Tag: ಹತ್ಯೆ ಪ್ರಕರಣ

  • ಕಲಬುರ್ಗಿ ಹತ್ಯೆ ಪ್ರಕರಣ – ಸಾಕ್ಷಿ ನುಡಿದ ಮಗಳು, ಪತ್ನಿ

    ಕಲಬುರ್ಗಿ ಹತ್ಯೆ ಪ್ರಕರಣ – ಸಾಕ್ಷಿ ನುಡಿದ ಮಗಳು, ಪತ್ನಿ

    ಧಾರವಾಡ: ಹಿರಿಯ ಸಾಹಿತಿ ಡಾ. ಎಂಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ 6 ಆರೋಪಿಗಳ ಪೈಕಿ ಐವರನ್ನು ಗುರುವಾರ ಧಾರವಾಡ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಸಾಕ್ಷಿ ವಿಚಾರಣೆ ನಡೆಸಲಾಯಿತು.

    2015ರ ಆಗಸ್ಟ್ 30ರಂದು ಬೆಳಗಿನ ಜಾವ ಕಲಬುರ್ಗಿ ಧಾರವಾಡದ ಕಲ್ಯಾಣನಗರದಲ್ಲಿರುವ ತಮ್ಮ ಮನೆಯಲ್ಲಿ ಕುಳಿತಿದ್ದಾಗ, ಮನೆಗೆ ಬಂದ ಹಂತಕರು ಬಾಗಿಲು ಬಡಿದಿದ್ದರು. ಈ ವೇಳೆ ಹೊರಗೆ ಬಂದು ಬಾಗಿಲು ತೆಗೆಯುತ್ತಿದ್ದಂತೆಯೇ ಕಲಬುರ್ಗಿ ತಲೆಗೆ ಗುಂಡು ಹೊಡೆದು ಆರೋಪಿಗಳು ಬೈಕ್ ಹತ್ತಿ ಪರಾರಿಯಾಗಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಆರೋಪಿಗಳಾದ ಹುಬ್ಬಳ್ಳಿಯ ಅಮಿತ್ ಬದ್ದಿ, ಗಣೇಶ ಮಿಸ್ಕಿನ್, ಬೆಳಗಾವಿಯ ಪ್ರವೀಣ್ ಚತುರ್ ಹಾಗೂ ವಾಸುದೇವ್ ಸೂರ್ಯವಂಶಿ ಸೇರಿದಂತೆ ಇನ್ನೊರ್ವನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ಜೇಮ್ಸ್ ರಿಲೀಸ್ ಬಳಿಕ ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ

    ಕಣ್ಣೀರು ಹಾಕುತ್ತಾ ಸಾಕ್ಷ್ಯ ನುಡಿದ ಕಲಬುರ್ಗಿ ಪುತ್ರಿ: 
    ಈ ವೇಳೆ ಪ್ರಕರಣದಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿರುವ ಹಾಗೂ ಹತ್ಯೆ ನಡೆದ ದಿನ ಅಂದು ಮನೆಯಲ್ಲಿದ್ದ ಕಲಬುರ್ಗಿ ಪುತ್ರಿ ರೂಪದರ್ಶಿಗೆ ಆರೋಪಿಗಳನ್ನು ಗುರುತಿಸುವಂತೆ ಸೂಚಿಸಲಾಯಿತು. ಇದಕ್ಕೂ ಮೊದಲು ಅಂದು ನಡೆದ ಘಟನೆಯನ್ನು ನ್ಯಾಯಾಧೀಶರ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕಲಬುರ್ಗಿ ಪುತ್ರಿ ತಂದೆಯನ್ನು ನೆನೆದು ನ್ಯಾಯಾಧೀಶರ ಎದುರು ಕಣ್ಣೀರು ಹಾಕಿದರು.

    ಅಂದು ಗುಂಡು ಹೊಡೆದು ಪರಾರಿಯಾಗಿದ್ದ ಗಣೇಶ ಮಿಸ್ಕಿನ್‌ನನ್ನು ಗುರುತಿಸುವ ವೇಳೆ ರೂಪದರ್ಶಿ ಕಣ್ಣೀರು ಹಾಕಿ ಬಳಿಕ ಆಕ್ರೋಶದಿಂದ ಇವನೇ ಗುಂಡು ಹೊಡೆದಿದ್ದು ಎಂದು ಹೇಳಿದರು. ಹೊರಗಡೆ ರಸ್ತೆಯಲ್ಲಿ ಬೈಕ್ ಮೇಲೆ ನಿಂತಿದ್ದ ಮತ್ತೋರ್ವ ಆರೋಪಿ ಪ್ರವೀಣ್ ಚತುರ್‌ನನ್ನು ಕೂಡಾ ರೂಪದರ್ಶಿ ಗುರುತಿಸಿದರು.

    ಈ ವಿಚಾರದ ಕುರಿತು ಸಮಗ್ರವಾದ ವಾದ-ವಿವಾದ ನಡೆದ ಬಳಿಕ ಕಲಬುರ್ಗಿ ಪತ್ನಿ ಉಮಾದೇವಿಯ ಸಾಕ್ಷ್ಯದ ವಿಚಾರಣೆಯನ್ನೂ ನಡೆಸಲಾಯಿತು. ಈ ವೇಳೆ ಸಾಕ್ಷಿಗಳನ್ನು ಏಕಕಾಲಕ್ಕೆ ಕ್ರಾಸ್ ಮಾಡಲು ತಮಗೆ ಸಿಆರ್‌ಪಿಸಿ 231 ಸೆಕ್ಷನ್ ಅಡಿಯಲ್ಲಿ ಅನುವು ಮಾಡಿಕೊಡುವಂತೆ ಆರೋಪಿಗಳ ಪರ ವಕೀಲ ಅರ್ಜಿ ಸಲ್ಲಿಸಿದರು. ಇದನ್ನೂ ಓದಿ: ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ಅದನ್ನು ಸರಿಪಡಿಸಿ ಪರಿಹಾರ ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ: ಖರ್ಗೆ

    ವಿಚಾರಣೆಯಲ್ಲಿ ಕಲಬುರ್ಗಿ ಕೊಲೆ ನಡೆದ ಸಮಯದಲ್ಲಿ ಅವರು ಧರಿಸಿದ್ದ ಶರ್ಟ್, ಬನಿಯನ್, ಪ್ಯಾಂಟ್, ಗುಂಡುಗಡಿಗೆ ಸೇರಿದಂತೆ ಅಂದಿನ ಕೆಲವೊಂದು ವಸ್ತುಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಬಳಿಕ ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಟ್ಟ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು, ವಿಚಾರಣೆಯನ್ನು ಏಪ್ರಿಲ್ 5ಕ್ಕೆ ಮುಂದೂಡಿದರು.

  • ಹೆಣಗಳ ಮೇಲೆ ರಾಜಕೀಯ ಮಾಡಿದ್ದ ಬಿಜೆಪಿ ನಾಯಕರು ಈಗ ಕತ್ತೆ ಕಾಯುತ್ತಿದ್ದೀರಾ: ಪ್ರಮೋದ್ ಮುತಾಲಿಕ್

    ಹೆಣಗಳ ಮೇಲೆ ರಾಜಕೀಯ ಮಾಡಿದ್ದ ಬಿಜೆಪಿ ನಾಯಕರು ಈಗ ಕತ್ತೆ ಕಾಯುತ್ತಿದ್ದೀರಾ: ಪ್ರಮೋದ್ ಮುತಾಲಿಕ್

    – ಗೋ ರಕ್ಷಕ ಶಿವು ಹತ್ಯೆ ಪ್ರಕರಣ ಹಿನ್ನೆಲೆ ಬಿಜೆಪಿ ವಿರುದ್ಧ ಕಿಡಿ

    ಯಾದಗಿರಿ: ಚುನಾವಣೆಯಲ್ಲಿ ಹೆಣಗಳ ಮೇಲೆ ರಾಜಕೀಯ ಮಾಡಿದ ಬಿಜೆಪಿ ಅವರು ಈಗ ಕತ್ತೆ ಕಾಯುತ್ತಿದ್ದೀರಾ? ಚುನಾವಣೆ ಬಳಿಕ ಬಾಯಿ ಬಂದಾಯ್ತ ಎಂದು ಗೋ ರಕ್ಷಕ ಶಿವು ಹತ್ಯೆ ಪ್ರಕರಣದಲ್ಲಿ ಧ್ವನಿ ಎತ್ತದ ಬಿಜೆಪಿ ವಿರುದ್ಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚಿಗೆ ಬೆಳಗಾವಿಯಲ್ಲಿ ಗೋ ರಕ್ಷಕ ಶಿವಕುಮಾರ್ ಉಪ್ಪಾರರನ್ನು ಕೊಲೆ ಮಾಡಲಾಗಿದೆ. ಇದರ ಬಗ್ಗೆ ಯಾವುದೇ ತನಿಖೆ ನಡೆಸದೇ ಪ್ರಕರಣ ಮುಚ್ಚು ಹಾಕುವ ಪ್ರಯತ್ನ ನಡೆಯತ್ತಿದೆ. ಬಿಜೆಪಿ ಎಂಎಲ್‍ಎ, ಎಂಪಿಗಳು ಏನೂ ಕತ್ತೆ ಕಾಯುತ್ತಿದ್ದೀರಾ? ಚುನಾವಣೆ ವೇಳೆ ಹೆಣಗಳ ಮೇಲೆ ರಾಜಕೀಯ ಮಾಡುತ್ತೀರಾ? ಚುನಾವಣೆ ಮುಗಿದ ಬಳಿಕ ನಿಮ್ಮ ಬಾಯಿ ಬಂದಾಯ್ತ? ಒಬ್ಬರಾದರೂ ಈ ಪ್ರಕರಣದ ಬಗ್ಗೆ ಧ್ವನಿ ಎತ್ತಿದ್ದೀರಾ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ಇದೇ ಮುಸ್ಲಿಂ ಸಮುದಾಯದವರಿಗೆ ಆಗಿದ್ದರೆ ಕೋಮುವಾದಿಗಳ ಕೃತ್ಯ, ಶ್ರೀರಾಮಸೇನೆ, ಭಜರಂಗದಳ ಕೃತ್ಯ ಎಂದು ಬೊಬ್ಬೆ ಹೊಡೆಯುತ್ತಿದ್ದರು. ಈ ಪ್ರಕರಣವನ್ನು ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸಿದರೆ ರಾಜ್ಯಾದ್ಯಂದ ಉಗ್ರ ಹೋರಾಟ ಮಾಡಬೇಕುತ್ತದೆ ಎಂದು ಎಚ್ಚರಿಕೆ ನೀಡಿದರು.

    ಗೋ ರಕ್ಷಕ ಶಿವು ಪ್ರಕರಣವನ್ನು ಸರಿಯಾದ ತನಿಖೆ ನಡೆಸಿ, ಸತ್ಯಾಂಶ ಬಹಿರಂಗ ಪಡಿಸದೆ ಹೋದರೆ ಬಿಜೆಪಿ ಶಾಸಕರು ಹಾಗೂ ಸಂಸದರ ಮನೆ ಮುಂದೆ ಧರಣಿ ಕೂರುತ್ತೇವೆ ಎಂದು ಅವರು ತಿಳಿಸಿದರು.

  • ಮೋದಿ ಹತ್ಯೆಗೆ ಸಂಚು: ವರವರ ರಾವ್ ಬಂಧನಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ

    ಮೋದಿ ಹತ್ಯೆಗೆ ಸಂಚು: ವರವರ ರಾವ್ ಬಂಧನಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ

    ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರಸಂ ಸಂಸ್ಥಾಪಕ ಮತ್ತು ಕ್ರಾಂತಿಕಾರಿ ಬರಹಗಾರ ವರವರ ರಾವ್ ಅವರನ್ನು ಪುಣೆ ಪೊಲೀಸರು ಬಂಧಿಸಿದ್ದು, ಈಗ ದೆಹಲಿ ಹೈಕೋರ್ಟ್ ಬಂಧನಕ್ಕೆ ತಡೆಯಾಜ್ಞೆ ನೀಡಿದೆ.

    ಇಂದು ಹೈದರಾಬಾದ್‍ಗೆ ಬಂದಿದ್ದ ಪುಣೆ ಪೊಲೀಸ್ ತಂಡವು, ಸ್ಥಳೀಯ ಪೊಲೀಸರ ಸಹಾಯ ಪಡೆದು, ನಗರದ ವಿವಿಧೆಡೆ ವರವರ ರಾವ್ ಪತ್ತೆಗಾಗಿ ಶೋಧಕಾರ್ಯ ನಡೆಸಿದ್ದರು. ಚಿಕ್ಕಡ್‍ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಜವಾಹರ್ ನಗರದಲ್ಲಿರುವ ವರವರ ರಾವ್ ಮನೆಗೆ 20ಕ್ಕೂ ಹೆಚ್ಚು ಪುಣೆ ಮಫ್ತಿ ವೇಷದ ಪೊಲೀಸರು ಭೇಟಿ ನೀಡಿದ್ದರು. ಈ ವೇಳೆ ಕೆಲ ಹೊತ್ತು ರಾವ್ ಅವವನ್ನು ವಿಚಾರಣೆಗೆ ಒಳಪಡಿಸಿ ಬಳಿಕ ಬಂಧಿಸಿದ್ದರು.

    ವರವರ ರಾವ್ ಹಾಗೂ ಕುಟುಂಬಸ್ಥರ ಮನೆ ಮೇಲೆ ಅಷ್ಟೇ ಅಲ್ಲದೆ ಪತ್ರಕರ್ತರಾದ ಕೆ.ವಿ.ಕುಮಾರನಾಥ್, ಕ್ರಾಂತಿ ತೆಕುಲ, ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕೆ.ಸತ್ಯನಾರಾಯಣ ಅವರ ಮನೆ ಮೇಲೂ ಪೊಲೀಸರು ದಾಳಿ ಮಾಡಿ, ಶೋಧ ನಡೆಸಿದ್ದಾರೆ ಎಂದು ವರದಿಯಾಗಿದೆ.

    ಏನಿದು ಪ್ರಕರಣ?
    ಪ್ರಧಾನಿ ನರೇಂದ್ರ ಮೋದಿ ಹತ್ಯೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ಚುರುಕು ಕಾರ್ಯಾಚರಣೆ ನಡೆಸಿದ್ದರು. ಇತ್ತೀಚೆಗೆ ಮಾನವಹಕ್ಕು ಕಾರ್ಯಕರ್ತ ರೋನಾ ಜಾಕೋಬ್ ವಿಲ್ಸನ್ ಅವರ ದೆಹಲಿಯ ಮನೆಯಲ್ಲಿ ಕೆಲವು ಪತ್ರಗಳನ್ನು ವಶಕ್ಕೆ ಪಡೆದಿದ್ದರು. ಆ ಪತ್ರಗಳಲ್ಲಿ ವರವರ ರಾವ್ ಹೆಸರು ಉಲ್ಲೇಖವಾಗಿದೆ. ಅವರನ್ನು ಬಂಧಿಸಲು ಅನುಮತಿ ನೀಡುವಂತೆ ಕೋರ್ಟ್‍ಗೆ ಮನವಿ ಮಾಡಿಕೊಂಡಿದ್ದರು. ಇನ್ನು ರಾವ್ ನಕ್ಸಲ್ ಸಂಘಟನೆಗಳಿಗೆ ಹಾಗೂ ಅವರು ನಡೆಸುತ್ತಿರುವ ದಾಳಿಗೆ ಆರ್ಥಿಕ ನೆರವು ನೀಡುತ್ತಿದ್ದರು ಎನ್ನುವ ಆರೋಪವೂ ಕೇಳಿ ಬಂದಿದೆ.

    ವರವರ ರಾವ್ ಬಂಧನಕ್ಕೆ ಖಂಡಿಸಿ ಎಡಪಕ್ಷಗಳ ನಾಯಕರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv