Tag: ಹಂತಕರು

  • ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ರಾಯಗಢ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸಿದ್ದ ಹಂತಕರು

    ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ರಾಯಗಢ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸಿದ್ದ ಹಂತಕರು

    ಮುಂಬೈ: ಮಹಾರಾಷ್ಟ್ರ (Maharashtra) ಮಾಜಿ ಸಚವ ಹಾಗೂ ಎನ್‌ಸಿಪಿ (NCP) ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ (Baba Siddique Murder Case) ಹಂತಕರು ರಾಯಗಢ ಜಲಪಾತದ (Raigad Falls) ಬಳಿ ಶೂಟಿಂಗ್ ಅಭ್ಯಾಸ ನಡೆಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

    ಅ.12 ರಂದು ನಡೆದ ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಸಂಬಂಧ ಮುಂಬೈ ಕ್ರೈಂ ಬ್ರ್ಯಾಂಚ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣದಲ್ಲಿ 10 ಜನರನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಇನ್ನೋರ್ವ ಆರೋಪಿ ಶಿವಕುಮಾರ್ ಎಂಬುವವನನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.ಇದನ್ನೂ ಓದಿ: ಆಪರೇಷನ್ ಆಲೌಟ್ ಜೆಡಿಎಸ್ – ಸಿಎಂ ಮುಂದೆ ಡಿಕೆಶಿ ಶಪಥ

    ಇದಕ್ಕೂ ಮುನ್ನ ಹತ್ಯೆಯ ಮೂರು ಆರೋಪಿಗಳಾದ ಧರ್ಮರಾಜ್ ಕಶ್ಯಪ್, ಗುರ್ಮೈಲ್ ಸಿಂಗ್ ಮತ್ತು ಪರಾರಿಯಾಗಿರುವ ಶಿವಕುಮಾರ್ ಯೂಟ್ಯೂಬ್ ನೋಡಿ ಶೂಟಿಂಗ್ ಕಲಿತಿದ್ದರು ಎಂದು ತನಿಖೆಯ ವೇಳೆ ಬೆಳಕಿಗೆ ಬಂದಿತ್ತು. ಇದೀಗ ಇನ್ನೊಂದು ಮಾಹಿತಿ ಲಭಿಸಿದ್ದು, ಹಂತಕರು ರಾಯಗಢ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸುತ್ತಿದ್ದರು.

    ಸೆಪ್ಟೆಂಬರ್ ತಿಂಗಳಲ್ಲಿ ಮುಂಬೈನ (Mumbai) ಹೊರವಲಯದಲ್ಲಿರುವ ಕರ್ಜತ್ ಎಂಬ ಪ್ರದೇಶದ ಬಳಿಯಿರುವ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಬಾಬಾ ಸಿದ್ದಿಕಿಯನ್ನು ಹತ್ಯೆಮಾಡಲು ಥಾಣೆ ಮೂಲದ ನಿತಿನ್ ಸಪ್ರೆ, ರಾಮ್ ಕನೂಜಿಯಾ ನೇತೃತ್ವದ ಐದು ಸದಸ್ಯರ ತಂಡಕ್ಕೆ ಸುಪಾರಿಯನ್ನು ನೀಡಲಾಗಿತ್ತು. ಜೊತೆಗೆ ಅಪರಾಧಕ್ಕೆ ಬಳಸಲಾದ ಪಿಸ್ತೂಲ್‌ಗಳನ್ನು ಕೂಡ ರಾಜಸ್ಥಾನದಿಂದ ತರಿಸಲಾಗಿತ್ತು. ಸುಪಾರಿಗಾಗಿ 50 ಲಕ್ಷ ರೂ.ಯನ್ನು ಇರಿಸಲಾಗಿದ್ದು, ಈ ಮೊತ್ತದ ಬೇಡಿಕೆಯಲ್ಲಿ ಭಿನ್ನಾಭಿಪ್ರಾಯ ಉಂಟಾದ ಕಾರಣ ಈ ತಂಡ ಹಿಂದೆ ಸರಿಯಿತು.

    ಈ ವೇಳೆ ಬಾಬಾ ಸಿದ್ದಿಕಿ ಹಂತಕರು ಕರ್ಜತ್ ಸ್ಥಳದ ಸಮೀಪದ ಜಲಪಾತವು ನಿರ್ಜನ ಪ್ರದೇಶವಾಗಿದ್ದು, ಅರಣ್ಯದಿಂದ ಪ್ರದೇಶ ಸುತ್ತುವರೆದಿದೆ. ಆದ್ದರಿಂದ ಆ ಸ್ಥಳದಲ್ಲಿ ಹಂತಕರು ಶೂಟಿಂಗ್ ಅಭ್ಯಾಸ ನಡೆಸುತ್ತಿದ್ದರು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು, ಇದು ಸಾಧ್ಯತೆಯ ಕಲೆ: ಡಿಕೆ ಶಿವಕುಮಾರ್‌

  • ಕೋರ್ಟ್ ಬಳಿ ಉದಯಪುರ ಟೈಲರ್ ಹಂತಕರ ಬಟ್ಟೆ ಹರಿದು ಥಳಿಸಿದ ಪ್ರತಿಭಟನಾಕಾರರು

    ಕೋರ್ಟ್ ಬಳಿ ಉದಯಪುರ ಟೈಲರ್ ಹಂತಕರ ಬಟ್ಟೆ ಹರಿದು ಥಳಿಸಿದ ಪ್ರತಿಭಟನಾಕಾರರು

    ಜೈಪುರ: ಟೈಲರ್ ಕನ್ಹಯ್ಯ ಲಾಲ್ ಅವರನ್ನು ಭೀಕರವಾಗಿ ಹತ್ಯೆಗೈದ ಹಂತಕರ ಮೇಲೆ ಜೈಪುರ ನ್ಯಾಯಾಲಯದ ಬಳಿ ದೊಡ್ಡ ಗುಂಪೊಂದು ಶನಿವಾರ ದಾಳಿ ನಡೆಸಿದೆ.

    ಜೈಪುರ ನ್ಯಾಯಾಲಯದ ಹೊರಗೆ ಗುಂಪೊಂದು ಉದಯಪುರ ಟೈಲರ್ ಹಂತಕರ ಮೇಲೆ ಹಲ್ಲೆ ನಡೆಸಿ, ಬಟ್ಟೆಯನ್ನೆಲ್ಲಾ ಹರಿದು ಹಾಕಿದ್ದಾರೆ. ಪೊಲೀಸರು ತಕ್ಷಣ ಆರೋಪಿಗಳನ್ನು ಪೊಲೀಸ್ ವ್ಯಾನ್‌ಗೆ ಹತ್ತಿಸಿ, ಅವರನ್ನು ರಕ್ಷಿಸಿದ್ದಾರೆ.

    ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಅವರನ್ನು ಮಂಗಳವಾರ ಇಬ್ಬರು ಪಾತಕಿಗಳು ಭೀಕರವಾಗಿ ಹತ್ಯೆ ನಡೆಸಿ, ಅದರ ವೀಡಿಯೋವನ್ನೂ ಮಾಡಿದ್ದರು. ಬಳಿಕ ಅವರು ಹತ್ಯೆಗೆ ಬಳಸಿದ ಆಯುಧದಿಂದಲೇ ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಯನ್ನೂ ನಡೆಸುವುದಾಗಿ ಬೆದರಿಕೆ ಹಾಕಿದ್ದರು. ಆ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಇದನ್ನೂ ಓದಿ: ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ – 14 ದಿನ ನ್ಯಾಯಾಂಗ ಬಂಧನ

    ವೀಡಿಯೋ ವೈರಲ್ ಆಗುತ್ತಿದ್ದಂತೆ ದೇಶಾದ್ಯಂತ ಬೆಚ್ಚಿ ಬಿದ್ದ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಹಂತಕರಾದ ಅಖ್ತಾರಿ ಹಾಗೂ ಮೊಹಮ್ಮದ್‌ನನ್ನು ಪೊಲೀಸರು ಬಂಧಿಸಿದ್ದರು. ಹತ್ಯೆಯಲ್ಲಿ ಭಾಗಿಯಾಗಿದ್ದ ಹಾಗೂ ಸಂಚು ರೂಪಿಸಿದ್ದ ಆರೋಪದ ಮೇಲೆ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ.

    Udaipur

    ನಾಲ್ಕೂ ಆರೋಪಿಗಳನ್ನು ಇಂದು ಜೈಪುರದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಆದರೂ ಆರೋಪಿಗಳ ಮೇಲೆ ಸ್ಥಳದಲ್ಲಿ ನೆರೆದಿದ್ದ ಗುಂಪು ಹಲ್ಲೆ ನಡೆಸಲು ಮುಂದಾಗಿದೆ. ಇದರೊಂದಿಗೆ ಕನ್ಹಯ್ಯ ಹಂತಕರಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕರೊಂದಿಗೆ ಟೈಲರ್‌ ಹಂತಕರಿರೋ ಫೋಟೋ ವೈರಲ್‌ – BJPಗೂ ಹಂತಕರಿಗೂ ಇದ್ಯಾ ನಂಟು?

    Live Tv

  • ಹರ್ಷನ ಕೊಲೆಗೆ ಹಂತಕರು ಸ್ವತಃ ಕುಲುಮೆಯಲ್ಲಿ ಕುಳಿತು ಮಚ್ಚು ರೆಡಿ ಮಾಡಿಸಿದ್ರು!

    ಹರ್ಷನ ಕೊಲೆಗೆ ಹಂತಕರು ಸ್ವತಃ ಕುಲುಮೆಯಲ್ಲಿ ಕುಳಿತು ಮಚ್ಚು ರೆಡಿ ಮಾಡಿಸಿದ್ರು!

    ಶಿವಮೊಗ್ಗ: ಹರ್ಷನ ಕೊಲೆಗೆ ಹಂತಕರೇ ಸ್ವತಃ ಕುಲುಮೆಯಲ್ಲಿ ಕುಳಿತುಕೊಂಡು ಕುಲುಮೆಯವನಿಗೆ ಸೂಚನೆ ನೀಡಿ ಮಚ್ಚು ರೆಡಿ ಮಾಡಿಸಿದ್ದರು. ಹರ್ಷ ಕೊಲೆಗೆ ಮೊದಲೇ ಪ್ಲಾನ್ ಮಾಡಿದ್ರಾ ಎಂಬ ಶಂಕೆ ಬರುತ್ತಿದೆ.

    ಹರ್ಷ ಕೊಲೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದು, ಒಂದೊಂದೇ ಸತ್ಯ ತೆರೆದುಕೊಳ್ಳುತ್ತಿದೆ. ಈ ನಡುವೆ ಹರ್ಷನ ಕೊಲೆಗೆ ಸ್ವತಃ ಹಂತಕರೇ ಕುಲುಮೆಯಲ್ಲಿ ಕುಳಿತುಕೊಂಡು ಕುಲುಮೆಯವನಿಗೆ ನಿರ್ದೇಶನ ನೀಡಿ ಮಚ್ಚು ತಯಾರಿ ಮಾಡಿಸಿದ್ದರು. ಈ ಹಂತಕರು ಹರ್ಷನ ಕೊಲೆಗೆ 3 ಮಚ್ಚುಗಳನ್ನು ರೆಡಿ ಮಾಡಿಸಿದ್ದರು. ಭಾನುವಾರ ಮುಂಜಾನೆಯೇ ಭದ್ರಾವತಿಯ ಕುಲುಮೆಯೊಂದರಲ್ಲಿ ಸ್ವತಃ ನಾಲ್ವರು ಹಂತಕರು ಕುಳಿತುಕೊಂಡು ಇದನ್ನು ರೆಡಿ ಮಾಡಿಸಿದ್ದಾರೆ. ಇದನ್ನೂ ಓದಿ:  ವೈದ್ಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್, ರಷ್ಯಾಗೇ ಹೆಚ್ಚಾಗಿ ಯಾಕೆ ಹೋಗ್ತಾರೆ ಗೊತ್ತಾ?

    ಹಂತಕರು ಮಚ್ಚುಗಳು ಹೀಗೆಯೇ ಇರಬೇಕು. ಇಷ್ಟೇ ಉದ್ದ ಇರಬೇಕು. ಇಷ್ಟೇ ಹರಿತವಾಗಿ ಇರಬೇಕು ಎಂದು ಹೇಳಿ ಮಾಡಿಸಿದ್ದಾರೆ. ಮೂರು ಮಚ್ಚುಗಳನ್ನು ತಯಾರಿಸಲು 1,200 ರೂ. ಹಣ ಖರ್ಚು ಮಾಡಿದ್ದಾರೆ. ಹರ್ಷನ ಕೊಲೆ ಮಾಡಲು ಈ ಮೊದಲೇ ನಿರ್ಧರಿಸಿದ್ದರಿಂದ ಭಾನುವಾರ ಮುಂಜಾನೆ ಮಚ್ಚು ರೆಡಿ ಮಾಡಿಸಿದ್ದರು. ಭಾನುವಾರ ರಾತ್ರಿ ಹರ್ಷನನ್ನು ಕೊಲೆ ಮಾಡಲಾಗಿದೆ.

    ಹಂತಕರು ಭಾನುವಾರ ಸಂಜೆ ಕಾರಿನಲ್ಲಿ ಕುಳಿತುಕೊಂಡು ಹರ್ಷನ ಚಲನವಲನ ಗಮನಿಸಿದ್ದಾರೆ. ಹರ್ಷ ಸೀಗೆಹಟ್ಟಿ ಬಡಾವಣೆಯಲ್ಲಿ ನಡೆದುಕೊಂಡು ಬರುತ್ತಿರುವಾಗ, ಹಂತಕರು ಅವನನ್ನು ಕಾರಿನಲ್ಲಿ ಕುಳಿತು ಗಮನಿಸಿದ್ದಾರೆ. ನಂತರ ಸೀಗೆಹಟ್ಟಿಯ ಹಲವೆಡೆ ಕಾರಿನಲ್ಲಿ ಓಡಾಟ ನಡೆಸಿದ್ದ ಹಂತಕರು, ಹರ್ಷನ ಕೊಲೆ ಮಾಡುವ ಮೊದಲು ಒಂದು ಕಾರು ಬಳಕೆ ಮಾಡಿದ್ದಾರೆ. ಹರ್ಷನ ಕೊಲೆ ಮಾಡಿದ ನಂತರ ಎಸ್ಕೇಪ್ ಆಗಲು ಮತ್ತೊಂದು ಕಾರು ಬಳಕೆ ಮಾಡಿದ್ದಾರೆ. ಇದನ್ನೂ ಓದಿ:  BJP, RSS ನಾಯಕರ ಮಾಹಿತಿಯನ್ನು SDPIಗೆ ಕೊಟ್ಟ ಪೊಲೀಸ್ ಅಮಾನತು!

    ಹರ್ಷ ಒಬ್ಬನೇ ಇರುವುದು ಗಮನಿಸಿದ ಹಂತಕರು, ಸೀಗೆಹಟ್ಟಿ ಬಳಿ ಮಚ್ಚು ಹಿಡಿದುಕೊಂಡು ಕಾರಿನಿಂದ ಕೆಳಗೆ ಇಳಿದಿದ್ದಾರೆ. ಹಂತಕರು ಕಾರಿನಿಂದ ಕೆಳಗೆ ಇಳಿಯುತ್ತಿದ್ದ ಹಾಗೆ ಆ ಸ್ಥಳದಿಂದ ಕಾರು ಹೊರಟು ಹೋಗಿದೆ. ಹರ್ಷನ ಕೊಲೆಯ ನಂತರ ಓಡಿ ಹೋಗಿ ಮತ್ತೊಂದು ಕಾರು ಹತ್ತಿಕೊಂಡು ಪರಾರಿಯಾಗಿದ್ದಾರೆ.

  • ಹಂತಕರಿಗೆ ಗಲ್ಲು-ದೋಷಿಗಳ ಪರ ವಕೀಲ ಎ.ಪಿ.ಸಿಂಗ್ ಮೊದಲ ಪ್ರತಿಕ್ರಿಯೆ

    ಹಂತಕರಿಗೆ ಗಲ್ಲು-ದೋಷಿಗಳ ಪರ ವಕೀಲ ಎ.ಪಿ.ಸಿಂಗ್ ಮೊದಲ ಪ್ರತಿಕ್ರಿಯೆ

    ನವದೆಹಲಿ: ನಿರ್ಭಯಾ ಹಂತಕರಿಗೆ ಗಲ್ಲು ಶಿಕ್ಷೆ ಆಗಿದೆ. ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ವರನ್ನು ಗಲ್ಲು ಶಿಕ್ಷೆಗೆ ಒಳಪಡಿಸಲಾಗಿದೆ. ಸುಪ್ರೀಂಕೋರ್ಟ್ ನಲ್ಲಿ ದೋಷಿಗಳ ಅರ್ಜಿ ವಜಾಗೊಳ್ಳುತ್ತಿದ್ದಂತೆ ಅಪರಾಧಿಗಳ ಪರ ವಾದ ಮಂಡಿಸಿದ್ದ ವಕೀಲ ಎ.ಪಿ.ಸಿಂಗ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದರು.

    ಸಂವಿಧಾನ ಅನುಗುಣವಾಗಿ ಎಲ್ಲ ಕಾರ್ಯಗಳು ನಡೆಬೇಕಿತ್ತು. ಹಾಗಾಗಿ ರಾತ್ರಿ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಮುಂದೆ ಹೋಗಿ ಜೀವ ಉಳಿಸುವ ಕೆಲಸ ಮಾಡಲಾಯ್ತು. ನ್ಯಾಯಾಲಯದ ಮುಂದೆ ನಾನು ಹೊಸ ವಾದವನ್ನೇ ಮಂಡಿಸಿದ್ದೇನೆ. ದೋಷಿ ಅಕ್ಷಯ್ ಪುತ್ರ ತಂದೆಯನ್ನು ಕಾಣಲು ಬಿಹಾರದಿಂದ ಬಂದಿದ್ದಾನೆ. ತಂದೆಯ ಭೇಟಿಗೆ ಅವಕಾಶ ನೀಡಬೇಕಿತ್ತು. ಮುಖೇಶ್ ಕುಟುಂಬಸ್ಥರು ದೆಹಲಿಯ ನಿವಾಸಿಗಳು. ಆದ್ರೆ ಅಕ್ಷಯ್ ಕುಟುಂಬ ಬಿಹಾರನ ನಕ್ಸಲ್ ಪೀಡಿತ ಪ್ರದೇಶದಲ್ಲಿದೆ. ಎಂಟು ವರ್ಷದ ಮಗನಿಗೆ ತಂದೆಯನ್ನ ನೋಡುವ ಅವಕಾಶ ಸಿಗಲಿಲ್ಲ.

    ಒಂದು ಮಗು ತಂದೆಯನ್ನ ನೋಡಿದ್ರೆ ಏನು ಆಗುತ್ತಿತ್ತು. ಮಗನಿಗೆ ತಂದೆಯ ಭೇಟಿಗೆ ಅವಕಾಶ ನೀಡದಿರೋದು ಇತಿಹಾಸದಲ್ಲಿ ಇರಲಿದೆ. ಇಂದು ಬಾಲ ವಿಕಾಸ ಇಲಾಖೆಗೆ ನಾಚಿಕೆ ಆಗಬೇಕು. ಅಕ್ಷಯ್ ನನ್ನು ನೀವು ಬಲತ್ಕಾರಿ, ಹಂತಕ ಎಂದು ಹೇಳುತ್ತೀರಿ. ಇಲ್ಲಿ ಆತನ ಪುತ್ರನ ತಪ್ಪೇನಿದೆ. ಮುಂದೊಂದು ದಿನ ಅಕ್ಷಯ್ ಪುತ್ರ ದೊಡ್ಡವನಾಗಿ ಸಂವಿಧಾನ ಓದಿದ್ರೆ, ಈ ವ್ಯವಸ್ಥೆ, ಜೈಲು ನಿಯಮ, ಮಾಧ್ಯಮ ತಂದೆಯ ಭೇಟಿಗೆ ಅವಕಾಶ ಕಲ್ಪಿಸಲಿಲ್ಲ ಎಂಬ ಭಾವನೆ ಮೂಡುತ್ತದೆ. ನಿನ್ನೆ ಹೋದರೆ ಕೊರೊನಾ ಎಂದು ಹೇಳಿದರು. ಇಂದು ಕೋರ್ಟ್ ನತ್ತ ತಿರುಗಾಡುವ ಕೆಲಸವೇ ಆಯ್ತು. ಪವನ್ ತಾಯಿ ಅಂಗವಿಕಲೆಯಾಗಿದ್ದು, ಪುತ್ರನ ಭೇಟಿಗಾಗಿ ಕಾಯುತ್ತಿದ್ದಾರೆ. ಒಬ್ಬ ತಾಯಿಯ ನೋವನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಒಬ್ಬ ತಾಯಿ ಹಿಂದೆ ಎಲ್ಲರೂ ಓಡುತ್ತಿದ್ದಾರೆ. ಹಾಗಾದ್ರೆ ಪವನ್ ತಾಯಿಗೆ ಯಾವುದೇ ಬೆಲೆ ಇಲ್ವಾ? ಎಂಟು ವರ್ಷಗಳಿಂದ ಪ್ರಕರಣದಲ್ಲಿ ಯಾವುದೇ ಪ್ರತ್ಯಕ್ಷದರ್ಶಿಗಳು ಇರಲಿಲ್ಲ ಎಂದು ದೋಷಿ ಪರ ವಕೀಲ ಎ.ಪಿ.ಸಿಂಗ್ ಹೇಳಿದ್ದಾರೆ.

  • ಬೆಳಗಾವಿಯಲ್ಲಿ ಸುಪಾರಿ ಹಂತಕರ ಅಟ್ಟಹಾಸ

    ಬೆಳಗಾವಿಯಲ್ಲಿ ಸುಪಾರಿ ಹಂತಕರ ಅಟ್ಟಹಾಸ

    ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಸುಪಾರಿ ಹಂತಕರು ತಮ್ಮ ಅಟ್ಟಹಾಸ ಮುಂದುವರಿಸಿದ್ದಾರೆ.

    ಆಸ್ತಿ ವಿವಾದ ಹಿನ್ನೆಲೆಯಲ್ಲಿ ಇನ್ನೊಂದು ಬಳಗದಿಂದ ಸುಪಾರಿ ತೆಗೆದುಕೊಂಡ ಗ್ಯಾಂಗ್ ರಾತ್ರಿ ಬೆಳಗಾವಿ ನಗರದ ವಡಗಾಂವ ನಿವಾಸಿ ಶಂಕರ್ ಶಿಂಧೆ ಎಂಬವರ ಮನೆ ಮುಂಭಾಗದಲ್ಲೇ ಹತ್ಯೆ ಮಾಡಲು ಯತ್ನಿಸಿ ಪರಾರಿಯಾಗಿದೆ. ಅದೇ ಏರಿಯಾದ ಕೃಷ್ಣಾ ಕಟಾಂಬಳೆ ಮತ್ತು ಇಡೀ ಕುಟುಂಬಸ್ಥರು ಹಾಗೂ ಆತನೊಂದಿಗೆ 10ಕ್ಕೂ ಅಧಿಕ ಜನ ಸುಪಾರಿ ಹಂತಕರು ಸೇರಿಕೊಂಡು ಬಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

    ಹಲ್ಲೆಯಲ್ಲಿ ಶಂಕರ್ ತಲೆಗೆ ಹಾಗೂ ಹೊಟ್ಟೆ ಭಾಗ ತೀವ್ರ ಗಾಯಗಳಾಗಿವೆ. ಜಗಳ ಬಿಡಿಸಲು ಬಂದಿದ್ದ ಶಂಕರ್ ಪತ್ನಿಯನ್ನು ಎಳೆದಾಡಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ಹಿಂದೆ ನಾಲ್ಕು ಬಾರಿ ಕೂಡ ಶಂಕರ್ ಮೇಲೆ ಈ ಕೃಷ್ಣಾ ಕಟಾಂಬಳೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರಿದ್ದು ಯಾವುದೇ ಕ್ರಮ ಕೂಡ ಆಗಿಲ್ಲ.

    ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೋರ್ಟ್ ನಲ್ಲಿ ದಾವೆ ಕೂಡ ನಡೆಯುತ್ತಿದೆ. ಇಷ್ಟಾದರೂ ಗೂಂಡಾಗಿರಿ ಮಾಡಿ ಶಂಕರ್ ಮತ್ತು ಆತನ ಕುಟುಂಬವನ್ನ ಹೆದರಿಸಿ ಆಸ್ತಿಯನ್ನು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇದ್ಯಾವುದಕ್ಕೂ ಶಂಕರ್ ಒಪ್ಪದಿದ್ದಾಗ ಇಂದು ಏಕಾಏಕಿ 20ಕ್ಕೂ ಅಧಿಕ ಜನರು ಬಂದು ಗಂಡ-ಹೆಂಡತಿ ಮೇಲೆ ಇಟ್ಟಿಗೆ ಹಾಗೂ ಕಲ್ಲು ಸೇರಿದಂತೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

    ಗಂಭೀರವಾಗಿ ಗಾಯಗೊಂಡಿರುವ ಶಂಕರ್ ಗೆ ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಈ ಕುರಿತು ಟೀಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಹತ್ಯೆ ಮಾಡಲು ಯತ್ನಿಸಿದವರು ಹಾಗೂ ಸುಪಾರಿ ಹಂತಕರನ್ನು ಬಂಧಿಸಲು ಶಂಕರ್ ಆಗ್ರಹಿಸಿದ್ದಾರೆ.

  • ಶೀಘ್ರವೇ ಗೌರಿ ಹತ್ಯೆ ಆರೋಪಿಗಳು ಅರೆಸ್ಟ್: ರಾಮಲಿಂಗಾರೆಡ್ಡಿ

    ಶೀಘ್ರವೇ ಗೌರಿ ಹತ್ಯೆ ಆರೋಪಿಗಳು ಅರೆಸ್ಟ್: ರಾಮಲಿಂಗಾರೆಡ್ಡಿ

    ಚಿಕ್ಕಬಳ್ಳಾಪುರ: ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ಬಹುತೇಕ ಮುಗಿದಿದ್ದು ಸದ್ಯದಲ್ಲೇ ಹಂತಕರನ್ನು ಬಂಧಿಸುತ್ತೇವೆಂದು ಗೃಹಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

    ಇಂದಿರಾ ನಮನ ಕಾರ್ಯಕ್ರಮದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ಕೂಡ ಸಾಕಷ್ಟು ಬಾರಿ ಹೇಳಿದ್ದೇನೆ. ತನಿಖೆ ಮಾಡಲಾಗಿದ್ದು, ಹಂತಕರು ಯಾರು ಅಂತ ತಿಳಿದಿದೆ. ಶೀಘ್ರದಲ್ಲೇ ಆರೋಪಿಗಳು ಯಾರು ಅಂತ ಪ್ರಕಟಿಸಲಾಗುತ್ತೆ. 100 ಕ್ಕೆ 100 ರಷ್ಟು ಹಂತಕರನ್ನ ಬಂಧಿಸುತ್ತೇವೆ. ಆರೋಪಿಗಳ ಬಂಧನಕ್ಕೆ ಇನ್ನೂ ಸ್ವಲ್ಪ ದಿನಗಳ ಕಾಲ ಕಾಯಬೇಕು ಎಂದರು.

    ರಾಜ್ಯದ 30 ಜಿಲ್ಲೆಗಳಲ್ಲೂ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಎಲ್ಲಾ ಅಗತ್ಯ ಕ್ರಮಗಳನ್ನ ಕೈಗೊಂಡಿದೆ ಎಂದು ಹೇಳಿದ್ದಾರೆ.

    https://youtu.be/L8QXSCaOqbM

     

  • ಹಂತಕರ ಮುಂದಿನ ಟಾರ್ಗೆಟ್ ನಾನು, ನಂತ್ರ ಭಗವಾನ್: ನಿಡುಮಾಮಿಡಿ ಶ್ರೀ

    ಹಂತಕರ ಮುಂದಿನ ಟಾರ್ಗೆಟ್ ನಾನು, ನಂತ್ರ ಭಗವಾನ್: ನಿಡುಮಾಮಿಡಿ ಶ್ರೀ

    ಬೆಂಗಳೂರು: ಹಂತಕರು ಒಟ್ಟು ಐವರು ವಿಚಾರವಂತರ ಹತ್ಯೆಯ ಗುರಿ ಇಟ್ಟುಕೊಂಡಿದ್ದು, ಅದರಲ್ಲಿ ಕಲ್ಬುರ್ಗಿ ಹಾಗೂ ಗೌರಿ ಹತ್ಯೆ ಆಗಿದೆ. ಈಗ ಅವರ ಮುಂದಿನ ಹಿಟ್ ಲಿಸ್ಟ್‍ನಲ್ಲಿ ನಾನು ಇರಬಹುದು ಮುಂದೆ ಭಗವಾನ್ ಇರಬಹುದು ಎಂದು ನಿಡುಮಾಮಿಡಿ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಹೇಳಿದ್ದಾರೆ.

    ಖಾಸಗಿ ಹೋಟೆಲ್ ನಲ್ಲಿ ಗೌರಿ ಲಂಕೇಶ್ ಅವರಿಗೆ ಪರಿಯಾರ್ ಪ್ರಶಸ್ತಿ ಸಮಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೌರಿ ಹತ್ಯೆಯನ್ನು ಸಂಭ್ರಮಿಸುವವರನ್ನು ನೋಡಿದಾಗಲೇ ಹಂತಕರು ಯಾರು ಅನ್ನೋದು ತಿಳಿಯುತ್ತದೆ. ಕಲ್ಬುರ್ಗಿ ಅವರದ್ದು ಧಾರ್ಮಿಕ ಹತ್ಯೆ ಹಾಗೂ ಗೌರಿ ಅವರದ್ದು ರಾಜಕೀಯ ಹತ್ಯೆ. ಮುಂದೆ ನನ್ನನ್ನೇ ಟಾರ್ಗೆಟ್ ಮಾಡಲಾಗಿದೆ ಅನ್ನೋದು ನನಗೆ ಗೊತ್ತಿದೆ. ನನಗೆ ಸಾಕಷ್ಟು ಜನ ಹೇಳಿದ್ದಾರೆ ಎಂದು ಸ್ವಾಮೀಜಿ ತಿಳಿಸಿದರು.

    ಅನಂತಮೂರ್ತಿಯವರ ಪುಸ್ತಕದ ಒಂದು ಮಾತನ್ನು ಕಲ್ಬುರ್ಗಿ ಅವರು ಸಭೆಯಲ್ಲಿ ಉಲ್ಲೇಖ ಮಾಡಿದ್ದರು. ಅದೇ ಅವರ ಹತ್ಯೆಗೆ ಕಾರಣವಾಯಿತು. ಕಲ್ಬುರ್ಗಿ ಮತ್ತು ಗೌರಿಯ ಹಂತಕರು ಹಿಂದು ಭಯೋತ್ಪಾದಕರಾಗಿದ್ದಾರೆ. ರಾಘವೇಶ್ವರ ಶ್ರೀ ವಿರುದ್ಧ ತನಿಖೆ ನಡೆಯುತ್ತಿದೆ ಹಾಗೂ ಎಲ್ಲಾ ಆಯಾಮದಿಂದಲೂ ತನಿಖೆ ನಡೆಯುತ್ತಿದೆ. ಅಷ್ಟಕ್ಕೆ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸೋದು ಸರಿಯಿಲ್ಲ ಎಂದು ನಿಡುಮಾಮಿಡಿ ಸ್ವಾಮೀಜಿ ಹೇಳಿದರು.

    ವಿಚಾರವಾದಿಗಳ ವೇದಿಕೆಯಲ್ಲಿ ಗೌರಿ ಹಂತಕರನ್ನು ಹಿಡಿಯಲು ರಾಜ್ಯ ಸರ್ಕಾರಕ್ಕೆ ಡೆಡ್‍ಲೈನ್ ಕೊಟ್ಟು ಮುಂದಿನ ವಿಜಯದಶಮಿಯೊಳಗೆ ಹಂತಕರನ್ನು ಹಿಡಿಯಬೇಕೆಂದು ಆಗ್ರಹಿಸಿದೆ. ಹಂತಕರನ್ನು ಹಿಡಿಯದೆ ಇದ್ದರೆ ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಒಪ್ಪಿಕೊಂಡು ರಾಜ್ಯ ಜನರ ಮುಂದೆ ಕ್ಷಮೆ ಯಾಚಿಸಬೇಕು ಎಂದು ಸ್ವಾಮೀಜಿ ತಿಳಿಸಿದರು.

    ಗೌರಿ ಮತ್ತು ಕಲ್ಬುರ್ಗಿ ಹಂತಕರು ಯಾರು ಎನ್ನುವುದಕ್ಕೆ ನಿಡುಮಾಮಿಡಿ ಶ್ರೀ ಪ್ರಣವಾನಂದ ಸ್ವಾಮೀಜಿ ಕಡೆ ಬೊಟ್ಟು ಮಾಡಿದ್ದಾರೆ. ಕಲ್ಬುರ್ಗಿ ಹತ್ಯೆಗೆ ಹದಿನೈದು ದಿನದ ಮುಂಚೆ ಪ್ರಣವಾನಂದ ಸ್ವಾಮೀಜಿ ಸುದ್ದಿಗೋಷ್ಟಿ ಕರೆದು ಐದು ಜನರ ಪ್ರಾಣ ತೆಗೆಯುತ್ತೇನೆ ಎಂದಿದ್ದರು. ಈಗ ಇಬ್ಬರ ಕೊಲೆಯಾಗಿದೆ. ಮುಂದೆ ನಾನು ಮತ್ತು ಭಗವಾನ್ ಲಿಸ್ಟ್ ನಲ್ಲಿದ್ದೇವೆ ಎಂದು ಸ್ವಾಮಿಜಿ ಹೇಳಿದರು.

    ಪ್ರಣವಾನಂದ ಕೊಲೆಯ ಪ್ರಾಯೋಜಕರು ಅವರನ್ನು ವಿಚಾರಣೆ ಮಾಡಿದರೆ ಹಂತಕರು ಗೊತ್ತಾಗಲಿದ್ದಾರೆ. ಐವರು ವಿಚಾರವಾದಿಗಳನ್ನು ಹತ್ಯೆ ಮಾಡೋದಾಗಿ ಹೇಳಿದರೂ ಯಾಕೆ ಸರ್ಕಾರ ಕ್ರಮ ಕೈಗೊಂಡಿಲ್ಲ ಆಗಲೇ ಎಲ್ಲರ ಲಿಸ್ಟ್ ರೆಡಿಯಾಗಿದೆ ಹಂತಕರು ಕರ್ನಾಟಕದವರು. ಆದರೆ ಬಾಡಿಗೆ ಕೊಲೆಗಾರರನ್ನು ತಂದಿರಬಹುದು. ಗೌರಿ ಹತ್ಯೆಗೆ ನ್ಯಾಯ ಸಿಗಲಿದೆ ಅನ್ನೋ ನಂಬಿಕೆ ನನಗಿಲ್ಲ ಎಂದರು.

    ವರ್ಷಕ್ಕೊಂದು ವಿಚಾರವಾದಿಗಳು ಸಾಯುತ್ತಾರೆ. ಇಂದು ಗೌರಿ ನಾಳೆ ನಾನು ನಾಡಿದ್ದು ಭಗವಾನ್ ಅದರಾಚೆ ಅಗ್ನಿ ಶ್ರೀಧರ್. ಬಿಜೆಪಿಗೆ ಮೋದಿ ಸರ್ಕಾರಕ್ಕೆ ಹಿಂಸೆ ಅನಿವಾರ್ಯ. ಹಿಂಸೆಯ ಮೂಲಕವೇ ರಾಜಕೀಯ ಪ್ರಾಬಲ್ಯ ಸ್ಥಾಪಿಸಲು ಹೊರಟಿದ್ದಾರೆ. ಹಿಂದುತ್ವದ ಬಗ್ಗೆ ಮಾತಾನಾಡಿದವರನ್ನು ಬಿಡಲ್ಲ ಅವರನ್ನು ಕೊಲ್ಲುತ್ತೇವೆ ಅನ್ನೋ ಸಂದೇಶವನ್ನು ಇವರಿಬ್ಬರನ್ನು ಹತ್ಯೆ ಮಾಡುವುದರ ಮೂಲಕ ನೀಡಿದ್ದಾರೆ ಎಂದು ಆರೋಪಿಸಿದರು.

    ಭಾರತದಲ್ಲಿ ವಧಾ ಸಂಸ್ಕೃತಿ ವಿಜೃಂಭಿಸುತ್ತಿದೆ. ಸನಾತನ ಧರ್ಮ ಪುನಶ್ಚೇತನಗೊಂಡಾಗೆಲ್ಲ ವಧಾ ಸಂಸ್ಕೃತಿ ಹತ್ಯೆ ಮಾಡುವ ಸಂಸ್ಕೃತಿ ಬರುತ್ತದೆ. ಹಿಂದೆ “ಭಟ್ಟ” ಅನ್ನೋ ಹೆಸರಿನ ವ್ಯಕ್ತಿಯಿಂದ ಬೆದರಿಕೆ ಬಂದಿತ್ತು. ಈ ಬಗ್ಗೆ ಮಠದಿಂದ ಠಾಣೆಗೂ ದೂರು ಕೊಡಲಾಗಿದೆ ಹಾಗೂ ಹಿಂದುತ್ವದ ಬಗ್ಗೆ ಮಾತಾನಾಡೋ ನಿನ್ನನ್ನು ಉಳಿಸಲ್ಲ, ಖಾವಿ ಕಳಚಿ ಓಡಿಸುತ್ತೇವೆ ಅಂತಾ ಬೆದರಿಕೆ ಹಾಕಿದ್ದಾರೆ. ಮಠಕ್ಕೆ ಬನ್ನಿ ಮಾತಾನಾಡೋಣ ಅಂತಾ ಹೇಳಿದೆ ಆದರೆ ಯಾರು ಬಂದಿಲ್ಲ. ಕೆಲದಿನದ ಹಿಂದೆ ನಡೆದ ಘಟನೆ ಇದು ಈ ಬಗ್ಗೆ ದೂರು ನೀಡಲಾಗಿದೆ ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದರು.

    ಸರ್ಕಾರಿ ಕಚೇರಿ, ಶಿಕ್ಷಣ ಸಂಸ್ಥೆ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಎಲ್ಲಾ ಧರ್ಮದ ದೇವರ ಭಾವಚಿತ್ರ ತೆಗೆಯಬೇಕು. ಕಚೇರಿಗಳಲ್ಲಿ ಧಾರ್ಮಿಕ ಆಚರಣೆ ಸಂಪ್ರದಾಯಗಳನ್ನು ಅನುಸರಿಸೋದನ್ನು ನಿಷೇಧಿಸಬೇಕೆಂದು ಸರ್ಕಾರಕ್ಕೆ ವಿಚಾರವಾದಿಗಳ ವೇದಿಕೆ ಒತ್ತಾಯ ಮಾಡಿದೆ.

  • ನಾಲ್ಕು ಗಂಟೆಯ ಮೊದಲೇ ನಡೆದಿತ್ತು ಗೌರಿ ಹತ್ಯೆಯ ಪ್ಲಾನ್!

    ನಾಲ್ಕು ಗಂಟೆಯ ಮೊದಲೇ ನಡೆದಿತ್ತು ಗೌರಿ ಹತ್ಯೆಯ ಪ್ಲಾನ್!

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ನಾಲ್ಕು ಗಂಟೆಯ ಮೊದಲೇ ಪ್ಲಾನ್ ನಡೆದಿತ್ತು. ಆಗಂತುಕನೊಬ್ಬ ಸಂಜೆ ನಾಲ್ಕು ಗಂಟೆಗೆ ಮನೆಯ 30 ಅಡಿ ದೂರದಲ್ಲಿಯೇ ಗೌರಿಗಾಗಿ ಕಾದು ಕುಳಿತ್ತಿದ್ದ ಮಾಹಿತಿ ಈಗ ವಿಶೇಷ ತನಿಖಾ ತಂಡ(ಎಸ್‍ಐಟಿ) ಮೂಲಗಳಿಂದ ಸಿಕ್ಕಿದೆ.

    ಸಂಜೆ ನಾಲ್ಕು ಗಂಟೆಗೆ ಗೌರಿ ಅವರ ಮನೆಯ ಬಳಿ ಬಂದ ವ್ಯಕ್ತಿಯೊಬ್ಬ ಅವರು ಬರುವುದನ್ನು ಕಾದು ಕುಳಿತಿದ್ದ. ಆತ ಸುಳಿದಾಡುತ್ತಿರುವ ದೃಶ್ಯ ಗೌರಿ ಅವರ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಆ ಸಿಸಿಟಿವಿ ದೃಶ್ಯಾವಳಿಯಲ್ಲೂ ಸಹ ಕೊಲೆಗಾರನ ಚಹರೆ ಪತ್ತೆಯಾಗಿಲ್ಲ. ಆಗಂತುಕ ಸಂಜೆ ನಾಲ್ಕು ಗಂಟೆಗೆ ಹೆಲ್ಮೆಟ್ ಧರಿಸಿ ಏಕಾಂಗಿಯಾಗಿ ಬಂದಿದ್ದನು. ಕೊಲೆ ಮಾಡುವ ಸಂದರ್ಭದಲ್ಲಿ ಕೂಡ ಹೆಲ್ಮೆಟ್ ಧರಿಸಿದ್ದನು.

    ನಾಲ್ಕು ಗಂಟೆಗೆ ಸಿಕ್ಕ ದೃಶ್ಯಾವಳಿಯಲ್ಲೂ ಮತ್ತು ಕೊಲೆ ಮಾಡುವ ಸಂದರ್ಭದಲ್ಲಿ ಸಿಕ್ಕ ದೃಶ್ಯಾವಳಿ ಸಾಮ್ಯತೆ ಇದೆ. ಸಾಮ್ಯತೆ ಇದ್ದಿದ್ರಿಂದಲೇ ಆತನೇ ಕೊಲೆಗಾರ ಅನ್ನೋ ಅನುಮಾನ ಹೆಚ್ಚಾಗಿದ್ದು ತನಿಖೆ ತೀವ್ರಗೊಂಡಿದೆ.

    ಆದರೆ ನಾಲ್ಕು ಗಂಟೆಗೆ ಬಂದು ಸಿಸಿಟಿವಿಯಲ್ಲಿ ಸಿಕ್ಕಿಬಿದ್ದ ವ್ಯಕ್ತಿ ಪ್ರದೇಶದಿಂದ ಹೊರ ಹೋಗಿಲ್ಲ ಮತ್ತು ಹೊರ ಹೋಗುವ ಯಾವುದೇ ದೃಶ್ಯಾವಳಿ ಲಭ್ಯವಾಗಿಲ್ಲ. ಈ ಮಾಹಿತಿ ಆಧರಿಸಿ ಕೊಲೆಗಾರ ಅಲ್ಲಿಯೇ ಕುಳಿತಿದ್ದ ಎನ್ನುವ ಅನುಮಾನವೂ ಈಗ ವ್ಯಕ್ತವಾಗಿದೆ.