Tag: ಹಣಕಾಸು ಬಜೆಟ್

  • ಫೆ.1ಕ್ಕೆ ಕೇಂದ್ರ ಹಣಕಾಸು ಬಜೆಟ್‌ – ಅಂದೇ ಬಜೆಟ್‌ ಮಂಡನೆ ಯಾಕೆ?

    ಫೆ.1ಕ್ಕೆ ಕೇಂದ್ರ ಹಣಕಾಸು ಬಜೆಟ್‌ – ಅಂದೇ ಬಜೆಟ್‌ ಮಂಡನೆ ಯಾಕೆ?

    ನವದೆಹಲಿ: ನರೇಂದ್ರ ಮೋದಿ (Narendra Modi) ಸರ್ಕಾರದ ಎರಡನೇ ಅವಧಿಯ  ಮಧ್ಯಂತರ ಬಜೆಟ್‌ (Budget) ಫೆ.1ರ ಬೆಳಗ್ಗೆ 11 ಗಂಟೆಗೆ ಮಂಡನೆಯಾಗಲಿದೆ

    17ನೇ ಲೋಕಸಭೆಯ (Lok Sabha Election) ಕೊನೆಯ ಅಧಿವೇಶನ ಇದೇ ಮಾಸಾಂತ್ಯದಿಂದ ಆರಂಭಗೊಳ್ಳಲಿದೆ. ಜನವರಿ 31ರಿಂದ ಫೆಬ್ರವರಿ 9 ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

    ಸಂಸತ್ತಿನಲ್ಲಿ ಗೌರವಾನ್ವಿತ ರಾಷ್ಟ್ರಪತಿ ಭಾಷಣದೊಂದಿಗೆ ಆರಂಭಗೊಳ್ಳುವ ಅಧಿವೇಶನದಲ್ಲಿ ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ಸೀತಾರಾಮನ್ ಅವರು ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರಕ್ಕೆ 4 ಮಾರ್ಗ – ರಾಮನೂರಿಗೆ ಬರುವ ಭಕ್ತರಿಗಿದು ಮೋಕ್ಷದ ಹಾದಿ

    ಫೆ.1 ಯಾಕೆ?
    ಈ ಮೊದಲು ಫೆಬ್ರವರಿ ಕೊನೆಯಲ್ಲಿ ಅಥವಾ ಮಾರ್ಚ್‌ ತಿಂಗಳ ಒಂದು ದಿನ ಹಣಕಾಸು ಬಜೆಟ್‌ ಮಂಡನೆಯಾಗುತ್ತಿತ್ತು. ಆದರೆ 2017-18 ಹಣಕಾಸು ವರ್ಷದ ಬಜೆಟ್‌ ಅನ್ನು ಅರುಣ್‌ ಜೇಟ್ಲಿ (Arun Jaitley) ಫೆ.1 ರಂದು ಮಂಡನೆ ಮಾಡಿದ್ದರು. 2017 ರಿಂದ ಈ ಸಂಪ್ರದಾಯ ಮುಂದುವರಿಯುತ್ತಾ ಬಂದಿದೆ. 2015 ರಲ್ಲಿ ಫೆ.28, 2016ರಲ್ಲಿ ಫೆ.29 ರಂದು ಜೇಟ್ಲಿ ಮಂಡನೆ ಮಾಡಿದ್ದರು. 2019 ರಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಮೋದಿ ನಾಸಿಕ್‌ನಿಂದಲೇ ವ್ರತ ಆರಂಭಿಸಿದ್ದು ಯಾಕೆ? ರಾಮಾಯಣಕ್ಕೂ ನಾಸಿಕ್‌ಗೂ ಏನು ಸಂಬಂಧ?

     

    ಈ ಮೊದಲು ಹಣಕಾಸು ಬಜೆಟ್‌ ಮತ್ತು ರೈಲ್ವೇ ಬಜೆಟ್‌ ಎರಡು ಪ್ರತ್ಯೇಕವಾಗಿ ಮಂಡನೆಯಾಗುತ್ತಿತ್ತು. ರೈಲ್ವೇ ಬಜೆಟ್‌ನಲ್ಲಿ ಘೋಷಣೆ ಮಾತ್ರ ಆಗುತ್ತಿದ್ದರೆ ಅದು ಜಾರಿ ಆಗುತ್ತಿರಲಿಲ್ಲ. ರೈಲ್ವೇ ಬಜೆಟ್‌  ರಾಜಕೀಯ ಪಕ್ಷಗಳ ಚುನಾವಣಾ ಘೋಷಣೆಯಾಗುತ್ತಿತ್ತೇ ಹೊರತು ಕಾರ್ಯರೂಪಕ್ಕೆ ಬರುತ್ತಿರಲಿಲ್ಲ ಎಂದು ಹೇಳಿ  ಅರುಣ್‌ ಜೇಟ್ಲಿ ರೈಲ್ವೇ ಬಜೆಟ್‌ ಅನ್ನು ಹಣಕಾಸು ಬಜೆಟ್‌ನಲ್ಲೇ ವಿಲೀನಗೊಳಿಸಿದ್ದರು.

  • 2 ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

    2 ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

    ನವದೆಹಲಿ: ಸಾರ್ವಜನಿಕ ರಂಗದ ಎರಡು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಸರ್ಕಾರ ಮುಂದಾಗಿದೆ.

    ಇಂದು ಮಂಡನೆಯಾದ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಎರಡು ಬ್ಯಾಂಕು ಮತ್ತು ವಿಮಾ ಕಂಪನಿಯಿಂದ ಬಂಡವಾಳವನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಪ್ರಕಟಿಸಿದ್ದಾರೆ.

    2022ರ ಹಣಕಾಸು ವರ್ಷದ ಒಳಗಡೆ ಎಲ್‌ಐಸಿ, ಬಿಪಿಸಿಎಲ್‌, ಪವನ್‌ ಹನ್ಸ್‌ ಮತ್ತು ಏರ್‌ ಇಂಡಿಯಾದಿಂದ ಬಂಡವಾಳವನ್ನು ಹಿಂದಕ್ಕೆ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

    ಒಟ್ಟು 1.75 ಲಕ್ಷ ಕೋಟಿ ರೂ. ಬಂಡವಾಳವನ್ನು ಹಿಂದಕ್ಕೆ ಪಡೆಯಲು 2022ರ ಹಣಕಾಸು ವರ್ಷದಲ್ಲಿ ಗುರಿಯನ್ನು ನಿಗದಿ ಮಾಡಲಾಗಿದೆ.

    ಕಳೆದ ವರ್ಷದ ಬಜೆಟ್‌ನಲ್ಲಿ 2.11 ಲಕ್ಷ ಕೋಟಿ ರೂ. ಬಂಡವಾಳ ಹಿಂತೆಗೆದ ಮಾಡಲು ಗುರಿ ನಿಗದಿಯಾಗಿತ್ತು. ಆದರೆ ಕೋವಿಡ್‌ 19 ನಿಂದಾಗಿ ಈ ಪ್ರಕ್ರಿಯೆಗೆ ಹಿನ್ನಡೆಯಾಗಿತ್ತು.

    ಸಾರ್ವಜನಿಕ ರಂಗದ ಬ್ಯಾಂಕುಗಳಲ್ಲಿ ಅನುತ್ಪಾದಕಾ ಆಸ್ತಿಗಳು(ಎನ್‌ಪಿಎ) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದಿನ ಬಜೆಟ್‌ಗಳಲ್ಲಿ ಬ್ಯಾಂಕುಗಳ ವಿಲೀನದ ಬಗ್ಗೆ ಘೋಷಣೆಯಾಗಿತ್ತು.

  • ಓಲ್ಡ್ ವೈನ್ ಇನ್ ನ್ಯೂ ಬಾಟಲ್ ಎಂಬಂತಿದೆ ಬಜೆಟ್ – ಪ್ರಜ್ವಲ್ ರೇವಣ್ಣ

    ಓಲ್ಡ್ ವೈನ್ ಇನ್ ನ್ಯೂ ಬಾಟಲ್ ಎಂಬಂತಿದೆ ಬಜೆಟ್ – ಪ್ರಜ್ವಲ್ ರೇವಣ್ಣ

    ಬೆಂಗಳೂರು: ನಾನು ಪೂರ್ತಿ ಬಜೆಟ್ ನೋಡಿದೆ. ಇದೊಂದು ಸ್ಲೋಗನ್ ಬಜೆಟ್ ಆಗಿದೆ. ಓಲ್ಡ್ ವೈನ್ ಇನ್ ನ್ಯೂ ಬಾಟಲ್ ಎಂಬಂತಿದೆ ಎಂದು ಬಜೆಟ್ ಬಗ್ಗೆ ನೂತನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಜ್ವಲ್, ನಾನು ಪೂರ್ತಿ ಪ್ರಮಾಣವಾಗಿ ಬಜೆಟ್ ವೀಕ್ಷಣೆ ಮಾಡಿದೆ. ಇದೊಂದು ಸ್ಲೋಗನ್ ಬಜೆಟ್ ಎಂದು ಹೇಳಬಹುದು. ಯಾವುದೇ ರೀತಿ ಅಧಿಕೃತ ನಂಬರ್ ಕೊಡಲಿಲ್ಲ. ಓಲ್ಡ್ ವೈನ್ ಇನ್ ನ್ಯೂ ಬಾಟಲ್ (it is a old wine in new bottle) ಎಂಬಂತಿದೆ. ಹಳೆಯ ಯೋಜನೆಗಳಿಗೆ ಮತ್ತೆ ಚಾಲನೆ ಕೊಟ್ಟಿದ್ದೇವೆ ಎಂಬ ಭಾವನೆಯಲ್ಲಿ ಮಾತನಾಡಿದ್ದಾರೆ ಎಂದು ಹೇಳಿದರು.

    ನಿರೀಕ್ಷೆ ಮಾಡಿದ ಬಜೆಟ್ ಇದಲ್ಲ. ಇಂದಿನ ಬಜೆಟ್ ಮಂಡನೆಯಲ್ಲಿ ಕಾರ್ಪೋರೇಟರ್ ಟ್ಯಾಕ್ಸ್, ಟಿಡಿಎಸ್ ಬಗ್ಗೆ ಮಾತನಾಡಿದ್ದಾರೆ. ಕೃಷಿ ವಿಷಯದಲ್ಲಿ ನಿರೀಕ್ಷೆಗಳಿಗೆ ತಕ್ಕಂತಿಲ್ಲ. ಯುವಕರಿಗೆ ಉದ್ಯೋಗ ಸೃಷ್ಟಿ ಬಗ್ಗೆ ಏನನ್ನೂ ಹೇಳಿಲ್ಲ. 45 ವರ್ಷಗಳಲ್ಲೇ ಅತಿಹೆಚ್ಚು ನಿರುದ್ಯೋಗ ಸಮಸ್ಯೆ ಇದೆ. ಅದನ್ನು ಹೇಗೆ ಪರಿಹರಿಸುವುದು ಎಂಬುದರ ಬಗ್ಗೆಯೂ ಮಾತನಾಡಿಲ್ಲ ಎಂದರು.

    ಕಂಪನಿಗಳು ಭಾರತಕ್ಕೆ ಬರುವ ರೀತಿಯಲ್ಲಿ ಕಾರ್ಪೋರೇಟ್ ತೆರಿಗೆ ಹಾಕಿಲ್ಲ. ಕಾರ್ಪೋರೇಟ್ ಟ್ಯಾಕ್ಸ್ ಬಗ್ಗೆ ನನಗೆ ಸಮಾಧಾನವಾಗಿಲ್ಲ. ಪೆಟ್ರೋಲ್-ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗಿದೆ. ದುಬಾರಿ ಆಗುತ್ತಿರುವ ಜನಜೀವನ ಸುಧಾರಣೆಗೆ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಬಜೆಟ್‍ನಲ್ಲಿ ಅಂತಹ ಸುಧಾರಣಾ ಕ್ರಮಗಳು ಕಾಣಿಸುತ್ತಿಲ್ಲ ಎಂದು ಹೇಳಿದರು.

    ಟಿಡಿಎಸ್ ವ್ಯಸಸ್ಥೆ ತಂದಿರುವುದು ಒಳ್ಳೆಯದು. ಆದರೆ ಹಂತಹಂತವಾಗಿ ಈ ಕ್ರಮ ಅನುಷ್ಠಾನಕ್ಕೆ ತರಬೇಕಾಗಿತ್ತು. ಇದು ತುಂಬಾ ನಿರಾಸೆ ಮೂಡಿಸಿದ ಬಜೆಟ್ ಆಗಿದೆ. ನಾನು ವಿರೋಧ ಮಾಡುವುದಿಲ್ಲ, ಪರನೂ ನಿಲ್ಲುವುದಿಲ್ಲ. ಪೂರ್ತಿ ಓದಿ ಸಂಸತ್ತಿನಲ್ಲಿ ಬಜೆಟ್ ಬಗ್ಗೆ ಮಾತನಾಡುತ್ತೇನೆ ಎಂದು ಪ್ರಜ್ವಲ್ ತಿಳಿಸಿದರು.

  • 5 ವರ್ಷದ ಹಿಂದೆ ಸ್ಥಾನ ಪಡೆದಿರಲಿಲ್ಲ, ಈಗ ಮೂರು ಶಿಕ್ಷಣ ಸಂಸ್ಥೆಗಳಿಗೆ ಸ್ಥಾನ

    5 ವರ್ಷದ ಹಿಂದೆ ಸ್ಥಾನ ಪಡೆದಿರಲಿಲ್ಲ, ಈಗ ಮೂರು ಶಿಕ್ಷಣ ಸಂಸ್ಥೆಗಳಿಗೆ ಸ್ಥಾನ

    ನವದೆಹಲಿ: 5 ವರ್ಷಗಳ ಹಿಂದೆ ವಿಶ್ವದ ಟಾಪ್ 200 ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಭಾರತದ ಯಾವುದೇ ಸಂಸ್ಥೆ ಸ್ಥಾನ ಪಡೆದಿರಲಿಲ್ಲ. ಆದರೆ ಸರ್ಕಾರ ನೀಡಿದ ಪ್ರೋತ್ಸಾಹದಿಂದ ಈಗ ಈ ಪಟ್ಟಿಯಲ್ಲಿ ಮೂರು ಸಂಸ್ಥೆಗಳು ಸ್ಥಾನ ಪಡೆದಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

    ತಮ್ಮ ಬಜೆಟ್ ಭಾಷಣದಲ್ಲಿ ಸೀತಾರಾಮನ್, ದೇಶದ ಎರಡು ಐಐಟಿ, ಬೆಂಗಳೂರಿನ ಐಐಎಸ್‍ಸಿ ಈ ಪಟ್ಟಿಯಲ್ಲಿ ಈಗ ಸ್ಥಾನ ಪಡೆದಿದೆ. ನಮ್ಮ ಪ್ರಯತ್ನಕ್ಕೆ ಫಲ ಸಿಕ್ಕಿದೆ ಎಂದರು.

    2019-20ರ ಸಾಲಿನಲ್ಲಿ ‘ವಿಶ್ವ ದರ್ಜೆಯ ಇನ್‍ಸ್ಟಿಟ್ಯೂಷನ್’ ಅಡಿಯಲ್ಲಿ 400 ಕೋಟಿ ರೂ. ಮೀಸಲಿಟ್ಟಿದ್ದೇವೆ. ಈ ಹಿಂದಿನ ಅವಧಿಗೆ ಹೋಲಿಸಿದರೆ 3 ಪಟ್ಟಿ ಹೆಚ್ಚಳ ಹಣ ಇದಾಗಿದೆ. ವಿದೇಶಿ ವಿದ್ಯಾರ್ಥಿಗಳು ಭಾರತದಲ್ಲಿ ಉನ್ನತ ಶಿಕ್ಷಣ ಕಲಿಯಲು ಪ್ರೋತ್ಸಾಹ ನೀಡುವ ನಿಟ್ಟಿಲ್ಲಿ ‘ಸ್ಟಡಿ ಇನ್ ಇಂಡಿಯಾ’ ಹೆಸರಿನಲ್ಲಿ ಕಾರ್ಯಕ್ರಮ ತರುತ್ತೇವೆ ಎಂದು ತಿಳಿಸಿದರು.

  • ಚಿನ್ನದ ಸೆಸ್ ಹೆಚ್ಚಿಸಿ ಮಹಿಳೆಯರಿಗೆ ಶಾಕ್ ಕೊಟ್ಟ ಸೀತಾರಾಮನ್

    ಚಿನ್ನದ ಸೆಸ್ ಹೆಚ್ಚಿಸಿ ಮಹಿಳೆಯರಿಗೆ ಶಾಕ್ ಕೊಟ್ಟ ಸೀತಾರಾಮನ್

    ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚಿನ್ನದ ಮೇಲಿನ ಆಮದು ಸುಂಕವನ್ನು ಹೆಚ್ಚಿಸಿ ಮಹಿಳೆಯರಿಗೆ ಶಾಕ್ ನೀಡಿದ್ದಾರೆ.

    ಬಜೆಟ್‍ನಲ್ಲಿ ಬಂಗಾರದ ಮೇಲಿನ ಆಮದು ಸುಂಕವನ್ನು ಶೇ.10ರಿಂದ 12.5ಕ್ಕೆ ಏರಿಸಲಾಗಿದೆ. ಹೀಗಾಗಿ ಬಜೆಟ್ ಅಧಿಕೃತವಾಗಿ ಜಾರಿಯಾದ ಬಳಿಕ ಚಿನ್ನದ ದರ ಏರಿಕೆಯಾಗಲಿದೆ.

    ಎಷ್ಟು ಏರಿಕೆಯಾಗಲಿದೆ?
    10 ಸಾವಿರ ರೂ. ಮೌಲ್ಯದ ಚಿನ್ನದ ಆಭರಣಕ್ಕೆ 1 ಸಾವಿರ ರೂ. ಹಣ ಆಮದು ಸುಂಕವಾಗಿ ಪಾವತಿಯಾಗುತ್ತಿತ್ತು. ಈಗ ಶೇ.12.5 ರಷ್ಟು ಏರಿಕೆಯಾಗಿರುವ ಕಾರಣ 1,250 ರೂ. ಹಣವನ್ನು ಪಾವತಿಸಬೇಕಿದೆ.

  • ಬಾಹ್ಯಾಕಾಶದಲ್ಲಿ ಉದ್ಯಮ – ಇಸ್ರೋ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ

    ಬಾಹ್ಯಾಕಾಶದಲ್ಲಿ ಉದ್ಯಮ – ಇಸ್ರೋ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ

    ನವದೆಹಲಿ: ಬಾಹ್ಯಾಕಾಶದಲ್ಲಿ ಉದ್ಯಮ ನಡೆಸಲು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

    ಭಾರತ ಬಾಹ್ಯಾಕಾಶದ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದು, ಹೀಗಾಗಿ ಬಾಹ್ಯಾಕಾಶ ಇಲಾಖೆಯ ಹೊಸ ವಾಣಿಜ್ಯ ಸಂಸ್ಥೆಯಾಗಿ ಸ್ಥಾಪಿಸಲಾಗುವುದು. ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್(ಎನ್‍ಎಸ್‍ಐಎಲ್) ಹೆಸರಿನ ಸಂಸ್ಥೆಯನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು.

    ಐದು ವರ್ಷಗಳ ಹಿಂದೆ 6 ಸಾವಿರ ಕೋಟಿ ರೂ. ಅನುದಾನ ಪಡೆಯುತ್ತಿದ್ದ ಇಸ್ರೋ ಬಜೆಟ್ ಈಗ 10 ಸಾವಿರ ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ತಿಳಿಸಿದರು.

    ವಿಶ್ವದಲ್ಲೇ ಈಗ ಇಸ್ರೋ ದೊಡ್ಡ ಬಾಹ್ಯಾಕಾಶ ಕ್ಷೇತ್ರವಾಗಿದ್ದು ಉದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಿದರು. ಕೆಲ ವರ್ಷಗಳಿಂದ ಇಸ್ರೋ ವಿದೇಶ ಉಪಗ್ರಹಗಳನ್ನು ಉಡಾವಣೆ ಮಾಡಲು ಆರಂಭಿಸಿದೆ.

  • ಕೆಲಸ ಮಾಡಿದ್ದಕ್ಕೆ ಮತದಾರ ಮತ ಹಾಕಿದ್ದಾನೆ – ಸೀತಾರಾಮನ್

    ಕೆಲಸ ಮಾಡಿದ್ದಕ್ಕೆ ಮತದಾರ ಮತ ಹಾಕಿದ್ದಾನೆ – ಸೀತಾರಾಮನ್

    ನವದೆಹಲಿ: ತಮ್ಮ ಚೊಚ್ಚಲ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮತ್ತೊಮ್ಮೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ದೇಶದಲ್ಲಿ ಮೊದಲ ಬಾರಿಗೆ ಶೇ.67.9 ಮತದಾನ ನಡೆದಿದೆ. ಯುವಜನತೆ, ಹೊಸ ಮತದಾರರು, ಮಹಿಳೆಯರು ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಿದ್ದಾರೆ ಎಂದು ತಿಳಿಸಿದರು.

    2014-19ರ ಅವಧಿಯಲ್ಲಿ ರಾಜ್ಯ ಕೇಂದ್ರಗಳ ಸಂಬಂಧ ಸುಧಾರಣೆಯಾಗಿದೆ. ಜಿಎಸ್‍ಟಿಯನ್ನು ಜಾರಿಗೆ ತಂದಿದ್ದೇವೆ. Reform, Perform, Transform ಮಂತ್ರಗಳನ್ನು ಮುಂದಿಟ್ಟು ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

    ಹಣಕಾಸು ಸಚಿವರು ಇಲ್ಲಿಯವರೆಗೆ ಬಜೆಟ್ ಪ್ರತಿಯನ್ನು ಸೂಟ್‍ಕೇಸ್‍ನಲ್ಲಿ ಹೊತ್ತುಕೊಂಡು ಸಂಸತ್ ಪ್ರವೇಶಿಸುತ್ತಿದ್ದರು. ಆದರೆ ನಿರ್ಮಲಾ ಸೀತಾರಾಮನ್ ಅವರು ಈ ಸಂಪ್ರದಾಯಕ್ಕೆ ಬ್ರೇಕ್ ಹಾಕಿ ಕೆಂಪು ಬಣ್ಣದ ಬಟ್ಟೆಯ ಒಳಗಡೆ ಬಜೆಟ್ ಪ್ರತಿಗಳನ್ನು ಇರಿಸಿಕೊಂಡು ಸಂಸತ್ ಪ್ರವೇಶಿಸಿದ್ದಾರೆ.

    ಹಣಕಾಸು ಸಚಿವಾಯಕ್ಕೆ ಆಗಮಿಸಿದ ಸಚಿವೆ ಬಜೆಟ್ ದಾಖಲೆಗಳನ್ನು ಬ್ರೀಫ್‍ಕೇಸ್ ಬದಲು ಬ್ಯಾಗ್ ಹಿಡಿದು ಫೋಟೋಗೆ ಪೋಸ್ ಕೊಟ್ಟಿರುವುದು ವಿಶೇಷವಾಗಿತ್ತು. ಈ ವೇಳೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಹಾಗೂ ಹಣಕಾಸು ಸಚಿವಾಲಯದ ಇತರೇ ಅಧಿಕಾರಿಗಳು ಸಚಿವೆಗೆ ಸಾಥ್ ನೀಡಿದರು.

    ಕೆಂಪುಬಟ್ಟೆಯಲ್ಲಿ ಬಜೆಟ್ ಗೆ ಸಂಬಂಧಪಟ್ಟ ದಾಖಲೆಗಳನ್ನು ಇಟ್ಟು ಆ ಬಟ್ಟೆಯನ್ನು ನಾಲ್ಕು ಮಡಿಕೆ ಮಾಡಿ ರಿಬ್ಬನ್‍ನಿಂದ ಕಟ್ಟಲಾಗಿದೆ. ಅದರ ಮೇಲೆ ರಾಷ್ಟ್ರಲಾಂಛನವಾದ ನಾಲ್ಕು ಮುಖದ ಸಿಂಹದ ಚಿತ್ರವಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಹ್ಮಣಿಯನ್ ಅವರು, ಬಟ್ಟೆಯಲ್ಲಿ ಕಟ್ಟುವುದು ನಮ್ಮ ದೇಶದ ಸಂಪ್ರದಾಯ. ಪಾಶ್ಚಾತ್ಯ ಸಂಸ್ಕೃತಿಯಿಂದ ಹೊರಬರಲು ಈ ಬಾರಿ ಬ್ರೀಫ್‍ಕೇಸ್ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.

  • ರೈತರ ಖಾತೆಗೆ 6 ಸಾವಿರ ರೂ – ಕೇಂದ್ರ ಬಜೆಟ್ 2019 : ಲೈವ್ ಅಪ್‍ಡೇಟ್ಸ್

    ರೈತರ ಖಾತೆಗೆ 6 ಸಾವಿರ ರೂ – ಕೇಂದ್ರ ಬಜೆಟ್ 2019 : ಲೈವ್ ಅಪ್‍ಡೇಟ್ಸ್

    ನವದೆಹಲಿ: ಮೋದಿ ಸರ್ಕಾರದ ಕೊನೆಯ ಬಜೆಟ್ ಇಂದು ಮಂಡನೆಯಾಗುತ್ತಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಅನುಪಸ್ಥಿತಿಯಲ್ಲಿ ಪಿಯೂಷ್ ಗೋಯಲ್ ಬಜೆಟ್ ಮಂಡಿಸುತ್ತಿದ್ದಾರೆ.

    ಬಜೆಟ್ ಮುಖ್ಯಾಂಶಗಳು:
    > ಇದು ಮಧ್ಯಂತರ ಬಜೆಟ್ ಅಲ್ಲ. ದೇಶದ ವಿಕಾಸದ ಬಜೆಟ್.
    > ಬಾಡಿಗೆ ಮನೆಯ ಸೆಸ್ ಇಳಿಕೆ
    > ಗೃಹ ಸಾಲ 2.5 ಲಕ್ಷ ರೂ. ವಿನಾಯಿತಿ
    > ಹೂಡಿಕೆ ಮಾಡಿದರೆ 6.5 ಲಕ್ಷ ವಿನಾಯಿತಿ
    > ಶೈಕ್ಷಣಿಕ ಸಾಲ ಪಡೆದುಕೊಂಡಿದ್ದರೆ ತೆರಿಗೆ ವಿನಾಯಿತಿ

    > ಆದಾಯ ತೆರಿಗೆ ಮಿತಿ 2.5 ಲಕ್ಷ ದಿಂದ 5 ಲಕ್ಷಕ್ಕೆ ಏರಿಕೆ
    > ಮತ್ತೆ ಅಧಿಕಾರಕ್ಕೆ ಏರುವ ವಿಶ್ವಾಸಲ್ಲಿ 10 ವರ್ಷದ ಪ್ಲಾನ್ ವಿವರಿಸಿದ ಪಿಯೂಷ್ ಗೋಯಲ್
    > 2022ಕ್ಕೆ ಭಾರತದ ವ್ಯಕ್ತಿಯೊಬ್ಬರು ಗಗನಕ್ಕೆ ಹಾರಲಿದ್ದಾರೆ.
    ಎಲ್ಲರಿಗೂ ಶುದ್ಧ ನೀರು ವಿತರಣೆ ಗುರಿ. ನದಿ ಸ್ವಚ್ಛತೆಗೆ ಒತ್ತು
    > ಮಾಲಿನ್ಯ ನಿಯಂತ್ರಣಕ್ಕೆ ಕ್ರಮ. ಎಲೆಕ್ಟ್ರಿಕ್ ವಾಹನವನ್ನು ತರಲು ಪ್ರೋತ್ಸಾಹ
    > ಡಿಜಿಟಲ್ ಇಂಡಿಯಾ ಎಲ್ಲ ಕ್ಷೇತ್ರಗಳಿಗೆ ವಿಸ್ತರಣೆಯ ಗುರಿ
    > ಮುಂದಿನ 30 ವರ್ಷದ ಅಧಿವೃದ್ಧಿಗೆ ಪ್ಲಾನ್, ರಸ್ತೆ, ರೈಲ್ವೇ, ವಿಮಾನ,
    > 5 ವರ್ಷದಲ್ಲಿ 5 ಟ್ರಿಲಿಯನ್ ಆರ್ಥಿಕತೆಯಾಗಿ ಬೆಳೆಯಲಿದೆ ಭಾರತ.

    > ಕಪ್ಪು ಹಣ ಮುಕ್ತ ದೇಶವನ್ನಾಗಿ ಮಾಡಲು ಸರ್ಕಾರ ಕ್ರಮ. ನಕಲಿ ಕಂಪನಿಗಳ ಬಿಸಿ ಮುಟ್ಟಿಸಿದ್ದೇವೆ. ಕಪ್ಪು ಹಣ ನಿಯಂತ್ರಣಕ್ಕೆ ಕಾನೂನು ತಂದಿದ್ದೇವೆ.
    > 24 ಗಂಟೆಯಲ್ಲಿ ಟಿಡಿಎಸ್ ಪಾವತಿ ಕ್ರಮ
    > ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ
    > ಸ್ವಾತಂತ್ರ್ಯ ನಂತರ ಅತಿ ದೊಡ್ಡ ತೆರಿಗೆ ಸುಧಾರಣೆಯಾದ ಜಿಎಸ್‍ಟಿ ನಮ್ಮ ಅವಧಿಯಲ್ಲಿ ಬಂದಿದೆ.
    > ಆನ್ ಲೈನ್ ಮೂಲಕ ತೆರಿಗೆ ಸಮಸ್ಯೆಗೆ ಪರಿಹಾರ
    > 34 ಕೋಟಿ ಜನ್ ಧನ್ ಖಾತೆಗಳನ್ನು ತೆರೆಯಲಾಗಿದೆ.

    > ನಮ್ಮ ಅವಧಿಯಲ್ಲಿ ಮಾಸಿಕ ಮೊಬೈಲ್ ಡೇಟಾ ಬಳಕೆ ಶೇ.50 ರಷ್ಟು ಹೆಚ್ಚಳ
    > ವಿಶ್ವದಲ್ಲಿ ಮೊಬೈಲ್ ಕರೆ ಮತ್ತು ಡೇಟಾಗೆ ಅತಿ ಕಡಿಮೆ ದರ ಭಾರತದಲ್ಲಿದೆ.
    > ಮೇಘಾಲಯ, ತ್ರಿಪುರಾಗಳಿಗೆ ರೈಲು ಸಂಪರ್ಕ ಕಲ್ಪಿಸಿದ್ದೇವೆ.
    > ಸೋಲಾರ್ ಪವರ್ ಉತ್ಪಾದನೆಯಲ್ಲಿ ಹೆಚ್ಚಳ.
    > ಸ್ವದೇಶಿ ನಿರ್ಮಿತ ಮೇಕ್ ಇನ್ ಇಂಡಿಯಾ ಅಡಿಯಲ್ಲಿ `ವಂದೇ ಮಾತರಂ’ ಸೆಮಿ ಹೈ ಸ್ಪೀಡ್ ರೈಲನ್ನು ನಿರ್ಮಿಸಲಾಗಿದೆ. ಭಾರತದ ಪ್ರಯಾಣಿಕರಿಗೆ ವಿಶ್ವದರ್ಜೆಯ ಗುಣಮಟ್ಟವನ್ನು ಈ ರೈಲು ನೀಡಲಿದೆ.
    > ದಶಕಗಳ ಕಾಲ ಬಾಕಿ ಉಳಿದಿದ್ದ ರಸ್ತೆ ಯೋಜನೆಗಳು ನಮ್ಮ ಅವಧಿಯಲ್ಲಿ ಪೂರ್ಣಗೊಂಡಿದೆ.

    > ಇಡಿ ವಿಶ್ವದಲ್ಲೇ ಅತಿ ಹೆಚ್ಚು ವೇಗದಲ್ಲಿ ಹೈವೇ ನಿರ್ಮಾಣ ಭಾರತದಲ್ಲಿ ಆಗುತ್ತಿದೆ. ಪ್ರತಿ ದಿನ 26 ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿದೆ.
    > ಸ್ವದೇಶಿ ವಿಮಾನ ಪ್ರಯಾಣಕರ ಸಂಖ್ಯೆ ಹೆಚ್ಚಳವಾಗಿದೆ.
    > ದೇಶದ ಭದ್ರತೆಗೆ ಒತ್ತು. ರಕ್ಷಣಾ ವಲಯಕ್ಕೆ 3 ಲಕ್ಷ ಕೋಟಿ ಮೀಸಲು
    > ಕಳೆದ 40 ವರ್ಷಗಳಿಂದ ಆಗದೇ ಇದ್ದ ಒನ್ ರ‍್ಯಾಂಕ್, ಒನ್ ಪೇನ್ಶನ್ ನಮ್ಮ ಸರ್ಕಾರ ಜಾರಿಗೆ ತಂದಿದೆ. ಸೈನಿಕರ ವೇತನವನ್ನು ಹೆಚ್ಚಳ ಮಾಡಿದ್ದೇವೆ.
    > ಸಣ್ಣ ಕೈಗಾರಿಕೆಗಳಿಗೆ ಶೇ.2 ರಷ್ಟು ಬಡ್ಡಿ ವಿನಾಯಿತಿ. ಸ್ವದೇಶಿ ವಸ್ತುಗಳ ವ್ಯಾಪಾರಕ್ಕೆ ಒತ್ತು.
    > ವಿಶ್ವದಲ್ಲೇ ಭಾರತ ಎರಡನೇ ಬೆಸ್ಟ್ ಸ್ಟಾರ್ಟಪ್ ದೇಶವಾಗಿದೆ. ಕೆಲಸ ಹುಡುಕುವವರು ಕೆಲಸ ಸೃಷ್ಟಿಸುತ್ತಿದ್ದಾರೆ.

    > 15 ಸಾವಿರ ಕೋಟಿ ಹಣವನ್ನು ಸಾಲ ರೂಪವಾಗಿ ಮುದ್ರ ಯೋಜನೆಯ ಅಡಿ 7 ಲಕ್ಷ ಜನರಿಗೆ ನೀಡಲಾಗಿದೆ.
    > ಮುದ್ರಾ ಯೋಜನೆ ಮಹಿಳೆಯರಿಗೆ ಸಾಲ ಸೌಲಭ್ಯ. ಗ್ರಾಮೀಣ ಅಭಿವೃದ್ಧಿಗೆ ಒತ್ತು
    > ಉಜ್ವಲ ಅಡಿ 8 ಕೋಟಿ ಜನರಿಗೆ ಗ್ಯಾಸ್ ವಿತರಣೆ
    > ಕೆಲಸದ ಅವಧಿಯಲ್ಲಿ ಕಾರ್ಮಿಕ ಮೃತಪಟ್ಟರೆ 6 ಲಕ್ಷ ಪಿಂಚಣಿ- ಕಾರ್ಮಿಕರ ಪಿಂಚಣಿ ಹೆಚ್ಚಳ.
    > ಜಿಡಿಪಿ ಬೆಳವಣಿಗೆಯ ಜೊತೆ ಉದ್ಯೋಗ ಸಂಖ್ಯೆಯೂ ಹೆಚ್ಚಾಗಿದೆ.
    > ಸರಿಯಾದ ಸಮಯಕ್ಕೆ ಸಾಲ ಪಾವತಿಸಿದ ರೈತರಿಗೆ ಶೇ.3 ರಷ್ಟು ಬಡ್ಡಿ ವಿನಾಯಿತಿ.
    > ಗೋವುಗಳ ರಕ್ಷಣೆ, ಹಾಲಿನ ಉತ್ಪಾದನೆ ಹೆಚ್ಚಿಸಲು ರಾಷ್ಟ್ರೀಯ ಕಾಮದೇನು ಆಯೋಗ ಸ್ಥಾಪನೆ. 750 ಕೋಟಿ ಮೀಸಲು

    > ರೈತರ ಖಾತೆಗೆ ಜಮೆಯಾಗುವ ಹಣವನ್ನು ಕೇಂದ್ರ ಸರ್ಕಾರವೇ ಸಂಪೂರ್ಣವಾಗಿ ಭರಿಸಲಿದೆ.
    > ವರ್ಷಕ್ಕೆ ರೈತರ ಖಾತೆಗೆ ನೇರವಾಗಿ 6 ಸಾವಿರ ರೂ. ಜಮೆ. 3 ಕಂತುಗಳಲ್ಲಿ 2 ಸಾವಿರ ರೂ. ಜಮೆ. 2 ಹೆಕ್ಟೇರ್ ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಜಮೆಯಾಗಲಿದೆ. 2018ರ ಡಿಸೆಂಬರ್ ಪೂರ್ವಾನ್ವಯವಾಗುಂತೆ ಘೋಷಣೆ
    > ಆಯುಷ್ಮಾನ್ ಭಾರತದ ಮೂಲಕ 50 ಕೋಟಿ ಜನರಿಗೆ ಸಹಕಾರ
    > ಕಡಿಮೆ ದರದಲ್ಲಿ ಔಷಧಿಗಾಗಿ ಜನ ಔಷಧಿ ಕೇಂದ್ರಗಳನ್ನು ತೆರೆಯಲಾಗಿದ್ದು 4 ಕೋಟಿ ಜನರಿಗೆ ಸಹಾಯವಾಗಿದೆ.
    > ದೇಶದ ರಸ್ತೆಗಳಿಗೆ ಟಾರ್ ಬಂದಿದೆ. ಈ ಮಾರ್ಚ್ ಒಳಗಡೆ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ
    > ನಮ್ಮ ಸರ್ಕಾರ ಬೆಲೆ ಏರಿಕೆಗೆ ಕಡಿವಾಣ ಹಾಕಿದೆ
    > ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನೀಡಿದ್ದೇವೆ. ರಿಯಲ್ ಎಸ್ಟೇಟ್ ನಿಯಂತ್ರಣಕ್ಕೆ ರೇರಾ ತಂದಿದ್ದೇವೆ.

    > ಸಣ್ಣ ವ್ಯಾಪಾರಸ್ಥರ ನೆರವಿಗೆ ನಿಂತಿದ್ದೇವೆ. ಡಿಸೆಂಬರ್‍ನಲ್ಲಿ ಹಣದುಬ್ಬರ ದರ ಕೇವಲ ಶೇ 2.1ರಷ್ಟಿತ್ತು. ನಮ್ಮ ಸರಕಾರ ಬೆಲೆಯೇರಿಕೆಗೆ ಕಡಿವಾಣ ಹಾಕಿದೆ
    > ವಿದೇಶಿ ಹೂಡಿಕೆ ಹೆಚ್ಚಳವಾಗಿದೆ. ಎನ್‍ಪಿಎ ಕಡಿಮೆ ಮಾಡುತ್ತಿದ್ದೇವೆ.
    > ಹಣದುಬ್ಬರ ನಿಯಂತ್ರಿಸಿ ದೇಶವನ್ನು ಸರ್ಕಾರ ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗುತ್ತಿದೆ.
    > ವಿಶ್ವದಲ್ಲೇ ಅತಿ ವೇಗವಾಗಿ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ.
    > ಕಳೆದ 5 ವರ್ಷದಲ್ಲಿ ಜಿಡಿಪಿ ಏರಿಕೆ ಕಂಡಿದೆ.
    > ನರೇಂದ್ರ ಮೋದಿ ಸರ್ಕಾರಲ್ಲಿ ನಾವು ಉತ್ತಮ ಆಡಳಿತ ನೀಡಿದ್ದೇವೆ.
    > ಬಜೆಟ್ ಪ್ರತಿ ಸೋರಿಕೆಯಾಗಿದೆ ಎಂದು ಲೋಕಸಭೆಯಲ್ಲಿ ಪ್ರತಿಪಕ್ಷಗಳಿಂದ ಟೀಕೆ

    “ಮೋದಿ ಸರ್ಕಾರ ಉದ್ದೇಶ ಪೂರ್ವಕವಾಗಿ ಮಾಹಿತಿ ಸೋರಿಕೆ ಮಾಡಿದೆ. ಸಂವಿಧಾನ ಮತ್ತು ಸಂಪ್ರದಾಯಕ್ಕೆ ಕೇಂದ್ರ ಸರ್ಕಾರ ಅಪಚಾರ ಮಾಡಿದೆ. ನೈತಿಕ ಹೊಣೆ ಹೊತ್ತು ಹಣಕಾಸು ಸಚಿವರು ರಾಜೀನಾಮೆ ನೀಡಬೇಕು” ನವದೆಹಲಿಯಲ್ಲಿ ಸಂಸದ ವಿ.ಎಸ್ ಉಗ್ರಪ್ಪ ಪ್ರತಿಕ್ರಿಯೆ.

    ಬಜೆಟ್ ಪ್ರತಿಗಳು ಈಗಾಗಲೇ ಸಂಸತ್ ಭವನ ತಲುಪಿದೆ. ಬಜೆಟ್ ಮಂಡನೆಗೂ ಮುನ್ನವೇ ಬಿಎಸ್‍ಇ ಸಂವೇದಿ ಸೂಚ್ಯಂಕದಲ್ಲಿ 100 ಅಂಶಗಳ ಏರಿಕೆ ಕಂಡು ಬಂದಿದೆ.

    ಕೃಷಿಗೆ ಏನು ಸಿಗಬಹುದು?
    * ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ಬಂಪರ್ ಕೊಡುಗೆ ಸಾಧ್ಯತೆ
    * ಕೃಷಿ ಉಪಕರಣ, ರಸಗೊಬ್ಬರ ಖರೀದಿಗೆ ರೈತರ ಖಾತೆಗೆ ವಾರ್ಷಿಕ 10 ಸಾವಿರ ರೂ. ಜಮೆ ಸಾಧ್ಯತೆ
    * ಸಕಾಲಕ್ಕೆ ಕೃಷಿ ಸಾಲ ಮರು ಪಾವತಿಸುವ ರೈತರಿಗೆ ಗಿಫ್ಟ್ ನಿರೀಕ್ಷೆ
    * ಪೂರ್ಣ ಬಡ್ಡಿ ಮನ್ನಾ ಸಾಧ್ಯತೆ
    * ತೆಲಂಗಾಣ ಮಾದರಿಯಲ್ಲಿ ರೈತರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ?
    * ಕೃಷಿ ವಿಮೆ ಪ್ರೀಮಿಯಂ ಪೂರ್ಣವಾಗಿ ಸರ್ಕಾರದಿಂದಲೇ ಪಾವತಿ
    * ಸಾಮಾನ್ಯ ಕನಿಷ್ಠ ಬೆಂಬಲ ಬೆಲೆ ಘೋಷಣೆ ಸಾಧ್ಯತೆ
    * ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಗೆ ಹೆಚ್ಚಿನ ಅನುದಾನ
    * ನರೇಗಾದ ಮೂಲಕ ಗ್ರಾಮೀಣ ಭಾಗದ ನೌಕರರ ಕೂಲಿ ಹೆಚ್ಚಿಸಬಹುದು

    ತೆರಿಗೆ ಪಾವತಿದಾರರಿಗೆ ಏನು ಸಿಗಬಹುದು?
    * ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ ಏರಿಕೆ
    * ಆದಾಯ ತೆರಿಗೆ ಸಲ್ಲಿಕೆ ನಿಯಮಗಳನ್ನು ಕೊಂಚ ಸಡಿಸಬಹುದು
    * ಟಿಡಿಎಸ್ ಸಲ್ಲಿಕೆ ದಿನವೇ ಮರು ಪಾವತಿಗೆ ನಿಯಮ ಜಾರಿಗೊಳಿಸಬಹುದು
    * ಶೇ.30ರಷ್ಟಿರುವ ಕಾರ್ಪೋರೇಟ್ ತೆರಿಗೆಯನ್ನು ಶೇ.25ಕ್ಕೆ ಇಳಿಕೆ ಮಾಡಬಹುದು

    ಶ್ರೀಸಾಮಾನ್ಯರಿಗೆ ಏನು ಸಿಗಬಹುದು?
    * ಮೆಡಿಕಲ್ ವಿಮೆ ಕಡಿಮೆ ಮಾಡುವ ನಿರೀಕ್ಷೆ
    * ಪ್ರತಿ ವ್ಯಕ್ತಿಗೂ 5 ಲಕ್ಷದ ವರೆಗಿನ ಏಕರೂಪದ ವಿಮೆ ಭಾಗ್ಯ ಕಲ್ಪಿಸಬಹುದು
    * ಸಣ್ಣ ಉದ್ದಿಮೆದಾರರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸಾಧ್ಯತೆ (ಉದ್ದಿಮೆದಾರರಿಗೆ ವಿಮೆಯೂ ಘೋಷಣೆ ಮಾಡಬಹುದು)
    * ಬಡವರಿಗೆ ಕನಿಷ್ಠ ವರಮಾನ ಯೋಜನೆ ಪ್ರಕಟಣೆ ಸಾಧ್ಯತೆ
    * ಜಿಎಸ್‍ಟಿ ವ್ಯಾಪ್ತಿಯಿಂದ ಮತ್ತಷ್ಟು ವಸ್ತುಗಳನ್ನು ಕೈ ಬಿಡುವ ಸಾಧ್ಯತೆ
    * ಐಟಿ ಕಾನೂನುಗಳಿಗೆ ಬದಲಾವಣೆ ತಂದು ಉದ್ಯೋಗ ಸೃಷ್ಟಿಸಬಹುದು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಮಂಡನೆಯಾಗಲಿದೆ ಮೋದಿ ಸರ್ಕಾರದ ಕೊನೆಯ ಬಜೆಟ್ – ಕೃಷಿ, ಜನ ಸಾಮಾನ್ಯರಿಗೆ ಏನು ಸಿಗಬಹುದು?

    ಮಂಡನೆಯಾಗಲಿದೆ ಮೋದಿ ಸರ್ಕಾರದ ಕೊನೆಯ ಬಜೆಟ್ – ಕೃಷಿ, ಜನ ಸಾಮಾನ್ಯರಿಗೆ ಏನು ಸಿಗಬಹುದು?

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಕೊನೆಯ ಬಜೆಟ್ ಮಂಡನೆಗೆ ಮುಂದಾಗಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಜೆಟ್ ಮಂಡನೆಯಾಗುತ್ತಿರುವ ಕಾರಣ ಭರಪೂರ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಬಿಜೆಪಿಗೆ ಹೊಡೆತ ನೀಡಿದ್ದು, ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಕೋವಿಂದ್ ಅವರ ಭಾಷಣವನ್ನು ಸೂಕ್ಷ್ಮವಾಗಿ ಗಮನಿಸಿದಾಗ  ಬಜೆಟ್ ರೈತರು, ಬಡವರು, ಮಧ್ಯಮ ವರ್ಗದ ಪರ ಇರಲಿದೆ ಎನ್ನುವ ಸುಳಿವು ನೀಡಿದೆ.

    ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದ ಕಾರಣ ರೈಲ್ವೆ ಖಾತೆ ಹೊಂದಿರುವ ಪಿಯೂಶ್ ಗೋಯಲ್ ಮೊದಲ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ಸಾಮಾನ್ಯವಾಗಿ ಚುನಾವಣಾ ವರ್ಷದಲ್ಲಿ ಯಾವುದೇ ಸರ್ಕಾರ ಪೂರ್ಣ ಬಜೆಟ್ ಮಂಡಿಸದೆ, ಮಧ್ಯಂತರ ಬಜೆಟ್ ಅಥವಾ ಕೇವಲ ಲೇಖಾನುದಾನ ಮಂಡಿಸುವುದು ವಾಡಿಕೆ. ಆದರೆ, ಗೋಯಲ್ ಅವರು ಪೂರ್ಣ ಬಜೆಟ್ ಮಂಡಿಸಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದ್ದಾರೆ ಎನ್ನಲಾಗಿದೆ.

    ಕೃಷಿಗೆ ಏನು ಸಿಗಬಹುದು?
    * ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ಬಂಪರ್ ಕೊಡುಗೆ ಸಾಧ್ಯತೆ
    * ಕೃಷಿ ಉಪಕರಣ, ರಸಗೊಬ್ಬರ ಖರೀದಿಗೆ ರೈತರ ಖಾತೆಗೆ ವಾರ್ಷಿಕ 10 ಸಾವಿರ ರೂ. ಜಮೆ ಸಾಧ್ಯತೆ
    * ಸಕಾಲಕ್ಕೆ ಕೃಷಿ ಸಾಲ ಮರು ಪಾವತಿಸುವ ರೈತರಿಗೆ ಗಿಫ್ಟ್ ನಿರೀಕ್ಷೆ
    * ಪೂರ್ಣ ಬಡ್ಡಿ ಮನ್ನಾ ಸಾಧ್ಯತೆ

    * ತೆಲಂಗಾಣ ಮಾದರಿಯಲ್ಲಿ ರೈತರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ?
    * ಕೃಷಿ ವಿಮೆ ಪ್ರೀಮಿಯಂ ಪೂರ್ಣವಾಗಿ ಸರ್ಕಾರದಿಂದಲೇ ಪಾವತಿ
    * ಸಾಮಾನ್ಯ ಕನಿಷ್ಠ ಬೆಂಬಲ ಬೆಲೆ ಘೋಷಣೆ ಸಾಧ್ಯತೆ
    * ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಗೆ ಹೆಚ್ಚಿನ ಅನುದಾನ
    * ನರೇಗಾದ ಮೂಲಕ ಗ್ರಾಮೀಣ ಭಾಗದ ನೌಕರರ ಕೂಲಿ ಹೆಚ್ಚಿಸಬಹುದು

    ತೆರಿಗೆ ಪಾವತಿದಾರರಿಗೆ ಏನು ಸಿಗಬಹುದು?
    * ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ ಏರಿಕೆ
    * ಆದಾಯ ತೆರಿಗೆ ಸಲ್ಲಿಕೆ ನಿಯಮಗಳನ್ನು ಕೊಂಚ ಸಡಿಸಬಹುದು
    * ಟಿಡಿಎಸ್ ಸಲ್ಲಿಕೆ ದಿನವೇ ಮರು ಪಾವತಿಗೆ ನಿಯಮ ಜಾರಿಗೊಳಿಸಬಹುದು
    * ಶೇ.30ರಷ್ಟಿರುವ ಕಾರ್ಪೋರೇಟ್ ತೆರಿಗೆಯನ್ನು ಶೇ.25ಕ್ಕೆ ಇಳಿಕೆ ಮಾಡಬಹುದು

    ಶ್ರೀಸಾಮಾನ್ಯರಿಗೆ ಏನು ಸಿಗಬಹುದು?
    * ಮೆಡಿಕಲ್ ವಿಮೆ ಕಡಿಮೆ ಮಾಡುವ ನಿರೀಕ್ಷೆ
    * ಪ್ರತಿ ವ್ಯಕ್ತಿಗೂ 5 ಲಕ್ಷದ ವರೆಗಿನ ಏಕರೂಪದ ವಿಮೆ ಭಾಗ್ಯ ಕಲ್ಪಿಸಬಹುದು
    * ಸಣ್ಣ ಉದ್ದಿಮೆದಾರರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸಾಧ್ಯತೆ (ಉದ್ದಿಮೆದಾರರಿಗೆ ವಿಮೆಯೂ ಘೋಷಣೆ ಮಾಡಬಹುದು)
    * ಬಡವರಿಗೆ ಕನಿಷ್ಠ ವರಮಾನ ಯೋಜನೆ ಪ್ರಕಟಣೆ ಸಾಧ್ಯತೆ
    * ಜಿಎಸ್‍ಟಿ ವ್ಯಾಪ್ತಿಯಿಂದ ಮತ್ತಷ್ಟು ವಸ್ತುಗಳನ್ನು ಕೈ ಬಿಡುವ ಸಾಧ್ಯತೆ
    * ಐಟಿ ಕಾನೂನುಗಳಿಗೆ ಬದಲಾವಣೆ ತಂದು ಉದ್ಯೋಗ ಸೃಷ್ಟಿಸಬಹುದು

     

  • ಜ.31 ರಿಂದ ಫೆ.13ರವರೆಗೆ ಬಜೆಟ್ ಅಧಿವೇಶನ – ಏನಿದು ಮಧ್ಯಂತರ ಬಜೆಟ್?

    ಜ.31 ರಿಂದ ಫೆ.13ರವರೆಗೆ ಬಜೆಟ್ ಅಧಿವೇಶನ – ಏನಿದು ಮಧ್ಯಂತರ ಬಜೆಟ್?

    ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭಗೊಂಡು ಫೆಬ್ರವರಿ 13ರ ವರೆಗೆ ನಡೆಯಲಿದ್ದು, ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಮಂಡನೆಯಾಗುವ ಸಾಧ್ಯತೆಯಿದೆ.

    ಏಪ್ರಿಲ್-ಮೇ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿರುವುದರಿಂದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ(ಸಿಸಿಪಿಎ) ಸಭೆಯಲ್ಲಿ ಬಜೆಟ್ ಅಧಿವೇಶನದ ಬಗ್ಗೆ ದಿನಾಂಕ ನಿಗದಿ ಸಂಬಂಧ ಚರ್ಚೆ ನಡೆಸಲಾಯಿತು.

    ಪಂಚರಾಜ್ಯಗಳ ಚುನಾವಣೆಯಲ್ಲಿ ಪ್ರಮುಖ ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಹೀಗಾಗಿ ಜನರನ್ನು ಸೆಳೆದು ಎರಡನೇ ಬಾರಿ ಅಧಿಕಾರಕ್ಕೆ ಏರುವ ಕನಸು ಕಾಣುತ್ತಿರುವ ಮೋದಿ ಸರ್ಕಾರಕ್ಕೆ ಸಿಗುವ ಕೊನೆಯ ಅವಕಾಶ ಇದಾಗಿದ್ದು, ಎಲ್ಲರ ಕಣ್ಣು ಈಗ ಮಧ್ಯಂತರ ಬಜೆಟ್ ಮೇಲೆ ಬಿದ್ದಿದೆ.

    ಯಾಕೆ ಮಧ್ಯಂತರ ಬಜೆಟ್?
    ಹಾಲಿ ಇರುವ ಸರ್ಕಾರಕ್ಕೆ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಕಾಲಾವಕಾಶದ ಕೊರತೆ ಇದ್ದರೆ ಅಥವಾ ಸಾರ್ವತ್ರಿಕ ಚುನಾವಣೆ ಹತ್ತಿರ ಬಂದಾಗ ಮಧ್ಯಂತರ ಬಜೆಟ್ ಮಂಡಿಸಲಾಗುತ್ತದೆ. ಹೊಸದಾಗಿ ಚುನಾಯಿತಗೊಂಡ ಸರ್ಕಾರ ನಂತರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತದೆ. ಇದನ್ನೂ ಓದಿ: ಬಜೆಟ್ ಮಂಡನೆ ಆಗುವುದು ಹೇಗೆ? ಅಧಿಕಾರಿಗಳು ರಹಸ್ಯ ಹೇಗೆ ಕಾಪಾಡುತ್ತಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ

    ಲೇಖಾನುದಾನ ಎಂದರೇನು?
    ಭಾರತದಲ್ಲಿ ಏಪ್ರಿಲ್ 1 ರಂದು ಆರ್ಥಿಕ ವರ್ಷ ಆರಂಭಗೊಂಡರೆ ಮಾರ್ಚ್ 31ರಂದು ಕೊನೆಯಾಗುತ್ತದೆ. ಆರ್ಥಿಕ ವರ್ಷದ ಕೊನೆ ದಿನವಾದ ಮಾರ್ಚ್ 31ರ ಅವಧಿಗೆ ಅನ್ವಯವಾಗುವಂತೆ ಪ್ರತಿ ವರ್ಷ ಆಯವ್ಯಯಕ್ಕೆ ಸಂಸತ್ತು ಅನುಮೋದನೆ ನೀಡುತ್ತದೆ. ಒಂದು ವೇಳೆ ಆರ್ಥಿಕ ವರ್ಷ ಮುಕ್ತಾಯವಾಗುವುದರೊಳಗೆ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಸರ್ಕಾರಕ್ಕೆ ಸಾಧ್ಯ ಆಗದೇ ಇದ್ದರೆ ಹೊಸ ಸರ್ಕಾರ ಬಜೆಟ್ ಮಂಡಿಸುವ ತನಕದ ಅವಧಿಯ ವೆಚ್ಚಗಳಿಗೆ ಸಂಸತ್ತಿನ ಅನುಮೋದನೆ ಪಡೆಯಬೇಕಾಗುತ್ತದೆ. ಈ ಕಾರಣಕ್ಕಾಗಿ ಮಧ್ಯಂತರ ಬಜೆಟ್ ಮಂಡಿಸಿ ಲೇಖಾನುದಾನಕ್ಕೆ ಒಪ್ಪಿಗೆ ಪಡೆಯಲಾಗುತ್ತದೆ.

    ಪೂರ್ಣ ಪ್ರಮಾಣದ ಬಜೆಟ್ ಮಂಡನೆಯ ತನಕದ ಆಡಳಿತಾತ್ಮಕ ಖರ್ಚು ವೆಚ್ಚಗಳಿಗೆ ಲೇಖಾನುದಾನದಿಂದ ಅನುಕೂಲವಾಗುತ್ತದೆ. ಮೂರರಿಂದ ನಾಲ್ಕು ತಿಂಗಳಿಗೆ ಎಷ್ಟು ಖರ್ಚಾಗುತ್ತದೋ ಅಷ್ಟು ವೆಚ್ಚವನ್ನು ಮಾತ್ರ ಸರ್ಕಾರ ಪರಿಗಣಿಸಿ ಲೇಖಾನುದಾನಕ್ಕೆ ಅನುಮತಿ ಪಡೆಯುತ್ತದೆ. 2014ರ ಫೆಬ್ರವರಿಯಲ್ಲಿ ಪಿ. ಚಿದಂಬರಂ ಮಧ್ಯಂತರ ಬಜೆಟ್ ಮಂಡಿಸಿದ್ದರೆ, 2014ರ ಜುಲೈನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ್ದರು.