Tag: ಹಂಪಿ

  • ಹಂಪಿ ವಿರೂಪಾಕ್ಷ ದೇಗುಲದ ಆವರಣದಲ್ಲಿ ನಿಂತ ಮಳೆ ನೀರು – ದರ್ಶನಕ್ಕಾಗಿ ಪ್ರವಾಸಿಗರು ಹೈರಾಣು

    ಹಂಪಿ ವಿರೂಪಾಕ್ಷ ದೇಗುಲದ ಆವರಣದಲ್ಲಿ ನಿಂತ ಮಳೆ ನೀರು – ದರ್ಶನಕ್ಕಾಗಿ ಪ್ರವಾಸಿಗರು ಹೈರಾಣು

    ಬಳ್ಳಾರಿ: ವಿಜಯನಗರ (Vijayanagar) ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ (Hampi) ವಿರೂಪಾಕ್ಷ ದೇವಾಲಯದ (Virupaksha Temple) ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ.

    ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಆವರಣದಲ್ಲಿ ಮಳೆಯಿಂದಾಗಿ ಮೊಣಕಾಲುದ್ಧ ನೀರು ನಿಂತಿದೆ. ಪರಿಣಾಮ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರಿಗೆ ಸಮಸ್ಯೆ ಎದುರಾಗಿದೆ. ಬೇರೆ ದಾರಿಯಿಲ್ಲದೇ ಪ್ರವಾಸಿಗರು ನಿಂತ ನೀರಿನಲ್ಲಿಯೇ ನಡೆದುಕೊಂಡು ಹೋಗಿ, ವಿರೂಪಾಕ್ಷೇಶ್ವರನ ದರ್ಶನ ಪಡೆದಿದ್ದಾರೆ.ಇದನ್ನೂ ಓದಿ: ಮುನಿಯಪ್ಪ ಸಿಎಂ ಆದ್ರೆ ನಾನೂ ಸಂತೋಷ ಪಡ್ತೇನೆ: ಪರಮೇಶ್ವರ್

    ಮಳೆ ಬಂದಾಗ ನೀರು ಹೊರಹೋಗುವ ವ್ಯವಸ್ಥೆ ಮಾಡಬೇಕಿದ್ದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಪ್ರವಾಸಿಗರು ಹಿಡಿಶಾಪ ಹಾಕುತ್ತಿದ್ದಾರೆ.

  • ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ – ದೇಶದ ಹೆಸರಲ್ಲಿ ಪೂಜೆ

    ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ – ದೇಶದ ಹೆಸರಲ್ಲಿ ಪೂಜೆ

    – ಹಂಪಿಗೆ ಭೇಟಿ ನೀಡಿರೋದು ನನ್ನ ಪುಣ್ಯ ಎಂದ ಸಚಿವೆ

    ಬಳ್ಳಾರಿ: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman), ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ (Virupaksha Temple) ಭೇಟಿ ನೀಡಿ ದರ್ಶನ ಪಡೆದು, ಆನೆ ಲಕ್ಷ್ಮೀಯಿಂದ ಹೂವಿನ ಹಾರ ಹಾಕಿಸಿಕೊಂಡರು. ಇದೇ ವೇಳೆ ದೇಶಕ್ಕೆ ಒಳ್ಳೆಯದಾಗಲಿ ಎಂದು ನಿರ್ಮಲಾ ಸೀತಾರಾಮನ್ ಹಂಪಿಯ ವಿರುಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

    ಪೂಜೆ ಬಳಿಕ ಮಾತನಾಡಿದ ನಿರ್ಮಲಾ ಸೀತಾರಾಮನ್, ನನಗೆ ಬಹಳಷ್ಟು ಜನ ಹಂಪಿಯನ್ನ ವೀಕ್ಷಣೆ ಮಾಡಿ ಎಂದು ಹೇಳುತ್ತಿದ್ದರು. ಇಂದು ಆ ಅವಕಾಶ ನನಗೆ ಸಿಕ್ಕಿರೊದು ನನ್ನ ಅದೃಷ್ಟ. ಹಂಪಿಯ ಸಾಂಸ್ಕೃತಿಕ ಪರಂಪರೆಯನ್ನ ಕಣ್ತುಂಬಿಕೊಂಡಿರೋದು ತುಂಬಾ ಹೆಮ್ಮಯ ಅನುಭವ ಎಂದರು. ಇದನ್ನೂ ಓದಿ: RSS ಸಂಸ್ಕೃತಿ ತೋರಿಸುವ 20 ವಿಡಿಯೋ ರಿಲೀಸ್ ಮಾಡಿದ್ದೇನೆ: ಪ್ರಿಯಾಂಕ್ ಖರ್ಗೆ ಬಾಂಬ್

    ಇಲ್ಲಿಯ ಕಲೆ ಸಂಸ್ಕೃತಿ ಈ ನಾಡಿನ ಪರಂಪರೆಯ ಪ್ರತೀಕವಾಗಿದೆ. ಯುನೆಸ್ಕೊ ಗುರುತಿಸಿರುವ ಐತಿಹಾಸಿಕ ತಾಣ ಹಂಪಿಯ ಪ್ರತಿಯೊಂದು ಶಿಲೆಯು ಇಲ್ಲಿನ ಪರಂಪರೆಯನ್ನ ಪ್ರತಿಬಿಂಬಿಸುವಂತಿದೆ. ಇಲ್ಲಿ ಅನೇಕ ಉತ್ಖನನ ಕಾರ್ಯಗಳ ಜೊತೆಗೆ ಹಂಪಿಯ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿವೆ. ನನಗೆ ಇಲ್ಲಿಯ ಇತಿಹಾಸ ಪರಂಪರೆಯ ಬಗ್ಗೆ ಸಂಸದ ತುಕರಾಂ ಹಾಗೂ ರಾಜ ವಶಂಸ್ಥ ಶ್ರೀ ಕೃಷ್ಣದೇವರಾಯ ವಿವರಿಸಿದ್ದರು. ಹಂಪಿಯ ಪ್ರಾಚೀನ ಸಂಸ್ಕೃತಿ ಕಣ್ತುಂಬಿಕೊಳ್ಳುವುದು ಹೆಮ್ಮೆಯ ಸಂಗತಿ ಎನಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್

  • ಖ್ಯಾತ ಸಾಹಿತಿ ಡಾ. ಮೊಗಳ್ಳಿ ಗಣೇಶ್ ನಿಧನ

    ಖ್ಯಾತ ಸಾಹಿತಿ ಡಾ. ಮೊಗಳ್ಳಿ ಗಣೇಶ್ ನಿಧನ

    ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್ (64) ಭಾನುವಾರ ಅನಾರೋಗ್ಯದಿಂದ ಮನೆಯಲ್ಲಿ ನಿಧನರಾದರು. ಇವರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

    ಹಂಪಿ ಕನ್ನಡ ವಿಶ್ವವಿದ್ಯಾಲಯ (Hampi Kannada University) ಸುಮಾರು 28 ವರ್ಷ ಪ್ರಾಧ್ಯಾಪಕರಾಗಿದ್ದ ಮೊಗಳ್ಳಿ ಗಣೇಶ್ (Mogalli Ganesh) ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು.

    ಪ್ರಬಲ ದಲಿತ (Dalit) ಚಿಂತಕರಾಗಿದ್ದ ಅವರು ದೇಶದ ಪ್ರತಿಷ್ಠತ ವಿಶ್ವವಿದ್ಯಾಲಯಗಳಿಗೆ ಆಹ್ವಾನಿತರಾಗಿ ಹೋಗುತ್ತಿದ್ದರು. ಹಂಪಿ ವಿಶ್ವವಿದ್ಯಾಲಯದಲ್ಲಿ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿದ್ದ ಇವರು ಸದ್ಯ ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿದ್ದರು. ಇದನ್ನೂ ಓದಿ: ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

     

    ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ‘ಬೇರು’ ಅವರ ಬೃಹತ್ ಕಾದಂಬರಿ. ‘ಕಥನ’ ಅವರ ಪ್ರಬಂಧ ಸಂಕಲನ. ‘ಸೊಲ್ಲು’, ‘ವಿಮರ್ಶೆ’, ‘ಶಂಬಾ ಭಾಷಿಕ ಸಂಶೋಧನೆ’, ‘ತಕರಾರು’ ಅವರ ವಿಮರ್ಶಾ ಕೃತಿಗಳು. ‘ವಿಶ್ಲೇಷಣೆ’ ಎಂಬ ಅಂಕಣ ಕೂಡಾ ಜನಪ್ರಿಯ. ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಅವರ ಚಿಂತನ ಕೃತಿ. ಗಣೇಶ್ ಇತರ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದರೆ, ಅವರ ಅನೇಕ ಬರಹಗಳು ಇತರ ಭಾಷೆಗಳಿಗೆ ಅನುವಾದಗೊಂಡಿದೆ.

    ಮೊಗಳ್ಳಿ ಗಣೇಶ್ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ಡಾ.ರಾಜಕುಮಾರ್ ಹೆಸರಿನಲ್ಲಿರುವ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

    ಕನ್ನಡದ ಖ್ಯಾತ ಕಥೆಗಾರ ,ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ ಆಗಿದ್ದ ಮೊಗಳ್ಳಿ ಗಣೇಶ್ ಅವರ ನಿಧನದಿಂದ ಕನ್ನಡ ಸಾಹಿತ್ಯ ಒಬ್ಬ ಅತ್ಯುತ್ತಮ ಬರಹಗಾರನನ್ನ ಕಳೆದುಕೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

  • ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

    ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

    ಬಳ್ಳಾರಿ: ಸರಣಿ ರಜೆ ಹಿನ್ನೆಲೆ ದಕ್ಷಿಣ ಕಾಶಿ, ವಿಶ್ವವಿಖ್ಯಾತ ಹಂಪಿಗೆ (Hampi) ಪ್ರವಾಸಿಗರ (Tourist) ದಂಡು ಹರಿದು ಬಂದಿದೆ.

    ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವಿಶ್ವಪ್ರಸಿದ್ಧ ಹಂಪಿ ಕಳೆದೆರಡು ದಿನಗಳಿಂದ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ವಿಜಯ-ವಿಠ್ಠಲ ದೇಗುಲ, ಕಲ್ಲಿನ ತೇರು ಹಾಗೂ ವಿರೂಪಾಕ್ಷೇಶ್ವರ ದೇವಸ್ಥಾನದ ಬಳಿ ಸಹಸ್ರಾರು ಪ್ರವಾಸಿಗರು ಸೇರಿದ ಕಾರಣ ಹೆಚ್ಚಿನ ಜನದಟ್ಟಣೆಯಿಂದ ಹಲವೆಡೆ ಟ್ರಾಫಿಕ್ (Traffic) ಕಿರಿಕಿರಿ ಉಂಟಾಗಿತ್ತು.ಇದನ್ನೂ ಓದಿ: ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು ಮಣ್ಣಿನ ಗಣಪನ ಪೂಜಿಸಲು ಈಶ್ವರ್ ಖಂಡ್ರೆ ಮನವಿ

    ಹಂಪಿಯ ಸ್ಮಾರಕಗಳ ಬಳಿ ಜನಸಾಗರವೇ ಹರಿದು ಬಂದಿದರೂ ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪ್ರವಾಸಿಗರು ಪರದಾಡಿದರು. ಇತ್ತ ಸರಣಿ ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದರಿಂದ ಜನಸಂದಣೆ ನಿಯಂತ್ರಿಸಲು ಪೊಲೀಸರ ಹರಸಾಹಸಪಟ್ಟರು.

  • ಟಿಬಿ ಡ್ಯಾಂನ 26 ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ರಿಲೀಸ್ – ಮುಳುಗಡೆ ಭೀತಿಯಲ್ಲಿ ಹಂಪಿ ಸ್ಮಾರಕಗಳು

    ಟಿಬಿ ಡ್ಯಾಂನ 26 ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ರಿಲೀಸ್ – ಮುಳುಗಡೆ ಭೀತಿಯಲ್ಲಿ ಹಂಪಿ ಸ್ಮಾರಕಗಳು

    ಕೊಪ್ಪಳ: ಮಲೆನಾಡಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಟಿಬಿ ಡ್ಯಾಂಗೆ (TB Dam) ಒಳಹರಿವು ಹೆಚ್ಚಾಗಿದೆ. ಹೀಗಾಗಿ ಡ್ಯಾಂನ 26 ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಹಂಪಿ (Hampi) ಸ್ಮಾರಕಗಳಿಗೆ ಮುಳುಗಡೆ ಭೀತಿ ಎದುರಾಗಿದೆ.ಇದನ್ನೂ ಓದಿ: ಮಳೆಯಬ್ಬರ – ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

    ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಒಳಹರಿವು ಹೆಚ್ಚಾದ ಹಿನ್ನೆಲೆ ಸದ್ಯ ಜಲಾಶಯದಿಂದ 90,893 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಜಲಾಶಯದ 33 ಗೇಟ್‌ಗಳ ಪೈಕಿ 26 ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಬಿಡಲಾಗುತ್ತಿದೆ.

    ಏಕಾಏಕಿ ನೀರನ್ನು ಬಿಡುಗಡೆ ಮಾಡಿದ್ದು, ತುಂಗಭದ್ರಾ ನದಿ (Tungabhadra River) ಪಾತ್ರದಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ. ಹೀಗಾಗಿ ನದಿ ಪಾತ್ರದ ಗ್ರಾಮಗಳ ಜನರು ನದಿ ತೀರಕ್ಕೆ ಹೋಗದಂತೆ ಟಿಬಿ ಬೋರ್ಡ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾದರೆ, ಇನ್ನಷ್ಟು ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸದ್ಯ 90,893 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಿರುವುದರಿಂದ ಹಂಪಿಯ ಕೆಲ ಸ್ಮಾರಕಗಳಿಗೆ ಮುಳುಗಡೆ ಭೀತಿ ಎದುರಾಗಿದೆ.ಇದನ್ನೂ ಓದಿ: ಬೆಂಗಳೂರಲ್ಲಿ ಚಿನ್ನದಂಗಡಿ ದರೋಡೆ ಕೇಸ್‌ – ಟಾಯ್‌ ಗನ್ ತೋರಿಸಿ ಚಿನ್ನ ರಾಬರಿ

  • ಟಿಬಿ ಡ್ಯಾಂ 12 ಗೇಟ್ ಓಪನ್ – ನದಿಗೆ 35,100 ಕ್ಯೂಸೆಕ್ ನೀರು ಬಿಡುಗಡೆ

    ಟಿಬಿ ಡ್ಯಾಂ 12 ಗೇಟ್ ಓಪನ್ – ನದಿಗೆ 35,100 ಕ್ಯೂಸೆಕ್ ನೀರು ಬಿಡುಗಡೆ

    ಬಳ್ಳಾರಿ/ಕೊಪ್ಪಳ: ಒಳ ಹರಿವು ಹೆಚ್ಚಳವಾಗಿದ್ದರಿಂದ ಜಲಾಶಯದಿಂದ (TB Dam) ತುಂಗಭದ್ರಾ ನದಿಗೆ (Tungabhadra River) 35,100 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

    12 ಗೇಟ್ ಗಳನ್ನು ಓಪನ್ ಮಾಡಿ ನದಿಗೆ ನೀರು ರಿಲೀಸ್ ಮಾಡಿದ್ದರಿಂದ ಹಂಪಿಯ (Hampi) ಸ್ನಾನಘಟಕ್ಕೆ ಪ್ರವಾಸಿಗರು ತೆರಳದಂತೆ ಹಾಗೂ ನದಿ ಪಾತ್ರಕ್ಕೆ ಜನ-ಜಾನುವಾರು ತೆರಳದಂತೆ ತುಂಗಾಭದ್ರಾ ಬೋರ್ಡ್ ಸೂಚನೆ ನೀಡಿದೆ.

    ಸದ್ಯ ಜಲಾಶಯಕ್ಕೆ 34,625 ಕ್ಯೂಸೆಕ್ ನೀರು ಒಳ ಹರಿವು ಇರುವುದಿಂದ ಯಾವುದೇ ಕ್ಷಣದಲ್ಲಿ ಬೇಕಾದ್ರೂ ನದಿಗೆ ಇನ್ನಷ್ಟು ಪ್ರಮಾಣದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ.

    ನದಿಗೆ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್ ಮಾಡಿದರೆ ಕಂಪ್ಲಿ ಸೇತುವೆ ಮುಳುಗಡೆಯಾಗಲಿದೆ. ಸೇತುವೆ ಮುಳುಗಡೆಯಾದ್ರೆ ಗಂಗಾವತಿ- ಬಳ್ಳಾರಿ ಸಂಪರ್ಕ ಕಡಿತವಾಗಲಿದೆ. ಇದನ್ನೂ ಓದಿ: ಹೃದಯಾಘಾತಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ ನಾಲ್ವರು ಮೊಮ್ಮಕ್ಕಳಿಗೆ ಬೈಪಾಸ್‌ ಸರ್ಜರಿ!

    ಅಂತರಜಿಲ್ಲಾ ಸಂಪರ್ಕ ಸ್ಥಗಿತ:
    ಕೊಪ್ಪಳ ತಾಲ್ಲೂಕಿನ ಮುನಿರಾಬಾದ್, ಹುಲಗಿ, ತಿರುಮಲಾಪುರ, ಗಂಗಾವತಿ ತಾಲ್ಲೂಕಿನ ಸಣಾಪುರ, ಹನುಮನಹಳ್ಳಿ, ಆನೆಗೊಂದಿ, ಚಿಕ್ಕಜಂತಕಲ್, ಮುಸ್ಟೂರು, ಕಾರಟಗಿ ತಾಲ್ಲೂಕಿನ ನಂದಿಹಳ್ಳಿ, ಶಾಲಿಗೆನೂರು, ಕಕ್ಕರಗೋಳ ಸೇರಿದಂತೆ ಇತರ ಗ್ರಾಮಗಳ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

    ಚಲಿಸದ ಬೋಟ್
    ನದಿಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಆನೆಗೊಂದಿಯ ನವವೃಂದಾವನ, ತಳವಾರಘಟ್ಟ, ವಿರುಪಾಪುರ ಗಡ್ಡೆಯಲ್ಲಿನ ದೋಣಿಗಳು ದಡಕ್ಕೆ ಬಂದು ನಿಂತಿವೆ. ಆನೆಗೊಂದಿಯಿಂದ ನವವೃಂದಾವನ ಗಡ್ಡೆಗೆ ಹೋಗುವ ಮಾರ್ಗದಲ್ಲಿನ ಯಾಂತ್ರಿಕ ದೋಣಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಬೆಳಿಗ್ಗೆ ಮದುವೆ, ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಡೇಟಾ ಆಪರೇಟರ್ ಸಾವಿನ ಸುತ್ತ ಅನುಮಾನದ ಹುತ್ತ

    ತಳವಾರಘಟ್ಟದಿಂದ ಹಂಪಿ ದಡಕ್ಕೆ ಸೇರಿಸುತ್ತಿದ್ದ ದೋಣಿಗಳೂ ಸಂಚಾರವೂ ಬಂದ್ ಆಗಿದೆ. ವಿರುಪಾಪುರ ಗಡ್ಡೆಯಿಂದ ಹಂಪಿಯ ವಿರೂಪಾಕ್ಷನ ದರ್ಶಕ್ಕೆ ಹೋಗುವವರ ಮಧ್ಯೆ ಸಂಪರ್ಕ ಸೇತುವಾಗಿದ್ದ ದೋಣಿ ವಿಹಾರ ಬಂದ್ ಮಾಡಲಾಗಿದೆ.

  • ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ, ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಚಿಂತನೆ: ಬೋಸರಾಜು

    ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ, ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಚಿಂತನೆ: ಬೋಸರಾಜು

    – ಕಮಲಾಪುರದಲ್ಲಿ ಸ್ಥಳ ಪರಿಶೀಲನೆ

    ಬಳ್ಳಾರಿ: ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ(Hampi) ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ(Planetarium) ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು(N S Bosaraju) ತಿಳಿಸಿದರು.

    ಸೋಮವಾರ ಕಲ್ಯಾಣ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣವಾಗಿರುವ ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ನೂತನ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಮಳೆಗೆ ನಾನಾ ಅವಾಂತರ | ಅಂತರಾಷ್ಟ್ರೀಯ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ: ಸಿ.ಟಿ ರವಿ

    ಉತ್ತಮ ಜಾಗ ಮಂಜೂರು:
    ಕಮಲಾಪುರದ(Kamalapura) ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಯಲ್ಲಿ 10 ಎಕ್ರೆ ಜಾಗ ಮಂಜೂರಾಗಿದ್ದು, ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಇದನ್ನೂ ಓದಿ: ಭಾರತ ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡುವ ಧರ್ಮಶಾಲೆಯಲ್ಲ – ಸುಪ್ರೀಂ

    ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ:
    ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ 2ನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. 12 ಮೀ. ನಾನೋಸೀಮ್ ಡೋಮ್ ತಾರಾಲಯ ಹಾಗೆಯೇ ಅತ್ಯಾಧುನಿಕ ಸೌಲಭ್ಯಗಳನು ಹೊಂದಿರುವ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಸೂಚಿಸಿದರು. ಇದನ್ನೂ ಓದಿ: ಜನೌಷಧಿ ಕೇಂದ್ರಗಳ ಪುನರಾರಂಭಕ್ಕೆ ಸಂಸದ ಕಾರಜೋಳ ಆಗ್ರಹ

    ಕಲ್ಯಾಣ ಕರ್ನಾಟಕ ಭಾಗದ ಯುವ ಜನರಲ್ಲಿ ವೈಜ್ಞಾನಿಕ ಮನೋಭಾವ, ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರ(Siddaramaiah) ಆಶಯದಂತೆ ಪ್ರತಿ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲಾಗುತ್ತಿದೆ. ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಯಲ್ಲಿ ಉತ್ತಮ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೇಂದ್ರದಿಂದ 4,195 ಕೋಟಿ ಅನುದಾನ ಬಾಕಿ; ಸಿಎಂ ಬೂಟಾಟಿಕೆ ಪ್ರದರ್ಶನ – ಜೋಶಿ ವಾಗ್ದಾಳಿ

    ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ(ಕೆಸ್ಟೆಪ್ಸ್‌ನ) ವ್ಯವಸ್ಥಾಪಕ ನಿರ್ದೇಶಕ ಸದಾಶಿವ ಪ್ರಭು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

  • ಭಾರತ-ಪಾಕ್ ಉದ್ವಿಗ್ನ; ಹಂಪಿ ಮೇಲೆ ವಿಶೇಷ ನಿಗಾವಹಿಸಿದ ಕೇಂದ್ರ, ರಾಜ್ಯ ಸರ್ಕಾರ

    ಭಾರತ-ಪಾಕ್ ಉದ್ವಿಗ್ನ; ಹಂಪಿ ಮೇಲೆ ವಿಶೇಷ ನಿಗಾವಹಿಸಿದ ಕೇಂದ್ರ, ರಾಜ್ಯ ಸರ್ಕಾರ

    -4 ಚೆಕ್‌ಪೋಸ್ಟ್ ನಿರ್ಮಿಸಿ, ಭದ್ರತೆ ಹೆಚ್ಚಿಸಿದ ಪೊಲೀಸ್ ಇಲಾಖೆ

    ಬಳ್ಳಾರಿ: ಭಾರತ-ಪಾಕಿಸ್ತಾನ (India-Pakistan) ಗಡಿಯಲ್ಲಿ ಉದ್ವಿಗ್ನ ವಾತಾವರಣ ಹಿನ್ನೆಲೆ ದಕ್ಷಿಣ ಕಾಶಿ, ಯುನೆಸ್ಕೋ ವಿಶ್ವಪಾರಂಪರಿಕ ತಾಣ ಹಂಪಿಯ (Hampi) ಮೇಲೆ ಕೇಂದ್ರ, ರಾಜ್ಯ ಸರ್ಕಾರ ವಿಶೇಷ ನಿಗಾವಹಿಸಿದ್ದು, ಹೆಚ್ಚಿನ ಭದ್ರತೆ ಒದಗಿಸಲಾಗಿದೆ.ಇದನ್ನೂ ಓದಿ: ಕುಂಭಮೇಳದ ನೀಲಿ ಕಂಗಳ ಚೆಲುವೆಗೆ ಬಿಗ್ ಚಾನ್ಸ್- ಫ್ಯಾನ್ಸ್‌ಗೆ ಗುಡ್ ನ್ಯೂಸ್

    ಹಂಪಿಗೆ ಬರುವ ಎಲ್ಲಾ ವಾಹನಗಳ ತಪಾಸಣೆ ಮಾಡಲಾಗುತ್ತಿದ್ದು, ಪ್ರತಿಯೊಬ್ಬ ಪ್ರವಾಸಿಗನ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ ಹಂಪಿಗೆ ಬರುವ ಮಾರ್ಗಗಳಲ್ಲಿ 4 ಚೆಕ್‌ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. 24 ಗಂಟೆಗಳ ಕಾಲ ಎರಡು ಚೆಕ್‌ಪೋಸ್ಟ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಕಲ್ಲಿನ ತೇರಿನ ಬಳಿ ಹಗಲು ಹೊತ್ತಿನಲ್ಲಿ ಚೆಕ್‌ಪೋಸ್ಟ್ ಕಾರ್ಯನಿರ್ವಹಿಸುತ್ತಿದೆ.

    ಇನ್ನೂ ಪೊಲೀಸರು ಗಸ್ತು ವಾಹನಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ತಪಾಸಣೆಗಾಗಿ 4 ಮೆಟಲ್ ಡಿಟೆಕ್ಟರ್ ಅಳವಡಿಸಿದ್ದಾರೆ. ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರನ್ನು ತಪಾಸಣೆ ಮಾಡುವಂತೆ ಕೇಂದ್ರ, ರಾಜ್ಯ ಸರ್ಕಾರ ಸೂಚನೆ ನೀಡಿದ್ದು, ಹೆಚ್ಚಿನ ಭದ್ರತೆ ನೀಡಲಾಗಿದೆ.ಇದನ್ನೂ ಓದಿ: ‘ಆಪರೇಷನ್‌ ಸಿಂಧೂರ’ ಏಟಿಗೆ ಪಾಕಿಸ್ತಾನ ಬಾಲ ಮುದುರಿದ ನಾಯಿಯಂತೆ ಓಡಿದೆ: ಪೆಂಟಗನ್‌ ಮಾಜಿ ಅಧಿಕಾರಿ ವ್ಯಂಗ್ಯ

  • ಹೊಸ ವರ್ಷದ ಸಂಭ್ರಮ – ದಕ್ಷಿಣ ಕಾಶಿ ಹಂಪಿಗೆ ಪ್ರವಾಸಿಗರ ದಂಡು

    ಹೊಸ ವರ್ಷದ ಸಂಭ್ರಮ – ದಕ್ಷಿಣ ಕಾಶಿ ಹಂಪಿಗೆ ಪ್ರವಾಸಿಗರ ದಂಡು

    ಬಳ್ಳಾರಿ: ಹೊಸ ವರ್ಷದ (New Year) ಮೊದಲ ದಿನದ ಹಿನ್ನೆಲೆ ಇಂದು ದಕ್ಷಿಣ ಕಾಶಿ ಹಂಪಿಗೆ (Hampi) ಪ್ರವಾಸಿಗರ ದಂಡು ಬರುತ್ತಿದೆ.ಇದನ್ನೂ ಓದಿ: ದಾವಣಗೆರೆ| ನ್ಯೂ ಇಯರ್ ಸಂಭ್ರಮದ ದಿನವೇ ಬೈಕ್ ಅಪಘಾತಕ್ಕೆ ಯುವಕ ಬಲಿ – ಮತ್ತೋರ್ವ ಗಂಭೀರ

    ಹೊಸ ವರ್ಷ ಸಂಭ್ರಮಿಸಲು ಹಂಪಿಗೆ ಆಗಮಿಸ್ತಿರುವ ಪ್ರವಾಸಿಗರು ಬೆಳ್ಳಂಬೆಳಗ್ಗೆ ಹಂಪಿಯ ಮಾತಂಗ ಬೆಟ್ಟದಲ್ಲಿ ಜಮಾಯಿಸಿದ್ದಾರೆ. ಬೆಟ್ಟದ ತುತ್ತ ತುದಿ ಏರಿರುವ ಪ್ರವಾಸಿಗರು, ವರ್ಷದ ಮೊದಲ ಸೂರ್ಯೋದಯ ಕಣ್ತುಂಬಿಕೊಂಡರು. ರಾಜ್ಯ ಅಲ್ಲದೇ ದೇಶ-ವಿದೇಶಗಳಿಂದ ಬಂದಿದ್ದ ಪ್ರವಾಸಿಗರು ಸೂರ್ಯೋದಯ ವೀಕ್ಷಣೆ ಮಾಡಿ, ಬೆಟ್ಟದಲ್ಲೇ ದ್ಯಾನಕ್ಕೆ ಕುಳಿತರು.

    ಜಮಾಯಿಸಿದ್ದ ಪ್ರವಾಸಿಗರು ಬೆಟ್ಟದ ಮೇಲಿಂದ ಹಂಪಿಯ ಪ್ರಕೃತಿ ಸೌಂದರ್ಯ ಸವಿದರು. ಮತ್ತೊಂದೆಡೆ ತಂಡವಾಗಿ ಹಂಪಿಗೆ ಬರುತ್ತಿರುವ ಪ್ರವಾಸಿಗರು, ಸ್ಮಾರಕಗಳ ಮುಂದೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.ಇದನ್ನೂ ಓದಿ: ಇಂದು ಯೋಧ ದಿವೀನ್‌ ಅಂತ್ಯಕ್ರಿಯೆ – ಓದಿದ್ದ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

  • ಪ್ರವಾಸಿಗರ ಸ್ವರ್ಗ ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಇಲ್ಲ

    ಪ್ರವಾಸಿಗರ ಸ್ವರ್ಗ ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಇಲ್ಲ

    ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯಲ್ಲಿ ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ (Hampi) ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

    ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಹಲವೆಡೆ ಧಾರ್ಮಿಕ ಕ್ಷೇತ್ರಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲದ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.ಇದನ್ನೂ ಓದಿ: ಬೈಕ್, ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ – 3 ಮಂದಿ ಸಾವು

    ಹೊಸ ವರ್ಷಾಚರಣೆ ಹಿನ್ನೆಲೆ ಇಂದು (ಡಿ.31) ಹಾಗೂ ನಾಳೆ (ಜ.01) ಲಕ್ಷಾಂತರ ಪ್ರವಾಸಿಗರು ಹಂಪಿಗೆ ಭೇಟಿ ನೀಡುವ ನಿರೀಕ್ಷೆ ಇದೆ. ದೇಶ, ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಹಂಪಿ ಪ್ರವಾಸಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ಬರುವ ಸಾಧ್ಯತೆ ಇದೆ. ಹಂಪಿ ಭೇಟಿಗೆ ಬರುವ ಪ್ರವಾಸಿಗರು, ತುಂಗಭದ್ರಾ ಜಲಾಶಯ ಹಾಗೂ ಅಂಜನಾದ್ರಿಗೂ ಭೇಟಿ ನೀಡಲಿದ್ದಾರೆ.

    ಹೊಸ ವರ್ಷಾಚರಣೆ ನೆಪದಲ್ಲಿ ಧಾರ್ಮಿಕ ಕ್ಷೇತ್ರ ಹಂಪಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವಿಜಯನಗರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ.ಇದನ್ನೂ ಓದಿ: ತಮಿಳುನಾಡು | ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗ್ಲಾಸ್‌ ಬ್ರಿಡ್ಜ್‌ ಉದ್ಘಾಟನೆ