ಚೆನ್ನೈ: ದಂಪತಿ ಬಟ್ಟೆ ಮಾಸ್ಕ್ಗಳನ್ನು ಹೊಲಿದು ಅವುಗಳನ್ನು ಉಚಿತವಾಗಿ ಚೆನ್ನೈನಲ್ಲಿ ಹಂಚುವ ಮೂಲಕವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಚಂದಿರಾ ಮತ್ತು ಕರುಣಕರನ್ ಇಬ್ಬರು ಸಾಮಾಜಿಕ ಕಳಕಳಿಯಿಂದ ಉತ್ತಮ ಕೆಲಸಕ್ಕೆ ಮುಂದಾಗಿದ್ದಾರೆ. ಚಂದಿರಾ ಬಟ್ಟೆಹೊಲೆಯುವ ಕಂಪನಿಯನ್ನು ಕೆಲಸಮಾಡುತ್ತರೆ. ತನ್ನ ಖಾಲಿ ಸಮಯದಲ್ಲಿ ಅಲ್ಲಿ ಉಪಯೋಗಿಸಿ ಬಿದ್ದಿರುವ ಸಣ್ಣ ಸಣ್ಣ ಬಟ್ಟೆ ತುಂಡುಗಳನ್ನು ಬಳಸಿ ಮಾಸ್ಕ್ ಹೊಲಿಯಲು ಪ್ರಾರಂಭಿಸಿದೆ. ನನ್ನ ಸ್ವಂತ ಹಣದಿಂದ ಇಲಾಸ್ಟಿಕ್ ಖರೀದಿಸುತ್ತೇನೆ.
ಮಾಸ್ಕ್ ಹೊಲಿಯಲು ಪ್ರಾರಂಭಿಸಿದ ಮೇಲೆ ಮೊದಲಿಗೆ ನನ್ನ ಕುಟುಂಬ ಹಾಗೂ ನೆರೆ ಹೊರೆಯವರಿಗೆ ಕೊಟ್ಟಿದ್ದೇನು. ಮಾಸ್ಕ್ಗಳ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಯಿತ್ತು. ಆಗ ನಾನು ನನ್ನ ಪತಿ ಸಹಾಯವನ್ನು ಪಡೆದುಕೊಂಡೆ. ನನ್ನ ಪತಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಾರೆ. ಆಗ ನನ್ನ ಮಾಸ್ಕ್ಗಳು ಅವರ ಮೂಲಕವಾಗಿ ಹೆಚ್ಚು ಜನರನ್ನು ತಲುಪಿದವು.
ನಾನು ಮಾಸ್ಕ್ ತಯಾರಿಸಲು ಆರಿಸಿಕೊಳ್ಳುವ ಬಟ್ಟೆ ಮೆಟೀರಿಯಲ್ 100 ರಷ್ಟು ಹತ್ತಿಯದ್ದಾಗಿದೆ. ಪಾಲಿಸ್ಟರ್ ನಂತಹ ಬಟ್ಟೆಗಳು ಉಸಿರಾಡಲು ಕಷ್ಟವಾಗುತ್ತದೆ. ಅನೇಕರು ನನ್ನನ್ನು ಸಂಪರ್ಕಿಸಿ ಮಾಸ್ಕ್ ಮಾಡಿಕೊಡಲು ಹೇಳಿದ್ದಾರೆ ಎಂದು ಚಂದಿರ ಹೇಳಿದ್ದಾರೆ.
ನಾವು ಸರಿಸುಮಾರು 500ಕ್ಕೂ ಹೆಚ್ಚು ಮಾಸ್ಕ್ಗಳನ್ನು ಇಲ್ಲಿಯವರೆಗೆ ಜನರಿಗೆ ನೀಡಿದ್ದೇವೆ. ಯಾರಾದರು ಮಾಸ್ಕ್ ಧರಿಸುವುದು ಮರೆತು ಬಂದರೆ ನನ್ನ ಪತ್ನಿ ಹೊಲೆದಿರುವ ಮಾಸ್ಕ್ ಎಂದು ಹೇಳಿ ಕೊಡುತ್ತೇನೆ ಎಂದು ಚಂದಿರಾ ಪತಿ ಹೇಳಿದ್ದಾರೆ.
ಬೆಂಗಳೂರು: ಕಳೆದ 5 ದಿನದಿಂದ ಕೊರೊನಾ ಲಸಿಕೆ ನೀಡಲು ಪ್ರಾರಂಭ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 1,38,656 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಕೊರೊನಾ ಲಸಿಕೆ ನೀಡಿರುವ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಶೀಲ್ಡ್ ಲಸಿಕೆಯನ್ನು 1,36,882, ಜನರಿಗೆ ನೀಡಲಾಗಿದೆ. ಹಾಗೂ ಕೋವ್ಯಾಕ್ಸಿನ್ 1774 ಜನರಿಗೆ ನೀಡಲಾಗಿದೆ. ಇದರಲ್ಲಿ ಶೇ.2 ರಿಂದ 3.5ಜನರಿಗೆ ಸ್ವಲ್ಪ ಅಡ್ಡ ಪರಿಣಾಮ ಆಗಿದೆ. ಅರ್ಧ ದಿನದಲ್ಲಿ ಅದು ಸಹ ನಿವಾರಣೆಯಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಇಲ್ಲಿಯವರೆಗೆ ಲಸಿಕೆ ಪಡೆದವರಲ್ಲಿ ಯಾರು ಕೂಡ ಮರಣ ಹೊಂದಿಲ್ಲ. ಇಲ್ಲಿಯವರೆಗೆ ಲಸಿಕೆ ಪಡೆಯಲು ನೊಂದಣಿಯಾಗಿರುವವರು ಸಂಖ್ಯೆ 8,47,908. ಕೊವ್ಯಾಕ್ಸಿನ್ 1,46,240 ಡೋಸ್ ಇಂದು ರಾಜ್ಯಕ್ಕೆ ಬರಲಿದೆ. ಲಸಿಕೆ ಹಾಕಲು 909 ಸೈಟ್ ಗುರುತಿಸಲಾಗಿದೆ. ಇಂದು ಕೂಡ ಲಸಿಕೆ ಕೊಡಲಾಗುತ್ತಿದೆ ಎಂದಿದ್ದಾರೆ.
ಲಸಿಕೆಗೆ ಹೆದರಬೇಡಿ, ಕೋವಿಡ್ಗೆ ಹೆದರಬೇಕು. ತಪ್ಪು ಮಾಹಿತಿಗೆ ಕಿವಿಗೊಡಬೇಡಿ. ವ್ಯಾಕ್ಸಿನ್ ಗೆ ಭಯ ಬೀಳಬೇಡಿ, ತಾವೆಲ್ಲ ಲಸಿಕೆ ಪಡೆಯಿರಿ. ಎರಡನೇ ಅಲೆ ಬರುವ ಮುನ್ನವೇ ಸುರಕ್ಷಿತವಾಗಿರಿ. ಎರಡನೇ ಹಂತದ ಲಸಿಕೆ ಕೂಡ ಆದಷ್ಟು ಬೇಗ ರಾಜ್ಯಕ್ಕೆ ಬರಲಿದೆ. ಹೀಗಾಗಿ ದೊಡ್ಡ ಸಿದ್ಧತೆಗಳು ಆಗಬೇಕಿದೆ. ಎರಡು ಕೋಟಿ ಜನರಿಗೆ ಎರಡನೇ ಹಂತದಲ್ಲಿ ಲಸಿಕೆ ನೀಡಬೇಕಾಗಿದೆ ಎಂದು ತಿಳಿಸಿದ್ದಾರೆ.
– ವಿತರಣೆಗೆ ರಾಜ್ಯದಲ್ಲಿ ಮೂರು ಸಮಿತಿ ರಚನೆ
– ಕೊರೊನಾ ವಾರಿಯರ್ಸ್ಗೆ ಮೊದಲ ಆದ್ಯತೆ
– ಬಳಿಕ 50, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ
ಬೆಂಗಳೂರು: ದೇಶದಲ್ಲಿ ಆರಂಭಿಕವಾಗಿ 30 ಕೋಟಿ ಜನರಿಗೆ ಲಸಿಕೆ ತಲುಪಿಸುವ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಲಸಿಕೆ ವಿತರಣೆಯ ತಯಾರಿ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಈ ಕುರಿತು ವಿವರಿಸಿದ್ದಾರೆ.
Participated in the Video Conference today chaired by PM Shri @narendramodi Ji on Covid19 management. Discussed the state’s plan for vaccine administration and assured Karnataka is fully equipped for a smooth roll-out of the vaccine as and when it’s ready.@AmitShah@PMOIndiapic.twitter.com/XpsRuQkyQD
ಸಭೆಯ ಬಳಿಕ ಮಾತನಾಡಿದ ಅವರು, ಕೊರೊನಾ ಲಸಿಕೆ ಬಗ್ಗೆ ವಿವರವಾದ ಚರ್ಚೆ ನಡೆಸಲಾಗಿದೆ. ಹೆಚ್ಚು ಕೋವಿಡ್ ಪ್ರಕರಣಗಳು ಹಾಗೂ ಕಡಿಮೆ ಪ್ರಕರಣಗಳು ಇರುವ ರಾಜ್ಯಗಳ ಜೊತೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಅವರು ಭಾಗವಹಿಸಿ ಲಸಿಕೆ ಬಗ್ಗೆ ಮಾಹಿತಿ ನೀಡಿದರು. ಯಾವ್ಯಾವ ದೇಶಗಳಲ್ಲಿ ಲಸಿಕೆ ತಯಾರಿಕೆ ಸ್ಥಿತಿ ಯಾವ ಹಂತದಲ್ಲಿದೆ ಎಂಬ ಬಗ್ಗೆ ತಿಳಿಸಿದರು. ಇಡೀ ವಿಶ್ವದಲ್ಲಿ ಹಲವು ಕಡೆ ಲಸಿಕೆ ತಯಾರಾಗುತ್ತಿದೆ. ಈ ಪೈಕಿ ನಮ್ಮ ದೇಶದಲ್ಲಿ 50 ಲಸಿಕೆಗಳು ಕ್ಲಿನಿಕಲ್ ಸಂಶೋಧನೆಗಳ ಹಂತದಲ್ಲಿವೆ. 25 ಲಸಿಕೆಗಳು ಅಡ್ವಾನ್ಸ್ ಟ್ರಯಲ್ ನಲ್ಲಿವೆ. 5 ಲಸಿಕೆಗಳು ಕ್ಲಿನಿಕಲ್ ಟ್ರಯಲ್ ಹಂತದಲ್ಲಿವೆ. ಭಾರತದಲ್ಲಿ ಒಟ್ಟು 24 ಸಂಸ್ಥೆಗಳಿಗೆ ಲಸಿಕೆ ತಯಾರಿಸುವ ಸಾಮರ್ಥ್ಯ ಇದೆ ಎಂಬ ಮಾಹಿತಿ ನೀಡಿದರು ಎಂದು ಬೊಮ್ಮಾಯಿ ತಿಳಿಸಿದರು.
30 ಕೋಟಿ ಜನರಿಗೆ ಲಸಿಕೆ:
ಲಸಿಕೆ ಬರುವಾಗ ಸರಿಯಾದ ರೀತಿಯಲ್ಲಿ ವಿತರಣೆಗೆ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಯಿತು. ಅದ್ಯತೆ ಮೇರೆಗೆ ವಿತರಣೆ ಬಗ್ಗೆ ಸಭೆಯಲ್ಲಿ ಹೇಳಲಾಯಿತು. ದೇಶದಲ್ಲಿ ಆರಂಭಿಕವಾಗಿ 30 ಕೋಟಿ ಜನರಿಗೆ ಕೋವಿಡ್ ಲಸಿಕೆ ಹಂಚುವ ಉದ್ದೇಶ ಹೊಂದಲಾಗಿದೆ. ಈ ಪೈಕಿ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ, 2 ಕೋಟಿ ಕೊರೊನಾ ವಾರಿಯರ್ಸ್ಗೆ ಹಾಗೂ 26 ಕೋಟಿ 50, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ವಿವರಿಸಿದರು.
ಬೂತ್ ಮಾದರಿಯಲ್ಲಿ ಹಂಚಿಕೆ:
ಲಸಿಕೆ ವಿತರಣೆಗೆ ರಾಜ್ಯದಲ್ಲಿ ಮೂರು ಸಮಿತಿಗಳ ರಚನೆಗೆ ನಿರ್ಧರಿಸಲಾಗಿದ್ದು, ಸಿಎಂ ನೇತೃತ್ವದಲ್ಲಿ, ಡಿಸಿಗಳ ನೇತೃತ್ವದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳ ರಚನೆಗೆ ನಿರ್ಧಾರಿಸಲಾಗಿದೆ. ಲಸಿಕೆ ಹಂಚಿಕೆಗೆ ಬೂತ್ ಗಳನ್ನು ರಚನೆ ಮಾಡಲಾಗುತ್ತಿದ್ದು, ಚುನಾವಣಾ ಬೂತ್ ಗಳ ಮಾದರಿಯಲ್ಲಿ ವಿತರಣೆ ಕೇಂದ್ರಗಳನ್ನು ರಚಿಸಲಾಗುತ್ತಿದೆ. ಅಲ್ಲದೆ ಕೊರೊನಾ ಲಸಿಕೆ ಕೊಟ್ಟ ಬಳಿಕ ಟ್ರ್ಯಾಕ್ ರಿಪೋರ್ಟ್ ಸಂಗ್ರಹಕ್ಕೆ ಸಹ ಸೂಚಿಸಲಾಗುತ್ತದೆ. ಲಸಿಕೆಯ ಡೋಸ್ ಕೊಟ್ಟ ವ್ಯಕ್ತಿಗಳ ಟ್ರ್ಯಾಕ್ ರಿಪೋರ್ಟ್ ಸಂಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಲಸಿಕೆ ಬರುವ ದಿನಾಂಕದ ಬಗ್ಗೆ ಪ್ರಧಾನಿ ಮೋದಿಯವರು ಮಾಹಿತಿ ಕೊಡಲಿಲ್ಲ. ನಿಖರ ದಿನಾಂಕ ಹೇಳಲು ಸಾಧ್ಯವಿಲ್ಲ ಎಂದರು. ಲಸಿಕೆ ತಯಾರಿಕೆ ಹಂತಗಳ ಬಗ್ಗೆ ಮಾತ್ರ ಮಾಹಿತಿ ನೀಡಿದರು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಈ ವಿಡಿಯೋ ಸಂವಾದದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೈದರಾಬಾದ್ನಿಂದ ಭಾಗವಹಿಸಿ, ಕೇಂದ್ರ ಸರ್ಕಾರದ ಸೂಚನೆಯಂತೆ ಲಸಿಕೆ ವಿತರಣೆಗೆ ಸಿದ್ಧತೆ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳು, 10,000 ವ್ಯಾಕ್ಸಿನೇಟರ್ ಸಿಬ್ಬಂದಿ ಗುರುತಿಸಲಾಗಿದೆ. ರಾಜ್ಯದಲ್ಲಿ 2,855 ಕೋಲ್ಡ್ ಚೇನ್ ಕೇಂದ್ರಗಳು ಲಭ್ಯವಿದ್ದು, ಪಶು ಸಂಗೋಪನೆ ಇಲಾಖೆ, ಖಾಸಗಿ ಆಸ್ಪತ್ರೆಗಳ ಸೌಲಭ್ಯಗಳನ್ನೂ ಬಳಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು: ರಂಜಾನ್ ಹಬ್ಬಕ್ಕೆಂದು ಸಚಿವರು ಕೋಳಿ ಮತ್ತು ಆಹಾರ ಕಿಟ್ ವಿತರಣೆ ಮಾಡುತ್ತಿದ್ದು, ಸಾಮಾಜಿಕ ಅಂತರವಿಲ್ಲದೇ ಜನರು ಮುಗಿಬಿದ್ದಿದ್ದಾರೆ.
ಕೆ.ಆರ್ ಪುರದ ಬಿಜೆಪಿ ಶಾಸಕ ಮತ್ತು ನಗರಾಭಿವೃದ್ಧಿ ಸಚಿವರ ಬಿ.ಎ. ಬಸವರಾಜ್ ಅವರು ತಮ್ಮ ಕ್ಷೇತ್ರದ ಜನರಿಗೆ ರಂಜಾನ್ ಹಬ್ಬದ ಪ್ರಯುಕ್ತ ಕೋಳಿ ಮತ್ತು ಆಹಾರ ಕಿಟ್ ವಿರತೆಣೆ ಮಾಡುತ್ತಿದ್ದಾರೆ. ಈ ವೇಳೆ ಕೋಳಿ ಪಡೆಯಲು ಮುಗುಬಿದ್ದಿರುವ ಜನ ಕೊರೊನಾ ಭಯವನ್ನು ಮರೆತು ವರ್ತಿಸುತ್ತಿದ್ದಾರೆ.
ಕೆ.ಆರ್.ಪುರ ಕ್ಷೇತ್ರದ ಬಸವನಪುರ ವಾರ್ಡ್ ಪಾಲಿಕೆ ಸದಸ್ಯ ಜಯಪ್ರಕಾಶ್ (ಜೆಪಿ) ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಹಂಚಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಚಾಲನೆ ನೀಡಿದ್ದಾರೆ. ನಂತರ ಜನರನ್ನು ದನ ಕರುಗಳಂತೆ ಕ್ಯೂನಲ್ಲಿ ಕೂಡಿಹಾಕಿ ಕಿಟ್ಗಳ ವಿತರಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಸಚಿವರ ಕಾರ್ಯಕ್ರಮದಲ್ಲೇ ಸಾಮಾಜಿಕ ಅಂತರವಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿದೆ.
ಬೆಂಗಳೂರು: ಬೆಂಗಳೂರು ಹೊರವಲಯ ಟಿ. ದಾಸರಹಳ್ಳಿ ಕ್ಷೇತ್ರದ ಲಕ್ಷ್ಮೀಪುರ ಗ್ರಾಮದಲ್ಲಿ ಇಂದು ಬಡ ಹಾಗೂ ಕೂಲಿ ಕಾರ್ಮಿಕರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರ ನೇತೃತ್ವದಲ್ಲಿ ದಿನಸಿ ಕಿಟ್ ವಿತರಣೆ ಮಾಡಲಾಯಿತು.
ದೇವೇಗೌಡರು ಕಿಟ್ ವಿತರಣೆ ಮಾಡಿ ಕಾರ್ಯಕ್ರಮದಿಂದ ಹೊರಡುತ್ತಿದ್ದಂತೆ, ಕೋಳಿ ಪಡೆಯಲು ಸಾವಿರಾರು ಜನರು ಬಿರುಬಿಸಿಲನ್ನು ಲೆಕ್ಕಿಸದೆ ಸರತಿ ಸಾಲಿನಲ್ಲಿ ನಿಂತರು. ಸುಮಾರು 2000 ಜನರಿಗೆ ಸ್ಥಳೀಯ ಮುಖಂಡ ಚರಣ್ಗೌಡ ಆಹಾರ ಕಿಟ್ ವಿತರಣೆ ಮಾಡುತ್ತಿದ್ದು, ದಿನಸಿ, ಮೊಟ್ಟೆ ಹಾಗೂ ಕೋಳಿಗಾಗಿ ಜನರು ಮುಗಿಬಿದ್ದರು. ಕೆಲವೊಮ್ಮೆ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಕೋಳಿ ಪಡೆಯಲು ಮುಂದಾದ ಘಟನೆಯೂ ನಡೆಯಿತು.
ಇದೇ ವೇಳೆ ಶಾಸಕ ಮಂಜುನಾಥ್ ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಕಿಡಿಕಾರಿದರು. ಸರ್ಕಾರದಿಂದ ನೀಡುತ್ತಿರುವ ಆಹಾರ ಕಿಟ್ಗಳು ಬಿಜೆಪಿ ಕಾರ್ಯಕರ್ತರ ಮನೆ ಸೇರುತ್ತಿದೆ. ಆದರೆ ನಮ್ಮ ಕಾರ್ಯಕರ್ತರು ಯಾವುದೇ ಪಕ್ಷ ಬೇದ ಮಾಡದೇ ಎಲ್ಲ ವರ್ಗದ ಜನರಿಗೆ ಈ ಕೊರೊನಾ ಲಾಕ್ಡೌನ್ ವೇಳೆ ಆಹಾರ ಕಿಟ್ ಹಂಚುವಲ್ಲಿ ಮತ್ತು ಸಹಾಯ ಮಾಡುವಲ್ಲಿ ಯಶಸ್ವಿಯಾಗಿದೆ ಎಂದರು.
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಅಗ್ರಹಾರದಲ್ಲಿ ನಿವೃತ್ತ ಕೆಇಬಿ ಅಧಿಕಾರಿ ಜಾಫರ್ ಖಾನ್ ಹಾಗೂ ಅವರ ಮಗ ಮೌಲಾ ಇಂದು ಜನರಿಗೆ ಉಚಿತವಾಗಿ ಹಣ ಹಂಚಿದ್ದಾರೆ.
ತಮ್ಮ ಏರಿಯಾದಲ್ಲಿನ ಬಡವರಿಗೆ ತಲಾ 100-200 ರೂಪಾಯಿ ವಿತರಿಸಿದ್ದಾರೆ. ದುಡ್ಡು ಕೊಡುತ್ತಿದ್ದಾರೆ ಎಂದು ತಿಳಿದ ಜನ ತಂಡೋಪತಂಡವಾಗಿ ಜಮಾಯಿಸಿ ಹಣ ಪಡೆದುಕೊಂಡಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಮರೆತು ನಾ ಮುಂದು ತಾ ಮುಂದು ಅಂತ ಹಣ ಪಡೆದುಕೊಳ್ಳೋಕೆ ಮುಗಿಬಿದ್ದಿದ್ದಾರೆ.
ರಂಜಾನ್ ಹಬ್ಬದ ಅಂಗವಾಗಿ ಪ್ರತಿ ವರ್ಷ ಇದೇ ರೀತಿ ಜಾಫರ್ ಖಾನ್ ಹಣ ಹಂಚಿಕೆ ಮಾಡುತ್ತಿದ್ದರಂತೆ. ಈ ಬಾರಿ ಕೊರೊನಾ ಎಫೆಕ್ಟ್ ಹಿನ್ನೆಲೆ ಮೊದಲೇ ಹಣ ಹಂಚಿಕೆ ಮಾಡಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಇಲ್ಲದೆ ಜನ ಮುಗಿಬಿದ್ದಿರುವ ಮಾಹಿತಿ ಅರಿತ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಜನರನ್ನು ಚದುರಿಸಿದ್ದಾರೆ. ತದನಂತರ ಸರದಿ ಸಾಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡವರಿಗೆ ಹಣ ಹಂಚಿಕೆ ಮಾಡಿಸಿದ್ದಾರೆ. ಸರಿ ಸುಮಾರು 40000 ಹಣ ಹಂಚಿಕೆ ಮಾಡಿರುವುದಾಗಿ ಜಾಫರ್ ಖಾನ್ ಹೇಳಿದ್ದಾರೆ.
ಶಿವಮೊಗ್ಗ/ಬಳ್ಳಾರಿ: ರಾಜ್ಯದೆಲ್ಲೆಡೆ ಲೋಕಸಭಾ ಕ್ಷೇತ್ರದ ಚುನಾವಣೆ ರಂಗೇರುತ್ತಿದೆ. ಇತ್ತ ವ್ಯಕ್ತಿಯೊಬ್ಬ ಮತದಾರರಿಗೆ ಹಣ ಹಂಚುತ್ತಿದ್ದಾಗ ಸಿಕ್ಕಿ ಬಿದ್ದಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ನಗರದ ವಾರ್ಡ್ ನಂಬರ್ 7 ವಿನೋಬಾನಗರದಲ್ಲಿ ಇರುವ ಮತದಾರರಿಗೆ ದುಡ್ಡು ಹಂಚುತ್ತಿದ್ದಾಗ ವ್ಯಕ್ತಿ ಸಿಕ್ಕಿ ಬಿದ್ದಿದ್ದಾನೆ. ಆತ ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಹಣ ಹಂಚಿಕೆ ಮಾಡುತ್ತಿದ್ದ ಎಂಬ ಮಾಹಿತಿಗಳು ಕೇಳಿಬರುತ್ತಿವೆ.
ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದ್ದು, ಮತದಾರರಿಗೆ ಪ್ರಚಾರದ ಜೊತೆ ತಲಾ 500 ರೂಪಾಯಿ ಹಂಚಿಕೆಯನ್ನು ಮಾಡಲಾಗುತ್ತಿತ್ತು. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಕಾರ್ಯಾಚರಣೆ ಮಾಡಿ, ಹಣ ಹಂಚುತ್ತಿದ್ದ ವ್ಯಕ್ತಿಯನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಈ ಬಗ್ಗೆ ಇನ್ನೂ ಯಾವುದೇ ದೂರು ದಾಖಲಾಗಿಲ್ಲ.
ಬಳ್ಳಾರಿಯಲ್ಲೂ ಕೂಡ ಎಮ್ಮಿಗನೂರು ಹಾಗೂ ಕುರುಗೋಡ್ ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಎಮ್ಮಿಗನೂರು ಗ್ರಾಮದಲ್ಲಿ ಮದ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ ಕುರುಗೋಡ್ ಗ್ರಾಮದಲ್ಲಿ ಮದ್ಯ ಸರಬರಾಜು ಮಾಡುತ್ತಿದ್ದ ಬೈಕ್ ಅನ್ನು ವಶಕ್ಕೆ ಪಡೆದು, 111 ಲೀಟರ್ ಮದ್ಯ ಜಪ್ತಿ ಮಾಡಿದ್ದಾರೆ.
ವಿಜಯಪುರ/ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತಯಾಚನೆ ಮಾಡಿ ತೆರಳಿದ ಬಳಿಕ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡಲಾಗಿದೆ.
ಯಡ್ಡಿಯೂರಪ್ಪ ಪ್ರಚಾರ ಸಭೆಗಾಗಿ ಇಂದು ಸಿಂಧಗಿಗೆ ಆಗಮಿಸಿದ್ದರು. ಸಭೆಯಲ್ಲಿ ಸಿಂದಗಿ ಮತಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಬಂದಿದ್ದರು. ಅತ್ತ ಯಡ್ಡಿಯೂರಪ್ಪ ಸಭೆಯಲ್ಲಿ ಮತಯಾಚನೆ ಮಾಡಿ ತೆರಳುತ್ತಿದ್ದಂತೆ ಇತ್ತ ಸಿಂಧಗಿ ಬಿಜೆಪಿ ತಾಲೂಕು ಅಧ್ಯಕ್ಷ ಸಿದ್ದು ಬುಳ್ಳಾ ಹಣ ಹಂಚಿಕೆ ಮಾಡಿದ್ದಾರೆ. ಹಣ ಹಂಚಿಕೆ ಮಾಡಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸಿಂಧಗಿ ಮಾಜಿ ಶಾಸಕ ರಮೇಶ್ ಭೂಸನೂರ ಆದೇಶದ ಮೇರೆಗೆ ಹಣ ಹಂಚಿರಬಹುದೆಂಬ ಶಂಕೆ ವ್ಯಕ್ತವಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಗೂಳಪ್ಪ ಶೆಟಗಾರ ಪರವಾಗಿ ಮತಚಲಾಯಿಸಲು ಹಣ ಹಂಚಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದ್ದು, ಸಭೆ ನಡೆದ ಸಿಂಧಗಿಯ ವಿರೇಶ್ವರ ಸಭಾ ಭವನದಲ್ಲೇ ಹಣ ಹಂಚಲಾಗಿದೆ.
ಸಮ್ಮಿಶ್ರ ಸರ್ಕಾರದ ವಿರುದ್ಧ ಕಿಡಿ: ಸಿದ್ದರಾಮಯ್ಯ ನಾನು ಸಿಎಂ ಆಗುತ್ತೇವೆ ಎಂದು ಹೇಳಿದ್ದು ಸಾಮಾನ್ಯ, ಅಪೇಕ್ಷೆ ಪಡುವುದು ಸಾಮಾನ್ಯ ಎಂದು ಸಿದ್ದರಾಮಯ್ಯನವರ ಕಾಲೆಳೆದರು. ಸಮನ್ವಯ ಸಮಿತಿ ಸೇರುವುದೇ ದೊಡ್ಡ ವಿಷಯವಾಗಿತ್ತು. ಬಹಳ ದಿನಗಳ ನಂತರ ಒಂದೆಡೆ ಸೇರಿದ್ದಾರೆ ಎಂದು ವ್ಯಂಗ್ಯವಾಡಿದರು. ಅಲ್ಲದೆ ಈ ಸಮ್ಮಿಶ್ರ ಸರ್ಕಾರ ಗೊಂದಲದ ಗೂಡಾಗಿದೆ. 100 ದಿನ ಪೂರೈಸಿದರೂ ಸಿಎಂ ಉತ್ತರ ಕರ್ನಾಟಕ ಭಾಗಕ್ಕೆ ಬಂದಿಲ್ಲ. ಅಭಿವೃದ್ಧಿ ಶೂನ್ಯ, ನೀರಾವರಿ, ಲೋಕೋಪಯೋಗಿ ಇಲಾಖೆ ಕೆಲಸಗಳು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದರು.
ರಾಹುಲ್ ಗಾಂಧಿ ಅವರನ್ನು ಕುರಿತು ಪ್ರತಿಕ್ರಿಯಿಸಿದ ಅವರು ಪ್ರಯಾಣಿಸುತ್ತಿದ್ದ ವೇಳೆ ವಿಮಾನದಲ್ಲಿ ಕಂಡಿದ್ದ ತಾಂತ್ರಿಕ ತೊಂದರೆ ಬಗ್ಗೆ ಕೇಂದ್ರ ಸರ್ಕಾರ ಯಾವ ಪ್ರಕರಣವನ್ನೂ ಮುಚ್ಚಿ ಹಾಕಿಲ್ಲ ಸಮಗ್ರ ತನಿಖೆ ಮಾಡುತ್ತಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯತ್ತ ಮತದಾರರು ಒಲವು ತೋರಿದ್ದಾರೆ. ವಿಧಾನ ಪರಿಷದ್ ಉಪ ಚುನಾವಣೆಯಲ್ಲೂ ನಮ್ಮ ಅಭ್ಯರ್ಥಿಗಳಿಗೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಲೋಕೋಪಯೋಗಿ ಇಲಾಖೆಗೆ ಶೇಕಡಾವಾರು ಟಾಪ್ ಅನುದಾನ ಬಿಡುಗಡೆ ಮಾಡುವ ಮೂಲಕ, ಅಣ್ಣನ ಮೇಲಿನ ಪ್ರೀತಿ ವ್ಯಕ್ತಪಡೆಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಜೆಟ್ನಲ್ಲಿ ಲೋಕೋಪಯೋಗಿ ಇಲಾಖೆಗೆ 9,271 (4%) ಕೋಟಿ ರೂ. ಅನುದಾನ ನೀಡಿದ್ದರು. ಆದರೆ ಈ ಬಾರಿ ಕುಮಾರಸ್ವಾಮಿ ಅವರು 10,200 (4%) ಕೋಟಿ ರೂ.ಗಳ ಅನುದಾನ ಹಂಚಿಕೆ ಮಾಡುವ ಮೂಲಕ 929 ಕೋಟಿ ರೂ. ಹೆಚ್ಚಿನ ಹಣವನ್ನು ಲೋಕೋಪಯೋಗಿ ಇಲಾಖೆಗೆ ನೀಡಿದ್ದಾರೆ.
ಶಿಕ್ಷಣ ಇಲಾಖೆಯನ್ನು ಕುಮಾರಸ್ವಾಮಿ ಅವರು ಭಾರೀ ಕಡೆಗಣನೆ ಮಾಡಿದ್ದು, ಸಿದ್ದರಾಮಯ್ಯ ಅವರಿಗಿಂತ 283 ಕೋಟಿ ರೂ. ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಒಳಾಡಳಿತ ಹಾಗೂ ಸಾರಿಗೆ ಇಲಾಖೆಗೆ ಕಳೆದ ಬಾರಿಗಿಂತ 862 ಕೋಟಿ ರೂ. ಕಡಿಮೆ ಅನುದಾನ ಹಂಚಿಕೆಯಾಗಿದೆ.
ಹೀಗಾಗಿ ಇಲ್ಲಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರು ಯಾವ ಇಲಾಖೆಗೆ ಎಷ್ಟು ಹಣವನ್ನು ಮೀಸಲಿಟ್ಟಿದ್ದಾರೆ ಎನ್ನುವ ಮಾಹಿತಿಯನ್ನು ನೀಡಲಾಗಿದೆ.
ಯಾದಗಿರಿ: ನಿರ್ದಿಷ್ಟ ಸೂರಿಲ್ಲದೇ ಊರೂರು ಸುತ್ತಾಡುತ್ತ, ಯಾರಾದ್ದೋ ಜಾಗದಲ್ಲಿ ಶೆಡ್ ಗಳನ್ನು ನಿರ್ಮಿಸಿ, ಚಾಪೆ ಬುಟ್ಟಿಗಳನ್ನು ಹೆಣೆಯುವ ಮೂಲಕ ವಡಗೇರಾ ತಾಲೂಕಿನ ಹಂಚಿನಾಳ ಗ್ರಾಮದ ಕೆಲವು ಕುಟುಂಬಗಳು ಜೀವನ ನಡೆಸುತ್ತಿವೆ.
ಹಂಚಿನಾಳ ಗ್ರಾಮದಲ್ಲಿ ಸುಮಾರು 66 ಕುಟುಂಬಗಳು ವಾಸ ಮಾಡುತ್ತಿದ್ದು, ಅವರ ಮೂಲ ವೃತ್ತಿ ಈಚಲು ಮರದ ಗರಿಗಳಿಂದ ಬುಟ್ಟಿ ಚಾಪೆಗಳನ್ನು ಹೆಣೆಯುವುದು. ಹೀಗಾಗಿ ಅಲೆಮಾರಿ ಜೀವನ ನಡೆಸುತ್ತಿರುವ ಅವರು ಮಳೆ ಗಾಳಿ ಬಿಸಿಲನ್ನು ಲೆಕ್ಕಿಸದೇ ಬೇರೆ ಬೇರೆ ಗ್ರಾಮಗಳಿಗೆ ಹೋಗುತ್ತಾರೆ. ಅಲ್ಲಿ ಅಭ್ಯವಿರುವ ಖಾಲಿ ಜಾಗದಲ್ಲಿ ಒಂದಷ್ಟು ದಿನ ಶೇಡ್ ಹಾಕಿಕೊಂಡು ಚಾಪೆ, ಬುಟ್ಟಿ ತಯಾರಿಸುತ್ತಾರೆ.
ಅಲೆಮಾರಿ ಜನಾಂಗದವರು ಸತತ ಮೂರು ವರ್ಷಗಳಿಂದ ಒಂದು ನಿರ್ದಿಷ್ಟ ಸೂರು ಕಂಡುಕೊಳ್ಳಲು ಹೋರಾಟ ನಡೆಸಿದ್ದಾರೆ. ಇದರ ಫಲವಾಗಿ ಯಾದಗಿರಿ ಜಿಲ್ಲಾಧಿಕಾರಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗೆ ಹಂಚಿನಾಳ ಗ್ರಾಮದಲ್ಲಿ ಸರ್ವೆ ನಂಬರ್ 59ರಲ್ಲಿ 2 ಎಕರೆ ಭೂಮಿ ಮಂಜೂರು ಮಾಡಿದ್ದರು. ಆದರೆ ಈಗ ಅಧಿಕಾರಿಗಳು ಕಾಯ್ದಿರಿಸಿದ ಜಾಗದಲ್ಲಿ ನಿವೇಶನಗಳನ್ನು ನಿರ್ಮಿಸಿ ಹಕ್ಕು ಪತ್ರ ವಿತರಿಸುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ.
ಹಂಚಿನಾಳ ಗ್ರಾಮದ ಅಲೆಮಾರಿ ಜನಾಂಗದವರು ನಿರ್ದಿಷ್ಟ ಸೂರಿನಲ್ಲಿ ವಾಸ ಮಾಡಲು ಹಪಪಿಸುತ್ತಿದ್ದಾರೆ. ನಿವೇಶನ ನಿರ್ಮಿಸಿ, ಹಕ್ಕು ಪತ್ರ ಹಂಚಿಕೆ ಮಾಡುವ ನಿಟ್ಟಿನಲ್ಲಿ ಸಹಾಯ ಮಾಡುವಂತೆ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೂಲಕ ಸರ್ಕರಕ್ಕೆ ಮನವಿ ಮಾಡಿದರು.