Tag: ಸ್ವಾಗತ

  • ನಿಮ್ಮಿಬ್ಬರಿಗೂ ನಮ್ಮ ಕ್ಲಬ್‍ಗೆ ಸ್ವಾಗತ- ದೀಪ್‍ವೀರ್ ಗೆ ಅನುಷ್ಕಾ ಸ್ವಾಗತ

    ನಿಮ್ಮಿಬ್ಬರಿಗೂ ನಮ್ಮ ಕ್ಲಬ್‍ಗೆ ಸ್ವಾಗತ- ದೀಪ್‍ವೀರ್ ಗೆ ಅನುಷ್ಕಾ ಸ್ವಾಗತ

    ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಗೆಳೆಯ ರಣ್‍ವೀರ್ ಸಿಂಗ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ದೀಪಿಕಾ ಮದುವೆಯಾದ ಬಳಿಕ ನಟಿ ಅನುಷ್ಕಾ ಶರ್ಮಾ ತಮ್ಮ ಕ್ಲಬ್‍ಗೆ ಸ್ವಾಗತ ಕೋರಿದ್ದಾರೆ.

    ದೀಪ್‍ವೀರ್ ಬುಧವಾರ ಕೊಂಕಣಿ ಸಂಪ್ರದಾಯದಂತೆ ಗುರುವಾರ ಸಿಂಧ್ ಸಂಪ್ರದಾಯದಂತೆ ಮದುವೆಯಾದರು. ಮದುವೆಯಾದ ನಂತರ ಬಾಲಿವುಡ್ ತಾರೆಯರು ಹಾಗೂ ಗಣ್ಯರು ಈ ಜೋಡಿಗೆ ಶುಭಾಶಯ ತಿಳಿಸಿದರು. ಹಾಗೆಯೇ ಅನುಷ್ಕಾ ಕೂಡ ದೀಪಿಕಾ ಅವರಿಗೆ ಶುಭಾಶಯ ತಿಳಿಸಿ ತಮ್ಮ ಕ್ಲಬ್‍ಗೆ ಸ್ವಾಗತಿಸಿದ್ದಾರೆ.

    ಅನುಷ್ಕಾ ಶರ್ಮಾ ತಮ್ಮ ಟ್ವಿಟ್ಟರಿನಲ್ಲಿ, “ನಿಮ್ಮಿಬ್ಬರಿಗೂ ಪ್ರಪಂಚದ ಎಲ್ಲ ಖುಷಿ ಸಿಗಲಿ. ನೀವಿಬ್ಬರು ಯಾವಾಗಲೂ ಜೊತೆಯಾಗಿರಿ. ನೀವಿಬ್ಬರು ಈಗಿರುವ ಹಾಗೇ ಮುಂದೆ ಜೀವನದಲ್ಲೂ ಒಬ್ಬರನೊಬ್ಬರು ಪ್ರೀತಿಸುತ್ತೀರಿ. ನಿಮ್ಮಿಬ್ಬರಿಗೂ ನಮ್ಮ ಕ್ಲಬ್‍ಗೆ ಸ್ವಾಗತ” ಎಂದು ಟ್ವೀಟ್ ಮಾಡಿದ್ದಾರೆ.

    ಇಟಲಿಯಿಂದ ನ.18ಕ್ಕೆ ಭಾರತಕ್ಕೆ ವಾಪಸ್ಸಾಗಲಿರುವ ಬಾಜಿರಾವ್ ಮಸ್ತಾನಿ ದಂಪತಿ ನ.21ರಂದು ಬೆಂಗಳೂರಿನ ಲೀಲಾ ಪ್ಯಾಲೇಸ್‍ನಲ್ಲಿ ಅದ್ಧೂರಿ ಆರತಕ್ಷತೆಯನ್ನು ಆಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆಯವರ ಬಂಧುಗಳು ಮತ್ತು ಆಪ್ತ ಸ್ನೇಹಿತರು ಪಾಲ್ಗೊಳ್ಳಲಿದ್ದಾರೆ. ನ.21ರಂದು ಮುಂಬೈಯಲ್ಲಿ ಇನ್ನೊಂದು ರಿಸೆಪ್ಷನ್ ಪಾರ್ಟಿ ನಡೆಯಲಿದ್ದು, ಅದರಲ್ಲಿ ಬಾಲಿವುಡ್ ಮತ್ತು ಕ್ರೀಡಾ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

     

  • ಭರ್ಜರಿ ಸ್ವಾಗತ ಪಡೆದ ಹಿಮಾದಾಸ್

    ಭರ್ಜರಿ ಸ್ವಾಗತ ಪಡೆದ ಹಿಮಾದಾಸ್

    -ಅಭಿಮಾನಿಗಳು ನೀಡಿದ್ರು ಬಿರುದು

    ಗುವಾಹತಿ: ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದು ಹೆಮ್ಮೆ ತಂದಿದ್ದ ಹಿಮಾದಾಸ್ ತವರಿಗೆ ಆಗಮಿಸಿದ್ದು, ಅಸ್ಸಾಂ ಸರ್ಕಾರ ಹಾಗೂ ಅಭಿಮಾನಿಗಳು ಹಿಮಾದಾಸ್‍ಗೆ ಭರ್ಜರಿ ಸ್ವಾಗತ ಕೋರಿದ್ದಾರೆ.

    18 ವರ್ಷದ ಹಿಮಾದಾಸ್ ಏಷ್ಯನ್ ಗೇಮ್ಸ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಭಾರತದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಹಾರಾಡುವಂತೆ ಮಾಡಿದ್ದರು. ಏಷ್ಯನ್ ಗೇಮ್ಸ್ ಬಳಿಕ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ ಹಿಮಾದಾಸ್‍ಗೆ ಸಿಎಂ ಸರಬಾನಂದ ಸೊನೋವಾಲ್ ಸ್ವಾಗತ ಕೋರಿದರು. ಈ ವೇಳೆ ಹಿಮಾದಾಸ್‍ಗೆ ‘ಧಿಂಗ್ ಎಕ್ಸ್ ಪ್ರೆಸ್’ ಎಂಬ ಬಿರುದು ನೀಡಿ ಅಭಿಮಾನಿಗಳು ಸಂಭ್ರಮಿಸಿದರು. ಈ ವೇಳೆ ಹಲವು ರಾಜಕೀಯ ಮುಖಂಡರು ಹಾಜರಿದ್ದರು.

    ವಿಮಾನ ನಿಲ್ದಾಣದಲ್ಲಿ ಹಿಮಾದಾಸ್ ಆಗಮನಕ್ಕಾಗಿಯೇ ವಿಶೇಷ ರೆಡ್ ಕಾರ್ಪೆಟ್ ವ್ಯವಸ್ಥೆ ಮಾಡಲಾಗಿತ್ತು. ಅದರ ಮೇಲೆ 1.2.3.4.5 ಎಂದು ಸಂಖ್ಯೆ ನೀಡಿ, ರನ್ನಿಂಗ್ ಪಥದಂತೆ ಮಾಡಲಾಗಿತ್ತು. ಈ ವೇಳೆ 25 ಮಂದಿಯ ಅಸ್ಸಾಂ ವಿಶೇಷ ಮಹಿಳಾ ಪೊಲೀಸ್ ಪಡೆ ಹಿಮಾದಾಸ್‍ಗೆ ಸ್ವಾಗತ ಕೋರಿದರು. ಸಿಎಂ ಸರ್ಬಾನಂದ ಅವರು ಸಾಂಪ್ರದಾಯಿಕ ಶಾಲು ನೀಡಿ ಹಿಮಾದಾಸ್‍ಗೆ ಗೌರವ ನೀಡಿದರು.

    ಈ ವೇಳೆ ಐಷಾರಾಮಿ ಕಾರಿನಲ್ಲಿ ಮೆರವಣಿಗೆ ಮೂಲಕ ಹಿಮಾದಾಸ್‍ರನ್ನು ಕರೆದುಕೊಂಡು ಹೋಗಲಾಯಿತು. ರಸ್ತೆ ಎರಡು ಬದಿ ನೆರೆದಿದ್ದ ಅಭಿಮಾನಿಗಳು, ವಿದ್ಯಾರ್ಥಿಗಳು, ಕ್ರೀಡಾಪಟುಗಳು, ರಾಜಕೀಯ ನಾಯಕರು, ಸಾರ್ವಜನಿಕರು ಹಿಮಾದಾಸ್ ಹೆಸರು ಕರೆದು ಘೋಷಣೆ ಕೂಗಿದರು.

    ಹಿಮಾದಾಸ್ ಏಷ್ಯನ್ ಕ್ರೀಡಾಕೂಟದಲ್ಲಿ 400 ಮೀ ಓಟವನ್ನು 51.46 ಸೆಕೆಂಡ್‍ಗಳಲ್ಲಿ ಪೂರ್ಣಗೊಳಿಸಿ ಬೆಳ್ಳಿ ಪದಕ ಪಡೆದಿದ್ದರು. ಅಲ್ಲದೇ 4*400 ರಿಲೇ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಹಿಮಾದಾಸ್ ರನ್ನು ಅಸ್ಸಾಂ ಸರ್ಕಾರ ಕ್ರೀಡಾ ರಾಯಭಾರಿಯಾಗಿ ಆಯ್ಕೆ ಮಾಡಿ ಈ ಹಿಂದೆಯೇ ಗೌರವಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಹೂಹಾರ ಹಾಕಿ ಆರೋಪಿಗಳನ್ನು ಸ್ವಾಗತಿಸಿದ್ದ ಮಗನ ವಿರುದ್ಧ ಮಾಜಿ ಕೇಂದ್ರ ಸಚಿವ ಗರಂ!

    ಹೂಹಾರ ಹಾಕಿ ಆರೋಪಿಗಳನ್ನು ಸ್ವಾಗತಿಸಿದ್ದ ಮಗನ ವಿರುದ್ಧ ಮಾಜಿ ಕೇಂದ್ರ ಸಚಿವ ಗರಂ!

    ರಾಂಚಿ: ಗೋ ರಕ್ಷಣೆಯ ಹೆಸರಿನಲ್ಲಿ ಕೊಲೆಗೈದ 7 ಆರೋಪಿಗಳಿಗೆ ಹೂಹಾರ ಹಾಕಿ ಆಕ್ರೋಶಕ್ಕೆ ಒಳಗಾಗಿದ್ದ ಜಯಂತ್ ಸಿನ್ಹಾ ವಿರುದ್ಧ ಇದೀಗ ತಂದೆ, ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಗರಂ ಆಗಿದ್ದಾರೆ.

    ಈ ಕುರಿತು ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸಿನ್ಹಾ, ಮಗನ ಈ ಕಾರ್ಯವನ್ನು ಯಾವುದೇ ಕಾರಣಕ್ಕೂ ನಾನು ಒಪ್ಪಲು ಸಿದ್ಧನಿಲ್ಲ. ಈ ಹಿಂದೆ ನಾನು ಒಬ್ಬ ನಾಲಾಯಕ್ ಮಗನ ಅಪ್ಪನಾಗಿದ್ದೆ. ಆದ್ರೆ ಇದೀಗ ಪಾತ್ರಗಳು ಬದಲಾಗಿವೆ. ಇದು ಟ್ವಿಟ್ಟರ್ ಮಹಿಮೆ ಅಂತ ಹೇಳೋ ಮೂಲಕ ಮಗನ ವಿರುದ್ಧ ಕೆಂಡಾಮಂಡಲಾಗಿದ್ದಾರೆ.

    ಏನಿದು ಘಟನೆ?:
    ಕಳೆದ ವರ್ಷ ಜೂನ್ ತಿಂಗಳಲ್ಲಿ ಜಾರ್ಖಂಡ್ ನ ರಾಮ್ ಗ್ರಹ್ ನಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದಾರೆಂದು ಆರೋಪಿಸಿ ಅವರನ್ನ ಕಾರಿನಿಂದ ಎಳೆದು ಹಲ್ಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ಮುಖಂಡ ಸೇರಿ 11 ಮಂದಿ ಜೈಲು ಪಾಲಾಗಿದ್ದರು. ಇದೀಗ ಒಂದು ವರ್ಷದ ನಂತರ ಜೂನ್ 29ರಂದು ಜಾರ್ಖಂಡ್ ಹೈಕೋರ್ಟ್ 8 ಆರೋಪಿಗಳ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿತ್ತು.ಹೀಗಾಗಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಇವರೆಲ್ಲರೂ ರಾಂಚಿಯಲ್ಲಿರೋ ಜಯಂತ್ ಸಿನ್ಹಾ ಅವರ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ಸಚಿವರು ಎಲ್ಲರನ್ನೂ ಹಾರ ಹಾಕಿ ಸ್ವಾಗತಿಸಿದ್ದಾರೆ.

    ಈ ಕುರಿತ ಭಾವಚಿತ್ರಗಳು ಇದೀಗ ವೈರಲ್ ಆಗಿದ್ದು, ಇದೀಗ ಮಗ ಜಯಂತ್ ಸಿನ್ಹಾ ವಿರುದ್ಧ ತಂದೆ ಯಶ್ವಂತ್ ಸಿಂಗ್ ಕಿಡಿಕಾರಿದ್ದಾರೆ.

  • ಮೋದಿಯನ್ನು ಸ್ವಾಗತ ಮಾಡಲು ಪುನೀತ್‍ಗೆ ಸಹಾಯ ಮಾಡಿದ್ರು ಸ್ಯಾಂಡಲ್‍ವುಡ್ ನಟ!

    ಮೋದಿಯನ್ನು ಸ್ವಾಗತ ಮಾಡಲು ಪುನೀತ್‍ಗೆ ಸಹಾಯ ಮಾಡಿದ್ರು ಸ್ಯಾಂಡಲ್‍ವುಡ್ ನಟ!

    ಬೆಂಗಳೂರು: ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ಗುರುವಾರ ನಗರದ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಟ ಪುನೀತ್ ರಾಜ್‍ಕುಮಾರ್ ದಂಪತಿ ಸ್ವಾಗತಿಸಿದರು.

    ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಪುನೀತ್ ರಾಜ್‍ಕುಮಾರ್ ಅವರಿಗೆ ಸ್ಯಾಂಡಲ್‍ವುಡ್ ನವರಸನಾಯಕ ಜಗ್ಗೇಶ್ ಅವರು ಸಹಾಯ ಮಾಡಿದ್ದಾರೆ. ಈ ಬಗ್ಗೆ ನಟ ಜಗ್ಗೇಶ್ ತಮ್ಮ ಟ್ವಿಟ್ಟರಿನಲ್ಲಿ ಟ್ವೀಟ್ ಮಾಡಿದ್ದಾರೆ.

    “ನಾನೇ ಈ ಭೇಟಿಗೆ ವ್ಯವಸ್ಥೆ ಮಾಡಿಸಿದ್ದು. ಮಾರ್ಚ್ 17 ಹುಟ್ಟಿದ ನಾವಿಬ್ಬರೂ ಒಂದೇ ದಿನ ಭೇಟಿ ಮಾಡುವ ಉದ್ದೇಶ. ಅಪ್ಪು ನಮ್ಮ ಯಜಮಾನರ ಮುದ್ದಿನ ಮಗ. ನನ್ನ ನೆಚ್ಚಿನ ಸಹೋದರ” ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

    ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಪುನೀತ್ ರಾಜ್‍ಕುಮಾರ್ ದಂಪತಿ ಅವರನ್ನು ಸ್ವಾಗತ ಕೋರಿ ಡಾ. ರಾಜಕುಮಾರ್ ಆತ್ಮಚರಿತ್ರೆಯನ್ನು ಕಾಣಿಕೆಯಾಗಿ ನೀಡಿದ್ದರು. ಬಳಿಕ ಪುನೀತ್ ರಾಜ್‍ಕುಮಾರ್, ಮೋದಿ ಅವರನ್ನು ಭೇಟಿ ಮಾಡಿದ ಫೋಟೋಗಳನ್ನು ತಮ್ಮ ಫೇಸ್‍ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು. ಈ ಫೋಟೋಗಳನ್ನು ಅಭಿಮಾನಿಗಳು ಕೂಡ ಶೇರ್ ಮಾಡಿ `ಪವರ್ ಮೀಟ್ಸ್ ಪವರ್’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮೋದಿಗೆ ರಾಜ್ ಆತ್ಮ ಚರಿತ್ರೆಯನ್ನು ನೀಡಿದ ಪುನೀತ್ ದಂಪತಿ

  • ತನ್ನ ಪ್ರಾಣ ಲೆಕ್ಕಿಸದೇ ಭಯೋತ್ಪಾದಕರ ವಿರುದ್ಧ ಹೋರಾಡಿ ಬಂದ ಯೋಧನಿಗೆ ತವರೂರಲ್ಲಿ ಸಿಕ್ತು ಅದ್ಧೂರಿ ಸ್ವಾಗತ

    ತನ್ನ ಪ್ರಾಣ ಲೆಕ್ಕಿಸದೇ ಭಯೋತ್ಪಾದಕರ ವಿರುದ್ಧ ಹೋರಾಡಿ ಬಂದ ಯೋಧನಿಗೆ ತವರೂರಲ್ಲಿ ಸಿಕ್ತು ಅದ್ಧೂರಿ ಸ್ವಾಗತ

    ಮಂಗಳೂರು: ಭಯೋತ್ಪಾದಕರ ದಾಳಿಯಲ್ಲಿ ಉಗ್ರರ ವಿರುದ್ಧ ಹೋರಾಡಿ ಬಂದ ಸಿಆರ್‍ಪಿಎಫ್ ಯೋಧರೊಬ್ಬರಿಗೆ ತವರೂರಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ.

    ಫೆಬ್ರವರಿ ತಿಂಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಉಗ್ರರನ್ನು ಹೊಡೆದುರುಳಿಸಿದ್ದ ಸೇನಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸಿಆರ್ ಪಿಎಫ್ ಯೋಧ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಬಜತ್ತೂರು ನಿವಾಸಿ ಜುಬೇರ್ ಎಂ. ಅವರನ್ನು ಹುಟ್ಟೂರಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಗಿದೆ.

    ಸಮೂನ್ ಬ್ಯಾರಿ ಹಾಗೂ ಅಮೀನಮ್ಮ ದಂಪತಿಯ ಎರಡನೇ ಪುತ್ರ ಜುಬೇರ್ ಸೇನಾ ಕಾರ್ಯಾಚರಣೆ ಬಳಿಕ ಹುಟ್ಟೂರಿಗೆ ಆಗಮಿಸಿದ್ದರು. ಯೋಧನನ್ನು ಊರಿನವರು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ, ಅದ್ಧೂರಿಯಾಗಿ ಸನ್ಮಾನಿಸಿದ್ದಾರೆ.

    ಜಮ್ಮುವಿನ ಕಟ್ಟಡ ಒಂದರಲ್ಲಿ ಅವಿತು ಕುಳಿತಿದ್ದ ಲಷ್ಕರ್-ಏ-ತೊಯ್ಬಾ ಉಗ್ರರು ಹಠಾತ್ತಾಗಿ ಸೇನಾ ಯೋಧರ ಮೇಲೆ ದಾಳಿ ನಡೆಸಿದ್ದರು. ಇದರಿಂದಾಗಿ ಹಲವು ಯೋಧರು ಹುತಾತ್ಮರಾಗಿದ್ದರು. ಆದರೆ, ಸಿಆರ್ ಪಿಎಫ್ ಯೋಧರು ಯಶಸ್ವಿ ಕಾರ್ಯಾಚರಣೆ ಮೂಲಕ ಉಗ್ರರನ್ನು ಹೊಡೆದುರುಳಿಸಿದ್ದರು.

    ಈ ಮಹತ್ವದ ಕಾರ್ಯಾಚರಣೆ ಬಳಿಕ ಜುಬೇರ್ ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದ್ದಾರೆ. ಆದ್ದರಿಂದ ತನ್ನ ಪ್ರಾಣವನ್ನು ಲೆಕ್ಕಿಸದೆ ದಾಳಿ ಸಂಘಟಿಸಿದ್ದಕ್ಕಾಗಿ ಜುಬೇರ್ ಅವರನ್ನು ಗ್ರಾಮದವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದು ವಿಶೇಷವಾಗಿತ್ತು.

  • ನಾಮಕರಣ ಮುಗಿಸಿ ಬಂದ ಯದುವೀರ್ ದಂಪತಿ, ಆದ್ಯವೀರ್ ಗೆ ಮೈಸೂರು ಅರಮನೆಯಲ್ಲಿ ಅದ್ಧೂರಿ ಸ್ವಾಗತ!

    ನಾಮಕರಣ ಮುಗಿಸಿ ಬಂದ ಯದುವೀರ್ ದಂಪತಿ, ಆದ್ಯವೀರ್ ಗೆ ಮೈಸೂರು ಅರಮನೆಯಲ್ಲಿ ಅದ್ಧೂರಿ ಸ್ವಾಗತ!

    ಮೈಸೂರು: ಪುತ್ರ ಆದ್ಯವೀರ್ ಜೊತೆ ಮೈಸೂರು ಅರಮನೆಗೆ ಯದುವೀರ್ ದಂಪತಿ ಆಗಮಿಸಿದ್ದು, ತ್ರಿಷಿಕಾ ಹಾಗೂ ಯದುವೀರ್ ಅವರಿಗೆ ಆರತಿ ಬೆಳಗಿ ಸ್ವಾಗತ ಮಾಡಲಾಗಿದೆ.

    ಕಳೆದ ವಾರವಷ್ಟೆ ಬೆಂಗಳೂರು ಅರಮನೆಯಲ್ಲಿ ಯದುವೀರ್ ಪುತ್ರನಿಗೆ ನಾಮಕರಣ ಕಾರ್ಯಕ್ರಮ ನೆರವೇರಿತ್ತು. ಆದ್ಯವೀರ್ ನರಸಿಂಹರಾಜ ಒಡೆಯರ್ ಎಂದು ಮಗುವಿಗೆ ನಾಮಕರಣ ಮಾಡಲಾಗಿತ್ತು. ನಂತರ ಮೈಸೂರು ಅರಮನೆಗೆ ಬಂದ ದಂಪತಿಗೆ ಅರಮನೆಯಲ್ಲಿದ್ದ ಮುತ್ತೈದೆಯರು ಆರತಿ ಬೆಳಗಿ ಸ್ವಾಗತ ಕೋರಿದ್ದಾರೆ.

    ಯದುವೀರ್ ಕುಟುಂಬ ನಾಮಕರಣ ಕಾರ್ಯಕ್ರಮ ಮುಗಿಸಿ ಮೈಸೂರು ಅರಮನೆಗೆ ಬಂದಿದ್ದು, ಇದೀಗ ಮೈಸೂರು ಅರಮನೆಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಆದ್ಯವೀರ್ ನನ್ನು ನೋಡಿ ಅರಮನೆ ಸಿಬ್ಬಂದಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೈಸೂರು ಯದುವಂಶದ ಯುವರಾಜನಿಗೆ ನಾಮಕರಣ

    ಆದ್ಯವೀರ್ ತುಂಬಾ ಚೆನ್ನಾಗಿದ್ದಾನೆ. ನಾಮಕರಣ ಮುಗಿಸಿ ಮೈಸೂರಿಗೆ ಆಗಮಿಸಿದ್ದೇವೆ. ಬೆಂಗಳೂರಿನಲ್ಲಿ ನಾಮಕರಣ ಮಾಡಿದ್ದು ನಮ್ಮ ಅನುಕೂಲಕ್ಕಾಗಿ ಅಷ್ಟೇ. ಅದನ್ನು ಹೊರತುಪಡಿಸಿ ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಮೈಸೂರಿನಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

    ಶೀಘ್ರದಲ್ಲೇ ಚಾಮುಂಡಿ ಬೆಟ್ಟಕ್ಕೆ ಹೋಗಲಿದ್ದೇವೆ. ಆದ್ಯಾ ಎಂದರೆ ದುರ್ಗಿ, ಚಾಮುಂಡಿ ಎಂದರ್ಥ. ಮಗುವಿನ ಒಳಿತಿಗಾಗಿ ಆ ಹೆಸರು ಇಡಲಾಗಿದೆ. ಮಗು ಆದ್ಯವೀರ್ ಚೆನ್ನಾಗಿದ್ದಾನೆ. ಇಂದು ಬೆಂಗಳೂರಿನಿಂದ ಮೈಸೂರಿಗೆ ಕರೆತಂದಿದ್ದೇವೆ. ಮುಂದಿನ ಕಾರ್ಯಕ್ರಮಗಳೆಲ್ಲ ಅಮ್ಮನ ಸೂಚನೆಯಂತೆ ನಡೆಯಲಿದೆ ಎಂದು ಯದುವೀರ್ ತಿಳಿಸಿದ್ದಾರೆ.

    ಯದುವೀರ್ ದಂಪತಿ ಶೀಘ್ರದಲ್ಲೇ ಪುತ್ರನ ಜೊತೆ ದೇವಾಲಯಗಳಿಗೆ ಪ್ರವಾಸ ಮಾಡಲಿದ್ದಾರೆ.