ್ ತೆರೆಸಿದ್ದಾರೆ.‌ ಅವರ ಕಾರ್ಯಕ್ಕೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:‘ರಾಜಾ ರಾಣಿ’ ಶೋಗೆ ಎಂಟ್ರಿ ಕೊಟ್ಟ ವಿನಯ್ ಗೌಡ ದಂಪತಿ

    ಆಂಧ್ರ ಪ್ರದೇಶದ ಭಾಪಟ್ಲ ಜಿಲ್ಲೆಯ ಚಿರಾಲದ ಬಳಿಯಿರುವ ಈ ದೇವಸ್ಥಾನ ವರ್ಷಗಳಿಂದ ಸೂಕ್ತ ನಿರ್ವಹಣೆ ಇಲ್ಲದ ಕಾರಣ ಶಿಥಿಲಾವಸ್ಥೆ ತಲುಪಿತ್ತು. ಹೀಗಾಗಿ ದೇವಸ್ಥಾನದ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಿಕೊಂಡಿರುವ ನಿಖಿಲ್, ಭಕ್ತರಿಗಾಗಿ ದೇವಸ್ಥಾನದ ಬಾಗಿಲನ್ನ ಈಗ ಮತ್ತೆ ತೆರೆದಿದ್ದಾರೆ.

    ಈ ಬಗ್ಗೆ ಸೋಷಿಯಲ್ ವಿಡಿಯೋ ಹಂಚಿಕೊಂಡಿರುವ ನಿಖಿಲ್, ಊರಿನ ಗ್ರಾಮಸ್ಥರಿಗೆ ಶಿಕ್ಷೆಯಾಗಿ ಊರಿನ ದೇವಾಲಯವನ್ನು ಮುಚ್ಚಲಾಗಿತ್ತು. ನಾವು ಕಳೆದ ತಿಂಗಳು ದೇವಾಲಯ ತೆರೆದು ಜೀರ್ಣೋದ್ಧಾರ ಮಾಡಿದೆವು. ಈಗ ಮತ್ತೆ ಅಲ್ಲಿಗೆ ಭೇಟಿ ನೀಡಿದಾಗ ಗ್ರಾಮಸ್ಥರ ಸಂಭ್ರಮ ನೋಡಿ ಖುಷಿಯಾಯ್ತು ಎಂದಿದ್ದಾರೆ. ನಿಖಿಲ್ ನಡೆಯುತ್ತಿರುವಾಗ ಗ್ರಾಮದ ಮಹಿಳೆಯರು ಹಾದಿಗೆ ಹೂವು ಹಾಸಿ ಸ್ವಾಗತ ಕೋರುತ್ತಿರುವ ದೃಶ್ಯವಿದೆ.

    ಸದ್ಯ ಕನ್ನಡದ ನಟಿ ನಭಾ ನಟೇಶ್ (Nabha Natesh) ಜೊತೆ ‘ಸ್ವಯಂಭು’ ಸಿನಿಮಾದಲ್ಲಿ ನಿಖಿಲ್ ನಾಯಕನಾಗಿ ನಟಿಸುತ್ತಿದ್ದಾರೆ. ಇಂಡಿಯನ್ ಹೌಸ್ ಎಂಬ ಹೊಸ ಸಿನಿಮಾವನ್ನು ನಟ ಒಪ್ಪಿಕೊಂಡಿದ್ದಾರೆ.

  • ಮತ್ತೆ ಬಣ್ಣ ಹಚ್ಚಿದ ವಜ್ರಕಾಯ ಬೆಡಗಿ: ಸ್ವಯಂಭುನಲ್ಲಿ ರಾಣಿಯಾದ ನಭಾ

    ಮತ್ತೆ ಬಣ್ಣ ಹಚ್ಚಿದ ವಜ್ರಕಾಯ ಬೆಡಗಿ: ಸ್ವಯಂಭುನಲ್ಲಿ ರಾಣಿಯಾದ ನಭಾ

    ತೆಲುಗು ನಟ ನಿಖಿಲ್ ಸಿದ್ದಾರ್ಥ್ (Nikhil Siddhartha) ನಟಿಸುತ್ತಿರುವ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಸ್ವಯಂಭು (Swayambhu) ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಮೂಲಕ ವಜ್ರಕಾಯದ ಪಟಾಕ ಕಂಬ್ಯಾಕ್ ಮಾಡುತ್ತಿದ್ದಾರೆ. ಕನ್ನಡತಿ ನಭಾ ನಟೇಶ್ಗೆ (Nabha Natesh) 2023ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಸಂಪೂರ್ಣ ಚೇತರಿಕೆ ಕಂಡಿರುವ ಶೃಂಗೇರಿ ಸುಂದರಿ ಸ್ವಯಂಭು ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುತ್ತಿದ್ದಾರೆ.

    ಸ್ವಯಂಭು ಶೂಟಿಂಗ್ ಅಖಾಡಕ್ಕೆ ನಭಾ ಎಂಟ್ರಿ ಕೊಟ್ಟಿದ್ದಾರೆ. ಸಣ್ಣ ಝಲಕ್ ಮೂಲಕ ಚಿತ್ರತಂಡ ಆಕೆಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಣಿಯಂತೆ  ಕಂಗೊಳಿಸುತ್ತಿರುವ ನಭಾ ಲುಕ್ ರಿವೀಲ್ ಮಾಡಲಾಗಿದೆ. ಆದ್ರೆ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟು ಕೊಟ್ಟಿಲ್ಲ. ಶಿವಣ್ಣ ನಟನೆಯ ವಜ್ರಕಾಯ ಚಿತ್ರದ ಮೂಲಕ ಸಿನಿಮಾ ಲೋಕದಲ್ಲಿ  ಅದೃಷ್ಟ ಪರೀಕ್ಷೆಗಿಳಿದಿದ್ದ ನಭಾ, ಪೂರಿ ಜಗನ್ನಾಥ್ ನಿರ್ದೇಶನದ ಇಸ್ಮಾರ್ಟ್ ಶಂಕರ್ ಮೂಲಕ ಪ್ರಖ್ಯಾತಿ ಗಳಿಸಿದರು.

    ನಿಖಿಲ್ ನಾಯಕ ನಟನಾಗಿರುವ ಸ್ವಯಂಭು ಸಿನಿಮಾದಲ್ಲಿ ಸಂಯುಕ್ತ ಮೆನನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ತಮ್ಮ ಪಾತ್ರಕ್ಕಾಗಿ ಅವರು ತಯಾರಿಯಲ್ಲಿದ್ದಾರೆ. ಅಂದಹಾಗೇ ಭರತ್ ಕೃಷ್ಣಮಾಚಾರಿ ಸ್ವಯಂಭು ಆಕ್ಷನ್ ಕಟ್ ಹೇಳಿದ್ದಾರೆ.

    ಪಿಕ್ಸೆಲ್ ಸ್ಟುಡಿಯೋ ಮೂಲಕ ಭುವನ್ ಹಾಗೂ ಶ್ರೀಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದು, ಟ್ಯಾಗೋರೆ ಮಧು ಪ್ರಸ್ತುತಪಡಿಸುತ್ತಿದ್ದಾರೆ. ಸ್ವಯಂಭೂ ಎಂದರೆ ಸ್ವಯಂ ಹುಟ್ಟು ಎಂದರ್ಥ. ಈ ಸಿನಿಮಾ ನಿಖಿಲ್ ಸಿದ್ದಾರ್ಥ್ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರವಾಗಿದೆ. ಮನೋಜ್ ಪರಮಹಂಸ ಛಾಯಾಗ್ರಹಣ, ರವಿ ಬಸ್ರೂರ್ ಸಂಗೀತ, ವಾಸುದೇವ್ ಮುನೆಪ್ಪಗರಿ ಚಿತ್ರಕ್ಕೆ ಸಂಭಾಷಣೆಯನ್ನು ನೀಡಿದ್ದಾರೆ.