Tag: ಹಂಪಿ

  • ತಲಾ 70 ಸಾವಿರ ದಂಡ, ಕೆಡವಿದ ಸ್ಮಾರಕಗಳನ್ನ ಆರೋಪಿಗಳೇ ಮರಳಿ ನಿಲ್ಲಿಸುವಂತೆ ಮಹತ್ವದ ಆದೇಶ

    ತಲಾ 70 ಸಾವಿರ ದಂಡ, ಕೆಡವಿದ ಸ್ಮಾರಕಗಳನ್ನ ಆರೋಪಿಗಳೇ ಮರಳಿ ನಿಲ್ಲಿಸುವಂತೆ ಮಹತ್ವದ ಆದೇಶ

    – ಕಿಡಿಗೇಡಿಗಳಿಗೆ ಬಿಸಿ ಮುಟ್ಟಿಸಿದ ನ್ಯಾಯಾಧೀಶರು

    ಬಳ್ಳಾರಿ: ಹಂಪಿ ಸ್ಮಾರಕ ಕೆಡವಿದ ಕಿಡಿಗೇಡಿಗಳಿಗೆ ನ್ಯಾಯಾಲಯ ಬಿಸಿ ಮುಟ್ಟಿಸುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ.

    ಸ್ಮಾರಕಗಳನ್ನ ಕೆಡವಿದ ಆಯುಷ್ ಸಾಹು, ರಾಜಬಾಬು, ರಾಜ್ ಆರ್ಯನ್ ಮತ್ತು ರಾಜೇಶ್ ಚೌದರಿಯನ್ನ ಬಳ್ಳಾರಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದರು. ಆದರೆ ಆರೋಪಿಗಳಿಗೆ ಜಾಮೀನು ಮಂಜೂರು ವೇಳೆ ಹೊಸಪೇಟೆಯ ಜೆಎಂಎಫ್‍ಸಿ ನ್ಯಾಯಾದೀಶೆ ಪೂಣಿರ್ಮಾ ಯಾಧವ ಅವರು ಮಹತ್ವದ ಆದೇಶ ನೀಡಿರುವುದು ವಿಶೇಷವಾಗಿದೆ. ಇದನ್ನೂ ಓದಿ: ಹಂಪಿ ಸ್ಮಾರಕ ಧ್ವಂಸ ಪ್ರಕರಣ – ಮೂವರು ಆರೋಪಿಗಳು ಅರೆಸ್ಟ್

    ಸ್ಮಾರಕಗಳನ್ನ ಕೆಡವಿದ ಆರೋಪಿಗಳಿಗೆ ತಲಾ 70 ಸಾವಿರ ರೂಪಾಯಿ ದಂಡ ವಿಧಿಸಿದ್ದಲ್ಲದೇ, ಕೆಡವಿದ ಸ್ಮಾರಕಗಳನ್ನ ಆರೋಪಿಗಳೇ ಮರಳಿ ನಿಲ್ಲಿಸುವಂತೆ ಹೊಸಪೇಟೆಯ ಜೆಎಂಎಫ್‍ಸಿ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿರುವುದು ವಿಶೇಷವಾಗಿದೆ. ಅಷ್ಟೇ ಅಲ್ಲದೇ ಮರಳಿ ಸ್ಮಾರಕಗಳನ್ನ ನಿಲ್ಲಿಸಿದ ಬಗ್ಗೆ ಪ್ರಾಚ್ಯವಸ್ತು ಇಲಾಖೆ ಹಾಗೂ ಪೊಲೀಸರು ವರದಿ ನೀಡಿದ ನಂತರ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದು ವಿಶೇಷ ಪ್ರಕರಣವಾಗಿದೆ.

    ಹಂಪಿಯ ವಿಷ್ಣು ದೇವಾಲಯದ ಹಿಂಭಾಗದ ಗಜಶಾಲೆಯ ಬಳಿಯ ಸಾಲು ಕಂಬಗಳನ್ನ ಕೆಡವಿ ಸ್ಮಾರಕಗಳನ್ನ ಕೆಡವಿದ ವಿಡಿಯೋ ಫೆಬ್ರವರಿ 1 ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಘಟನೆಯ ನಂತರ ಎಚ್ಚೆತ್ತುಕೊಂಡಿದ್ದ ಪ್ರಾಚ್ಯವಸ್ತು ಹಾಗೂ ಪುರಾತತ್ವ ಇಲಾಖೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಹಂಪಿ ಸ್ಮಾರಕ ಧ್ವಂಸ ಪ್ರಕರಣ – ಮೂವರು ಆರೋಪಿಗಳು ಅರೆಸ್ಟ್

    ಹಂಪಿ ಸ್ಮಾರಕ ಧ್ವಂಸ ಪ್ರಕರಣ – ಮೂವರು ಆರೋಪಿಗಳು ಅರೆಸ್ಟ್

    ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳಲ್ಲಿ ಬೆಂಗಳೂರಿನ ಇಬ್ಬರು ಹಾಗೂ ಹೈದರಾಬಾದ್‍ನ ಒಬ್ಬ ಯುವಕ ಇದ್ದು, ಮತ್ತೊರ್ವ ಆರೋಪಿಗಾಗಿ ಪೊಲೀಸರು ಬಿಹಾರದಲ್ಲಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಬಂಧನಕ್ಕೆ ಒಳಗಾಗಿರುವ ಆರೋಪಿಗಳು ತಮ್ಮ ಕೃತ್ಯದ ಬಗ್ಗೆ ತಪ್ಪೊಪ್ಪಿಗೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಪ್ರಕರಣ ಬೆಳಕಿಗೆ ಬಂದ ಬಳಿಕ ಆರೋಪಿಗಳನ್ನು ಬಂಧಿಸಲು ಪೊಲೀಸರು 3 ತಂಡಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು. ಸದ್ಯ ಒಂದು ತಂಡ ಮತ್ತೊರ್ವ ಆರೋಪಿಯ ಬಂಧನಕ್ಕಾಗಿ ಬಿಹಾರಕ್ಕೆ ತೆರಳಿದ್ದು, ಅಲ್ಲಿ ಶೋಧ ಕಾರ್ಯ ನಡೆಸಿದೆ. ಸದ್ಯ ಆರೋಪಿಗಳು ರಕ್ಷಣೆ ಕೋರಿದ ಹಿನ್ನೆಲೆಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಗೌಪ್ಯವಾಗಿಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಏನಿದು ಪ್ರಕರಣ?
    ಹಂಪಿಯ ಗಜರಾಜ ಶಾಲೆಯ ಹಿಂಭಾಗದ ಸಾಲು ಕಂಬಗಳನ್ನು ಕಿಡಗೇಡಿಗಳು ಉರುಳಿಸಿ ಧ್ವಂಸ ಮಾಡಿದ್ದರು. ಅಲ್ಲದೇ ಈ ಕೃತ್ಯವನ್ನು ತಮ್ಮ ಮೊಬೈಲ್ ಫೋನಿನಲ್ಲಿ ಸೆರೆ ಹಿಡಿದಿದ್ದರು. ವಿಡಿಯೋವನ್ನು ಆಯುಷ್ ಸಾಹು ಎಂಬುವರು ಇನ್‍ಸ್ಟಾಗ್ರಾಮ್ ಪೋಸ್ಟ್ ಮಾಡಿದ್ದರು. ಆದರೆ ಈ ವಿಡಿಯೋಗೆ ಟೀಕೆ ವ್ಯಕ್ತವಾದ ಬಳಿಕ ಡಿಲೀಟ್ ಮಾಡಿದ್ದರು.

    ಇದೇ ವಿಡಿಯೋವನ್ನು ಬೆಂಗಳೂರಿನ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಸೇವ್ ಹಂಪಿ ಹೆಸರಿನಲ್ಲಿ ಪೋಸ್ಟ್ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಾಕಷ್ಟು ವೈರಲ್ ಆದ ಬಳಿಕ ಪೊಲೀಸ್ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆ ಎಚ್ಚೆತ್ತುಕೊಂಡಿತ್ತು.

    ಪ್ರಕರಣದ ಬೆಳಕಿಗೆ ಬಂದ ಬಳಿಕ ಬಳ್ಳಾರಿ ಜಿಲ್ಲಾ ಎಸ್‍ಪಿ ಅರುಣ್ ರಂಗರಾಜನ್ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದು. ಅಲ್ಲದೇ ಸ್ಮಾರಕ ನಾಶ ಬಗ್ಗೆ ಹಲವು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಹಂಪಿಯಲ್ಲಿ ಸ್ಮಾರಕ ಧ್ವಂಸ – ವಿಜಯನಗರ, ಮೈಸೂರು ಮಹಾರಾಜರಿಂದ ಪ್ರತಿಭಟನೆ

    ಹಂಪಿಯಲ್ಲಿ ಸ್ಮಾರಕ ಧ್ವಂಸ – ವಿಜಯನಗರ, ಮೈಸೂರು ಮಹಾರಾಜರಿಂದ ಪ್ರತಿಭಟನೆ

    ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿರುವುದನ್ನು ಖಂಡಿಸಿ ಹಂಪಿಯಲ್ಲಿಂದು ವಿಜಯನಗರ ಹಾಗೂ ಮೈಸೂರು ಮಹಾರಾಜರು ಪ್ರತಿಭಟನೆ ನಡೆಸಿದ್ದಾರೆ.

    ವಿಜಯನಗರ ಸ್ಮಾರಕ ಸಂಸ್ಕೃತಿ ಸಂರಕ್ಷಣಾ ಸೇನೆ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೈಸೂರಿನ ಯುವರಾಜ ಯದುವೀರ್ ಹಾಗೂ ವಿಜಯನಗರದ ಕೃಷ್ಣದೇವರಾಜರು ಪ್ರತಿಭಟನೆಯಲ್ಲಿ ಭಾಗವಹಿಸಿ ಸ್ಮಾರಕ ಧ್ವಂಸಗೊಳಿಸಿರುವುದನ್ನು ಖಂಡಿಸಿದ್ದಾರೆ. ಕಮಲಾಪುರದ ಪುರಾತತ್ವ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮಹಾರಾಜರು ಹಾಗೂ ನೂರಾರು ಸ್ಥಳೀಯರು, ಹಂಪಿಯಲ್ಲಿ ಸ್ಮಾರಕಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

    ಈ ವೇಳೆ ಮಾತನಾಡಿದ ಮೈಸೂರಿನ ಯುವರಾಜ ಯದುವೀರ್ ಅವರು ಹಂಪಿಯನ್ನು ಉಳಿಸುವ ಕೆಲಸವನ್ನು ನಾವೆಲ್ಲ ಮಾಡಬೇಕಾಗಿದೆ. ಪುರಾತತ್ವ ಇಲಾಖೆ ಈ ಬಗ್ಗೆ ಇನ್ನಷ್ಟು ಕಾರ್ಯಪ್ರವೃತ್ತರಾಗಬೇಕು, ನಮ್ಮ ಮೈಸೂರಿನಲ್ಲಿಯೂ ಸ್ಮಾರಕಗಳಿಗೆ ಧಕ್ಕೆಯಾಗುತ್ತಿವೆ. ಸ್ಮಾರಕಗಳನ್ನು ಉಳಿಸಲು ಜನರ ಸಹಭಾಗಿತ್ವ ಪ್ರಮುಖವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕಿಡಿಗೇಡಿಗಳ ಅಟ್ಟಹಾಸ – ಹಂಪಿಯ ಐತಿಹಾಸಿಕ ಸ್ಮಾರಕಗಳನ್ನ ಕೆಡವಿದ ವಿಡಿಯೋ ವೈರಲ್..!

    ಯದುವೀರ್ ಅವರು ಭಾನುವಾರ ಐತಿಹಾಸಿಕ ಹಂಪಿಗೆ ಭೇಟಿ ನೀಡಿ ಪ್ರಸಿದ್ಧ ಸ್ಮಾರಕಗಳನ್ನು ವೀಕ್ಷಣೆ ಮಾಡಿದ್ದರು. ಕಮಲಾಪುರ ಹಾಗೂ ತಳವಾರಘಟ್ಟ ರಸ್ತೆ ಮೂಲಕ ಆಗಮಿಸಿದ ಯದುವೀರ್ ಗೆಜ್ಜಲ ಮಂಟಪ, ಕುದುರೆ ಗೊಂಬೆ ಮಂಟಪ, ವಿಠಲ ಬಜಾರ್, ಪುಷ್ಕರಣಿ, ಪ್ರಸಿದ್ಧ ವಿಜಯವಿಠಲ ದೇವಸ್ಥಾನದಲ್ಲಿ ಕಲ್ಲಿನ ರಥ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಒಡೆಯರ್ ನೋಡಿ ಪ್ರವಾಸಿಗರು ಅವರ ಜೊತೆ ಫೋಟೋ, ಸೆಲ್ಫಿ ತಗೆದುಕೊಂಡಿದ್ದಾರೆ. ಇದನ್ನೂ ಓದಿ: ಕಿಡಿಗೇಡಿಗಳಿಂದ ಸ್ಮಾರಕ ಧ್ವಂಸ – ಎಸ್‍ಪಿಯಿಂದ ಸ್ಥಳ ಪರಿಶೀಲನೆ

    ಇದಾದ ಬಳಿಕ ಯದುವೀರ್ ಅವರು ಸಂಗೀತ ಮಂಟಪಕ್ಕೆ ತೆರಳಿ, ಸಪ್ತಸ್ವರ ಕಂಬಗಳಿಂದ ನಾದ ಆಲಿಸಿ ಖುಷಿಪಟ್ಟರು. ನಂತರ ತುಂಗಭದ್ರಾ ನದಿ ತೀರದಲ್ಲಿರುವ ಪುರಂದರ ಮಂಟಪ ವೀಕ್ಷಣೆ ಮಾಡಿದ್ದಾರೆ. ಯದುವೀರ್ ಅವರ ಜೊತೆ ಕನ್ನಡ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಸಿ.ಎಸ್.ವಾಸುದೇವನ್ ಮತ್ತಿತರರು ಇದ್ದರು. ಯದುವೀರ್ ಅವರು ಹಂಪಿಗೆ ಆಗಾಗ ಭೇಟಿ ನೀಡುತ್ತಾರೆ. ಈ ಬಾರಿಯೂ ಹಂಪಿ ಪ್ರಸಿದ್ಧ ಸ್ಮಾರಕ ಸೇರಿದಂತೆ ಪ್ರಕೃತಿ ಸೊಬಗನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಹಂಪಿ ಸೌಂದರ್ಯವನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದ ಯದುವೀರ್ ಒಡೆಯರ್

    ಹಂಪಿ ಸೌಂದರ್ಯವನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದ ಯದುವೀರ್ ಒಡೆಯರ್

    ಬಳ್ಳಾರಿ: ಮೈಸೂರು ಮಹರಾಜ ಯದುವೀರ್ ಶ್ರೀಕಂಠದತ್ತ ಒಡೆಯರ್ ಅವರು ಭಾನುವಾರ ಐತಿಹಾಸಿಕ ಹಂಪಿಗೆ ಭೇಟಿ ನೀಡಿ ಪ್ರಸಿದ್ಧ ಸ್ಮಾರಕಗಳನ್ನು ವೀಕ್ಷಣೆ ಮಾಡಿದರು.

    ಕಮಲಾಪುರ ಹಾಗೂ ತಳವಾರಘಟ್ಟ ರಸ್ತೆ ಮೂಲಕ ಬ್ಯಾಟರಿ ಚಾಲಿತ ವಾಹನ ನಿಲ್ದಾಣಕ್ಕೆ ಆಗಮಿಸಿದ ಯದುವೀರ್ ಗೆಜ್ಜಲ ಮಂಟಪ, ಕುದುರೆ ಗೊಂಬೆ ಮಂಟಪ, ವಿಠಲ ಬಜಾರ್, ಪುಷ್ಕರಣಿ, ಪ್ರಸಿದ್ಧ ವಿಜಯವಿಠಲ ದೇವಸ್ಥಾನದಲ್ಲಿ ಕಲ್ಲಿನ ರಥ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡರು. ಒಡೆಯರ್ ನೋಡಿ ಪ್ರವಾಸಿಗರು ಅವರ ಜೊತೆ ಫೋಟೋ, ಸೆಲ್ಫಿ ತಗೆದುಕೊಂಡರು.

    ಸಂಗೀತ ಮಂಟಪಕ್ಕೆ ತೆರಳಿ, ಸಪ್ತಸ್ವರ ಕಂಬಗಳಿಂದ ನಾದ ಆಲಿಸಿ ಖುಷಿಪಟ್ಟರು. ನಂತರ ತುಂಗಭದ್ರಾ ನದಿ ತೀರದಲ್ಲಿರುವ ಪುರಂದರ ಮಂಟಪ ವೀಕ್ಷಣೆ ಮಾಡಿದರು. ಕನ್ನಡ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಸಿ.ಎಸ್.ವಾಸುದೇವನ್ ಮತ್ತಿತರರು ಇದ್ದರು. ಯದುವೀರ್ ಅವರು ಹಂಪಿಗೆ ಆಗಾಗ ಭೇಟಿ ನೀಡುತ್ತಾರೆ. ಈ ಬಾರಿಯೂ ಹಂಪಿ ಪ್ರಸಿದ್ಧ ಸ್ಮಾರಕ ಸೇರಿದಂತೆ ಪ್ರಕೃತಿ ಸೊಬಗನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕಿಡಿಗೇಡಿಗಳಿಂದ ಸ್ಮಾರಕ ಧ್ವಂಸ – ಎಸ್‍ಪಿಯಿಂದ ಸ್ಥಳ ಪರಿಶೀಲನೆ

    ಕಿಡಿಗೇಡಿಗಳಿಂದ ಸ್ಮಾರಕ ಧ್ವಂಸ – ಎಸ್‍ಪಿಯಿಂದ ಸ್ಥಳ ಪರಿಶೀಲನೆ

    – ಆರೋಪಿಗಳ ಬಂಧನಕ್ಕೆ ತಂಡ ರಚನೆ

    ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯ ಗಜ ಶಾಲೆಯ ಹಿಂಭಾಗದ ಸಾಲು ಕಂಬಗಳನ್ನ ಮೂರು ನಾಲ್ಕು ದಿನಗಳ ಹಿಂದೆ ಕಿಡಿಗೇಡಿಗಳು ಧ್ವಂಸಗೊಳಿಸಿದ್ದರು. ಕಿಡಿಗೇಡಿಗಳು ಸ್ಮಾರಕಗಳನ್ನ ಧ್ವಂಸಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಹಾಗೂ ಪ್ರಾಚ್ಯ ವಸ್ತು ಹಾಗೂ ಪುರಾತತ್ವ ಸರ್ವೇಕ್ಷಣಾ ಇಲಾಖೆ ಎಚ್ಚೆತ್ತುಕೊಂಡಿದೆ.

    ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ಹಾಗೂ ಎಎಸ್‍ಐ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ನಾಲ್ಕು ದಿನಗಳ ಹಿಂದೆ ಉತ್ತರ ಭಾರತ ಮೂಲದ ನಾಲ್ವರು ಪ್ರವಾಸಿಗರು ಗಜಶಾಲೆಯ ಹಿಂಭಾಗದ ಸಾಲುಕಂಬಗಳನ್ನು ಕೆಡವಿ ಸ್ಮಾರಕಗಳನ್ನ ಹಾನಿ ಮಾಡಿದ್ದರು. ಇದರ ವಿಡಿಯೋವನ್ನ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು.

    ಈ ಘಟನೆಯ ಬಗ್ಗೆ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಕಮಲಾಪುರ ಅಂಬೇಡ್ಕರ್ ವೃತ್ತದಲ್ಲಿ ಹಾಗೂ ಹೊಸಪೇಟೆ ಕಂಪ್ಲಿ ರಸ್ತೆಯಲ್ಲಿ ಹಂಪಿ ಗ್ರಾಮಸ್ಥರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದರು. ಸ್ಮಾರಕಗಳನ್ನ ಹಾನಿ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಸ್ಥಳೀಯರು ಒತ್ತಾಯಿಸಿದ್ದು, ಇದೀಗ ಘಟನೆಯ ಬಗ್ಗೆ ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

    ವೈರಲ್ ವೀಡಿಯೋ ಹಿನ್ನೆಲೆಯಲ್ಲಿ ಈಗಾಗಾಲೇ ತನಿಖೆ ಮಾಡಲಾಗುತ್ತಿದೆ. ನಾಲ್ವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಪುರಾತತ್ವ ಇಲಾಖೆ ಎರಡು ವರ್ಷದ ಹಿಂದೆ ಈ ಘಟನೆಯಾಗಿದೆ ಎನ್ನುತ್ತಿದ್ದಾರೆ. ಆರು ತಿಂಗಳ ಹಿಂದೆ ಘಟನೆ ನಡೆದಿರಬಹುದು, ಆದ್ರೆ ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಎಸ್ ಪಿ ಅರುಣ್ ರಂಗರಾಜನ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕಿಡಿಗೇಡಿಗಳ ಅಟ್ಟಹಾಸ – ಹಂಪಿಯ ಐತಿಹಾಸಿಕ ಸ್ಮಾರಕಗಳನ್ನ ಕೆಡವಿದ ವಿಡಿಯೋ ವೈರಲ್..!

    ಕಿಡಿಗೇಡಿಗಳ ಅಟ್ಟಹಾಸ – ಹಂಪಿಯ ಐತಿಹಾಸಿಕ ಸ್ಮಾರಕಗಳನ್ನ ಕೆಡವಿದ ವಿಡಿಯೋ ವೈರಲ್..!

    – ವೀರೇಶ್ ದಾನಿ

    ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಗೆ ಮೊನ್ನೆ ಮೊನ್ನೆಯಷ್ಠೆ ಅಮೇರಿಕದ ನೂಯಾರ್ಕ್ ಟೈಮ್ಸ್ ಪಟ್ಟಿಯಲ್ಲಿ 2ನೇ ಸ್ಥಾನ ದೊರೆತಿದೆ. ಆದರೆ ಇಂತಹ ಐತಿಹಾಸಿಕ ತಾಣವಾಗಿರುವ ವಿಶ್ವ ಪರಂಪರೆ ಪಟ್ಟಿಯಲ್ಲಿರುವ ಹಂಪಿ ಇದೀಗ ಹಾಳು ಕೊಂಪೆಯಾಗಿತ್ತಿದೆ.

    ಉತ್ತರ ಭಾರತ ಮೂಲದ ಮೂವರು ಕಿಡಿಗೇಡಿಗಳು ಹಂಪಿ ಸ್ಮಾರಕಕ್ಕೆ ದಕ್ಕೆ ಮಾಡಿದ್ದಲ್ಲದೇ ಸ್ಮಾರಕಗಳ ಸಾಲು ಕಂಬಗಳನ್ನು ಕೆಡವುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ಮೂರು ನಾಲ್ಕು ದಿನಗಳ ಹಿಂದೆ ಹಂಪಿ ಪ್ರವಾಸಕ್ಕೆ ಬಂದಿದ್ದ ಉತ್ತರ ಭಾರತ ಮೂಲದ ಮೂವರು ಯುವಕರು ಹಂಪಿಯ ವಿಷ್ಣು ದೇವಾಲಯದ ಹಿಂದಿರುವ ಗಜ ಶಾಲೆಯ ಆನೆ ಸಾಲು, ಒಂಟೆ ಸಾಲುಗಳ ಬಳಿಯ ಸಾಲು ಕಂಬಗಳನ್ನ ಕೆಡವಿ ಸ್ಮಾರಕಗಳಿಗೆ ದಕ್ಕೆ ಮಾಡಿದ್ದಾರೆ.

    ಕಿಡಿಗೇಡಿ ಯುವಕರು ಸಾಲುಕಂಬಗಳ ಸ್ಮಾರಕಗಳನ್ನ ಹಾಳು ಮಾಡಿರುವ ವಿಡಿಯೋವನ್ನ ಬೆಂಗಳೂರಿನಲ್ಲಿ ವಾಸವಾಗಿರುವ ಮಧ್ಯಪ್ರದೇಶ ಮೂಲದ ಆಯುಷ್ಯ ಸಾಹು ಎಂಬವರು ತಮ್ಮ ಇನ್ ಸ್ಟಾಗ್ರಾಂ ಹಾಗೂ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ,

    ಆಯುಷ್ಯ ಸಾಹು ಸಾಮಾಜಿಕ ಜಾಲತಾಣಗಳಲ್ಲಿ ಸ್ಮಾರಕಗಳನ್ನ ಹಾನಿ ಮಾಡುತ್ತಿರುವ ವಿಡಿಯೋ ಪ್ರಸಾರ ಮಾಡಿದ ನಂತರವೂ ಸಹ ಪ್ರಾಚ್ಯ ವಸ್ತು ಹಾಗೂ ಪುರಾತತ್ವ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸವಾಗಿದೆ. ಅಲ್ಲದೇ ಈ ಬಗ್ಗೆ ಇದೂವರೆಗೂ ಯಾವುದೇ ದೂರು ಸಹ ದಾಖಲು ಮಾಡದಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಅಮೆರಿಕ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯಲ್ಲಿ ಹಂಪಿಗೆ 2ನೇ ಸ್ಥಾನ..!

    ಅಮೆರಿಕ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯಲ್ಲಿ ಹಂಪಿಗೆ 2ನೇ ಸ್ಥಾನ..!

    -ವಿಶ್ವ ಪರಂಪರೆ ತಾಣಕ್ಕೆ ಮತ್ತೊಂದು ಗರಿ..!

    ಬಳ್ಳಾರಿ: ವಿಶ್ವ ಪರಂಪರೆ ತಾಣವಾಗಿರುವ ಹಂಪಿಗೀಗ ಮತ್ತೊಂದು ಗರಿ ಲಭಿಸಿದ್ದು, ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯ ಪ್ರವಾಸಿ ತಾಣಗಳಲ್ಲಿ ವಿಶ್ವ ವಿಖ್ಯಾತ ಹಂಪಿಗೆ 2ನೇ ಸ್ಥಾನ ಲಭಿಸಿದೆ. ಇದೂ ರಾಜ್ಯದ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.

    ‘ಕಣ್ಣು ಇದ್ದವರು ಕನಕಗಿರಿ ನೋಡಬೇಕು. ಕಾಲಿದ್ದವರು ಹಂಪಿ ನೋಡಬೇಕು’ ಅನ್ನೋ ಗಾದೆ ಮಾತಿದೆ. ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನ ನೋಡುವುದೇ ಒಂದು ಅಂದವಾಗಿದ್ದು, ಅಂತಹ ಅಂದದ ಸೊಬಗಿನ ಸ್ಮಾರಕಗಳಿಗೆ ಇದೀಗ ಮತ್ತೊಮ್ಮೆ ಹಿರಿಮೆ ಲಭಿಸಿದೆ. ವಿಶ್ವದ 52 ಪ್ರವಾಸಿ ತಾಣಗಳಲ್ಲಿ ವಿಶ್ವ ಪರಂಪರೆಯ ಹಂಪಿಗೆ 2ನೇ ಸ್ಥಾನ ಲಭಿಸಿದೆ. ಅಮೆರಿಕದ ನ್ಯೂಯಾರ್ಕ್ಸ್ ಟೈಮ್ಸ್ ಮಾಡಿರುವ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೆರೆಬಿಯನ್ ದ್ವೀಪವಾದ ಪೋರ್ಟೋ ರಿಕೋಗೆ ಮೊದಲ ಸ್ಥಾನ ಲಭಿಸಿದ್ದರೆ, ವಿಶ್ವ ವಿಖ್ಯಾತ ಹಂಪಿಗೆ 2ನೇ ಸ್ಥಾನ ದೊರೆತಿರುವುದು ರಾಜ್ಯದ ಹೆಮ್ಮೆಯ ಸಂಗತಿಯಾಗಿದೆ ಎಂದು ಬಳ್ಳಾರಿ ಡಿಸಿ ರಾಮಪ್ರಸಾತ್ ಮನೋಹರ್ ಹೇಳಿದ್ದಾರೆ.

    ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನ ನೋಡಲು ಪ್ರತಿನಿತ್ಯ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಕಳೆದ ವರ್ಷ ಬರೋಬ್ಬರಿ 5,35 ಲಕ್ಷ ಪ್ರವಾಸಿಗರು ಹಂಪಿ ವೀಕ್ಷಣೆ ಮಾಡಿದ್ದಾರೆ. ಈ ಪೈಕಿ 38 ಸಾವಿರ ವಿದೇಶಿ ಪ್ರವಾಸಿಗರು ಹಂಪಿ ವೀಕ್ಷಣೆ ಮಾಡಿರುವುದು ಮತ್ತೊಂದು ದಾಖಲೆಯಾಗಿದೆ. ಹೀಗಾಗಿ ಇತಂಹ ವಿಶ್ವ ವಿಖ್ಯಾತ ಹಂಪಿಗೆ ಇದೀಗ ನ್ಯೂಯಾರ್ಕ್ ಟೈಮ್ಸ್ ನಲ್ಲಿ 2ನೇ ಸ್ಥಾನ ದೊರೆತಿರುವುದು ನಿಜಕ್ಕೂ ರಾಜ್ಯದ ಹೆಮ್ಮೆಯ ಸಂಗತಿಯಾಗಿದೆ. ದೇಶದ ಯಾವ ಪ್ರವಾಸಿ ತಾಣಗಳಿಗೂ ಸಿಗದ ಮಾನ್ಯತೆ ವಿಶ್ಯ ವಿಖ್ಯಾತ ಹಂಪಿಗೆ ದೊರೆತಿರುವುದು ಬಳ್ಳಾರಿ ಜನರಲ್ಲಿ ಮತ್ತಷ್ಟೂ ಸಂತಸ ಮೂಡಿಸಿದೆ. ಜೊತೆಗೆ ಹಂಪಿಯನ್ನ ಇನ್ನಷ್ಟು ಅಭಿವೃದ್ಧಿ ಮಾಡಿದರೆ ಒಳಿತೂ ಅಂತ ಪ್ರವಾಸಿಗ ಬಸವರಾಜ್ ಹೇಳಿದ್ದಾರೆ.

    ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ಪಟ್ಟಿಯಲ್ಲಿ ಹಂಪಿಗೆ ವಿಶೇಷ ಸ್ಥಾನ ಗೌರವ ಸಿಕ್ಕರೂ ರಾಜ್ಯ ಸರ್ಕಾರ ಇತಂಹ ಹೆಮ್ಮೆಯ ಹಂಪಿ ಉತ್ಸವವನ್ನು ಮಾಡದೇ ನಿರ್ಲಕ್ಷ್ಯ ತೊರಿರುವುದು ನಿಜಕ್ಕೂ ದುರಂತಮಯವಾಗಿದೆ. ಇನ್ನಾದ್ರೂ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಶ್ವ ಪರಂಪರೆಯ ತಾಣವಾಗಿರುವ ಹಂಪಿಯತ್ತ ಚಿತ್ತ ಹರಿಸಲಿ ಅನ್ನೋದೇ ಎಲ್ಲರ ಒತ್ತಾಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಂಪಿಯಲ್ಲಿ ಹರಕೆ ತೀರಿಸಿದ ವಿದೇಶಿಗರು

    ಹಂಪಿಯಲ್ಲಿ ಹರಕೆ ತೀರಿಸಿದ ವಿದೇಶಿಗರು

    ಬಳ್ಳಾರಿ: ಮೂವರು ವಿದೇಶಿಗರು ಹಿಂದೂ ದೇವರನ್ನು ನಂಬಿ ವಿಶ್ವಪ್ರಸಿದ್ಧ ಹಂಪಿಯ ಶ್ರೀ ವಿರುಪಾಕ್ಷೇಶ್ವರ ದೇವಸ್ಥಾನಕ್ಕೆ ಇಂದು ಆಗಮಿಸಿ ತಮ್ಮ ಹರಕೆ ತೀರಿಸಿದ್ದಾರೆ.

    ಫ್ರಾನ್ಸ್ ದೇಶದಿಂದ ಪ್ರವಾಸಕ್ಕೆ ಆಗಮಿಸಿರುವ ಉಂಬೆರ್ಟೋ, ಜೀನ್ ಲುಕಾಸ್ ಮತ್ತು ಜೀನ್ ಎನ್ನುವ ಮೂವರು ವಿದೇಶಿಗರು ಇಂದು ಅತ್ಯಂತ ಶ್ರದ್ಧಾಭಕ್ತಿಯಿಂದ ಹಿಂದೂ ಸಂಪ್ರದಾಯದಂತೆ ಶ್ವೇತವಸ್ತ್ರ ಧರಿಸಿ, ತುಂಗಭದ್ರ ನದಿಯಲ್ಲಿ ಸ್ನಾನ ಮಾಡಿ ಶ್ರೀ ವಿರುಪಾಕ್ಷನ ದರ್ಶನ ಪಡೆದಿದ್ದಾರೆ. ಶ್ರೀ ವಿರುಪಾಕ್ಷನಿಗೆ ತಾವು ಅಂದುಕೊಂಡಿದ್ದ ಹರಕೆ ತೀರಿಸಲು 20 ಸಾವಿರ ಮೌಲ್ಯದ ಬೆಳ್ಳಿ ನಾಗಪ್ಪ ಹಾಗೂ ಎರಡು ಹಿತ್ತಾಳೆ ದೀಪಗಳನ್ನು ದೇವಸ್ಥಾನಕ್ಕೆ ಸಲ್ಲಿಸಿದ್ದಾರೆ.

    ಈ ವೇಳೆ ದೇವಸ್ಥಾನದ ಅರ್ಚಕರಾದ ಶೇಷುಸ್ವಾಮಿ, ಪ್ರಶಾಂತ ಪೂಜಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಹರಕೆ ಕಾಣಿಕೆ ವಸ್ತುಗಳನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಬಿ. ಶ್ರೀನಿವಾಸ್ ದೇವಸ್ಥಾನದ ಪರವಾಗಿ ಸ್ವೀಕರಿಸಿದರು.

    ತಾವು ಅಂದುಕೊಂಡಿದ್ದು ಜರುಗಲಿ ಎಂದು ತಮ್ಮ ಸ್ನೇಹಿತರು ಹೇಳಿದಂತೆ ಶ್ರೀ ವಿರುಪಾಕ್ಷನಿಗೆ ನಾವು ಹರಕೆ ತೀರಿಸಿದ್ದೇವೆ. ನಾವು ಹಿಂದೂ ಸಂಪ್ರದಾಯವನ್ನು ಗೌರವಿಸುತ್ತೇವೆ. ನಾವು ಪುಟ್ಟಪರ್ತಿ ಸಾಯಿಬಾಬಾ ಭಕ್ತರು. ಪ್ರತಿವರ್ಷವೂ ಭಾರತಕ್ಕೆ ಬರುತ್ತೇವೆ. ಹಾಗೆಯೇ ಈ ವರ್ಷವು ಬಂದು ಹಂಪಿಯ ಲಕ್ಷಾಂತರ ಭಕ್ತರಂತೆ ನಾವು ಹರಕೆ ತೀರಿಸಿದ್ದೇವೆ ಎಂದು ವಿದೇಶಿ ಭಕ್ತರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 12 ಗ್ರಾಂ ಚಿನ್ನದಲ್ಲಿ ಮೂಡಿಬಂತು ಹಂಪಿಯ ಕಲ್ಲಿನ ರಥ!

    12 ಗ್ರಾಂ ಚಿನ್ನದಲ್ಲಿ ಮೂಡಿಬಂತು ಹಂಪಿಯ ಕಲ್ಲಿನ ರಥ!

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಕ್ಕಸಾಲಿಗರೊಬ್ಬರು ಬಂಗಾರದಲ್ಲಿ ಹಂಪಿಯ ಕಲ್ಲಿನ ರಥದ ಪ್ರತಿರೂಪ ಕೆತ್ತುವ ಮೂಲಕ ದಾಖಲೆ ಬರೆಯಲು ಮುಂದಾಗಿದ್ದಾರೆ.

    ಕಾರವಾರ ನಗರದ ಕಡವಾಡದ ನಿವಾಸಿಯಾಗಿರುವ ಮಿಲಿಂದ್ ಅಣ್ವೇಕರ್ ಅವರು 12 ಗ್ರಾಂ ಬಂಗಾರದಲ್ಲಿ ವಿಶ್ವ ಪ್ರಸಿದ್ಧ ಹಂಪಿ ರಥವನ್ನು ರಚನೆ ಮಾಡಿದ್ದಾರೆ. 17 ವರ್ಷಗಳಿಂದ ಆಭರಣ ತಯಾರಿಕೆಯಲ್ಲಿ ಪಳಗಿರುವ ಇವರು, ಬಂಗಾರದ ರಥ ನಿರ್ಮಾಣಕ್ಕಾಗಿ ಒಂದು ತಿಂಗಳು ಸಮಯ ತೆಗೆದುಕೊಂಡಿದ್ದಾರೆ.

    ಒಂದು ಇಂಚು ಉದ್ದ ಒಂದೂವರೆ ಇಂಚು ಅಗಲ ಸುತ್ತಳತೆಯ ಈ ಬಂಗಾರದ ರಥ ಅತಿ ಅದ್ಭುತವಾಗಿದ್ದು ಆನೆಗಳು, ರಥ, ರಥದ ಚಕ್ರಗಳು ಅತ್ಯಂತ ನಾಜೂಕಾಗಿ ಮೂಡಿಬಂದಿದೆ. ಇನ್ನು ಇದರ ಒಳಭಾಗದಲ್ಲಿ ಚಿಕ್ಕ ದೀಪವನ್ನು ಅಳವಡಿಸಿದ್ದು ಆಕರ್ಷಕವಾಗಿ ಕಾಣಿಸಿದೆ.

    2013ರಲ್ಲಿ 0.980 ಮಿಲಿಗ್ರಾಂನಲ್ಲಿ ಬಂಗಾರದ ಚೈನ್ ತಯಾರಿಸಿ ಮಿಲಿಂದ್ ಲಿಮ್ಕಾ ದಾಖಲೆ ನಿರ್ಮಿಸಿದ್ದಾರೆ. ಇದಲ್ಲದೇ ಈಗ ವಿಶ್ವ ದಾಖಲೆ ನಿರ್ಮಿಸುವ ಹಂಬಲ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಭಕ್ತಿಯಿಂದ ಮೈಮರೆತು ವಿರೂಪಾಕ್ಷನಿಗೆ ಹಾಡಿದ ಕೆ.ಎಸ್.ಈಶ್ವರಪ್ಪ: ವಿಡಿಯೋ ನೋಡಿ

    ಭಕ್ತಿಯಿಂದ ಮೈಮರೆತು ವಿರೂಪಾಕ್ಷನಿಗೆ ಹಾಡಿದ ಕೆ.ಎಸ್.ಈಶ್ವರಪ್ಪ: ವಿಡಿಯೋ ನೋಡಿ

    ಬಳ್ಳಾರಿ: ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪನವರು ಹಂಪಿ ವಿರೂಪಾಕ್ಷೇಶ್ವರನಿಗೆ ಮೈಮರೆತು ಭಕ್ತಿಯಿಂದ ಹಾಡಿದ ಹಾಡಿನ ವಿಡಿಯೋ ವೈರಲ್ ಆಗಿದೆ.

    ಸಾಮಾನ್ಯವಾಗಿ ಎಲ್ಲರೂ ಕೆ.ಎಸ್.ಈಶ್ವರಪ್ಪನವರ ಉದ್ರೇಕಕರಾರಿ ಭಾಷಣಗಳನ್ನು ಕೇಳಿರುತ್ತಾರೆ. ಆದರೆ ಅದೇ ಈಶ್ವರಪ್ಪನವರು ಮೈಮರೆತು ಭಕ್ತಿಯಿಂದ ವಿರೂಪಾಕ್ಷನಿಗೆ ವಂದಿಸುತ್ತಾ ಹಾಡಿರುವ ಹಾಡು ಸಾಕಷ್ಟು ವೈರಲ್ ಆಗಿದೆ.

    ಶನಿವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮವನ್ನು ತುಂಗಭದ್ರಾ ನದಿಯಲ್ಲಿ ವಿಸರ್ಜನೆ ಮಾಡಿದ ಬಳಿಕ, ನದಿಯಲ್ಲಿ ಮುಳುಗಿ ಸ್ನಾನ ಮಾಡಿ ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಭಾವಪರವಶರಾದ ಅವರು ಈಶ್ವರನನ್ನು ನೆನೆದು ಮೈಮರೆತು ಹಾಡಿದರು.

    ದೇವಸ್ಥಾನದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅರ್ಚಕರೆಲ್ಲರೂ ಇದ್ದರೂ, ಅದರ ಪರಿವೇ ಇಲ್ಲವೆಂಬಂತೆ ವಿರೂಪಾಕ್ಷನಲ್ಲಿ ಮೊರೆ ಇಟ್ಟು ಗಟ್ಟಿಯಾದ ಧ್ವನಿಯಲ್ಲಿ ಜಯ ಜಯ ಶಂಕರನೇ, ಜಯ ವಿಶ್ವೇಶ್ವರನೇ, ಈಶ ಗಿರೀಶ ಮಹೇಶ ಉಮೇಶ ಎಂದು ಹಲವು ನಿಮಿಷಗಳ ಕಾಲ ಭಕ್ತಿಗೀತೆಯನ್ನು ಹಾಡಿದ್ದು ಎಲ್ಲರ ಗಮನ ಸೆಳೆಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv