Tag: ಸ್ವಾತಂತ್ರ್ಯ ಹೋರಾಟಗಾರ

  • Manipur: ಅಬ್ದುಲ್‌ ಕಲಾಂರಿಂದ ಗೌರವಿಸಲ್ಪಟ್ಟ ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

    Manipur: ಅಬ್ದುಲ್‌ ಕಲಾಂರಿಂದ ಗೌರವಿಸಲ್ಪಟ್ಟ ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

    ಇಂಫಾಲ್‌: ಮಣಿಪುರದಲ್ಲಿ ಹಿಂಸಾಚಾರ (Manipur Violence) ದಿನದಿಂದ ದಿನಕ್ಕೆ ಭುಗಿಲೇಳುತ್ತಿದೆ. ಮಹಿಳೆಯರನ್ನ ಬೆತ್ತಲೆ ಮೆರವಣಿಗೆ (Manipur Women Paraded) ನಡೆಸಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಅದೇ ದಿನ ಮತ್ತಿಬ್ಬರು ಯುವತಿಯರ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಇದೀಗ ಸ್ವಾತಂತ್ರ್ಯ ಹೋರಾಟಗಾರನೊಬ್ಬರ ಪತ್ನಿಯನ್ನ ಸಜೀವ ದಹನ ಮಾಡಿರುವ ಘಟನೆ ಜನರನ್ನ ಬೆಚ್ಚಿ ಬೀಳಿಸಿದೆ.

    ಕಾಕ್ಚಿಂಗ್‌ ಜಿಲ್ಲೆಯ ಸೆರೋ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರನ (Freedom Fighter) ಪತ್ನಿ 80‌ ವರ್ಷದ ಮಹಿಳೆಯನ್ನ ಮನೆಯೊಳಗೆ ಕೂಡಿಹಾಕಿಕೊಂಡು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಮೇ 28ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಸೆರೋ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಕೇಸ್‌ ದಾಖಲಾಗಿದೆ.

    ಮೃತ ಮಹಿಳೆ ಸ್ವಾತಂತ್ರ್ಯ ಹೋರಾಟಗಾರ ಎಸ್‌.ಚೂರಚಂದ್‌ ಸಿಂಗ್‌ ಅವರ ಪತ್ನಿ. ಚೂರಚಂದ್‌ ಭಾರತದ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಅವರಿಂದ ಗೌರವಿಸಲ್ಪಟ್ಟಿದ್ದರು. ಇದನ್ನೂ ಓದಿ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಯುವತಿಯರ ಮೇಲೆ ರೇಪ್, ಮರ್ಡರ್ ಆರೋಪ – ಮಣಿಪುರ ಧಗ ಧಗ

    ಕಳೆದ ಮೇ 3 ರಂದು ಹಿಂಸಾಚಾರ ಭುಗಿಲೇಳುವುದಕ್ಕೂ ಮುನ್ನ ರಾಜಧಾನಿ ಇಂಫಾಲ್‌ನಿಂದ 45 ಕಿಮೀ ದೂರದಲ್ಲಿ ಸುಂದರ ಗ್ರಾಮವಾಗಿದ್ದ ಸೆರೋ ಈಗ ಸ್ಮಶಾನದಂತೆ ಕಾಣುತ್ತಿದೆ. ಕೇವಲ ಸುಟ್ಟ ಮನೆಗಳಷ್ಟೇ ಕಣ್ಣಿಗೆ ಗೋಚರವಾಗುತ್ತಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

    ಪರಿಶಿಷ್ಟ ಪಂಗಡಗಳ ಸ್ಥಾನಮಾನಕ್ಕಾಗಿ ಮಿಟೈಸ್‌ ಮತ್ತು ಕುಕಿ ಬುಡಕಟ್ಟಿನ ನಡುವೆ ಘರ್ಷಣೆ ಪ್ರಾರಂಭವಾದ ಕೆಲ ದಿನಗಳ ನಂತರ ಶಸ್ತ್ರಸಜ್ಜಿತ ಗುಂಪೊಂದು ದಾಳಿ ನಡೆಸಿ 80 ವರ್ಷದ ಮಹಿಳೆಯನ್ನ ಜೀವಂತವಾಗಿ ಸುಟ್ಟುಹಾಕಿತ್ತು. ಆಕೆಯನ್ನು ರಕ್ಷಿಸಲು ಧಾವಿಸುವಷ್ಟರಲ್ಲಿ ದೇಹ ಸಂಪೂರ್ಣ ಸುಟ್ಟು ಕರಕಲಾಗಿತ್ತು ಎಂದು ಮೊಮ್ಮಗ ಪ್ರೇಮಕಾಂತ ಕಣ್ಣಾರೆ ಕಂಡ ದೃಶ್ಯವನ್ನ ವಿವರಿಸಿದ್ದಾನೆ. ಇದನ್ನೂ ಓದಿ: ಮಣಿಪುರದಲ್ಲಿ ನಡೆದ ಘಟನೆ ದುಃಖಕರ – ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಬ್ರಿಜ್‌ ಭೂಷಣ್‌ ಸಿಂಗ್‌ ಖಂಡನೆ

    ಸುಮಾರು ಎರಡೂವರೆ ತಿಂಗಳಿನಿಂದ ಎರಡು ಪ್ರಮುಖ ಸಮುದಾಯಗಳ ನಡುವೆ ನಡೆಯುತ್ತಿರೋ ಸಂಘರ್ಷದ ಕಾರಣದಿಂದ ಮಣಿಪುರ ಎಂಬ ಪುಟ್ಟ ರಾಜ್ಯ ಹೊತ್ತಿ ಉರಿಯುತ್ತಿದೆ. ಈವರೆಗೂ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಖುದ್ದು ಸೇನೆ ಫೀಲ್ಡ್ಗೆ ಇಳಿದರೂ ಸಂಘರ್ಷ ಶಮನವಾಗಿಲ್ಲ. ದಿನೇ ದಿನೇ ಹಿಂಸಾಚಾರ ಹೆಚ್ಚಾಗುತ್ತಲೇ ಸಾಗಿದೆ. ಶಾಂತಿ ಎಂಬುದಿಲ್ಲಿ ಮರೀಚಿಕೆ ಆಗಿದೆ. ಇಂತಹ ಸಂದರ್ಭದಲ್ಲಿ ಮನುಕುಲ ತಲೆತಗ್ಗಿಸುವಂತಹ ವೀಡಿಯೋ ಒಂದು ಹೊರಬಂದಿತ್ತು. ಆದಿವಾಸಿ ಸಮುದಾಯದ ಇಬ್ಬರು ಮಹಿಳೆಯರನ್ನು ಸಂಪೂರ್ಣ ಬೆತ್ತಲೆ ಮಾಡಿದ ರಾಕ್ಷಸಿ ಗುಂಪೊಂದು, ಅವರನ್ನು ನೂರಾರು ಜನರ ಸಮ್ಮುಖದಲ್ಲಿ ಮೆರವಣಿಗೆ ಮಾಡಿತ್ತು. ಈ ದೃಶ್ಯಾವಳಿ ಇದು ಇಡೀ ದೇಶದ ಮನಕಲಕಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ವಾತಂತ್ರ್ಯ ಹೋರಾಟಗಾರ, ಶತಾಯಿಷಿ ವೆಂಕಣ್ಣ ನಾಯಕ ಇನ್ನಿಲ್ಲ

    ಸ್ವಾತಂತ್ರ್ಯ ಹೋರಾಟಗಾರ, ಶತಾಯಿಷಿ ವೆಂಕಣ್ಣ ನಾಯಕ ಇನ್ನಿಲ್ಲ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಕೊನೆಯಕೊಂಡಿಯಾಗಿದ್ದ ಅಂಕೋಲಾದ ಶತಾಯಿಷಿ ವೆಂಕಣ್ಣ ಬೊಮ್ಮಯ್ಯ ನಾಯಕ ಅಸ್ತಂಗತರಾಗಿದ್ದಾರೆ.

    ವೆಂಕಣ್ಣ ನಾಯಕ ಅವರು ಬ್ರಿಟಿಷರ ವಿರುದ್ಧ ಅಸಹಕಾರ ಚಳವಳಿ, ಜಂಗಲ್ ಸತ್ಯಾಗ್ರಹ, ಹುಲ್ಲುಬನ್ನಿ ಸತ್ಯಾಗ್ರಹ, ಉಪ್ಪಿನ ಸತ್ಯಾಗ್ರಹ, ಉಳುವರೆ ಜಂಗಲ್ ಸುಡುವ ಕಾರ್ಯದಲ್ಲಿ ಭಾಗವಹಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ನಿರಂತರವಾಗಿ ಭಾಗಿಯಾಗಿದ್ದ ಇವರು 1942ರ ಮೇ 12 ರಿಂದ 1943ರ ಜೂನ್ 7ರವರೆಗೆ ನಾಸಿಕ್ ಸೆಂಟ್ರಲ್ ಜೈಲ್‍ನಲ್ಲಿ ಶಿಕ್ಷೆ ಅನುಭವಿಸಿದ್ದರು.

    ಸ್ವಾತಂತ್ರ್ಯ ನಂತರದಲ್ಲಿ ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಸೇವಾ ಸಹಕಾರಿ ಸಂಘ ತಳಗದ್ದೆಯ ಸಂಸ್ಥಾಪನಾ ಅಧ್ಯಕ್ಷರಾಗಿ ಸೇವಾ ಸಹಕಾರಿ ಸಂಘ ಸೂರ್ವೆಯ ಅಧ್ಯಕ್ಷರಾಗಿ, ತಾಲೂಕಾ ಕೃಷಿ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ನಿರ್ದೇಶಕರಾಗಿ ಹೀಗೆ ಹಲವು ಕಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇದನ್ನೂ ಓದಿ: ಮಹಾಮಳೆಗೆ ನಲುಗಿದ ರಾಜ್ಯ ರಾಜಧಾನಿ- 100ಕ್ಕೂ ಹೆಚ್ಚು ಮನೆಗೆ ನುಗ್ಗಿದ ನೀರು, ಕೆರೆಯಂತಾದ ರಸ್ತೆಗಳು

    ಮೃತರು ಪತ್ನಿ ಪಾರ್ವತಿ, ಮೂರು ಗಂಡು ಮತ್ತು ಮೂರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ವೆಂಕಣ್ಣ ಬೊಮ್ಮಯ್ಯ ನಾಯಕ ಅವರ ಅಂತ್ಯಕ್ರಿಯೆಯು ಅಂಕೋಲದ ಸೂರ್ವೆಯಲ್ಲಿ ನಡೆಯಲಿದ್ದು, ಅಧಿಕಾರಿಗಳು ಮತ್ತು ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಜಮೀರ್ `ಗಣೇಶ’ ಅಸ್ತ್ರ – ಇಷ್ಟು ದಿನ ಇಲ್ಲದ್ದು ಈಗ್ಯಾಕೆ? ಶಾಸಕರ ನಡೆಗೆ ಸ್ಥಳೀಯರಿಂದ ಆಕ್ರೋಶ

    Live Tv
    [brid partner=56869869 player=32851 video=960834 autoplay=true]

  • ಸಂಸತ್ತಿನ ಒಳಗಡೆ ಫೋಟೋ ಇರುವಾಗ ಸರ್ಕಲ್‍ಗೆ ಸಾವರ್ಕರ್ ಹೆಸರು ಇಟ್ಟರೆ ತಪ್ಪೇನು – ಭರತ್ ಶೆಟ್ಟಿ ಪ್ರಶ್ನೆ

    ಸಂಸತ್ತಿನ ಒಳಗಡೆ ಫೋಟೋ ಇರುವಾಗ ಸರ್ಕಲ್‍ಗೆ ಸಾವರ್ಕರ್ ಹೆಸರು ಇಟ್ಟರೆ ತಪ್ಪೇನು – ಭರತ್ ಶೆಟ್ಟಿ ಪ್ರಶ್ನೆ

    ಮಂಗಳೂರು: ಈಗಾಗಲೇ ರಾಜ್ಯದಲ್ಲಿ ಸಾವರ್ಕರ್ ಪರ ವಿರೋಧ ಚರ್ಚೆ ಆಗುತ್ತಿರುವ ಬೆನ್ನಲ್ಲೆ ಮಂಗಳೂರಿನಲ್ಲಿ ಸರ್ಕಲ್‍ಗೆ ಸಾವರ್ಕರ್ ಹೆಸರಿನ ಪ್ರಸ್ತಾಪ ಕೇಳಿ ಬಂದಿದ್ದು ಚರ್ಚೆಗೆ ಕಾರಣವಾಗಿದೆ.

    ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಮಂಗಳೂರು ನಗರ ಹೊರವಲಯದ ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರಿಡಲು ಒತ್ತಾಯಿಸಿದ್ದಾರೆ. ಈ ಕುರಿತು ಶಾಸಕ ಭರತ್ ಶೆಟ್ಟಿ ಅವರು ಕಳೆದ ವರ್ಷವೇ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರಿಡುವ ಪ್ರಸ್ತಾಪ ತೀವ್ರ ಚರ್ಚೆಗೆ ಕಾರಣವಾಗಿದೆ.

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಶಾಸಕ ಭರತ್ ಶೆಟ್ಟಿ ಮಾತನಾಡಿ, ಹಿಂದೂ ಸಂಘಟನೆಗಳು, ಸ್ಥಳೀಯರು ಸಾವರ್ಕರ್ ಹೆಸರಿಡಲು ಮನವಿ ಸಲ್ಲಿಸಿದ್ದರು. ಒಂಬತ್ತು ತಿಂಗಳ ಹಿಂದೆ ಈ ಪ್ರಕ್ರಿಯೆ ಶುರು ಆಗಿದೆ. ಸ್ವಾತಂತ್ರ್ಯ ಸೇನಾನಿ ವೀರಸಾವರ್ಕರ್ ವಿರುದ್ಧ ಯಾಕೆ ಈ ಮನಸ್ಥಿತಿಯಲ್ಲಿದ್ದಾರೆ ಗೊತ್ತಿಲ್ಲ. ಸಂಸತ್ತಿನ ಒಳಗಡೆ ಸಾವರ್ಕರ್ ಫೋಟೋ ಇರುವಾಗ ವಿರೋಧ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 100 ಲೋನ್ ಆ್ಯಪ್‍ಗಳಿಂದ 500 ಕೋಟಿ ರೂ. ವ್ಯವಹಾರ – ಗ್ರಾಹಕರ ಮಾಹಿತಿ ಚೀನಾಗೆ ರವಾನಿಸಿದ ಗ್ಯಾಂಗ್ ಅರೆಸ್ಟ್

    ವೋಟ್ ಬ್ಯಾಂಕ್ ರಾಜಕೀಯಕ್ಕೆ ಸಾವರ್ಕರ್ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಹಿಂದೂ, ಮುಸ್ಲಿಮ್ ಎಂದು ಹೇಳಿಕೊಂಡು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ವಿರೋಧ ವ್ಯಕ್ತಪಡಿಸುವವರು ಒಮ್ಮೆ ಇತಿಹಾಸ ಓದಿಕೊಂಡು ಬರಲಿ. ಯಾರು ಯಾವುದೇ ಅಡೆತಡೆ ಮಾಡಿದರೂ ಸಾವರ್ಕರ್ ಹೆಸರು ಇಟ್ಟೇ ಇಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತದೊಂದಿಗಿನ ಶಾಶ್ವತ ಶಾಂತಿಗೆ ಯುದ್ಧವೊಂದೇ ಆಯ್ಕೆಯಾಗಿಲ್ಲ: ಪಾಕ್ ಪ್ರಧಾನಿ

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ಹೋರಾಟಗಾರರ ಮಗಳ ಕಾಲು ಮುಟ್ಟಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

    ಸ್ವಾತಂತ್ರ್ಯ ಹೋರಾಟಗಾರರ ಮಗಳ ಕಾಲು ಮುಟ್ಟಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

    ಅಮರಾವತಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಆಂಧ್ರಪ್ರದೇಶದ ಸ್ವಾತಂತ್ರ್ಯ ಹೋರಾಟಗಾರ ಪಸಲ ಕೃಷ್ಣ ಮೂರ್ತಿ ಅವರ ಕುಟುಂಬವನ್ನು ಭೇಟಿ ಮಾಡಿದರು.

    ಪಸಲ ಕೃಷ್ಣ ಮೂರ್ತಿ ಅವರ 90 ವರ್ಷದ ಪುತ್ರಿ ಪಸಲ ಭಾರತಿ, ಅವರ ಸಹೋದರಿ ಹಾಗೂ ಸೊಸೆಯನ್ನು ಮೋದಿ ಭೇಟಿ ಮಾಡಿದ್ದಾರೆ. ಈ ವೇಳೆ ಮೋದಿ ಭಾರತಿಯವರ ಕಾಲನ್ನು ಮುಟ್ಟಿ ಆಶೀರ್ವಾದ ಪಡೆದಿದ್ದಾರೆ. ವ್ಹೀಲ್ ಚೇರ್‌ನಲ್ಲಿ ಕುಳಿತಿರುವ ಭಾರತಿ ಅವರ ಕಾಲನ್ನು ಮುಟ್ಟಿ ನಮಸ್ಕರಿಸುತ್ತಿರುವ ಮೋದಿಯವರ ಫೋಟೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಕೋವಿಡ್ ವೇಳೆ ಜನರ ಜೀವ ರಕ್ಷಣೆಗೆ ಮೋದಿಯವ್ರು ಹಗಲು-ರಾತ್ರಿ ಪ್ರಯತ್ನ ಮಾಡಿದ್ದಾರೆ: ಶೋಭಾ ಕರಂದ್ಲಾಜೆ

    ಪಸಲ ಕೃಷ್ಣ ಮೂರ್ತಿ ಅವರು 1900 ಇಸವಿಯಲ್ಲಿ ಪಶ್ಚಿಮ ಗೋದಾವರಿ ಜಿಲ್ಲೆಯ ತಾಡೆಪಲ್ಲಿಗುಡೆಂ ತಾಲೂಕಿನ ಪಶ್ಚಿಮ ವಿಪ್ಪರ್ರಿ ಗ್ರಾಮದಲ್ಲಿ ಜನಿಸಿದರು. ಅವರು 1921ರಲ್ಲಿ ತಮ್ಮ ಪತ್ನಿಯೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು. ಗಾಂಧಿವಾದಿಯಾಗಿದ್ದ ಕೃಷ್ಣ ಮೂರ್ತಿ ಉಪ್ಪಿನ ಸತ್ಯಾಗ್ರಹ ಚಳವಳಿಯಲ್ಲಿ ಭಾಗವಹಿಸಿದ್ದರು. ಇದಕ್ಕಾಗಿ ಅವರಿಗೆ 1 ವರ್ಷದ ಜೈಲು ಶಿಕ್ಷೆಯನ್ನೂ ವಿಧಿಸಲಾಗಿತ್ತು. ಕೃಷ್ಣ ಮೂರ್ತಿ 1978ರಲ್ಲಿ ನಿಧನರಾದರು. ಇದನ್ನೂ ಓದಿ: ಮಿಗ್ 29 ಬದಲಿಸಲು ಮಲೇಷ್ಯಾದ ಮೊದಲ ಆಯ್ಕೆ ಭಾರತದ ತೇಜಸ್

    ಆಂಧ್ರಪ್ರದೇಶದ ಭೀಮಾವರಂನಲ್ಲಿ ಇಂದು ನಡೆದ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ್ಮ ದಿನದ ಆಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು. ಈ ವಿಶೇಷ ಕಾರ್ಯಕ್ರಮದಲ್ಲಿ 30 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಮೋದಿ ಅನಾವಣಗೊಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ಹೋರಾಟಗಾರ ಡಿ. ಮಾರಪ್ಪನವರಿಗೆ ಅಂತಿಮ ನಮನ ಸಲ್ಲಿಸಿದ ಸುಧಾಕರ್

    ಸ್ವಾತಂತ್ರ್ಯ ಹೋರಾಟಗಾರ ಡಿ. ಮಾರಪ್ಪನವರಿಗೆ ಅಂತಿಮ ನಮನ ಸಲ್ಲಿಸಿದ ಸುಧಾಕರ್

    ಚಿಕ್ಕಬಳ್ಳಾಪುರ: ಅನಾರೋಗ್ಯದಿಂದ ನಿಧನರಾದ ಸ್ವಾತಂತ್ರ್ಯ ಹೋರಾಟಗಾರರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಕೊಳವನಹಳ್ಳಿ ಗ್ರಾಮದ ಡಿ. ಮಾರಪ್ಪನವರ ಅಂತಿಮ ದರ್ಶನವನ್ನು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್ ಪಡೆದಿದ್ದಾರೆ.

    ತಾಲೂಕಿನ ಕೊಳವನಹಳ್ಳಿ ಗ್ರಾಮದ ನಿವಾಸಕ್ಕೆ ಭೇಟಿ ನೀಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ಡಿ.ಮಾರಪ್ಪನವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಸಾಹಿತಿಗಳು, ಶಿಕ್ಷಣ ಪ್ರೇಮಿಗಳು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಟ ಮಾಡಿದಂತಹ ಧೀಮಂತ ವ್ಯಕ್ತಿಯ ಸಾವು ನಮಗೆಲ್ಲಾ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ: ಉಮೇಶ್ ಕತ್ತಿ

    ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಸಹಕಾರ ಕೊಟ್ಟಿದ್ದರು. ಅನೇಕ ಪುಸ್ತಕಗಳನ್ನು ಸಹ ರಚನೆ ಮಾಡಿದ್ದರು. ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದವರು. ಅವರನ್ನು ಕಳೆದುಕೊಂಡಿರುವುದು ಇಡೀ ಜಿಲ್ಲೆಯ ಜನತೆಗೆ ತುಂಬಲಾರದ ನಷ್ಟ ಅಂತ ಮಾರಪ್ಪನವರನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ:ಶಾಲೆಗೆ ಆಗಮಿಸಿದ ಸಚಿವ ಸುಧಾಕರ್‌ಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

  • ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಸೂರಂ ರಾಮಯ್ಯ ಇನ್ನಿಲ್ಲ

    ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಸೂರಂ ರಾಮಯ್ಯ ಇನ್ನಿಲ್ಲ

    ಬೆಂಗಳೂರು: 102 ವರ್ಷಗಳ ಸಾರ್ಥಕ ಜೀವನ ನಡೆಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೂರಂ ರಾಮಯ್ಯನವರು ಇಂದು ನಿಧನರಾಗಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದ ನಿವಾಸಿಯಾಗಿದ್ದ ಸೂರಂ ರಾಮಯ್ಯನವರು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ 3:30ಕ್ಕೆ ನಮ್ಮೆಲ್ಲರನ್ನು ಅಗಲಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಅವರು ಗಾಂಧೀಜಿಯವರ ವಿಚಾರಧಾರೆ ಮತ್ತು ಅವರ ಕರೆಗಳಿಗೆ ಆಕರ್ಷಿತರಾಗಿದ್ದರು.

    ಸ್ವಾತಂತ್ರ್ಯದ ನಂತರ ನಡೆದ ಎರಡನೇಯ ವಿಧಾನಸಭಾ ಚುನಾವಣೆಯಲ್ಲಿ 1969-72ರ ಅವಧಿಗೆ ಹೊಸಕೋಟೆ- ದೇವನಹಳ್ಳಿ ಜಂಟಿ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿದ್ದರು. ಗ್ರಾಮ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿಗಳ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

    ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಅವರು, ಹೊಸಕೋಟೆ ತಾಲೂಕಿನಲ್ಲಿ ನಡೆಯುತ್ತಿದ್ದ ಪ್ರಜಾಸತ್ತಾತ್ಮಕ ಜನ ಚಳುವಳಿಗಳಲ್ಲಿ ವಿಶೇಷವಾಗಿ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ನಡೆದ ರೈತರ ಹೋರಾಟಗಳಲ್ಲಿ, ಕಾರ್ಮಿಕರ ಹೋರಾಟಗಳಲ್ಲಿ ಹಾಗೂ ಸಿಪಿಐ(ಎಂ) ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು.

    ನೂತನ ವಿದ್ಯುತ್ ಕಾಯ್ದೆ ಮತ್ತು ಮೀಟರಿಕರಣದ ವಿರುದ್ಧದ ಪ್ರಬಲ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಕರ್ನಾಟಕ ಪ್ರಾಂತ ರೈತ ಸಂಘದ ಬೆಂಗಳೂರು ಜಿಲ್ಲಾ ಸಮಿತಿಯ ಗೌರವಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಹಾಗೇಯೇ ಸಾಮಾಜಿಕ ಸಮಸ್ಯೆಗಳು, ಭ್ರಷ್ಟಾಚಾರದ ವಿರುದ್ಧವಾಗಿಯೂ ನಡೆದ ಹಲವು ಹೋರಾಟಗಳಲ್ಲಿ ಮತ್ತು ಹೋರಾಟ ರೂಪಿಸುವಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

    ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದ ಅವರು, ಸೂಲಿಬೆಲೆ ಒಳಗೊಂಡು ತಾಲೂಕಿನಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಜನ ಸಾಮಾನ್ಯರಿಗೆ ಶಿಕ್ಷಣವನ್ನು ನೀಡಿ ಸ್ವಾಭಿಮಾನ, ದೇಶಾಭಿಮಾನ ಮೂಡಿಸಲು ಶ್ರಮಿಸಿದ್ದರು. ಅದಕ್ಕಾಗಿ ಸ್ವಾಮಿ ವಿವೇಕಾನಂದ ವಿದ್ಯಾ ಅಭಿವೃದ್ಧಿ ಸಂಸ್ಥೆಯನ್ನು ಸ್ಥಾಪಿಸಿ ಅದರ ಸಂಸ್ಥಾಪಕ ಅಧ್ಯಕ್ಷರಾಗಿ ಶ್ರಮಿಸುತ್ತಾ ಬಂದಿದ್ದರು.ಸೂರಂ ರಾಮಯ್ಯನವರ ಅಗಲಿಕೆಯು ನಿಸ್ವಾರ್ಥತೆಯಿಂದ ತಮ್ಮನ್ನು ತೊಡಗಿಸಿಕೊಂಡ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಜನ ಚಳುವಳಿಗಳು ನೆಚ್ಚಿನ ಒಡನಾಡಿಯನ್ನು ಕಳೆದುಕೊಂಡಂತಾಗಿದೆ. ಇದನ್ನೂ ಓದಿ: ಬಿಎಸ್‍ವೈಗೆ ಸ್ವಾಭಿಮಾನ ಇದ್ದಿದ್ದರೆ ರಾಜೀನಾಮೆ ನೀಡಬೇಕಿತ್ತು: ವಿ.ಎಸ್ ಉಗ್ರಪ್ಪ

    ಅನೇಕ ಜನಪರ ಹೋರಾಟಗಳು, ಕಾರ್ಯಕ್ರಮಗಳಲ್ಲಿ ಮತ್ತು ಅತ್ಯಂತ ಸಂದಿಗ್ಧ ಹಾಗೂ ಸಂಕೀರ್ಣವಾದ ಸವಾಲುಗಳ ಎದುರಿಸುವುದರಲ್ಲಿ ನಡೆದ ಹೋರಾಟಗಳಲ್ಲಿ ಭಾಗವಹಿಸಿ ಸ್ಫೂರ್ತಿ ತುಂಬಿದ್ದು ಸ್ಮರಣೀಯವಾಗಿದೆ. ಹೊಸಕೋಟೆ ತಾಲೂಕಿನಲ್ಲಿ ಜೋಡಿ ಇನಾಮ್ತಿಗೆ ಪ್ರತಿರೋಧವಾಗಿ ನಡೆದ ಚಳುವಳಿಗಳಲ್ಲಿ ನಮ್ಮ ತಂದೆ ಎಂ.ಎಂ.ರಾಮಸ್ವಾಮಿರವರ ಒಡನಾಡಿಯಾಗಿದ್ದರು. ಅಂದಿನ ದಿನಗಳಲ್ಲಿ ಹೊಸಕೋಟೆ ತಾಲೂಕು ರಾಜಕೀಯ ಹಿಂಸಾಚಾರ ಮತ್ತು ದಬ್ಬಾಳಿಕೆಗಳಿಗೆ ಕುಖ್ಯಾತಿ ಆಗಿದ್ದನ್ನು ಅಂತಹ ಸನ್ನಿವೇಶದಲ್ಲಿ ಜನ ಚಳುವಳಿಗಳು ಮುನ್ನಡೆಯಲು ಸೂರಂ ರಾಮಯ್ಯನವರ ಭಾಗವಹಿಸುವಿಕೆ, ನೇತೃತ್ವಗಳು ಆತ್ಮ ವಿಶ್ವಾಸ, ಸ್ಫೂರ್ತಿಯನ್ನು ತುಂಬುತ್ತಿದ್ದವು ಎನ್ನುವುದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕು.

    ಸೂರಂ ರಾಮಯ್ಯನವರ ಅಗಲಿಕೆ ಸ್ವಾತಂತ್ರ್ಯ ಸಂಗ್ರಾಮದ ಒಂದು ಪ್ರಮುಖ ಕೊಂಡಿಯನ್ನು, ಜನಸ್ನೇಹಿಯನ್ನು ಕಳೆದುಕೊಂಡಂತಾಗಿದೆ. ಇದನ್ನೂ ಓದಿ:  ಸಿದ್ದಲಿಂಗಯ್ಯರನ್ನು ರಾಷ್ಟ್ರಕವಿಯಾಗಿ ಘೋಷಣೆ ವಿಚಾರ ಸರ್ಕಾರದೊಂದಿಗೆ ಚರ್ಚಿಸುತ್ತೇನೆ: ಜೋಶಿ

  • ಹರಸಿ ಹೋದ ಹಿರಿಯರೇ ಕ್ಷಮಿಸಿ ಬಿಡಿ

    ಹರಸಿ ಹೋದ ಹಿರಿಯರೇ ಕ್ಷಮಿಸಿ ಬಿಡಿ

    – ಸುಕೇಶ್ ಡಿ.ಎಚ್
    ಅದು ನನ್ನ ಪತ್ರಿಕೋದ್ಯಮದ ಆರಂಭದ ದಿನಗಳು. ಒಂದಷ್ಟು ದಿನಗಳ ಟ್ರೈನಿಂಗ್ ಮುಗಿಸಿ ವರದಿಗಾರನಾಗಿ ಫೀಲ್ಡಿಗೆ ಇಳಿದಿದ್ದೆ. ಹಿರಿಯರ ಜೊತೆ ಹೋಗಿ ವರದಿಗಾರಿಕೆಯ ಅ ಆ ಇ ಈ ಕಲಿಯುತ್ತಿದ್ದ ನಾನು. ಹಿರಿಯ ವರದಿಗಾರರೊಬ್ಬರ ಜೊತೆ ಹೋಗಿ ಅಂದಿನ ಅಸೈನ್ ಮೆಂಟ್ ಮುಗಿಸಿಕೊಂಡು ಬಂದು ಆಫೀಸ್‍ನಲ್ಲಿ ಕುಳಿತಿದ್ದೆ. ನನ್ನ ಸೀನಿಯರ್ ಬಂದು ಎಂ.ಜಿ.ರೋಡ್‍ಗೆ ಹೋಗಿ, ದೊರೆಸ್ವಾಮಿ ಮಾತಾಡ್ತಾರೆ ಅಂದಿದ್ದರು. ಯಾವ ದೊರೆಸ್ವಾಮಿ….? ಏನು ಮಾತು..? ಒಂದೂ ಅರ್ಥವಾಗದೆ ಕ್ಯಾಮರಾಮನ್ ಜೊತೆ ಎಂ.ಜಿ.ರಸ್ತೆ ಗಾಂಧಿ ಪ್ರತಿಮೆ ತಲುಪಿದ್ದೆ. ಕೃಶ ಕಾಯದ ಹಿರಿಯ ಜೀವ ಎಂ.ಜಿ.ರಸ್ತೆಯ ಗಾಂಧಿ ಪ್ರತಿಮೆ ಮುಂದೆ ಕುರ್ಚಿ ಹಾಕಿಕೊಂಡು ಕೂತಿದ್ದರು. ಹೆಗಲ ಮೇಲೆ ಹಸಿರು ಟವೆಲ್, ಸುತ್ತಲು ರೈತರ ಗುಂಪು. 2008ರಲ್ಲಿ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಸರ್ಕಾರ ಎರಡೇ ದಿನದಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿ ವಿವಾದ ಮಾಡಿಕೊಂಡಿತ್ತು. ಅದರ ಮುಂದುವರಿದ ಭಾಗವಾಗಿ ಎಂಜಿ ರಸ್ತೆಯ ಗಾಂಧಿ ಪ್ರತಿಮೆ ಬಳಿ ರೈತರ ಜೊತೆ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಧರಣಿ ನಡೆಸುತ್ತಿದ್ದರು. ಒಬ್ಬ ವರದಿಗಾರನಾಗಿ ವೈಯುಕ್ತಿಕವಾಗಿ ನನಗೆ ಅದು ಮೊದಲ ಅಸೈನ್‍ಮೆಂಟ್ ಆಗಿತ್ತು. ಸಹಜವಾದ ಕುತೂಹಲದಲ್ಲಿ ಒಂದಷ್ಟು ಮಾಹಿತಿ ರೈತರಿಂದ ಕೇಳಿ ಪಡೆಯತೊಡಗಿದೆ. ನಾನು ಪ್ರಶ್ನೆ ಕೇಳಿ ಮಾಹಿತಿ ಪಡೆಯುವ ರೀತಿ ನನ್ನ ದಡ್ಡತನ ನೋಡಿ ಕುಳಿತಲ್ಲೇ ನಕ್ಕು ಸುಮ್ಮನಾಗಿದ್ದರು ದೊರೆ ಸ್ವಾಮಿ.

     

    ಅಷ್ಟರಲ್ಲಿ ಬಂದಿತ್ತು ಸಚಿವರ ಗೂಟದ ಕಾರು. ಅಂದಿನ ಸರ್ಕಾರದ ಪವರ್ ಫುಲ್ ಮಿನಿಸ್ಟರ್ ಶೋಭಾ ಕರಂದ್ಲಾಜೆ ಧರಣಿ ನಿರತರನ್ನ ಸಮಾಧಾನ ಪಡಿಸಿ ಸರ್ಕಾರದ ಪರವಾಗಿ ಮನವೊಲಿಸಲು ಅಲ್ಲಿಗೆ ಬಂದಿದ್ದರು. ಅವರ ಮನವೊಲಿಕೆಯ ಪ್ರಯತ್ನಕ್ಕೆ ರೈತರು ಒಪ್ಪಿಕೊಳ್ಳುವ ಲಕ್ಷಣ ಕಾಣಿಸತೊಡಗಿತ್ತು. ಅಷ್ಟರಲ್ಲಿ ಕೈಗೆ ಮೈಕು ತಗೆದುಕೊಂಡ ಶೋಭಾ ಕರಂದ್ಲಾಜೆ ಸರ್ಕಾರದ 2 ತಿಂಗಳ ಸಾಧನೆಯ ರಾಜಕೀಯ ಭಾಷಣ ಆರಂಭಿಸಿದರು. ಮಧ್ಯದಲ್ಲಿ ನಮ್ಮ ಸರ್ಕಾರ ಬೆದರಿಕೆಗೆಲ್ಲಾ ಬಗ್ಗಲ್ಲ, ಯಾರು ಸಹಾ ರೈತರ ಹೆಸರಲ್ಲಿ ರಾಜಕಾರಣ ಮಾಡಬಾರದು ಅಂತ ರಾಜಕೀಯ ಡೈಲಾಗ್ ಹೊಡೆದೇಬಿಟ್ಟರು. ಆಗ ಕೇಳಿ ಬಂತು ನೋಡಿ ನಿಲ್ಲಿಸಮ್ಮ ನಿನ್ನ ಭಾಷಣ ಅನ್ನೋ ಧ್ವನಿ. ಅದುವರೆಗೆ ಸಚಿವರ ಮಾತಿಗೆ ತಲೆ ಆಡಿಸುತ್ತ ಸುಮ್ಮನೆ ಕುಳಿತಿದ್ದ ಹಿರಿಯ ಜೀವಿ ದೊರೆಸ್ವಾಮಿ ಸಿಟ್ಟಿನಿಂದ ಗುಡುಗತೊಡಗಿದರು. ರೈತರ ಹೆಸರಲ್ಲಿ ಯಾರು ರಾಜಕಾರಣ ಮಾಡ್ತಿದಾರೆ..? ಮೊದಲು ಆ ಮಾತು ವಾಪಾಸ್ ತಗೋಳಿ, ಕ್ಷಮೆ ಕೇಳಬೇಕು ನೀವು ಅಂತ ಗುಡುಗಿದ್ದರು. ಸ್ವತಂತ್ರ ಸೇನಾನಿಯ ಕೋಪ ಕಂಡು ಸಚಿವೆ ಶೋಭಾ ಕರಂದ್ಲಾಜೆ ಅಕ್ಷರಶಃ ಬೆಚ್ಚಿ ಬಿದ್ದರು. ಸಮಜಾಯಿಷಿ ಕೊಡಲು ಮುಂದಾದ ಶೋಭಾ ಕರಂದ್ಲಾಜೆಗೆ ಮಾತನಾಡಲು ಬಿಡದೆ ಕ್ಷಮೆ ಕೇಳಿ ಅಂತ ಪಟ್ಟು ಹಿಡಿದು ಬಿಟ್ಟರು. ಮುಂದಿನ 5 ನಿಮಿಷ ನಡೆದ ಅಷ್ಟು ಘಟನೆ ಇಂದಿಗೂ ನನ್ನ ಕಣ್ಣಿಗೆ ಕಟ್ಟಿದಂತಿದೆ. ನಾನು ಸಚಿವೆ ಇವರ ಮುಂದೆ ಕ್ಷಮೆ ಕೇಳೋದ..? ಅನ್ನೋ ರೀತಿ ವರ್ತಿಸಿದ್ದರು ಶೋಭಾ ಕರಂದ್ಲಾಜೆ. ಕ್ಷಮೆ ಕೇಳಿ ಮಾತು ವಾಪಸ್ ತೆಗೆದುಕೊಳ್ಳುವವರೆಗೆ ನೀವು ಮಾತನಾಡುವುದು ಬೇಡ ಇಲ್ಲಿಂದ ಹೊರಡಲು ನಾವು ಬಿಡಲ್ಲ ಅಂತ ದೊರೆಸ್ವಾಮಿ ಪಟ್ಟು ಹಿಡಿದು ಬಿಟ್ಟರು. ಮನವೊಲಿಸಲು ಮುಂದಾದ ಶೋಭಾ ಕರಂದ್ಲಾಜೆ ಪರಿಪರಿಯಾಗಿ ಕೇಳಿಕೊಂಡರು. ದೊರೆ ಸ್ವಾಮಿ ಹಾಗೂ ರೈತರ ಮುಂದೆ ಪೇಚಿಗೆ ಸಿಲುಕಿದ್ದ ಸಚಿವೆ ಅಸಾಹಯಕತೆಯಿಂದ ಕಣ್ಣೀರು ಹಾಕತೊಡಗಿದರು. ಕೊನೆಗೂ ಕ್ಷಮೆ ಕೇಳಿ ಕಣ್ಣೀರು ಒರೆಸಿಕೊಂಡು ಹೊರಟು ಹೋಗಿದ್ದರು. ಅಷ್ಟೊತ್ತು ಬೆಕ್ಕಸ ಬೆರಗಾಗಿ ಅಷ್ಟು ಘಟನೆಯನ್ನ ಕಣ್ಣು ತುಂಬಿಕೊಂಡಿದ್ದ ನನಗೆ ಒಳಗಿದ್ದ ವರದಿಗಾರ ಜಾಗೃತನಾಗಿದ್ದ. ನನ್ನ ಮೊದಲ ಅಸೈನ್‍ಮೆಂಟ್‍ನಲ್ಲಿ ಸಚಿವೆ ಕಣ್ಣೀರಿಟ್ಟ ಎಕ್ಸ್‍ಕ್ಲೂಸಿವ್ ಸುದ್ದಿ. ಆಗಿನ್ನು ವಾಟ್ಸಪ್ ಬಂದಿರಲಿಲ್ಲ ನಡೆದ ಅಷ್ಟು ಘಟನೆ ಟೆಕ್ಸ್ಟ್ ಮೆಸೆಜನನ್ನ ಕಚೇರಿಗೆ ಟೈಪ್ ಮಾಡತೊಡಗಿದ್ದೆ. ಅದೇ ಜೋಶ್ ನಲ್ಲಿ ಹಿಂದೆ ತಿರುಗಿ ನೋಡ್ತೋನಿ ನನ್ನ ಜೊತೆಗೆ ಬಂದಿದ್ದ ಕ್ಯಾಮರಾಮೆನ್ ನಾಪತ್ತೆ. ಗಾಬರಿಯಲ್ಲಿ ಕರೆ ಮಾಡಿದರೆ ಕಾಲ್ ವೈಟಿಂಗ್. 3-4 ನಿಮಿಷ ಬಿಟ್ಟು ಬಂದ ಆ ಸೀನಿಯರ್ ಕ್ಯಾಮರಾಮೆನ್ ಏನ್ರಿ ಅಂದಿದ್ದರು. ಏನಾ..? ಕಳೆದ 8-10 ನಿಮಿಷದ ಆ ಘಟನೆ ದೊಡ್ಡ ಸುದ್ದಿ ಅಲ್ವಾ ನಮ್ಮದೊಂದೇ ಕ್ಯಾಮರಾ ಇದ್ದಿದ್ದು. ಎಕ್ಸ್ ಕ್ಲೂಸಿವ್ ಸುದ್ದಿ ದೊರೆಸ್ವಾಮಿ ಬೈದಿದ್ದು, ಶೋಭಾ ಕರಂದ್ಲಾಜೆ ಅತ್ತಿದ್ದು…. ಅಂದೆ.

     

    ಹೌದಾ ಶೋಭಾ ಕರಂದ್ಲಾಜೆ ಬಂದಿದ್ದರಾ…? ಸೀನಿಯರ್ ಕ್ಯಾಮರಾಮೆನ್ ಮಾತು ಕೇಳಿ ನಾನು ಗಾಬರಿ. ನನಗೆ ಅವಾಗಲೇ ಯಾವುದೋ ಕಾಲ್ ಬಂತು ನಾನು ಮಾತನಾಡಿಕೊಂಡು ಚಿನ್ನಸ್ವಾಮಿ ಸ್ಟೇಡಿಯಂ ಕಡೆ ಹೋಗಿದ್ದೆ ಅಂದು ಬಿಡಬೇಕಾ ಪಾರ್ಟಿ. ನನ್ನ ಪತ್ರಿಕೋದ್ಯಮದ ಮೊದಲ ವರದಿಯ ಮೊದಲ ಎಕ್ಸ್ ಕ್ಲೂಸಿವ್ ಸುದ್ದಿ ಅಲ್ಲೇ ಮುಗಿದು ಹೋಗಿತ್ತು. ಯಾರಿಗೂ ಹೇಳಬೇಡಿ ಆಫೀಸಲ್ಲಿ ಗೊತ್ತಾದರೆ ಇಬ್ಬರಿಗೆ ಸಮಸ್ಯೆ ಅಂತ ಸೀನಿಯರ್ ಕ್ಯಾಮರಾಮೆನ್ ಮಾತಿಗೆ ನಾನು ಸೈಲೆಂಟಾಗಲೇಬೇಕಾಯ್ತು. ದೊರೆಸ್ವಾಮಿ ಆ ಕ್ಷಣಕ್ಕೆ ನನಗೆ ಹೀರೋ ಆಗಿ ಕಂಡಿದ್ದರು. ಸರ್ಕಾರದ ಪವರ್‍ಫುಲ್ ಸಚಿವೆ ಅತ್ತುಕರೆದು ಕ್ಷಮೆ ಕೇಳುವಂತೆ ಮಾಡಿದ್ದ ಅವರ ಮಾತು, ವರ್ತನೆ ಸಹಜವಾಗಿಯೇ ದೊರೆಸ್ವಾಮಿ ನನಗೆ ಹೀರೊ ಆಗಿ ಕಾಣತೊಡಗಿದ್ದರು. ಆ ನಂತರ ಸಾಕಷ್ಟು ಬಾರಿ ಬೇರೆ ಬೇರೆ ಕಾರ್ಯಕ್ರಮದಲ್ಲಿ ಅವರನ್ನ ಭೇಟಿಯಾಗಿದ್ದೆ ಮಾತನಾಡಿಸಿದ್ದೆ. ಎಲ್ಲ ಸಂದರ್ಭದಲ್ಲೂ ಒಂದೇ ರೀತಿಯ ನಗು. ತೆಳ್ಳನೆಯ ಕೈಗಳನ್ನ ಮುಂದಕ್ಕೆ ಚಾಚಿ ಶೇಕ್ ಹ್ಯಾಂಡ್ ಮಾಡಿದರೆ ಏನೋ ಒಂದು ರೀತಿಯ ವಾತ್ಸಲ್ಯವಿರುತ್ತಿತ್ತು.

    ಹೋರಾಟದ ಪ್ರವೃತ್ತಿಯ ದೊರೆಸ್ವಾಮಿ ತಮ್ಮ 100ನೇ ವಯಸ್ಸಿನಲ್ಲೂ ವ್ಯವಸ್ಥೆಯ ವಿರುದ್ದ ಧ್ವನಿ ಎತ್ತುವ ತಮ್ಮ ನಿಲುವನ್ನ ಬದಲಿಸಲಿಲ್ಲ. ಆದರೆ ಅವರ ಸಾವಿನ ಸುದ್ದಿ ಕೇಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕೆಲವು ಯುವಕ ಯುವತಿಯರ ವಿಕೃತಿ ಮುಗಿಲು ಮುಟ್ಟಿತ್ತು. ಹೋದೆಯಾ ಮತ್ತೆ ಯಾವತ್ತು ಈ ದೇಶದಲ್ಲಿ ಹುಟ್ಟಿ ಬರಬೇಡ ದೇಶದ್ರೋಹಿ ಅಂತ ತಲೆ ಬುಡವಿಲ್ಲದೆ ತಮ್ಮ ವಿಕೃತಿಯನ್ನ ಕಾರಿಕೊಂಡಿದ್ದಾರೆ. ಹಿರಿಯ ಮರ ಎಡಕ್ಕೆ ಬಿತ್ತಾ…? ಬಲಕ್ಕೆ ಬೀಳೋ ಚಾನ್ಸೆ ಇಲ್ಲ. ಪಾಪಿ, ದೇಶದ್ರೋಹಿ, ಧರ್ಮ ದ್ರೋಹಿ ಒಂದಾ..? ಎರಡಾ…?ಯುವಕ ಯುವತಿಯರ ಫೇಸ್‍ಬುಕ್ ಹಾಗೂ ವಾಟ್ಸಪ್ ಯುನಿವರ್ಸಿಟಿಯ ಅಷ್ಟು ಅಜ್ಞಾನ ಹಾಗೂ ವಿಕೃತಿ ಎಲ್ಲವು ಸಾಮಾಜಿಕ ಜಾಲತಾಣದಲ್ಲಿ ಇನ್ನಿಲ್ಲದಂತೆ ತನ್ನ ವಿಕೃತಿಯನ್ನು ಮೆರೆದಿತ್ತು.

    104 ವರ್ಷಗಳ ತುಂಬು ಜೀವನ ನಡೆಸಿದ ಹೆಚ್.ಎಸ್.ದೊರೆಸ್ವಾಮಿ. ಈಗಿನ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನವರು. ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಶುದ್ಧ ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದವರು. ತಮ್ಮ 5ನೇ ವಯಸ್ಸಿನೊಳಗೆ ತಂದೆ ತಾಯಿ ಇಬ್ಬರನ್ನು ಕಳೆದುಕೊಂಡಿದ್ದರು. ಅಜ್ಜ ಶಾನುಭೋಗ ಶಾಮಣ್ಣರ ಗರಡಿಯಲ್ಲಿ ಬೆಳೆದ ದೊರೆಸ್ವಾಮಿವರಿಗೆ ಶಾನುಭೋಗಿಕೆಯ ಗತ್ತು ಇರಲಿಲ್ಲ, ಬ್ರಾಹ್ಮಣ್ಯದ ಮಡಿವಂತಿಕೆಯು ಇರಲಿಲ್ಲ. ಎಲ್ಲರೊಳಗೊಂದಾಗು ಮಂಕುತಿಮ್ಮ ಎಂಬಂತೆ ಬೆರೆತು ಬೆಳೆದವರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಹಿರಿಯರ ಬಗ್ಗೆ ಮಾತನಾಡುವ ಅರ್ಹತೆ ನಮ್ಮಂತವರಿಗೆ ಖಂಡಿತ ಇಲ್ಲ. ಅವರ ಪರಿಶ್ರಮ, ತ್ಯಾಗ, ಬಲಿದಾನದ ಫಲವೇ ಇವತ್ತಿನ ನಮ್ಮ ಸ್ವೇಚ್ಛೆ ದೊರೆಸ್ವಾಮಿ ಅಂದಿನ ಬ್ರಿಟಿಷ್ ಸರ್ಕಾರದ ದಾಖಲೆಗಳಿದ್ದ ರೆಕಾರ್ಡ್ ರೂಂಗೆ ಟೈಂ ಬಾಂಬ್ ಇಟ್ಟು ಸ್ಫೋಟಿಸಿದ್ದರಂತೆ. ಇಲಿಯ ಬಾಲಕ್ಕೆ ಬಾಂಬು ಕಟ್ಟಿ ಸ್ಫೋಟಿಸಿದ್ದರಂತೆ. ರಾಗಿ ಚೆಲ್ಲಿ ಚಳುವಳಿಯಲ್ಲಿ ಭಾಗವಹಿಸಿದ್ದರಂತೆ ಅನ್ನೋ ವಾದ ಪ್ರತಿವಾದ ಕಳೆದ 2 ವರ್ಷದಲ್ಲಿ ಬಾರಿ ಸದ್ದು ಮಾಡಿತ್ತು. ಸಿಎಎ, ಎನ್.ಆರ್.ಸಿ ಹೋರಾಟದ ಪರವಹಿಸಿ ಹೆಚ್.ಎಸ್.ದೊರೆಸ್ವಾಮಿ ಮಾತನಾಡಿದ್ದರು ಅನ್ನೋದೆ ವಿವಾದದ ಮೂಲ. ಆಗಲೇ ನೋಡಿ ಶುರುವಾಗಿದ್ದು ದೊರೆಸ್ವಾಮಿ ಸ್ವತಂತ್ರ ಹೋರಾಟಗಾರರಲ್ಲ, ನಕಲಿ ಹೋರಾಟಗಾರ, ಅವರಿಗೆ 100 ವರ್ಷ ಆಗಿದೆ ಅನ್ನೋ ದಾಖಲೆ ಎಲ್ಲಿದೆ..? ಸ್ವತಂತ್ರ ಹೋರಾಟಗಾರ ಅನ್ನೋಕೆ ಏನು ಪ್ರೂಫಿದೆ…? ಒಂದಾ..? ಎರಡಾ..? ಅವರ ವಿರುದ್ಧದ ಅಪಪ್ರಚಾರ. ಒಂದಂತೂ ಸ್ಪಷ್ಟ ಹೆಚ್.ಎಸ್.ದೊರೆಸ್ವಾಮಿ 104 ವರ್ಷ ಬದುಕಿದ್ದರು. ಸೋಶಿಯಲ್ ಮೀಡಿಯಾ ಯುನಿವರ್ಸಿಟಿಯ ದಡ್ಡರು ಹೆಚ್ಚೆಂದರೆ 10 ವರ್ಷದ ಎಳಸುಗಳು. ಇವರಿಗೆ ಈಗ ದೊರೆಸ್ವಾಮಿ ಬಗ್ಗೆ ಅನುಮಾನ ಬಂದರೆ ಅದು ಇವರ ಅವಿವೇಕಿತನ ಹೊರತು ದೊರೆಸ್ವಾಮಿಯವರ ತಪ್ಪಲ್ಲ. 90 ವರ್ಷ ಕಾಲ ಸ್ವತಂತ್ರ ಹೋರಾಟಗಾರರಾಗಿದ್ದ ಯಾರು ಪ್ರಶ್ನಿಸದ ದೊರೆಸ್ವಾಮಿಯವರ ಬಗ್ಗೆ 10 ವರ್ಷದ ಎಳಸುಗಳು ಬಾಯಿಗೆ ಬಂದಂತೆ ಕಾಮೆಂಟ್ ಮಾಡಿದ್ದು ನಿಜಕ್ಕೂ ದುರಂತ.

    ಸ್ವತಂತ್ರ ಸೇನಾನಿ ತಮ್ಮ ಸ್ವತಂತ್ರ ಹೋರಾಟದ ಸಾಕ್ಷ್ಯವನ್ನ ಈ ಇಳಿವಯಸ್ಸಿನಲ್ಲಿ ಯಾರಿಗೂ ತೋರಿಸಬೇಕಿರಲಿಲ್ಲ. ಅವರ ಜೀವನ ಅವರು ಬದುಕಿದ ರೀತಿಯೆ ಅವರ ಬಗ್ಗೆ ಟೀಕೆ ಮಾಡಿದವರಿಗೆ ಉತ್ತರ. ನಾನೊಬ್ಬ ಸ್ವತಂತ್ರ ಹೋರಾಟಗಾರ ಅಂತ ಎಲ್ಲೂ ಲಾಬಿ ಮಾಡಲಿಲ್ಲ. ಬಿಡಿಎ ಸೈಟಿಗೆ ಅರ್ಜಿ ಹಾಕಲಿಲ್ಲ. ಸಾಯುವವರೆಗೆ ಬಾಡಿಗೆ ಮನೆಯಲ್ಲೆ ಬದುಕಿದ ಬಡಜೀವ ಅದು. ಸ್ವಂತದ್ದೊಂದು ಕಾರು ಇಲ್ಲದೆ ಬಿಎಂಟಿಸಿ ಬಸ್ಸಿನಲ್ಲಿ ತಮ್ಮ 100 ನೇ ವಯಸ್ಸಿನಲ್ಲೂ ಓಡಾಡುತ್ತಿದ್ದ ಆದರ್ಶ ಪುರುಷ ಹೆಚ್.ಎಸ್.ದೊರೆಸ್ವಾಮಿ. 1947ಕ್ಕೂ ಮೊದಲೇ ಸ್ವತಂತ್ರ ಹೋರಾಟ ನಡೆಸಿದ ಪುಣ್ಯಾತ್ಮನಿಂದ 2021ರಲ್ಲಿ ನೈತಿಕತೆ ಮೀರಿ ಇನ್ನೇನು ನಿರೀಕ್ಷಿಸಲು ಸಾಧ್ಯ…?

    ಅವರು ಯಾವುದೇ ತತ್ವ ಸಿದ್ಧಾಂತಕ್ಕೆ ಕಟ್ಟು ಬಿದ್ದವರಲ್ಲ. ನ್ಯಾಯ, ನೀತಿ, ಸತ್ಯ, ಧರ್ಮ, ಪ್ರಾಮಾಣಿಕತೆ ಎಂದು ಕಡೆಯವರೆಗೆ ಬದುಕಿದ ಪ್ರಾಮಾಣಿಕ ವ್ಯಕ್ತಿತ್ವ ದೊರೆಸ್ವಾಮಿಯವರದು. ಮುಲಾಜಿಲ್ಲದೆ ಸರ್ಕಾರವನ್ನು ಮುಖ್ಯಮಂತ್ರಿಗಳನ್ನು, ಸಚಿವರನ್ನು ಬಹಿರಂಗವಾಗಿ ಟೀಕಿಸಿದವರು ದೊರೆಸ್ವಾಮಿ. ರಾಜ್ಯದ ಸಾಕ್ಷಿ ಪ್ರಜ್ಞೆಯಂತೆ ಬಾಳಿ ಬದುಕಿದವರು ದೊರೆಸ್ವಾಮಿ. ಕನಕಪುರದವರಾದರೂ ಮುಲಾಜಿಲ್ಲದೆ ಡಿ.ಕೆ.ಶಿವಕುಮಾರ್ ಅವರನ್ನು ಹಿಗ್ಗಾಮುಗ್ಗಾ ಟೀಕಿಸಿದ್ದರು. ಸಿದ್ದರಾಮಯ್ಯ ಆಪ್ತರಾಗಿದ್ದರೂ ಮುಖ್ಯಮಂತ್ರಿಯಾಗಿದ್ದಾಗಲೇ ಅವರ ಸರ್ಕಾರದ ಕೆಲವು ತೀರ್ಮಾನಗಳ ವಿರುದ್ಧ ಮುಲಾಜಿಲ್ಲದೇ ಜಾಡಿಸಿದ್ದರು. ಇದನ್ನೂ ಓದಿ: ನನಗೆ 104 ವಯಸ್ಸು, ಹಾಸಿಗೆ ವೇಸ್ಟ್ ಮಾಡ್ಬೇಡಿ, ಯುವಕರಿಗೆ ನೀಡಿ ಅಂತಿದ್ರು- ದೊರೆಸ್ವಾಮಿ ಬಗ್ಗೆ ಡಾ.ಮಂಜುನಾಥ್ ಮಾತು

    ದೊರೆಸ್ವಾಮಿಯವರ ಬಗ್ಗೆ ತಿಳಿಯಬೇಕಾದ್ದು ಸಾಕಷ್ಟಿದೆ. ಸ್ವತಂತ್ರ ಹೋರಾಟಗಾರ ಅನ್ನೋ ಕಾರಣಕ್ಕೆ ಚುನಾವಣೆಗೆ ನಿಂತು ಗೆದ್ದು ಅಧಿಕಾರ ಅನುಭವಿಸಿದವರು ಸಾಕಷ್ಟು ಜನರಿದ್ದಾರೆ. ನಮ್ಮ ಅಪ್ಪ ಫ್ರೀಡಂ ಫೈಟರ್, ನಮ್ಮ ಅಜ್ಜ ಫ್ರೀಡಂ ಫೈಟರ್ ಎಂದುಕೊಂಡೇ ರಾಜಕೀಯ ಬೇಳೆ ಬೇಯಿಸಿಕೊಂಡ ಸಾಕಷ್ಟು ಜನರು ಈಗಲೂ ಇದ್ದಾರೆ. ಆದರೆ ತಮ್ಮ ಸ್ವತಂತ್ರ ಹೋರಾಟದ ನೇಮ್ ಪ್ಲೇಟ್ ಎಲ್ಲೂ ಬಳಸದ ಸಾತ್ವಿಕ ಮನುಷ್ಯ ದೊರೆಸ್ವಾಮಿ.

    ಸ್ವತಂತ್ರ ಪೂರ್ವದ ಕನ್ನಡದ ಜನಪ್ರಿಯ ಪತ್ರಿಕೆ ಪೌರವಾಣಿ ವರದಿಗಾರರಾಗಿ ಜನಪ್ರಿಯರಾಗಿದ್ದರು. 1942ರಲ್ಲಿ ಬೆಂಗಳೂರಿನ ಪ್ರೌಢಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ದೊರಸ್ವಾಮಿಯವರು ಅದೇ ವರ್ಷ ಆಗಸ್ಟ್ ನಲ್ಲಿ ಆರಂಭವಾದ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಕಾರ್ಮಿಕ ಹೋರಾಟದಲ್ಲೂ ಸಕ್ರಿಯವಾಗಿದ್ದರು. ಆದರೆ ಎಂದೂ ತಮ್ಮ ಸ್ವತಂತ್ರ ಹೋರಾಟದ ಬ್ಯಾಡ್ಜನ್ನು ಸ್ವಾರ್ಥಕ್ಕೆ ಬಳಸಲಿಲ್ಲ. ಸಹೋದರ ಸೀತಾರಾಂ ಬೆಂಗಳೂರು ಮೇಯರ್ ಆದರೂ ದೊರೆಸ್ವಾಮಿಯವರು ಎಂದೂ ರಾಜಕೀಯ ರಾಡಿಯಲ್ಲಿ ಕಾಲಿಟ್ಟವರಲ್ಲ. ದೊರೆಸ್ವಾಮಿವರನ್ನ ಏನಾದರೂ ಮಾಡಿ ಶಾಸನಸಭೆಗೆ ತರಬೇಕು ಅಂತ ಒಬ್ಬರಲ್ಲ ನಾಲ್ಕು ಜನ ಮುಖ್ಯಮಂತ್ರಿಗಳು ಪ್ರಯತ್ನಿಸಿ ಸೋತಿದ್ದರು. ಅಂದಿನ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಶತಾಯಗತಾಯ ದೊರೆಸ್ವಾಮಿಯವರನ್ನ ಎಂಎಲ್‍ಸಿ ಮಾಡುವ ಮಾತನಾಡಿದ್ದರು. ಆದರೆ ಒಂದು ಕಂಡೀಷನ್ ಹಾಕಿ ಎಂಥದ್ದೇ ಸಂದರ್ಭ ಬಂದರೂ ನನ್ನ ಪರವಾದ ಧ್ವನಿಯಾಗಿರಬೇಕು ಎಂದಿದ್ದರಂತೆ. ಒಂದು ಹಂತದಲ್ಲಿ ಮುಖ್ಯಮಂತ್ರಿಗಳ ಮಾತಿಗೆ ಒಪ್ಪಿದ್ದ ದೊರೆಸ್ವಾಮಿಯವರು ಯಾವಾಗ ವ್ಯಕ್ತಿಗತವಾಗಿ ನನ್ನ ಪರ ಇರಬೇಕು ಎಂದರೋ ಆಗಲೆ ಬಿಲ್‍ಕುಲ್ ನನಗೆ ಎಂಎಲ್‍ಸಿ ಸ್ಥಾನ ಬೇಡವೇ ಬೇಡ ಎಂದು ಕಡ್ಡಿ ಮುರಿದಂತೆ ಹೇಳಿದ್ದರು. ಆನಂತರ ನಿಜಲಿಂಗಪ್ಪ, ರಾಮಕೃಷ್ಣ ಹೆಗ್ಗಡೆ, ದೇವೇಗೌಡರು ಎಲ್ಲರೂ ದೊರೆಸ್ವಾಮಿಯವರನ್ನ ಶಾಸನ ಸಭೆಗೆ ಕರೆತರುವ ಪ್ರಯತ್ನ ಮಾಡಿ ಸೋತಿದ್ದರು.

    ದೊರೆಸ್ವಾಮಿಯವರ ಪರ ವಿರೋಧ ವಾದ ಏನೇ ಇರಲಿ ಆದರೆ 100 ವರ್ಷದ ತುಂಬು ಜೀವನ ನಡೆಸಿದ ಸ್ವತಂತ್ರ ಸೇನಾನಿಯನ್ನ ಇಂದಿನ ರಾಜಕೀಯ ಲೆಕ್ಕಾಚಾರದ ತಕ್ಕಡಿಯಲ್ಲಿಟ್ಟು ತೂಗುವುದು ಮೂರ್ಖತನ. ಅವರ ಸ್ವಾಭಿಮಾನದ ಬದುಕಿಗೊಂದು ಚಿಕ್ಕ ಸ್ಯಾಂಪಲ್. ತಮ್ಮ 100 ನೇ ವಯಸ್ಸಿನಲ್ಲು ಬಾಡಿಗೆ ಮನೆಯಲ್ಲಿಯೇ ಬದುಕುತ್ತಿದ್ದ ದೊರೆಸ್ವಾಮಿ ಯವರಿಗೆ ಒಂದು ನಿವೇಶನ ಕೊಡುವ, ಸ್ವಂತದ್ದೊಂದು ಸೂರು ಮಾಡಿಕೊಳ್ಳಿ ಅನ್ನುವ ಧೈರ್ಯ ಯಾವ ಮುಖ್ಯಮಂತ್ರಿಗಳಿಗೂ ಬರಲಿಲ್ಲ. ಸಿದ್ದರಾಮಯ್ಯ ಒಂದು ಹಂತದಲ್ಲಿ ತಮ್ಮ ವಿಜಯನಗರ ನಿವಾಸದ ಪಕ್ಕದ ಮನೆಯೊಂದನ್ನ ದೊರೆಸ್ವಾಮಿಯವರಿಗೆ ಕೊಡಿಸಲು ಮುಂದಾಗಿದ್ದರು. ಅವರು ಇರುವಷ್ಟು ದಿನ ಆ ಮನೆಯಲ್ಲಿ ಇರಲಿ ಯಾಕೆ ಬಾಡಿಗೆ ಮನೆಯಲ್ಲಿ ಇರಬೇಕು ಎಂದು ತಮ್ಮ ಆಪ್ತರ ಮೂಲಕ ದೊರೆಸ್ವಾಮಿಯವರ ಪತ್ನಿಗೆ ಹೇಳಿಸಿದ್ದರು. ದೊರೆಸ್ವಾಮಿಯವರ ಪತ್ನಿ ಈ ವಿಷಯ ಪ್ರಸ್ತಾಪಿಸುತ್ತಿದ್ದಂತೆ ಕೋಪಗೊಂಡ ದೊರೆಸ್ವಾಮಿಯವರು ನೀನು ಬೇಕಾದರೆ ಹೋಗು, ಅಂತಹ ಪರಿಸ್ಥಿತಿ ಬಂದರೆ ನಾನು ಗಾಂಧಿ ಭವನದಲ್ಲಿ ಇರುತ್ತೇನೆ ಎಂದಿದ್ದರು. ಹೀಗೆ ಸ್ವಾಭಿಮಾನದ ಬದಕು ಸವೆಸಿದ ದೊರೆಸ್ವಾಮಿ ಹೊರಟು ಹೋಗಿದ್ದಾರೆ. ಅಂತವರ ಸಾವನ್ನು ಸಂಭ್ರಮಿಸುವ ಸಣ್ಣತನ ನಿಜಕ್ಕೂ ದುರಂತ. ಇದ್ದಷ್ಟು ದಿನ ನ್ಯಾಯ, ನೀತಿ, ಪ್ರಾಮಾಣಿಕತೆ ಎಂದೇ ಬದುಕಿದ ಕಿರಿಯರನ್ನು ಹರಸಿದ ಹಿರಿಯ ಜೀವ ನಮ್ಮನ್ನ ಅಗಲಿದೆ. ಹರಸಿ ಹೋದ ಹಿರಿಯರೇ ಕ್ಷಮಿಸಿ ಬಿಡಿ.

    [ಈ ಬರಹದಲ್ಲಿ ಪ್ರಕಟವಾಗಿರುವ ಅಭಿಪ್ರಾಯಗಳು ಲೇಖಕರದ್ದು.]

  • ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆಗೆ ಸನ್ಮಾನ

    ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆಗೆ ಸನ್ಮಾನ

    ಹುಬ್ಬಳ್ಳಿ: ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ, ಹುಬ್ಬಳ್ಳಿ ಸಾಯಿನಗರದ ಟೀಚರ್ಸ್ ಕಾಲನಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.

    ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯ ಕಾರ್ಡಿನಡಿ ಲಭ್ಯವಾಗುವ ಔಷಧಗಳನ್ನು ಬೆಂಗಳೂರಿನಿಂದ ತೆಗೆದುಕೊಂಡು ಬರುವುದು ಕಷ್ಟವಾಗುತ್ತದೆ. ಕಾರ್ಡನ್ನು ಹುಬ್ಬಳ್ಳಿಗೆ ವರ್ಗಾಯಿಸುವಂತೆ ಇದೇ ವೇಳೆ ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ಬೆಂಗಳೂರಿನ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ಕಚೇರಿಗೆ ಸಂಪರ್ಕಿಸಿ ಕಾರ್ಡ್ ವರ್ಗಾವಣೆ ಮಾಡಿಸಿ ಕೊಡುವುದಾಗಿ ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಪ್ರಕಾಶ್ ನಾಸಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

  • ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಪಂಡಿತ್ ಸುಧಾಕರ ಚತುರ್ವೇದಿ ನಿಧನ

    ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಪಂಡಿತ್ ಸುಧಾಕರ ಚತುರ್ವೇದಿ ನಿಧನ

    _ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿ ಬೆಸ್ಟ್ ಫ್ರೆಂಡ್

    ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ವಿದ್ವಾಂಸ, ಶತಾಯುಷಿ ಪಂಡಿತ್ ಸುಧಾಕರ ಚತುರ್ವೇದಿ ಅವರು ಇಂದು ಬೆಳಗ್ಗೆ ದೈವಾಧೀನರಾಗಿದ್ದಾರೆ.

    ತುಮಕೂರಿನ ಕ್ಯಾತಸಂದ್ರದಲ್ಲಿ 20ನೇ ಏಪ್ರಿಲ್ 1897ರಲ್ಲಿ ಜನಿಸಿದ ಸುಧಾಕರ ಚತುರ್ವೇದಿ ಅವರು 125 ವರ್ಷ ಬದುಕಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ, ಗಾಂಧೀಜಿಯವರ ಬೆಸ್ಟ್ ಫ್ರೆಂಡ್ ಎನಿಸಿಕೊಂಡಿದ್ದರು. ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಚಳುವಳಿಯಾದ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಪ್ರತ್ಯಕ್ಷದರ್ಶಿಗಳೂ ಆಗಿದ್ದರು. ಜೊತೆಗೆ ದೇಶಕ್ಕಾಗಿ ಮಡಿದ ಹುತಾತ್ಮರಿಗೆ ಸಂಸ್ಕಾರ ಮಾಡುತ್ತಿದ್ದರು.

    ಸುಧಾಕರ ಚತುರ್ವೇದಿ ಅವರು ವೀರಸನ್ಯಾಸಿ ಸ್ವಾಮಿ ಶ್ರೀ ಶ್ರದ್ಧಾನಂದರ ಶಿಷ್ಯರಾಗಿ ವೇದಗಳ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ವೇದ ಪ್ರಚಾರಕ್ಕಾಗಿ ಸುಮಾರು ಐವತ್ತಕ್ಕೂ ಹೆಚ್ಚು ಕೃತಿಗಳನ್ನು ನಾಲ್ಕು ಭಾಷೆಗಳಲ್ಲಿ ರಚಿಸಿದ್ದಾರೆ. ಋಗ್ವೇದ ದರ್ಶನ ಭಾಗ-1, ಭಗವಾನ್ ಶ್ರೀರಾಮಚಂದ್ರ, ವೇದೋಕ್ತ ಜೀವನ ಪಥ, ಉಪನಿಷತ್ ಭಾಷ್ಯ, ಮುಂತಾದವುಗಳು ಇವರ ಜನಪ್ರಿಯ ಕೃತಿಗಳು. ಇದರ ಜೊತೆಗೆ ಇವರಿಗೆ ಅನೇಕ ಪ್ರಶಸ್ತಿಗಳು ಬಿರುದುಗಳು ನೆನಪಿನ ಫಲಕಗಳು ಸಂದಿವೆ.

    ಶಿಷ್ಯರ ಜೊತೆ ವಾರಕ್ಕೊಮ್ಮೆ ಸತ್ಸಂಗವನ್ನು ನಡೆಸುತ್ತಾ, ವಿಚಾರ ಮಂಥನ ನಗಿಸುತ್ತಿರುವುದೇ ಶತಾಯುಷಿಗಳ ಆರೋಗ್ಯದ ಗುಟ್ಟು ಎಂಬುದು ಕುಟುಂಬಸ್ಥರ ಅಭಿಪ್ರಾಯವಾಗಿದೆ.

  • ಮತ್ತೊಂದು ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಡಿ-ಬಾಸ್

    ಮತ್ತೊಂದು ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಡಿ-ಬಾಸ್

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶಬ್ ಮತ್ತೊಂದು ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ನಟಸಲಿದ್ದಾರೆ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

    ದರ್ಶನ್ ಅವರ ಮತ್ತೊಂದು ಸಿನಿಮಾಗೆ ಅಡ್ವಾನ್ಸ್ ಮಾಡಿದ್ದು, ಈ ಚಿತ್ರವನ್ನು ಸಹ ನಿರ್ದೇಶಕ ತರುಣ್ ಸುಧೀರ್ ನಿರ್ದೇಶನ ಮಾಡಲಿದ್ದಾರೆ. ದರ್ಶನ್ ಅವರ ಜೊತೆ ಐತಿಹಾಸಿಕ ಸಿನಿಮಾವನ್ನು ಮಾಡಬೇಕೆಂದು ಪ್ಲ್ಯಾನ್ ಮಾಡಿದ್ದೇನೆ. ದರ್ಶನ್ ಅವರು ಹೇಗೆ ನಿರ್ಧರಿಸುತ್ತಾರೋ, ಹಾಗೆ ನಡೆಯುತ್ತೆ ಎಂದು ನಿರ್ಮಾಪಕ ಉಮಾಪತಿ ಅವರು ತಿಳಿಸಿದ್ದಾರೆ.

    ದರ್ಶನ್ ಅವರು ಎರಡು ಕಮರ್ಷಿಯಲ್ ಸಿನಿಮಾ ಮಾಡಬೇಕೆಂದು ಪ್ಲ್ಯಾನ್ ಮಾಡುತ್ತಿದ್ದಾರೆ. ಎರಡು ಕಮರ್ಷಿಯಲ್ ಸಿನಿಮಾ ಮಾಡಿ ಆದ್ಮೇಲೆ ಐತಿಹಾಸಿಕ ಅಂದರೆ ಸ್ವಾತಂತ್ರ್ಯ ಹೋರಾಟಗಾರನ ಸಿನಿಮಾವನ್ನು ಶುರು ಮಾಡಲಿದ್ದೇವೆ. ಸದ್ಯ ಆ ಕತೆ ಈಗ ಬೇರೆಯವರ ಒಡೆತನದಲ್ಲಿದೆ. ನಾವು 6 ತಿಂಗಳವರೆಗೂ ಅವರ ಬಳಿ ಮನವಿ ಮಾಡಿಕೊಂಡಿದ್ದೇವೆ. ಈಗ ಅವರು ಆ ಕತೆಯನ್ನು ಕೊಡಲು ಒಂದು ಮಟ್ಟಕ್ಕೆ ಒಪ್ಪಿಕೊಂಡಿದ್ದಾರೆ. ಆ ಕತೆ ಬಂದರೆ ಸೆಟ್ ಹಾಕದೇ ಲೈವ್ ಲೊಕೇಶನ್‍ಗೆ ಹೋಗಿ ಚಿತ್ರೀಕರಣ ಮಾಡಲಿದ್ದೇವೆ ಎಂದರು.

    ಸುರಪುರ ಶಾಸಕ ರಾಜುಗೌಡ ಅವರು ಆ ಚಿತ್ರದ ಕತೆಯನ್ನು ಕೊಡಿಸುತ್ತಿದ್ದಾರೆ. ದರ್ಶನ್ ಅವರು ಕನ್ನಡದ್ದು ಏನೇ ಇದ್ದರೂ ತಲೆ ಕೆಡಿಸಿಕೊಳ್ಳುತ್ತಾರೆ. ಬೇರೆ ಭಾಷೆ ಇದ್ದರೆ ಅಷ್ಟು ತಲೆಕೆಡಿಸಿಕೊಳ್ಳುವುದಿಲ್ಲ, ಅದನ್ನು ಪಕ್ಕಕ್ಕೆ ತಳ್ಳುತ್ತಾರೆ. ಒಟ್ಟಿನಲ್ಲಿ ಇದೊಂದು ಸ್ವಾತಂತ್ರ್ಯ ಹೋರಾಟಗಾರನ ಚಿತ್ರ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.