Tag: ಹಂದಿಜ್ವರ

  • ಮೈಸೂರಿನಲ್ಲಿ ಹಂದಿಜ್ವರಕ್ಕೆ ತುಂಬು ಗರ್ಭಿಣಿ ಬಲಿ

    ಮೈಸೂರಿನಲ್ಲಿ ಹಂದಿಜ್ವರಕ್ಕೆ ತುಂಬು ಗರ್ಭಿಣಿ ಬಲಿ

    ಮೈಸೂರು: 2ನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ ಹಂದಿಜ್ವರಕ್ಕೆ ಬಲಿಯಾಗಿದ್ದು, ಇದರಿಂದ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ.

    H1N1

    ಹುಣಸೂರು ತಾಲ್ಲೂಕಿನ ಕೋಣನ ಹೊಸಳ್ಳಿ ಗ್ರಾಮದ ಸ್ವಾಮಿ ನಾಯ್ಕ ಎಂಬವರ ಪುತ್ರಿ ಛಾಯಾ ಅವರು ಊ1ಓ1 ನಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪೊಲೀಸ್ ಎಂದು ನಂಬಿಸಿ ಮಹಿಳೆಯ ಚಿನ್ನಾಭರಣ ಎಗರಿಸಿದ್ದ ಆರೋಪಿ ಅಂದರ್

    ಛಾಯಾ ಅವರಿಗೆ ಈಗಾಗಳೇ 4 ವರ್ಷದ ಗಂಡು ಮಗುವಿದ್ದು, 2ನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಛಾಯಾ ಹಂದಿಜ್ವರಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಛಾಯಾ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಛಾಯಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗ್ಳೂರಿಗೆ ಬಂದಿದ್ದ ಕೇರಳದ 12 ವರ್ಷದ ಹುಡುಗಿ ಹಂದಿ ಜ್ವರಕ್ಕೆ ಬಲಿ – ರಾಜಧಾನಿಗೆ ಆತಂಕ

    ಬೆಂಗ್ಳೂರಿಗೆ ಬಂದಿದ್ದ ಕೇರಳದ 12 ವರ್ಷದ ಹುಡುಗಿ ಹಂದಿ ಜ್ವರಕ್ಕೆ ಬಲಿ – ರಾಜಧಾನಿಗೆ ಆತಂಕ

    ತಿರುವನಂತಪುರಂ: ಈಗಾಗಲೇ ಕೋವಿಡ್ 4ನೇ ಅಲೆ ಭಾರತದ ಕೆಲ ರಾಜ್ಯಗಳಿಗೆ ಅಪ್ಪಳಿಸಿದೆ. ಓಮಿಕ್ರಾನ್ ಉಪತಳಿಗಳಾದ ಬಿಎ-1, 2, 3, 4, 5 ತಳಿಗಳು ಸಾವಿರಾರು ಜನರನ್ನು ಬಾದಿಸುತ್ತಿವೆ. ಈ ಬೆನ್ನಲ್ಲೇ ಕೇರಳಕ್ಕೆ ಹಂದಿಜ್ವರ ಮತ್ತೆ ಲಗ್ಗೆಯಿಟ್ಟಿದೆ. ಇಲ್ಲಿನ ಕೋಯಿಕ್ಕೋಡ್‌ನ ಉಲಿಯೇರಿ ಪ್ರದೇಶದಲ್ಲಿ 12 ವರ್ಷದ ಹುಡುಗಿಯೊಬ್ಬರಿಗೆ ಎಚ್1-ಎನ್1 ಹಂದಿಜ್ವರ ಕಾಣಿಸಿಕೊಂಡಿದ್ದು, ನಿನ್ನೆ ಮೃತಪಟ್ಟಿದ್ದಾರೆ.

    H1N1

    ಈಚೆಗಷ್ಟೇ ಕೇರಳದ ಈ ಹುಡುಗಿ ಬೆಂಗಳೂರಿಗೆ ಭೇಟಿ ನೀಡಿದ್ದರು. ಬೆಂಗಳೂರಿನಿಂದ ಹಿಂದಿರುಗಿದ ಬಳಿಕ ಕೇರಳದ ಕೋಯಿಲಂಡಿ ತಾಲೂಕು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಎಚ್1-ಎನ್1 ಸೋಂಕು ಇರುವುದು ದೃಢಪಟ್ಟಿತು. ತಕ್ಷಣ ಹುಡುಗಿಯನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ನಿನ್ನೆ ಮೃತಪಟ್ಟಿದ್ದಾಳೆ. ಬಾಲಕಿ ಸಂಪರ್ಕದಲ್ಲಿದ್ದ ಅವಳಿ ಸಹೋದರಿಗೂ ಎಚ್1-ಎನ್1 ಇರುವುದು ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಸೋನಿಯಾ ಗಾಂಧಿ ಶೀಘ್ರವೇ ಗುಣಮುಖರಾಗಲಿ – ಮೋದಿ ಶುಭಹಾರೈಕೆ

    H1N1

    1918-1919 ರಲ್ಲಿ ಕಾಣಿಸಿಕೊಂಡಿದ್ದ ಹಂದಿಜ್ವರ ಎಚ್1-ಎನ್1 ಇನ್‌ಫ್ಲುಯೆನ್ಸ್ ವೈರಸ್ 2009 ರಲ್ಲಿ ದೇಶದ ಅನೇಕ ಕಡೆ ವ್ಯಾಪಕವಾಗಿ ಹರಡಿತ್ತು. ಸುಮಾರು 2.84 ಲಕ್ಷ ಜನರನ್ನು ಬಲಿ ಪಡೆದಿತ್ತು. ಇದರಿಂದ ವಿಶ್ವಸಂಸ್ಥೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಿತ್ತು. ಇದನ್ನೂ ಓದಿ: ಸೋನಿಯಾ, ರಾಹುಲ್ ಗಾಂಧಿಗೆ ಇಡಿ ಸಮನ್ಸ್

    ಬೆಂಗಳೂರಿಗೂ ಆತಂಕ: ಕಳೆದ ಮರ‍್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ 150ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇದರ ಬೆನ್ನಲ್ಲೇ ಕೇರಳದಲ್ಲಿ ಹಂದಿ ಜ್ವರಕ್ಕೆ ಬಲಿಯಾದ ಬಾಲಕಿ ಈಚೆಗಷ್ಟೇ ಬೆಂಗಳೂರಿಗೆ ಭೇಟಿ ನೀಡಿದ್ದರು ಎಂಬುದು ಅನೇಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನಲ್ಲೂ ಹಂದಿಜ್ವರ ಕಾಣಿಸಿಕೊಂಡಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.