Tag: ಸ್ವಸಹಾಯ ಸಂಘ

  • ಧರ್ಮಸ್ಥಳ ಸಂಘದ ವಿರುದ್ಧ ಪಿತೂರಿಗೆ ಬಂದಿದ್ದ ಮಟ್ಟಣ್ಣನವರ್‌ಗೆ ಗ್ರಾಮಸ್ಥರ ಕ್ಲಾಸ್!

    ಧರ್ಮಸ್ಥಳ ಸಂಘದ ವಿರುದ್ಧ ಪಿತೂರಿಗೆ ಬಂದಿದ್ದ ಮಟ್ಟಣ್ಣನವರ್‌ಗೆ ಗ್ರಾಮಸ್ಥರ ಕ್ಲಾಸ್!

    ಬಳ್ಳಾರಿ: ವಿಜಯನಗರ ಜಿಲ್ಲೆಯಲ್ಲಿ ಧರ್ಮಸ್ಥಳ (Dharmasthala) ಸಂಘದ ವಿರುದ್ದ ಪ್ರಚಾರಕ್ಕೆ ಹೋಗಿದ್ದ ಗಿರೀಶ್ ಮಟ್ಟಣ್ಣನವರ್‌ (Girish Mattannavar) ಮತ್ತು ಗ್ಯಾಂಗ್‌ ಸದಸ್ಯರನ್ನು ಸ್ಥಳೀಯರು ತರಾಟೆಗೆ‌ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಏಳು ತಿಂಗಳ ಹಿಂದೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.

    ಧರ್ಮಸ್ಥಳ ಸ್ವಸಹಾಯ ಸಂಘದ (Self Help Groups) ವಿರುದ್ದ ಪಿತೂರಿ ಮಾಡಲು ಹೋಗಿದ್ದ ಮಟ್ಟಣ್ಣನವರ್‌ ಆ್ಯಂಡ್ ಟೀಂ, ಗ್ರಾಮಕ್ಕೆ ಎಂಟ್ರಿ ಆಗುತ್ತಿದ್ದಂತೆ ಜನ ತರಾಟೆ ತಗೊಂಡಿದ್ದರು.  ಇದನ್ನೂ ಓದಿ:AI ವೀಡಿಯೋಗೆ ಸಾಕ್ಷಿ ಕೊಡಲು ತಡಬಡಿಸಿದ ಬುರುಡೆ ಸಮೀರ್

     

    ಮಹಿಳೆಯರು ಹಾಗೂ ಪುರುಷರು ಮಟ್ಟಣ್ಣನವರನ್ನ ಸುತ್ತುವರೆದು, ನಮ್ಮೂರಿನಲ್ಲಿ ಧರ್ಮಸ್ಥಳ ಸಂಘದಿಂದ ಯಾವುದೇ ಸಮಸ್ಯೆ ಆಗಿಲ್ಲ. ನಮಗೆ ಬೇಕಾದಾಗ ಸಾಲ ಕೊಟ್ಟಿದ್ದಾರೆ. ನಾವು ಸರಿಯಾಗಿ ಕಟ್ತಿದ್ದೇವೆ. ನಿಮಗೆ ಧರ್ಮಸ್ಥಳ ಸಂಘದಿಂದ ಅನ್ಯಾಯ ಆಗಿದೆ ಎಂದು ಹೇಳಿದವರು ಯಾರು ಕರೆಸಿ. ಸುಮ್ನೆ ನಮ್ಮೂರಿಗೆ ಬಂದು ಸಮಸ್ಯೆ ಮಾಡಬೇಡಿ. ಕೂಡಲೇ ಇಲ್ಲಿಂದ ವಾಪಾಸ್ ಹೋಗಿ ಎಂದು ಮಹಿಳೆಯರು ಹಾಗೂ ಪುರುಷರು ತರಾಟೆ ತಗೊಂಡಿದ್ದರು.

    ತರಾಟೆಯ ಬೆನ್ನಲ್ಲೇ ಬಂದ ದಾರಿಗೆ ಸುಂಕ ಇಲ್ಲ ಎನ್ನಹವಂತೆ ಗಿರೀಶ್ ಮಟ್ಟಣ್ಣನವರ್ ಆ್ಯಂಡ್ ಟೀಂ ಗ್ರಾಮದಿಂದ ಕಾಲ್ಕಿತ್ತಿದ್ದರು.

  • ಶಿಡ್ಲಘಟ್ಟ, ಮೊಳಕಾಲ್ಮೂರಿನಲ್ಲಿ ಸೀರೆ ಕ್ಲಸ್ಟರ್

    ಶಿಡ್ಲಘಟ್ಟ, ಮೊಳಕಾಲ್ಮೂರಿನಲ್ಲಿ ಸೀರೆ ಕ್ಲಸ್ಟರ್

    ಬೆಂಗಳೂರು: ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

    ಬಜೆಟ್ ಘೋಷಣೆ ಏನು?:
    * ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. 3.9ಲಕ್ಷ ಮಹಿಳೆಯರಿಗೆ ಅನುಕೂಲ.

    * ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ. ಇದನ್ನೂ ಓದಿ: ಒಲಂಪಿಕ್ಸ್‌ಗೆ ಸಿದ್ಧತೆ – 75 ಕ್ರೀಡಾಪಟುಗಳಿಗೆ ತಲಾ 10 ಲಕ್ಷ

    * ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಪ್ಯಾಕಿಂಗ್ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು ಅಸ್ಮಿತೆ ಹೆಸರಿನಡಿ ಎಲ್ಲಾ ಉತ್ಪನ್ನಗಳ ಮಾರಾಟ ಮಾಡಲಾಗುವುದು. ಹೋಬಳಿ, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ ಆಯೋಜನೆ. ಇದನ್ನೂ ಓದಿ: ಜಿಎಸ್‍ಟಿ ಪರಿಹಾರ 3 ವರ್ಷ ವಿಸ್ತರಿಸಿ: ರಾಜ್ಯದ ಹಣಕಾಸು ಪರಿಸ್ಥಿತಿಯ ಬಗ್ಗೆ ಸಿಎಂ ಹೇಳಿದ್ದೇನು?

    * ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ – ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರುನಲ್ಲಿ ಸೀರೆ ಮೈಕ್ರೋಕ್ಲಸ್ಟರ್ ಅಭಿವೃದ್ಧಿ ಮಾಡಲಾಗುವುದು ಎಂದು ಬಜೆಟ್‍ನಲ್ಲಿ ಮಂಡನೆ ಮಾಡಿದರು.

  • ರೈತರ ಸಾಲಮನ್ನಾ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ಹೆಚ್‍ಡಿಕೆ

    ರೈತರ ಸಾಲಮನ್ನಾ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ಹೆಚ್‍ಡಿಕೆ

    ಬೆಂಗಳೂರು: ರೈತರ ಸಾಲ ಮನ್ನಾ ಮಾಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದು, ರೈತರ ಸಾಲ ಮನ್ನಾ ಮಾಡುವ ಬದಲು ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡಿದ್ದರೆ ಮಹಿಳೆಯರು ಜೆಡಿಎಸ್ ಕೈ ಹಿಡಿಯುತ್ತಿದ್ದರು ಎಂದು ತಿಳಿಸಿದರು.

    ನಗರದ ಪಕ್ಷದ ಕಚೇರಿ ಆವರಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ಮಾಡಿದ್ದಕ್ಕೆ ರೈತರಿಗೆ ಅನುಕೂಲವಾಯಿತು. ಆದರೆ ರೈತರು ನಮ್ಮನ್ನು ನೆನೆಯಲಿಲ್ಲ. ರೈತರ 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವ ಬದಲು, ಸ್ತ್ರೀ ಶಕ್ತಿ ಸಂಘಗಳದ್ದು ಕೇವಲ 1 ಸಾವಿರ ಕೋಟಿ ರೂ. ಮಾತ್ರ ಇತ್ತು. ಇದನ್ನು ಮನ್ನಾ ಮಾಡಿದ್ದರೆ ಬಹುಷಃ ಎಲ್ಲ ಮಹಿಳೆಯರು ನನ್ನ ಜೊತೆ ನಿಲ್ಲುತ್ತಿದ್ದರೆನೋ ಎಂದು ಬೇಸರ ವ್ಯಕ್ತಡಪಸಿದರು.

    ಹೋದ ಕಡೆಯಲ್ಲೆಲ್ಲ ನನಗೆ 1.50, 2 ಲಕ್ಷ ಸಾಲ ಮನ್ನಾ ಆಗಿದೆ ಎಂದು ಹೋದ ಕಡೆಯಲ್ಲೆಲ್ಲ ಹೇಳುತ್ತಾರೆ. ಆದರೆ ಮತ ಹಾಕುವಾಗ ಮಾತ್ರ ಜೆಡಿಎಸ್ ಪಕ್ಷವನ್ನು ಮರೆಯುತ್ತಾರೆ. ಇದೀಗ ಹಲೆವೆ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಹೀಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಸಾಲ ಮನ್ನಾ ಮಾಡಿದೆ. ಆದರೆ ರೈತರು ಮಾತ್ರ ನಮಗೆ ಮತ ಹಾಕಲಿಲ್ಲ ಎಂದರು.

    ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ರೈತರ ಕುಟುಂಬಗಳಿಗೆ 50 ಸಾವಿರ, 1 ಲಕ್ಷ ರೂ. ಪರಿಹಾರವನ್ನು ಪಕ್ಷದಿಂದ ನೀಡಿದೆವು. ಚುನಾವಣೆ ಸಂದರ್ಭದಲ್ಲಿ ನೀಡುವ 5 ಸಾವಿರ ರೂ.ಗೆ ಮತ ಹಾಕುತ್ತಾರೆ. ಆದರೆ ರೈತರ ಕುಟುಂಬ ಕಷ್ಟದಲ್ಲಿದೆ ಎಂದು ಪರಿಹಾರ ನೀಡಿದರೆ ನಮಗೆ ಮತ ಹಾಕಲ್ಲ ಎಂದು ತಿಳಿಸಿದರು.

  • ಮಾಸ್ಕ್ ಕೊರತೆ ನೀಗಿಸಲು ಮುಂದಾದ ಮಹಿಳಾ ಸ್ವಸಹಾಯ ಸಂಘ

    ಮಾಸ್ಕ್ ಕೊರತೆ ನೀಗಿಸಲು ಮುಂದಾದ ಮಹಿಳಾ ಸ್ವಸಹಾಯ ಸಂಘ

    ಚಾಮರಾಜನಗರ: ಕೊರೊನಾ ಭೀತಿ ಶುರುವಾದ ನಂತರ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಾಸ್ಕ್‌ಗಳ ಕೊರತೆ ಎದುರಾಗಿದೆ. ಜಿಲ್ಲೆಯ ಮೆಡಿಕಲ್ ಸ್ಟೋರ್ ಗಳಲ್ಲಿ ಮಾಸ್ಕ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. ಬೇಡಿಕೆ ಹೆಚ್ಚಾದಂತೆ ಮಾಸ್ಕ್‌ಗಳ ದರವೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಮಾಸ್ಕ್‌ಗಳ ಅವಶ್ಯಕತೆಯನ್ನರಿತ ಚಾಮರಾಜನಗರ ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘವೊಂದು ಗುಣಮಟ್ಟದ ಮಾಸ್ಕ್‌ಗಳನ್ನು ತಯಾರಿಸಿ ಕಡಿಮೆ ದರದಲ್ಲಿ ಗ್ರಾಹಕರಿಗೆ ಪೂರೈಸಲು ಆರಂಭಿಸಿದೆ.

    ವಿಶ್ವದೆಲ್ಲೆಡೆ ಹರಡುತ್ತಿರುವ ಕೊರೊನಾ ಭೀತಿಯಿಂದ ಜನರು ಮಾಸ್ಕ್‌ಗಳ ಮೊರೆ ಹೋಗುತ್ತಿದ್ದಾರೆ. ಆದರೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಾಸ್ಕ್‌ಗಳ ಕೊರತೆ ಹೆಚ್ಚಾಗಿದೆ. ಜಿಲ್ಲೆಯ ಮೆಡಿಕಲ್ ಸ್ಟೋರ್ ಗಳಲ್ಲಿ ಬೇಡಿಕೆಗೆ ತಕ್ಕಂತೆ ಮಾಸ್ಕ್‌ಗಳು ಲಭ್ಯವಾಗುತ್ತಿಲ್ಲ. ಬೇಡಿಕೆ ಹೆಚ್ಚಾಗುತ್ತಿದ್ದಂತೆ ಮಾಸ್ಕ್‌ಗಳ ದರವೂ ದುಪ್ಪಾಟ್ಟಾಗುತ್ತಿದೆ. ಈ ಹಿನ್ನೆಲೆ ಮಾಸ್ಕ್‌ಗಳ ಅವಶ್ಯಕತೆಯನ್ನು ಅರಿತ ಚಾಮರಾಜನಗರ ತಾಲೂಕಿನ ಬೂದಂಬಳ್ಳಿ ಮಹಿಳಾ ಸ್ವಸಹಾಯ ಸಂಘವೊಂದು ಗುಣಮಟ್ಟದ ಮಾಸ್ಕ್‌ಗಳನ್ನು ತಯಾರಿಸಿ, ಕಡಿಮೆ ದರದಲ್ಲಿ ಗ್ರಾಹಕರಿಗೆ ಪೂರೈಸಲು ಆರಂಭಿಸಿದೆ.

    ಜಿಲ್ಲಾ ಪಂಚಾಯ್ತಿಯ ಎನ್‌ಆರ್‌ಎಲ್‌ಎಂ ಯೋಜನೆಯಡಿ ಭುವನೇಶ್ವರಿ ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯರು ಸಾಲ ಸೌಲಭ್ಯ ಪಡೆದು, ಹೊಲಿಗೆ ಯಂತ್ರ ಖರೀದಿಸಿ ಸ್ವ ಉದ್ಯೋಗ ಕೈಗೊಂಡಿದ್ದಾರೆ. ಮಾಸ್ಕ್‌ಗಳ ಅವಶ್ಯಕತೆ ಅರಿತು ಕಡಿಮೆ ದರದಲ್ಲಿ ಗುಣಮಟ್ಟದ ಮಾಸ್ಕ್‌ಗಳನ್ನು ತಯಾರಿಸುತ್ತಿದ್ದಾರೆ.

    ಸಾಮಾನ್ಯರಿಗೂ ಮಾಸ್ಕ್ ದೊರೆಯುವಂತೆ ಮಾಡುವ ಉದ್ದೇಶದಿಂದ ಈ ಮಹಿಳೆಯರು ಮಾಸ್ಕ್ ತಯಾರಿಸುವ ಕೆಲಸಕ್ಕೆ ಕೈಹಾಕಿದ್ದಾರೆ. ಆರೋಗ್ಯ ಇಲಾಖೆ ಒಪ್ಪಿಗೆ ನೀಡಿದ ಉತ್ತಮ ಗುಣಮಟ್ಟದ ಹತ್ತಿ ಬಟ್ಟೆ ಉಪಯೋಗಿಸಿ, ಬಳಸಲು ಸುಲಭವಾಗುವ ರೀತಿಯ ಮಾಸ್ಕ್‌ಗಳನ್ನು ತಯಾರಿಸುತ್ತಿದ್ದಾರೆ.

    ಈ ಮಾಸ್ಕ್‌ಗಳು ಪುನರ್ ಬಳಸಬಹುದಾಗಿದ್ದು, ಬೆಲೆಯು ಕೂಡ ಕಡಿಮೆ ಇದೆ. ಇಲ್ಲಿ ಮಾಸ್ಕ್‌ಗಳು ಕಡಿಮೆ ಬೆಲೆಗೆ ದೊರೆಯುವುದನ್ನು ಮನಗಂಡು ಆರೋಗ್ಯ ಇಲಾಖೆ ಸೇರಿದಂತೆ ಜಿಲ್ಲೆ ಹಾಗೂ ಹೊರ ಜಿಲ್ಲೆಯ ಮೆಡಿಕಲ್ ಶಾಪ್‍ಗಳಿಂದಲೂ ಬೇಡಿಕೆ ಬಂದಿದ್ದು, ಬೇಡಿಕೆಗೆ ಅನುಗುಣವಾಗಿ ಮಾಸ್ಕ್‌ಗಳನ್ನು ಪೂರೈಸಲು ಮಹಿಳೆಯರು ಹಗಲಿರುಳು ಶ್ರಮಿಸುತ್ತಿದ್ದಾರೆ.