Tag: ಹನುಮಾನ್ ಚಾಲಿಸ

  • ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್‌ಗೆ ಟ್ವಿಸ್ಟ್ – ಮಾಲೀಕ ಮುಖೇಶ್ ಮೇಲೆ ಎಫ್‌ಐಆರ್‌ ದಾಖಲು

    ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್‌ಗೆ ಟ್ವಿಸ್ಟ್ – ಮಾಲೀಕ ಮುಖೇಶ್ ಮೇಲೆ ಎಫ್‌ಐಆರ್‌ ದಾಖಲು

    ಬೆಂಗಳೂರು: ನಗರತ್ ಪೇಟೆಯಲ್ಲಿ (Nagarathpete ) ಹನುಮಾನ್‌ ಚಾಲೀಸಾ  (Hanuman Chalisa) ಹಾಕಿದ್ದಕ್ಕೆ ಹಲ್ಲೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಹಲ್ಲೆಗೊಳಗೊಳಗಾದ ಮುಖೇಶ್ ವಿರುದ್ದವೇ ಎಫ್‌ಐಆರ್‌ (FIR) ದಾಖಲಾಗಿದೆ.

    ಕೋರ್ಟ್ ನಿರ್ದೇಶನ ಮೇರೆಗೆ ಬಂಧನಕ್ಕೆ ಒಳಗಾದ ಸುಲೇಮಾನ್ ತಾಯಿ ನೀಡಿದ ದೂರಿನ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ (Halasuru Gate police Station) ಎಫ್‌ಐಆರ್‌ ದಾಲಾಗಿದೆ. ಐಪಿಸಿ ಸೆಕ್ಷನ್‌ 506(ಕ್ರಿಮಿನಲ್‌ ಬೆದರಿಕೆ), 504(ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 323(ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಮೋದಿಯನ್ನು ಅಧಿಕಾರದಿಂದ ಇಳಿಸುವುದೇ ನಮ್ಮ ಮುಂದಿನ ಗುರಿ: ಮಲ್ಲಿಕಾರ್ಜುನ ಖರ್ಗೆ

     

    ದೂರಿನಲ್ಲಿ ಏನಿದೆ?
    ರಂಜಾನ್ ಇದ್ದರೂ ಭಕ್ತಿ ಗೀತೆ ಹಾಕಿ ಮುಖೇಶ್‌ ಕಿರಿಕ್ ಮಾಡುತ್ತಿದ್ದ. ಮಾರ್ಚ್ 17 ರಂದು ಸುಲೇಮಾನ್ ಸೇರಿ ಸ್ನೇಹಿತರು ಮುಖೇಶ್‌ಗೆ ಪ್ರಶ್ನಿಸಿದ್ದರು. ಪವಿತ್ರ ರಂಜಾನ್ ಹಬ್ಬವಿದೆ, ಮೂರು ಸಾವಿರ ಮಂದಿ ಇದೇ ರಸ್ತೆಯಲ್ಲಿ ಪ್ರಾರ್ಥನೆಗೆ ಹೋಗುತ್ತಾರೆ. ಇಷ್ಟು ಸೌಂಡ್ ಇಟ್ಟು ಹಾಡುಗಳನ್ನು ಹಾಕುವುದು ಯಾಕೆ ಎಂದು ಕೇಳಿದ್ದರು. ಇದನ್ನೂ ಓದಿ: ದೇಶಾದ್ಯಂತ ಜಾತಿಗಣತಿ, ಯುವಕರಿಗೆ ಉದ್ಯೋಗದ ಜೊತೆ 1 ಲಕ್ಷ ವೇತನ – ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ

    ಪ್ರಶ್ನೆ ಕೇಳಿದ್ದಕ್ಕೆ ನನ್ನ ಮಗನ ಮೇಲೆ ಮುಖೇಶ್ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ್ದು ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

     

    ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ  ಮುಖೇಶ್‌ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಪ್ರತಿಭಟಿಸಿದ್ದರು.

  • ನಮಾಜ್ ವೇಳೆ ರೋಡ್ ಬಂದ್ ಖಂಡಿಸಿ ಬಿಜೆಪಿಯಿಂದ ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟನೆ

    ನಮಾಜ್ ವೇಳೆ ರೋಡ್ ಬಂದ್ ಖಂಡಿಸಿ ಬಿಜೆಪಿಯಿಂದ ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟನೆ

    ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪ್ರತೀ ಶುಕ್ರವಾರ ಮುಸ್ಲಿಮರು ಪ್ರಾರ್ಥನೆ (ನಮಾಜ್) ಸಲ್ಲಿಸುವ ವೇಳೆ ರೋಡ್ ಬಂದ್ ಆಗುತ್ತಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹನುಮಾನ್ ಚಾಲಿಸಾ ಪಠಿಸಿ ಪ್ರತಿಭಟನೆ ಮಾಡಿದ್ದಾರೆ.

    ಪ್ರತಿ ಶುಕ್ರವಾರದ ನಮಾಜ್ ಸಮಯದಲ್ಲಿ ಮಸೀದಿ ಮುಂಭಾಗದ ರಸ್ತೆ ಸಂಚಾರ ನಿಷೇಧಿಸಲಾಗುತ್ತಿದೆ. ಇದರಿಂದ ವಾಹನ ಚಲಿಸುವವರಿಗೆ ತೊಂದರೆಯಾಗುತ್ತದೆ ಎಂದು ಹೇಳಿ ಬಿಜೆಪಿ ಯುವ ಮೋರ್ಚಾದವರು ಹೌರ ನಗರದ ಜಿ.ಟಿ ರಸ್ತೆಯಲ್ಲಿ ಕುಳಿತು ಹನುಮಾನ್ ಚಾಲಿಸಾ ಪಠಣ ಮಾಡುವ ಮೂಲಕ ಪ್ರತಿಭಟಿಸಿದ್ದಾರೆ.

    ರಸ್ತೆ ಸಂಚಾರ ಬಂದ್ ಮಾಡುವುದರಿಂದ ನಮಗೆ ತುಂಬ ತೊಂದರೆಯಾಗುತ್ತಿದೆ. ಶುಕ್ರವಾರ ನಮಗೆ ಸರಿಯಾದ ಸಮಯದಲ್ಲಿ ಕಚೇರಿಗೆ ತಲುಪಲು ಆಗುತ್ತಿಲ್ಲ ಎಂದು ಮಂಗಳವಾರ ಸಂಜೆ ರಸ್ತೆಗಿಳಿದ ನೂರಾರು ಬಿಜೆಪಿ ಕಾರ್ಯಕರ್ತರು ರಸ್ತೆ ಅಡ್ಡಗಟ್ಟಿ ಮುಂದಿನ ಶುಕ್ರವಾರದ ತನಕ ನಾವು ಹೀಗೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಈ ವಿಚಾರವಾಗಿ ಮಾತನಾಡಿರುವ ಹೌರ ಜಿಲ್ಲಾ ಯುವ ಮೋರ್ಚಾದ ಕಾರ್ಯಕರ್ತ ಒ.ಪಿ ಸಿಂಗ್ ಅವರು, ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಗ್ರ್ಯಾಂಡ್ ಟ್ರಾಂಕ್ ರಸ್ತೆ ಮತ್ತು ಇತರ ಮುಖ್ಯ ರಸ್ತೆಗಳಲ್ಲಿ ಶುಕ್ರವಾರ ಸಂಚಾರ ನಿಷೇಧಿಸಲಾಗಿದೆ. ಇದರಿಂದ ಸರಿಯಾದ ಸಮಯಕ್ಕೆ ರೋಗಿಗಳು ಆಸ್ಪತ್ರೆಗೆ ಹೋಗಲು ಆಗದೇ ಮೃತಪಡುತ್ತಿದ್ದಾರೆ. ಉದ್ಯೋಗಸ್ಥರು ಶುಕ್ರವಾರ ಸರಿಯಾದ ಸಮಯಕ್ಕೆ ಕಚೇರಿಗೆ ಹೋಗಲು ಆಗುತ್ತಿಲ್ಲ. ನಮಾಜ್ ವೇಳೆ ರಸ್ತೆಗಳ ನಿಷೇಧವನ್ನು ಎಲ್ಲಿಯವರೆಗೆ ಮುಂದುವರಿಸುತ್ತಾರೋ ಅಲ್ಲಿಯವರೆಗೆ ನಾವೂ ಹನುಮಾನ್ ಮಂದಿರಗಳ ಮುಂದೆ ಎಲ್ಲಾ ರಸ್ತೆಗಳನ್ನು ತಡೆದು ಹನುಮಾನ್ ಚಾಲಿಸಾವನ್ನು ಪಠಣ ಮಾಡುತ್ತೇವೆ ಎಂದು ಹೇಳಿದ್ದಾರೆ.