Tag: ಸ್ವಾತಿ ಮುತ್ತಿನ ಮಳೆ ಹನಿಯೇ

  • ಕಾಟೇರ ರಿಲೀಸ್ ದಿನವೇ ರಮ್ಯಾ ನಿರ್ಮಾಣದ ಸಿನಿಮಾ ಒಟಿಟಿಗೆ

    ಕಾಟೇರ ರಿಲೀಸ್ ದಿನವೇ ರಮ್ಯಾ ನಿರ್ಮಾಣದ ಸಿನಿಮಾ ಒಟಿಟಿಗೆ

    ಮ್ಮ ನೆಚ್ಚಿನ ನಟ ದರ್ಶನ್ ಅವರ ಸಿನಿಮಾವನ್ನು ನೋಡಲು ಅವರ ಅಭಿಮಾನಿಗಳು ತುದಿಗಾಲಲ್ಲಿ ಕಾಯುತ್ತಿದ್ದಾರೆ. ಡಿಸೆಂಬರ್ 29 ರಂದು ರಾಜ್ಯಾದ್ಯಂತ ಕಾಟೇರ ಸಿನಿಮಾ ರಿಲೀಸ್ ಆಗುತ್ತಿದೆ. ಅದೇ ದಿನದಂದು ರಮ್ಯಾ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಕೂಡ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಈ ಮಾಹಿತಿಯನ್ನು ರಮ್ಯಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

    ಸ್ವಾತಿ ಮುತ್ತಿನ ಮಳೆ ಹನಿಯೇ ವಿಚಾರದಲ್ಲಿ ರಮ್ಯಾ ತುಂಬಾನೇ ತಡಮಾಡಿದ್ದರು. ನವೆಂಬರ್ 14, 2022ರಂದೇ ತಮ್ಮ ಚೊಚ್ಚಲ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ (Swati Muthina Male Haniye)  ಸಿನಿಮಾ ಶೂಟಿಂಗ್ ಮುಗಿಸಿರುವುದಾಗಿ ರಮ್ಯಾ ಸಂಸ್ಥೆಯು ಹೇಳಿಕೊಂಡಿತ್ತು. ಆನಂತರ ಸಿನಿಮಾ ಯಾವಾಗ ರಿಲೀಸ್ (Release) ಎನ್ನುವ ಕುರಿತು ಮಾಹಿತಿ ನೀಡಿರಲಿಲ್ಲ.  2022 ನವೆಂಬರ್ ನಲ್ಲಿ ಶೂಟಿಂಗ್ ಮುಗಿಸಿದವರು 2023 ನವೆಂಬರ್ 24 ರಂದು ತಮ್ಮ ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಆದರೆ, ಒಟಿಟಿಯ ಮಾಹಿತಿ ಮಾತ್ರ ವೇಗವಾಗಿ ಹಂಚಿಕೊಂಡಿದ್ದಾರೆ.

    ಆಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವನ್ನು ರಾಜ್‌ ಬಿ ಶೆಟ್ಟಿ  (Raj B Shetty) ನಿರ್ದೇಶನ ಮಾಡಿದ್ದಾರೆ. ಸಿರಿ ರವಿಕುಮಾರ್‌ (Siri Ravikumar) ಮತ್ತು ರಾಜ್‌ ಶೆಟ್ಟಿ ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ನಿರ್ದೇಶನದ ಜೊತೆಗೆ ನಟಿಸಿರುವ ರಾಜ್ ಬಿ ಶೆಟ್ಟಿ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರವನ್ನೇ ನಿರ್ವಹಣೆ ಮಾಡಿದ್ದಾರೆ.

     

    ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದಲ್ಲಿ ರಮ್ಯಾ (Ramya) ಅವರೇ ನಟಿಸಬೇಕಿತ್ತು. ಹಾಗಂತ ಅನೌನ್ಸ್ ಕೂಡ ಆಗಿತ್ತು. ಆದರೆ, ತಾವು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ, ಕೇವಲ ನಿರ್ಮಾಪಕಿಯಾಗಿ ಮಾತ್ರ ಇರುತ್ತೇನೆ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು ರಮ್ಯಾ. ಈ ವಿಷಯ ತಿಳಿಸಿದ ಕೆಲವೇ ದಿನಗಳ ನಂತರ ಮತ್ತೊಂದು ಸಿಹಿ ಸುದ್ದಿಯನ್ನೂ ನೀಡಿ, ತಾವು ಡಾಲಿ ಧನಂಜಯ್ ಜೊತೆ ಉತ್ತರಕಾಂಡ ಚಿತ್ರದಲ್ಲಿ ನಟಿಸುತ್ತಿರುವುದಾಗಿಯೂ ತಿಳಿಸಿದ್ದರು.

  • ಸೋ ಮೂಡಿ, ಸೋ ಬ್ಯೂಟಿಫುಲ್- ರಕ್ಷಿತ್ ಶೆಟ್ಟಿ ಹೀಗಂದಿದ್ದು ಯಾರಿಗೆ?

    ಸೋ ಮೂಡಿ, ಸೋ ಬ್ಯೂಟಿಫುಲ್- ರಕ್ಷಿತ್ ಶೆಟ್ಟಿ ಹೀಗಂದಿದ್ದು ಯಾರಿಗೆ?

    ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ಅವರು ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಇದೀಗ ಟ್ರೆಂಡ್‌ನಲ್ಲಿರುವ ಸಾಲನ್ನ ಆಪ್ತರೊಬ್ಬರಿಗೆ ಹೇಳಿದ್ದಾರೆ. ಸೋ ಮೂಡಿ, ಸೋ ಬ್ಯೂಟಿಫುಲ್ ಎಂದು ಸೋಷಿಯಲ್ ಮೀಡಿಯಾದಲ್ಲಿ ರಕ್ಷಿತ್ ಬರೆದುಕೊಂಡಿರುವ ಪೋಸ್ಟ್ ಸಖತ್ ವೈರಲ್ ಆಗಿದೆ.

    ಸೋ ಮೂಡಿ, ಸೋ ಬ್ಯೂಟಿಫುಲ್ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದು ಬೇರೇ ಯಾರಿಗೋ ಅಲ್ಲ. ಗೆಳೆಯ ರಾಜ್ ಬಿ ಶೆಟ್ಟಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೈಲರ್ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ರಾಜ್, ಸಿರಿ ನಟನೆ ಬಲು ಇಷ್ಟಪಟ್ಟಿದ್ದಾರೆ.

    ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್ ಶೇರ್ ಮಾಡಿ ಸೋ ಮೂಡಿ, ಸೋ ಬ್ಯೂಟಿಫುಲ್ ರಾಜ್ ಬಿ ಶೆಟ್ಟಿ (Raj B Shetty) ಯೂ ಆರ್ ದಿ ಮ್ಯಾನ್ ಎಂದು ರಕ್ಷಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಮಾನವೀಯತೆ ಮರೆತ ಸಂಗೀತಾಗೆ ‘ಬಿಗ್ ಬಾಸ್’ ಕ್ಲಾಸ್

    ರಮ್ಯಾ (Ramya) ನಿರ್ಮಾಣದ ಚೊಚ್ಚಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Muttina Male Haniye) ಇದೇ ನವೆಂಬರ್ 24ಕ್ಕೆ ರಿಲೀಸ್ ಆಗುತ್ತಿದೆ. ಈ ಚಿತ್ರದ ಹಾಡು, ಟ್ರೈಲರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಚಿತ್ರಮಂದಿರದಲ್ಲಿ ರಾಜ್ ಬಿ ಶೆಟ್ಟಿ, ಸಿರಿ ಜೋಡಿಯ ಈ ಚಿತ್ರ ಅದೆಷ್ಟರ ಮಟ್ಟಿಗೆ ಕಮಾಲ್ ಮಾಡುತ್ತೆ ಕಾಯಬೇಕಿದೆ.

  • ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್‌ ಔಟ್‌

    ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್‌ ಔಟ್‌

    ಮೋಹಕ ತಾರೆ ರಮ್ಯಾ (Ramya) ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Muttina Male Haniye) ಟ್ರೈಲರ್ ಇದೀಗ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಟ್ರೈಲರ್ ರಿಲೀಸ್ ಸಮಾರಂಭ ನಡೆದಿದೆ. ಚಿತ್ರದ ‌ಟ್ರೈಲರ್ ಭಾವನಾತ್ಮಕವಾಗಿ ಮೂಡಿ ಬಂದಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

    ಅನಿಕೇತ್ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ (Raj B Shetty), ಪ್ರೇರಣಾ ರೋಲ್‌ನಲ್ಲಿ ಸಿರಿ ರವಿಕುಮಾರ್ (Siri Ravikumar) ಜೀವತುಂಬಿದ್ದು, ಇಡೀ ಟ್ರೈಲರ್ ಎಮೋಷನಲ್ ಆಗಿ ನೋಡುಗರಿಗೆ ಕನೆಕ್ಟ್ ಆಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ಅನಿಕೇತ್‌ಗೆ ಹೆಲ್ತ್ ಕೌನ್ಸಿಲರ್ ಆಗಿ ಪ್ರೇರಣಾ ಜೊತೆಯಾಗುತ್ತಾರೆ. ಕಥೆಯಲ್ಲಿ ಏನಾಗುತ್ತೆ ಎಂಬುದನ್ನ ಸುಳಿವು ಬಿಟ್ಟು ಕೊಡದೇ ಸಿನಿಮಾ ನೋಡುವಂತೆ ಪ್ರೇರಣೆ ನೀಡಿದೆ ಈ ಟ್ರೈಲರ್. ಭಾವನಾತ್ಮಕವಾಗಿ ಪ್ರೇಕ್ಷಕರನ್ನ ಸೆಳೆಯುತ್ತಿದೆ ಈ ಟ್ರೈಲರ್.‌

     

    View this post on Instagram

     

    A post shared by Raj B Shetty (@rajbshetty)

    ರಿಲೀಸ್ ಆಗಿರೋ ಟ್ರೈಲರ್ ನೋಡಿಯೇ ರಾಜ್ ಬಿ ಶೆಟ್ಟಿ, ಸಿರಿ ನಟನೆಗೆ ಫ್ಯಾನ್ಸ್ ಕಡೆಯಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಒಂದೊಳ್ಳೆ ವಿಭಿನ್ನ ಕಥೆಗೆ ನಟಿ ರಮ್ಯಾ ನಿರ್ಮಾಣದ ಮೂಲಕ ಸಾಥ್ ನೀಡಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಇದೇ ನವೆಂಬರ್ 24ಕ್ಕೆ ರಿಲೀಸ್ ಆಗ್ತಿದೆ.

    ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದ ಮೂಲಕ ರಮ್ಯಾ ನಟಿಯಾಗಿ ಮತ್ತೆ ಚಿತ್ರೋದ್ಯಮ ಪ್ರವೇಶಿಸಬೇಕಿತ್ತು. ಮೊದ ಮೊದಲು ಈ ಸಿನಿಮಾಗೆ ರಮ್ಯಾನೆ ನಾಯಕಿ ಎಂದು ಹೇಳಲಾಗಿತ್ತು. ಆದರೆ, ಬಳಿಕ ಚಿತ್ರದಿಂದ ಹೊರಬಂದರು. ಈ ಕುರಿತಂತೆ ಮೊನ್ನೆಯಷ್ಟೇ ರಮ್ಯಾ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ.

    ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಇದು ನನಗೆ ಬಹಳ ವಿಶೇಷವಾದ ಚಿತ್ರ. ನಿರ್ಮಾಪಕಿಯಾಗಿ ನನ್ನ ಮೊದಲ ಚಿತ್ರ ಎಂದಷ್ಟೇ ಅಲ್ಲ. ಜೀವನದ ಬಗ್ಗೆ ನನ್ನ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬದಲಿಸಿದ ವಿಷಯಾಧರಿತ ಚಿತ್ರ ಎಂದು ಸಿನಿಮಾದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಬರೆದುಕೊಂಡಿದ್ದರು. ಇದನ್ನೂ ಓದಿ:ಅದ್ದೂರಿಯಾಗಿ ನಡೆಯಿತು ಯಶ್ ಪುತ್ರನ ಬರ್ತ್‌ಡೇ

    ನಿಮ್ಮಲ್ಲಿ ಹಲವರಿಗೆ ಈ ಪ್ರಶ್ನೆ ಇದೆ ಎಂದು ನನಗೆ ತಿಳಿದಿದೆ. ನಾನು ಚಿತ್ರದಿಂದ ಹೊರಗುಳಿದದ್ದು ಏಕೆಂದರೆ ಅದು ಓಟಿಟಿಯಲ್ಲಿ ಬಿಡುಗಡೆಯಾಗುವುದೆಂದು ನಿರ್ಧರಿಸಿದ್ದೆವು. ನನ್ನ ಕಮ್‌ಬ್ಯಾಕ್ ಚಿತ್ರವು ಚಿತ್ರಮಂದಿರದಲ್ಲಿಯೇ ಬಿಡುಗಡೆಯಾಗಬೇಕೆಂದು ನಾನು ಬಯಸಿದ್ದೆ. ಚಿತ್ರವನ್ನು ಖರೀದಿಸುವುದಾಗಿ ಭರವಸೆ ನೀಡಿದ ಓಟಿಟಿ ವೇದಿಕೆಯು ನಂತರ ಹಿಂದೆ ಸರಿಯಿತು. ಕನ್ನಡದಲ್ಲಿ ಇದು ಹೆಚ್ಚಾಗಿ ನಡೆಯುತ್ತದೆ. ಆದರೆ, ನಿಮ್ಮನ್ನು ಸೇರಲು ಹಲವು ಮಾರ್ಗಗಳನ್ನು ಹುಡುಕುತ್ತೇವೆ ಎಂದು ನಟಿ ತಿಳಿಸಿದ್ದರು.

    ‘ಟೋಬಿ’ ಹೀರೋ ರಾಜ್ ಬಿ ಶೆಟ್ಟಿ ಜೊತೆ ಮೋಹಕ ತಾರೆ ರಮ್ಯಾ (Ramya) ನಟಿಸಬೇಕಿತ್ತು. ಆದರೆ ಈಗ ಅಸಲಿ ಕಾರಣವನ್ನ ತಿಳಿಸುವ ಮೂಲಕ ಗಾಸಿಪ್‌ಗೆಲ್ಲಾ ನಟಿ ಸ್ಪಷ್ಟನೆ ನೀಡಿದ್ದರು. ರಾಜ್ ಬಿ ಶೆಟ್ಟಿ, ಸಿರಿ ರವಿಕುಮಾರ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಮತ್ತು ಕೆವಿಎನ್ ಸಂಸ್ಥೆಯ ರೂವಾರಿ ಕಾರ್ತಿಕ್-ಯೋಗಿಗೆ, ರಮ್ಯಾ ಧನ್ಯವಾದಗಳನ್ನ ತಿಳಿಸಿದ್ದರು.

  • ಇಂದು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್ ರಿಲೀಸ್

    ಇಂದು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್ ರಿಲೀಸ್

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ (Ramya) ನಿರ್ಮಾಣದಲ್ಲಿ ಮೂಡಿ ಬಂದಿರುವ ಸ್ವಾತಿ ಮುತ್ತಿನ ಮಳೆ ಹನಿಯೇ (Swati Muthina Male Haniye) ಸಿನಿಮಾದ ಟ್ರೈಲರ್ ಇಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಸಂಜೆ 6 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ಮಾಲ್ ಒಂದರಲ್ಲಿ ಟ್ರೈಲರ್ (Trailer) ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಚಿತ್ರತಂಡ. ನಿರ್ಮಾಪಕಿ ರಮ್ಯಾ, ನಟ ರಾಜ್ ಬಿ ಶೆಟ್ಟಿ (Raj B Shetty), ನಟಿ ಸಿರಿ ಸೇರಿದಂತೆ ಹಲವಾರು ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.

    ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದ ಮೂಲಕ ರಮ್ಯಾ ನಟಿಯಾಗಿ ಮತ್ತೆ ಚಿತ್ರೋದ್ಯಮ ಪ್ರವೇಶಿಸಬೇಕಿತ್ತು. ಮೊದ ಮೊದಲು ಈ ಸಿನಿಮಾಗೆ ರಮ್ಯಾನೆ ನಾಯಕಿ ಎಂದು ಹೇಳಲಾಗಿತ್ತು. ಆದರೆ, ಬಳಿಕ ಚಿತ್ರದಿಂದ ಹೊರಬಂದರು. ಈ ಕುರಿತಂತೆ ಮೊನ್ನೆಯಷ್ಟೇ ರಮ್ಯಾ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ.

    ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಇದು ನನಗೆ ಬಹಳ ವಿಶೇಷವಾದ ಚಿತ್ರ. ನಿರ್ಮಾಪಕಿಯಾಗಿ ನನ್ನ ಮೊದಲ ಚಿತ್ರ ಎಂದಷ್ಟೇ ಅಲ್ಲ. ಜೀವನದ ಬಗ್ಗೆ ನನ್ನ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬದಲಿಸಿದ ವಿಷಯಾಧರಿತ ಚಿತ್ರ ಎಂದು ಸಿನಿಮಾದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಬರೆದುಕೊಂಡಿದ್ದಾರೆ.

    ನಿಮ್ಮಲ್ಲಿ ಹಲವರಿಗೆ ಈ ಪ್ರಶ್ನೆ ಇದೆ ಎಂದು ನನಗೆ ತಿಳಿದಿದೆ. ನಾನು ಚಿತ್ರದಿಂದ ಹೊರಗುಳಿದದ್ದು ಏಕೆಂದರೆ ಅದು ಓಟಿಟಿಯಲ್ಲಿ ಬಿಡುಗಡೆಯಾಗುವುದೆಂದು ನಿರ್ಧರಿಸಿದ್ದೆವು. ನನ್ನ ಕಮ್‌ಬ್ಯಾಕ್ ಚಿತ್ರವು ಚಿತ್ರಮಂದಿರದಲ್ಲಿಯೇ ಬಿಡುಗಡೆಯಾಗಬೇಕೆಂದು ನಾನು ಬಯಸಿದ್ದೆ. ಚಿತ್ರವನ್ನು ಖರೀದಿಸುವುದಾಗಿ ಭರವಸೆ ನೀಡಿದ ಓಟಿಟಿ ವೇದಿಕೆಯು ನಂತರ ಹಿಂದೆ ಸರಿಯಿತು. ಕನ್ನಡದಲ್ಲಿ ಇದು ಹೆಚ್ಚಾಗಿ ನಡೆಯುತ್ತದೆ. ಆದರೆ, ನಿಮ್ಮನ್ನು ಸೇರಲು ಹಲವು ಮಾರ್ಗಗಳನ್ನು ಹುಡುಕುತ್ತೇವೆ ಎಂದು ನಟಿ ತಿಳಿಸಿದ್ದಾರೆ.

     

    ‘ಟೋಬಿ’ ಹೀರೋ ರಾಜ್ ಬಿ ಶೆಟ್ಟಿ ಜೊತೆ ಮೋಹಕ ತಾರೆ ರಮ್ಯಾ ನಟಿಸಬೇಕಿತ್ತು. ಆದರೆ ಈಗ ಅಸಲಿ ಕಾರಣವನ್ನ ತಿಳಿಸುವ ಮೂಲಕ ಗಾಸಿಪ್‌ಗೆಲ್ಲಾ ನಟಿ ಸ್ಪಷ್ಟನೆ ನೀಡಿದ್ದಾರೆ. ರಾಜ್ ಬಿ ಶೆಟ್ಟಿ, ಸಿರಿ ರವಿಕುಮಾರ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಮತ್ತು ಕೆವಿಎನ್‌ ಸಂಸ್ಥೆಯ ರೂವಾರಿ ಕಾರ್ತಿಕ್-ಯೋಗಿಗೆ, ರಮ್ಯಾ ಧನ್ಯವಾದಗಳನ್ನ ತಿಳಿಸಿದ್ದಾರೆ. ನವೆಂಬರ್ 24ಕ್ಕೆ ರಿಲೀಸ್ ಆಗುತ್ತಿರೋ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನೋಡಿ ಎಂದು ಮನವಿ ಮಾಡಿದ್ದಾರೆ.

  • ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ಹೊರಬಂದಿದ್ದೇಕೆ? ರಮ್ಯಾ ಸ್ಪಷ್ಟನೆ

    ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ಹೊರಬಂದಿದ್ದೇಕೆ? ರಮ್ಯಾ ಸ್ಪಷ್ಟನೆ

    ಸ್ಯಾಂಡಲ್‌ವುಡ್ ನಟಿ ರಮ್ಯಾ (Ramya) ಅವರು ದೀಪಾವಳಿ ಹಬ್ಬಕ್ಕೆ ಅಭಿಮಾನಿಗಳಿಗೆ ವಿಶೇಷವಾಗಿ ಶುಭಕೋರಿದ್ದಾರೆ. ತಮ್ಮ ಮೊದಲ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Muttina Male Haniye) ಸಿನಿಮಾದಿಂದಲೇ ಮತ್ತೆ ಕಮ್‌ಬ್ಯಾಕ್ ಆಗುತ್ತಾರೆ ಎಂದು ಹೇಳಲಾಗಿತ್ತು. ಬಳಿಕ ಚಿತ್ರದಿಂದ ಹೊರಬಂದಿದ್ದೇಕೆ ಎಂದು ಇದೀಗ ನಟಿ ಪ್ರತಿಕ್ರಿಯೆ ನೀಡಿದ್ದಾರೆ.

    ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಇದು ನನಗೆ ಬಹಳ ವಿಶೇಷವಾದ ಚಿತ್ರ. ನಿರ್ಮಾಪಕಿಯಾಗಿ ನನ್ನ ಮೊದಲ ಚಿತ್ರ ಎಂದಷ್ಟೇ ಅಲ್ಲ. ಜೀವನದ ಬಗ್ಗೆ ನನ್ನ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬದಲಿಸಿದ ವಿಷಯಾಧರಿತ ಚಿತ್ರ ಎಂದು ಸಿನಿಮಾದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಅಪಘಾತ ಪ್ರಕರಣ: ನಟ ನಾಗಭೂಷಣ್ ವಿರುದ್ಧ 70 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ನಿಮ್ಮಲ್ಲಿ ಹಲವರಿಗೆ ಈ ಪ್ರಶ್ನೆ ಇದೆ ಎಂದು ನನಗೆ ತಿಳಿದಿದೆ. ನಾನು ಚಿತ್ರದಿಂದ ಹೊರಗುಳಿದದ್ದು ಏಕೆಂದರೆ ಅದು ಓಟಿಟಿಯಲ್ಲಿ ಬಿಡುಗಡೆಯಾಗುವುದೆಂದು ನಿರ್ಧರಿಸಿದ್ದೆವು. ನನ್ನ ಕಮ್‌ಬ್ಯಾಕ್ ಚಿತ್ರವು ಚಿತ್ರಮಂದಿರದಲ್ಲಿಯೇ ಬಿಡುಗಡೆಯಾಗಬೇಕೆಂದು ನಾನು ಬಯಸಿದ್ದೆ. ಚಿತ್ರವನ್ನು ಖರೀದಿಸುವುದಾಗಿ ಭರವಸೆ ನೀಡಿದ ಓಟಿಟಿ ವೇದಿಕೆಯು ನಂತರ ಹಿಂದೆ ಸರಿಯಿತು. ಕನ್ನಡದಲ್ಲಿ ಇದು ಹೆಚ್ಚಾಗಿ ನಡೆಯುತ್ತದೆ. ಆದರೆ, ನಿಮ್ಮನ್ನು ಸೇರಲು ಹಲವು ಮಾರ್ಗಗಳನ್ನು ಹುಡುಕುತ್ತೇವೆ ಎಂದು ನಟಿ ತಿಳಿಸಿದ್ದಾರೆ.

    ‘ಟೋಬಿ’ ಹೀರೋ ರಾಜ್ ಬಿ ಶೆಟ್ಟಿ ಜೊತೆ ಮೋಹಕ ತಾರೆ ರಮ್ಯಾ ನಟಿಸಬೇಕಿತ್ತು. ಆದರೆ ಈಗ ಅಸಲಿ ಕಾರಣವನ್ನ ತಿಳಿಸುವ ಮೂಲಕ ಗಾಸಿಪ್‌ಗೆಲ್ಲಾ ನಟಿ ಸ್ಪಷ್ಟನೆ ನೀಡಿದ್ದಾರೆ.

    ರಾಜ್ ಬಿ ಶೆಟ್ಟಿ, ಸಿರಿ ರವಿಕುಮಾರ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಮತ್ತು ಕೆವಿಎನ್‌ ಸಂಸ್ಥೆಯ ರೂವಾರಿ ಕಾರ್ತಿಕ್-ಯೋಗಿಗೆ, ರಮ್ಯಾ ಧನ್ಯವಾದಗಳನ್ನ ತಿಳಿಸಿದ್ದಾರೆ. ನವೆಂಬರ್ 24ಕ್ಕೆ ರಿಲೀಸ್ ಆಗುತ್ತಿರೋ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನೋಡಿ ಎಂದು ಮನವಿ ಮಾಡಿದ್ದಾರೆ.

  • ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ‘ಮೆಲ್ಲಗೆ’ ಸಾಂಗ್ ರಿಲೀಸ್

    ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ‘ಮೆಲ್ಲಗೆ’ ಸಾಂಗ್ ರಿಲೀಸ್

    ನ್ನೇನು ಬಿಡುಗಡೆಗೆ ಕೆಲವೇ ದಿನಗಳಿರುವಂತೆಯೇ, ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swati Muthina Male Haniye) ಚಿತ್ರದ ‘ಮೆಲ್ಲಗೆ’ ಎಂಬ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಲಾಗಿದೆ. ರಾಜ್‍ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವನ್ನು ‘ಸ್ಯಾಂಡಲ್‌ವುಡ್‌ ಕ್ವೀನ್‌’ ರಮ್ಯಾ (Ramya) ಅವರು ತಮ್ಮ ಆಪಲ್‍ ಬಾಕ್ಸ್ ಸ್ಟುಡಿಯೋಸ್‍ ಮೂಲಕ ಇದೇ ಮೊದಲ ಬಾರಿಗೆ ನಿರ್ಮಿಸಿದ್ದಾರೆ. ಲೈಟರ್‍ ಬುದ್ಧ ಫಿಲಂಸ್‍ ಸಹಯೋಗದೊಂದಿಗೆ ನಿರ್ಮಾಣವಾಗಿರುವ ಈ ಚಿತ್ರವನ್ನು ನವೆಂಬರ್‍ 24ರಂದು ಕೆ.ಆರ್.ಜಿ. ಸ್ಟುಡಿಯೋಸ್‍ ಸಂಸ್ಥೆಯು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ.

    ‘ಮೆಲ್ಲಗೆ’ ಹಾಡಿಗೆ ಮಿಥುನ್‍ ಮುಕುಂದನ್‍ ಸಂಗೀತ ಸಂಯೋಜಿಸಿದ್ದು, ಮಾಧುರಿ ಶೇಷಾದ್ರಿ ಹಾಡಿದ್ದಾರೆ. ಇನ್ನು, ಮಂಗಳೂರಿನಲ್ಲಿ ಓದುತ್ತಿರುವ ವಿದ್ಯಾರ್ಥಿ ಪೃಥ್ವಿ ಈ ಹಾಡನ್ನು ಬರೆದಿದ್ದಾರೆ. ಈ ಕುರಿತು ಮತನಾಡುವ ನಿರ್ದೇಶಕ ರಾಜ್‍ ಶೆಟ್ಟಿ, ‘ಇದು ಪ್ರೀತಿಯ ಕುರಿತ ಒಂದು ಮಹಿಳೆಯ ದೃಷ್ಟಿಕೋನದ ಹಾಡು’. ಈ ಪ್ರೀತಿಯನ್ನು ಮಹಿಳೆಯರು ಹೇಗೆ ಅನುಭವಿಸುತ್ತಾರೆ ಎನ್ನುವುದು ಬೇಕಾಗಿತ್ತು. ಹಾಗಾಗಿ, ಪೃಥ್ವಿ ಅವರಿಂದಲೇ ಬರೆಸಿದೆ’ ಎನ್ನುತ್ತಾರೆ ರಾಜ್‍.

    ಈ ಹಾಡಿನಲ್ಲಿ ಶಾಸ್ತ್ರೀಯ ಸಂಗೀತದ ಸ್ಪರ್ಶ ಇದ್ದು, ಸಂಗೀತ ನಿರ್ದೇಶಕ ಮಿಥುನ್‍ ಮುಕುಂದನ್‍ ತಮ್ಮ ಸಂಯೋಜನೆಯಿಂದ ಮೋಡಿ ಮಾಡುತ್ತಾರೆ ಎನ್ನುತ್ತಾರೆ. ಸ್ವತಃ ಹಿನ್ನೆಲೆ ಗಾಯಕಿಯೂ ಆಗಿರುವ ನಾಯಕಿ ಸಿರಿ ರವಿಕುಮಾರ್ ಈ ಹಾಡಿನ ಅಭಿಮಾನಿಯಾಗಿದ್ದು, ಹಾಡನ್ನು ಪದೇಪದೇ ಕೇಳುತ್ತಿರುವುದಾಗಿ ಹೇಳಿಕೊಳ್ಳುತ್ತಾರೆ.

     

    ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಲ್ಲಿ ರಾಜ್‍ ಮತ್ತು ಸಿರಿ ಜೊತೆಗೆ ಬಾಲಾಜಿ ಮನೋಹರ್‍, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಜೆ.ಪಿ. ತುಮ್ಮಿನಾಡು, ಸ್ನೇಹ ಶರ್ಮಾ ಮುಂತಾದವರು ಅಭಿನಯಿಸಿದ್ದಾರೆ. ಪ್ರವೀಣ್‍ ಶ್ರೀಯಾನ್‍ ಈ ಚಿತ್ರದ ಛಾಯಾಗ್ರಹಣದ ಜೊತೆಗೆ, ರಾಜ್‍ ಜೊತೆಗೆ ಸೇರಿ ಸಂಕಲನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

  • ರಮ್ಯಾ ನಿರ್ಮಾಣದ ಚೊಚ್ಚಲ ಸಿನಿಮಾಗೆ ರಿಲೀಸ್ ಡೇಟ್ ಫಿಕ್ಸ್

    ರಮ್ಯಾ ನಿರ್ಮಾಣದ ಚೊಚ್ಚಲ ಸಿನಿಮಾಗೆ ರಿಲೀಸ್ ಡೇಟ್ ಫಿಕ್ಸ್

    ಸಿನಿಮಾ ಶೂಟಿಂಗ್ ಮುಗಿಸಿ ಒಂದು ವರ್ಷ ಸಮೀಪಿಸುತ್ತಿದೆ. ನವೆಂಬರ್ 14, 2022ರಂದೇ ತಮ್ಮ ಚೊಚ್ಚಲ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ (Swati Muthina Male Haniye)  ಸಿನಿಮಾ ಶೂಟಿಂಗ್ ಮುಗಿಸಿರುವುದಾಗಿ ರಮ್ಯಾ ಸಂಸ್ಥೆಯು ಹೇಳಿಕೊಂಡಿತ್ತು. ಆನಂತರ ಸಿನಿಮಾ ಯಾವಾಗ ರಿಲೀಸ್ (Release) ಎನ್ನುವ ಕುರಿತು ಮಾಹಿತಿ ನೀಡಿರಲಿಲ್ಲ. ಇದೀಗ ಸಿನಿಮಾ ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ ರಮ್ಯಾ.

    2022 ನವೆಂಬರ್ ನಲ್ಲಿ ಶೂಟಿಂಗ್ ಮುಗಿಸಿದವರು 2023 ನವೆಂಬರ್ 24 ರಂದು ತಮ್ಮ ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ರಮ್ಯಾ ಅವರ ಸಿನಿಮಾ ಬಗ್ಗೆ ಸಾಕಷ್ಟು  ಅಭಿಮಾನಿಗಳಿಗೆ ನಿರೀಕ್ಷೆಯಿದ್ದು, ತಡವಾಗಿ ರಿಲೀಸ್ ಮಾಡುತ್ತಿರುವುದಕ್ಕೆ ಬೇಸರವೂ ಇದೆ.

    ಆಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವನ್ನು ರಾಜ್‌ ಬಿ ಶೆಟ್ಟಿ  (Raj B Shetty) ನಿರ್ದೇಶನ ಮಾಡಿದ್ದಾರೆ. ಸಿರಿ ರವಿಕುಮಾರ್‌ (Siri Ravikumar) ಮತ್ತು ರಾಜ್‌ ಶೆಟ್ಟಿ ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ನಿರ್ದೇಶನದ ಜೊತೆಗೆ ನಟಿಸಿರುವ ರಾಜ್ ಬಿ ಶೆಟ್ಟಿ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರವನ್ನೇ ನಿರ್ವಹಣೆ ಮಾಡಿದ್ದಾರೆ.

     

    ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದಲ್ಲಿ ರಮ್ಯಾ (Ramya) ಅವರೇ ನಟಿಸಬೇಕಿತ್ತು. ಹಾಗಂತ ಅನೌನ್ಸ್ ಕೂಡ ಆಗಿತ್ತು. ಆದರೆ, ತಾವು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ, ಕೇವಲ ನಿರ್ಮಾಪಕಿಯಾಗಿ ಮಾತ್ರ ಇರುತ್ತೇನೆ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು ರಮ್ಯಾ. ಈ ವಿಷಯ ತಿಳಿಸಿದ ಕೆಲವೇ ದಿನಗಳ ನಂತರ ಮತ್ತೊಂದು ಸಿಹಿ ಸುದ್ದಿಯನ್ನೂ ನೀಡಿ, ತಾವು ಡಾಲಿ ಧನಂಜಯ್ ಜೊತೆ ಉತ್ತರಕಾಂಡ ಚಿತ್ರದಲ್ಲಿ ನಟಿಸುತ್ತಿರುವುದಾಗಿಯೂ ತಿಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಮ್ಯಾ ಸಿನಿಮಾಗಿಂತ ಮುಂಚೆ ‘ಟೋಬಿ’ ರಿಲೀಸ್: ರಾಜ್ ಬಿ ಶೆಟ್ಟಿ ಸ್ಪಷ್ಟನೆ

    ರಮ್ಯಾ ಸಿನಿಮಾಗಿಂತ ಮುಂಚೆ ‘ಟೋಬಿ’ ರಿಲೀಸ್: ರಾಜ್ ಬಿ ಶೆಟ್ಟಿ ಸ್ಪಷ್ಟನೆ

    ರಾಜ್ ಬಿ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಟೋಬಿ’ (Toby) ಸಿನಿಮಾ ತೆರೆಗೆ ಬರೋದ್ದಕ್ಕೆ ಸಜ್ಜಾಗಿದೆ. ಚಿತ್ರದ ಫಸ್ಟ್ ಲುಕ್‌ನಿಂದ ‘ಟೋಬಿ’ ಹೈಪ್ ಕ್ರಿಯೇಟ್ ಮಾಡಿದೆ. ಟೋಬಿ ಚಿತ್ರಕ್ಕೆ ಚಾಲನೆ ಸಿಗುವ ಮುಂಚೆಯೇ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Muttina Male Haniye) ಶೂಟಿಂಗ್ ಮುಗಿದಿದೆ. ಆದ್ರೂ ‘ಟೋಬಿ’ ಸಿನಿಮಾ ಯಾಕೆ ತೆರೆಗೆ ಬರುತ್ತಿದೆ ಎಂಬ ಪ್ರಶ್ನೆಗೆ ನಿರ್ದೇಶಕ ರಾಜ್ ಬಿ ಶೆಟ್ಟಿ ಉತ್ತರಿಸಿದ್ದಾರೆ.

    ರಾಜ್ ಬಿ ಶೆಟ್ಟಿ (Raj B Shetty) ಅವರು ‘ಟೋಬಿ’ ಸಿನಿಮಾ ಲುಕ್‌ನಿಂದ ಈಗಾಗಲೇ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ರಕ್ತ-ಸಿಕ್ತ ಅವತಾರದಿಂದ ಶೆಟ್ರು ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ಎಂದೂ ನಟಿಸಿರದ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಜೀವ ತುಂಬಿದ್ದಾರೆ. ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯನ್ನ ರಾಜ್ ಬಿ ಶೆಟ್ಟಿ ತೆರೆಯ ಮೇಲೆ ತೋರಿಸಲು ಹೊರಟಿದ್ದಾರೆ. ಇದರ ಜೊತೆ ರಮ್ಯಾ ನಿರ್ಮಾಣದ ಸಿನಿಮಾ ಯಾಕೆ ತಡ ಆಗುತ್ತಿದೆ ಎಂದು ಶೆಟ್ರು ಪ್ರತಿಕ್ರಿಯೆ ನೀಡಿದ್ದಾರೆ.

    ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮಾಡಬೇಕಾದರೇನೆ ಒಂದು ಖಾಸಗಿ ಅನುಭವ ನೀಡುವ ಆಪ್ತವಾದ ಫೀಲ್ ನೀಡುವ ಸಿನಿಮಾ ಮಾಡಬೇಕೆಂಬ ಉದ್ದೇಶದಿಂದಲೇ ಆ ಸಿನಿಮಾ ಶುರು ಮಾಡಿದೆವು. ಆ ಸಿನಿಮಾ ಮಾಡುವಾಗ ಇದು ಒಳ್ಳೆಯ ಸಿನಿಮಾ ಆಗಿರಬೇಕು, ಒಟಿಟಿಯಲ್ಲಿ ನೋಡುವಂಥಹಾ ಒಂದು ಪರ್ಸನಲ್ ಆದ ಸಿನಿಮಾ ಮಾದರಿಯಲ್ಲಿರಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು. ಸದ್ಯಕ್ಕೆ ಸಿನಿಮಾ ಪೂರ್ಣ ಮುಗಿದು ಅದರ ಮಿಕ್ಸಿಂಗ್‌ನ ಸಣ್ಣ-ಪುಟ್ಟ ಕೆಲಸಗಳು ಮಾತ್ರ ಬಾಕಿ ಇವೆ. ಅದೂ ಸಹ ಒಂದು ವಾರ ಅಥವಾ ಹತ್ತು ದಿನದಲ್ಲಿ ಮುಗಿಯಬಹುದು ಎಂದಿದ್ದಾರೆ. ಇದನ್ನೂ ಓದಿ:ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು

    ‘ಟೋಬಿʼ ಬರುವ ಮುಂಚೆಯೇ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ನಿರ್ಮಾಣ ಸಂಸ್ಥೆಯವರೇನಾದರೂ ಯಾವುದಾದರೂ ಒಟಿಟಿಯಲ್ಲಿ ಒಳ್ಳೆಯ ಡೀಲ್ ಮಾಡಿಕೊಂಡರೆ ನಮ್ಮ  ಸಿನಿಮಾಕ್ಕಿಂತಲೂ ಮೊದಲೇ ಆ ಸಿನಿಮಾ ಬಿಡುಗಡೆ ಆಗಬಹುದು. ಆದರೆ ಆ ವಿಷಯ ನನಗೆ ಗೊತ್ತಿಲ್ಲ. ಇನ್ನು ಟೋಬಿ ಸಿನಿಮಾದ ಎಲ್ಲ ಕೆಲಸ ಮುಗಿದಿದ್ದು, ಕೊನೆಯ ಹಂತದ ಕೆಲಸ ಚಾಲ್ತಿಯಲ್ಲಿದೆ ಎಂದಿದ್ದಾರೆ. ರಮ್ಯಾ (Ramya) ನಿರ್ಮಾಣದ ಈ ಚಿತ್ರ, ರಾಜ್- ಸಿರಿ ನಟನೆಯ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ರಿಲೀಸ್ ಅಪ್‌ಡೇಟ್ ಸದ್ಯದಲ್ಲೇ ಸಿಗಲಿದೆ ಎಂದು ನಟ ತಿಳಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೈಟಲ್ ವಿವಾದ : ನಟಿ ರಮ್ಯಾ ಪರವಾಗಿ ಕೋರ್ಟ್ ತೀರ್ಪು

    ಟೈಟಲ್ ವಿವಾದ : ನಟಿ ರಮ್ಯಾ ಪರವಾಗಿ ಕೋರ್ಟ್ ತೀರ್ಪು

    ಸ್ವಾತಿ ಮುತ್ತಿನ ಮಳೆ ಹನಿಯೇ (Swati Muthina Male Haniye) ಸಿನಿಮಾದ ಟೈಟಲ್ (Title) ತಮ್ಮದೆಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ (Rajendra Singh Babu) ಬಾಬು ಸಿಟಿ ಸಿವಿಲ್ ಕೋರ್ಟ್ (Cour) ಗೆ ಅರ್ಜಿ ಸಲ್ಲಿಸಿದ್ದರು. ತಾವು ಇದೇ ಹೆಸರಿನ ಟೈಟಲ್ ನಲ್ಲಿ ಸಿನಿಮಾ ಮಾಡುತ್ತಿರುವ ಮತ್ತು ಈ ಶೀರ್ಷಿಕೆಯನ್ನು ಬೇರೆಯೊಬ್ಬರು ಬಳಸುತ್ತಿದ್ದು, ಅದನ್ನು ತಡೆಯಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು. ಆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದ್ದು, ರಾಜೇಂದ್ರ ಸಿಂಗ್ ಬಾಬು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

    ಏನಿದು ವಿವಾದ?
    ನಟಿ ರಮ್ಯಾ (Ramya) ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟೈಟಲ್ ವಿವಾದಕ್ಕೆ ಗುರಿಯಾಗಿತ್ತು. ಈ ಟೈಟಲ್ ತಮ್ಮದೆಂದು, ಅದನ್ನು ಯಾರಿಗೂ ಕೊಡಬಾರದು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ತಮ್ಮ ಲಾಯರ್ ಮೂಲಕ ಪತ್ರವೊಂದನ್ನು ಕಳುಹಿಸಿದ್ದರು. ಅಲ್ಲದೇ, ತಾವು ಅದೇ ಹೆಸರಿನಲ್ಲಿ ಸಿನಿಮಾ ಮಾಡುತ್ತಿರುವುದಾಗಿ, ಅದು ಅರ್ಧಕ್ಕೆ ನಿಂತಿದೆ ಎಂದು ತಿಳಿಸಿದ್ದರು. ನಂತರ ಕೋರ್ಟ್ ಮೆಟ್ಟಿಲು ಕೂಡ ಏರಿದ್ದರು.

     

    ವಾಣಿಜ್ಯ ಮಂಡಳಿಗೆ ಪತ್ರ ಬರೆದ ಬೆನ್ನಲ್ಲೇ ಆ ಟೈಟಲ್ ಬಗ್ಗೆ ಪರಿಶೀಲಿಸಿದಾಗ ಅಸಲಿಯಾಗಿ ಅದು ರಾಜೇಂದ್ರ ಸಿಂಗ್ ಬಾಬು ಅವರ ಹೆಸರಿನಲ್ಲಿ ಇರಲಿಲ್ಲ ಎನ್ನುವುದು ಗೊತ್ತಾಗಿತ್ತು. ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಮಾಡುತ್ತಿರುವ ಬಿ.ಕೆ.ಗಂಗಾಧರ್ ಅವರು ಈ ಟೈಟಲ್ ಅನ್ನು ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿದ್ದಾರೆ. ಅಲ್ಲದೇ, ರಮ್ಯಾ ಸಿನಿಮಾ ಮಾಡುತ್ತೇನೆ ಎಂದಾಗ, ಅವರಿಗೆ ಆ ಟೈಟಲ್ ಅನ್ನು ವರ್ಗಾಯಿಸಿದ್ದಾರೆ ಎಂದು ಸ್ವತಃ ವಾಣಿಜ್ಯ ಮಂಡಳಿಯ  ಅಧ್ಯಕ್ಷರೇ ತಿಳಿಸಿದ್ದರು.

    ಬಿ.ಕೆ.ಗಂಗಾಧರ್ ಅವರು ರಮ್ಯಾ ಹೆಸರಿಗೆ ಆ ಟೈಟಲ್ ಅನ್ನು ವರ್ಗಾಯಿಸಿರುವುದರಿಂದ, ರಮ್ಯಾ ಅವರು ವಾಣಿಜ್ಯ ಮಂಡಳಿಗೆ ಪತ್ರ ಬರೆಯಬೇಕಿದೆ. ಗಂಗಾಧರ  ಅವರು ನೀಡಿರುವ ಎನ್.ಓ.ಸಿ ಪತ್ರವನ್ನು ವಾಣಿಜ್ಯ ಮಂಡಳಿಗೆ ನೀಡಿದ ತಕ್ಷಣವೇ ಅದನ್ನು ರಮ್ಯಾ ಅವರ ನಿರ್ಮಾಣ ಸಂಸ್ಥೆಗೆ ವರ್ಗಾಯಿಸಲಾಗುವುದು ಎಂದು ಮಂಡಳಿಯ ಅಧ್ಯಕ್ಷರು ಮಾಧ್ಯಮಗಳಿಗೆ ತಿಳಿಸಿದ್ದರು.

    ರಾಜೇಂದ್ರ ಸಿಂಗ್ ಬಾಬು ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಕೂಡ ಪತ್ರ ಬರೆದಿದ್ದರು.

    ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದರು.

  • ನಿರ್ಮಾಪಕಿಯಾದ ಅನುಭವವನ್ನು ಮೊದಲಬಾರಿಗೆ ವ್ಯಕ್ತ ಪಡಿಸಿದ ರಮ್ಯಾ

    ನಿರ್ಮಾಪಕಿಯಾದ ಅನುಭವವನ್ನು ಮೊದಲಬಾರಿಗೆ ವ್ಯಕ್ತ ಪಡಿಸಿದ ರಮ್ಯಾ

    ವರ್ಷದ ಬಹು ನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದೆಂದು ಈಗಾಗಲೇ ರಾಜ್ಯಾದ್ಯಂತ ಸುದ್ದಿ ಮಾಡಿ, ಸಿನಿರಸಿಕರು ಕಾತುರದಿಂದ ಕಾಯುತ್ತಿರುವ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ತಮ್ಮ ನಿರ್ಮಾಣ ಸಂಸ್ಥೆಯಾದ ‘ಆಪಲ್ ಬಾಕ್ಸ್ ಸ್ಟುಡಿಯೋಸ್’ ವತಿಯಿಂದ ಮೊದಲ ಬಾರಿ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳಲಿದ್ದು, ‘ಲೈಟರ್ ಬುದ್ಧ ಫಿಲಂಸ್’ ಎಂಬ ಸಂಸ್ಥೆಯೊಂದಿಗೆ ಕೈ ಜೋಡಿಸಿದ್ದಾರೆ. ಈ ಚಿತ್ರವನ್ನು ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ನಿರ್ದೇಶಿಸಲಿದ್ದು ಅವರೊಂದಿಗೆ ಸಿರಿ ರವಿಕುಮಾರ್ ಕೂಡ ಕಾಣಿಸಿಕೊಳ್ಳಲಿದ್ದಾರೆ.

    ನಟಿ-ನಿರ್ಮಾಪಕಿ ರಮ್ಯಾರವರು “ಈ ಚಿತ್ರವು ನಮ್ಮೆಲ್ಲರನ್ನು ಪ್ರೀತಿ-ಪ್ರೇಮ ದೊಂದಿಗೆ ಒಲವಾಗುವಂತೆ ಮಾಡುತ್ತೆ ಎಂದು ವಿಶ್ವಾಸದಿಂದ ತಿಳಿಸುತ್ತಾ, “ಮೊದಲ ಬಾರಿ ನಾನು ನಿರ್ಮಾಪಕಿಯ ಜವಾಬ್ದಾರಿ ನಿರ್ವಹಿಸುತ್ತಾ ಬಹಳಷ್ಟು ವಿಷಯಗಳನ್ನು ಕಲಿತೆ. ನನಗಿದೊಂದು ಅದ್ಭುತವಾದ ಅನುಭವ. ಈ ಚಿತ್ರವು ಪ್ರೀತಿ ಹಾಗು ಆತ್ಮಶೋಧನೆಯನ್ನು ಕುರಿತು ಒಂದು ಸುಂದರ, ಕಾವ್ಯಾತ್ಮಕ ಹಾಗು ಸೌಮ್ಯ ಅನುಭವವಾಗಲಿದೆ” ಎಂದರು. ಇದನ್ನೂ ಓದಿ: ಸಂಕ್ರಾಂತಿ ಸಂಭ್ರಮಕ್ಕಾಗಿ ಮತ್ತೆ ಜೊತೆಯಾದ ಬಿಗ್ ಬಾಸ್ ಸ್ಪರ್ಧಿಗಳು

    2022ರ ವಿಜಯದಶಮಿಯಂದು ಚಿತ್ರವು ಘೋಷಿಸಲಾಗಿದ್ದು, ಹಲವಾರು ಮನೋಜ್ಞ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಮೊದಲನೆ  ನೋಟದ ಪೋಸ್ಟರ್ ಹಾಗು ಮುಖ್ಯ ಪಾತ್ರಗಳನ್ನು ಪರಿಚಯಿಸಲು ಬಿಡುಗಡೆ ಮಾಡಿದ ಪೋಸ್ಟರ್ಗಳ ಮೂಲಕ ಈಗಾಗಲೇ ಎಲ್ಲರ ಗಮನವನ್ನು ಸೆಳೆದಿದೆ. ‘ಪ್ರೇರಣಾ’ ಮತ್ತು ‘ಅನಿಕೇತ್’ ಎಂಬ ಮುಖ್ಯ ಪಾತ್ರಗಳಲ್ಲಿ ಸಿರಿ ರವಿಕುಮಾರ್ ಹಾಗು ರಾಜ್ ಬಿ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ.

    ಈ ಚಿತ್ರದಲ್ಲಿ ಪ್ರತಿಭಾನ್ವಿತ ನಟರ ದಂಡೇ ಇದ್ದು ಮುಖ್ಯವಾಗಿ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹ ಶರ್ಮ, ಜೆಪಿ ತುಮ್ಮಿನಾಡ್, ಗೋಪಾಲಕೃಷ್ಣ  ದೇಶಪಾಂಡೆ ಮತ್ತು ಇನ್ನಿತರು ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ಮಿಧುನ್ ಮುಕುಂದನ್ ಸಂಗೀತ ಸಂಯೋಜಿಸಲಿದ್ದು, ಪ್ರವೀಣ್ ಶ್ರೀಯಾನ್ – ಛಾಯಾಗ್ರಹಣ ಹಾಗು ಸಂಕಲನದ  ಜವಾಬ್ದಾರಿಯನ್ನು ನಿರ್ವಹಹಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k