Tag: ಹನುಮ ಜಯಂತಿ

  • ಅಯೋಧ್ಯೆ ರಾಮನ ಮೂರ್ತಿ ಸೃಷ್ಟಿಕರ್ತ ಅರುಣ್ ಯೋಗಿರಾಜ್ ಧಾರವಾಡಕ್ಕೆ ಭೇಟಿ

    ಅಯೋಧ್ಯೆ ರಾಮನ ಮೂರ್ತಿ ಸೃಷ್ಟಿಕರ್ತ ಅರುಣ್ ಯೋಗಿರಾಜ್ ಧಾರವಾಡಕ್ಕೆ ಭೇಟಿ

    ಧಾರವಾಡ: ಅಯೋಧ್ಯೆಯಲ್ಲಿ ಹಸನ್ಮುಖಿಯಾಗಿ ನಿಂತಿರುವ ಬಾಲಕ ಶ್ರೀರಾಮಚಂದ್ರನ ಮೂರ್ತಿಯ ಸೃಷ್ಟಿಕರ್ತ, ಶಿಲ್ಪ ಕಲಾವಿದ ಅರುಣ್ ಯೋಗಿರಾಜ್ ಅವರು ಧಾರವಾಡಕ್ಕೆ ಭೇಟಿ ನೀಡಿದ್ದರು.

    ಹನುಮ ಜಯಂತಿಯಂದೇ ಧಾರವಾಡಕ್ಕೆ ಭೇಟಿ ಕೊಟ್ಟ ಅರುಣ್ ಯೋಗಿರಾಜ್ ಅವರನ್ನು ಭೇಟಿ ಮಾಡಲು ನೂರಾರು ಜನ ಆಗಮಿಸಿದ್ದರು. ಇದನ್ನೂ ಓದಿ: ಶಿರೋಮಣಿ ಅಕಾಲಿ ದಳ ಅಧ್ಯಕ್ಷರಾಗಿ ಸುಖಬೀರ್ ಸಿಂಗ್ ಬಾದಲ್ ಮರು ಆಯ್ಕೆ

    ಅಥಣಿಗೆ ಹೊರಟಿದ್ದ ಅರುಣ್ ಯೋಗಿರಾಜ್ ಅವರು ಮಾರ್ಗ ಮಧ್ಯೆ ಧಾರವಾಡದ ಬಿಜೆಪಿ ಮುಖಂಡೆ ಸವಿತಾ ಅಮರಶೆಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಯೋಗಿರಾಜ್ ಅವರನ್ನು ನೋಡಲು ನೂರಾರು ಜನ ಆಗಮಿಸಿದ್ದರು. ಇದನ್ನೂ ಓದಿ: Mumbai Attack| ರಾಣಾ ವಿರುದ್ಧ ಸಾಕ್ಷಿ ನುಡಿಯಲಿದ್ದಾರೆ ನಿಗೂಢ ವ್ಯಕ್ತಿಗಳು!

    ಅಖಿಲ ಭಾರತ ವಿಶ್ವಕರ್ಮ ಛಾತ್ರಾ ಯುವ ಸಂಘ, ವಿಶ್ವಕರ್ಮ ಸಮಾಜ ಹಾಗೂ ಸಾಂಸ್ಕೃತಿಕ ಸಂಘಟನೆಗಳಿಂದ ಅರುಣ್ ಯೋಗಿರಾಜ್ ಅವರಿಗೆ ಸನ್ಮಾನ ನಡೆಯಿತು.

  • ಹನುಮ ಜಯಂತಿ ಹಿನ್ನೆಲೆ ಏನು? – ಆಂಜನೇಯ ಹುಟ್ಟಿದ್ದು ಹೇಗೆ?

    ಹನುಮ ಜಯಂತಿ ಹಿನ್ನೆಲೆ ಏನು? – ಆಂಜನೇಯ ಹುಟ್ಟಿದ್ದು ಹೇಗೆ?

    ಚಲ ಭಕ್ತಿ, ಧೈರ್ಯ ಮತ್ತು ಶಕ್ತಿಗೆ ಹೆಸರುವಾಸಿಯಾದ ದೇವರು ಯಾರು ಎಂದರೆ ಅದು ಹನುಮಂತ (Hanumantha). ರಾಮನ ಮೇಲಿಟ್ಟ ಭಕ್ತಿ, ಲಂಕೆಗೆ ಏಕಾಂಗಿಯ ಹೋಗಿ ಲಂಕಾದಹನ ಮಾಡಿದ ಪರಾಕ್ರಮಿ, ಗಟ್ಟಿ ಮುಟ್ಟಾದ ದೇಹವನ್ನು ಹೊಂದಿರುವ ಆಂಜನೇಯನ ಜನ್ಮವನ್ನು ಸ್ಮರಿಸಲು ಆಚರಿಸಲಾಗುವ ಹಿಂದೂಗಳ ಹಬ್ಬವೇ ಹನುಮ ಜಯಂತಿ (Hanuman Jayanti).

    ಹನುಮಂತ ಹುಟ್ಟಿದ್ದು ಹೇಗೆ?
    ಒಂದು ದಿನ ಪಾರ್ವತಿ, ಪರಮೇಶ್ವರರು ಕೈಲಾಸ ಪರ್ವತದಲ್ಲಿದ್ದಾಗ ಒಂದು ವಾನರಯುಗ್ಮವನ್ನು ಕಂಡರು. ಪಾರ್ವತಿ ಶಿವನೊಂದಿಗೆ ಕಲೆತು ಗರ್ಭವನ್ನು ಧರಿಸಿ ಅದನ್ನು ತಾಳಲಾರದೇ ಶಿವನಲ್ಲಿ ಮನವಿ ಮಾಡಿದಾಗ ಶಿವ ಆ ಗರ್ಭವನ್ನು ಪಾರ್ವತಿಯ ನಾಭಿಯಿಂದ ಹೊರಬೀಳುವಂತೆ ಮಾಡಿದ. ಭೂದೇವಿ ಅದನ್ನು ಧರಿಸಲಾರದೇ ಕಂಗೆಟ್ಟಳು.

    ಅದೇ ಸಮಯದಲ್ಲಿ ಗೌತಮನ ಪುತ್ರಿ, ಕೇಸರಿಯ ಪತಿ ಆಂಜನೆ ಪುತ್ರಕಾಂಕ್ಷೆಯಿಂದ ತೀವ್ರವಾದ ಜಪ, ತಪ ಕೈಗೊಂಡಿದ್ದಳು. ಆಗ ವಾಯುದೇವ ಆಕೆಯ ರೂಪಕ್ಕೆ ಮರುಳಾಗಿ, ಆ ಗರ್ಭವನ್ನು ತೆಗೆದುಕೊಂಡು ಆಕೆಯ ಅಂಗೈಯಲ್ಲಿಟ್ಟ. ಆಕೆ ಅದನ್ನು ನುಂಗಿದಳು. ನವಮಾಸಗಳು ತುಂಬಿದ ಬಳಿಕ ಒಬ್ಬ ವಟು ಜನಿಸಿದ. ಜನಿಸಿದ ವಟುವೇ ಆಂಜನೇಯ.

    ಹನುಮಂತ ಹೆಸರು ಬಂದಿದ್ದು ಹೇಗೆ?
    ಈ ವಟು ಸೂರ್ಯನನ್ನು ನೋಡಿ ಸೂರ್ಯನನ್ನೇ ನುಂಗಲು ಹೋಗಿದ್ದ. ಇಂದ್ರನ ವಜ್ರಾಯುಧದ ಪೆಟ್ಟಿನಿಂದ ಮೂರ್ಛೆ ಬಿದ್ದರೂ ದೇವತೆಗಳ ಮೂಲಕ ಅನೇಕ ವರಗಳನ್ನು ಪಡೆದ. ಇಂದ್ರನ ವಜ್ರಾಯುಧದಿಂದ ಪೆಟ್ಟು ಬಿದ್ದು ಒಂದು ಕೆನ್ನೆ ಗಾಯವಾಗಿ ಸೊಟ್ಟಗಾಯಿತು. ಈ ಕಾರಣದಿಂದ ಹನುಮಂತ ಎಂಬ ಹೆಸರು ಬಂದಿತು.

    ಹನುಮಂತ, ಆಂಜನೇಯ, ವಾಯುಪುತ್ರ, ಹನುಮ, ಭಜರಂಗಿ, ಅಕ್ಷಾಂತಕ, ಕಪೀಶ ಎಂದು ಕರೆಯುವ ಹನುಮಂತನ ಜನ್ಮ ಆಗಿದ್ದು ಹಿಂದೂ ಚಂದ್ರಮಾನ ಮಾಸದ ಹುಣ್ಣಿಮೆಯ ದಿನ. ಸಾಮಾನ್ಯವಾಗಿ ಗ್ರೆಗೋರಿಯನ್ ಕ್ಯಾಲೆಂಡರ್‌ನಲ್ಲಿ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಹನುಮ ಜಯಂತಿ ಬರುತ್ತದೆ.

    ಹನುಮ ಜಯಂತಿಯಂದು ಪ್ರಾರ್ಥನೆ, ಉಪವಾಸ, ಹನುಮಾನ್ ಚಾಲೀಸಾ (ಹನುಮನನ್ನು ಸ್ತುತಿಸುವ ಸ್ತೋತ್ರ) ಪಠಣ ಮತ್ತು ಹನುಮನಿಗೆ ಸಮರ್ಪಿತವಾದ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಭಕ್ತರು ಆಚರಿಸುತ್ತಾರೆ.

    ಸಂಜೀವಿನಿಯನ್ನೇ ತಂದ:
    ರಾಮ-ರಾವಣರ ಮಧ್ಯೆ ಯುದ್ಧ ನಡೆಯುತ್ತಿದ್ದಾಗ ಮೇಘನಾಥನ ಜೊತೆಗಿನ ಕಾದಾಟದಲ್ಲಿ ಲಕ್ಷಣ ತೀವ್ರವಾಗಿ ಗಾಯಗೊಳ್ಳುತ್ತಾನೆ. ಮೂರ್ಛೆ ಹೋಗಿ ನೆಲದ ಮೇಲೆ ಉರುಳಿದ್ದ ಲಕ್ಷ್ಮಣನನ್ನು ಎತ್ತಿಕೊಂಡು ಬಂದ ಹನುಮಂತ ರಾಮನ ಮುಂದೆ ಮುಂದೆ ಇಡುತ್ತಾನೆ.

    ಈ ಸಂದರ್ಭದಲ್ಲಿ ಅಲ್ಲಿದ್ದ ಸುಷೇನರು ಹಿಮಾಲಯದಲ್ಲಿ ಇರುವಂತಹ ಸಂಜೀವಿನಿ ಪರ್ವತದಲ್ಲಿ ಔಷಧಿ ಇದೆ. ಅದನ್ನು ತಂದರೆ ಲಕ್ಷ್ಮಣನನ್ನು ಗುಣಪಡಿಸಬಹುದು ಎಂದು ಹೇಳುತ್ತಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಹನುಮಂತ ಹಿಮಾಲಯಕ್ಕೆ ಬಂದು ಔಷಧಿ ಸಸಿಗಳನ್ನು ಹುಡುಕುತ್ತಾನೆ. ಆದರೆ ಔಷಧಿ ಸಸಿ ಸಿಗದ ಕಾರಣ ಕೊನೆಗೆ ಇಡೀ ಪರ್ವತವನ್ನೇ ಹೊತ್ತುಕೊಂಡು ಲಂಕೆಗೆ ಬರುತ್ತಾನೆ. ಸುಷೇನರು ಔಷಧಿ ಸಸ್ಯದಿಂದ ಲಕ್ಷಣನಿಗೆ ಔಷಧ ನೀಡಿದರು. ತಕ್ಷಣ ಲಕ್ಷಣನಿಗೆ ಪ್ರಜ್ಞೆ ಬರುತ್ತದೆ. ಜೀವ ಉಳಿಸುವ ಗಿಡಮೂಲಿಕೆಯನ್ನು ತರಲು ಒಬ್ಬಂಟಿಯಾಗಿ ಇಡೀ ಪರ್ವತವನ್ನು ಹೊತ್ತುಕೊಂಡು ತರುವ ಮೂಲಕ ತನ್ನ ಅಪಾರ ಶಕ್ತಿಯನ್ನು ಹನುಮಂತ ಪ್ರದರ್ಶಿಸಿದ್ದ.

  • ಹಿಂದುತ್ವ ಭಾವದಿಂದ ಒಂದಾಗಿ ಹನುಮ ಜಯಂತಿ ಮಾಡಿದ್ರೆ ಮಾತ್ರ ಭವಿಷ್ಯದಲ್ಲಿ ಭಾರತ ಉಳಿಯುತ್ತೆ: ಸಿ.ಟಿ.ರವಿ

    ಹಿಂದುತ್ವ ಭಾವದಿಂದ ಒಂದಾಗಿ ಹನುಮ ಜಯಂತಿ ಮಾಡಿದ್ರೆ ಮಾತ್ರ ಭವಿಷ್ಯದಲ್ಲಿ ಭಾರತ ಉಳಿಯುತ್ತೆ: ಸಿ.ಟಿ.ರವಿ

    ಮಡಿಕೇರಿ: ಹಿಂದುತ್ವದ ಭಾವದಿಂದ ಒಂದಾಗಿ ಹನುಮ ಜಯಂತಿಯನ್ನು ಮಾಡಿದರೆ, ಮಾತ್ರ ಭವಿಷ್ಯದಲ್ಲಿ ಭಾರತ ಉಳಿಯುತ್ತದೆ ಎಂಬ ಎಚ್ಚರಿಕೆ ನೀಡಲು ಬಂದಿದ್ದೇನೆ ಎಂದು ವಕ್ಪ್ ವಿರುದ್ಧ ಮಾಜಿ ಸಚಿವ ಸಿ.ಟಿ.ರವಿ ಅಬ್ಬರಿಸಿದ್ದಾರೆ.

    ಕೊಡಗಿನ ಕುಶಾಲನಗರದಲ್ಲಿ ಹನುಮನ ಜಯಂತಿ ಕಾರ್ಯಕ್ರಮದಲ್ಲಿ ಮಾತಾನಾಡಿದ ಅವರು, ಹಿಂದಿನ ಕಾಲದಲ್ಲಿ ಋಷಿ ಮುನಿಗಳು ‌ಯಜ್ಞಯಾಗಾದಿ ಮಾಡುವಾಗ ಅದನ್ನ ಭಂಗಗೊಳಿಸಲು ರಾಕ್ಷಸರು ‌ಬರುತ್ತಿದ್ದರಂತೆ. ಭಸ್ಮಸುರ, ಬಕಾಸುರ ಹೀಗೆ ಹಲವಾರು ರಾಕ್ಷಸರು ಇದ್ದರು. ಆ ರೀತಿಯ ಕೋಟೆ ನಾಡಿನ ರಾಕ್ಷಸರು ಈಗ ಇಲ್ಲ. ಅದರೆ, ರಾಕ್ಷಸಿ ಮಾನಸಿಕತೆ ಇರುವ ಜನರು ಇದ್ದಾರೆ. ನಮ್ಮ ದೇವಾಲಯವನ್ನ ಕಂಡರೆ ಅಗದೇ ಇರುವವರು ಇದ್ದಾರೆ. ಭಯೋತ್ಪಾದನೆ ಮೂಲಕ ನರ ಸಂಹಾರ ಮಾಡುವ ಮೂಲಕ ರಕ್ತಪಿಶಾಚಿಗಳು ಇದ್ದಾರೆ. ಜಿಹಾದಿ ಮಾನಸಿಕತೆಯ‌ ಮೂಲಕ ಭಾರತವನ್ನ ಧ್ವಂಸ ಮಾಡುವ ರಾಕ್ಷಸಿ ಮನಸ್ಥಿತಿ ಇರುವಂತಹ ಜನ ಇದ್ದಾರೆ. ಇದೆಲ್ಲದಕ್ಕೂ ಉತ್ತರ ಒಬ್ಬ ವ್ಯಕ್ತಿ ಕೊಟ್ಟರೆ ಸಾಕಾಗುವುದಿಲ್ಲ. ಕೇವಲ ಅಧಿಕಾರದ ಮೂಲಕ ಇದು ಸಾಧ್ಯವಾಗುವುದಿಲ್ಲ. ಇದಕ್ಕೆ ಉತ್ತರವನ್ನ ಸಮಾಜ ಕೊಡಬೇಕು. ಸಮಾಜ ಒಂದೊಂದು ಪ್ರಶ್ನೆಯನ್ನೂ ತಾನೇ ಹಾಕಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

    ಹಿಂದುತ್ವದ ಭಾವವನ್ನು ಗಟ್ಟಿಗೊಳಿಸಬೇಕು. ಹನುಮ ಜಯಂತಿ ಅಸ್ಪೃಶ್ಯತೆಯನ್ನ ದೂರ ಮಾಡಬೇಕು. ಹನುಮ ಜಯಂತಿ ರಾಮ ಭಕ್ತಿಯ ಮೂಲಕ ರಾಷ್ಟ್ರಕ್ಕೆ ಒಂದು ಶಕ್ತಿಯಾಗಿ ಹಿಂದೂ ಸಮಾಜವನ್ನ ಕಟ್ಟಿಕೊಡಬೇಕು. ಹಾಗಾದರೆ ಮಾತ್ರ ಹನುಮ ಜಯಂತಿ ಮಾಡುವುದರಲ್ಲಿ ಅರ್ಥ‌ ಇದೆ. ನಮ್ಮ ಮನ ಮತ್ತು ಮನೆಯಿಂದ ಅಸ್ಪೃಶ್ಯತೆ ದೂರ ಆಗಲಿ. ಜಾತೀಯತೆ ದೂರ ಆಗಲಿ. ನಾವೆಲ್ಲ ಒಂದು, ನಾವೆಲ್ಲ ಹಿಂದೂ ಭಾವದಿಂದ ಒಂದಾಗಿ ನಿಲ್ಲೋಣ. ಒಂದಾಗಿ ನಿಂತಾಗ ರಾಕ್ಷಸಿ ಶಕ್ತಿ ತಾನಾಗಿಯೇ ಅಡಗಿ ಹೋಗುತ್ತದೆ. ನಮ್ಮಿಂದ ಮೋಸದಿಂದ ವಂಚನೆಯಿಂದ ಆಕ್ರಮಿಸಿ ಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ನಮಗೆ ಇನ್ನೊಬ್ಬರದು ಬೇಡ. ಅದ್ರೆ ನಮ್ಮಿಂದ ಮೋಸದಿಂದ ಅಕ್ರಮಿಸಿಕೊಂಡಿದ್ದಾರೋ ಅದನ್ನ ಬೀಡಬೇಕಾ? ಶ್ರೀರಂಗಪಟ್ಟಣದ ಮೂಡಲಬಾಗಿಲು ಆಂಜನೇಯ ಸ್ವಾಮಿ ದೇವಾಲಯದ ಅಸ್ತಿ ಮುಕ್ತ ಆಗಬೇಕು. ಬರೀ ಅಯೋಧ್ಯೆಯ ರಾಮಮಂದಿರ ಜಾಗ ಮುಕ್ತ ಅದ್ರೆ ಸಾಲದು. ಶ್ರೀರಂಗಪಟ್ಟಣದ ಮೂಡಲಬಾಗಿಲು ಆಂಜನೇಯ ಸ್ವಾಮಿಯ ದೇವಾಲಯ ಜಾಗವು ಮುಕ್ತವಾಗಬೇಕು ಎಂಬ ಸಂಕಲ್ಪದೊಂದಿಗೆ ಹನುಮ ಜಯಂತಿಯನ್ನ ಆಚರಣೆ ಮಾಡಬೇಕು ಎಂದು ತಿಳಿಸಿದ್ದಾರೆ.

  • ದೇವರ ಪ್ರಸಾದ ತಿಂದು ನೂರಾರು ಜನ ಅಸ್ವಸ್ಥ – ಓರ್ವ ಮಹಿಳೆ ಸಾವು

    ದೇವರ ಪ್ರಸಾದ ತಿಂದು ನೂರಾರು ಜನ ಅಸ್ವಸ್ಥ – ಓರ್ವ ಮಹಿಳೆ ಸಾವು

    ಬೆಂಗಳೂರು: ಹನುಮ ಜಯಂತಿ (Hanuma Jayanthi) ಹಿನ್ನೆಲೆ ದೇವಾಲಯಗಳಲ್ಲಿ (Temples) ಪ್ರಸಾದ (Prasadam) ಸೇವಿಸಿ ನೂರಾರು ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ (Hoskote) ನಗರದಲ್ಲಿ ನಡೆದಿದೆ.

    ಸಿದ್ದಗಂಗಮ್ಮ (65) ಸಾವನ್ನಪ್ಪಿದ ಮಹಿಳೆ. ಹನುಮ ಜಯಂತಿ ಅಂಗವಾಗಿ ಭಾನುವಾರ ಭಕ್ತರು ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿದ್ದರು. ಅಲ್ಲಿ ಪುಳಿಯೊಗರೆ, ಪಾಯಸ ಹಾಗೂ ಲಡ್ಡನ್ನು ಪ್ರಸಾದದ ರೂಪದಲ್ಲಿ ನೆರೆದಿದ್ದ ಭಕ್ತರು ಸೇವಿಸಿದ್ದಾರೆ. ಪ್ರಸಾದ ಸೇವನೆ ಬಳಿಕ ಭಕ್ತರಿಗೆ ವಾಂತಿ ಹಾಗೂ ಭೇದಿ ಪ್ರಾರಂಭವಾಗಿದ್ದು, ನೂರಾರು ಜನ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಭಕ್ತರನ್ನು ಹೊಸಕೋಟೆ ಖಾಸಗಿ ಆಸ್ಪತ್ರೆ, ಕೋಲಾರ ಹಾಗೂ ಬೆಂಗಳೂರಿನ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ರಾಜ್ಯದ 8 ಮಂದಿಯಲ್ಲಿ JN.1 ವೈರಸ್‌ ಪತ್ತೆ

    ಇನ್ನು ಈ ಪ್ರಕರಣದಲ್ಲಿ ಹೊಸಕೋಟೆ ನಗರದ ಕಾವೇರಿ ನಗರ ನಿವಾಸಿ ಸಿದ್ದಗಂಗಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಇಂದು ಬೆಳಗ್ಗೆ ವಾಂತಿ ಭೇದಿ ಎಂದು ಆಸ್ಪತ್ರೆಗೆ ದಾಖಲಾಗಿದ್ದು, ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ 15ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗೆಳತಿ ಮೇಲೆ ಪ್ರೀತಿ; ಲಿಂಗ ಬದಲಿಸಿಕೊಂಡ್ರೂ ಮದುವೆಗೆ ಒಪ್ಪದ ಮಹಿಳಾ ಟೆಕ್ಕಿಯನ್ನ ಜೀವಂತ ಸುಟ್ಟು ಹತ್ಯೆ

    ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಕೋಟೆಯ ಖಾಸಗಿ ಆಸ್ಪತ್ರೆಗಳಲ್ಲಿ ಮೂರು ಠಾಣಾ ವ್ಯಾಪ್ತಿಯ ಜನರು ದಾಖಲಾಗಿದ್ದಾರೆ. ಅವಲಹಳ್ಳಿ, ನಂದಗುಡಿ ಹಾಗೂ ಹೊಸಕೋಟೆ ಠಾಣಾ ವ್ಯಾಪ್ತಿಯ ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅಸ್ವಸ್ಥತೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಠಾಣೆ ಪೊಲೀಸರು ಸದ್ಯ ಅಸ್ವಸ್ಥಗೊಂಡವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ ತಾಲೂಕು ಆರೋಗ್ಯಾಧಿಕಾರಿಗಳಿಂದ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ಸದ್ಯ ಎಲ್ಲಾ ಖಾಸಗಿ ಆಸ್ಪತ್ರೆಗಳಿಂದ ಅಸ್ವಸ್ಥತೆಗೆ ಕಾರಣ ಏನು ಎಂಬ ಮಾಹಿತಿಯನ್ನು ತಾಲೂಕು ವೈದ್ಯಾಧಿಕಾರಿಗಳು ಪಡೆಯುತ್ತಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ತೆಗೆದುಕೊಳ್ತಿದ್ದಿದ್ದಕ್ಕೆ ರಿಲೇಷನ್‍ಶಿಪ್ ಬೇಡ ಎಂದಿದ್ದೇನೆ: ಕಾರಿಯಪ್ಪ

    ಈ ಕುರಿತು ಹೊಸಕೋಟೆ ಪ್ರಭಾರ ಟಿಹೆಚ್‌ಒ ಡಾ. ಸುಮಾ ಮಾಹಿತಿ ನೀಡಿದ್ದು, ಸುಮಾರು ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ 80ಕ್ಕೂ ಹೆಚ್ಚು ಜನ ದಾಖಲಾಗಿದ್ದಾರೆ. ಎಲ್ಲಾ ಸ್ಯಾಂಪಲ್‌ಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಇದರ ಬಗ್ಗೆ ಕಾರಣ ಏನು ಎಂಬುದು ಲ್ಯಾಬ್ ವರದಿ ಬಳಿಕ ಗೊತ್ತಾಗಲಿದೆ. ನೀರಿನಿಂದ ಅಥವಾ ಕೆಲವು ದೇವಸ್ಥಾನಗಳಲ್ಲಿ ಪ್ರಸಾದ ಸೇವನೆ ಮಾಡಿರುವ ಬಗ್ಗೆ ಮಾಹಿತಿ ಬಂದಿದೆ. ಇದರ ಬಗ್ಗೆ ಪರಿಶೀಲನೆ ಆಗುತ್ತಿದೆ ಎಂದರು. ಇದನ್ನೂ ಓದಿ: ಆಕ್ಸಿಡೆಂಟ್ ಆಗಿ ಕಟ್ ಆದ ತಲೆ ಮೂರೂವರೆ ಗಂಟೆ ಶೋಧದ ಬಳಿಕ ಸಿಕ್ತು..!

    ಇನ್ನು ಸಿಲಿಕಾನ್ ಸಿಟಿ ಆಸ್ವತ್ರೆಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು (Health Department officials) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ನಾಗೇಶ್, ಶನಿವಾರ ಹಾಗೂ ಭಾನುವಾರ ಪ್ರಸಾದ ತಿಂದ ಹಿನ್ನೆಲೆ ಅಸ್ವಸ್ಥರಾಗಿರುವುದು ಪ್ರಾಥಮಿಕ ಮಾಹಿತಿಯಲ್ಲಿ ಕಂಡು ಬಂದಿದೆ. ಎಲ್ಲೆಲ್ಲಿ ಪ್ರಸಾದ ಸೇವಿಸಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ನೀರಿನಿಂದಲೂ ಆಗಿರುವ ಶಂಕೆ ವ್ಯಕ್ತವಾಗಿದೆ. ಈ ಎಲ್ಲಾ ಬಗ್ಗೆ ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದೇವೆ. ಈಗಾಗಲೆ 80 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿರುವವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿರುವವರ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಅಗತ್ಯ ಬಿದ್ದಲ್ಲಿ ಹೆಚ್ಚಿನ ಬೆಡ್ ಹಾಗೂ ಅಂಬುಲೆನ್ಸ್‌ಗಳ ನಿಯೋಜನೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು- ಮೃತದೇಹಕ್ಕಾಗಿ ಶೋಧ

  • ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ: ಯುವಬ್ರಿಗೇಡ್ ಕಾರ್ಯಕರ್ತನ ಪತ್ನಿ ಆರೋಪ

    ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ: ಯುವಬ್ರಿಗೇಡ್ ಕಾರ್ಯಕರ್ತನ ಪತ್ನಿ ಆರೋಪ

    ಮೈಸೂರು: ನನ್ನ ಗಂಡ ಹತ್ತು ಜನ ಬಂದರೂ ಹೆದರಲ್ಲ. ನನ್ನ ಗಂಡನ ಹತ್ಯೆ ವೈಯಕ್ತಿಕ ಕಾರಣಕ್ಕೆ ನಡೆದಿಲ್ಲ. ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ ಎಂದು ಯುವ ಬ್ರಿಗೇಡ್ (Yuva Brigade) ಕಾರ್ಯಕರ್ತ ದಿವಂಗತ ವೇಣುಗೋಪಾಲ್ (L.Venugopal) ಪತ್ನಿ ಪೂರ್ಣಿಮಾ ಆರೋಪಿಸಿದ್ದಾರೆ.

    ಮೈಸೂರಿನ (Mysuru) ಟಿ.ನರಸೀಪುರದಲ್ಲಿ (T.Narasipura) ಜುಲೈ 8ರಂದು ನಡೆದ ಹನುಮ ಜಯಂತಿ (Hanuma Jayanthi) ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿದ್ದು, ಜಗಳದಲ್ಲಿ ಯುವಬ್ರಿಗೇಡ್ ಸಕ್ರಿಯ ಕಾರ್ಯಕರ್ತನಾಗಿದ್ದ ವೇಣುಗೋಪಾಲ್ ನಾಯಕ್ ಅವರನ್ನು ದುಷ್ಕರ್ಮಿಗಳು ಬಾಟಲಿಯಿಂದ ಇರಿದು ಹತ್ಯೆಗೈದಿದ್ದರು. ಇದನ್ನೂ ಓದಿ: ಕೇಂದ್ರ ಕೊಡುವ ಅಕ್ಕಿಯಲ್ಲೂ ಕಡಿತ; ಅನ್ನಭಾಗ್ಯವಲ್ಲ ಇದು ಕನ್ನ ಭಾಗ್ಯ – ಬೊಮ್ಮಾಯಿ

    ಈ ಕುರಿತು ಮಾತನಾಡಿದ ವೇಣುಗೋಪಾಲ್ ಪತ್ನಿ, ನಾನು, ವೇಣುಗೋಪಾಲ್ ಪ್ರೀತಿಸಿ ಮದುವೆ ಆಗಿದ್ದೆವು. ನಾವು ಮೂರು ವರ್ಷಗಳಿಂದ ಹನುಮ ಜಯಂತಿ ಆಚರಣೆ ಮಾಡುತ್ತಿದ್ದೇವೆ. ನನ್ನ ಗಂಡನ ಬಳಿ ಹಣ ಇಲ್ಲ, ಅಧಿಕಾರ ಇಲ್ಲ. ಆದರೂ ಅದ್ಧೂರಿಯಾಗಿ ಹನುಮ ಜಯಂತಿ ಆಚರಣೆ ಮಾಡಿದ್ದೆವು. ಅದನ್ನು ಸಹಿಸದೆ ಕೊಲೆ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಂದ್ರಯಾನ-3 ಯಶಸ್ವಿ ಆಗಲೆಂದು ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ವಿಜ್ಞಾನಿಗಳು

    ನನ್ನ ಗಂಡನ ಸಾವಿಗೆ ನ್ಯಾಯ ಬೇಕು. ಇಲ್ಲವಾದರೇ ನಾನು ನನ್ನ ಮಗಳು, ಗಂಡ ಸತ್ತಂತೆಯೇ ಸಾಯುತ್ತೇವೆ. ಇಂದು ನನ್ನ ಗಂಡನನ್ನು ಸಾಯಿಸಿದ್ದಾರೆ. ಮುಂದಿನ ವರ್ಷ ನಾನು ಹನುಮ ಜಯಂತಿ ಮಾಡುತ್ತೇನೆ. ಆಗ ನನ್ನನ್ನು ಸಾಯಿಸುತ್ತಾರೆ. ಅದರ ಮುಂದಿನ ವರ್ಷ ನನ್ನ ಮಗಳು ಹನುಮ ಜಯಂತಿ ಮಾಡಿದರೆ ಆಗ ಅವಳನ್ನೂ ಸಾಯಿಸುತ್ತಾರೆ. ಅಲ್ಲಿಗೆ ಹಿಂದೂ ಧರ್ಮವೂ ಸಾಯುತ್ತದೆ. ನನ್ನ ಗಂಡನ ಏಳಿಗೆ ಸಹಿಸದೆ ಕೊಲೆ ಮಾಡಿದ್ದಾರೆ. ಆರೋಪಿಗಳಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ದೇಶವ್ಯಾಪಿ ಮುಂಗಾರು ಕುಂಠಿತ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ – 6 ಜನರ ಮೇಲೆ ಎಫ್‌ಐಆರ್, ಇಬ್ಬರು ಅರೆಸ್ಟ್

    ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ – 6 ಜನರ ಮೇಲೆ ಎಫ್‌ಐಆರ್, ಇಬ್ಬರು ಅರೆಸ್ಟ್

    ಮೈಸೂರು: ಟಿ. ನರಸೀಪುರದಲ್ಲಿ (T. Narseepur) ಹನುಮ ಜಯಂತಿ (Hanuman Jayanti) ಮೆರವಣಿಗೆ ವೇಳೆ ಗಲಾಟೆ ನಡೆದು ಯುವಬ್ರಿಗೇಡ್ ಕಾರ್ಯಕರ್ತನನ್ನು (Yuva Brigade Activist) ಬಾಟಲಿಯಿಂದ ಇರಿದು ಕೊಂದಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು 6 ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.

    ಜುಲೈ 8ರಂದು ಟಿ. ನರಸೀಪುರದಲ್ಲಿ ಹನುಮ ಜಯಂತಿ ಮೆರವಣಿಗೆ ನಡೆದಿದ್ದು, ದೇವಸ್ಥಾನದ ಬಳಿ ಯಾವ ವಾಹನವನ್ನು ಬಿಡದಂತೆ ತಡೆದಿದ್ದಕ್ಕೆ ಹಾಗೂ ಪುನೀತ್ ರಾಜ್‌ಕುಮಾರ್ ಫೋಟೋವನ್ನು ತೆಗೆಯಲು ಹೇಳಿದ್ದಕ್ಕೆ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಹಾಗೂ ಆರೋಪಿಗಳ ನಡುವೆ ಜಗಳ ಉಂಟಾಗಿತ್ತು. ವೇಣುಗೋಪಾಲ್ ಯಾವುದೇ ಕಾರಣಕ್ಕೂ ದೇವಸ್ಥಾನದ ಬಳಿ ಬೈಕ್ ನಿಲ್ಲಿಸಲು ಬಿಡುವುದಿಲ್ಲ ಎಂದು ಹೇಳಿದ್ದಕ್ಕೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಗಲಾಟೆ ತೆಗೆದು ಕೊಲೆ ಮಾಡಲಾಗಿದೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಪುನೀತ್ ಫೋಟೋ ತೆಗೆಸಿದ್ದೇ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆಗೆ ಕಾರಣವೇ? – ಮೃತನ ಪತ್ನಿ ಹೇಳಿದ್ದೇನು?

    ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು 6 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಮಣಿಕಂಠ, ಸಂದೇಶ್, ಅನಿಲ್, ಶಂಕರ್, ಮಂಜು ಹಾಗೂ ಹ್ಯಾರಿಸ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಪ್ರಮುಖ ಆರೋಪಿಗಳಾದ ಮಣಿಕಂಠ ಹಾಗೂ ಸಂದೇಶ್ ಬಂಧನವಾಗಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಸೆರೆಗೆ ತಂಡ ರಚಿಸಲಾಗಿದೆ. ಪ್ರಕರಣದಲ್ಲಿ ಮುಸ್ಲಿಂ ವ್ಯಕ್ತಿಯ ಕೈವಾಡ ಇಲ್ಲ. ಘಟನಾ ಸ್ಥಳದಲ್ಲಿ ಹ್ಯಾರಿಸ್ ಸರ್ವಿಸ್ ಸೆಂಟರ್ ಇತ್ತು. ಸಹಜವಾಗಿ ಘಟನೆ ನಡೆದಾಗ ಆತನು ಕೂಡಾ ಸ್ಥಳದಲ್ಲಿದ್ದ. ಘಟನೆಗೆ ಯಾವುದೇ ಕೋಮು ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಹನುಮ ಜಯಂತಿ ವೇಳೆ ಗಲಾಟೆ – ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪುನೀತ್ ಫೋಟೋ ತೆಗೆಸಿದ್ದೇ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆಗೆ ಕಾರಣವೇ? – ಮೃತನ ಪತ್ನಿ ಹೇಳಿದ್ದೇನು?

    ಪುನೀತ್ ಫೋಟೋ ತೆಗೆಸಿದ್ದೇ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆಗೆ ಕಾರಣವೇ? – ಮೃತನ ಪತ್ನಿ ಹೇಳಿದ್ದೇನು?

    ಮೈಸೂರು: ಹನುಮ ಜಯಂತಿ (Hanuman Jayanti) ಮೆರವಣಿಗೆ ವೇಳೆ 2 ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಬ್ರಿಗೇಡ್ ಕಾರ್ಯಕರ್ತನನ್ನು (Yuva Brigade Activist) ಗಾಜಿನ ಬಾಟಲಿಯಿಂದ ಚುಚ್ಚಿ ಹತ್ಯೆ ಮಾಡಿರುವ ಘಟನೆ ಮೈಸೂರಿನ (Mysuru) ಟಿ. ನರಸೀಪುರದಲ್ಲಿ (T. Narseepur) ನಡೆದಿದೆ. ಮೆರವಣಿಗೆಯಲ್ಲಿ ಪುನೀತ್ ರಾಜ್‌ಕುಮಾರ್ ಫೋಟೋ ಹಾಕಿದ್ದನ್ನು ತೆಗೆಸಿದ್ದೇ ಹತ್ಯೆಗೆ ಕಾಣವಾಯಿತಾ ಎಂಬ ಪ್ರಶ್ನೆ ಇದೀಗ ಮೂಡಿದೆ.

    ಕೊಲೆಯಾದ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಘಟನೆಯ ವಿವರವನ್ನು ತಿಳಿಸಿದ್ದಾರೆ. ಶನಿವಾರ ಟಿ. ನರಸೀಪುರದಲ್ಲಿ ಹನುಮ ಜಯಂತಿ ಮೆರವಣಿಗೆ ನಡೆದಿತ್ತು. ಈ ವೇಳೆ ವ್ಯಾನ್‌ನಲ್ಲಿ ಭಾರತ ಮಾತೆಯ ಫೋಟೋವನ್ನು ಹಾಕಲಾಗಿತ್ತು. ಅದರ ಮುಂದೆ ಪುನೀತ್ ರಾಜ್‌ಕುಮಾರ್ ಫೋಟೋ ಇದ್ದಿದ್ದರಿಂದ ಕೆಲವರು ವಿರೋಧ ವ್ಯಕ್ತಪಡಿಸಿದ್ದರು ಎಂದು ಹೇಳಿದ್ದಾರೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ವೇಣುಗೋಪಾಲ್ ಇಲ್ಲಿ ಯಾವ ವ್ಯಕ್ತಿಯ ಫೋಟೋ ಕೂಡಾ ಹಾಕೋದು ಬೇಡ ಎಂದು ಹೇಳಿ ತಡೆದಿದ್ದರು. ಆ ವೇಳೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ನಂತರ ಈ ವಿಚಾರವಾಗಿ ಮಾತಿಗೆ ಮಾತು ಬೆಳೆದು ಅವರ ಗುಂಪಿನಲ್ಲೇ ಗಲಾಟೆ ಆಯಿತು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹನುಮ ಜಯಂತಿ ವೇಳೆ ಗಲಾಟೆ – ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ

    ಘಟನೆಗೆ ಸಂಬಂಧಿಸಿದಂತೆ ಭಾನುವಾರ ಮಧ್ಯಾಹ್ನ ಕೂಡಾ ಜಗಳವಾಗಿತ್ತು. ಬಳಿಕ ರಾತ್ರಿ ರಾಜಿ ಪಂಚಾಯಿತಿ ಎಂಬ ನೆಪ ಹೇಳಿ ಕರೆಸಿಕೊಂಡು ಕೊಲೆ ಮಾಡಿದ್ದಾರೆ ಎಂದು ಮೃತ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ನಡುವೆ 2 ಟನ್ ಟೊಮೆಟೊವಿದ್ದ ವಾಹನವನ್ನೇ ಕದ್ದ ಕಳ್ಳರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹನುಮ ಜಯಂತಿ ವೇಳೆ ಗಲಾಟೆ – ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ

    ಹನುಮ ಜಯಂತಿ ವೇಳೆ ಗಲಾಟೆ – ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ

    ಮೈಸೂರು:  ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದು ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಟಿ. ನರಸೀಪುರ (T. Narseepur) ಪಟ್ಟಣದ ಹೊರವಲಯದಲ್ಲಿ ನಡೆದಿದೆ.

    ವೇಣುಗೋಪಾಲ್ ನಾಯಕ್ (32) ಕೊಲೆಯಾದ ಯುವಕ. ಹನುಮಜಯಂತಿ ವೇಳೆ 2 ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಬಳಿಕ ದುಷ್ಕರ್ಮಿಗಳು ಬಾಟಲಿಯಿಂದ ಇರಿದು ವೇಣುಗೋಪಾಲ್‌ನ ಹತ್ಯೆ ನಡೆಸಿದ್ದಾರೆ.

    ಟಿ. ನರಸೀಪುರ ಪಟ್ಟಣದ ಶ್ರೀರಾಂಪುರ ಕಲೋನಿಯ ನಿವಾಸಿಯಾಗಿದ್ದ ವೇಣುಗೋಪಾಲ್ ಯುವಬ್ರಿಗೇಡ್‌ನ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆ ನಡೆದಿದೆ. ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಳೆಯಿಂದ ಜಲಪ್ರಳಯ – ಈವರೆಗೆ 19 ಬಲಿ, ಇಂದೂ ಭಾರೀ ಮಳೆ ಸಾಧ್ಯತೆ

    ಘಟನೆಗೆ ಸಂಬಂಧಿಸಿದಂತೆ ಟಿ. ನರಸೀಪುರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಜೈನಮುನಿ ಕೊಲೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಕ್ಬಾಲ್ ಅನ್ಸಾರಿ ಹನುಮ ಮಾಲಾಧಾರಿಗಳಿಗೆ ಸ್ವಾಗತ ಕೋರಿ ಬ್ಯಾನರ್ – ಶ್ರೀರಾಮಸೇನೆ ಆಕ್ಷೇಪ

    ಇಕ್ಬಾಲ್ ಅನ್ಸಾರಿ ಹನುಮ ಮಾಲಾಧಾರಿಗಳಿಗೆ ಸ್ವಾಗತ ಕೋರಿ ಬ್ಯಾನರ್ – ಶ್ರೀರಾಮಸೇನೆ ಆಕ್ಷೇಪ

    ಕೊಪ್ಪಳ: ಹನುಮ ಜನ್ಮಸ್ಥಳ ಕೊಪ್ಪಳದ (Koppala) ಆನೆಗೊಂದಿ ಬಳಿ ಇರುವ ಅಂಜನಾದ್ರಿ ಬೆಟ್ಟದಲ್ಲಿ (Anjanadri Hills) ನಾಳೆ ಹನುಮ ಭಕ್ತರ (Devotees) ಸಮಾಗಮ ಆಗಲಿದೆ. ರಾಜ್ಯದ ಮೂಲೆ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಹನುಮ ಮಾಲೆ ವಿರ್ಸಜನೆಗೆ ಬರುತ್ತಿದ್ದಾರೆ.

    ಮಧ್ಯರಾತ್ರಿ 1 ಗಂಟೆಯಿಂದಲೇ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಂತು ಈಗಾಗಲೇ ದರ್ಶನ ಪಡೆಯುತ್ತಿದ್ದಾರೆ. ಗಂಟೆ, ಗಂಟೆಗೂ ಭಕ್ತರ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದ್ದು, ಬಾಗಲಕೋಟೆ, ಧಾರವಾಡ, ವಿಜಯಪುರ, ಬೆಳಗಾವಿ ಭಕ್ತರು ಸಾಗರೋಪದಿಯಲ್ಲಿ ಆಗಮಿಸುತ್ತಿದ್ದಾರೆ. ಜೈಶ್ರೀರಾಮ್, ಜೈ ಹನುಮಾನ್ ಘೋಷಣೆಗಳು ಮಾರ್ದನಿಸುತ್ತಿದೆ. ಇದನ್ನೂ ಓದಿ: ಶ್ರೀರಂಗಪಟ್ಟಣದಲ್ಲಿ ಕೇಸರಿ ರಣಕಹಳೆ- ಜಾಮಿಯಾ ಮಸೀದಿ ಸ್ಥಳದಲ್ಲೇ ಹನುಮ ದೇಗುಲಕ್ಕೆ ಸಂಕಲ್ಪ

    ಈ ಮಧ್ಯೆ, ಗಂಗಾವತಿಯ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ (Iqbal Ansari) ಹನುಮ ಮಾಲಾಧಾರಿಗಳಿಗೆ ಸ್ವಾಗತ ಕೋರಿ ಬ್ಯಾನರ್ ಹಾಕಿಸಿದ್ದಾರೆ. ಇದಕ್ಕೆ ಶ್ರೀರಾಮಸೇನೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದೆಲ್ಲಾ ಚುನಾವಣೆ ಗಿಮಿಕ್ ಅಂತ ಕಿಡಿಕಾರಿದೆ. ಗಂಗಾವತಿಯಲ್ಲಿ ದೇವಸ್ಥಾನಗಳನ್ನು ಕೆಡವಿ ಮಸೀದಿಗಳನ್ನು ಕಟ್ಟಿದ್ದಿರಿ ಎಂದು ಗೊತ್ತಿದೆ. ಈಶ್ವರನ ದೇವಾಲಯ ಇವತ್ತಲ್ಲ ನಾಳೆ ನಾವು ತೆಗೆಯುತ್ತೇವೆ ನಿಮಗೆ ತಾಕತ್ ಇದ್ರೆ ತಡೆಯಿರಿ. ನಾವು ಯಾವತ್ತು ಮಸೀದಿಗೆ ಬಂದಿಲ್ಲ. ನೀವು ವೋಟಿನ ಆಸೆಗೆ ಶಾಲು ಹಾಕೊಂಡು ಕುತ್ಕೋತಿರಾ ಅಂತ ಶ್ರೀರಾಮಸೇನೆಯ ಸಂಜೀವ ಮರಡಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಟ್ಟದ ಸುತ್ತಲೂ ಸಿಸಿ ಕ್ಯಾಮೆರಾ ಅಳವಡಿಕೆ ಹಾಗೂ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ. ಇದನ್ನೂ ಓದಿ: ಕುಕ್ಕರ್ ಬ್ಲಾಸ್ಟ್ ಕೇಸ್‍ನಲ್ಲಿ NIAಗೆ ಸ್ಫೋಟಕ ಮಾಹಿತಿ- ಉಗ್ರನ ಅಕೌಂಟ್‍ಗೆ ಬರ್ತಿತ್ತು ಡಾಲರ್

    Live Tv
    [brid partner=56869869 player=32851 video=960834 autoplay=true]

  • ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ

    ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ

    ನವದೆಹಲಿ: ಇತ್ತೀಚೆಗೆ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ಬುಧವಾರ ಬೆಳಗ್ಗೆ ಪೊಲೀಸ್ ಹಾಗೂ ಅರೆಸೇನಾ ಪಡೆಗಳ ನಿಯೋಜನೆಯಲ್ಲಿ ಪ್ರಾರಂಭವಾಗಿದ್ದು, ಬುಲ್ಡೋಜರ್ ಬಳಸಿ ಅಕ್ರಮ ಕಟ್ಟಡಗಳನ್ನು ಒಡೆದು ಹಾಕಿದ್ದಾರೆ.

    ರಸ್ತೆ ಬದಿಯ ಆಹಾರ ಮಳಿಗೆಗಳು ಮತ್ತು ಅಂಗಡಿಗಳನ್ನು ಬುಲ್ಡೋಜರ್ ಮೂಲಕವಾಗಿ ಕೆಡವಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಾರ್ವಜನಿಕರು ಭಾರೀ ಪ್ರಮಾಣದಲ್ಲಿ ನೆರೆದಿದ್ದು, ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು  ಹತೋಟಿಯಲ್ಲಿಡಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

    ಈ ಬಗ್ಗೆ ಜಹಾಂಗೀರ್‌ಪುರಿಯ ಸ್ಥಳೀಯರೊಬ್ಬರು ಮಾತನಾಡಿ, ಕಳೆದ 15 ವರ್ಷಗಳಿಂದ ನನ್ನ ಅಂಗಡಿ ಇಲ್ಲೇ ಇತ್ತು. ಅಕ್ರಮದ ಬಗ್ಗೆ ಮೊದಲು ಯಾರೂ ಚಕಾರ ಎತ್ತಲಿಲ್ಲ, ಈಗ ಎರಡು ಕೋಮುಗಳ ನಡುವೆ ಹಿಂಸಾಚಾರದ ಘಟನೆಯ ನಂತರ ಇದು ನಡೆಯುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಕೆಂಪಣ್ಣ ಕನಕಪುರದ ಕಾಂಗ್ರೆಸ್ ಏಜೆಂಟ್, ಕಾಂಗ್ರೆಸ್ ದಾಸ: ಈಶ್ವರಪ್ಪ

    ಈ ಹಿಂದೆ ದೆಹಲಿ ಉತ್ತರ ಮಹಾನಗರ ಪಾಲಿಕೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿತ್ತು. ಈ ಮನವಿಯಲ್ಲಿ ಏ.20 ಮತ್ತು 21ರಂದು ಅಕ್ರಮ ಕಟ್ಟಗಳನ್ನು ತೆರವುಗೊಳಿಸಲಾಗುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 400 ಪೊಲೀಸರ ಭದ್ರತೆ ಒದಗಿಸಬೇಕು ಎಂದು ಕೇಳಿಕೊಂಡಿತ್ತು. ಇದರ ಪ್ರಕಾರ ಅಧಿಕ ಪೊಲೀಸ್‌ ಭದ್ರೆತೆ ನೀಡಲಾಗಿತ್ತು.