Tag: ಹಕ್ಕಿ ಜ್ವರ

  • ಹಕ್ಕಿ ಜ್ವರ ಹರಡುತ್ತಿರುವ ಹಿನ್ನೆಲೆ ಎಲ್ಲಾ ಪೌಲ್ಟ್ರಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸೂಚನೆ

    ಹಕ್ಕಿ ಜ್ವರ ಹರಡುತ್ತಿರುವ ಹಿನ್ನೆಲೆ ಎಲ್ಲಾ ಪೌಲ್ಟ್ರಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸೂಚನೆ

    ನವದೆಹಲಿ: ಹಲವಾರು ರಾಜ್ಯಗಳಲ್ಲಿ ಹೆಚ್5ಎನ್1(H5N1) ಹಕ್ಕಿ ಜ್ವರ(Birf flu) ಹರಡುತ್ತಿರುವ ಹಿನ್ನೆಲೆ ಎಲ್ಲಾ ಕೋಳಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

    ಹಕ್ಕಿ ಜ್ವರ ಹರಡುವಿಕೆ ತಡೆಗಟ್ಟಲು ಮೂರು-ಹಂತದ ಕಾರ್ಯತಂತ್ರದ ಭಾಗವಾಗಿ ಎಲ್ಲಾ ಕೋಳಿ ಸಾಕಣೆ ಕೇಂದ್ರಗಳು ಒಂದು ತಿಂಗಳೊಳಗೆ ಕಡ್ಡಾಯವಾಗಿ ಆಯಾ ರಾಜ್ಯ ಪಶುಸಂಗೋಪನಾ ಇಲಾಖೆಗಳಲ್ಲಿ ನೋಂದಣಿ ಮಾಡಬೇಕು ಎಂದು ಕೇಂದ್ರ ಪಶುಸಂಗೋಪನೆ ಸಚಿವಾಲಯ ಶುಕ್ರವಾರ ತಿಳಿಸಿದೆ. ಇದನ್ನೂ ಓದಿ: ಮಾಜಿ ಸಿಎಂಗಳು ಸಂಚರಿಸಿದ ಕಾರನ್ನ 2.10 ಲಕ್ಷಕ್ಕೆ ಖರೀದಿಸಿದ ಕಾಂಗ್ರೆಸ್‌ ನಾಯಕ

    ದೇಶದ ಹಲವಾರು ಪ್ರದೇಶಗಳಲ್ಲಿ ಹೆಚ್5ಎನ್1 ವೈರಸ್ ನಿರಂತರವಾಗಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ದೇಶನ ಬಂದಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ಮಧ್ಯಪ್ರದೇಶ, ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳ 34 ಕೇಂದ್ರಗಳಲ್ಲಿ ಅಧಿಕಾರಿಗಳು ಹಕ್ಕಿ ಜ್ವರದ ಹರಡುವಿಕೆಯನ್ನು ದೃಢಪಡಿಸಿದ್ದಾರೆ. ಇದನ್ನೂ ಓದಿ: ನ್ಯಾಮತಿ ಬ್ಯಾಂಕ್ ದರೋಡೆಗೂ ಮುನ್ನ ಪೂಜೆ ಸಲ್ಲಿಸಿದ್ದ ದೇವಾಲಯದಲ್ಲಿ ಕಳ್ಳತನ!

    ಹಕ್ಕಿ ಜ್ವರವನ್ನು ಹಾಗೂ ಅದರ ಹರಡುವಿಕೆಯನ್ನು ತಡೆಗಟ್ಟಲು ತುರ್ತು ಕ್ರಮಗಳ ಕುರಿತು ಚರ್ಚಿಸಲು ಅಲ್ಕಾ ಉಪಾಧ್ಯಾಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಕೃಷಿ ಭವನದಲ್ಲಿ ಕೋಳಿ ಉದ್ಯಮ ಪ್ರತಿನಿಧಿಗಳು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಅಧಿಕಾರಿಗಳು ಮತ್ತು ಇತರ ಪಾಲುದಾರರೊಂದಿಗೆ ಉನ್ನತ ಮಟ್ಟದ ಸಭೆ ನಡೆಯಿತು. ಇದನ್ನೂ ಓದಿ: ಹೆಡ್ ಕಾನ್‍ಸ್ಟೇಬಲ್ ಮನೆಗೆ ಕನ್ನ – 5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    ಹಕ್ಕಿ ಜ್ವರ ಎಂದರೇನು?
    ಏವಿಯನ್ ಇನ್ಫ್ಲುಯೆನ್ಸ್‌ ಎಂದು ಕರೆಯಲ್ಪಡುವ ಬರ್ಡ್ ಫ್ಲೂ ವೈರಸ್ ಒಂದು ಸೋಂಕು ಆಗಿದ್ದು, ಅದು ಪಕ್ಷಿಗಳಲ್ಲಿ ಹರಡುತ್ತದೆ. ಇದು ಮನುಷ್ಯರಿಗೆ ಹರಡುವ ಸಾಧ್ಯತೆ ಕಡಿಮೆ.

  • ಬೀದರ್‌ನಲ್ಲಿ ಏಕಾಏಕಿ ಕಾಗೆಗಳ ಸರಣಿ ಸಾವು – ಹಕ್ಕಿ ಜ್ವರದ ಆತಂಕ?

    ಬೀದರ್‌ನಲ್ಲಿ ಏಕಾಏಕಿ ಕಾಗೆಗಳ ಸರಣಿ ಸಾವು – ಹಕ್ಕಿ ಜ್ವರದ ಆತಂಕ?

    ಬೀದರ್: ಒಂದೇ ದಿನ ಎರಡು‌ ಕಾಗೆಗಳು (Crow) ಸಾವು ಸೇರಿದಂತೆ ಹಲವು ದಿನಗಳಿಂದ ಕಾಗೆಗಳು ಅನುಮಾನಾಸ್ಪದವಾಗಿ ಜಿಲ್ಲೆಯಲ್ಲಿ ಸಾವನ್ನಪ್ಪುತ್ತಿವೆ.

    ಭಾಲ್ಕಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಏಕಾಏಕಿ ಕಾಗೆಗಳು ಸಾವನ್ನಪ್ಪಿ ನೆಲಕ್ಕೆ ಬೀಳುತ್ತಿವೆ.

    ಹಲವು ದಿನಗಳ ಹಿಂದೆ ಭಾಲ್ಕಿ ತಾಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಉದ್ದಗೀರನಲ್ಲಿ ಮೊದಲು ಹಕ್ಕಿಜ್ವರ ಹಾಣಿಸಿಕೊಂಡಾಗ ನೂರಾರು ಕಾಗೆಗಳು ಏಕಾಏಕಿ ಸಾವನ್ನಪ್ಪಿದವು. ಈಗ ಅದೇ ರೀತಿ ಭಾಲ್ಕಿಯಲ್ಲೂ ದಿನಾಲು ಕಾಗೆಗಳು ಸತ್ತು ಬೀಳುತ್ತಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: IPL 2025 | ಅತ್ಯುತ್ತಮ ಜೊತೆಯಾಟದಲ್ಲಿ ಆರ್‌ಸಿಬಿ ಆಟಗಾರರೇ ಟಾಪ್‌!

     

    ಮಹಾರಾಷ್ಟ್ರ ಹಾಗೂ ತೆಲಂಗಾಣದ ಗಡಿಯಲ್ಲಿ ಪಶು ಇಲಾಖೆಯ ಅಧಿಕಾರಿಗಳು ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಿದ್ದರೂ ಕಣ್ಣು ತಪ್ಪಿಸಿ ಜಿಲ್ಲೆಗೆ ಅಕ್ರಮವಾಗಿ ಕೋಳಿ ಸಾಗಾಣಿಕೆ ಮಾಡಲಾಗುತ್ತಿದೆ.

    ನಿಗೂಢವಾಗಿ ಸಾವನ್ನಪ್ಪುತ್ತಿರುವ ಕಾಗೆಗಳ ಬಗ್ಗೆ ವೈದ್ಯಾಧಿಕಾರಿಗಳು ಪರಿಶೀಲಿಸಿ ಹಕ್ಕಿ ಜ್ವರದ (Bird Fever) ಆತಂಕವನ್ನು ನಿವಾರಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.

  • ಬಳ್ಳಾರಿ | ಹಕ್ಕಿ ಜ್ವರ ಪತ್ತೆ – ಆಂಧ್ರ ಕೋಳಿ ಸಾಗಾಟ ವಾಹನಗಳ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣು

    ಬಳ್ಳಾರಿ | ಹಕ್ಕಿ ಜ್ವರ ಪತ್ತೆ – ಆಂಧ್ರ ಕೋಳಿ ಸಾಗಾಟ ವಾಹನಗಳ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣು

    – 5 ಚೆಕ್‌ಪೋಸ್ಟ್ ನಿರ್ಮಾಣ ಮಾಡಿದ ಜಿಲ್ಲಾಡಳಿತ

    ಬಳ್ಳಾರಿ: ಜಿಲ್ಲೆಯಲ್ಲಿ ಹಕ್ಕಿ ಜ್ವರ (Bird Flu) ಪತ್ತೆ ಹಿನ್ನೆಲೆ ಜಿಲ್ಲಾಡಳಿತವು ಆಂಧ್ರದಿಂದ ಬರುವ ಕೋಳಿ ಸಾಗಾಟ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.

    ಹಕ್ಕಿ ಜ್ವರ ಪತ್ತೆ ಹಿನ್ನೆಲೆ ಅಲರ್ಟ್ ಆಗಿರುವ ಜಿಲ್ಲಾಡಳಿತವು, ಜಿಲ್ಲೆಯಾದ್ಯಂತ 5 ಚೆಕ್‌ಪೋಸ್ಟ್‌ಗಳ ನಿರ್ಮಾಣ ಮಾಡಿದೆ.

    ಪ್ರಮುಖವಾಗಿ ಆಂಧ್ರಪ್ರದೇಶದ ಅನಂತಪುರ ಹಾಗೂ ಗುಂತಕಲ್ ಭಾಗದಿಂದ ಬರುವ ಕೋಳಿ ಸಾಗಾಟ ವಾಹನಗಳ ಮೇಲೆ ಜಿಲ್ಲಾಡಳಿತ ಕಣ್ಣಿಟ್ಟಿದೆ. ಆಂಧ್ರ ಗಡಿಗೆ ಹೊಂದಿಕೊಂಡಿರುವ ಪಿಡಿಹಳ್ಳಿ ಗ್ರಾಮದಲ್ಲೂ ಚೆಕ್ ಪೋಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಕಾಮಗಾರಿ ಫಲಕದ ವಿಚಾರಕ್ಕೆ ಜಗಳ – ಗುಂಪು ಘರ್ಷಣೆಯಲ್ಲಿ ಓರ್ವ ಸಾವು, 9 ಜನರಿಗೆ ಗಾಯ

    ಪಿಡಿಹಳ್ಳಿ ಚೆಕ್‌ಪೋಸ್ಟ್‌ನಿಂದ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ಮಾಡಿದ್ದು, ಚೆಕ್‌ಪೋಸ್ಟ್‌ನಲ್ಲಿ ಸಿಬ್ಬಂದಿ, ಕೋಳಿಗಳ ಆರೋಗ್ಯ ಪರಿಶೀಲನೆ ಮಾಡಿಯೇ ವಾಹನಗಳನ್ನ ಜಿಲ್ಲೆಯ ಒಳಗೆ ಬಿಡುತ್ತಿದ್ದಾರೆ. ಪ್ರತಿ ಚೆಕ್‌ಪೋಸ್ಟ್‌ಗಳಿಗೂ ಪಶುವೈದ್ಯರ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಶೈಕ್ಷಣಿಕ, ಸಂಶೋಧನಾ ಭವನ ಕಟ್ಟಡಗಳ ಶಂಕುಸ್ಥಾಪನೆ – ಗುದ್ದಲಿ ಪೂಜೆ ಮಾಡಿದ ಡಿಕೆಶಿ, ಮುನಿರತ್ನ

    ಸದ್ಯ ಹಕ್ಕಿ ಜ್ವರದ ಆತಂಕ ಹಿನ್ನೆಲೆ ವ್ಯಾಪಾರಸ್ಥರು, ಆಂಧ್ರದಿಂದ ಕೋಳಿ ಮಾಂಸ ಆಮದಿಗೆ ಹಿಂದೇಟು ಹಾಕುತ್ತಿದ್ದಾರೆ. ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಂಗನಾ ರಣಾವತ್ ಭೇಟಿ

  • ಹಕ್ಕಿಜ್ವರ ಭೀತಿ – ಚಿತ್ರದುರ್ಗ ಜಿಲ್ಲಾಡಳಿತದಿಂದ ಕೋಳಿ ಫಾರಂಗಳಲ್ಲಿ ಜಾಗೃತಿ

    ಹಕ್ಕಿಜ್ವರ ಭೀತಿ – ಚಿತ್ರದುರ್ಗ ಜಿಲ್ಲಾಡಳಿತದಿಂದ ಕೋಳಿ ಫಾರಂಗಳಲ್ಲಿ ಜಾಗೃತಿ

    ಚಿತ್ರದುರ್ಗ: ರಾಜ್ಯಾದ್ಯಂತ ಹಕ್ಕಿಜ್ವರದ (Bird Flu) ಭೀತಿ ಕಾಡುತ್ತಿದೆ. ಅದರಲ್ಲೂ ಆಂಧ್ರಪ್ರದೇಶ ಹಾಗೂ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲೂ ಹಕ್ಕಿಜ್ವರ ತಾಂಡವವಾಡುತ್ತಿರುವ ಪರಿಣಾಮ ಅಲರ್ಟ್ ಆಗಿರುವ ಚಿತ್ರದುರ್ಗ ಜಿಲ್ಲಾಡಳಿತ (Chitradurga District Administration) ಕೋಳಿ ಫಾರಂಗಳಲ್ಲಿ (Poultry) ಹಕ್ಕಿಜ್ವರ ಹರಡದಂತೆ ಜಾಗೃತಿ ಮೂಡಿಸಿದೆ.

    ಹಕ್ಕಿಜ್ವರವನ್ನು ಎದುರಿಸಲು ಸಜ್ಜಾಗಿರುವ ಜಿಲ್ಲೆಯ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು, ಚಿತ್ರದುರ್ಗ ತಾಲೂಕಿನ ದಂಡಿನ ಕುರುಬರಹಟ್ಟಿಯ ಕರ್ನಾಟಕ ಪೌಲ್ಟ್ರಿ ಫಾರಂನಲ್ಲಿ ಹಕ್ಕಿಜ್ವರದ ಬಗ್ಗೆ ಜಾಗೃತಿ ಮೂಡಿಸಿದರು. ಈ ವೇಳೆ ‘ಪಬ್ಲಿಕ್ ಟಿವಿ’ ರಿಯಾಲಿಟಿ ಚೆಕ್ ನಡೆಸಿದ್ದು, ಫಾರಂನಲ್ಲಿನ ಸ್ವಚ್ಛತಾ ವ್ಯವಸ್ಥೆ ಹಾಗೂ ಹಕ್ಕಿಜ್ವರ ಹರಡದಂತೆ ಅಲ್ಲಿನ ಸಿಬ್ಬಂದಿಗಳು ಕೈಗೊಂಡಿರುವ ಮುಂಜಾಗ್ರತೆಯನ್ನು ಗಮನಿಸಲಾಯಿತು. ಇದನ್ನೂ ಓದಿ: ಕೊಡಗಿನಲ್ಲೂ ಹಕ್ಕಿ ಜ್ವರದ ಭೀತಿ – ಬಿರಿಯಾನಿ ಹೋಟೆಲ್‌ಗಳು ಖಾಲಿ ಖಾಲಿ!

    ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಹಕ್ಕಿಜ್ವರ ದಿನದಿನಕ್ಕೂ ಮಿತಿಮೀರುತ್ತಿರುವ ಪರಿಣಾಮ ಆಂಧ್ರ ಗಡಿಭಾಗದಲ್ಲಿರುವ ಚಿತ್ರದುರ್ಗದಲ್ಲೂ ಹಕ್ಕಿಜ್ವರದ ಭೀತಿ ಶುರುವಾಗಿದೆ. ಹೀಗಾಗಿ ಕುಕ್ಕುಟೋದ್ಯಮದ ಮೇಲಿನ ಎಫೆಕ್ಟ್ ತಗ್ಗಿಸಲು ಪಶುಸಂಗೋಪನೆ ಇಲಾಖೆಅಧಿಕಾರಿಗಳು ಮುಂದಾಗಿದ್ದು, ಜಿಲ್ಲೆಯ 337 ಕೋಳಿ ಫಾರಂಗಳು, 307 ಮಾಂಸದ ಫಾರಂ ಹಾಗೂ 35 ಮೊಟ್ಟೆ ಕೋಳಿ ಫಾರಂಗಳಿಗೆ ಭೇಟಿ ನೀಡಿ ಹಕ್ಕಿಜ್ವರದ ಜಾಗೃತಿ ಮೂಡಿಸಿದರು. ಇದನ್ನೂ ಓದಿ: ತೆಲಂಗಾಣ ಸುರಂಗ ಕುಸಿತ – 10 ದಿನ ಕಳೆದ್ರೂ ಸಂಪರ್ಕಕ್ಕೆ ಸಿಗದ 8 ಕಾರ್ಮಿಕರು

    ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಎದ್ದಲಬೊಮ್ಮಯ್ಯನಹಟ್ಟಿ, ಚಳ್ಳಕೆರೆಯ ನಾಗಪ್ಪನಳ್ಳಿ ಗೇಟ್ ಹಾಗೂ ಹಿರಿಯೂರಿನ ಪಿಡಿ ಕೋಟೆ ಗಡಿಭಾಗದಲ್ಲಿ ಮೂರುಕಡೆ ಚೆಕ್ ಪೋಸ್ಟ್‌ಗಳನ್ನು ತೆರೆದಿದ್ದು, ಹೊರ ರಾಜ್ಯದ ಕೋಳಿ ಹಾಗೂ ಮೊಟ್ಟೆಗಳು ಚಿತ್ರದುರ್ಗಕ್ಕೆ ಎಂಟ್ರಿಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಇದನ್ನೂ ಓದಿ: ರಾಮ ಮಂದಿರದ ಮೇಲೆ ಹ್ಯಾಂಡ್ ಗ್ರೆನೇಡ್ ದಾಳಿಗೆ ಸಂಚು – ಶಂಕಿತ ಭಯೋತ್ಪಾದಕ ಅರೆಸ್ಟ್

    ಜೊತೆಗೆ ಕೋಳಿ ಫಾರಂಗಳಲ್ಲೂ ಸಹ ಹಕ್ಕಿಜ್ವರ ಹರಡದಂತೆ ಮುಂಜಾಗ್ರತೆ ವಹಿಸಿದ್ದು, ಸ್ವಚ್ಛತೆಯೊಂದಿಗೆ, ಫಾರಂ ಸುತ್ತಲು ಆಗಾಗ್ಗೆ ಔಷಧಿ ಸಿಂಪಡಿಸುವಂತೆ ಫಾರಂ ಮಾಲೀಕರಿಗೆ ತಿಳಿಸಲಾಗಿದೆ. ಅಲ್ಲದೇ ಆಂಧ್ರ ಗಡಿಭಾಗದಿಂದ ಹಕ್ಕಿಜ್ವರ ಶುರುವಾದ ಬೆನ್ನಲ್ಲೇ ಹೊರರಾಜ್ಯದಿಂದ ಬರುವ ಕೋಳಿಗಳು, ಮೊಟ್ಟೆ ಹಾಗೂ ಕೋಳಿಗಳ ಆಹಾರ ಸಾಗಾಟಕ್ಕೆ ಕೋಟೆನಾಡಲ್ಲಿ ಬ್ರೇಕ್ ಹಾಕಲಾಗಿದೆ. ಇದನ್ನೂ ಓದಿ: ಹಕ್ಕಿ ಜ್ವರ ಭೀತಿ – ಬಾಗಲಕೋಟೆ ಜಿಲ್ಲಾಡಳಿತದಿಂದ ಸಭೆ

    ಫಾರಂ ಮಾಲೀಕರು ಹಾಗೂ ಸಿಬ್ಬಂದಿ ಕೂಡ ಹಕ್ಕಿಜ್ವರ ತಡೆಯಲು ಅಧಿಕಾರಿಗಳೊಂದಿಗೆ ಕೈ ಜೋಡಿಸಿದ್ದಾರೆ. ಹಕ್ಕಿಜ್ವರ ಹರಡದಂತೆ ತಡೆಯಲು ಫೀಡಿಂಗ್, ಸ್ವಚ್ಛತೆಗೆ ಆದ್ಯತೆ ನೀಡಿರುವುದಾಗಿ ಪೌಲ್ಟ್ರಿ ಸಿಬ್ಬಂದಿಗಳು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.ಇದನ್ನೂ ಓದಿ: ಸಿದ್ದರಾಮಯ್ಯ ಇರೋವರೆಗೂ ಅವರ ಸ್ಥಾನ ಕಿತ್ತುಕೊಳ್ಳುವುದು ಕಷ್ಟ: ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ

  • ಕೊಡಗಿನಲ್ಲೂ ಹಕ್ಕಿ ಜ್ವರದ ಭೀತಿ – ಬಿರಿಯಾನಿ ಹೋಟೆಲ್‌ಗಳು ಖಾಲಿ ಖಾಲಿ!

    ಕೊಡಗಿನಲ್ಲೂ ಹಕ್ಕಿ ಜ್ವರದ ಭೀತಿ – ಬಿರಿಯಾನಿ ಹೋಟೆಲ್‌ಗಳು ಖಾಲಿ ಖಾಲಿ!

    ಮಡಿಕೇರಿ: ರಾಜ್ಯದಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರದ ಭೀತಿ ಕೊಡಗಿನಲ್ಲೂ (Kodagu) ಹೆಚ್ಚಾಗಿದ್ದು, ಕುಕ್ಕುಟೋದ್ಯಮದ ಮೇಲೆ ಪರಿಣಾಮ ಬೀರುತ್ತಿದೆ. ಆತಂಕಕ್ಕೆ ಒಳಗಾಗಿರುವ ಜನ ಕೋಳಿ ಮಾಂಸಾಹಾರ ಸೇವನೆಗೆ ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಬಿರಿಯಾನಿ ಸೇರಿದಂತೆ ಮಾಂಸಾಹಾರ ಹೋಟೆಲ್‌ಗಳು (Non veg Hotel) ಗ್ರಾಹಕರಿಲ್ಲದೇ ಬಿಕೋ ಎನ್ನುತ್ತಿವೆ.

    ಪ್ರವಾಸಿರ ಸ್ವರ್ಗವಾದ ಮಡಿಕೇರಿಯಲ್ಲಿ ಈವರೆಗೆ ಹಕ್ಕಿ ಜ್ವರ (Bird Flu) ಪ್ರಕರಣ ಪತ್ತೆಯಾಗದೇ ಇದ್ದರೂ ಜನ ಮಾತ್ರ ಆತಂಕದಲ್ಲೇ ಇದ್ದಾರೆ. ಕೋಳಿ ಸೇರಿದಂತೆ ಇನ್ನಿತರ ಮಾಂಸಾಹಾರ ಪದಾರ್ಥಗಳ ಸೇವನೆಗೆ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಹೋಟೆಲ್ ಉದ್ಯಮವನ್ನೆ ನಂಬಿ ಬದುಕುತ್ತಿರುವ ಮಾಲೀಕರಿಗೆ ಆರ್ಥಿಕ ಸಂಕಷ್ಟ ಎದುರಾಗುತ್ತಿದೆ ಎಂದು ಹೋಟೆಲ್‌ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

    ಪಶುಸಂಗೋಪನಾ ಇಲಾಖೆ ಮಾರ್ಗಸೂಚಿ ಏನಿದೆ?
    1. 70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು.
    2. ಕೋಳಿ ಮಾಂಸವನ್ನ ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು.
    3. ಅಡುಗೆಗಾಗಿ ಕೋಳಿಮಾಂಸವನ್ನ ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನ ಶುಚಿಗೊಳಿಸಿಕೊಳ್ಳಬೇಕು.
    4. ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು, ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು .
    5. ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನ ತಿನ್ನಬಾರದು.
    6. ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ.

    ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ:
    1. ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು.
    2. ಕೋಳಿ ಫಾರಂನಲ್ಲಿ ಕೆಲಸ ನಿರ್ವಹಿಸುವ ಕೆಲಸಗಾರರು ತಮ್ಮ ಬಟ್ಟೆ, ಶೂ ಹಾಗೂ ಕೈ, ಕಾಲುಗಳಿಗೆ ನಂಜುನಾಶಕ ದ್ರಾವಣ ಸಿಂಪಡಿಸಬೇಕು.
    3. ಕೋಳಿ ಸಾಕಾಣಿಕೆಗೆ ಬೇಕಾಗುವ ಸಲಕರಣೆಗಳನ್ನ ಬೇರೆ ಕೋಳಿ ಫಾರಂನಿಂದ ಪಡೆಯಬೇಕಾದರೆ ಸ್ಯಾನಿಟೈಸೆಷನ್ ಮಾಡಬೇಕು ಮತ್ತು ನಂಜುನಾಶಕವನ್ನ ಅಳವಡಿಸಬೇಕು.
    4. ಕೋಳಿ ಪಂಜರಗಳನ್ನ ದಿನನಿತ್ಯ ಶುಚಿ ಮಾಡುವುದು. ಆಹಾರ ಮತ್ತು ನೀರನ್ನ ಪ್ರತಿದಿನ ಬದಲಾಯಿಸುವುದು.
    5. ಕೋಳಿ ಫಾರಂನಲ್ಲಿ ಬೇರೆ ಹಕ್ಕಿಗಳು ಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು.

  • ಹಕ್ಕಿ ಜ್ವರ ಭೀತಿ – ಬಾಗಲಕೋಟೆ ಜಿಲ್ಲಾಡಳಿತದಿಂದ ಸಭೆ

    ಹಕ್ಕಿ ಜ್ವರ ಭೀತಿ – ಬಾಗಲಕೋಟೆ ಜಿಲ್ಲಾಡಳಿತದಿಂದ ಸಭೆ

    ಬಾಗಲಕೋಟೆ: ರಾಜ್ಯದಲ್ಲಿ ಹಕ್ಕಿ ಜ್ವರ (Bird Flu) ಭೀತಿ ಬೆನ್ನಲ್ಲೇ ಬಾಗಲಕೋಟೆ (Bagalkote) ಜಿಲ್ಲಾಡಳಿತ ಅಲರ್ಟ್ ಆಗಿದ್ದು, ಡಿಸಿ ಜಾನಕಿ.ಕೆ.ಎಂ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಂಜಾಗ್ರತಾ ಸಭೆ ನಡೆಸಲಾಗಿದೆ.

    ಹಕ್ಕಿ ಜ್ವರ ಬಾರದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಡಿಸಿ ಕೆ.ಎಂ ಜಾನಕಿ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಒಟ್ಟು 417 ವಾಣಿಜ್ಯ ಬಾಯ್ಲರ್ ಹಾಗೂ ಲೇಯರ್ಸ್ ಕೋಳಿ ಫಾರಂ ಇದ್ದು, ಅವುಗಳಲ್ಲಿ 9 ಲಕ್ಷ 28 ಸಾವಿರ ಬಾಯ್ಲರ್ ಕೋಳಿಗಳು ಹಾಗೂ 10 ಲಕ್ಷ 30 ಸಾವಿರ ಲೇಯರ್ ಕೋಳಿಗಳಿವೆ. ಜಿಲ್ಲೆಯಲ್ಲಿ ಸದ್ಯಕ್ಕೆ ಯಾವುದೇ ಹಕ್ಕಿಜ್ವರ ಭೀತಿ ಇಲ್ಲ. ಜನರು ಈ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಾಧ್ಯವಾದಷ್ಟು ಬೇಗ ಮಕ್ಕಳನ್ನ ಮಾಡಿಕೊಳ್ಳಿ – ಜನಸಂಖ್ಯೆ ಹೆಚ್ಚಿಸಲು ಎಂ.ಕೆ ಸ್ಟಾಲಿನ್ ಮನವಿ

    ಕೋಳಿ ಹಾಗೂ ಉತ್ಪನ್ನಗಳ ಆಹಾರ, ಸಾಗಾಣಿಕೆ ಬಂದ್ ಮಾಡುವ ಬಗ್ಗೆ ಹಾಗೂ ಗಡಿ ಪ್ರದೇಶದಲ್ಲಿ ಚೆಕ್‌ಪೋಸ್ಟ್ ಹಾಕಿ ಪರಿಶೀಲನೆ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ಕೇಂದ್ರ ಮಂತ್ರಿಯಾಗಿ ರಾಜ್ಯಕ್ಕೆ ಯಾವುದೇ ಅನುದಾನ ತಂದಿಲ್ಲ: ಹೆಚ್‌ಸಿ ಬಾಲಕೃಷ್ಣ

    ಪಶು ಸಂಗೋಪನಾ ಇಲಾಖೆ, ಆರೋಗ್ಯ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ರೋಹಿತ್‌ ಶರ್ಮಾ ದಪ್ಪಗಿದ್ದಾರೆ – ಕಾಂಗ್ರೆಸ್‌ ವಕ್ತಾರೆ ಪೋಸ್ಟ್, ವಿವಾದದ ಬೆನ್ನಲ್ಲೇ ಪಕ್ಷದಿಂದ ಛೀಮಾರಿ

  • ರಾಯಚೂರಿನಲ್ಲಿ ಹೆಚ್ಚಾದ ಹಕ್ಕಿ ಜ್ವರದ ಭೀತಿ – ಜಿಲ್ಲಾಡಳಿತ ಹೈ ಅಲರ್ಟ್

    ರಾಯಚೂರಿನಲ್ಲಿ ಹೆಚ್ಚಾದ ಹಕ್ಕಿ ಜ್ವರದ ಭೀತಿ – ಜಿಲ್ಲಾಡಳಿತ ಹೈ ಅಲರ್ಟ್

    ರಾಯಚೂರು: ರಾಜ್ಯದಲ್ಲಿ ಈಗ ಹಕ್ಕಿ ಜ್ವರದ ಭೀತಿ ಹೆಚ್ಚಾಗುತ್ತಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದ ಗಡಿಯಲ್ಲಿರುವ ರಾಯಚೂರು (Raichuru) ಜಿಲ್ಲೆಯಲ್ಲೂ ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಹಕ್ಕಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿ ಜ್ವರ ಶಂಕೆ ಭಯ ಹುಟ್ಟಿಸಿದೆ. ಹಕ್ಕಿಗಳ ನಿಗೂಢ ಸಾವಿನ ಬೆನ್ನಲ್ಲೇ ಇದೀಗ ಜಿಲ್ಲಾಡಳಿತ ಅಲರ್ಟ್ ಆಗಿದೆ.

    ಇದುವರೆಗೂ ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ವಿವಿಧ ಪಕ್ಷಿಗಳು ಸಾವನ್ನಪ್ಪಿವೆ. ಮಾನ್ವಿ ಪಟ್ಟಣ, ರಬಣಕಲ್ ಸೇರಿ ಹಲವೆಡೆ ಪ್ರತಿದಿನ ಪಕ್ಷಿಗಳು ಸಾವನ್ನಪ್ಪುತ್ತಿವೆ. ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ವಿವಿಧ ಪ್ರಭೇದದ ಪಕ್ಷಿಗಳು ನಿಗೂಢವಾಗಿ ಪ್ರಾಣ ಬಿಡುತ್ತಿವೆ. ಪಕ್ಕದ ಆಂಧ್ರಪ್ರದೇಶ ತೆಲಂಗಾಣದಲ್ಲಿ ಕಾಣಿಸಿಕೊಂಡ ಹಕ್ಕಿ ಜ್ವರ ಜಿಲ್ಲೆಗೂ ಹರಡಿರುವ ಶಂಕೆ ವ್ಯಕ್ತವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ತಮ್ಮ ತಪ್ಪು ಮುಚ್ಚಿಕೊಳ್ಳಲು ಕ್ಷೇತ್ರ ಮರುವಿಂಗಡಣೆಗೆ ಅಪಸ್ವರ: ಬೊಮ್ಮಾಯಿ

    ಮಾನ್ವಿ ತಾಲೂಕಿನಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿರುವ ಕುರಿತ `ಪಬ್ಲಿಕ್ ಟಿವಿ’ ವರದಿ ಬಳಿಕ ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ ಎಚ್ಚೆತ್ತುಕೊಂಡಿವೆ. ತೆಲಂಗಾಣ, ಆಂಧ್ರಪ್ರದೇಶ ಗಡಿಭಾಗದಲ್ಲಿ ಹೈಅಲರ್ಟ್ ಆಗಿದೆ. ರ‍್ಯಾಪಿಡ್ ರೆಸ್ಪಾನ್ಸ್ ಟೀಂ ರಚನೆ ಮಾಡಲಾಗಿದೆ. ತೆಲಂಗಾಣ ಹಾಗೂ ಆಂಧ್ರಪ್ರದೇಶ ಗಡಿಯಿಂದ ಕೋಳಿ, ಕೋಳಿ ಉತ್ಪನ್ನ ಬರದಂತೆ ತಡೆಯಲು ಚೆಕ್ ಪೋಸ್ಟ್ನಲ್ಲಿ ಪರಿಶೀಲನೆ ಮಾಡಲಾಗುತ್ತಿದೆ.

    ಹಕ್ಕಿಗಳು ಮರದ ಮೇಲಿನಿಂದ ಏಕಾಏಕಿ ಕೆಳಗೆ ಬಿದ್ದು ಕೆಲಹೊತ್ತಿನಲ್ಲಿ ಸಾವನ್ನಪ್ಪುತ್ತಿವೆ. ಕೆಳಗೆ ಬಿದ್ದ ಬಳಿಕ ಕುಡಿಯಲು ನೀರನ್ನ ಇಟ್ಟರೂ ಕುಡಿಯದೆ ಪಕ್ಷಿಗಳು ಸಾವನ್ನಪ್ಪುತ್ತಿವೆ. ಪಕ್ಷಿಗಳ ಸಾವಿಗೆ ಕಾರಣ ತಿಳಿಯದೇ ಸ್ಥಳೀಯರಿಗೆ ಹಕ್ಕಿ ಜ್ವರದ ಆತಂಕ ಹೆಚ್ಚಾಗಿದೆ. ಈಗಾಗಲೇ ಸಾವನ್ನಪ್ಪಿದ ಪಕ್ಷಿಯ ಕಳೆಬರವನ್ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬರುವುದು ಇನ್ನೂ ಬಾಕಿಯಿದೆ. ಆದ್ರೆ ಜನರಲ್ಲಿ ಆತಂಕ ಎಂದು ಒತ್ತಾಯಿಸಿದ್ದಾರೆ.

    ಒಟ್ಟಿನಲ್ಲಿ, ಜಿಲ್ಲೆಯಲ್ಲಿ ಪಕ್ಷಿಗಳು ಏಕಾಏಕಿ ಸಾವನ್ನಪ್ಪುತ್ತಿರುವುದು ಅಚ್ಚರಿ, ಆತಂಕವನ್ನ ಒಟ್ಟೋಟ್ಟಿಗೆ ಮೂಡಿಸಿದೆ. ಹೆಚ್ಚುತ್ತಿರುವ ತಾಪಮಾನವು ಪರಿಣಾಮ ಬೀರಿರುವ ಶಂಕೆಯಿದ್ದು, ಹಕ್ಕಿ ಜ್ವರದ ಅನುಮಾನವೂ ಇದೆ. ಗಡಿರಾಜ್ಯಗಳಿಂದ ಕೋಳಿ ಹಾಗೂ ಕೋಳಿ ಉತ್ಪನ್ನಗಳು ಬರದಂತೆ ತಡೆದು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುತ್ತಿರುವುದು ಜನರಲ್ಲಿ ಕೊಂಚ ನಿರಾಳತೆ ಮೂಡಿಸಿದೆ.ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ್ನಾ ಪುಣೆ ಅತ್ಯಾಚಾರ ಆರೋಪಿ? – ಬಂಧನದ ವೇಳೆ ಕುತ್ತಿಗೆಯಲ್ಲಿ ಗಾಯದ ಗುರುತು ಪತ್ತೆ

     

  • ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ – 2 ದಿನದ ಹಿಂದೆ ಬೆಂಗಳೂರಿಗೆ 10,000 ಫಾರಂ ಕೋಳಿ ಸಾಗಾಟ

    ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ – 2 ದಿನದ ಹಿಂದೆ ಬೆಂಗಳೂರಿಗೆ 10,000 ಫಾರಂ ಕೋಳಿ ಸಾಗಾಟ

    ಚಿಕ್ಕಬಳ್ಳಾಪುರ: ಆಂಧ್ರ ಹಾಗೂ ತೆಲಂಗಾಣದಲ್ಲಿ ಮರಣಮೃದಂಗ ಬಾರಿಸಿರುವ ಡೆಡ್ಲಿ ಹಕ್ಕಿ ಜ್ವರ ರಾಜ್ಯಕ್ಕೂ ಕಾಲಿಟ್ಟಿದೆ. ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯಲ್ಲಿ ಬರ್ಡ್ ಫ್ಲೂಗೆ (Bird Flu) ಕಾರಣವಾಗುವ ಎಚ್5ಎನ್1 ವೈರಸ್ ಇರೋದು ಧೃಡವಾಗಿದೆ. ಇದ್ರಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹೈಅಲರ್ಟ್ ಆಗಿ ತುರ್ತು ಸಭೆ ನಡೆಸಿದ್ದು, ಸೋಂಕಿತ ಗ್ರಾಮದ ಸುತ್ತಲೂ ಕಟ್ಟೆಚ್ಚರ ವಹಿಸಿ ಕೋಳಿಗಳ ಸಾಗಾಣಿಕೆ ಬಂದ್ ಮಾಡಿ ನಾಕಾಬಂಧಿ ವಿಧಿಸಲು ಆದೇಶ ಮಾಡಲಾಗಿದೆ.

    ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಹಕ್ಕಿ ಜ್ವರ ಇರೋದು ಪ್ರಯೋಗಾಲಯದ ವರದಿಯಿಂದ ಅಧಿಕೃತವಾಗಿ ಧೃಡವಾಗಿದೆ. ಈ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮ ಕೈಕೊಳ್ಳುವಂತೆ ಜಿಲ್ಲಾಡಳಿತ ಸೂಚನೆ ಕೊಟ್ಟಿದೆ. ಈ ನಡುವೆ ಫಾರಂ ಮಾಲೀಕರು ರಾತ್ರೋ ರಾತ್ರಿ ಕೋಳಿಗಳನ್ನ ಸಾಗಾಟ ಮಾಡಿರುವುದು ಕಂಡುಬಂದಿದೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿಗೆ 10,000 ಫಾರಂ ಕೋಳಿಗಳನ್ನ ಸಾಗಾಟ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಹಾ ಕುಂಭ ಮೇಳ | ಡೇರೆಯಲ್ಲಿ ಅಗ್ನಿ ಅವಘಡ – ಓರ್ವನಿಗೆ ಗಾಯ

    ಹಕ್ಕಿ ಜ್ವರ ಪತ್ತೆ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರ ಡಿಸಿ ಪಿಎನ್ ರವೀಂದ್ರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳೊಂದಿಗೆ ಧಿಢೀರ್ ತುರ್ತು ಸಭೆ ನಡೆಸಿದರು. ಅಂದಹಾಗೆ ಗ್ರಾಮದ ದ್ಯಾವಪ್ಪ ಎಂಬುವವರ ಮನೆಯಲ್ಲಿ ಧಿಢೀರ್ ಅಂತ 28 ಕೋಳಿಗಳು ಸಾವನ್ನಪ್ಪಿದ್ದವು. ನಂತರ ಇದೇ ಗ್ರಾಮದಲ್ಲಿ ಬೇರೇ ಬೇರೆಯವರ ಕೋಳಿಗಳ ಸಹ ಸಾವನ್ನಪ್ಪುತ್ತಿದ್ದವು.

    ಸತ್ತ ಕೋಳಿ ಮಾದರಿಗಳನ್ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು ಎಚ್5 ಎನ್1 ವೈರಸ್ ಧೃಡವಾಗಿದೆ. ಹೀಗಾಗಿ ರೋಗ ನಿಯಂತ್ರಣಕ್ಕಾಗಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಡಿಸಿ ಹಕ್ಕಿ ಜ್ವರ ನಿರ್ಮೂಲನೆಗಾಗಿ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: 28 ವಿವಿಗಳ ನಕಲಿ ಅಂಕಪಟ್ಟಿ ತಯಾರಿಕಾ ಜಾಲ ಪತ್ತೆ – ದೆಹಲಿ ಮೂಲದ ಪ್ರಮುಖ ಆರೋಪಿ ಅರೆಸ್ಟ್‌

    ಇನ್ನೂ ವರದಹಳ್ಳಿ ಗ್ರಾಮದಲ್ಲಿ ಹಕ್ಕಿ ಜ್ವರ ಧೃಢ ಹಿನ್ನಲೆ, ವರದಹಳ್ಳಿ ಗ್ರಾಮದ ಕೋಳಿಗಳು ಬೇರಡೆಗೆ ಸಾಗಾಣಿಕೆ ಮಾಡದಂತೆ ಸೂಚಿಸಲಾಗಿದೆ. ಬೇರೆ ಕಡೆಯಿಂದ ಕೋಳಿಗಳನ್ನೂ ಸಹ ಗ್ರಾಮಕ್ಕೆ ತರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳಿಗೆ ಬ್ಯಾರಿಕೇಡ್‌ನಿಂದ ನಾಕಾಬಂಧಿ ಹಾಕಲಾಗಿದೆ. ಗಡಿಗಳಲ್ಲಿ ಹದ್ದಿನ ಕಣ್ಣಿಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ವರದಹಳ್ಳಿ ಗ್ರಾಮದ ಸುತ್ತಲೂ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

    ವರದಹಳ್ಳಿ ಗ್ರಾಮದಲ್ಲಿ 96 ಮನೆ ಇದ್ದು 405 ಮಂದಿ ಜನಸಂಖ್ಯೆ ಇದೆ. ಈಗಾಗಲೇ ಮನೆ ಮೆನೆಗೆ ಹೋಗಿ ಕೋಳಿಗಳ ಸರ್ವೆ ಸಹ ಮಾಡಲಾಗಿದೆ. ಗ್ರಾಮದ ರಸ್ತೆಗಳಿಗೆ ಬ್ಲೀಚಿಂಗ್ ಪೌಡರ್ ಹಾಗೂ ಗ್ರಾಮದ ವಾಹನಗಳಿಗೆ ಸೋಡಿಯಂ ಹೈಡ್ರೋಕ್ಲೋರೈಡ್ ದ್ರಾವಣ ಸಿಂಪಡಣೆ ಮಾಡಲಾಗಿದೆ..

    ಒಟ್ನಲ್ಲಿ ಹಕ್ಕಿ ಜ್ವರ ಧೃಡದಿಂದ ಜಿಲ್ಲಾಡಳಿತದ ಟೆನ್ಷನ್ ಹೆಚ್ಚಾಗಿದೆ.. ಹಕ್ಕಿ ಜ್ವರ ನಿರ್ಮೂಲನೆಗೆ ಕೋಳಿಗಳನ್ನ ವಶಕ್ಕೆ ಪಡೆದು ಸಾಮೂಹಿಕ ಹತ್ಯೆಗೂ ಪ್ಲಾನ್ ಮಾಡಲಾಗಿದೆ. ಆರೋಗ್ಯ ಇಲಾಖೆ ಸಹ ಗ್ರಾಮದ ಜನರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ. ಇದನ್ನೂ ಓದಿ: ʻಕೈʼಮುಖಂಡನ ಹತ್ಯೆ ಕೇಸ್‌ – ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ಕೊಟ್ಟು ಕೊಲೆ

  • ರಾಯಚೂರಿನಲ್ಲಿ ಪಕ್ಷಿಗಳ ನಿಗೂಢ ಸಾವು – ಹಕ್ಕಿ ಜ್ವರದ ಶಂಕೆ

    ರಾಯಚೂರಿನಲ್ಲಿ ಪಕ್ಷಿಗಳ ನಿಗೂಢ ಸಾವು – ಹಕ್ಕಿ ಜ್ವರದ ಶಂಕೆ

    ರಾಯಚೂರು: ಜಿಲ್ಲೆಯಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪಿದ್ದು, ತೆಲಂಗಾಣದಲ್ಲಿ (Telangana) ಕಾಣಿಸಿಕೊಂಡ ಹಕ್ಕಿ ಜ್ವರ ಹರಡಿರುವ ಶಂಕೆ ವ್ಯಕ್ತವಾಗಿದೆ.

    ಜಿಲ್ಲೆಯಲ್ಲಿ ಬರ್ಡ್ ಫ್ಲೂ (Bird flu) ಹರಡುತ್ತಿರುವ ಆತಂಕ ಸೃಷ್ಟಿಯಾಗಿದ್ದು, ಮಾನ್ವಿ (Manvi) ತಾಲೂಕಿನಲ್ಲಿ ಪ್ರತೀದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ವಿವಿಧ ಪ್ರಭೇದದ ಪಕ್ಷಿಗಳ ಸಾವನ್ನಪ್ಪುತ್ತಿದೆ. ಇದನ್ನೂ ಓದಿ: ಶ್ರೀಶೈಲಂ ಸುರಂಗ ಕುಸಿತ – 5ನೇ ದಿನವೂ ರಕ್ಷಣಾ ಕಾರ್ಯ, 10,000 ಘನ ಮೀಟ‌ರ್ ಕೆಸರು ತೆಗೆಯುವುದೇ ಸವಾಲು!

    ಮಕ್ಸೂದ್ ಅಲಿ ಎಂಬುವವರ ತೋಟದಲ್ಲಿ ಪ್ರತಿದಿನ 8-10 ಪಕ್ಷಿಗಳು ಸಾವನ್ನಪ್ಪುತ್ತಿವೆ. ಕಳೆದ ನಾಲ್ಕೈದು ದಿನಗಳಿಂದ ಮಾನ್ವಿ ಪಟ್ಟಣ, ರಬಣಕಲ್ ಸೇರಿ ಹಲವೆಡೆ ಪಕ್ಷಿಗಳು ಮರದ ಮೇಲಿನಿಂದ ಏಕಾಏಕಿ ಕೆಳಗೆ ಬಿದ್ದು ಸಾಯುತ್ತಿವೆ. ಪಕ್ಷಿಗಳ ಸಾವಿಗೆ ಕಾರಣ ತಿಳಿಯದಿರುವುದರಿಂದ ಸ್ಥಳೀಯರಲ್ಲಿ ಹಕ್ಕಿ ಜ್ವರದ ಆತಂಕ ಶುರುವಾಗಿದೆ.

    ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಪಶುವೈದ್ಯಾಧಿಕಾರಿಗಳು, ಮರದಿಂದ ಬಿದ್ದ ಪಕ್ಷಿಗಳಿಗೆ ಇಂಜೆಕ್ಷನ್ ನೀಡಿ ರಕ್ಷಣೆ ಮಾಡಿದ್ದಾರೆ. ಮೃತ ಪಕ್ಷಿಯ ಕಳೆಬರವನ್ನು ಬೆಂಗಳೂರಿನ ಐಎಚ್‌ವಿವಿ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಇದನ್ನೂ ಓದಿ: ಮಂಡ್ಯ | KSRTC ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ

    ಈ ವೇಳೆ ಮಾತನಾಡಿದ ಮಾನ್ವಿ ತಾಲೂಕು ಪಶು ವೈದ್ಯಾಧಿಕಾರಿ ಬಸವರಾಜ ಹಿರೇಮಠ ಅವರು, ಪಕ್ಷಿಗಳ ಸಾವಿಗೆ ಬೇರೆ ಬೇರೆ ಕಾರಣಗಳು ಇರುತ್ತದೆ. ಈಗಲೇ ಏನನ್ನೂ ಹೇಳಲು ಆಗಲ್ಲ. ಪ್ರಯೋಗಾಲಯದ ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

  • ಕೇರಳದಲ್ಲಿ ಹಕ್ಕಿ ಜ್ವರ ಪತ್ತೆ; ರೋಗದ ಲಕ್ಷಣಗಳೇನು? ಮುಂಜಾಗ್ರತಾ ಕ್ರಮ ಹೇಗಿರಬೇಕು?

    ಕೇರಳದಲ್ಲಿ ಹಕ್ಕಿ ಜ್ವರ ಪತ್ತೆ; ರೋಗದ ಲಕ್ಷಣಗಳೇನು? ಮುಂಜಾಗ್ರತಾ ಕ್ರಮ ಹೇಗಿರಬೇಕು?

    ನೆರೆ ರಾಜ್ಯ ಕೇರಳದಲ್ಲಿ (Kerala) ಹಕ್ಕಿ ಜ್ವರ (Bird Flu) ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಅಲ್ಲದೇ ಗಡಿಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಈ ಸೋಂಕು ದೇಶೀಯ ಕೋಳಿಗಳಿಗೆ ಸುಲಭವಾಗಿ ಹರಡುತ್ತದೆ. ಸೋಂಕಿತ ಪಕ್ಷಿಗಳ ಮಲ, ಮೂಗಿನ ಸ್ರಾವ ಅಥವಾ ಬಾಯಿ ಅಥವಾ ಕಣ್ಣುಗಳಿಂದ ಸ್ರವಿಸುವಿಕೆಯ ಸಂಪರ್ಕದ ಮೂಲಕ ಈ ರೋಗವು ಮನುಷ್ಯರಿಗೆ ಹರಡುತ್ತದೆ. ಹಾಗಿದ್ರೆ ಈ ರೋಗದ ಲಕ್ಷಣಗಳೇನು? ಮುಂಜಾಗ್ರತಾ ಕ್ರಮ ಹೇಗೆ ಎಂಬುದರ ಕುರಿತು ಇಲ್ಲಿ ವಿವರಿಸಲಾಗಿದೆ. 

    ಹಕ್ಕಿ ಜ್ವರ ಎಂದರೇನು?
    ಏವಿಯನ್ ಇನ್ ಫ್ಲುಯೆಂಜಾ (Avian Influenza) ಎಂದು ಕರೆಯಲಾಗುವ ಬರ್ಡ್ ಫ್ಲೂ ಅಥವಾ ಹಕ್ಕಿ ಜ್ವರ ಮೂಲಭೂತವಾಗಿ ಪಕ್ಷಿಗಳ (ಕೋಳಿ, ಬಾತುಕೋಳಿ ಇತ್ಯಾದಿ) ಮೇಲೆ ಪರಿಣಾಮ ಬೀರುವ ಒಂದು ವೈರಾಣು ಸೋಂಕು. ಆದರೆ ಇದು ಮನುಷ್ಯರಿಗೆ ಕೂಡ ಹಬ್ಬುವ ಕಾರಣದಿಂದಾಗಿ ತುಂಬಾ ಭೀತಿಯ ವಾತಾವರಣ ಸೃಷ್ಟಿಯಾಗಿದೆ.

    ಹಲವಾರು ರೀತಿಯ ಹಕ್ಕಿ ಜ್ವರದ ಮಾದರಿಗಳನ್ನು ಪತ್ತೆ ಮಾಡಲಾಗಿದ್ದು, ಇದರಲ್ಲಿ ನಾಲ್ಕು ಮಾದರಿಯಾಗಿರುವಂತಹ H5N1, H7N9, H5N6 ಮತ್ತು H5N8 ಮಾದರಿಯ ಹಕ್ಕಿ ಜ್ವರಗಳು ಇತ್ತೀಚಿನ ವರ್ಷಗಳಲ್ಲಿ ಆತಂಕ ಸೃಷ್ಟಿಸಿದೆ.

    H5N1, H7N9, H5N6 ಮಾದರಿಯ ಹಕ್ಕಿ ಜ್ವರದ ವೈರಸ್ ವಿಶ್ವದ ಹಲವು ದೇಶಗಳಲ್ಲಿ ಕಂಡುಬಂದಿದ್ದು, ಇದರಿಂದಾಗಿ ಸಾವಿರಾರು ಮಂದಿ ಸಾವನ್ನಪ್ಪಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ H5N1 ಸಾಮಾನ್ಯ ಮಾದರಿಯ ಹಕ್ಕಿ ಜ್ವರವಾಗಿದೆ. ಇದು ಮನುಷ್ಯರಲ್ಲಿ 1997ರಲ್ಲಿ ಪತ್ತೆ ಮಾಡಲಾಗಿದ್ದು, ಇದು ಪೀಡಿತರಲ್ಲಿ ಶೇ.60ರಷ್ಟು ಮಂದಿಯ ಪ್ರಾಣಕ್ಕೆ ಹಾನಿ ಉಂಟು ಮಾಡಿದೆ. ಹಕ್ಕಿಗಳಿಗೆ ಇದು ತುಂಬಾ ಮಾರಣಾಂತಿಕ ವೈರಸ್ ಆಗಿದ್ದು, ಮನುಷ್ಯರು ಹಾಗೂ ಪ್ರಾಣಿಗಳಿಗೆ ಕೂಡ ಇದು ಸುಲಭವಾಗಿ ಹಬ್ಬುತ್ತದೆ.

    ಆದರೆ ಈ ಸೋಂಕು ಮನುಷ್ಯರಿಂದ ಮನುಷ್ಯರಿಗೆ ಇದುವರೆಗೆ ಹಬ್ಬಿರುವುದು ತಿಳಿದುಬಂದಿಲ್ಲ. H5N8 ಮಾದರಿಯ ಹಕ್ಕಿ ಜ್ವರದ ವೈರಸ್ ಇದುವರೆಗೆ ವಿಶ್ವದಲ್ಲಿ ಮನುಷ್ಯರಲ್ಲಿ ಕಂಡುಬಂದಿಲ್ಲ ಎಂದು ರಾಷ್ಟ್ರೀಯ ಆರೋಗ್ಯ ಇಲಾಖೆ ತಿಳಿಸಿದೆ.

    2020ರಿಂದ H5N1 ವೈರಸ್ ಪ್ರಪಂಚದಾದ್ಯಂತ ಹೆಚ್ಚು ಹೆಚ್ಚು ಹರಡುತ್ತಿದೆ.  80ಕ್ಕೂ ಹೆಚ್ಚು ದೇಶಗಳಲ್ಲಿ (ಡಿಸೆಂಬರ್ 2023 ರಂತೆ) ಪಕ್ಷಿಗಳಿಗೆ ಈ ಸೋಂಕು ತಗುಲಿದೆ.  ಈ ವೈರಸ್‌ ಕಾಣಿಸಿಕೊಂಡ ಹಿನ್ನೆಲೆ ವಾಣಿಜ್ಯ ಕೋಳಿ ಸಾಕಣೆ ಕೇಂದ್ರಗಳಲ್ಲಿ ಲಕ್ಷಾಂತರ ಕೋಳಿಗಳನ್ನು ಕೊಲ್ಲಲಾಗಿದೆ.

    ಈ ವೈರಸ್ ಮೊದಲಿಗೆ 1996ರಲ್ಲಿ ಚೀನಾದಲ್ಲಿ ಪತ್ತೆಯಾಗಿದ್ದು, ನಂತರ ಜಗತ್ತಿನಾದ್ಯಂತ ಹರಡಿತು. ಇತ್ತೀಚಿನ ವರ್ಷಗಳಲ್ಲಿ ಪಕ್ಷಿಗಳು ಮತ್ತು ಸಸ್ತನಿಗಳಲ್ಲಿ ಈ ರೋಗದಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ. ಹಕ್ಕಿ ಜ್ವರವು ಸೋಂಕಿತ ಪಕ್ಷಿಗಳು ಅಥವಾ ಅವುಗಳ ಹಿಕ್ಕೆಗಳ ನೇರ ಸಂಪರ್ಕದ ಮೂಲಕ ಹರಡುತ್ತದೆ. ಇಲ್ಲಿಯವರೆಗೆ ಮನುಷ್ಯನಿಂದ ಮನುಷ್ಯನಿಗೆ ಹರಡಿರುವ ಯಾವುದೇ ಪುರಾವೆಗಳಿಲ್ಲ.

    ರೋಗ ಲಕ್ಷಣಗಳೇನು?
    -ಕೆಮ್ಮು
    -ಉಸಿರಾಟದಲ್ಲಿ ತೊಂದರೆ
    -ತೀವ್ರ ಜ್ವರ
    -ತಲೆನೋವು
    -ಸ್ನಾಯುಗಳ ನೋವು
    -ಮೂಗು ಸೋರುವಿಕೆ
    -ಗಂಟಲಿನ ಊತ
    -ಮೂಗು ಮತ್ತು ಒಸಡಿನಿಂದ ರಕ್ತ ಸೋರುವಿಕೆ

    *ಕೆಲವರಲ್ಲಿ ವಾಕರಿಕೆ, ವಾಂತಿ ಮತ್ತು ಬೇಧಿಯು ಕಂಡುಬರುತ್ತದೆ ಎಂದು ಹೇಳಲಾಗಿದೆ. ಇನ್ನು ಕೆಲವರಲ್ಲಿ ಕಣ್ಣು ಕೆಂಪಾಗುವ ಸಮಸ್ಯೆ ಕೂಡ ಕಾಣಿಸಿಕೊಳ್ಳಬಹುದು. ಸೋಂಕು ದೇಹವನ್ನು ಒಗ್ಗಿಕೊಂಡು 2-5 ದಿನಗಳಲ್ಲಿ ಇದರ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ತಕ್ಷಣವೇ ಚಿಕಿತ್ಸೆ ಪಡೆದುಕೊಂಡರೆ ಅಪಾಯದಿಂದ ಪಾರಾಗಬಹುದು.

    *ಕೆಲವೊಂದು ವೈರಲ್ ವಿರೋಧಿ ಔಷಧಿಗಳಿಂದ ಇದಕ್ಕೆ ಚಿಕಿತ್ಸೆ ನೀಡಲಾಗುತ್ತದೆ. ಇದರಿಂದ ಸೋಂಕಿನ ತೀವ್ರತೆ ಕಡಿಮೆ ಆಗುತ್ತದೆ.

    ಮನುಷ್ಯರಿಗೆ ಹಕ್ಕಿ ಜ್ವರ ಹರಡುವುದು ಹೇಗೆ?
    ಸೋಂಕು ತಗುಲಿರುವಂತಹ ಹಕ್ಕಿಯನ್ನು ಸ್ಪರ್ಶಿಸುವುದು, ಅದರ ಹಿಕ್ಕೆಗಳು ಮತ್ತು ಹಾಸನ್ನು ಮುಟ್ಟುವುದು, ಸೋಂಕಿತ ಹಕ್ಕಿಯನ್ನು ಕೊಲ್ಲುವುದು ಅಥವಾ ಅದನ್ನು ಅಡುಗೆಗೆ ಬಳಸುವುದು ಇತ್ಯಾದಿಯಿಂದ ಸೋಂಕು ಹರಡುತ್ತದೆ.

    ಮಾಂಸಾಹಾರ ಸೇವಿಸುವವರು ಸರಿಯಾಗಿ ಬೇಯಿಸಿದ ಕೋಳಿ ಅಥವಾ ಮೊಟ್ಟೆಗಳನ್ನು ಸೇವಿಸುವುದರಿಂದ ಹಕ್ಕಿ ಜ್ವರ ಹರಡುವುದಿಲ್ಲ. ಸರಿಯಾಗಿ ಬೇಯಿಸದೆ ಇರುವ ಕೋಳಿ ಅಥವಾ ಮೊಟ್ಟೆಗಳನ್ನು ಸೇವಿಸಬಾರದು.

    ರೋಗ ಬಾರದಂತೆ ತಡೆಯುವುದು ಹೇಗೆ?
    *ಕೈಗಳನ್ನು ನಿರಂತರವಾಗಿ ತೊಳೆಯುತ್ತಿರಿ. ಬಿಸಿ ನೀರು ಮತ್ತು ಸೋಪು ಬಳಸಿ. ಆಹಾರ ಸೇವನೆಗೆ ಮೊದಲು ಅಥವಾ ಅದನ್ನು ತಯಾರಿಸುವ ಮೊದಲು ಕೈಗಳನ್ನು ಸರಿಯಾಗಿ ತೊಳೆಯಿರಿ.
    *ಆಲ್ಕೋಹಾಲ್ ಇರುವ ಸ್ಯಾನಿಟೈಸರ್ ನ್ನು ಪ್ರಯಾಣದ ವೇಳೆ ಬಳಸಿ.
    *ತೆರೆದ ಮಾರುಕಟ್ಟೆ ಅಥವಾ ಹಕ್ಕಿಗಳು ಹೆಚ್ಚಿರುವಂತಹ ಮಾರುಕಟ್ಟೆಯಿಂದ ದೂರವಿರಿ.
    *ಸರಿಯಾಗಿ ಬೇಯಿಸದೆ ಇರುವ ಕೋಳಿ ಅಥವಾ ಬಾತುಕೋಳಿ ತಿನ್ನಬೇಡಿ.
    *ಹಸಿ ಮೊಟ್ಟೆ ಸೇವಿಸಬೇಡಿ.
    *ಪ್ರಯಾಣಕ್ಕೆ ಮೊದಲು ಜ್ವರದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆಯಿರಿ. ನೀವು ಹಕ್ಕಿ ಜ್ವರ ಬರದಂತೆ ತಡೆಯಲು ಸಾಧ್ಯವಿಲ್ಲದೆ ಇದ್ದರೂ ಅದರ ಅಪಾಯವನ್ನು ಕಡಿಮೆ ಮಾಡಬಹುದು.
    *H5N1 ಹಕ್ಕಿಜ್ವರದ ವೈರಸ್ ಗೆ ಈಗಾಗಲೇ ಲಸಿಕೆ ಕಂಡು ಹಿಡಿಯಲಾಗಿದ್ದು, ಇದಕ್ಕೆ ಅಮೆರಿಕಾದ ಎಫ್ ಡಿಎಯಿಂದ ಅನುಮತಿ ಕೂಡ ಸಿಕ್ಕಿದೆ. ಆದರೆ ಇದನ್ನು ಸಾರ್ವಜನಿಕ ಬಳಕೆಗೆ ಇದುವರೆಗೆ ನೀಡಲಾಗಿಲ್ಲ.
    *ಪಾಶ್ಚರೀಕರಿಸಿದ ಡೈರಿ ಉತ್ಪನ್ನಗಳನ್ನೇ ಹೆಚ್ಚು ಬಳಸಬೇಕು.
    *ಮೊಟ್ಟೆ ಮತ್ತು ಹಾಲಿನಿಂದ ಹಕ್ಕಿಜ್ವರ ಬರುವ ಅಪಾಯ ತೀರಾ ಕಡಿಮೆ.