Tag: ಸ್ವಾತಂತ್ರ್ಯ

  • 2 ವರ್ಷ ಕಾಲ ಹುಡುಕಾಟ – ಇತಿಹಾಸದಿಂದ ಮರೆಮಾಚಲಾಗಿದ್ದ ಸೆಂಗೋಲ್ ಬೆಳಕಿಗೆ ಬಂದಿದ್ದು ಹೇಗೆ?

    2 ವರ್ಷ ಕಾಲ ಹುಡುಕಾಟ – ಇತಿಹಾಸದಿಂದ ಮರೆಮಾಚಲಾಗಿದ್ದ ಸೆಂಗೋಲ್ ಬೆಳಕಿಗೆ ಬಂದಿದ್ದು ಹೇಗೆ?

    – ಮ್ಯೂಸಿಯಂನಲ್ಲಿ ಪ್ರದರ್ಶನಕ್ಕಿದ್ದುದು ನೆಹರು ಅವರ ವಾಕಿಗ್ ಸ್ಟಿಕ್ ಹೆಸರಲ್ಲಿ

    ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನೆ ವಿವಾದದೊಂದಿಗೆ ಇದೀಗ ಪ್ರತಿಪಕ್ಷಗಳು ‘ಸೆಂಗೋಲ್’ (Sengol) ವಿವಾದವನ್ನೂ ಎಳೆದುತಂದಿದೆ. 7 ದಶಕಗಳ ಕಾಲ ಈ ಚಿನ್ನದ ಸೆಂಗೋಲ್ ಅನ್ನು ಅಲಹಾಬಾದ್‌ನ ವಸ್ತುಸಂಗ್ರಹಾಲಯದಲ್ಲಿ (Allahabad Museum) ಇಡಲಾಗಿದ್ದು, ಇದೀಗ ಸಂಸತ್ ಭವನ (New Parliament Building) ಉದ್ಘಾಟನೆ ವೇಳೆ ಸ್ಪೀಕರ್ ಆಸನದ ಬಳಿ ಇರಿಸಲಾಗುತ್ತಿದೆ.

    ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ (Jawaharlal Nehru) ಅವರಿಗೆ ಬ್ರಿಟಿಷರಿಂದ ಅಧಿಕಾರ ಹಸ್ತಾಂತರ ಮಾಡುವ ಸಂಕೇತವಾಗಿ ಸೆಂಗೋಲ್ ಅನ್ನು ನೀಡಲಾಗಿತ್ತು ಎಂಬ ಮಾತು ಕೇಳಿಬಂದರೂ ಇದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. ಆದರೆ ಇವೆಲ್ಲದಕ್ಕೂ ಬಿಜೆಪಿ ನಾಯಕರು ಉತ್ತರ ನೀಡಿದ್ದಾರೆ. ಇದನ್ನು ಹುಡುಕಲು 2 ವರ್ಷವೇ ಬೇಕಾಯಿತು ಎಂಬ ಸಂಗತಿ ಅತ್ಯಂತ ಕುತೂಹಲ ಮೂಡಿಸಿದೆ.

    ಸೆಂಗೋಲ್ ಬೆಳಕಿಗೆ ಬಂದಿದ್ದು ಯಾವಾಗ?
    2021ರಲ್ಲಿ ಅಂಕಣಕಾರ ಎಸ್ ಗುರುಮೂರ್ತಿ ಅವರು ‘ತುಘಲಕ್’ ಪತ್ರಿಕೆಯಲ್ಲಿ ಬರೆದ ಲೇಖನವೊಂದರಿಂದ ಸೆಂಗೋಲ್ ಹುಡುಕಾಟ ಆರಂಭವಾಯಿತು. ಬಳಿಕ ಸತತ 2 ವರ್ಷಗಳ ಕಾಲ ಕೇಂದ್ರ ಸರ್ಕಾರ ಸೆಂಗೋಲ್ ಹುಡುಕಾಟ ನಡೆಸಿತು. 1947ರ ಆಗಸ್ಟ್ 14ರ ರಾತ್ರಿ ದೇಶಕ್ಕೆ ಬ್ರಿಟಿಷರಿಂದ ಸ್ವಾತಂತ್ರ‍್ಯ ಸಿಕ್ಕಿದಾಗ ಅಧಿಕಾರ ಹಸ್ತಾಂತರದ ಸಂಕೇತವಾಗಿ ಸೆಂಗೋಲ್ ಅನ್ನು ಹಸ್ತಾಂತರಿಸುವ ಸಮಾರಂಭ ನಡೆದಿತ್ತು ಎಂಬುದನ್ನು ಸರ್ಕಾರ ಖಚಿತಪಡಿಸಿಕೊಂಡಿತು. ಇದೀಗ 77 ವರ್ಷ ಹಳೆಯ ಸೆಂಗೋಲ್ ಅನ್ನು ಸಂಸತ್ ಭವನದಲ್ಲಿ ಪ್ರತಿಷ್ಠಾಪನೆ ಮಾಡಲು ಸರ್ಕಾರ ನಿರ್ಧಾರಿಸಿದೆ.

    ಗುರುಮೂರ್ತಿ ಬರೆದ ಲೇಖನದಲ್ಲೇನಿತ್ತು?
    ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ತಮಿಳುನಾಡಿನ ಸ್ವಾಮೀಜಿಯೊಬ್ಬರು ದೇಶದ ಸ್ವಾತಂತ್ರ‍್ಯ ಹಾಗೂ ಅಧಿಕಾರದ ಹಸ್ತಾಂತರದ ಸಂಕೇತವಾಗಿ ಸೆಂಗೋಲ್ ಅನ್ನು ಹಸ್ತಾಂತರ ಮಾಡಿದ್ದರು ಎಂದು ಗುರುಮೂರ್ತಿ ಲೇಖನ ಬರೆದಿದ್ದರು. ಈ ಲೇಖನ ಪ್ರಕಟವಾದ ಕೆಲ ದಿನಗಳ ಬಳಿಕ ಖ್ಯಾತ ನೃತ್ಯಗಾರ್ತಿ ಡಾ.ಪದ್ಮಾ ಸುಬ್ರಮಣ್ಯಂ ಅವರು ಅದರ ಇಂಗ್ಲಿಷ್ ಪ್ರತಿಯನ್ನು ಪ್ರಧಾನಿ ಕಾರ್ಯಾಲಯಕ್ಕೆ ಕಳುಹಿಸಿದ್ದರು. ಅದರೊಂದಿಗೆ ಪತ್ರವನ್ನೂ ಕಳುಹಿಸಿ, ಈ ಪವಿತ್ರ ಹಾಗೂ ಐತಿಹಾಸಿಕ ಸಂಗೋಲ್ ಹಸ್ತಾಂತರ ಸಮಾರಂಭದ ಇತಿಹಾಸವನ್ನು ಜನರಿಂದ ಮರೆಮಾಚಲಾಗಿದೆ. ಈ ವಿಚಾರವನ್ನು ಮೋದಿ ಸರ್ಕಾರ 2021ರ ಸ್ವಾತಂತ್ರ್ಯೋತ್ಸವದಂದು ಬಹಿರಂಗಪಡಿಸಬೇಕು ಎಂದು ಕೋರಿಕೊಂಡಿದ್ದರು.

    2 ವರ್ಷ ಸೆಂಗೋಲ್‌ಗಾಗಿ ಹುಡುಕಾಟ:
    ಪದ್ಮಾ ಸುಬ್ರಮಣ್ಯಂ ಅವರ ಪತ್ರವನ್ನು ಗಮನಿಸಿದ ಪ್ರಧಾನಿ ಕಾರ್ಯಾಲಯ ಹಾಗೂ ಸಂಸ್ಕೃತಿ ಸಚಿವಾಲಯ ಹಳೆಯ ದಾಖಲೆಗಳ ಹುಡುಕಾಟ ನಡೆಸಿತು. ಸೆಂಗೋಲ್‌ನ ಅಸ್ಥಿತ್ವ ನಿಜವೇ ಅಥವಾ ಹುಸಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಹಲವಾರು ಹಳೆಯ ಪತ್ರಿಕಾ ಲೇಖನ, ಪುಸ್ತಕಗಳು ಹಾಗೂ ಆನ್‌ಲೈನ್‌ನಲ್ಲಿ ಲಭ್ಯವಿರುವ ಮಾಹಿತಿಗಳನ್ನು ಸಂಗ್ರಹಿಸಿದರು. ಇದನ್ನೂ ಓದಿ: ಹೊಸ ಸಂಸತ್‌ನಲ್ಲಿ `ಸೆಂಗೋಲ್’ ಸಮರ – ಅಧಿಕಾರ ಹಸ್ತಾಂತರದ ರಾಜದಂಡಕ್ಕೆ ಸಾಕ್ಷ್ಯವೇ ಇಲ್ಲ ಅಂತಿದೆ ಕಾಂಗ್ರೆಸ್

    ಕೊನೆಗೆ ನೆಹರು ಅವರಿಗೆ ತಮ್ಮ ನಿವಾಸದಲ್ಲಿಯೇ ಸೆಂಗೋಲ್ ಅನ್ನು ಹಸ್ತಾಂತರ ಮಾಡಲಾಗಿತ್ತು ಎಂಬುದು ತಿಳಿದುಬಂತು. ಇದನ್ನು ಖಚಿತಪಡಿಸಿಕೊಳ್ಳಲು ಸಮಾರಂಭದ ಫೋಟೋಗಾಗಿ ಹುಡುಕಾಟ ನಡೆಸಲಾಯಿತು. ನೆಹರು ಅವರ ಖಾಸಗಿ ದಾಖಲೆಗಳನ್ನೂ ಪರಿಶೀಲಿಸಲು ಮನವಿ ಮಾಡಲಾಯಿತು. ಈ ವೇಳೆ 1947ರ ಆಗಸ್ಟ್ 25 ರಂದು ‘ಟೈಮ್’ ನಿಯತಕಾಲಿಕೆಯಲ್ಲಿ ಸೆಂಗೋಲ್ ಸಮಾರಂಭದ ಕುರಿತು ವಿವರವಾಗಿ ಬರೆಯಲಾಗಿದ್ದ ವರದಿ ಲಭಿಸಿತು.

    ನೆಹರು ವಾಕಿಂಗ್ ಸ್ಟಿಕ್ ಹೆಸರಲ್ಲಿ ಪ್ರದರ್ಶನ:
    ಸೆಂಗೋಲ್ ಸಿಕ್ಕಿದ್ದು ನಿಜ ಆದರೆ ಅದು ಎಲ್ಲಿದೆ ಎನ್ನುವುದು ಪತ್ತೆಯಾಗಲಿಲ್ಲ. ಸರ್ಕಾರ ಹಲವು ಮ್ಯೂಸಿಯಂಗಳಲ್ಲಿ ಸೆಂಗೋಲ್ ಹುಡುಕಾಟ ಆರಂಭಿಸಿತು. ಕೊನೆಗೆ ಈ ಸೆಂಗೋಲ್ 70 ವರ್ಷಗಳಿಂದ ಅಲಹಾಬಾದ್‌ನ ಮ್ಯೂಸಿಯಂನಲ್ಲಿ ಇರುವುದು ತಿಳಿದುಬಂತು. ಆದರೆ ಅದಕ್ಕೆ ನೆಹರು ಅವರು ಬಳಸುತ್ತಿದ್ದ ಚಿನ್ನದ ವಾಕಿಂಗ್ ಸ್ಟಿಕ್ ಎಂಬ ಅಡಿಬರಹದೊಂದಿಗೆ ಪ್ರದರ್ಶನಕ್ಕೆ ಇಡಲಾಗಿತ್ತು.

    ಇದೀಗ ಮರೆಮಾಚಲಾಗಿದ್ದ ಇತಿಹಾಸವನ್ನು ಬಯಲಿಗೆ ತಂದು ಸರ್ಕಾರ ಸೆಂಗೋಲ್ ಅನ್ನು ಮ್ಯೂಸಿಯಂನಿಂದ ತರಿಸಿ ಹೊಸದಾಗಿ ನಿರ್ಮಾಣವಾಗಿರುವ ಸಂಸತ್ ಭವನದಲ್ಲಿ ಪ್ರತಿಷ್ಟಾಪಿಸಲು ನಿರ್ಧರಿಸಿದೆ. ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: ಹೊಸ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ವಿಶೇಷ ನಾಣ್ಯ ಬಿಡುಗಡೆ

  • ಕ್ರಿಕೆಟ್ ಮಧ್ಯೆ ಧ್ವಜಾರೋಹಣ- ಸಂಭ್ರಮದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು

    ಕ್ರಿಕೆಟ್ ಮಧ್ಯೆ ಧ್ವಜಾರೋಹಣ- ಸಂಭ್ರಮದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು

    ಬೆಂಗಳೂರು: ಮುಂಜಾನೆ ಆಟದ ಮೈದಾನದಲ್ಲಿ ಕ್ರಿಕೆಟ್ ತರಬೇತಿ ಪಡೆಯುತ್ತಾ ಆಟವಾಡುತ್ತಿದ್ದ ಮಕ್ಕಳು ಭಾರತ ಸ್ವಾತಂತ್ರ್ಯ ಅಮೃತಮಹೋತ್ಸದ ಸಂಭ್ರಮಕ್ಕೆ ಸಾಕ್ಷಿಯಾದರು.

    ಬೆಂಗಳೂರಿನ ಬಸವೇಶ್ವರನಗರದ ಕಪಿಲ್ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ನಡೆಯುತ್ತಿರುವ ತರಬೇತಿ ಶಿಬಿರದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಕ್ಕಳಲ್ಲಿ ದೇಶಪ್ರೇಮ ಮೂಡಿಸುವ ಪ್ರಯತ್ನ ನಡೆಯಿತು.

    ಎಂದಿನಂತೆ ಮುಂಜಾನೆಯಿಂದಲೇ ಕ್ರಿಕೆಟ್ ಕೌಶಲ್ಯ ತರಬೇತಿ ನಡೆಯುತ್ತಿತ್ತು. ದೈಹಿಕ ಸಾಮರ್ಥ್ಯ ಹೆಚ್ಚಿಸುವ ವಿಶೇಷ ತರಬೇತಿ ನೀಡಲಾಗುತ್ತಿತ್ತು. ಎಲ್ಲ ಕಡೆ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

    ನಿನ್ನೆಯಿಂದ ಮೂರು ದಿನಗಳ ಕಾಲ ʼಹರ್ ಘರ್ ತಿರಂಗʼ ಅಭಿಯಾನ ನಡೆಯುತ್ತಿದೆ.  ಹೀಗಾಗಿ ಕ್ರಿಕೆಟ್ ತರಬೇತಿಗೆ ಅಲ್ಪವಿರಾಮ ನೀಡಿ, ಹಿರಿಯರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಕ್ಕಳಲ್ಲಿ ಸ್ಫೂರ್ತಿ ತುಂಬುವ ಪ್ರಯತ್ನ ನಡೆಯಿತು.

    ಕ್ರಿಕೆಟ್ ಕೊಚಿಂಗ್ ಗೆ ಬರೋ 200 ಕ್ಕೂ ಹೆಚ್ಚು ಮಕ್ಕಳು ಮತ್ತು ಪೋಷಕರು ಈ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆದ ಧ್ಜಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಇದನ್ನೂ ಓದಿ: ಧ್ವಜಾರೋಹಣಕ್ಕೆ ಈದ್ಗಾ ಮೈದಾನದಲ್ಲಿ ಸಿದ್ಧತೆ- ಅಹಿತಕರ ಘಟನೆ ನಡೆಯದಂತೆ ಖಾಕಿ ಭದ್ರತೆ

    ಹಿರಿಯ ನಾಗರಿಕರಾದ ಬಾಲಸುಬ್ರಹ್ಮಣ್ಯಂ ಮತ್ತು ಕ್ರಿಕೆಟ್ ಕೋಚಿಂಗ್ ಗೆ ಬರೋ ಪುಟಾಣಿ ಬಾಲಕ ತಿರಂಗ ಧ್ವಜಾರೋಹಣ ಮಾಡಿದ್ರು. ಮಕ್ಕಳಿಗೆ ತರಬೇತಿ ಮಧ್ಯೆ ರಾಷ್ಟ್ರಪ್ರೇಮ ಮೂಡಿಸುವ ಸಲುವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ಉತ್ಸಾಹದಲ್ಲಿ ಪಾಲ್ಗೊಂಡರು.

    ಕಪಿಲ್ ಕ್ರಿಕೆಟ್ ಕ್ಲಬ್ ನ ನರಸಿಂಹಮೂರ್ತಿ, ಮಹೇಶ್, ವಿಲಿಯಮ್ಸ್, ಮುಕುಂದ್, ನಾರಾಯಣ್ , ಸಾಗರ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ನನ್ನನ್ನು ಕಂಡ್ರೆ ಬಿಜೆಪಿಯವರಿಗೆ ಭಯವೋ ಭಯ: ಸಿದ್ದರಾಮಯ್ಯ

    ನನ್ನನ್ನು ಕಂಡ್ರೆ ಬಿಜೆಪಿಯವರಿಗೆ ಭಯವೋ ಭಯ: ಸಿದ್ದರಾಮಯ್ಯ

    ಚಿಕ್ಕಬಳ್ಳಾಪುರ: ನನ್ನನ್ನು ಕಂಡರೆ ಬಿಜೆಪಿಯವರಿಗೆ ಭಯವೋ ಭಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಸ್ಯವಾಡಿದ್ದಾರೆ.

    75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಕ್ಕೆ ಆಗಮಿಸಿ, ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರು ಸ್ವಾತಂತ್ರ‍್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಬಿಜೆಪಿಯವರು ಸ್ವಾತಂತ್ರ‍್ಯದ ಫಲಾನುಭವಿಗಳು ಅಷ್ಟೇ. ಬಿಜೆಪಿಯವರು ತಿರಂಗ ಧ್ವಜವನ್ನೇ ವಿರೋಧಿಸಿದ್ದರು. ಅದರೆ ಈಗ ಹರ್ ಘರ್ ತಿರಂಗ ಅಂತ ನಾಟಕವಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದರು.

    ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಸ್ವಾತಂತ್ರ‍್ಯ ಪಡೆಯಲು ಆನೇಕ ನಾಯಕರು ಪ್ರಾಣ ಬಲಿದಾನ ಮಾಡಿದ್ದರು. ನಾವೆಲ್ಲಾ ಸ್ವಾತಂತ್ರ‍್ಯ ಬಂದ ಮೇಲೆ ಹುಟ್ಟಿರುವವರು. ಸ್ವಾತಂತ್ರ‍್ಯ ಬರಲು ಕಾಂಗ್ರೆಸ್ ಕಾರಣವೇ ಹೊರತು ಬಿಜೆಪಿ ಜೆಡಿಎಸ್ ಕಾರಣ ಅಲ್ಲ. ಕಾಂಗ್ರೆಸ್ ಹೋರಾಟ ಮಾಡಬೇಕಾದರೆ ಬಿಜೆಪಿ, ಆರ್‌ಎಸ್‌ಎಸ್‌ನವರು ಬ್ರಿಟಿಷರ ಜೊತೆ ಶಾಮೀಲಾಗಿದ್ದರು. ಸ್ವಾತಂತ್ರ‍್ಯ ಹೋರಾಟಗಾರರು ಜೈಲಿಗೆ ಹೋಗಲು ಅವರೇ ಬ್ರಿಟಿಷರಿಗೆ ಸಹಾಯ ಮಾಡಿದ್ದರು. ಈ ದೇಶದ ರಾಷ್ಟ್ರಗೀತೆ, ರಾಷ್ಟ್ರ ಬಾವುಟ, ಸಂವಿಧಾನ ಮಾಡಿದ್ದು ಕಾಂಗ್ರೆಸ್. ಬಿಜೆಪಿ, ಜೆಡಿಎಸ್‌ನವರು ಅಲ್ಲ ಎಂದರು. ಇದನ್ನೂ ಓದಿ: ಮಹದಾಯಿ ವಿಷಯದಲ್ಲಿ ಮತ್ತೆ ಗೋವಾ ಕ್ಯಾತೆ – ಕರ್ನಾಟಕದ ವಿರುದ್ಧ ತುರ್ತು ತನಿಖೆಗೆ ಶಾಸಕ ಮನವಿ

    ಕಾಂಗ್ರೆಸ್‌ನವರು ಸ್ವಾತಂತ್ರ‍್ಯ ತಂದುಕೊಟ್ಟಿದ್ದೀವಿ. ಉಳಿಸಿಕೋಳ್ಳಬೇಕಾ, ಬೇಡವಾ? ಸಂವಿಧಾನ ಉಳಿಯಬೇಕಾ ಬೇಡವಾ? ಉಳಿಯಬೇಕಾದರೆ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಈಗ ಹರ್ ಘರ್ ತಿರಂಗ ಎಂದು ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ. ರಾಷ್ಟ್ರಧ್ವಜ ಮಾಡುವಾಗ ವಿರೋಧ ಮಾಡಿದ ಬಿಜೆಪಿಯವರು ಈಗ ಏಕೆ ನಾಟಕವಾಡುತ್ತಿದ್ದಾರೆ? ಬಿಜೆಪಿಯವರಿಗೆ ಮಾನ ಮರ್ಯಾದೆ ಇದೆಯಾ? ನಾಚಿಕೆ ಅಗಲ್ವಾ? ಎಂದು ಕಿಡಿ ಕಾರಿದರು.

    ಪಾದಯಾತ್ರೆ ಮಾಡುವ ಮೂಲಕ ಸ್ವಾತಂತ್ರ‍್ಯದ ಹೋರಾಟದಲ್ಲಿ ಜೀವ ಕಳೆದುಕೊಂಡ ನಾಯಕರ ಸ್ಮರಣೆ ಮಾಡಿಕೊಳ್ಳುತ್ತೇವೆ. ಆರ್‌ಎಸ್‌ಎಸ್‌ನ ಯಾರಾದರೂ ಒಬ್ಬ ಸ್ವಾತಂತ್ರ‍್ಯ ಹೋರಾಟದಲ್ಲಿ ಸತ್ತಿದ್ದಾರಾ? ಸ್ವಾತಂತ್ರ‍್ಯಕ್ಕಾಗಿ ಪ್ರಾಣ ಕಳೆದುಕೊಂಡವರು ಕಾಂಗ್ರೆಸ್‌ನವರು. ಬಿಜೆಪಿಯವರು ಡೋಂಗಿಗಳು. ಬರೀ ಸುಳ್ಳು ಹೇಳಿ ನಾಟಕ ಮಾಡುವವರು. ಯಡಿಯೂರಪ್ಪ, ಬೊಮ್ಮಾಯಿ ಏನಾದರೂ ಮಾಡಿದ್ದಾರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪ್ರತಿ ಮಗುವಿಗೆ ಶಿಕ್ಷಣ, ಯುವಕರಿಗೆ ಉದ್ಯೋಗ ಕೊಡದೇ ಬಲಿಷ್ಠ ಭಾರತದ ನಿರ್ಮಾಣವಾಗದು: ಕೇಜ್ರಿವಾಲ್

    Live Tv
    [brid partner=56869869 player=32851 video=960834 autoplay=true]

  • ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ: ಬೊಮ್ಮಾಯಿ

    ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ: ಬೊಮ್ಮಾಯಿ

    ಬೆಂಗಳೂರು: ಕನ್ನಡಿಗರು ಪ್ರಗತಿಪರ ಚಿಂತಕರು. ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ದೇಶಕ್ಕೆ ಕನ್ನಡಿಗರ ಕೊಡುಗೆ ಬಹಳಷ್ಟಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಬೊಮ್ಮಾಯಿ ಅವರು ಇಂದು ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ’ವನ್ನು ಉದ್ಘಾಟಿಸಿ ಮಾತನಾಡಿದರು.

    ಕನ್ನಡ ಪರಂಪರೆಯ ಮೂಲಕ ಭಾರತ ಪರಂಪರೆಗೆ ನಾಂದಿ ಹಾಡಬೇಕಿದೆ. ನವಕರ್ನಾಟಕದಿಂದ ನವಭಾರತ ನಿರ್ಮಾಣದ ಚಿಂತನೆಯನ್ನು ಸರ್ಕಾರ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯಾದ ಭಾರತದ 5 ಟ್ರಿಲಿಯನ್ ಆರ್ಥಿಕತೆಯಲ್ಲಿ ಕರ್ನಾಟಕದ ಕೊಡುಗೆ ದೊಡ್ಡ ಪ್ರಮಾಣದಲ್ಲಿದೆ. ದೂರದೃಷ್ಟಿಯ ಚಿಂತನೆಯಿಂದ ರಾಜ್ಯ ಸರ್ಕಾರ ಕೆಲಸ ಮಾಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಜನರಿಗೆ ಸಿದ್ದರಾಮಯ್ಯ ಅವಶ್ಯಕತೆ ಇದೆ, ಅವರೇ ಸಿಎಂ ಆಗಬೇಕು: ಬೈರತಿ ಸುರೇಶ್ 

    ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡ ನಾಡಿನ ಅಪೂರ್ವ ಕೊಡುಗೆ
    ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ 75 ವರ್ಷ ಮಹತ್ವದ ಕಾಲಘಟ್ಟ. ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿದವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಮಡಿದವರಿದ್ದಾರೆ. ರಾಜರಿಂದ ಪ್ರಾರಂಭವಾದ ಸ್ವಾತಂತ್ರ್ಯ ಹೋರಾಟ ನಂತರದ ದಿನಗಳಲ್ಲಿ ಸ್ವಾತಂತ್ರ್ಯ ಚಳುವಳಿಯ ರೂಪ ಪಡೆಯಿತು.

    1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ, ಕರ್ನಾಟಕದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವ ಎದೆಗಾರಿಕೆ ಇದೆಯೆಂಬುದನ್ನು ನಿರೂಪಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡ ನಾಡು ಅಪೂರ್ವ ಕೊಡುಗೆ ನೀಡಿದೆ. ಮೈಲಾರ ಮಾಹದೇವಪ್ಪ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಹಲವಾರು ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದರು.

    ತ್ಯಾಗಬಲಿದಾನಗಳ ನಂತರ ದೊರೆತ ಸ್ವತಂತ್ರ ದೇಶದ ಏಕತೆ, ಅಖಂಡತೆ ಕಾಯ್ದುಕೊಂಡು ಪ್ರಬಲ ಹಾಗೂ ಸಶಕ್ತ ರಾಷ್ಟ್ರ ನಿರ್ಮಾಣದ ಚಿಂತನೆ ಎಲ್ಲ ಭಾರತೀಯರಲ್ಲಿ ಇರಬೇಕು ಎಂದು ಕರೆ ಕೊಟ್ಟರು.

    ಎಲ್ಲರಿಗೂ ಸ್ವಾಭಿಮಾನ, ಸಮಾನತೆಯ ಬದುಕು ನೀಡುವ ಸ್ವತಂತ್ರ ಭಾರತ ವಿಶ್ವಮಾನ್ಯ ರಾಷ್ಟ್ರವಾಗಿದೆ. ಸಾವಿರ ವರ್ಷಗಳಿಂದ ಮೊಘಲರು, ಬ್ರಿಟೀಷರ ಆಕ್ರಮಣದಲ್ಲಿ ಸ್ವಾಭಿಮಾನವನ್ನು ಅದುಮಿಟ್ಟು ಬದುಕುವ ಪರಿಸ್ಥಿತಿಯಿಂದ ಸ್ವಾತಂತ್ರ್ಯ ದೊರಕಿದೆ. ದೇಶದ ಜನರೆಲ್ಲರೂ ಒಗ್ಗಟ್ಟಾಗಬೇಕು. ಮೋದಿ ಅವರು ಬಲಿಷ್ಟ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದರು.

    ಜನರ ಏಳಿಗೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು 25 ವರ್ಷಗಳ ಅಮೃತ ಕಾಲ ಮಾಡಬೇಕೆಂದು ಕರೆ ನೀಡಿದರು. ಒಬ್ಬ ಮುತ್ಸದ್ದಿಯ ಕಣ್ಣು ಮುಂದಿನ ಜನಾಂಗದ ಮೇಲಿರುತ್ತದೆ. ನಾವು ಹುಟ್ಟಿದ ಜನ್ಮಭೂಮಿ ಶ್ರೇಷ್ಠ ಭಾರತವಾಗಬೇಕೆಂಬ ಗುರಿಯನ್ನು ಹೊಂದಿರುವ ನಾಯಕ ಮೋದಿ ಅವರು ಎಂದು ಪ್ರಶಂಸಿದರು.

    ವೀರ್ ಸಾವರ್ಕರ್ ದಿಟ್ಟ, ಧೀಮಂತ ನಾಯಕ
    ಮೊದಲನೇ ಸ್ವಾತಂತ್ರ್ಯ ಹೋರಾಟವನ್ನು ಲೋಕಮಾನ್ಯ ತಿಲಕ, ವೀರಸಾವರ್ಕರ್ ಅವರಿಂದ ಪ್ರಾರಂಭವಾಯಿತು. ವೀರ್ ಸಾವರ್ಕರ್ 1883ರ ಜೂನ್ 28 ರಲ್ಲಿ ಜನಿಸಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿನ ಕಾರಾಗೃಹದಲ್ಲಿ ಕಾಲಾಪಾನಿ ಶಿಕ್ಷೆಯನ್ನು ಅನುಭವಿಸಿದ್ದರು.

    ದೇಶಕ್ಕಾಗಿ ತ್ಯಾಗ ಮಾಡಲು ಸಿದ್ಧರಾಗಿದ್ದ ವೀರ್ ಸಾವರ್ಕರ್ ಅವರು ದಿಟ್ಟ, ಧೀಮಂತ ನಾಯಕರಾಗಿದ್ದರು. ಸ್ವಾತಂತ್ರ್ಯ ನನ್ನ ಜನ್ಮಸಿದ್ಧ ಹಕ್ಕು ಎಂದ ಲೋಕಮಾನ್ಯ ತಿಲಕರ ಚಿಂತನೆ, ಯೋಚನಾಶಕ್ತಿ ವಿಶಿಷ್ಟವಾದುದಾಗಿತ್ತು. ಸ್ವಾತಂತ್ರ್ಯ ಹೊರತುಪಡಿಸಿ, ಮಿಕ್ಕೆಲ್ಲವೂ ನಗಣ್ಯ ಎಂದ ಈ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ನನ್ನ ಪ್ರಥಮ ನಮಸ್ಕಾರಗಳು ಎಂದು ನಮಿಸಿದರು. ಇದನ್ನೂ ಓದಿ:  ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಚುನಾವಣೆ ಸಮಿತಿ ಇದೆಯೇ? – ಡಿಕೆಶಿಗೆ ಪತ್ರ ಬರೆದ ಸ್ಥಾನ ವಂಚಿತರು 

    ಮಹನೀಯರ ಚಿಂತನೆ, ತ್ಯಾಗದ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ
    ಲಾಹೋರ್‌ನಲ್ಲಿ ಲಾಲ್ ಲಜಪತ್ ರಾಯ್ ನೇತೃತ್ವದಲ್ಲಿ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕೆ ವೇಗ ದೊರಕಿತು. ಇದೇ ಹಾದಿಯಲ್ಲಿ ಭಗತ್ ಸಿಂಗ್, ಚಂದ್ರಶೇಖರ್ ಅಜಾದ್ ನಡೆದರು. ಈ ಹೋರಾಟಕ್ಕೆ ಅಂತರರಾಷ್ಟ್ರೀಯ ಸ್ವರೂಪವನ್ನು ಸುಭಾಷ್ ಚಂದ್ರ ಬೋಸರು ನೀಡಿದರು. ಈ ಎಲ್ಲ ಹೋರಾಟಕ್ಕೆ ಆಧ್ಯಾತ್ಮಿಕ ಶಕ್ತಿಯನ್ನು ಸ್ವಾಮಿ ವಿವೇಕಾನಂದರು ತುಂಬಿದರು ಎಂದು ಸ್ಪೂರ್ತಿ ತುಂಬಿ ಮಾತನಾಡಿದರು.

    ಹಲವಾರು ಮಹನೀಯರ ಚಿಂತನೆ, ಹೋರಾಟ ತ್ಯಾಗದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಮಹಾತ್ಮಾ ಗಾಂಧಿ ಅವರಿಂದ ಸ್ಪೂರ್ತಿ ಹೊಂದಿ ಸಹಸ್ರಾರು ದೇಶಭಕ್ತರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ತಮ್ಮ ಸರ್ವಸ್ವವನ್ನು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ. ಇಂತಹ ಅನೇಕ ಮಹನೀಯರು ದೇಶಕ್ಕಾಗಿ ತ್ಯಾಗ ಮಾಡಿದವರಿಗೆ ನನ್ನ ನಮಸ್ಕಾರಗಳು ಎಂದರು.

    ಬ್ರಿಟಿಷರು ವಿರುದ್ಧ ದುಡಿಯುವ ವರ್ಗದ ಹೋರಾಟ
    ಮಹಾತ್ಮಾಗಾಂಧಿ ಅವರ ಸ್ವದೇಶಿ ಚಳುವಳಿಯಲ್ಲಿ ಮಹಿಳೆಯರೂ ಪಾಲ್ಗೊಂಡರು. ಕ್ವಿಟ್ ಇಂಡಿಯಾ ಚಳುವಳಿ, ಬಾರ್ಡೋಲಿಯಲ್ಲಿ ರೈತರ ಸತ್ಯಾಗ್ರಹ, ಪಶ್ಚಿಮ ಬಂಗಾಳದಲ್ಲಿ ಇಂಡಿಗೋ ಚಳವಳಿಗಳ ಮೂಲಕ ದುಡಿಯುವ ವರ್ಗ ಬ್ರಿಟಿಷರು ವಿರುದ್ಧ ನಡೆಸಿದ ಹೋರಾಟವನ್ನು ಸಿಎಂ ಸ್ಮರಿಸಿದರು.

  • ಜೈಲಿಗೆ ಹೋಗಿಬಂದವ್ರಿಂದ ನೀತಿ ಪಾಠ ಕೇಳುವ ದರ್ದು ಬಿಜೆಪಿಗಿಲ್ಲ: ಕಾರಜೋಳ

    ಜೈಲಿಗೆ ಹೋಗಿಬಂದವ್ರಿಂದ ನೀತಿ ಪಾಠ ಕೇಳುವ ದರ್ದು ಬಿಜೆಪಿಗಿಲ್ಲ: ಕಾರಜೋಳ

    ಬಾಗಲಕೋಟೆ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಯ್ತು. ಬಹುತೇಕ 60 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದವರು ಆಡಳಿತ ಮಾಡಿದರು. ಕಾಂಗ್ರೆಸ್ ನಾಯಕರು ಜೈಲಿಗೆ ಹೋಗಿ ಬಂದಿದ್ದು, ಬೇಲ್‍ನಲ್ಲಿದ್ದಾರೆ. ಅಂತವರಿಂದ ನೀತಿ ಪಾಠವನ್ನು ಹೇಳಿಸಿಕೊಳ್ಳುವ ಪರಿಸ್ಥಿತಿ ಬಿಜೆಪಿ ಪಕ್ಷಕ್ಕಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ಪಕ್ಷವನ್ನು ತೀಕ್ಷ್ಮವಾಗಿ ಝರಿದರು.

    ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ರಾಜ್ಯ ಮತ್ತು ದೇಶದಲ್ಲಿ ಪಾರದರ್ಶಕವಾದ, ನಿಕ್ಷಪಕ್ಷವಾದ ಆಡಳಿತವನ್ನು ಮಾಡುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ಇಷ್ಟು ವರ್ಷದಲ್ಲಿ 60 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ಅಧಿಕಾರ ನಡೆಸಿತು. ಈ ವೇಳೆ ಅನೇಕ ಆರೋಪಗಳು ಬಂದವು. ಆಗ ಕಾಂಗ್ರೆಸ್ ಪಕ್ಷದವರು ನಿಕ್ಷಪಕ್ಷವಾಗಿ, ಪಾರದರ್ಶಕವಾದ ತನಿಖೆ ಮಾಡಿಸಿದ್ದರೇ ಜನರ ಮುಂದೆ ಇಡಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಮಲೆನಾಡಿಗರನ್ನು ಬಿಟ್ಟು ಬಿಡದೇ ಕಾಡುತ್ತಿರುವ ‘ಮಂಗನ ಕಾಯಿಲೆ’

    ಈಗ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣ ಬೆಳಕಿಗೆ ಬಂದ ತಕ್ಷಣ ನಮ್ಮ ಬಿಜೆಪಿ ಸರ್ಕಾರ ನಿಕ್ಷಪಕ್ಷವಾದ ತನಿಖೆಗೆ ಸೂಚಿಸಿತು. ಪೆÇಲೀಸ್ ಕಾನ್ಸಟೇಬಲ್‍ನಿಂದ ಹಿಡಿದು ಡಿಎಸ್‍ಪಿವರೆಗೂ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವ ಕ್ರಮಕೈಗೊಳ್ಳಲಾಗಿದೆ. ಸರ್ಕಾರ ಯಾವುದೇ ಜಾತಿ, ಧರ್ಮ, ಪಕ್ಷ ನೋಡದೇ ಕಠಿಣ ನಿರ್ಣಯವನ್ನು ತೆಗೆದುಕೊಂಡಿದೆ.

    ಇಂತಹ ಕಠಿಣ ಕ್ರಮನ್ನು ತೆಗೆದುಕೊಂಡಿದ್ದರೆ ಕಾಂಗ್ರೆಸ್ ಪಕ್ಷ ಹೇಳಲಿ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಪಾರದರ್ಶನಕವಾಗಿ ಆಡಳಿತ ಮಾಡುತ್ತಿದೆ. ಆದರೆ ಭಂಡತನದಿಂದ ಕಾಂಗ್ರೆಸ್ ಪಕ್ಷದವರು ಸುಳ್ಳು ಆರೋಪಗನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೇಂದ್ರವು ಧ್ವನಿವರ್ಧಕಗಳ ಬಗ್ಗೆ ನೀತಿಯನ್ನು ತರಬೇಕು: ಮಹಾರಾಷ್ಟ್ರ ಗೃಹ ಸಚಿವ

  • ಸ್ವಾತಂತ್ರ ಪಡೆದ 75 ವರ್ಷಗಳ ನಂತ್ರ ಈ ಹಳ್ಳಿಗೆ ಸಿಕ್ತು ಕತ್ತಲೆಯಿಂದ ಮುಕ್ತಿ

    ಸ್ವಾತಂತ್ರ ಪಡೆದ 75 ವರ್ಷಗಳ ನಂತ್ರ ಈ ಹಳ್ಳಿಗೆ ಸಿಕ್ತು ಕತ್ತಲೆಯಿಂದ ಮುಕ್ತಿ

    ಶ್ರೀನಗರ: ಸ್ವಾತಂತ್ರ್ಯದ 75 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದ ಉಧಮ್‍ಪುರದ ಗ್ರಾಮ ಸದ್ದಲ್‍ಗೆ ಕೇಂದ್ರ ಸರ್ಕಾರದ ‘ಅನ್ಟೈಡ್ ಗ್ರ್ಯಾಂಟ್ಸ್ ಸ್ಕೀಮ್’ ಅಡಿಯಲ್ಲಿ ಬುಧವಾರ ಮೊದಲ ಬಾರಿಗೆ ವಿದ್ಯುತ್ ಪಡೆಯುವ ಮೂಲಕ ಕತ್ತಲೆಯಿಂದ ಮುಕ್ತಿ ದೊರೆತಿದೆ.

    ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವುದರಿಂದ ಈ ಗ್ರಾಮದ ನಿವಾಸಿಗಳು ತಮ್ಮ ಮಕ್ಕಳ ವಿದ್ಯಾಭ್ಯಾಸದ ಭವಿಷ್ಯಕ್ಕಾಗಿ ಆಶಾಭಾವನೆ ಮೂಡಿಸಿದ್ದಾರೆ. ಮೊದಲು, ಹಳ್ಳಿಯಲ್ಲಿ ಸಂಜೆಯ ಸಮಯದಲ್ಲಿ ಬೆಳಕಿನ ಏಕೈಕ ಮೂಲವೆಂದರೆ ಮೇಣದಬತ್ತಿಗಳು ಮತ್ತು ಎಣ್ಣೆ ದೀಪಗಳು, ಅದು ಕ್ರಮೇಣ ಅವರ ದೈನಂದಿನ ಜೀವನದ ಭಾಗವಾಯಿತು. ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: ವಿಗ್ರಹ ಮಾಡೋದು ಹರಾಮ್, ಆದ್ರೇ ಜೀವನೋಪಾಯಕ್ಕೆ ಅದು ಅನಿವಾರ್ಯ: ಉಮರ್ ಷರೀಫ್

    ಈ ಕಾರ್ಯಾಚರಣೆಯ ಯಶಸ್ಸಿಗಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಜಾರಿಗೆ ಬಂದ ಪಂಚಾಯತ್ ರಾಜ್ ಕಾಯ್ದೆಯ ಮೂರು ಹಂತದ ವ್ಯವಸ್ಥೆಗೆ ಗ್ರಾಮಸ್ಥರು ಮನ್ನಣೆ ನೀಡಿದ್ದಾರೆ. ತಮ್ಮ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ, ಉಧಮ್‍ಪುರ ಆಡಳಿತ ಮತ್ತು ವಿದ್ಯುತ್ ಇಲಾಖೆಗೆ ಮಕ್ಕಳು ಕೃತಜ್ಞರಾಗಿದ್ದಾರೆ. ಇದನ್ನೂ ಓದಿ: ವಿದ್ಯುತ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

    8 ನೇ ತರಗತಿ ವಿದ್ಯಾರ್ಥಿನಿ ಪ್ಯಾರ್ ಸಿಂಗ್ ಅನ್ನುವವರು ಮಾತನಾಡಿ, ಈಗ ನಾವು ಯಾವುದೇ ತೊಂದರೆಯಿಲ್ಲದೆ ಆರಾಮವಾಗಿ ಓದುತ್ತೇವೆ. ಈ ಹಿಂದೆ ವಿದ್ಯುತ್ ಇಲ್ಲದ ಕಾರಣ ಎಣ್ಣೆ ದೀಪ ಹಚ್ಚಿಕೊಂಡು ಓದಬೇಕಾಗಿತ್ತು. ಇದರಿಂದ ನಮಗೆ ಹೆಚ್ಚು ಬೇಸರ ತರಿಸುತ್ತಿತು ಎಂದರು. 72 ವರ್ಷದ ತಾತ ಬದರಿನಾಥ್ ಅವರು, ಮಾತನಾಡಿ, ಹಿಂದಿನ ಪೀಳಿಗೆಯವರಂತು ವಿದ್ಯುತ್ ಪವಾಡವನ್ನು ಕಣ್ತುಂಬಿಕೊಳ್ಳಲು ಸಾಧ್ಯವಾಗಲಿಲ್ಲ. ಇಷ್ಟು ಸುದೀರ್ಘ ಕಾಯುವಿಕೆಯ ನಂತರ ನಮಗೆ ವಿದ್ಯುತ್ ಒದಗಿಸಿದ ಇಲಾಖೆಗೆ ಇಂದು ನಾವು ಕೃತಜ್ಞರಾಗಿರುತ್ತೇವೆ ಎಂದು ಖುಷಿಪಟ್ಟರು.

    BRIBE

    ಎಕ್ಸಿಕ್ಯೂಟಿವ್ ಇಂಜಿನಿಯರ್ (ಎಕ್ಸ್‌ಇಎನ್), ಪವರ್ ಡೆವಲಪ್‍ಮೆಂಟ್ ಡಿಪಾರ್ಟ್‍ಮೆಂಟ್ (ಪಿಡಿಡಿ) ಉಧಮ್‍ಪುರ್ ಜಾವೇದ್ ಹುಸೇನ್ ಅಖ್ತರ್ ಮಾತನಾಡಿ, ಗ್ರಾಮ ಸದ್ದಲ್ ಭಾರತ ಸರ್ಕಾರದ ನಿರ್ದೇಶನಗಳೊಂದಿಗೆ ಸಂಪೂರ್ಣವಾಗಿ ವಿದ್ಯುದ್ದೀಕರಿಸಲ್ಪಟ್ಟಿದೆ. ಇದಕ್ಕೆ 10.28 ಲಕ್ಷ ರೂಪಾಯಿ ವೆಚ್ಚವಾಗಿದೆ ಎಂದು ತಿಳಿಸಿದರು.

    ಸರ್ಕಾರ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ, 25 ಕೆವಿಎ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿದ ನಂತರ ಗ್ರಾಮದ ಸುಮಾರು 25 ಮನೆಗಳು ಪ್ರಯೋಜನ ಪಡೆದಿವೆ. ಇದು ಜಿಲ್ಲೆಯ ವಿದ್ಯುತ್ ವಲಯದಿಂದ ಐತಿಹಾಸಿಕ ಸಾಧನೆಯಾಗಿದೆ. ಉಧಂಪುರದ ಪಂಚರಿ ತಹಸಿಲ್‍ನಲ್ಲಿರುವ ಪಂಚಾಯತ್ ಹಲ್ಕಾ ಕುಲ್ತ್ಯಾರ್ ಬಾಳದ ವಾರ್ಡ್ ಸಂಖ್ಯೆ 5ರ ಅಡಿಯಲ್ಲಿ ಈ ಗ್ರಾಮವು ಬರುತ್ತದೆ.

  • ಮಹಾತ್ಮಾ ಗಾಂಧಿ  ಆದರ್ಶಗಳು ಭಾರತದ ಆಧಾರಸ್ಥಂಭಗಳು: ಬಸವರಾಜ ಬೊಮ್ಮಾಯಿ

    ಮಹಾತ್ಮಾ ಗಾಂಧಿ  ಆದರ್ಶಗಳು ಭಾರತದ ಆಧಾರಸ್ಥಂಭಗಳು: ಬಸವರಾಜ ಬೊಮ್ಮಾಯಿ

    ಬೆಂಗಳೂರು: ಮಹಾತ್ಮಾ ಗಾಂಧೀಜಿಯವರ(Mahatma Gandhi) ಆದರ್ಶಗಳು ಸ್ವತಂತ್ರ ಹಾಗೂ ಗಣತಂತ್ರ ಭಾರತದ ಆಧಾರಸ್ಥಂಭಗಳಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದರು.

    ಇಂದು ಹುತಾತ್ಮರ ದಿನಾಚರಣೆಯ ಅಂಗವಾಗಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಮಹಾತ್ಮಾ ಗಾಂಧೀಜಿಯವರು ತಮ್ಮ ಪ್ರಾಣವನ್ನು ಬಲಿದಾನ ಮಾಡಿದ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸುತ್ತೇವೆ. ಮಹಾತ್ಮಾ ಗಾಂಧಿ ವಿಶ್ವದ ನಾಯಕರು. ಸತ್ಯ ಮತ್ತು ಅಹಿಂಸೆಯ ಪ್ರತಿಪಾದಕರು. ಶಾಂತಿಯಿಂದಲೇ ಸ್ವತಂತ್ರ ಪಡೆಯುವ ಚಲವನ್ನು ತೊಟ್ಟವರು. ಜೈಲು ವಾಸ, ಲಾಠಿ ಏಟು ಮುಂತಾದ ಹಲವಾರು ಕಷ್ಟ ಕಾರ್ಪಣ್ಯಗಳನ್ನು ಅನುಭವಿಸಿಯೂ ತಮ್ಮ ಸತ್ಯ, ಅಹಿಂಸೆಯ ಸಿದ್ಧಾಂತವನ್ನು ಎಂದೂ ಬಿಟ್ಟುಕೊಡಲಿಲ್ಲ ಎಂದರು. ಇದನ್ನೂ ಓದಿ: ಫೆಬ್ರವರಿಯಲ್ಲಿ 12 ದಿನ ಬ್ಯಾಂಕುಗಳಿಗೆ ರಜೆ

    ನನ್ನ ಜೀವನವೇ ಒಂದು ಸಂದೇಶ ಎಂದ ಅವರು, ತಮ್ಮ ಆತ್ಮ ಚರಿತ್ರೆ ಸತ್ಯಾನ್ವೇಷಣೆಯ ಮಾತನ್ನು ಹೇಳಲು ನೈತಿಕವಾಗಿ ಬಹಳ ದೊಡ್ಡ ಶಕ್ತಿ ಇರಬೇಕು. ಅಂಥಹ ವ್ಯಕ್ತಿಗಳು ಮಾತ್ರ ಇದನ್ನು ಹೇಳಲು ಸಾಧ್ಯ. ಅವರ ಜೀವನ ಅತ್ಯಂತ ಪರಿಶುದ್ಧ ಹಾಗೂ ಸತ್ಯದಿಂದ ಕೂಡಿರುವಂಥದ್ದು. ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೀಗಾಗಿಯೇ ಅತ್ಯಂತ ಆದರ್ಶಪ್ರಾಯವಾಗಿದ್ದರೆ. ಅವರ ಬದುಕು ಮತ್ತು ವಿಚಾರಗಳು ನಮಗೆ ಸದಾ ದಾರಿದೀಪವಾಗಿದೆ. ಇಂದು ಅವರ ಜೊತೆಗೆ ಸಾವಿರಾರು ಜನ ಹುತಾತ್ಮರಾಗಿದ್ದಾರೆ. ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಲಾಲಾ ಲಜಪತ್ ರಾಯ್ ಪ್ರಮುಖರು. ಇವರೆಲ್ಲರೂ ಸ್ವತಂತ್ರ ಪೂರ್ವದಲ್ಲಿ ಬಲಿದಾನ ಮಾಡಿದವರು. ಅದರ ಜೊತೆಗೆ ಪ್ರತಿ ರಾಜ್ಯದಲ್ಲಿ ಆಯಾ ಪ್ರಾಂತ್ಯಗಳ ಪ್ರಮುಖರು, ಸಾಮಾನ್ಯ ಜನರು ಪ್ರಾಣ ಬಲಿದಾನ, ಆಸ್ತಿ ಅಂತಸ್ತು ನೀಡಿ ತ್ಯಾಗ ಮಾಡಿದ್ದಾರೆ. ಪೂಜ್ಯ ಮಹಾತ್ಮಾ ಗಾಂಧೀಜಿಯವರಿಗೆ ಹಾಗೂ ವಿಶೇಷವಾಗಿ ಅನಾಮಧೇಯ ಸ್ವತಂತ್ರ ಯೋಧರಿಗೆ ನಮನ ಸಲ್ಲಿಸಿದರು.

    ದೇಶದ ಅಭಿವೃದ್ಧಿಗೆ ಸಂಕಲ್ಪ: ದೇಶಕ್ಕೆ ಸ್ವಾತಂತ್ರ್ಯ ಸುಲಭವಾಗಿ ಬಂದಿಲ್ಲ ಎನ್ನುವುದನ್ನು ಅರ್ಥಮಾಡಿಕೊಂಡು, ಸ್ವಾತಂತ್ರ್ಯ ನಂತರದ ದಿನಗಳಲನ್ನು ಅವಲೋಕಿಸಿದರೆ, 75 ವರ್ಷಗಳಲ್ಲಿ ಹಲವಾರು ರಂಗದಲ್ಲಿ ಸಾಧನೆ ಮಾಡಿದ್ದೇವೆ. ಆದರೆ ಸಾಮಾನ್ಯ ಜನ ತಮ್ಮ ಬದುಕನ್ನು, ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಕೆಲಸ ಮಾಡಬೇಕಿದೆ. 75 ವರ್ಷಗಳಲ್ಲಿ ನಾವು ಇನ್ನಷ್ಟು ಕೆಲಸಗಳನ್ನು ಮಾಡಬಹುದಾಗಿತ್ತು ಎನ್ನುವುದು ನಾವು ಆತ್ಮಾವಲೋಕನ ಮಾಡಿಕೊಂಡಾಗ ತಿಳಿಯುತ್ತದೆ. ಅದಕ್ಕಾಗಿ ಪ್ರಧಾನ ಮಂತ್ರಿಗಳು ಆತ್ಮನಿರ್ಭರ್ ಭಾರತ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಧ್ಯೇಯವನ್ನಿಟ್ಟುಕೊಂಡು ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಇಂಧನ, ಶಿಕ್ಷಣ ಆರೋಗ್ಯ ಮುಂತಾದ ಹಲವಾರು ರಂಗಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ಅವರ ಮಾರ್ಗದರ್ಶನ ದಲ್ಲಿ ರಾಜ್ಯವನ್ನು ಸಂಪದ್ಭರಿತ ವಾಗಿಸಲು ಹಾಗೂ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡಲು ಸಂಕಲ್ಪ ಮಾಡುವ ದಿನ ಇದು ಎಂದರು.

    ಟೋಯಿಂಗ್ ಅತಿರೇಕದ ವರ್ತನೆ ಸಲ್ಲದು: ಟೋಯಿಂಗ್ ವಿಚಾರದಲ್ಲಿ ಸಾರ್ವಜನಿಕರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ಶುರುವಾಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೋಯಿಂಗ್ ಬಗ್ಗೆ ಈಗಿರುವ ವ್ಯವಸ್ಥೆ ಬಗ್ಗೆ ಪುನರ್ ಪರಿಶೀಲನೆ ಮಾಡಲಾಗುತ್ತಿದೆ. ಇಲಾಖೆಯೇ ಇದನ್ನು ಮಾಡುತ್ತಿತ್ತು, ಈಗ ಖಾಸಗಿ ಯವರಿಗೆ ಗುತ್ತಿಗೆ ನೀಡಲಾಗಿದೆ. ಹಲವಾರು ಘಟನೆಗಳ ಬಗ್ಗೆ ಗಮಣಿಸಲಾಗಿದ್ದು, ಸಾರ್ವಜನಿಕರು ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಆದರೆ ಕಾನೂನಿನ ರಕ್ಷಣೆ ಮಾಡುವವರು ಸಾರ್ವಜನಿಕರೊಂದಿಗೆ ಅತ್ಯಂತ ಸೌಹಾರ್ದಯುತವಾಗಿ ವರ್ತಿಸಬೇಕು. ಅತಿರೇಕದ ವರ್ತನೆ ಸಹಿಸುವುದಿಲ್ಲ. ಈ ಬಗ್ಗೆ ನಾಳೆ ಪೊಲೀಸ್ ಆಯುಕ್ತರು, ಪೊಲೀಸ್ ಮಹಾ ನಿರ್ದೇಶಕರು ಹಾಗೂ ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಸಭೆ ಕರೆದು ಸಂಪೂರ್ಣವಾಗಿ ಪುನರ್ ಪರಿಶೀಲನೆ ಮಾಡಲು ತೀರ್ಮಾನಿಸಲಾಗಿದೆ. ಹಲವಾರು ಬದಲಾವಣೆಗಳನ್ನು ತಂದು ಜನಸ್ನೇಹಿಯಾಗಿಸಲಿದ್ದೇವೆ ಎಂದರು. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಲಾಬಿ ಆರಂಭಿಸಿದ ವಲಸಿಗ ಶಾಸಕರು

    ಜನೀಶ್ ಚಿಕಿತ್ಸೆಗೆ ಸಹಾಯ: ಜನೀಶ್ ಎನ್ನುವ ಮಗುವಿಗೆ ಚಿಕಿತ್ಸೆ ಗಾಗಿ 16 ಕೋಟಿ ಅವಶ್ಯಕತೆ ಇದೆ. ಈ ರೀತಿಯ ಬಹಳಷ್ಟು ಮಕ್ಕಳಿದ್ದು, ಸರ್ಕಾರ ಈ ಬಗ್ಗೆ ಏನು ಕ್ರಮ ಕೈಗೊಂಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಮಂತ್ರಿಗಳು ಈ ಬಗ್ಗೆ ಸಂಪೂರ್ಣ ವಿವರಗಳನ್ನು ಪಡೆದು, ಈ ಮೊತ್ತ ಏಕೆ ಬೇಕೆನ್ನುವ ಬಗ್ಗೆ ತಿಳಿದು, ಅಗತ್ಯ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು. ಸಾರ್ವಜನಿಕರೂ ಸಹಾಯ ಮಾಡಬೇಕೆಂದು ಮಾಧ್ಯಮಗಳು ಕರೆ ನೀಡಿವೆ. ಸರ್ಕಾರವಾಗಿ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.

    ಚಿತ್ರಮಂದಿರಗಳಲ್ಲಿ ಆಸನ ವ್ಯವಸ್ಥೆ: ಕೋವಿಡ್ ನಿಯಮಗಳನ್ನು ಸಡಿಲಿಕೆ ಮಾಡಿರುವ ಬಗ್ಗೆ ಸಿನಿಮಾದವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಉತ್ತರಿಸಿ, ಸಿನಿಮಾದವರಿಗೆ ಗೃಹ ಸಚಿವನಾಗಿ, ಮುಖ್ಯಮಂತ್ರಿಯಾಗಿ ಬಹಳಷ್ಟು ಸವಲತ್ತುಗಳನ್ನು ನೀಡಲಾಗಿದೆ.ಅವರಿಂದ ಮನವಿ ಪಡೆದು ಆಸನ ವ್ಯವಸ್ಥೆಗಳ ಬಗ್ಗೆ ತಾಂತ್ರಿಕ ತಜ್ಞರ ಸಲಹೆ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

  • ಇದು ಹುಚ್ಚುತನವೋ ಅಥವಾ ದೇಶದ್ರೋಹವೋ – ಕಂಗನಾ ವಿರುದ್ಧ ವರುಣ್ ಗಾಂಧಿ ಕಿಡಿ

    ಇದು ಹುಚ್ಚುತನವೋ ಅಥವಾ ದೇಶದ್ರೋಹವೋ – ಕಂಗನಾ ವಿರುದ್ಧ ವರುಣ್ ಗಾಂಧಿ ಕಿಡಿ

    ನವದೆಹಲಿ: 2014ರಲ್ಲಿ ನಮ್ಮ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು, 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ಹೇಳಿಕೆ ನೀಡಿದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಇದು ಹುಚ್ಚುತನವೋ ಅಥವಾ ದೇಶದ್ರೋಹವೋ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

    ಖಾಸಗಿ ವಾಹಿನಿಯ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಕಂಗನಾ, ಭಾರತಕ್ಕೆ 1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ. ನಾನು ರಾಷ್ಟ್ರೀಯತೆ, ಸೇನೆ ಮತ್ತು ನಮ್ಮ ಸಂಸ್ಕೃತಿಯನ್ನು ಬೆಂಬಲಿಸಿ ಮಾತನಾಡುವಾಗ ನಾನು ಬಿಜೆಪಿಯ ಅಜೆಂಡಾವನ್ನು ಪಾಲಿಸುತ್ತೇನೆ ಎಂದು ಕೆಲವರು ಹೇಳುತ್ತಾರೆ. ನಾನು ಆ ರೀತಿ ಇಲ್ಲ. ನಾನು ನಮ್ಮ ಸಂಸ್ಕೃತಿಯನ್ನು ಗೌರವಿಸುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ನಾನು ಕಲಾವಿದೆಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಇರುತ್ತೇನೆ. ನಮ್ಮ ದೇಶ ಪ್ರಸ್ತುತ ದಿನಗಳಲ್ಲಿ ವಿಶ್ವಮಾನ್ಯತೆ ಪಡೆದುಕೊಳ್ಳುತ್ತಿದೆ ಎಂದಿದ್ದರು. ಇದನ್ನೂ ಓದಿ: ಗೃಹಿಣಿ, ಮಗುವಿನ ತಾಯಿಯಾಗಬಯಸಿದ್ದಾರಂತೆ ಕಂಗನಾ- ಬಾಳ ಸಂಗಾತಿ ಬಗ್ಗೆ ನಟಿ ಸುಳಿವು!

    ಕಂಗನಾ ಈ ಹೇಳಿಕೆಗೆ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿರುವ ವರುಣ್ ಗಾಂಧಿ, ಒಮ್ಮೆ ಮಹಾತ್ಮ ಗಾಂಧೀಜಿಯವರ ತ್ಯಾಗ ಮತ್ತು ತಪಸ್ಸಿಗೆ ಅವಮಾನ, ಮತ್ತೆ ಗಾಂಧೀಜಿ ಹಂತಕನಿಗೆ ಗೌರವ. ಈಗ ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆಯೇ ತಿರಸ್ಕಾರ ಮನೋಭಾವ ಈ ರೀತಿಯ ಆಲೋಚನೆಯನ್ನು ಹುಚ್ಚುತನ ಎನ್ನಬೇಕೋ ಅಥವಾ ದೇಶದ್ರೋಹ ಎಂದು ಕರೆಯಬೇಕೋ ಎಂದು ವರುಣ್ ಗಾಂಧಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

    ಕಂಗನಾ ಈ ರೀತಿ ಹೇಳಿಕೆ ಬಳಿಕ ಹಲವು ಮಂದಿ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಕಂಗನಾ ಈ ಹೇಳಿಕೆ ಮಹಾತ್ಮಾ ಗಾಂಧಿ, ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಸುಭಾಷ್ ಚಂದ್ರಬೋಸ್ ಸೇರಿದಂತೆ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿರುವ ಅವಮಾನ ಎಂದು ಕಂಗನಾ ವಿರುದ್ಧ ನೆಟ್ಟಿಗರು ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಜನವರಿ ಅಂತ್ಯಕ್ಕೆ ಬೊಮ್ಮಾಯಿ ಅಧಿಕಾರ ಹೋಗುತ್ತೆ: ಶಿವರಾಜ್ ತಂಗಡಗಿ

  • ಐರ್ಲೆಂಡ್‍ನಲ್ಲಿದ್ದರೂ ಬಿಡದ ನಂಟು- ಮಕ್ಕಳಿಗೆ ನಿರಂತರ ಕನ್ನಡ ಪಾಠ

    ಐರ್ಲೆಂಡ್‍ನಲ್ಲಿದ್ದರೂ ಬಿಡದ ನಂಟು- ಮಕ್ಕಳಿಗೆ ನಿರಂತರ ಕನ್ನಡ ಪಾಠ

    ಬೆಂಗಳೂರು: ಇದು ಅನಿವಾಸಿ ಭಾರತೀಯರ ಕನ್ನಡ ನಾಡಿನ ಪ್ರೀತಿ. ತಮ್ಮ ಮಕ್ಕಳು ಕನ್ನಡ ಕಲಿಯಬೇಕು. ಹುಟ್ಟೂರಿನಲ್ಲಿರುವ ಅಜ್ಜಿ-ತಾತನ ಜೊತೆ ಚೆನ್ನಾಗಿ ಕನ್ನಡದಲ್ಲಿಯೇ ಮಾತನಾಡಬೇಕು. ನಾವಾಡಿದ ಆಟ, ಹಬ್ಬಗಳ ಬಗ್ಗೆ ಮಕ್ಕಳೂ ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅಲ್ಲಿರುವ ಅನಿವಾಸಿ ಭಾರತೀಯರು ತಮ್ಮ ಮಕ್ಕಳಿಗೆ ನಿರಂತರ ಕನ್ನಡ ಪಾಠ ಜೊತೆಗೆ ಸ್ವಾತಂತ್ರ್ಯೋತ್ಸವದಂದು ವಿಶೇಷ ಪಾಠ ಹೇಳಿಕೊಟ್ಟಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅನಿವಾಸಿ ಕನ್ನಡಿಗರು, ಐರ್ಲೆಂಡ್‍ನಲ್ಲಿದ್ದರು ಕೂಡ ನಮ್ಮ ಮಕ್ಕಳು ನಮ್ಮ ಜೊತೆ ಕನ್ನಡ ಸಿನಿಮಾ, ಹಾಡು ಕೇಳಿಸಿಕೊಳ್ಳಬೇಕು ತಮ್ಮ ಮಕ್ಕಳು ಕನ್ನಡದ ಬಗ್ಗೆ ಚೆನ್ನಾಗಿ ತಿಳಿದುಕೊಳ್ಳಬೇಕೆಂಬ ಹೆಬ್ಬಯಕೆಯಿಂದ “ಕನ್ನಡ ಕಲಿ” ಅಥವಾ “ಕನ್ನಡ ಕ್ರಿಯೇಟಿವ್ ಲರ್ನಿಂಗ್” ತರಗತಿ ಆರಂಭವಾಗಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಅಕ್ಕೈ ಪದ್ಮಶಾಲಿ ಆಸೆ ನೆರವೇರಿಸಿದ ನಟ ಧನಂಜಯ್

    ಕಳೆದ ನಾಲ್ಕು ದಿನದ ಹಿಂದಷ್ಟೇ ನಡೆದ ಸ್ವಾತಂತ್ರ್ಯ ದಿನವನ್ನು ಐರ್ಲೆಂಡಿನಲ್ಲೂ ಕನ್ನಡದ ಮಕ್ಕಳು ಆಚರಿಸಿದರು. ಬಂಟ್ವಾಳದ ಚಿತ್ರ ಕಲಾವಿದರಾದ ಶಿವಾನಂದ ಡಿ. ಉಳಿಕಕ್ಕೆಪದವು ತಮ್ಮ ಚಿತ್ರಕಲೆಯ ಮೂಲಕವೇ ಸ್ವಾತಂತ್ರ್ಯ ದಿನದ ಕುರಿತು ಐರ್ಲೆಂಡ್‍ನ ಕನ್ನಡಿಗರ ಮಕ್ಕಳಿಗೆ ವರ್ಚುವಲ್ ಮೂಲಕ ಪಾಠ ಮಾಡಿದರು. 30 ವಿದ್ಯಾರ್ಥಿಗಳು ಅತ್ಯಂತ ಸಂತೋಷದಿಂದಲೇ ಸ್ವಾತಂತ್ರ್ಯದ ಹೋರಾಟ, ಬಲಿದಾನ, ಸಧ್ಯದ ಪರಿಸ್ಥಿತಿಯಲ್ಲೂ ಯೋಧರ ಹೋರಾಟ, ತಾಯಿ ನಾಡಿನ ಬಗ್ಗೆ ಇರಬೇಕಾದ ಗೌರವದ ಬಗ್ಗೆ ಹೆಮ್ಮೆಯಿಂದ ತಿಳಿದುಕೊಂಡರು.

    ಕಳೆದ ಮೂರು ವರ್ಷಗಳಿಂದ ಐರ್ಲೆಂಡ್ ಮಕ್ಕಳ ಕನ್ನಡ ಕಲಿಕೆ ಆರಂಭವಾಗಿದೆ. ಮೂರು ವರ್ಷಗಳಿಂದ ಇಂದಿಗೂ ನಿರಂತರವಾಗಿ ಯಶಸ್ಸು ಕಾಣುವಲ್ಲಿ ಶ್ರಮಿಸಿದವರು. ಐರ್ಲೆಂಡಿನಲ್ಲಿ ನೆಲೆಸಿರುವ ದಾವಣಗೆರೆಯ ಕಾಂತೇಶ್, ಬೆಂಗಳೂರಿನ ಪ್ರಕಾಶ್ ಹಾಗೂ ಗೆಳೆಯರು. ನಮ್ಮ ದೇಶ ಹಾಗೂ ಐರ್ಲೆಂಡ್ ದೇಶದಲ್ಲಿ ನಾಲ್ಕು ಗಂಟೆಗಳ ಸಮಯದ ವ್ಯತ್ಯಾಸವಿರುತ್ತದೆ. ಈ ಸಮಯ ತಿಳಿದುಕೊಂಡು, ಮಕ್ಕಳಿಗೆ ಇಂಗ್ಲೀಷ್ ಹಾಗೂ ಕನ್ನಡ ಎರಡೂ ಭಾಷೆ ಬಳಸಿ ಅರ್ಥವಾಗುವ ರೀತಿಯಲ್ಲಿ ಕಥೆ ಹಾಗೂ ಚಿತ್ರದ ಮೂಲಕ ಸ್ವಾತಂತ್ರ್ಯ ದಿನವನ್ನು ಅರ್ಥ ಮಾಡಿಸುವುದು ಬಹಳ ಖುಷಿ ಕೊಟ್ಟ ವಿಷಯ ಎಂದು ಶಿವಾನಂದ್ ತಿಳಿಸಿದರು. ಇದನ್ನೂ ಓದಿ: ಪಿಕ್ಚರ್ ಅಭೀ ಬಾಕಿ ಹೈ ಎಂದ ಆನಂದ್ ಸಿಂಗ್‍ಗೆ ಥಿಯೇಟರ್ ಬಂದ್ ಹೈ ಎಂದ ರಾಜೂ ಗೌಡ

    ಐರ್ಲೆಂಡಿನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ಕನ್ನಡಿಗ ಕಾಂತೇಶ್ ಮಾತನಾಡಿ, ಐರ್ಲೆಂಡಿನಲ್ಲಿ ಹುಟ್ಟಿದ ಕನ್ನಡಿಗರ ಮಕ್ಕಳಿಗೆ ಕನ್ನಡ ಬರುತ್ತಿರಲಿಲ್ಲ. ಅಜ್ಜಿ, ತಾತ ಹತ್ತಿರ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಇದು ಅಂತರ ಸೃಷ್ಟಿಯಾಗುತ್ತದೆ. ಮನೆಯಲ್ಲಿ ತಂದೆ-ತಾಯಿ ಕನ್ನಡ ಕಲಿಸಿಕೊಟ್ಟರು, ಮಕ್ಕಳು ತಮ್ಮ ವಯಸ್ಸಿನವರ ಜೊತೆ ಹೆಚ್ಚು ಬೆರೆಯುವುದರಿಂದ ಇಂಗ್ಲೀಷ್‍ನ್ನು ಹೆಚ್ಚು ಕಲಿತಿರುತ್ತಾರೆ. ಹೀಗಾಗಿ ಕನ್ನಡ ಕಲಿಸಲು ಡಬ್ಲಿನ್ ಸಿಟಿ ಸೇರಿದಂತೆ ಮೂರು ಕಡೆ ಲೈಬ್ರೆರಿಗಳಲ್ಲಿ ಕನ್ನಡ ತರಗತಿ ಮೂರು ವರ್ಷದ ಹಿಂದೆ ಆರಂಭಿಸಲಾಯಿತು.

    ಇದೀಗ ಕೋವಿಡ್ ಹಿನ್ನೆಲೆ ಆನ್‍ಲೈನ್ ಮೂಲಕ ತಿಂಗಳಿಗೆ ನಾಲ್ಕು ತರಗತಿಗಳನ್ನು ಒಂದು ಗಂಟೆಯ ಕಾಲ ನಡೆಸಲಾಗುತ್ತಿದೆ. ಸುಮಾರು 20-30 ಸ್ವಯಂಸೇವಕರು ಮುಂದೆ ಬಂದು ಉಚಿತವಾಗಿ ಕನ್ನಡದ ವಿವಿಧ ತರಗತಿಗಳನ್ನು ಕಲಿಸುತ್ತಿದ್ದಾರೆ. ಯುಎಸ್ ನಲ್ಲಿ ಕನ್ನಡದ ಶಿವಗೌಡರು ಬರೆದಿರುವ ಪುಸ್ತಕದ ಪ್ರಕಾರ ಕಲಿಸಲಾಗುತ್ತಿದೆ. 4 ರಿಂದ 14 ವಯಸ್ಸಿನ ಸುಮಾರು 40 ಮಕ್ಕಳು ಕನ್ನಡ ಕಲಿಕೆಯಲ್ಲಿದ್ದಾರೆ. ಅವರಿಗಿರುವ ಕನ್ನಡ ಜ್ಞಾನಕ್ಕೆ ತಕ್ಕಂತೆ ಬೇರೆ ಬೇರೆ ತಂಡಗಳನ್ನು ಮಾಡಿ ಕಲಿಸಲಾಗುತ್ತಿದೆ ಎಂದರು.

    ಐರ್ಲೆಂಡ್ ನಿವಾಸಿಯಾಗಿರುವ ಬೆಂಗಳೂರಿನ ಪ್ರಕಾಶ್ ಮಾತನಾಡಿ, ಕನ್ನಡಿಗರ ಮಕ್ಕಳ ಕನ್ನಡ ಕಲಿಕೆಗೆ ಹೆತ್ತವರಿಂದಲೂ ಉತ್ತಮ ಸ್ಪಂದನೆ ಇದೆ. ಮಕ್ಕಳಿಗೂ ಒಂದು ಗಂಟೆ ಕ್ಲಾಸ್ ಆಗಿರುವುದರಿಂದ, ಪಠ್ಯಗಳನ್ನು ಹೊರತುಪಡಿಸಿ ಹೊಸ ವಿಷಯ ಕಲಿಯುವುದನ್ನು ಉತ್ಸಾಹದಿಂದ ಕಲಿಯುತ್ತಿದ್ದಾರೆ. ಮಕ್ಕಳಿಗೂ ಕನ್ನಡದವರೇ ಆದ ಹೊಸ ಗೆಳೆಯರ ಬಳಗ ಸಿಕ್ಕಿದೆ. ತರಗತಿಗಳು ಕೂಡ ಚಟುವಟಿಕೆಯಿಂದ ಕೂಡಿರುತ್ತವೆ. ಹೀಗಾಗಿ ಕಳೆದ ಮೂರು ವರ್ಷದಿಂದ ಯಶಸ್ವಿಯಾಗಿ ಮುನ್ನಡೆಯುತ್ತಾ ಬಂದಿದೆ. ಅನಿವಾಸಿ ಭಾರತೀಯರ, ಕನ್ನಡ ನೆಲದ ಪ್ರೀತಿ, ಭಾಷೆಯ ನಂಟು ಮಾದರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಇಡಿ ಕರೆ ಬಂದಿಲ್ಲ, ವೈಯಕ್ತಿಕ ಕೆಲಸದ ಮೇಲೆ ದೆಹಲಿ ಬಂದಿರೋದು: ಜಮೀರ್ ಅಹ್ಮದ್ ಖಾನ್

  • ದೇಶದ್ರೋಹ ಕಾನೂನು ಈಗಲೂ ಅಸ್ತಿತ್ವದಲ್ಲಿರಬೇಕೆ? – ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

    ದೇಶದ್ರೋಹ ಕಾನೂನು ಈಗಲೂ ಅಸ್ತಿತ್ವದಲ್ಲಿರಬೇಕೆ? – ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

    ನವದೆಹಲಿ: ಮಹಾತ್ಮ ಗಾಂಧೀಜಿ, ಬಾಲ ಗಂಗಾಧರ್ ತಿಲಕ್‍ರಂತಹ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಬಳಸಲ್ಪಟ್ಟಿರುವ ದೇಶದ್ರೋಹ ಕಾನೂನು (ಐಪಿಸಿಯ ಸೆಕ್ಷನ್ 124 ಎ ) ಈಗಲೂ ಅಸ್ತಿತ್ವದಲ್ಲಿರಬೇಕೆ?, ಅದರ ಅವಶ್ಯಕತೆ ಈಗಲೂ ಇದೆಯೇ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು  ಖಾರವಾಗಿ ಪ್ರಶ್ನಿಸಿದೆ.

    ಐಪಿಸಿಯ ಸೆಕ್ಷನ್ 124 ಎ ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ಇಂತಹ ಹಲವು ಪ್ರಶ್ನೆಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

    ವಿಚಾರಣೆ ವೇಳೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ, ಇದೊಂದು ವಸಾಹತುಶಾಹಿ ಕಾನೂನು. ಇದನ್ನು 1870 ರಲ್ಲಿ ಸೇರಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರನ್ನು ಹತ್ತಿಕ್ಕಲು ಬ್ರಿಟಿಷರು ಈ ಕಾನೂನು ಸೇರ್ಪಡೆ ಮಾಡಿದ್ದರು. ಸ್ವಾತಂತ್ರ್ಯ ಸಿಕ್ಕಿದ 73 ವರ್ಷದ ಬಳಿಕವೂ ಈ ಕಾನೂನಿನ ಅವಶ್ಯಕತೆ ಇದೆಯೇ ಎಂದು ಅದು ಪ್ರಶ್ನಿಸಿತು.  ಇದನ್ನೂ ಓದಿ : ಐಟಿ ಕಾಯ್ದೆಯ ಸೆಕ್ಷನ್ 66ಎ ಅಡಿಯಲ್ಲಿ ಇನ್ನೂ ಕೇಸ್ ದಾಖಲಿಸುತ್ತಿರುವುದು ಆಘಾತಕಾರಿ – ಸುಪ್ರೀಂಕೋರ್ಟ್

    ಈ ನಡುವೆ ದೇಶ ದ್ರೋಹದ ಪ್ರಕರಣಗಳು ಹೆಚ್ಚುತ್ತಿದೆ ಎಂದು ಪರೋಕ್ಷವಾಗಿ ಕಾನೂನು ದುರ್ಬಳಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಪೀಠ, ಸ್ವಾತಂತ್ರ್ಯದ 73 ವರ್ಷದ ಬಳಿಕ ಇಂತಹ ಕಾನೂನು ಮುಂದುವರಿಸುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿತು.

    ಈ ಕಾನೂನು ಕಾರ್ಪೆಂಟರ್ ಬಳಿ ಇರುವ ಗರಗಸದಂತೆ ಮರ ಕತ್ತರಿಸುವ ಬದಲು ಇಡೀ ಅರಣ್ಯವನ್ನೇ ಕತ್ತರಿಸಲು ಬಳಕೆ ಮಾಡಲಾಗುತ್ತಿದೆ. ಪರಿಸ್ಥಿತಿ ಎಷ್ಟು ಕಠೋರವಾಗಿದೆ ಎಂದರೆ ನಿರ್ದಿಷ್ಟ ಧ್ವನಿಗಳನ್ನು ಕೇಳಲು ಸರ್ಕಾರಕ್ಕೆ ಇಷ್ಟವಿಲ್ಲದಿದ್ದರೆ ಅಂತಹ ಧ್ವನಿಗಳ ವಿರುದ್ಧ ಈ ಕಾನೂನು ಬಳಕೆಗೆ ಸರ್ಕಾರ ಸೂಚಿಸುತ್ತಿದೆ ಎಂದು ಆಘಾತ ವ್ಯಕ್ತಪಡಿಸಿತು. ಇದೇ ವೇಳೆ ಅವರು ಯಾವುದೇ ರಾಜ್ಯ ಅಥವಾ ಸರ್ಕಾರವನ್ನು ಉದ್ದೇಶಿಸಿ ಈ ಮಾತು ಹೇಳಿಲ್ಲ ಎಂದಿತು.

    ಐಪಿಸಿಯ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹದ ಅಪರಾಧದ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸೇನೆಯ ನಿವೃತ್ತ ಮೇಜರ್-ಜನರಲ್ ಎಸ್.ಜಿ. ವೊಂಬಟ್ಕೆರ ಅರ್ಜಿ ಸಲ್ಲಿಸಿದ್ದರು. ತಮ್ಮ ವಿರುದ್ಧ ದಾಖಲಿಸಿದ್ದ ದೇಶ ದ್ರೋಹದ ಕಾನೂನನ್ನು ಅವರು ಪ್ರಶ್ನೆ ಮಾಡಿದ್ದರು. ದೇಶಕ್ಕಾಗಿ ಸೇವೆ ಮಾಡಿದ ಯೋಧನ ಮೇಲೆ ಈ ರೀತಿಯ ಕೇಸು ದಾಖಲಿಸಿರುವುದನ್ನು ಅವರು ಪ್ರಶ್ನಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು ಕಾನೂನು ಪುನರ್ ಪರಿಶೀಲಿಸುವ ಭರವಸೆ ನೀಡಿದೆ. ಜುಲೈ 27 ರಂದು ಮುಂದಿನ ವಿಚಾರಣೆ ನಡೆಯಲಿದೆ.