Tag: ಹಣಕಾಸು ಸಚಿವಾಲಯ

  • 21 ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ – ಕರ್ನಾಟಕಕ್ಕೆ 8 ಸಾವಿರ ಕೋಟಿ ಬಿಡುಗಡೆ

    21 ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ – ಕರ್ನಾಟಕಕ್ಕೆ 8 ಸಾವಿರ ಕೋಟಿ ಬಿಡುಗಡೆ

    ನವದೆಹಲಿ: ಕೇಂದ್ರ ಸರ್ಕಾರ 21 ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆ (GST) ಪರಿಹಾರ ಹಣ ಬಿಡುಗಡೆ ಮಾಡಿದೆ.

    ಕರ್ನಾಟಕ ಸೇರಿದಂತೆ ಒಟ್ಟು 21 ರಾಜ್ಯಗಳಿಗೆ ಹಣಕಾಸು ಸಚಿವಾಲಯ 86,912 ಕೋಟಿ ಪರಿಹಾರ ಹಣ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೂ ಭಾರೀ ಪರಿಹಾರ ಬಿಡುಗಡೆ ಮಾಡಲಾಗಿದೆ. 86,912 ಕೋಟಿ ರೂ.ಗಳಲ್ಲಿ 8,633 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ತಾಯಿ ಹೀರಾಬೆನ್ ಸ್ಕೆಚ್‍ನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಮಹಿಳಾ ಅಭಿಮಾನಿ

    ಭಾರತದ ಜಿಡಿಪಿ ದರ ಏರಿಕೆಯಾಗಿದ್ದು, 2021-22 ಆರ್ಥಿಕ ವರ್ಷದ ಜಿಡಿಪಿ ದರ ಶೇ.8.7 ರಷ್ಟಿದೆ. ಕ್ವಾರ್ಟರ್ 4ರ ಜಿಡಿಪಿ ದರ ಶೇ.4 ರಷ್ಟಿದೆ ಎಂದು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್ 

    GST
    ಸಾಂದರ್ಭಿಕ ಚಿತ್ರ

    ಮಹಾರಾಷ್ಟಕ್ಕೆ ಹೆಚ್ಚಿನ ಪರಿಹಾರ: ಒಟ್ಟಾರೆ ಜಿಎಸ್‌ಟಿ ಹಣದಲ್ಲಿ ಮಹಾರಾಷ್ಟ್ರಕ್ಕೆ 14,145 ಕೋಟಿ ರೂ. ಹೆಚ್ಚಿನ ಪರಿಹಾರ ನೀಡಲಾಗಿದೆ. ಇನ್ನುಳಿದಂತೆ ತಮಿಳುನಾಡಿಗೆ 9,602 ಕೋಟಿ, ಉತ್ತರ ಪ್ರದೇಶಕ್ಕೆ 8,874 ಕೋಟಿ ಹೊರತುಪಡಿಸಿದರೆ 3ನೇ ಸ್ಥಾನದಲ್ಲಿ ಕರ್ನಾಟಕ ಇದ್ದು 8,633 ಕೋಟಿ ರೂ. ಪರಿಹಾರ ನೀಡಲಾಗಿದೆ.

  • ಮಾರ್ಚ್‍ನಲ್ಲಿ GST ದಾಖಲೆ ಸಂಗ್ರಹ – ಯಾವ ರಾಜ್ಯದಲ್ಲಿ ಎಷ್ಟು ಸಂಗ್ರಹ?

    ಮಾರ್ಚ್‍ನಲ್ಲಿ GST ದಾಖಲೆ ಸಂಗ್ರಹ – ಯಾವ ರಾಜ್ಯದಲ್ಲಿ ಎಷ್ಟು ಸಂಗ್ರಹ?

    ನವದೆಹಲಿ: ಹಣಕಾಸು ವರ್ಷಾಂತ್ಯದ ತಿಂಗಳು ಆಗಿರುವ ಮಾರ್ಚ್‍ನಲ್ಲಿ ಬರೋಬ್ಬರಿ 1.42 ಲಕ್ಷ ಕೋಟಿ ರೂ. ಜಿಎಸ್‍ಟಿ ಸಂಗ್ರಹವಾಗುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ.

    ಮಾರ್ಚ್ ಒಂದು ತಿಂಗಳಲ್ಲಿ ಒಟ್ಟು 1,42,095 ಲಕ್ಷ ಕೋಟಿ ರೂ ಜಿಎಸ್‍ಟಿ ತೆರಿಗೆ ಸಂಗ್ರಹವಾಗಿದೆ. ಇದರಲ್ಲಿ ಸಿಜಿಎಸ್‍ಟಿ 25,830 ಕೋಟಿ ರೂ, ಎಸ್‍ಜಿಎಸ್‍ಟಿ 32,378 ಕೋಟಿ ರೂ, ಐಜಿಎಸ್‍ಟಿ 74,470 ಕೋಟಿ (ಇದರಲ್ಲಿ ಸರಕು ಆಮದಿನ ಮೇಲೆ ಸಂಗ್ರಹವಾದ 39,131 ಕೋಟಿ ರೂ, ಹಣವೂ ಸೇರಿದೆ.) ಮತ್ತು ಸೆಸ್ ಮೇಲಿನ ಶುಲ್ಕ 9,417 ಕೋಟಿ ರೂ. (ಸರಕುಗಳ ಆಮದಿನ ಮೇಲೆ ಸಂಗ್ರಹವಾದ 981 ಕೋಟಿ ಶುಲ್ಕ ಸೇರಿದೆ) ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಭಾರತಕ್ಕೆ ರಿಯಾಯಿತಿ ದರದಲ್ಲಿ ರಷ್ಯಾ ಕಚ್ಚಾ ತೈಲ

    ಈ ಮೂಲಕ ಕಳೆದ ವರ್ಷ ಇದೇ ತಿಂಗಳು ಸಂಗ್ರಹವಾದ ಜಿಎಸ್‍ಟಿ ಆದಾಯಕ್ಕಿಂತ ಈ ವರ್ಷದ ಜಿಎಸ್‍ಟಿ ಆದಾಯ ಶೇ.15ರಷ್ಟು ಹೆಚ್ಚಳವಾಗಿದೆ. ಈವರೆಗೆ ಕಳೆದ ಜನವರಿ ತಿಂಗಳಲ್ಲಿ ಸಂಗ್ರಹವಾದ ಜಿಎಸ್‍ಟಿ ತೆರಿಗೆ 1,40,986 ಕೋಟಿ ರೂ. ದಾಖಲೆಯಾಗಿತ್ತು. ಈ ದಾಖಲೆಯನ್ನು ಮಾರ್ಚ್ ತಿಂಗಳು ಮುರಿದಿದ್ದು, ಈ ಒಂದು ತಿಂಗಳಲ್ಲಿ 1.42,095 ಕೋಟಿ ರೂ. ಸಂಗ್ರಹವಾಗುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ಇದನ್ನೂ ಓದಿ: ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 20 ಮಕ್ಕಳು ಅಸ್ವಸ್ಥ

    ರಾಜ್ಯಗಳ ಪೈಕಿ ಮಹರಾಷ್ಟ್ರದಲ್ಲಿ 20,305 ಕೋಟಿ ರೂ. ಅತೀ ಹೆಚ್ಚು ಜಿಎಸ್‍ಟಿ ಸಂಗ್ರವಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಶೇ.19ರಷ್ಟು ಏರಿಕೆ ಕಂಡಿದೆ. ಮಹರಾಷ್ಟ್ರ ಬಳಿಕ ಗುಜರಾತ್‍ನಲ್ಲಿ 9,158 ಕೋಟಿ ರೂ. ಜಿಎಸ್‍ಟಿ ಸಂಗ್ರಹವಾಗಿದ್ದು, ಕಳೆದ ಬಾರಿಗಿಂತ ಶೇ.12 ಹೆಚ್ಚಳವಾಗಿದೆ. ಕರ್ನಾಟಕದಲ್ಲಿ ಕಳೆದ ವರ್ಷ 7,915 ಕೋಟಿ ರೂ. ಸಂಗ್ರಹವಾಗಿತ್ತು. ಈ ಬಾರಿ 8,750 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗುವ ಮೂಲಕ  ಶೇ.11ರಷ್ಟು ಏರಿಕೆ ಕಂಡಿದೆ.

    ಇನ್ವರ್ಟೆಡ್ ಡ್ಯೂಟಿ ರಚನೆಯನ್ನು ಸರಿಪಡಿಸಲು ಕೌನ್ಸಿಲ್ ತೆಗೆದುಕೊಂಡ ವಿವಿಧ ಕ್ರಮಗಳಿಂದಾಗಿ ಆದಾಯದಲ್ಲಿ ಸುಧಾರಣೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

  • ಪೆಟ್ರೋಲ್, ಡೀಸೆಲ್ ಜಿಎಸ್‍ಟಿ ವ್ಯಾಪ್ತಿಗೆ? – ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆ

    ಪೆಟ್ರೋಲ್, ಡೀಸೆಲ್ ಜಿಎಸ್‍ಟಿ ವ್ಯಾಪ್ತಿಗೆ? – ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆ

    ನವದೆಹಲಿ: ಪೆಟ್ರೋಲ್, ಡೀಸೆಲ್ ಇತರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ವ್ಯಾಪ್ತಿಗೆ ತರುವ ಬಗ್ಗೆ ಜಿಎಸ್‍ಟಿ ಮಂಡಳಿ ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಿದೆ.

    ಕಳೆದ ಜೂನ್ ತಿಂಗಳಿನಲ್ಲಿ ಕೇರಳ ಹೈಕೋರ್ಟ್ ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲೆ ಪ್ರತ್ಯೇಕ ದರವನ್ನು ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಇವುಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಜಿಎಸ್‍ಟಿ ಮಂಡಳಿಗೆ ಸೂಚಿಸಿತ್ತು. ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಎಸ್‍ಟಿ ಮಂಡಳಿಯ ಸಭೆಯಲ್ಲಿ ಈ ವಿಚಾರವನ್ನು ಚರ್ಚೆಗೆ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

    ಈ ಸಭೆಯಲ್ಲಿ ಕೋವಿಡ್ 19 ಚಿಕಿತ್ಸಾ ಉಪಕರಣ ಮತ್ತು ಔಷಧ ಸೇರಿದಂತೆ ಕೆಲ ಅಗತ್ಯ ವಸ್ತುಗಳಿಗೆ ಸುಂಕ ವಿನಾಯಿತಿಯನ್ನು ವಿಸ್ತರಿಸುವ ಬಗ್ಗೆಯೂ ಮಂಡಳಿಯು ಪರಿಶೀಲನೆ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಇನ್ನೂ ಬಂದಿಲ್ಲ ಯಾಕೆ? ಬಿಜೆಪಿ, ಕಾಂಗ್ರೆಸ್ ನಿಲುವು ಏನು?

    ಒಪ್ಪಿಗೆ ಸಿಗುತ್ತಾ?
    ಇಲ್ಲಿಯವರೆಗೆ ರಾಜ್ಯ ಸರ್ಕಾರಗಳು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ವಿರೋಧ ವ್ಯಕ್ತಪಡಿಸುತ್ತಿವೆ. ಜಿಎಸ್‍ಟಿ ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕಾದರೆ ಮಂಡಳಿ ಸದಸ್ಯ ರಾಜ್ಯಗಳ ಮೂರನೇ ಎರಡರಷ್ಟು ಬಹುಮತ ಬೇಕು.

    ಜನರು ಮತ್ತು ರಾಜಕೀಯ ಪಕ್ಷಗಳು ಆಗ್ರಹಿಸುತ್ತಿದ್ದರೂ ಜಿಎಸ್‍ಟಿ ವ್ಯಾಪ್ತಿಗೆ ತೈಲ ಬರುವುದು ಅಷ್ಟು ಸುಲಭವಿಲ್ಲ. ಜಿಎಸ್‍ಟಿ ವ್ಯಾಪ್ತಿಗೆ ತಂದರೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚುವರಿ ತೆರಿಗೆ ಹಾಕುವ ಸಂಭವವೇ ಹೆಚ್ಚು.  ಇದನ್ನು ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

    ಅಡುಗೆ ಅನಿಲ (ಎಲ್‍ಪಿಜಿ), ಸೀಮೆಎಣ್ಣೆ, ನಾಫ್ತಾ ಗಳಿಗೆ ಜಿಎಸ್‍ಟಿ ಅನ್ವಯವಾಗುತ್ತಿದೆ. ಆದರೆ ಡೀಸೆಲ್, ಪೆಟ್ರೋಲ್, ನೈಸರ್ಗಿಕ ಅನಿಲ, ಕಚ್ಚಾ ತೈಲ ಮತ್ತು ವಿಮಾನ ಇಂಧನವನ್ನು ಸದ್ಯಕ್ಕೆ ಜಿಎಸ್‍ಟಿಯಿಂದ ಹೊರಗೆ ಇಡಲಾಗಿದೆ. ರಾಜ್ಯ ಸರ್ಕಾರಗಳು ಮದ್ಯ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಬಿಟ್ಟುಕೊಡಲು ಮುಂದಾಗದ ಹಿನ್ನೆಲೆಯಲ್ಲಿ ಇವುಗಳು ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗಿಲ್ಲ.  ಇದನ್ನೂ ಓದಿ: ಪೆಟ್ರೋಲ್‌ನ್ನು ಜಿಎಸ್‌ಟಿಗೆ‌ ಸೇರಿಸಿದರೆ ಅದು ರಾಜ್ಯಗಳ ಪಾಲಿಗೆ ಮರಣ ಶಾಸನ – ಕೇಂದ್ರದ ವಿರುದ್ಧ ಎಚ್‌ಡಿಕೆ ಆಕ್ರೋಶ

    ಯಾಕೆ ಬಿಟ್ಟುಕೊಡಲ್ಲ?
    ರಾಜ್ಯ ಸರ್ಕಾರಗಳಿಗೆ ಅತಿಹೆಚ್ಚು ಆದಾಯ ಮೂಲವೇ ತೈಲ. ಕೇಂದ್ರ ಸರ್ಕಾರ ಅಬಕಾರಿ ಸುಂಕ ಹಾಕಿದರೆ ರಾಜ್ಯ ಸರ್ಕಾರ ವ್ಯಾಟ್ ಹಾಕುತ್ತದೆ. ಈ ಮೂಲಕ ರಾಜ್ಯದ ಬೊಕ್ಕಸವನ್ನು ತುಂಬಿಸಿಕೊಳ್ಳುತ್ತದೆ. ಅಷ್ಟೇ ಅಲ್ಲದೇ ಸುಲಭವಾಗಿ ಆದಾಯ ಸಂಗ್ರಹವಾಗುತ್ತದೆ. ಸಿಎಂ ಕುಮಾರಸ್ವಾಮಿ ತನ್ನ ಅಧಿಕಾರ ಅವಧಿಯಲ್ಲಿ ರೈತರ ಸಾಲಮನ್ನಾ ಮಾಡಲು ಆರ್ಥಿಕ ಸಂಪನ್ಮೂಲ ಹೆಚ್ಚಿಸಲು ಪೆಟ್ರೋಲ್, ಡೀಸೆಲ್ ಮೇಲೆ ಹೆಚ್ಚುವರಿ ತೆರಿಗೆ ಸಹ ಹಾಕಿದ್ದರು. ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಸಂಪನ್ಮೂಲ ಹೆಚ್ಚಳ ಮಾಡಲು ಇರುವ ಏಕೈಕ ಮಾರ್ಗ ಎಂದರೆ ತೈಲ. ಹೀಗಾಗಿ ಯಾವುದೇ ಸರ್ಕಾರ ಪೆಟ್ರೋಲನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ಒಪ್ಪಿಗೆ ನೀಡುತ್ತಿಲ್ಲ.

    ಒಂದು ಲೀಟರ್‌ ಪೆಟ್ರೋಲ್‌ ಮೇಲೆ 1 ವರ್ಷದ ಹಿಂದೆ 19.98 ರೂ. ಇದ್ದ ಅಬಕಾರಿ ಸುಂಕ 32.90 ರೂ.ಗೆ ಏರಿಕೆಯಾಗಿದೆ. ಡೀಸೆಲ್‌ ಮೇಲಿದ್ದ 15.83 ರೂ. ಅಬಕಾರಿ ಸುಂಕ 31.8 ರೂ.ಗೆ ಹೆಚ್ಚಳವಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಈ ಹಿಂದೆ ತಿಳಿಸಿದ್ದರು.

  • ಇನ್ಫಿ ಸಿಇಒ ಸಲೀಲ್ ಪರೇಖ್‍ಗೆ ಹಣಕಾಸು ಸಚಿವಾಲಯದಿಂದ ಸಮನ್ಸ್

    ಇನ್ಫಿ ಸಿಇಒ ಸಲೀಲ್ ಪರೇಖ್‍ಗೆ ಹಣಕಾಸು ಸಚಿವಾಲಯದಿಂದ ಸಮನ್ಸ್

    ನವದೆಹಲಿ: ಇ-ಫೈಲಿಂಗ್ ಪೋರ್ಟಲ್ ನಲ್ಲಿ  ಕಾಣಿಸಿಕೊಂಡ ತಾಂತ್ರಿಕ ದೋಷ ಪರಿಹಾರವಾಗದ ಹಿನ್ನೆಲೆಯಲ್ಲಿ ಹಣಕಾಸು ಸಚಿವಾಲಯ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

    ಆದಾಯ ತೆರಿಗೆಯ ಇ-ಫೈಲಿಂಗ್ ಪೋರ್ಟನ್  ಲೋಕಾರ್ಪಣೆಗೊಂಡು 2.5 ತಿಂಗಳು ಕಳೆದರೂ ಅದರಲ್ಲಿನ ತಾಂತ್ರಿಕ ದೋಷಗಳು ಇನ್ನೂ ಸರಿಯಾಗದ ಹಿನ್ನೆಲೆಯಲ್ಲಿ ಜನರ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಇದನ್ನೂ ಓದಿ: 107 ಭಾರತೀಯರು ಸೇರಿ ಅಫ್ಘಾನಿಸ್ತಾನದಿಂದ 168 ಜನರ ಆಗಮನ

    ಜನರಿಂದ ಭಾರೀ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಹಣಕಾಸು ಸಚಿವಾಲಯ ಸೋಮವಾರ ಸಲೀಲ್ ಪರೇಖ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: ಮಧ್ಯರಾತ್ರಿ ಆಪರೇಷನ್ ಇಂಡಿಯನ್ಸ್ – ಕಾಬೂಲ್‍ನಿಂದ ದೋಹಾ ಮೂಲಕ ದೆಹಲಿಗೆ ಭಾರತೀಯರು

    ಆದಾಯ ತೆರಿಗೆ ಸಲ್ಲಿಕೆಯ ನೂತನ ಇ-ಫೈಲಿಂಗ್ ಪೋರ್ಟಲ್ ಅಭಿವೃದ್ಧಿಪಡಿಸಿದ ಇಸ್ಫೋಸಿಸ್ ಸಂಸ್ಥೆಗೆ 2019ರ ಜನವರಿಯಿಂದ 2021ರ ಜೂನ್‍ವರೆಗೆ 164.5 ಕೋಟಿ ರೂ. ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಮಾಹಿತಿ ನೀಡಿತ್ತು.

    ಈ ಸಂಬಂಧ ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದ ಆರ್ಥಿಕ ಇಲಾಖೆಯ ರಾಜ್ಯ ಸಚಿವ ಪಂಕಜ್ ಚೌಧರಿ ಅವರು, ಎಂಎಸ್‍ಪಿ, ಜಿಎಸ್‍ಟಿ, ಬಾಡಿಗೆ,ಪೋಸ್ಟೇಜ್   ಮತ್ತು ಯೋಜನೆ ವ್ಯವಸ್ಥಾಪನೆಯ ವೆಚ್ಚಕ್ಕೆ ಸಂಬಂಧಿಸಿದ 4,241.97 ಕೋಟಿ ರೂ. ವೆಚ್ಚದ ಸಮಗ್ರ ಇ-ಫೈಲಿಂಗ್ ಮತ್ತು ಸಿಪಿಸಿ-2.0 ಯೋಜನೆಯನ್ನು ಇಸ್ಫೋಸಿಸ್‍ಗೆ ವಹಿಸಲಾಗಿತ್ತು. ಈ ಪ್ರಕಾರ ಇದೇ ವರ್ಷದ ಜೂ.7ರಂದು ನೂತನ ಆದಾಯ ತೆರಿಗೆಯ ಇ-ಫೈಲಿಂಗ್ ಪೋರ್ಟಲ್  ಲೋಕಾರ್ಪಣೆಯಾಗಿತ್ತು.

    ಹೊಸ ತಲೆಮಾರಿನ ಆದಾಯ ತೆರಿಗೆ ಪಾವತಿ ಸಲ್ಲಿಸುವ ವೆಬ್‍ಸೈಟ್ ತೆರೆಯಲು 2019ರಲ್ಲಿ ಇನ್ಫೋಸಿಸ್ ಈ ಗುತ್ತಿಗೆಯನ್ನು ಪಡೆದುಕೊಂಡಿತ್ತು. ಐಟಿ ರಿಟರ್ನ್ಸ್  ಸಲ್ಲಿಕೆಯಾದ 63 ದಿನಗಳ ಬಳಿಕ ರಿಫಂಡ್ ಆಗುವುದನ್ನು ತಪ್ಪಿಸಿ ಒಂದೇ ದಿನಕ್ಕೆ ರಿಟರ್ನ್ ಪ್ರಕ್ರಿಯೆ ಪೂರ್ಣಗೊಳಿಸಿ ಬಹಳ ಬೇಗ ಮರು ಪಾವತಿ ಮಾಡುವಂತೆ ವೆಬ್‍ಸೈಟ್ ಸಿದ್ಧಪಡಿಸಬೇಕೆಂಬ ಷರತ್ತು ವಿಧಿಸಲಾಗಿತ್ತು.

  • ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಹಿರಿಯ ಅಧಿಕಾರಿಗಳ ತಂಡ ಭೇಟಿ

    ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಹಿರಿಯ ಅಧಿಕಾರಿಗಳ ತಂಡ ಭೇಟಿ

    ಮಡಿಕೇರಿ: ಆಗಸ್ಟ್ ತಿಂಗಳಲ್ಲಿ ಕೊಡಗಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ ಮತ್ತು ಪ್ರವಾಹದಿಂದ ಆಗಿರುವ ನಷ್ಟ ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು ಕೇಂದ್ರ ಗೃಹ ಸಚಿವಾಲಯ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳ ನೇತೃತ್ವದ ತಂಡ ಇಂದು ಕೊಡಗಿಗೆ ಭೇಟಿ ನೀಡಿದೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆ ಸೈನಿಕ ಶಾಲೆಗೆ ಆಗಮಿಸಿರುವ ತಂಡ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ವಿವಿಧ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದೆ. ಅಲ್ಲದೆ ಭೂಕುಸಿತ ಮತ್ತು ಪ್ರವಾಹದ ಸಾಕ್ಷ್ಯ ಚಿತ್ರಗಳನ್ನು ವೀಕ್ಷಿಸಿದೆ.

    ಮಾಹಿತಿ ಪಡೆದುಕೊಂಡ ಕೇಂದ್ರ ತಂಡವು ನಂತರ ಪ್ರಮುಖವಾಗಿವ ಭೂಕುಸಿತವಾಗಿರುವ ಮಡಿಕೇರಿ ಸಮೀಪದ ಬೊಟ್ಲಪ್ಪ ಪೈಸಾರಿ, ಬಾಗಮಂಡಲ ಸಮೀಪದ ಚೇರಂಗಾಲ ಮತ್ತು ತಲಕಾವೇರಿ ಸಮೀಪ ಬ್ರಹ್ಮಗಿರಿ ಸಾಲಿನ (ಗಜಗಿರಿ ಬೆಟ್ಟ) ಪ್ರದೇಶಗಳಿಗೆ ಭೇಟಿ ನೀಡಲಿದೆ. ಈ ಸಂದರ್ಭ ಪ್ರವಾಹ ಮತ್ತು ಭೂಕುಸಿತದಿಂದ ಆಗಿರುವ ನಷ್ಟದ ಬಗ್ಗೆ ಸ್ಥಳೀಯರಿಂದಲೂ ಮಾಹಿತಿ ಸಂಗ್ರಹಿಸಲಿದೆ.

  • ಈ ಬಾರಿ ಮತ್ತೆ ರೈತ ಬಜೆಟ್ ಮಂಡಿಸ್ತಾರೆ ಸಿಎಂ ಯಡಿಯೂರಪ್ಪ

    ಈ ಬಾರಿ ಮತ್ತೆ ರೈತ ಬಜೆಟ್ ಮಂಡಿಸ್ತಾರೆ ಸಿಎಂ ಯಡಿಯೂರಪ್ಪ

    ಬೆಂಗಳೂರು: ಈ ಅವಧಿಯ ಬಿಜೆಪಿ ಸರ್ಕಾರದ ಮೊದಲ ಬಜೆಟ್‍ಗೆ ಸಿದ್ಧತೆಗಳು ಪ್ರಾರಂಭವಾಗಿದೆ. ಸಿಎಂ ಯಡಿಯೂರಪ್ಪ ಮಾರ್ಚ್ ನಲ್ಲಿ ಬಜೆಟ್ ನ್ನ ಮಂಡನೆ ಮಾಡಲಿದ್ದು, ಈಗಾಗಲೇ ಸಿದ್ಧತೆ ಆರಂಭ ಮಾಡಿದ್ದಾರೆ. ವಿಶೇಷ ಅಂದರೆ ಈ ಬಾರಿಯೂ ರೈತರ ಪರವಾಗಿ ಬಜೆಟ್ ಮಂಡಿಸಲು ಸಿಎಂ ಸಿದ್ಧತೆ ಆರಂಭಿಸಿದ್ದಾರೆ.

    ಸಿಎಂ ಯಡಿಯೂರಪ್ಪ ಮೂಲತಃ ರೈತಾಪಿ ಕುಟುಂಬದಿಂದ ಬಂದವರು. ಹೀಗಾಗಿ ರೈತರ ಮೇಲೆ ಬಿಎಸ್‍ವೈಗೂ ವಿಶೇಷ ಕಾಳಜಿ. 2008 ರಲ್ಲಿ ಸಿಎಂ ಆದಾಗ ಯಡಿಯೂರಪ್ಪ ಹೊಸ ಇತಿಹಾಸ ಸೃಷ್ಟಿ ಮಾಡಿ ವಿಶೇಷವಾಗಿ ರೈತರಿಗಾಗಿ ಪ್ರತ್ಯೇಕ ಬಜೆಟ್ ಮಂಡನೆ ಮಾಡಿದ್ದರು. ರೈತರಿಗಾಗಿ ಮೀಸಲಿಟ್ಟ ಆ ಬಜೆಟ್ ರೈತಾಪಿ ವರ್ಗಕ್ಕೆ ಅನೇಕ ಕೊಡುಗೆಗಳನ್ನ ನೀಡಿತ್ತು. ಬಡ್ಡಿ ರಹಿತ ಸಾಲ, ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ, ಯಂತ್ರೋಪಕರಣಗಳ ಖರೀದಿಗೆ ರಿಯಾಯ್ತಿ ಹೀಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ರೈತ ನಾಯಕ ಅನ್ನಿಸಿಕೊಂಡಿದ್ದರು.

    ಈ ಬಾರಿ ರೈತರಿಗಾಗಿ ಪ್ರತ್ಯೇಕ ರೈತ ಬಜೆಟ್ ಮಂಡನೆ ಮಾಡಲು ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಈಗಾಗಲೇ ಸಿದ್ಧತೆ ಆರಂಭ ಮಾಡಿರುವ ಯಡಿಯೂರಪ್ಪ, ಸಾಮಾನ್ಯ ಬಜೆಟ್ ಜೊತೆಗೆ ವಿಶೇಷವಾಗಿ ಪ್ರತ್ಯೇಕ ರೈತ ಬಜೆಟ್ ಮಂಡನೆಗೂ ಪ್ಲ್ಯಾನ್ ಮಾಡಿದ್ದಾರೆ. ಪ್ರತ್ಯೇಕ ಬಜೆಟ್ ಮಂಡನೆ ಮಾಡಿದರೆ ರೈತಾಪಿ ವರ್ಗಕ್ಕೂ ಒಂದಷ್ಟು ಲಾಭ ಸಿಗುತ್ತವೆ. ಬರ, ನೆರೆಯಿಂದ ತತ್ತರಿಸಿರುವ ರೈತರಿಗೂ ಅನುಕೂಲ ಆಗಬಹುದು ಎಂಬ ನಿರೀಕ್ಷೆಯಿದೆ.

  • ಭ್ರಷ್ಟಾಚಾರದ ವಿರುದ್ಧ ಸಮರ – 22 ತೆರಿಗೆ ಅಧಿಕಾರಿಗಳು ವಜಾ

    ಭ್ರಷ್ಟಾಚಾರದ ವಿರುದ್ಧ ಸಮರ – 22 ತೆರಿಗೆ ಅಧಿಕಾರಿಗಳು ವಜಾ

    – ಇತ್ತೀಚೆಗಷ್ಟೇ 27 ಅಧಿಕಾರಿಗಳನ್ನು ವಜಾ ಮಾಡಲಾಗಿತ್ತು

    ನವದೆಹಲಿ: ಭ್ರಷ್ಟಾಚಾರ ಹಾಗೂ ಗಂಭೀರ ಅಕ್ರಮ ಎಸಗಿದ ಆರೋಪ ಹೊಂದಿದ್ದ 22 ತೆರಿಗೆ ಅಧಿಕಾರಿಗಳನ್ನು ಕೇಂದ್ರ ಸರ್ಕಾರ ವಜಾ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

    ಭ್ರಷ್ಟಾಚಾರ ಕಿತ್ತೊಗೆಯಲು ಪ್ರಧಾನಿ ಮೋದಿಯವರ ವ್ಯವಸ್ಥೆಯ ಶುದ್ಧೀಕರಣದ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇತ್ತೀಚೆಗಷ್ಟೇ ಹಣಕಾಸು ಸಚಿವಾಲಯ 12 ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳನ್ನು ಸೇರಿ ಕಂದಾಯ ಇಲಾಖೆಯ ಒಟ್ಟು 27 ಹಿರಿಯ ಅಧಿಕಾರಿಗಳನ್ನು ವಜಾ ಮಾಡಿ ಕ್ರಮ ಕೈಗೊಂಡಿತ್ತು.

    ಇದೀಗ ಕೇಂದ್ರ ನೇರ ತೆರಿಗೆ ಮತ್ತು ಸೀಮಾ ಸುಂಕ ಮಂಡಳಿ(ಸಿಬಿಐಸಿ) ಇದೀಗ ಸುಪರಿಂಟೆಂಡೆಂಟ್ ಹಾಗೂ ಆಡಳಿತಾಧಿಕಾರಿ ದರ್ಜೆಯ 22 ಹಿರಿಯ ಅಧಿಕಾರಿಗಳನ್ನು ಮೂಲಭೂತ ನಿಯಮ 56(ಜೆ) ಅಡಿ ಭಷ್ಟಾಚಾರ, ಇತರ ಆರೋಪಗಳು ಹಾಗೂ ಸಿಬಿಐ ಬಲೆಗೆ ಬಿದ್ದಿದ್ದರಿಂದ ಅವರು ಕಡ್ಡಾಯ ನಿವೃತ್ತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

    ಈ ಮೂಲಕ ಭ್ರಷ್ಟಾಚಾರ ಹಾಗೂ ಇತರ ಗಂಭೀರ ಆರೋಪಗಳನ್ನು ಮಾಡಿದ ಅಧಿಕಾರಿಗಳಿಗೆ ಕೇವಲ ನೋಟಿಸ್ ಹಾಗೂ ಸಮನ್ಸ್ ನೀಡುವ ಸಂಸ್ಕೃತಿಗೆ ಸರ್ಕಾರ ತಿಲಾಂಜಲಿ ಹಾಡಿದ್ದು, ಭ್ರಷ್ಟಾಚಾರದಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಈ ಕುರಿತು ಖಡಕ್ ಎಚ್ಚರಿಕೆ ನೀಡಿದ್ದು, ಅಕ್ಟೋಬರ್ 1 ರಿಂದ ಆದಾಯ ತೆರಿಗೆ ಅಧಿಕಾರಿಗಳ ಎಲ್ಲ ನೋಟಿಸ್, ಸಮನ್ಸ್ ಹಾಗೂ ಆದೇಶಗಳು ಕೇಂದ್ರೀಕೃತ ಕಂಪ್ಯೂಟರ್ ವ್ಯವಸ್ಥೆಯ ಮೂಲಕ ನೀಡಲಾಗುವುದು. ಅಲ್ಲದೆ, ಕಂಪ್ಯೂಟರ್ ದಾಖಲೆಗಳು ವಿಶೇಷ ಗುರುತಿನ ಸಂಖ್ಯೆಯನ್ನು ಹೊಂದಿರುತ್ತವೆ ಎಂದು ತಿಳಿಸಿದ್ದಾರೆ.

    ಕಂಪ್ಯೂಟರ್ ಜನರೇಟೆಡ್ ಡಿಐಎನ್ ಇಲ್ಲದೆ, ನಡೆಸಲಾಗುವ ಯಾವುದೇ ಸಂವಹನ ಕಾನೂನಿನಿಂದ ಹೊರಗುಳಿಯಲಿದೆ. ಅಲ್ಲದೆ, ಯಾವುದೇ ಕಂಪನಿ ಪ್ರತಿಕ್ರಿಯೆ ನೀಡಿದ ಮೂರು ತಿಂಗಳೊಳಗೆ ತೆರಿಗೆ ಇಲಾಖೆಯು ಆ ಪ್ರಕರಣವನ್ನು ನಿರ್ಧರಿಸದಿದ್ದಲ್ಲಿ ತೆರಿಗೆ ನೋಟಿಸ್ ತನ್ನ ಮೌಲ್ಯವನ್ನು ಕಳೆದುಕೊಳ್ಳಲಿದೆ ಎಂದು ಕಳೆದ ಬಾರಿಯ ಸುದ್ದಿಗೋಷ್ಠಿಯಲ್ಲಿ ನಿರ್ಮಲಾ ಸೀತಾರಾಮ್ ತಿಳಿಸಿದ್ದರು.

    ಇತ್ತೀಚೆಗೆ ನಿವೃತ್ತಿ ಹೊಂದಿದ ಪರೋಕ್ಷ ತೆರಿಗೆ ಹಾಗೂ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳನ್ನು ಈ ಹಿಂದೆ ಕೇಂದ್ರ ತನಿಖಾ ದಳ(ಸಿಬಿಐ)ದ ಅಧಿಕಾರಿಗಳು ಬಂಧಿಸಿದ್ದರು. ಇದರಲ್ಲಿ ಇನ್ನೂ ಕೆಲವರ ವಿಚಾರಣೆಯನ್ನು ನಡೆಸಲಾಗುತ್ತಿದೆ.

    22 ಅಧಿಕಾರಿಗಳಲ್ಲಿ 9 ಮಂದಿ ಭೋಪಾಲ್ ಮೂಲದವರಾಗಿದ್ದು, ಇವರು ಸಿಗರೇಟ್ ತಯಾರಿಕರೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಸಿಗರೇಟ್‍ಗಳನ್ನು ರಹಸ್ಯವಾಗಿ ಉತ್ಪಾದಿಸಲು ಅನುಮತಿ ನೀಡಿರುವುದು ಮತ್ತು ಅವುಗಳನ್ನು ಸರಬರಾಜು ಮಾಡಲು ಅನುಕೂಲ ಮಡಿಕೊಡುತ್ತಿದ್ದ ಎಂಬ ಆರೋಪ ಎದುರಿಸುತ್ತಿದ್ದಾರೆ.

    2003ರಲ್ಲಿ ಬೆಂಗಳೂರಿನ ಇನ್ನೊಬ್ಬ ಅಧಿಕಾರಿ ಮೊಬೈಲ್ ಸ್ಮಗ್ಲಿಂಗ್ ಹಾಗೂ ಕಂಪ್ಯೂಟರ್ ಬಿಡಿ ಭಾಗಗಳನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಲು ಸಂಚು ರೂಪಿಸಿದ್ದವರಿಗೆ ಸಹಾಯ ಮಾಡಿದ್ದರು. ಹೀಗಾಗಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯವು ಈ ವಸ್ತುಗಳನ್ನು ವಶಪಡಿಸಿಕೊಂಡು ಅಧಿಕಾರಿಯನ್ನು ವಜಾ ಮಾಡಲಾಗಿತ್ತು.

    ದೆಹಲಿಯ ಇನ್ನೊಂದು ಪ್ರಕರಣದಲ್ಲಿ, ದೆಹಲಿಯ ಜಿಎಸ್‍ಟಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ತೆರಿಗೆ ಅಧಿಕಾರಿಯೊಬ್ಬರು ಕಳೆದ ವರ್ಷ ದುಬೈನಿಂದ 1,200 ಗ್ರಾಂ. ತೂಕದ 10 ಬಾರ್ ಚಿನ್ನವನ್ನು ಕಳ್ಳಸಾಗಣೆ ಮಾಡಲು ಸಹಾಯ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದರು. ಇವರನ್ನು ಕಸ್ಟಮ್ಸ್ ಅಧಿಕಾರಿಗಳು ಹಿಡಿದಿದ್ದರು.

    ಹಣಕಾಸು ಇಲಾಖೆಯ 56 (ಜೆ) ನಿಯಮದ ಹಲವು ದಶಕಗಳಿಂದ ಅಸ್ವಿತ್ವದಲ್ಲಿದ್ದು ಇಲ್ಲಿಯವರೆಗೆ ಪರಿಣಾಮಕಾರಿಯಾಗಿ ಜಾರಿಯಾಗಿರಲಿಲ್ಲ. ಆದರೆ ಈಗ ಈ ನಿಯಮದ ಅಡಿ ನಿವೃತ್ತಿ ಪಡೆಯಲು ಸೂಚಿಸಿದ್ದು ಮಹತ್ವ ಎನಿಸಿಕೊಂಡಿದೆ.

  • ಭ್ರಷ್ಟಾಚಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ – 12 ಉನ್ನತ ತೆರಿಗೆ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ

    ಭ್ರಷ್ಟಾಚಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ – 12 ಉನ್ನತ ತೆರಿಗೆ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ

    ನವದೆಹಲಿ: ಭ್ರಷ್ಟಾಚಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿರುವ ಮೋದಿ ಸರ್ಕಾರ 12 ಮಂದಿ ತೆರಿಗೆ ಅಧಿಕಾರಗಳಿಗೆ ಕಡ್ಡಾಯವಾಗಿ ನಿವೃತ್ತಿ ಪಡೆಯುವಂತೆ ಸೂಚಿಸಿದೆ.

    ಭಾರತೀಯ ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ, ಮುಖ್ಯ ಕಮೀಷನರ್ ಸ್ಥಾನದಲ್ಲಿರುವ ಹಿರಿಯ ಅಧಿಕಾರಗಳು, ಹಣಕಾಸು ಸಚಿವಾಲಯದ ಪ್ರಧಾನ ಆಯುಕ್ತರು ಮತ್ತು ಆದಾಯ ತೆರಿಗೆ ಇಲಾಖೆಯ ಕಮೀಷನರ್ ಸೇರಿ ಒಟ್ಟು 12 ಜನ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ಪಡೆಯುವಂತೆ ಸೂಚಿಸಿದೆ.

    ಈ 12 ಅಧಿಕಾರಿಗಳ ಪೈಕಿ ಕೆಲವರ ಮೇಲೆ ಭ್ರಷ್ಟಾಚಾರ ಮತ್ತು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪವಿದೆ. ಕೆಲವರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಗಂಭೀರ ಸ್ವರೂಪದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆಯ 56 (ಜೆ) ನಿಯಮದ ಅಡಿ ನಿವೃತ್ತಿ ಹೊಂದಬೇಕು ಎಂದು ಹಣಕಾಸು ಸಚಿವಾಲಯ ನಿರ್ದೇಶನ ಮಾಡಿದೆ.

    ಈ 12 ಜನ ಅಧಿಕಾರಿಗಳ ಪಟ್ಟಿಯಲ್ಲಿ ಜಂಟಿ ಆಯುಕ್ತ ಶ್ರೇಣಿಯ ಅಧಿಕಾರಿ ಅಶೋಕ್ ಅಗರ್‍ವಾಲ್ ಇದ್ದಾರೆ. ಸ್ವಯಂಘೋಷಿತ ದೇವಮಾನವ ಚಂದ್ರಸ್ವಾಮಿಗೆ ಸಹಾಯ ಮಾಡಿ ಭ್ರಷ್ಟಾಚಾರ ಎಸಗಿದ್ದಾರೆ ಎನ್ನುವ ಆರೋಪ ಅಶೋಕ್ ಅಗರ್‍ವಾಲ್ ಮೇಲಿದೆ. ಇಬ್ಬರು ಮಹಿಳಾ ಐಆರ್‍ಎಸ್ ಅಧಿಕಾರಿಗಳಿಗೆ ಲೈಂಗಿಕ ಕಿರುಕುಳದ ನೀಡಿದ್ದಾರೆ ಎಂಬ ಆರೋಪ ಬಂದಿರುವ ಎಸ್.ಕೆ ಶ್ರೀವಾಸ್ತವ ಅವರಿಗೂ ನಿವೃತ್ತಿ ಪಡೆಯುವಂತೆ ಸೂಚಿಸಲಾಗಿದೆ.

    ತನ್ನ ಮತ್ತು ತನ್ನ ಕುಟುಂಬದ ಸದಸ್ಯರ ಹೆಸರಿನಲ್ಲಿ ಅಕ್ರಮವಾಗಿ 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ 1985 ಬ್ಯಾಚಿನ ಐಆರ್‍ಎಸ್‍ನ ಅಧಿಕಾರಿ ಹೋಮಿ ರಾಜ್ವಂಶ್ ಮತ್ತು ತಮಗೆ ಬೇಕಾದ ರೀತಿಯಲ್ಲಿ ಆದೇಶಗಳನ್ನು ನೀಡುತ್ತಿದ್ದ ಆರೋಪದ ಮೇಲೆ ಬಿ.ಬಿ ರಾಜೇಂದ್ರ ಪ್ರಸಾದ್ ಅವರನ್ನು ಕೊಡ ನಿವೃತ್ತರಾಗಬೇಕು ಎಂದು ಹಣಕಾಸು ಸಚಿವಾಲಯ ಸೂಚನೆ ನೀಡಿದೆ.

    ಇವರನ್ನು ಬಿಟ್ಟರೆ ಅಜಯ್ ಕುಮಾರ್ ಸಿಂಗ್, ಅಲೋಕ್ ಕುಮಾರ್ ಮಿತ್ರ, ಚಂದನ್ ಸೈನಿ ಭಾರ್ತಿ, ಅಂಡಸು ರವಿಂದರ್, ವಿವೇಕ್ ಬಾತ್ರಾ, ಸ್ವತಭ ಸುಮನ್ ಮತ್ತು ರಾಮ್ ಕುಮಾರ್ ಭಾರ್ಗವ ಅವರು ಕೂಡ ಪಟ್ಟಿಯಾಲ್ಲಿದ್ದಾರೆ ಎಂದು ವರದಿಯಾಗಿದೆ.

    ಹಣಕಾಸು ಇಲಾಖೆಯ 56 (ಜೆ) ನಿಯಮದ ಹಲವು ದಶಕಗಳಿಂದ ಅಸ್ವಿತ್ವದಲ್ಲಿದ್ದು ಇಲ್ಲಿಯವರೆಗೆ ಪರಿಣಾಮಕಾರಿಯಾಗಿ ಜಾರಿಯಾಗಿರಲಿಲ್ಲ. ಆದರೆ ಈಗ ಈ ನಿಯಮದ ಅಡಿ ನಿವೃತ್ತಿ ಪಡೆಯಲು ಸೂಚಿಸಿದ್ದು ಮಹತ್ವ ಎನಿಸಿಕೊಂಡಿದೆ.

  • ಗ್ರಾಹಕರ ಖಾತೆಯಿಂದ ಬ್ಯಾಂಕ್‍ಗಳಿಗೆ 10 ಸಾವಿರ ಕೋಟಿ ರೂ. ಆದಾಯ!

    ಗ್ರಾಹಕರ ಖಾತೆಯಿಂದ ಬ್ಯಾಂಕ್‍ಗಳಿಗೆ 10 ಸಾವಿರ ಕೋಟಿ ರೂ. ಆದಾಯ!

    – ಕನಿಷ್ಠ ಮೊತ್ತ, ಎಟಿಎಂ ಶುಲ್ಕಕ್ಕೆ ದಂಡ ವಿಧಿಸಿದ್ದರಿಂದ ಆದಾಯ
    – ದಂಡ ವಸೂಲಿಯಲ್ಲಿ ಎಸ್‍ಬಿಐ ಟಾಪ್ 1

    ನವದೆಹಲಿ: ಉಳಿತಾಯ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ (ಕನಿಷ್ಠ ಮೊತ್ತ) ಮತ್ತು ಹೆಚ್ಚುವರಿ ಎಟಿಎಂ ಬಳಕೆಯ ಮೇಲೆ ದಂಡ ವಿಧಿಸಿದ್ದರಿಂದ ಮೂರು ವರ್ಷಗಳಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್‍ಗಳು ದಂಡದ ರೂಪದಲ್ಲಿ 10 ಸಾವಿರ ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಶಿವಪ್ರತಾಪ್ ಶುಕ್ಲಾ ಅವರು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

    ಜನಧನ್ ಯೋಜನೆಯ ಖಾತೆಗಳನ್ನು ಹೊರತುಪಡಿಸಿ ಉಳಿತಾಯ ಖಾತೆದಾರರು ಕನಿಷ್ಠ ಮೊತ್ತವನ್ನು ಹೊಂದಿರಲೇಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ. ಅಷ್ಟೇ ಅಲ್ಲದೆ ಬ್ಯಾಂಕ್‍ಗಳ ನಿಯಮದ ಪ್ರಕಾರ ಪ್ರತಿ ತಿಂಗಳು ಖಾತೆ ಹೊಂದಿರುವ ಬ್ಯಾಂಕ್ ಎಟಿಎಂನಿಂದ 5 ಬಾರಿ ಹಾಗೂ ಇತರೆ ಬ್ಯಾಂಕ್ ಎಟಿಎಂಗಳಿಂದ 3 ಬಾರಿ ಮಾತ್ರ ಹಣ ಪಡೆಯಲು ಅವಕಾಶವಿರುತ್ತದೆ. ಒಂದು ವೇಳೆ ಅದಕ್ಕಿಂತ ಹೆಚ್ಚು ಬಾರಿ ಎಟಿಎಂ ಬಳಸಿದರೆ ಪ್ರತಿ ಬಾರಿಯೂ 20 ರೂ. ದಂಡ ವಸೂಲಿ ಮಾಡಲಾಗುತ್ತಿದೆ. ಈ ಎರಡೂ ಮೂಲಗಳಿಂದ ಬ್ಯಾಂಕ್‍ಗಳು ದಂಡ ವಸೂಲಿ ಮಾಡುತ್ತಿವೆ.

    ಎಸ್‍ಬಿಐ ಟಾಪ್ 1:
    ಹೆಚ್ಚು ದಂಡ ವಸೂಲಿ ಮಾಡಿದ ಬ್ಯಾಂಕ್‍ಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‍ಬಿಐ) ಮೊದಲ ಸ್ಥಾನದಲ್ಲಿದೆ. 2017-18ರ ಹಣಕಾಸು ವರ್ಷದಲ್ಲಿ ಕನಿಷ್ಠ ಮೊತ್ತವನ್ನು ಕಾಯ್ದುಕೊಳ್ಳದ ಗ್ರಾಹಕರಿಂದ ದಂಡದ ರೂಪದಲ್ಲಿ 2,433.84 ಕೋಟಿ ರೂ. ಸಂಗ್ರಹಿಸಿದೆ. 2018ರ ಹಣಕಾಸು ವರ್ಷದಿಂದ ಸೆಪ್ಟೆಂಬರ್ ವರೆಗೆ ಎಸ್‍ಬಿಐ 459.88 ಕೋಟಿ ರೂ. ಹಣವನ್ನು ದಂಡದ ರೂಪದಲ್ಲಿ ಸಂಗ್ರಹಿಸಿದೆ.

    21 ಸಾರ್ವಜನಿಕ ವಲಯದಲ್ಲಿನ ಬ್ಯಾಂಕ್‍ಗಳು 2018-19ರ ಹಣಕಾಸು ವರ್ಷದ ಮೊದಲ ಆರು ತಿಂಗಳಲ್ಲಿಯೇ 1 ಸಾವಿರ ಕೋಟಿ ರೂ. ಹಣವನ್ನು ದಂಡದ ರೂಪದಲ್ಲಿ ಪಡೆದಿವೆ ಎಂದು ಶಿವಪ್ರತಾಪ್ ಶುಕ್ಲಾ ಮಾಹಿತಿ ನೀಡಿದ್ದಾರೆ.

    ವಾಣಿಜ್ಯ ಬ್ಯಾಂಕ್‍ಗಳಲ್ಲಿ ಮಾರ್ಚ್ 2017ರಂದು 150.21 ಕೋಟಿ ಉಳಿತಾಯ ಖಾತೆಯನ್ನು ತೆರೆಯಲಾಗಿತ್ತು. ಅದರಲ್ಲಿ 53.30 ಕೋಟಿ ಖಾತೆಗಳು ಜನಧನ್ ಯೋಜನೆಗೆ ಒಳಪಟ್ಟಿದ್ದು, ಉಳಿದ 97 ಕೋಟಿ ಖಾತೆದಾರರಿಂದ ಮಾತ್ರ ದಂಡವನ್ನು ಪಡೆಯಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

    ಕೆಲವು ಬ್ಯಾಂಕ್‍ಗಳು ಪ್ರತಿ ತಿಂಗಳು 8 ಬಾರಿ ಎಟಿಎಂ ಬಳಕೆಗೆ ಅವಕಾಶ ನೀಡಿರುತ್ತವೆ. ಅದನ್ನು ಮೀರಿ ಹಣ ಪಡೆದರೆ ಪ್ರತಿ ಬಾರಿಯೂ 20 ರೂ. ಶುಲ್ಕ ವಸೂಲಿ ಮಾಡಲಾಗುತ್ತದೆ. ಹಾಗೇ ವಸೂಲಿ ಮಾಡಿದ ಶುಲ್ಕದ ಮೊತ್ತ 850 ಕೋಟಿ ರೂ. ಆಗಿದ್ದು, ಈಗಾಗಲೇ ಸಾರ್ವಜನಿಕ ವಲಯದ ಬ್ಯಾಂಕ್‍ಗಳು ಮಿನಿಮಮ್ ಬ್ಯಾಲೆನ್ಸ್ ಹೊಂದಿರದ ಉಳಿತಾಯ ಖಾತೆಗಳನ್ನು ಮುಚ್ಚಿವೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.

    ಕನಿಷ್ಠ ಮೊತ್ತ ಹೊಂದಿರದ ಖಾತೆದಾರರಿಗೆ ಎಷ್ಟು ದಂಡ ವಿಧಿಸಬೇಕು ಎನ್ನುವ ನಿರ್ಧಾರವನ್ನು ಆರ್‍ಬಿಐ ಬ್ಯಾಂಕಿನ ಬೋರ್ಡ್ ಗೆ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.

    2017ರ ಮೊದಲು ಕನಿಷ್ಠ ಮೊತ್ತವನ್ನು ಹೊಂದಿರದೇ ಇದ್ದರೆ ಯಾವುದೇ ಶುಲ್ಕ ವಿಧಿಸುತ್ತಿರಲಿಲ್ಲ. ಎಸ್‍ಬಿಐ 6 ವರ್ಷದ ಬಳಿಕ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಹೊಂದಿರದ ಗ್ರಾಹಕರಿಂದ ದಂಡ ವಿಧಿಸುವ ನಿರ್ಧಾರವನ್ನು ತೆಗದುಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೇಟ್ಲಿಗೆ ವಿಶ್ರಾಂತಿ – ಪಿಯೂಷ್ ಗೋಯಲ್‍ಗೆ ಹಣಕಾಸು ಹೊಣೆ

    ಜೇಟ್ಲಿಗೆ ವಿಶ್ರಾಂತಿ – ಪಿಯೂಷ್ ಗೋಯಲ್‍ಗೆ ಹಣಕಾಸು ಹೊಣೆ

    ನವದೆಹಲಿ: ಸಚಿವ ಅರುಣ್ ಜೇಟ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾದ ಹಿನ್ನೆಲೆಯಲ್ಲಿ ಪಿಯೂಷ್ ಗೋಯಲ್ ಅವರಿಗೆ ಹೆಚ್ಚುವರಿಯಾಗಿ ಹಣಕಾಸು ಸಚಿವಾಲಯದ ಹೊಣೆಯನ್ನು ನೀಡಲಾಗಿದೆ.

    ದೆಹಲಿಯ ಏಮ್ಸ್ ನಲ್ಲಿ 65 ವರ್ಷದ ಅರುಣ್ ಜೇಟ್ಲಿ ಅವರಿಗೆ ಯಶಸ್ವಿಯಾಗಿ ಇಂದು ಶಸ್ತ್ರ ಚಿಕಿತ್ಸೆ ನಡೆದಿತ್ತು. ಮೂತ್ರಪಿಂಡ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜೇಟ್ಲಿ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ಆಸ್ಪತ್ರೆ ತಿಳಿಸಿದೆ.

    ಕಳೆದ ಒಂದು ತಿಂಗಳಿನಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ ಜೇಟ್ಲಿ ಕಳೆದ ಶನಿವಾರ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿಂದೆ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ 2014ರ ಸೆಪ್ಟೆಂಬರ್ ನಲ್ಲಿ ಬ್ಯಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆದಿತ್ತು.

    ಪ್ರಸ್ತುತ ಪಿಯೂಷ್ ಗೋಯಲ್ ರೈಲ್ವೇ ಮತ್ತು ಕಲ್ಲಿದ್ದಲು ಇಲಾಖೆಯನ್ನು ನೋಡಿಕೊಳ್ಳುತ್ತಿದ್ದು, ಈಗ ಜೇಟ್ಲಿ ಚೇತರಿಸಿಗೊಳ್ಳುವವರೆಗೂ ಹಣಕಾಸು ಸಚಿವಾಲಯವನ್ನು ನೋಡಿಕೊಳ್ಳಲಿದ್ದಾರೆ.

    ಸ್ಮೃತಿ ಇರಾನಿ ಹೊಂದಿದ್ದ ಪ್ರಸಾರ ಖಾತೆಯನ್ನು ಕ್ರೀಡಾ ಸಚಿವರಾಗಿದ್ದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಸ್ಮೃತಿ  ಇರಾನಿ ಜವಳಿ ಖಾತೆಯಲ್ಲಿ ಮುಂದುವರಿಯಲಿದ್ದಾರೆ. ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆಯನ್ನು ನೋಡಿಕೊಳ್ಳುತ್ತಿದ್ದ ಎಸ್.ಎಸ್ ಅಹ್ಲುವಾಲಿಯ ಅವರಿಗೆ ಹೆಚ್ಚುವರಿಯಾಗಿ ಎಲೆಕ್ಟ್ರಾನಿಕ್ಸ್ ಖಾತೆಯನ್ನು ನೀಡಲಾಗಿದೆ.