Tag: ಹಣಕಾಸು ಖಾತೆ

  • ಆಡಿಯೋ ವೈರಲ್‌ – ಹಣಕಾಸು ಹೋಯ್ತು ಪಿಟಿಆರ್‌ ಈಗ ಐಟಿ ಸಚಿವ

    ಆಡಿಯೋ ವೈರಲ್‌ – ಹಣಕಾಸು ಹೋಯ್ತು ಪಿಟಿಆರ್‌ ಈಗ ಐಟಿ ಸಚಿವ

    ಚೆನ್ನೈ: ತಮಿಳುನಾಡು (Tamil Nadu) ಸರ್ಕಾರದ ಕ್ಯಾಬಿನೆಟ್‌ ಪುನರ್‌ರಚನೆಯಾಗಿದ್ದು ಹಣಕಾಸು ಸಚಿವ ಪಿಟಿಆರ್‌ ಎಂದೇ ಖ್ಯಾತರಾಗಿದ್ದ ಮಾಜಿ ಬ್ಯಾಂಕರ್‌ ಪಳನಿವೇಲ್ ತ್ಯಾಗರಾಜನ್ (Palanivel Thiaga Rajan) ಅವರಿಗೆ ಮಾಹಿತಿ ತಂತ್ರಜ್ಞಾನ ಖಾತೆಯನ್ನು ನೀಡಲಾಗಿದೆ.

    ತಂಗಂ ತೆನ್ನರಸು ಅವರಿಗೆ ಹಣಕಾಸು ಖಾತೆಯನ್ನು (Ministry of Finance) ನೀಡಲಾಗಿದ್ದ ಟಿಆರ್‌ಬಿ ರಾಜಾ ಅವರಿಗೆ ಕೈಗಾರಿಕಾ ಖಾತೆಯನ್ನು ಹಂಚಲಾಗಿದೆ. ಸ್ಟಾಲಿನ್‌ ಸರ್ಕಾರ ರಚನೆಯಾದ ಬಳಿಕ ಖಾತೆಯನ್ನು ಬದಲಾವಣೆ ಮಾಡಿರುವುದು ಇದೇ ಮೊದಲು. ಇದನ್ನೂ ಓದಿ: ತಂದೆ-ತಾಯಿ, ಹೆಂಡತಿ, ಮಕ್ಕಳ ಜೊತೆ ಕಾಲ ಕಳೆಯಿರಿ: ಕಾರ್ಯಕರ್ತರಿಗೆ ಸಿದ್ದರಾಮಯ್ಯ ಸಲಹೆ

     

    ಬಿಜೆಪಿ ಅಧ್ಯಕ್ಷ ಅಣ್ಣಾಮಲೈ (Annamalai) ಅವರು ʼಡಿಎಂಕೆ ಫೈಲ್ಸ್‌ʼ ಹೆಸರಿನಲ್ಲಿ ಆಡಿಯೋ ರಿಲೀಸ್‌ ಮಾಡಿದ್ದರು. ಈ ಆಡಿಯೋದಲ್ಲಿ ಪಿಟಿಆರ್‌ ಸ್ಟಾಲಿನ್‌ ಕುಟುಂಬದ ವಿರುದ್ಧವೇ ಮಾತನಾಡಿದ್ದರು. ಪಿಟಿಆರ್‌ ಬಿಜೆಪಿಯ ಒಂದು ವ್ಯಕ್ತಿ, ಒಂದು ಹುದ್ದೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಆಡಿಯೋ ತಮಿಳುನಾಡು ಸರ್ಕಾರಕ್ಕೆ ಮುಜುಗರ ತಂದಿತ್ತು.   ಸ್ಟಾಲಿನ್‌ ಮತ್ತು ಪಿಟಿಆರ್‌  ಆಡಿಯೋವನ್ನು ಬಿಜೆಪಿ ತಿರುಚಿದೆ ಇದು ಸುಳ್ಳು ಎಂದು ಪ್ರತಿಕ್ರಿಯಿಸಿದ್ದರು. ಇದನ್ನೂ ಓದಿ: ಡಿಎಂಕೆ ಫೈಲ್ಸ್ ರಿಲೀಸ್ – ಅಣ್ಣಾಮಲೈ ವಿರುದ್ಧ ಮಾನನಷ್ಟ ಕೇಸ್

  • ಮಹಾರಾಷ್ಟ್ರ ಸಿಎಂ ಶಿಂದೆ ಸಂಪುಟದಲ್ಲಿ ದೇವೇಂದ್ರ ಫಡ್ನವಿಸ್‌ಗೆ ಗೃಹ, ಹಣಕಾಸು ಖಾತೆ

    ಮಹಾರಾಷ್ಟ್ರ ಸಿಎಂ ಶಿಂದೆ ಸಂಪುಟದಲ್ಲಿ ದೇವೇಂದ್ರ ಫಡ್ನವಿಸ್‌ಗೆ ಗೃಹ, ಹಣಕಾಸು ಖಾತೆ

    ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂದೆ ನೇತೃತ್ವದ ಸರ್ಕಾರದ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರಿಗೆ ಗೃಹ ಹಾಗೂ ಹಣಕಾಸು ಖಾತೆಗಳನ್ನು ನೀಡಲಾಗಿದೆ.

    ಬಿಜೆಪಿ ಹಾಗೂ ಶಿವಸೇನಾದ ಶಿಂದೆ ಬಣ ಮೈತ್ರಿ ಸರ್ಕಾರದ ರಚನೆಯಾಗಿದ್ದು, ಮಂಗಳವಾರ 18 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಯಿತು. ಶಿಂಧೆ ಅವರು ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ಇನ್ಮುಂದೆ ಒಬ್ಬ ಶಾಸಕನಿಗೆ ಒಂದೇ ಬಾರಿ ಪಿಂಚಣಿ – 100 ಕೋಟಿ ಉಳಿತಾಯಕ್ಕೆ ಸಿಎಂ ಪ್ಲ್ಯಾನ್‌

    ಫಡ್ನವಿಸ್ ಅವರು ಯೋಜನಾ ಖಾತೆಯನ್ನೂ ನಿಭಾಯಿಸಲಿದ್ದಾರೆ. ಬಿಜೆಪಿ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರು ನೂತನ ಕಂದಾಯ ಸಚಿವರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಬಿಜೆಪಿ ಸಚಿವ ಸುಧೀರ್ ಮುಂಗಂತಿವಾರ್ ಅವರು ಅರಣ್ಯ ಸಚಿವರಾಗಿದ್ದಾರೆ.

    ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಉನ್ನತ ಮತ್ತು ತಾಂತ್ರಿಕ ಶಿಕ್ಷಣದ ನೂತನ ಸಚಿವರಾಗಿದ್ದು, ಸಂಸದೀಯ ವ್ಯವಹಾರಗಳನ್ನೂ ಅವರು ನಿಭಾಯಿಸಲಿದ್ದಾರೆ. ಇದನ್ನೂ ಓದಿ: ಕೇವಲ ತ್ರಿವರ್ಣ ಧ್ವಜ ಹಾರಿಸುವುದರಿಂದ ನಾವು ದೇಶಭಕ್ತರಾಗುವುದಿಲ್ಲ: ಉದ್ಧವ್ ಠಾಕ್ರೆ ಟಾಂಗ್

    ಏಕನಾಥ್ ಶಿಂಧೆ ಬಣದ ದೀಪಕ್ ಕೇಸರ್ಕರ್ ಅವರು ಶಿಕ್ಷಣ ಸಚಿವರಾಗಿದ್ದರೆ, ಅಬ್ದುಲ್ ಸತ್ತಾರ್ ಅವರಿಗೆ ಕೃಷಿ ಖಾತೆ ನೀಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ಸಿನ ಟ್ರಬಲ್ ಶೂಟರಿಗೆ ಶುರುವಾಯ್ತು ಈಗ ಟ್ರಬಲ್!

    ಕಾಂಗ್ರೆಸ್ಸಿನ ಟ್ರಬಲ್ ಶೂಟರಿಗೆ ಶುರುವಾಯ್ತು ಈಗ ಟ್ರಬಲ್!

    ಬೆಂಗಳೂರು: ಹಣಕಾಸು ಖಾತೆ ಹಂಚಿಕೆ ಸಮಸ್ಯೆಯ ಬೆನ್ನಲ್ಲೇ ಈಗ ಇಂಧನ ಖಾತೆಗಾಗಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಮಧ್ಯೆ ಪೈಪೋಟಿ ಆರಂಭವಾಗಿದೆ.

    ಲೋಕೋಪಯೋಗಿ ಹಾಗೂ ಇಂಧನ ಖಾತೆ ಎರಡು ತಮಗೆ ಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಹೋದರ ಎಚ್.ಡಿ.ರೇವಣ್ಣ ಅವರು ಪಟ್ಟುಹಿಡಿದರೆ, ಇಂಧನ ಖಾತೆಯನ್ನು ನನಗೆ ನೀಡಿ ಎಂದು ಡಿಕೆ ಶಿವಕುಮಾರ್ ಹಠ ಹಿಡಿದಿದ್ದಾರೆ.

    ಕಳೆದ 5 ವರ್ಷದಿಂದ ಇಂಧನ ಖಾತೆಯನ್ನು ನಾನು ನಿಭಾಯಿಸಿದ್ದೇನೆ. ಅಲ್ಲಿ ಇನ್ನಷ್ಟು ಕೆಲಸಗಳು ಉಳಿದಿದ್ದು, ನನಗೆ ಇಂಧನ ಖಾತೆ ಬೇಕೇ ಬೇಕು ಎಂದು ಡಿಕೆಶಿ ಹೈಕಮಾಂಡ್ ಮುಂದೆ ತಮ್ಮ ವಾದವನ್ನು ಮಂಡಿಸಿದ್ದಾರೆ. ಇಬ್ಬರು ಘಟಾನುಘಟಿ ನಾಯಕರಾದ ಕಾರಣ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಇಬ್ಬರನ್ನು ತೃಪ್ತಿ ಪಡಿಸಲು ಕೊನೆಗೆ ಸಂಧಾನ ಸೂತ್ರಕ್ಕೆ ಬಂದಿದ್ದಾರೆ.

    ಆರಂಭದಲ್ಲಿ ಇಬ್ಬರಿಗೂ ಈ ಖಾತೆಯನ್ನು ನೀಡದೇ ಇರುವ ತೀರ್ಮಾನಕ್ಕೆ ಬರಲಾಗಿತ್ತು. ಆದರೆ ಈಗ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಮಧ್ಯಸ್ಥಿಕೆ ವಹಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಇಂಧನ ಖಾತೆಯನ್ನು ನೀಡಲು ನಿರ್ಧಾರ ತೆಗೆದುಕೊಂಡಿದ್ದಾರೆ.

    ರೇವಣ್ಣ ಅವರಿಗೆ ಜಲಸಂಪನ್ಮೂಲ ಖಾತೆಯನ್ನು ನೀಡಲು ಒಪ್ಪಿಗೆ ನೀಡಿದ್ದು, ಅವರ ಮನವೊಲಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ಮುಖಂಡರು ವಹಿಸಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕೈ ನಾಯಕರ ಈ ಸೂತ್ರಕ್ಕೆ ರೇವಣ್ಣ ಒಪ್ಪಿಗೆ ನೀಡಿದರೆ ಖಾತೆ ಬಿಕ್ಕಟ್ಟು ಇತ್ಯರ್ಥವಾಗಲಿದೆ.