Tag: ಹನಿಟ್ರ್ಯಾಪ್ ಪ್ರಕರಣ

  • ಮಂಡ್ಯ ಹನಿಟ್ರ್ಯಾಪ್ ಕೇಸ್‍ಗೆ ಟ್ವಿಸ್ಟ್ – ರೂಮಿನಲ್ಲಿದ್ದ ಯುವತಿಯಿಂದಲೇ ಜಗನ್ನಾಥ ಶೆಟ್ಟಿಗೆ ಖೆಡ್ಡಾ

    ಮಂಡ್ಯ ಹನಿಟ್ರ್ಯಾಪ್ ಕೇಸ್‍ಗೆ ಟ್ವಿಸ್ಟ್ – ರೂಮಿನಲ್ಲಿದ್ದ ಯುವತಿಯಿಂದಲೇ ಜಗನ್ನಾಥ ಶೆಟ್ಟಿಗೆ ಖೆಡ್ಡಾ

    ಮಂಡ್ಯ: ಮಂಡ್ಯ ಚಿನ್ನದಂಗಡಿ ಮಾಲೀಕನ ಹನಿಟ್ರ್ಯಾಪ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಇದೀಗ ಜಗನ್ನಾಥ್ ಶೆಟ್ಟಿ ಕೊಟ್ಟ ದೂರು ಸುಳ್ಳು, ವೀಡಿಯೋದಲ್ಲಿರುವುದು ಸುಳ್ಳು ಎಂದು ಪೊಲೀಸ್ ಉನ್ನತ ಮೂಲಗಳು ಮಾಹಿತಿ ನೀಡಿವೆ.

    mandya honeytrap

    ಹೌದು. ಜಗನ್ನಾಥ್ ಶೆಟ್ಟಿಯನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ಹಲವು ದಿನಗಳಿಂದ ಪ್ಲಾನ್ ನಡೆದಿದೆ. ಜಗನ್ನಾಥ್ ಶೆಟ್ಟಿ ಜೊತೆಗೆ ಲಾಡ್ಜ್‌ನಲ್ಲಿ ಸಿಕ್ಕಿಕೊಂಡಿದ್ದ ಯುವತಿ ಕೂಡ ಸಲ್ಮಾ ಭಾನು ಆಂಡ್ ಟೀಂನ ಸದಸ್ಯೆಯಾಗಿದ್ದಾಳೆ. ಆ ಯವತಿ ಮೂಲಕವೇ ಜಗನ್ನಾಥ್ ಶೆಟ್ಟಿಗೆ ಖೆಡ್ಡಾ ತೋಡಿದ್ದಾರೆ. ಇದನ್ನೂ ಓದಿ:  ಮಂಡ್ಯ ಹನಿಟ್ರ್ಯಾಪ್ ಕೇಸ್‍ಗೆ ಟ್ವಿಸ್ಟ್ – ದೂರು ಕೊಟ್ಟಿರೋದೇ ಬೇರೆ, ರೂಮ್ ಒಳಗಡೆ ನಡೆದಿದ್ದೇ ಬೇರೆ

    mandya honeytrap

    ಫೋನ್ ಮೂಲಕ ಯುವತಿ ಜಗನ್ನಾಥ ಶೆಟ್ಟಿ ಸ್ನೇಹ ಸಂಪಾದಿಸಿದ್ದಳು. ಯುವತಿಗೆ ತಾನು ಕೂಡ ಲೆಕ್ಚರ್ ಎಂದು ಜಗನ್ನಾಥ್ ಶೆಟ್ಟಿ ಹೇಳಿಕೊಂಡಿದ್ದನು. ಶೆಟ್ಟಿ ಹೇಳಿದ್ದ ಸುಳ್ಳನ್ನೇ ಈ ಗ್ಯಾಂಗ್ ತಮ್ಮ ಬಂಡವಾಳವಾಗಿ ಮಾಡಿಕೊಂಡಿತ್ತು. ಜಗನ್ನಾಥ ಶೆಟ್ಟಿ ಹಿನ್ನೆಲೆ ಗೊತ್ತೆ ಇಲ್ಲ ಎನ್ನುವಂತೆ ನಾಜುಕಾಗಿ ಮಾತನಾಡಿ ಯುವತಿ ಡ್ರಾಮಾ ಮಾಡಿ ಆತನನ್ನು ಲಾಕ್ ಮಾಡಿದ್ದಾಳೆ. ಇದನ್ನೂ ಓದಿ: ಹನಿಟ್ರ್ಯಾಪ್ ಸುಳಿಗೆ ಸಿಲುಕಿ 50 ಲಕ್ಷ ರೂ. ಕಳೆದುಕೊಂಡ ಚಿನ್ನದ ವ್ಯಾಪಾರಿ

    mandya honeytrap

    ಯುವತಿ ಜೊತೆಗೆ ಸಲುಗೆ ಬೆಳೆಯುತ್ತಿದ್ದಂತೆ ಜಗನ್ನಾಥ್ ಶೆಟ್ಟಿ ಲಾಡ್ಜ್‍ಗೆ ಕರೆದಿದ್ದನು. ಶೆಟ್ಟಿ ಆಹ್ವಾನ ಬಳಿಕ ಆತನನ್ನು ಲಾಡ್ಜ್‍ನಲ್ಲಿ ಲಾಕ್ ಮಾಡಲು ಪ್ಲಾನ್ ನಡೆದಿತ್ತು. ಯುವತಿ ರೂಮಿಗೆ ಹೋದ ಕೆಲವೇ ಕ್ಷಣಗಳಲ್ಲಿ ಸಲ್ಮಾ ಮತ್ತು ಟೀಂ ಎಂಟ್ರಿಕೊಟ್ಟಿದೆ. ನಂತರ ವ್ಯಕ್ತಿಯೋರ್ವ ಅವನ್ಯಾರು ಹೇಳು, ಇಲ್ಲಿಗೆ ಏಕೆ ಬಂದೆ ಎಂದು ಪ್ರಶ್ನಿಸಿದಾಗ “ಫ್ರೆಂಡ್ ಮನೆಗೆ ಅಂತ ಹೇಳಿ ಇಲ್ಲಿಗೆ ಬಂದೆ ಟ್ಯೂಷನ್ ಮುಗಿಸಿ ವಾಪಸ್ ಹೋಗುತ್ತೇನೆ. ಅವರು ನಮ್ಮ ಲೆಕ್ಚರ್, ಅವರಿಗೆ ಏನೂ ಮಾಡಬೇಡಿ ಚಿಕ್ಕಪ್ಪ, ಚಿಕ್ಕಪ್ಪ” ಎಂದು ಶೆಟ್ಟರ ಮುಂದೆ ಯುವತಿ ಹೈಡ್ರಾಮಾ ಮಾಡಿದ್ದಾಳೆ. ಜಗನ್ನಾಥ್ ಶೆಟ್ಟಿಗೆ ಹೊಡೆಯಲು ಮುಂದಾದಾಗ ತಡೆದು ತನ್ನ ಮೇಲೆ ಜಗನ್ನಾಥ್ ಶೆಟ್ಟಿಗೆ ಅನುಕಂಪ ಬರುವಂತೆ ಮಾಡಿದ್ದಾಳೆ. ಜೊತೆಗೆ ವ್ಯಕ್ತಿ ಯುವತಿಗೆ ಹೊಡೆದು, ಗದರಿಸಿ ಶೆಟ್ಟಿಗೆ ನಂಬಿಕೆ ಬರುವಂತೆ ನಟಿಸಿದ್ದ.

    ಯುವತಿ ಚಿಕ್ಕಪ್ಪ ಎಂದು ನಟಿಸಿ ಜಗನ್ನಾಥ ಶೆಟ್ಟಿಯನ್ನು ಗ್ಯಾಂಗ್ ಲಾಕ್ ಮಾಡಿದ್ದಲ್ಲದೇ ಈ ವೀಡಿಯೋವನ್ನು ರೆಕಾರ್ಡ್ ಮಾಡಿ ಹಣಕ್ಕಾಗಿ ಜಗನ್ನಾಥ್ ಶೆಟ್ಟಿ ಬಳಿ ಬೇಡಿಕೆ ಇಟ್ಟಿದೆ. ಇದರಿಂದ ಭಯಭೀತನಾಗಿ ನಿಜಕ್ಕೂ ಯುವತಿಯ ಚಿಕ್ಕಪ್ಪನೇ ಬಂದಿದ್ದಾನೆಂದು ನಂಬಿ ಲಕ್ಷ, ಲಕ್ಷ ಹಣಕೊಟ್ಟವನ್ನು ಗ್ಯಾಂಗ್‍ಗೆ ಜಗನ್ನಾಥ್ ಶೆಟ್ಟಿ ನೀಡಿದ್ದಾನೆ. ಆದರೆ ಎಷ್ಟೇ ಹಣ ಕೊಟ್ಟರೂ ಇವರ ಹಾವಳಿ ನಿಲ್ಲದೇ ಇದ್ದಾಗ ಜಗನ್ನಾಥ್ ಶೆಟ್ಟಿ ಪೊಲೀಸರ ಮೊರೆ ಹೋಗಿದ್ದಾನೆ. ಫೆಬ್ರುವರಿ 26ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಆಗಸ್ಟ್ 19 ರಂದು ಮರ್ಯಾದೆಗೆ ಅಂಜಿ ಅಪಹರಣ ಮತ್ತು ಬ್ಲಾಕ್ ಮೇಲ್ ದೂರನ್ನು ಜಗನ್ನಾಥ್ ಶೆಟ್ಟಿ ನೀಡಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • ಹನಿಟ್ರ್ಯಾಪ್ ಪ್ರಕರಣದಲ್ಲಿ ಮಗನಿಗೆ ಸಾಥ್ ಕೊಟ್ರಾ ತಾಯಿ?

    ಹನಿಟ್ರ್ಯಾಪ್ ಪ್ರಕರಣದಲ್ಲಿ ಮಗನಿಗೆ ಸಾಥ್ ಕೊಟ್ರಾ ತಾಯಿ?

    – ಬಗೆದಷ್ಟು ತೆರೆದುಕೊಳ್ತಿದೆ `ಹನಿ’ ಕಹಾನಿ

    ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆಯುತ್ತಿದ್ದು, ಸಿಸಿಬಿ ಪೊಲೀಸರಿಗೆ ಮತ್ತೊಂದು ಮಜಲಿನ ಸ್ಫೋಟಕ ಮಾಹಿತಿ ಸಿಕ್ಕಿದೆ. ಆರೋಪಿ ರಾಘವೇಂದ್ರ ಅಕ್ರಮ ದಂಧೆಯಲ್ಲಿ ಅವರ ತಾಯಿ ಪಾತ್ರ ಇರುವ ಬಗ್ಗೆ ಸಿಸಿಬಿಗೆ ಬಲವಾದ ಸಾಕ್ಷ್ಯಗಳು ಲಭ್ಯವಾಗಿದೆ ಎನ್ನಲಾಗಿದೆ.

    ಸಿಸಿಬಿ ಪೊಲೀಸರು ರಾಘವೇಂದ್ರ ತಾಯಿ ಜ್ಯೋತಿ ಮೇಲೆ ಕೂಡ ಒಂದು ಕಣ್ಣಿರಿಸಿದ್ದಾರೆ. ಪಬ್ಲಿಕ್ ಟಿವಿ ಕ್ಯಾಮೆರಾದ ಮುಂದೆ ನಾನು ಮತ್ತು ನನ್ನ ಮಗ ರಾಘವೇಂದ್ರ ಅಮಾಯಕರು. ವಿನಾಕಾರಣ ನಮ್ಮನ್ನ ಬೆದರಿಸುತ್ತಿದ್ದಾರೆಂದು ಹನಿಟ್ರ್ಯಾಪ್ ಕಿಂಗ್‍ಪಿನ್ ರಾಘವೇಂದ್ರನ ತಾಯಿ ಜ್ಯೋತಿ ಕಣ್ಣಿರಿಟ್ಟಿದ್ದರು. ಆದರೆ ಇದೀಗ ಸಿಸಿಬಿ ಪೊಲೀಸರಿಗೆ ಸಿಕ್ಕ ಮಹಿತಿ ಆಕೆಯ ಅಸಲಿಯತ್ತಿನ ಬಗ್ಗೆ ಸಂಶಯ ಮೂಡಿಸಿದೆ. ರಾಘವೇಂದ್ರನ ಅಕ್ರಮ ದಂಧೆಯ ವಿಡಿಯೋ ಸೇರಿದಂತೆ ಹಲವು ದಾಖಲೆಗಳನ್ನ ಲಾಕರ್ ನಲ್ಲಿ ಇಟ್ಟಿದ್ದ ಬಗ್ಗೆ ಮಾಹಿತಿ ಸಿಕ್ಕಿವೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಎದೆ ಮೇಲೆ ಹಚ್ಚೆ, ಶಾಸಕನನ್ನ ಯಾಮಾರಿಸಿದ್ಳು ಚಿಟ್ಟೆ- ಬಗೆದಷ್ಟು ಬಯಲಾಗ್ತಿದೆ ‘ಹನಿ’ಕಹಾನಿ

    ಈ ರಾಘವೇಂದ್ರ ಮತ್ತು ಟೀಂ ಸಾಮಾನ್ಯದವರಲ್ಲ. ಬ್ಲಾಕ್ ಮೇಲ್ ಮಾಡಿ ಹಣ ಪಿಕೋದ್ರಲ್ಲಿ ನಿಸ್ಸೀಮರು. ಅರೆಬರೆ ವಿಡಿಯೋ ತೋರಿಸಿ ಇಬ್ಬರು ಶಾಸಕರ ಬಳಿ ಹಣ ಪಿಕುತ್ತಿದ್ದರು. ಆ ಇಬ್ಬರು ಶಾಸಕರ ಹನಿಟ್ರ್ಯಾಪ್ ವಿಡಿಯೋ ಕ್ಲಿಯಾರಿಟಿ ಇಲ್ಲದೇ ಇದ್ದರೂ ಬ್ಲಾಕ್‍ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಬಗೆದಷ್ಟು ಈ ಹನಿ ಕಹಾನಿ ತೆರೆದುಕೊಳ್ಳುತ್ತಿದೆ. ಇನ್ನೂ ಯಾರೆಲ್ಲಾ ಈ ಕೇಸ್‍ನಲ್ಲಿದ್ದಾರೋ? ಯಾರ‍್ಯಾರ ಬಂಡವಾಳ ಬಯಲಾಗುತ್ತೋ ಕಾದು ನೋಡಬೇಕು. ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ- ಹಾಲಿ ಶಾಸಕರಿಂದ ಪೀಕಿದ್ರು ಬರೋಬ್ಬರಿ 1 ಕೋಟಿ

    ರಾಘವೇಂದ್ರ ತಾಯಿ ಜ್ಯೋತಿ ಹೇಳಿದ್ದೇನು?
    ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದ ರಾಘವೇಂದ್ರ ತಾಯಿ, ನನ್ನ ಮಗ ಅಂಥವನಲ್ಲ. ಮೊದಲಿಗೆ ಮೊಬೈಲ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಅಲ್ಲಿ ಕೆಲಸದಿಂದ ಹೊರಬಂದು ಬೇರೆ ಕಡೆ ಉದ್ಯೋಗ ಹುಡುಕುತ್ತಿದ್ದಾನೆ. ರಾತ್ರಿ ಮನೆಗೆ ಬಂದ ಪೊಲೀಸರು, ಮನೆ ಪರಿಶೀಲನೆ ನಡೆಸಿದರು. ರಾತ್ರಿಯೆಲ್ಲ ಮನೆಯಲ್ಲಿಯೇ ಕುಳಿತಿದ್ದರೂ, ನಮಗೆ ಏನೂ ಹೇಳಲಿಲ್ಲ. ಮೊಬೈಲ್ ಕಿತ್ತುಕೊಂಡು ಮಗನಿಗೆ ಬರುವಂತೆ ಹೇಳುವಂತೆ ಹೇಳಿದ್ದರು.

    ಮತ್ತೆ ಬಂದು ಮನೆಯಲ್ಲಿದ್ದ ಮೆಮೊರಿ ಕಾರ್ಡ್, ಪೆನ್‍ಡ್ರೈವ್ ರೀತಿಯಲ್ಲಿರುವ ಒಂದು ವಸ್ತು, ಚಿಕಿತ್ಸೆಗಾಗಿ ತೆಗೆದಿಟ್ಟಿದ್ದ 50 ಸಾವಿರ ರೂ. ಮತ್ತು ದೇವರ ಮನೆಯಲ್ಲಿಟ್ಟಿದ್ದ ಕಿವಿಯೋಲೆಯನ್ನು ಮಹಿಳಾ ಪೇದೆ ತೆಗೆದುಕೊಂಡು ಹೋಗಿದ್ದಾರೆ. ಪಬ್ಲಿಕ್ ಟಿವಿ ಮೂಲಕ ಮಗನ ಬಂಧನದ ಸುದ್ದಿ ತಿಳಿಯಿತು. ಮನೆಯಲ್ಲಿ ವಯಸ್ಸಾದ ತಾಯಿಯೊಂದಿಗೆ ಇದ್ದೇನೆ. ನಾವಿಬ್ಬರೂ ಹೆಣ್ಣು ಮಕ್ಕಳೇ ಮನೆಯಲ್ಲಿದ್ದೇವೆ. ನಾವು ಅಮಾಯಕ. ಬೇರೆಯವರ ಸಂಚಿಗೆ ಮಗ ಬಲಿಯಾಗಿರಬೇಕು ಎಂದು ರಾಘವೇಂದ್ರ ತಾಯಿ ಅನುಮಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಹನಿ ಮನಿ ಕಾಮಿನಿ ಸುಳಿಯಲ್ಲಿ ಶಾಸಕರು – ಹಾರ್ಡ್ ಡಿಸ್ಕ್ ನಲ್ಲಿತ್ತು 10 ಜನರ ವಿಡಿಯೋ

    ಆತ ಯಾರೊಂದಿಗೆ ಹೆಚ್ಚು ಸೇರಲ್ಲ. ನಮಗೆ ಇಲ್ಲಿ ಯಾರೂ ಸಂಬಂಧಿಕರಿಲ್ಲ. ಎಲ್ಲಿ ಹೋಗಬೇಕು ಮತ್ತು ಯಾರನ್ನ ಸಂಪರ್ಕಿಸಬೇಕು ಎಂಬುವುದು ನಮಗೆ ಗೊತ್ತಿಲ್ಲ. ಇರೋ ಒಬ್ಬ ಮಗ ಯಾರ ತಂಟೆಗೂ ಹೋಗದವನು. ಆತ ತಪ್ಪು ಮಾಡಿಲ್ಲ ಎಂಬುವುದು ನನ್ನ ನಂಬಿಕೆ. ಒಂದು ವೇಳೆ ಪೊಲೀಸ್ ತನಿಖೆ ವೇಳೆ ತಪ್ಪಿತಸ್ಥ ಎಂದು ಸಾಬೀತಾದ್ರೆ ಮಗನೊಂದಿಗಿನ ಸಂಬಂಧವನ್ನು ಕಳೆದುಕೊಂಡು, ಅನಾಥಳಂತೆ ಮುಂದಿನ ಜೀವನ ನಡೆಸುತ್ತೇನೆ ಎಂದಿದ್ದರು.

  • ಹನಿಟ್ರ್ಯಾಪ್ ಪ್ರಕರಣ- ಹಾಲಿ ಶಾಸಕರಿಂದ ಪೀಕಿದ್ರು ಬರೋಬ್ಬರಿ 1 ಕೋಟಿ

    ಹನಿಟ್ರ್ಯಾಪ್ ಪ್ರಕರಣ- ಹಾಲಿ ಶಾಸಕರಿಂದ ಪೀಕಿದ್ರು ಬರೋಬ್ಬರಿ 1 ಕೋಟಿ

    – ಹನಿಟ್ರ್ಯಾಪ್ ಪ್ರಕರಣದಲ್ಲಿ ಎದುರಾಳಿಗಳ ಕೈವಾಡ

    ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿದ ಹಾಲಿ ಶಾಸಕ ರಾಸಲೀಲೆ ವಿಡಿಯೋಗೆ ಹೆದರಿ ಬರೋಬ್ಬರಿ 1 ಕೋಟಿ ರೂ. ಹಣ ಕಳೆದುಕೊಂಡಿದ್ದಾರೆ ಎನ್ನುವುದು ಸಿಸಿಬಿ ತನಿಖೆ ವೇಳೆ ಬಹಿರಂಗವಾಗಿದೆ.

    ಹನಿ ಹನಿ ಎಂದು ಆಸೆಗೆ ಬಿದ್ದು ಹಾಲಿ ಶಾಸಕ ಬರೋಬ್ಬರಿ 1 ಕೋಟಿ ರೂ. ಹಣ ಕಳೆದುಕೊಂಡಿದ್ದಾರೆ. ಮೊದಲು 50 ಕೋಟಿ ರೂ. ಕೊಡದಿದ್ದರೆ ವಿಡಿಯೋ ಲೀಕ್ ಮಾಡ್ತೀವಿ ಎಂದಿದ್ದ ಆರೋಪಿಗಳು, ಕೊನೆಗೆ 50 ಕೋಟಿ ಕೊಡಲು ಆಗಲ್ಲ ಎಂದಾಗ 10 ಕೋಟಿಗೆ ಡೀಲ್ ಫಿಕ್ಸ್ ಮಾಡಿದ್ದರು. ಈ 10 ಕೋಟಿ ಹಣವನ್ನು ಇನ್‍ಸ್ಟಾಲ್‍ಮೆಂಟ್‍ನಲ್ಲಿ ಕೊಡುವುದಾಗಿ ಶಾಸಕ ಒಪ್ಕೊಂಡಿದ್ದರು. 1 ಕೋಟಿ ರೂ. ಹಣವನ್ನ ಆರೋಪಿಗಳಿಗೆ ಎಂಎಲ್‍ಎ ತಲುಪಿಸಿದ್ದರು. ಇದಲ್ಲದೇ ಮತ್ತಿಬ್ಬರು ಶಾಸಕರು ಕೂಡ ಆರೋಪಿಗಳಿಗೆ ಹಣ ನೀಡಿದ್ದರು. ವಿಡಿಯೋ ಎಲ್ಲಿ ಹೊರಬರುತ್ತೋ ಎಂದು ಭಯಬಿದ್ದು ಶಾಸಕರು ಹಣ ನೀಡಿದ್ದರು ಎನ್ನುವುದು ಸಿಸಿಬಿ ತನಿಖೆ ವೇಳೆ ಬಟಾಬಯಲಾಗಿದೆ. ಇದನ್ನೂ ಓದಿ:ಹನಿ ಮನಿ ಕಾಮಿನಿ ಸುಳಿಯಲ್ಲಿ ಶಾಸಕರು – ಹಾರ್ಡ್ ಡಿಸ್ಕ್ ನಲ್ಲಿತ್ತು 10 ಜನರ ವಿಡಿಯೋ

    ರಾಜಕೀಯ ನೌಟಂಕಿ ಆಟವನ್ನು ಯಾರು ಊಹೆನೂ ಮಾಡೋದಕ್ಕೆ ಆಗೋದಿಲ್ಲ. ಲಾಭಕ್ಕಾಗಿ ರಾಜಕೀಯ ನಾಯಕರ ಕೈಯಲ್ಲಿ ಏನು ಬೇಕಾದರೂ ಮಾಡಿಸಿ ಬಿಡುತ್ತೆ. ಹೌದು ಹನಿಟ್ರ್ಯಾಪ್ ಪ್ರಕರಣದಲ್ಲಿ ಶಾಸಕನನ್ನು ಸಿಲುಕಿಸಿರೋದರಲ್ಲಿ ಆತನ ಎದುರಾಳಿಗಳ ಕೈವಾಡವಿದೆ ಎನ್ನುವುದನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ. ಶಾಸಕರಿಗೆ ಹೆಣ್ಣಿನ ಮೋಹವಿದೆ ಎಂದು ತಿಳಿದಿದ್ದ ಎದುರಾಳಿಗಳು ರಾಘವೇಂದ್ರನ ಗ್ಯಾಂಗ್ ಬಳಸಿಕೊಂಡು ಡೀಲ್ ಮಾಡಿಕೊಳ್ಳುತ್ತಿದ್ದರು. ಶಾಸಕರನ್ನು ಹೇಗೆ ಖೆಡ್ಡಾಕ್ಕೆ ಕೆಡವಿಕೊಳ್ಳೋದು ಅನ್ನೊದನ್ನು ಕೂಡ ಹೇಳಿ ಕೊಡುತ್ತಿದ್ದರು. ಇದನ್ನೂ ಓದಿ: ಬಿಜೆಪಿ ಮಾಜಿ ಸಚಿವರ ಹನಿಟ್ರ್ಯಾಪ್ – 10 ಕೋಟಿ ನಿರೀಕ್ಷೆಯಲ್ಲಿದ್ದವನಿಗೆ ಕೋಳ

    ಅಷ್ಟೇ ಅಲ್ಲ ಶಾಸಕರ ರಾಸಲೀಲೆ ಸೆರೆ ಹಿಡಿಯೋದಕ್ಕೆ ಕ್ಯಾಮೆರಾಗಳನ್ನು ಕೂಡ ಎದುರಾಳಿಗಳೇ ಗ್ಯಾಂಗ್‍ಗೆ ತೆಗೆದುಕೊಟ್ಟಿದ್ದರು ಎನ್ನಲಾಗಿದೆ. ಸಿಸಿಬಿ ಅಧಿಕಾರಿಗಳ ತನಿಖೆಯಲ್ಲಿ ಈ ಸ್ಫೋಟಕ ಸತ್ಯ ಬಯಲಾಗಿದ್ದು, ಸದ್ಯ ಪೊಲೀಸ್ ಕಸ್ಟಡಿಯಲ್ಲಿಯೇ ಇರುವ ರಾಘವೇಂದ್ರ ಇದೆಲ್ಲವನ್ನೂ ಬಾಯಿಬಿಟ್ಟಿದ್ದಾನೆ. ಕ್ಯಾಮೆರಾ ತೆಗೆದುಕೊಟ್ಟವರು ಮುಂಗಡ ಹಣವನ್ನೂ ಪಾವತಿ ಮಾಡಿದ್ದಾರೆ. ಈ ಎಲ್ಲಾ ಹೇಳಿಕೆಗಳ ಬಳಿಕ ರಾಘವೇಂದ್ರ ಸ್ವ-ಇಚ್ಚಾ ಹೇಳಿಕೆ ನೀಡಿದ್ದು, ಹಣ ಕೊಟ್ಟವರು ರಾಘವೇಂದ್ರನ ಭೇಟಿ ನಡೆದಿದ್ದಕ್ಕೆ ಸಾಕ್ಷ್ಯವೂ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಶಾಸಕನ ಎದುರಾಳಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿಸಲಿದ್ದಾರೆ ಎನ್ನಲಾಗಿದೆ.

    ಯಾರು ಈ ರಾಘವೇಂದ್ರ?
    ಆರೋಪಿ ರಾಘವೇಂದ್ರ ಶಿವಮೊಗ್ಗ ಮೂಲದ ನಿವಾಸಿಯಾಗಿದ್ದು, ತಾಯಿಯೊಂದಿಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದನು. ಸೈಬರ್ ಕ್ರೈಂಗಳನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಪರಿಣಿತಿ ಹೊಂದಿದ್ದನು ಎಂಬುವುದು ಪೊಲೀಸ್ ತನಿಖೆಯ ವೇಳೆ ತಿಳಿದು ಬಂದಿದೆ. ಸಣ್ಣ ಪುಟ್ಟ ಕ್ರೈಂ ಮಾಡಿದ್ರೆ ಸ್ವಲ್ಪ ಹಣ ಸಿಗುತ್ತದೆ. ಹೆಚ್ಚು ಹಣಕ್ಕಾಗಿ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದನು. ತನ್ನ ಗೆಳತಿ ಮೂಲಕ ಶಾಸಕರ ಖಾಸಗಿ ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡತೊಡಗಿದ್ದನು ಎಂಬ ಆರೋಪ ಕೇಳಿ ಬಂದಿದೆ.