Tag: ಹಫ್ತಾ

  • ಹಫ್ತಾ: ಬೆರಗಾಗಿಸಿ ಬೆಚ್ಚಿ ಬೀಳಿಸೋ ಭಿನ್ನ ಭೂಗತ ಸ್ಟೋರಿ!

    ಹಫ್ತಾ: ಬೆರಗಾಗಿಸಿ ಬೆಚ್ಚಿ ಬೀಳಿಸೋ ಭಿನ್ನ ಭೂಗತ ಸ್ಟೋರಿ!

    ಬೆಂಗಳೂರು: ಕರಾವಳಿ ತೀರದ ಭೂಗತ ಲೋಕದ ಅಪರೂಪದ ಕಥೆಯ ಸುಳಿವಿನೊಂದಿಗೆ ಎಲ್ಲರನ್ನು ಆವರಿಸಿಕೊಂಡಿದ್ದ ಚಿತ್ರ ಹಫ್ತಾ. ಇಂಥಾ ಅಗಾಧ ನಿರೀಕ್ಷೆಗಳ ಜೊತೆಯೇ ಹಫ್ತಾ ಈಗ ತೆರೆ ಕಂಡಿದೆ. ನಿರೀಕ್ಷೆಯಂತೆಯೇ ನಿರ್ದೇಶಕ ಪ್ರಕಾಶ್ ಹೆಬ್ಬಾಳ ಇದುವರೆಗೆ ಯಾರೂ ಮುಟ್ಟದ ಅಪರೂಪದ ಕಥೆಯೊಂದನ್ನು ಪ್ರೇಕ್ಷಕರೆದುರು ತೆರೆದಿಟ್ಟಿದ್ದಾರೆ. ಮಾಸ್ ಪ್ರೇಕ್ಷಕರಿಗೆ ಹೇಳಿ ಮಾಡಿಸಿದಂತಿರೋ ರಗಡ್ ಶೈಲಿ, ಖಡಕ್ ಡೈಲಾಗ್ ಮತ್ತು ಪ್ರತಿ ಸೀನುಗಳಲ್ಲಿಯೂ ಹಿಡಿದು ನಿಲ್ಲಿಸುವಂಥಾ ಕುತೂಹಲದ ನಿರೂಪಣೆಗಳ ಮೂಲಕ ಹಫ್ತಾ ಪ್ರೇಕ್ಷಕರಿಗೆ ಆಪ್ತವಾಗಿದೆ.

    ಅದೇ ಭೂಗತ ಜಗತ್ತು, ಅದೇ ಮಚ್ಚು ಲಾಂಗು ಮತ್ತು ಹೆಚ್ಚೆಂದರೆ ಪಿಸ್ತೂಲು… ಭೂಗತದ ಕಥೆಯೆಂದರೆ ಇಷ್ಟು ಮಾತ್ರವೇ ಅಲ್ಲ. ಭಿನ್ನವಾಗಿ ಆಲೋಚಿಸಿ ಹೊಸತೇನನ್ನೋ ಹುಡುಕಾಡೋ ಕಣ್ಣುಗಳಿದ್ದರೆ ಅದೇ ಭೂಗತದಲ್ಲಿ ಬೆರಗೊಂದನ್ನು ಆಯ್ದುಕೊಂಡು ಪ್ರೇಕ್ಷಕರನ್ನು ಚಕಿತಗೊಳಿಸಬಹುದೆಂಬುದಕ್ಕೆ ಹಫ್ತಾ ತಾಜಾ ಉದಾಹರಣೆಯಾಗಿ ನಿಲ್ಲುತ್ತದೆ. ಅದುವೇ ಇಡೀ ಸಿನಿಮಾದ ಶಕ್ತಿಯೂ ಹೌದು.

    ಅವರಿಬ್ಬರೂ ಒಟ್ಟಿಗೇ ಆಟವಾಡುತ್ತಾ ಬೆಳೆದ ಕುಚಿಕು ಗೆಳೆಯರು. ಆದರೆ ಬೆಳೆಯುತ್ತಾ ಬಂದಂತೆಲ್ಲ ಬದುಕಿನ ದಾರಿ ಟಿಸಿಲೊಡೆದು ಇಬ್ಬರದ್ದೂ ವಿರುದ್ಧ ದಿಕ್ಕಾಗಿ ಬಿಡುತ್ತೆ. ಅದರಲ್ಲೊಬ್ಬ ಭೂಗತ ಜಗತ್ತಿಗೆ ಎಂಟ್ರಿ ಕೊಟ್ಟು ಬಿಡುತ್ತಾನೆ. ಮತ್ತೊಬ್ಬನದ್ದು ನೀರಿನ ಕ್ಯಾನ್ ಮಾರೋ ಕಾಯಕ. ಹೀಗೆ ತನ್ನ ಪಾಡಿಗೆ ತಾನು ನೀರು ಮಾರೋ ಕೆಲಸ ಮಾಡಿಕೊಂಡಿದ್ದ ಹುಡುಗನಿಗೆ ಭರತನಾಟ್ಯ ವಿದ್ಯಾರ್ಥಿನಿಯೊಬ್ಬಳ ಮೇಲೆ ಮೋಹ. ಈ ವ್ಯವಹಾರ ನಿರ್ಣಾಯಕ ಹಂತ ತಲುಪೋದರೊಳಗೇ ಭರತನಾಟ್ಯದ ಗುರುವಿನ ಕಾಕದೃಷ್ಟಿ ಆ ಹುಡುಗಿಯ ಮೇಲೆ ಬಿದ್ದಿರುತ್ತೆ. ತನ್ನ ಪ್ರೀತಿಯ ಹುಡುಗಿಯನ್ನು ಆ ಕಾಮುಕನಿಂದ ಕಾಪಾಡಿಕೊಳ್ಳುವ ಸಲುವಾಗಿ ನೀರು ಮಾರುವ ಕೈಗೆ ರಕ್ತ ಮೆತ್ತಿಕೊಳ್ಳುತ್ತೆ.

    ಈ ಕ್ರೈಂ ಮೂಲಕವೇ ನೀರಿನ ಕ್ಯಾನು ಮಾರೋ ಹುಡುಗನೂ ಭೂಗತಕ್ಕೆ ಎಂಟ್ರಿ ಕೊಟ್ಟಾಕ್ಷಣ ಹಳೇ ಗೆಳೆಯರ ಸಮಾಗಮ ಸಂಭವಿಸುತ್ತೆ. ಇಬ್ಬರೂ ಶಾರ್ಪ್ ಶೂಟರ್‍ಗಳಾಗಿ ವಿಜೃಂಭಿಸುತ್ತಾರೆ. ಇಷ್ಟಾಗುತ್ತಲೇ ವಿರೋಧಿ ಬಣ ಮಸಲತ್ತು ಮಾಡಿ ಈ ಇಬ್ಬರು ನಾಯಕರಲ್ಲೊಬ್ಬನನ್ನು ಅಪಹರಿಸಿ ಲಿಂಗ ಪರಿವರ್ತನೆ ಮಾಡಿ ಬಿಡುತ್ತೆ. ಅದರಾಚೆಗೆ ಇನ್ನಷ್ಟು ವೇಗ ಪಡೆದುಕೊಂಡು ಸಾಗುವ ಕಥೆ ಸಾಮಾನ್ಯರಿಗೆ ಗೊತ್ತಿಲ್ಲದ ವಿಕ್ಷಿಪ್ತ ಜಗತ್ತನ್ನು ತೆರೆದಿಡುತ್ತಾ ಸಾಗುತ್ತದೆ. ಕ್ಷಣ ಕ್ಷಣವೂ ಕುತೂಹಲ ಕೆರಳಿಸುತ್ತಾ ಸಾಗೋ ಕಥೆ ಕ್ಲೈಮ್ಯಾಕ್ಸಿನವರೆಗೂ ಒಂದೇ ವೇಗದಲ್ಲಿ ಪ್ರೇಕ್ಷಕರನ್ನು ಕೈ ಹಿಡಿದು ಕರೆದೊಯ್ಯುತ್ತದೆ. ಈ ನಿಟ್ಟಿನಲ್ಲಿ ನಿರ್ದೇಶಕರಾಗಿ ಪ್ರಕಾಶ್ ಹೆಬ್ಬಾಳ ಚೊಚ್ಚಲ ಚಿತ್ರದಲ್ಲಿಯೇ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ.

    ವರ್ಧನ್ ತೀರ್ಥಹಳ್ಳಿ ನಾಯಕನಾಗಿ, ಮಂಗಳಮುಖಿಯ ಪಾತ್ರದಲ್ಲಿಯೂ ಅದ್ಭುತವಾಗಿ ನಟಿಸಿದ್ದಾರೆ. ರಾಘವ್ ನಾಗ್ ಕೂಡಾ ತಮ್ಮ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ. ನಾಯಕಿ ಬಿಂಬಶ್ರೀ ನಟನೆಯೂ ಮನಸೆಳೆಯುವಂತಿದೆ. ಇನ್ನುಳಿದ ಪಾತ್ರ ವರ್ಗವೂ ಈ ಚಿತ್ರವನ್ನು ಪರಿಣಾಮಕಾರಿಯಾಗುವಂಥಾ ನಟನೆ ಕೊಟ್ಟಿದೆ. ಪಕ್ಕಾ ಮಾಸ್ ಶೈಲಿಯ ಈ ಚಿತ್ರ ಹೊಸಾ ಜಗತ್ತೊಂದನ್ನು ನಿಮ್ಮೆದುರು ಅನಾವರಣಗೊಳಿಸುವಂತೆ ಮೂಡಿ ಬಂದಿದೆ.

    ರೇಟಿಂಗ್: 3.5/5

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಈಗ ಎಲ್ಲಿ ನೋಡಿದರೂ ಹಫ್ತಾರೇ ಹಫ್ತಾ!

    ಈಗ ಎಲ್ಲಿ ನೋಡಿದರೂ ಹಫ್ತಾರೇ ಹಫ್ತಾ!

    ಬೆಂಗಳೂರು: ಮೈತ್ರಿ ಮಂಜುನಾಥ್ ನಿರ್ಮಾಣದ ಹಫ್ತಾ ಚಿತ್ರದ ಹಾಡುಗಳೀಗ ಎಲ್ಲೆಡೆ ರಾರಾಜಿಸುತ್ತಿವೆ. ಅದರಲ್ಲಿಯೂ ವಿಶೇಷವಾಗಿ ಇದರ ಟೈಟಲ್ ಸಾಂಗ್ ಅಂತೂ ಟ್ರೆಂಡ್ ಸೆಟ್ ಮಾಡಿದೆ. ಯೂಟ್ಯೂಬ್‍ನಲ್ಲಿಯೂ ಟ್ರೆಂಡಿಂಗ್‍ನಲ್ಲಿರೋ ಈ ಹಾಡಿಗೆ ದಿನದಿಂದ ದಿನಕ್ಕೆ ವೀಕ್ಷಣೆಯ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

    ಪ್ರಕಾಶ್ ಹೆಬ್ಬಾಳ ನಿರ್ದೇಶನದ ಹಫ್ತಾದ ಈ ಟೈಟಲ್ ಸಾಂಗಿಗೆ ಗೌತಮ್ ಶ್ರೀವತ್ಸ ಸಂಗೀತ ಸಂಯೋಜನೆ ಮಾಡಿದ್ದಾರೆ. ಕವಿರಾಜ್ ಎಲ್ಲರನ್ನೂ ಸೆಳೆಯುವಂಥಾ ಸಾಲುಗಳ ಈ ಹಾಡನ್ನು ಬರೆದಿದ್ದಾರೆ. ಈ ಹಾಡು ಲಹರಿ ಆಡಿಯೋ ಸಂಸ್ಥೆಯ ಮೂಲಕ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಅತ್ಯಂತ ಕಡಿಮೆ ಅವಧಿಯಲ್ಲಿಯೇ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದ್ದ ಹಫ್ತಾರೇ ಹಫ್ತಾ ಎಂಬ ಈ ಹಾಡೀಗ ಎಲ್ಲರನ್ನೂ ಗುನುಗುನಿಸುತ್ತಿದೆ.

    ಗೌತಮ್ ಶ್ರೀವತ್ಸ ಈ ಮೂಲಕ ಮತ್ತೆ ಸದ್ದು ಮಾಡಿದ್ದಾರೆ. ರವಿಚಂದ್ರನ್, ಹಂಸಲೇಖಾ ಮುಂತಾದವರ ಗರಡಿಯಲ್ಲಿ ಪಳಗಿಕೊಂಡಿರೋ ಗೌತಮ್ ಈ ಸಿನಿಮಾಗೆ ಹಿನ್ನೆಲೆ ಸಂಗೀತವನ್ನೂ ಒದಗಿಸಿದ್ದಾರೆ. ಹಫ್ತಾ ರೇ ಹಫ್ತಾ ಎಂಬುದು ಇಡೀ ಚಿತ್ರದ ಫೋರ್ಸ್ ಧ್ವನಿಸುವಂಥಾ ಹಾಡು. ಇದಕ್ಕೆ ಪೂರಕವಾದ ಆವೇಗದಲ್ಲಿಯೇ ಇಡೀ ಚಿತ್ರ ಮೂಡಿ ಬಂದಿದೆಯಂತೆ.

    ಕರಾವಳಿ ಕಿನಾರೆಯ ಭೂಗತ ಜಗತ್ತಿನ ಕಥೆ ಹೊಂದಿರೋ ಈ ಚಿತ್ರ ಈಗಾಗಲೇ ಡಿಫರೆಂಟಾದ ಪೋಸ್ಟರ್, ಟೀಸರ್‍ಗಳಿಂದಲೇ ವ್ಯಾಪಕ ಮನ್ನಣೆ ಪಡೆದುಕೊಂಡಿದೆ. ಹಾಡುಗಳು ಹೊರ ಬಂದ ಮೇಲಂತೂ ಹಫ್ತಾದ ಖದರ್ ಎಲ್ಲ ದಿಕ್ಕುಗಳತ್ತಲೂ ಹರಡಿಕೊಳ್ಳುತ್ತಿದೆ. ಮೈತ್ರಿ ಪ್ರೊಡಕ್ಷನ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರೋ ಹಫ್ತಾದ ಖದರ್ ಇಷ್ಟರಲ್ಲಿಯೇ ಪ್ರೇಕ್ಷಕರ ಮುಂದೆ ಪ್ರದರ್ಶನಗೊಳ್ಳಲಿದೆ.

  • ಹಫ್ತಾ: ಕಡಲ ತಡಿಯಿಂದ ಬೀಸಿಬಂದ ಬಿರುಗಾಳಿಯಂಥಾ ಟ್ರೈಲರ್!

    ಹಫ್ತಾ: ಕಡಲ ತಡಿಯಿಂದ ಬೀಸಿಬಂದ ಬಿರುಗಾಳಿಯಂಥಾ ಟ್ರೈಲರ್!

    ಬೆಂಗಳೂರು: ಮೈತ್ರಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರೋ ಚಿತ್ರ ಹಫ್ತಾ. ವರ್ಧನ್ ತೀರ್ಥಹಳ್ಳಿ ನಾಯಕ ನಟನಾಗಿ ಲಾಂಚ್ ಆಗುತ್ತಿರೋ ಈ ಚಿತ್ರ ಈಗಾಗಲೇ ಪ್ರೇಕ್ಷಕರ ಗಮನವನ್ನು ತನ್ನತ್ತ ಆಕರ್ಷಿಸಿಕೊಂಡಿದೆ. ಪೋಸ್ಟರ್‍ಗಳ ಮೂಲಕವೇ ಕಡಲ ತಡಿಯ ಭೂಗತ ಲೋಕದ ರೋಚಕ ಸ್ಟೋರಿಯ ಝಲಕ್ ತೋರಿಸಿರುವ ಹಫ್ತಾದ ಟ್ರೈಲರ್ ಇದೀಗ ಬಿಡುಗಡೆಯಾಗಿದೆ. ಬೆರಗಾಗುವಂಥಾ ಮೇಕಿಂಗ್, ಅದಕ್ಕೆ ತಕ್ಕುದಾದ ಪಾತ್ರವರ್ಗ ಮತ್ತು ಖಡಕ್ ಕಥೆಯ ಸುಳಿವಿನ ಮೂಲಕ ಇದು ಸೆನ್ಸೇಷನ್ ಕ್ರಿಯೇಟ್ ಮಾಡಿದೆ.

    ಈಗಾಗಲೇ ಚಿತ್ರರಂಗದ ಗಣ್ಯರೇ ಒಂದಷ್ಟು ಮಂದಿ ಹಫ್ತಾ ಖದರನ್ನು ಕಂಡು ಮೆಚ್ಚಿಕೊಂಡಿದ್ದಾರೆ. ಒಳ್ಳೆ ಮಾತಾಡುತ್ತಲೇ ಶುಭ ಕೋರಿದ್ದಾರೆ. ಇದೀಗ ಬಿಡುಗಡೆಯಾಗಿರೋ ಟ್ರೈಲರ್ ಹಫ್ತಾದ ಅಂತರಾಳವೇನೆಂಬುದರ ಸ್ಪಷ್ಟ ಸೂಚನೆ ನೀಡಿದೆ. ಕರಾವಳಿ ತೀರದಲ್ಲಿನ ಮಾಫಿಯಾ ಜಗತ್ತಿನ ಸುತ್ತ ಅತ್ಯಾಕರ್ಷಕ ಕಥೆ ಚಿತ್ರವಿಚಿತ್ರ ಪಾತ್ರಗಳ ಮೂಲಕ ಅನಾವರಣಗೊಂಡಿರೋದೂ ಪಕ್ಕಾ ಆಗಿದೆ. ವರ್ಧನ್ ತೀರ್ಥಹಳ್ಳಿ ನಾಯಕನಾಗಿ, ವಿಲನ್ ಆಗಿ ಮಂಗಳಮುಖಿ ಪಾತ್ರದಲ್ಲಿಯೂ ಅಬ್ಬರಿಸಿದ ರೀತಿ ಪ್ರೇಕ್ಷಕರನ್ನು ಸಂತೃಪ್ತಗೊಳಿಸಿದೆ.

    ಈ ಮೂಲಕವೇ ನಿರ್ದೇಶಕ ಪ್ರಕಾಶ್ ಹೆಬ್ಬಾಳ ಯಾರೂ ಮುಟ್ಟದ ಕಥೆಯೊಂದನ್ನು ಎತ್ತಿಕೊಂಡು ಆರಂಭಿಕ ಹೆಜ್ಜೆಗಳಲ್ಲಿಯೇ ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮೈತ್ರಿ ಮಂಜುನಾಥ್ ಮತ್ತು ಬಾಲರಾಜ್ ಸೇರಿಕೊಂಡು ಈ ಚಿತ್ರವನ್ನು ಅದ್ಧೂರಿಯಾಗಿಯೇ ನಿರ್ಮಾಣ ಮಾಡಿದ್ದಾರೆಂಬುದಕ್ಕೂ ಈ ಟ್ರೈಲರ್ ಸಾಕ್ಷಿಯಂತಿದೆ. ಒಟ್ಟಾರೆಯಾಗಿ ಕಡಲ ಕಿನಾರೆಯ ಭೂಗತ ಲೋಕದ ಈ ವಿಶಿಷ್ಟ ಕಥಾನಕ ಭಾರೀ ಗೆಲುವಿನ ರೂವಾರಿಯಾಗೋ ಮುನ್ಸೂಚನೆಯಂತೆ ಈ ಟ್ರೈಲರ್ ಮೂಡಿ ಬಂದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಹಫ್ತಾ ಬಿಡುಗಡೆಯ ದಿನಾಂಕವೂ ಹೊರಬೀಳಲಿದೆ.

  • ಹಫ್ತಾ: ಸ್ಯಾಂಡಲ್‍ವುಡ್‍ಗೆ ಆಗಮಿಸಿದ ಯುವ ನಿರ್ಮಾಪಕ ಬಾಲರಾಜ್!

    ಹಫ್ತಾ: ಸ್ಯಾಂಡಲ್‍ವುಡ್‍ಗೆ ಆಗಮಿಸಿದ ಯುವ ನಿರ್ಮಾಪಕ ಬಾಲರಾಜ್!

    ಬೆಂಗಳೂರು: ವರ್ಧನ್ ತೀರ್ಥಹಳ್ಳಿ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ `ಹಫ್ತಾ’ ಚಿತ್ರದ ಹವಾ ಅಡೆತಡೆಯಿಲ್ಲದೇ ಮುಂದುವರೆಯುತ್ತಿದೆ. ಈಗಾಗಲೇ ಬಿಡುಗಡೆಯಾಗಿರೋ ಟ್ರೈಲರ್, ಹಾಡುಗಳ ಮೂಲಕವೇ ಭರ್ಜರಿ ಟಾಕ್ ಕ್ರಿಯೇಟ್ ಮಾಡಿರೋ ಈ ಸಿನಿಮಾ ಬಗ್ಗೆ ವ್ಯಾಪಕವಾದ ಸಕಾರಾತ್ಮಕ ಪ್ರತಿಕ್ರಿಯೆಗಳೇ ಕೇಳಿ ಬರುತ್ತಿವೆ. ಯಾವುದೇ ಒಂದು ಸಿನಿಮಾ ಅಂದರೂ ಹೆಚ್ಚಿನದಾಗಿ ಹಲವರ ಅದೆಷ್ಟೋ ವರ್ಷದ ಕನಸು ನನಸಾದ ಕಥೆಗಳಿರುತ್ತವೆ. ಹಫ್ತಾ ಚಿತ್ರದ ವಿಚಾರದಲ್ಲಿಯೂ ಅಂಥವೇ ಒಂದಷ್ಟು ಮೊದಲ ಕನಸಿನ ಕಥೆಗಳಿವೆ. ಈ ಚಿತ್ರದ ನಿರ್ಮಾಪಕರಲ್ಲೊಬ್ಬರಾಗಿರೋ ಬಾಲರಾಜ್ ಟಿಸಿ ಪಾಳ್ಯ ಕೂಡಾ ವರ್ಷಾಂತರಗಳ ಕನಸೊಂದು ಹಫ್ತಾ ಮೂಲಕ ನನಸಾದ ಖುಷಿಯಲ್ಲಿದ್ದಾರೆ.

    ಹಫ್ತಾ ನಿರ್ದೇಶಕ ಪ್ರಕಾಶ್ ಹೆಬ್ಬಾಳ ಅವರ ಪಾಲಿಗೂ ಮೊದಲ ಹೆಜ್ಜೆ. ವರ್ಧನ್ ತೀರ್ಥಹಳ್ಳಿ ಈಗಾಗಲೇ ಹಲವಾರು ಚಿತ್ರಗಳಲ್ಲಿ ನಟಿಸಿದ್ದರೂ ನಾಯಕನಾಗಿ ಅವರಿಗೂ ಇದು ಮೊದಲ ಹೆಜ್ಜೆಯೇ. ಇನ್ನು ನಿರ್ಮಾಪಕರಾದ ಮೈತ್ರಿ ಮಂಜುನಾಥ್ ಅವರೂ ಇದೇ ಸಾಲಿನಲ್ಲಿದ್ದಾರೆ. ಅದೇ ರೀತಿ ತಮ್ಮದೇ ಬ್ಯುಸಿನೆಸ್, ವಹಿವಾಟು ಅಂತಿದ್ದರೂ ಸಿನಿಮಾ ಧ್ಯಾನವನ್ನು ಬಹುವಾಗಿ ಹಚ್ಚಿಕೊಂಡಿದ್ದ ಬಾಲರಾಜ್ ಕೂಡಾ ಹಫ್ತಾ ಮೂಲಕವೇ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

    ಬಾಲರಾಜ್ ಮೂಲ ಬೆಂಗಳೂರಿಗರೇ. ಟಿಸಿ ಪಾಳ್ಯ ಏರಿಯಾದಲ್ಲಿಯೇ ಹುಟ್ಟಿ ಬೆಳೆದ ಅವರು ಕಾಲೇಜು ದಿನಗಳಲ್ಲಿಯೇ ಸಹಜವೆಂಬಂಥಾ ಸಿನಿಮಾ ವ್ಯಾಮೋಹ ಹೊಂದಿದ್ದವರು. ತಾನೂ ಕೂಡಾ ಈ ಬಣ್ಣದ ಜಗತ್ತಿನ ಭಾಗವಾಗಬೇಕೆಂಬ ಕನಸನ್ನು ಆ ಕಾಲದಿಂದಲೇ ಕಾಪಿಟ್ಟುಕೊಂಡು ಬಂದಿದ್ದ ಬಾಲರಾಜ್ ಆ ನಂತರದಲ್ಲಿ ಜೀವನೋಪಾಯಕ್ಕಾಗಿ ತಮ್ಮದೇ ಬ್ಯುಸಿನೆಸ್‍ನ ಹಾದಿ ಹಿಡಿದಿದ್ದರು. ಈ ಜಂಜಾಟ, ಒತ್ತಡಗಳ ನಡುವೆಯೂ ಸಿನಿಮಾ ನಿರ್ಮಾಣ ಮಾಡಬೇಕೆಂಬ ಬಯಕೆ ಹೊಂದಿದ್ದ ಅವರಿಗೆ ಕಡೆಗೂ ಹಫ್ತಾ ಮೂಲಕ ಆ ಅವಕಾಶ ಕೂಡಿ ಬಂದಿದೆ.

    ಈ ಸಿನಿಮಾ ನಿರ್ದೇಶಕರಾದ ಪ್ರಕಾಶ್ ಹೆಬ್ಬಾಳ, ನಿರ್ಮಾಪಕ ಮೈತ್ರಿ ಮಂಜುನಾಥ್ ಹಾಗೂ ಬಾಲರಾಜ್ ಸ್ನೇಹಿತರು. ವರ್ಷಗಳ ಹಿಂದೆ ಪ್ರಕಾಶ್ ಹೆಬ್ಬಾಳ ಹಫ್ತಾ ಚಿತ್ರದ ಬಗ್ಗೆ ಹೇಳಿ, ಕಥೆಯನ್ನೂ ವಿವರಿಸಿ ಬಾಲರಾಜ್ ಮುಂದೆ ನಿರ್ಮಾಣದಲ್ಲಿ ಭಾಗಿಯಾಗುವ ಬಗ್ಗೆ ಆಫರ್ ಇಟ್ಟಿದ್ದರಂತೆ. ಆ ಕ್ಷಣವೇ ಒಪ್ಪಿಗೆ ಸೂಚಿಸಿದ್ದ ಬಾಲರಾಜ್ ಅಂಥಾದ್ದೊಂದು ಹಠಾತ್ ನಿರ್ಧಾರ ತಳೆಯಲು ಕಾರಣವಾದದ್ದು ಹಫ್ತಾದ ಡಿಫರೆಂಟ್ ಕಥೆ. ಆ ಬಳಿಕ ಅಂದುಕೊಂಡಂತೆಯೇ ಸಾಗಿ ಬಂದು ನಿರೀಕ್ಷೆಗೂ ಮೀರಿ ಈ ಚಿತ್ರವನ್ನು ಅಚ್ಚುಕಟ್ಟಾಗಿ ರೂಪಿಸಿರುವ ತೃಪ್ತಿ ಬಾಲರಾಜ್ ಅವರಲ್ಲಿದೆ.

    ಇಂಥಾ ಮೊದಲ ಹೆಜ್ಜೆಗಳು ಒಳ್ಳೆ ಅಭಿಪ್ರಾಯ, ಪ್ರೋತ್ಸಾಹಗಳಿಂದ ಮುದಗೊಳ್ಳುತ್ತವೆ. ಅದರಲ್ಲಿಯೂ ಗೆಲುವಿನ ಸೂಚನೆ ಸಿಕ್ಕಿದರಂತೂ ಉತ್ಸಾಹ ಇನ್ನೂ ಇಮ್ಮಡಿಸುತ್ತದೆ. ಬಾಲರಾಜ್ ಈಗ ಅಂಥಾದ್ದೇ ಮೂಡಿನಲ್ಲಿದ್ದಾರೆ. ಹಫ್ತಾ ಚಿತ್ರಕ್ಕೆ ಎಲ್ಲ ದಿಕ್ಕುಗಳಿಂದಲೂ ಸಕಾರಾತ್ಮಕ ಸ್ವಾಗತವೇ ಸಿಗುತ್ತಿದೆ. ಇನ್ನೇನು ತೆರೆಗೆ ಬರಲಿರೋ ಈ ಚಿತ್ರದ ಗೆಲುವಿನ ಸೂಚನೆ ಈಗಾಗಲೇ ಸಿಕ್ಕಿಬಿಟ್ಟಿದೆ. ಹಫ್ತಾ ಮೂಲಕವೇ ನಿರ್ಮಾಪಕರಾಗಿ ಅದೃಷ್ಟ ಪರೀಕ್ಷೆಗಿಳಿದಿರೋ ಬಾಲರಾಜ್ ಕೂಡಾ ಇದರಿಂದ ಖುಷಿಗೊಂಡು ದೊಡ್ಡ ಗೆಲುವೊಂದನ್ನು ಎದುರು ನೋಡುತ್ತಿದ್ದಾರೆ.

    https://www.youtube.com/watch?v=zZefRDFISRU

  • ತಪ್ತ ಮನಸಿನ ನಿರ್ದೇಶಕ ಪ್ರಕಾಶ್ ಹೆಬ್ಬಾಳರ ಚೊಚ್ಚಲ ‘ಹಫ್ತಾ’!

    ತಪ್ತ ಮನಸಿನ ನಿರ್ದೇಶಕ ಪ್ರಕಾಶ್ ಹೆಬ್ಬಾಳರ ಚೊಚ್ಚಲ ‘ಹಫ್ತಾ’!

    ಬೆಂಗಳೂರು: ಈಗ ಎಲ್ಲೆಡೆ ಟೀಸರ್ ಮತ್ತು ಹಾಡುಗಳ ಮೂಲಕ ಪ್ರೇಕ್ಷಕರ ನಡುವೆ ಚರ್ಚೆ ಹುಟ್ಟುಹಾಕಿರೋ ಚಿತ್ರ ಹಫ್ತಾ. ಈಗಾಗಲೇ ಹಲವಾರು ಚಿತ್ರಗಳಲ್ಲಿ ಖಳನಟನಾಗಿ ಅಬ್ಬರಿಸಿರೋ ಯುವ ನಟ ವರ್ಧನ್ ತೀರ್ಥಹಳ್ಳಿ ಈ ಸಿನಿಮಾ ಮೂಲಕ ನಾಯಕನಾಗಿ ಹೊರಹೊಮ್ಮುವ ಖುಷಿಯಲ್ಲಿದ್ದಾರೆ. ಈವರೆಗೂ ಹೊರಬಂದಿರೋ ಪೋಸ್ಟರ್ ಗಳಲ್ಲಿನ ವಿಭಿನ್ನ ಛಾಯೆಯ ಮೂಲಕವೇ ಭರವಸೆ ಹುಟ್ಟಿಸಿವೆ. ಕರಾವಳಿ ತೀರದ ಭೂಗತ ಮಜಲೊಂದನ್ನು ತೆರೆದಿಡುವ ಮಜವಾದ ಕಥಾ ಹಂದರ ಹೊಂದಿರೋ ಈ ಚಿತ್ರ ನಿರ್ದೇಶಕ ಪ್ರಕಾಶ್ ಹೆಬ್ಬಾಳ ಅವರ ಮೊದಲ ಕನಸು.

    ಇಂಥಾ ಪ್ರತೀ ಮೊದಲ ಹೆಜ್ಜೆಯ ಹಿಂದೆಯೂ ಅದೆಷ್ಟೋ ವರ್ಷಗಳ ತಪನೆಯಿರುತ್ತದೆ. ಕಷ್ಟ ಕಾರ್ಪಣ್ಯಗಳನ್ನು ದಾಟಿಕೊಂಡು ಗುರಿಯತ್ತ ಸಾಗಿ ಬಂದ ಸ್ಫೂರ್ತಿದಾಯಕ ಕಹಾನಿಯೂ ಇರುತ್ತದೆ. ಇದೀಗ ಹಫ್ತಾ ಎಂಬ ಅಪರೂಪದ ಚಿತ್ರವೊಂದರ ಮೂಲಕವೇ ನಿರ್ದೇಶಕನಾಗುವ ಕನಸನ್ನು ನನಸು ಮಾಡಿಕೊಂಡಿರುವ ಪ್ರಕಾಶ್ ಹೆಬ್ಬಾಳ ಅವರ ಹಿಂದೆಯೂ ಅಂಥಾದ್ದೇ ಒಂದು ಕಥೆಯಿದೆ. ಏಳೆಂಟು ವರ್ಷಗಳಿಂದ ಸಿನಿಮಾ ಕ್ಷೇತ್ರದಲ್ಲಿ ಅವುಡುಗಚ್ಚಿ ಶ್ರದ್ಧೆಯಿಂದ ಕಾರ್ಯ ನಿರ್ವಹಿಸುತ್ತಾ ಕಡೆಗೂ ಒಂದೊಳ್ಳೆ ಸಿನಿಮಾ ನಿರ್ದೇಶನ ಮಾಡಿದ ಆತ್ಮತೃಪ್ತಿಯೂ ಅವರ ಮಾತುಗಳಲ್ಲಿ ಹಣಕಿ ಹಾಕುತ್ತವೆ.

    ಪ್ರಕಾಶ್ ಹೆಬ್ಬಾಳ ರಮೇಶ್ ಅರವಿಂದ್, ದಯಾಳ್ ಪದ್ಮನಾಭನ್ ಮುಂತಾದವರ ಗರಡಿಯಲ್ಲಿ ಪಳಗಿಕೊಂಡವರು. ಬೆಂಗಳೂರಿನಂಥಾ ಸಿಟಿಯಲ್ಲಿ ಹುಟ್ಟಿದರೂ ಬೇರೆ ಭಾಗಗಳತ್ತ, ಅಲ್ಲಿನ ಆಗು ಹೋಗುಗಳತ್ತ ಬೆರಗುಗಣ್ಣಿನ ನೋಟ ಹೊಂದಿದ್ದ ಅವರ ಪಾಲಿಗೆ ಕಾಲೇಜು ದಿನಗಳಲ್ಲಿಯೇ ಸಿನಿಮಾ ನಿರ್ದೇಶಕನಾಗಬೇಕೆಂಬ ಕನಸು ತೀವ್ರವಾಗಿತ್ತು. ಓದೆಲ್ಲವೂ ಮುಗಿದಾಕ್ಷಣವೇ ತನ್ನ ಕನಸಿನ ಕ್ಷೇತ್ರದ ಕಕ್ಷೆ ತಲುಪಿಕೊಳ್ಳಲು ಇನ್ನಿಲ್ಲದಂತೆ ಪ್ರಯತ್ನಿಸಲಾರಂಭಿಸಿದ್ದ ಅವರು ಕಡೆಗೂ ಜೋಕಾಲಿ ಎಂಬ ಚಿತ್ರದ ಮೂಲಕ ಅದನ್ನು ಸಾಕಾರಗೊಳಿಸಿಕೊಂಡಿದ್ದರು. ಈ ಚಿತ್ರದಲ್ಲವರು ಅಸಿಸ್ಟೆಂಟ್ ಡೈರೆಕ್ಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದರು.

    ಈ ಮೂಲಕವೇ ನಿರ್ದೇಶನದ ಪಟ್ಟುಗಳ ಮೊದಲ ಪಾಠ ಅರಿತುಕೊಂಡ ಪ್ರಕಾಶ್ ಪಾಲಿಗೆ ಮತ್ತೊಂದು ಅಯಾಮವನ್ನು ಅನಾವರಣಗೊಳಿಸಿದ್ದು ದಯಾಳ್ ಪದ್ಮನಾಭನ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಹಗ್ಗದ ಕೊನೆ ಸಿನಿಮಾ. ಈ ನಡುವೆಯೇ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುವ ಸಲುವಾಗಿ ಪೀಕ್ ಅವರ್ ಎಂಬೊಂದು ಕಿರು ಚಿತ್ರವನ್ನೂ ನಿರ್ದೇಶನ ಮಾಡಿದ್ದರು. ಇದು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿತ್ತು.

    ಇದರಿಂದಲೇ ಭರವಸೆ ತುಂಬಿಕೊಂಡ ಪ್ರಕಾಶ್ ಹೆಬ್ಬಾಳ, ಒಂದು ವಿಭಿನ್ನವಾದ ಕಥೆಯೊಂದಿಗೇ ನಿರ್ದೇಶಕನಾಗಿ ಪಾದಾರ್ಪಣೆ ಮಾಡಬೇಕೆಂಬ ನಿರ್ಧಾರದೊಂದಿಗೆ ಮುಂದುವರೆಯಲಾರಂಭಿಸಿದ್ದರು. ಆಗ ಅವರಿಗೆ ಆಕರ್ಷಣೆಯಾಗಿ ಕಂಡದ್ದು ಕರಾವಳಿ ತೀರದ ಭೂಗತ ಜಗತ್ತು. ಈಗಾಗಲೇ ಆ ಭಾಗದ ಕೆಲವರು ಕೋಸ್ಟಲ್ ಏರಿಯಾದ ಕತ್ತಲ ಲೋಕದ ಹಲವಾರು ಮಜಲುಗಳನ್ನು ತೆರೆ ಮೇಲೆ ತಂದಿದ್ದಾರೆ. ಆದರೆ ಅದರಾಚೆಯ ಗುರುತಿರದ ಮಜಲುಗಳನ್ನು ದಕ್ಕಿಸಿಕೊಳ್ಳೋದು ತಪ್ತ ಮನಸುಗಳಿಗೆ ಮಾತ್ರವೇ ಸಾಧ್ಯ. ಅಂಥಾದ್ದೊಂದು ಮನಸ್ಥಿತಿ ಇರೋದರಿಂದಲೇ ಅದೆಲ್ಲಕ್ಕಿಂತಲೂ ಭಿನ್ನ ನೋಟದೊಂದಿಗೇ ಮಜವಾದೊಂದು ಕಥೆ ಹೆಣೆದ ಪ್ರಕಾಶ್ ಕಡೆಗೂ ಅಂದುಕೊಂಡಂತೆಯೇ ಅದಕ್ಕೆ ದೃಶ್ಯ ರೂಪ ನೀಡಿದ್ದಾರೆ.

    ಪ್ರತಿಯೊಂದರಲ್ಲಿಯೂ ಬಹಳ ಎಚ್ಚರಿಕೆಯಿಂದ, ಶ್ರದ್ಧೆಯಿಂದಲೇ ಪ್ರಕಾಶ್ ಹಫ್ತಾ ಚಿತ್ರವನ್ನು ರೂಪಿಸಿದ್ದಾರೆ. ಆ ಕಾರಣದಿಂದಲೇ ಬಿಡುಗಡೆಯ ಹಂತದಲ್ಲಿರೋ ಹಫ್ತಾ ದೊಡ್ಡ ಮಟ್ಟದಲ್ಲಿಯೇ ಸೌಂಡ್ ಮಾಡುತ್ತಿದೆ. ಯಾರಿಗೇ ಆದರೂ ಮೊದಲ ಪ್ರಯತ್ನಕ್ಕೇ ಈ ಪಾಟಿ ಪಾಸಿಟಿವ್ ವಾತಾವರಣ ಸೃಷ್ಟಿಯಾದರೆ ಖುಷಿಯಾಗುತ್ತದೆ. ಪ್ರಕಾಶ್ ಹೆಬ್ಬಾಳ್ ಕೂಡಾ ಇದೀಗ ಅಂಥಾದ್ದೊಂದು ತುಂಬು ಖುಷಿಯ ವಾರಸೂದಾರರಾಗಿದ್ದಾರೆ. ಈ ಮೂಲಕ ತಮ್ಮ ಚೊಚ್ಚಲ ಪ್ರಯತ್ನಕ್ಕೆ ಗೆಲುವಾಗುವ ತುಂಬು ಭರವಸೆಯೂ ಅವರಲ್ಲಿದೆ.

  • ಹಫ್ತಾ: ನಿರ್ಮಾಪಕ ಮೈತ್ರಿ ಮಂಜುನಾಥ್ ಕಣ್ಣಲ್ಲಿ ಗೆಲುವಿನ ಪ್ರಭೆ!

    ಹಫ್ತಾ: ನಿರ್ಮಾಪಕ ಮೈತ್ರಿ ಮಂಜುನಾಥ್ ಕಣ್ಣಲ್ಲಿ ಗೆಲುವಿನ ಪ್ರಭೆ!

    ವರ್ಧನ್ ತೀರ್ಥಹಳ್ಳಿ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ ಚಿತ್ರ ಹಫ್ತಾ. ಪ್ರಕಾಶ್ ಹೆಬ್ಬಾಳ ನಿರ್ದೇಶನದ ಈ ಚಿತ್ರ ವಿಶೇಷವಾದೊಂದು ಕಥೆಯನ್ನು ಹೊಂದಿದೆಯೆಂಬ ಅಂದಾಜು ಈಗಾಗಲೇ ಪ್ರೇಕ್ಷಕರಿಗೆಲ್ಲ ಸಿಕ್ಕಿ ಬಿಟ್ಟಿದೆ. ಯಾವುದೇ ಯಶಸ್ವಿ ಚಿತ್ರ ಬಿಡುಗಡೆಗೂ ಮುಂಚೆಯೇ ಸಕಾರಾತ್ಮಕವಾದ ಟಾಕ್ ಕ್ರಿಯೇಟ್ ಮಾಡುತ್ತವಲ್ಲ? ಆ ರೀತಿಯ ಲಕ್ಷಣಗಳಿಗೆಲ್ಲ ಹಫ್ತಾ ಚಿತ್ರ ರೂವಾರಿಯಾಗಿದೆ. ಇದು ನಿರ್ಮಾಪಕರಾಗಿ ಮೊದಲ ಪ್ರಯತ್ನದಲ್ಲಿಯೇ ಮೈತ್ರಿ ಮಂಜುನಾಥ್ ಅವರಿಗೆ ತುಂಬು ಭರವಸೆಯನ್ನೂ ಹುಟ್ಟಿಸಿದೆ.

    ಮೈತ್ರಿ ಮಂಜುನಾಥ್ ಅವರು ಹಫ್ತಾ ಚಿತ್ರವನ್ನು ಮೈತ್ರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಉದ್ಯಮಿಯಾಗಿ ಗುರುತಿಸಿಕೊಂಡಿರೋ ಮಂಜುನಾಥ್ ಮೈತ್ರಿ ಗ್ರೂಪ್ಸ್ ಮಾಲೀಕರು. ಇದರಡಿಯಲ್ಲಿ ಹಲವಾರು ಉದ್ಯಮಗಳ ಒಡೆಯರಾಗಿರುವ ಅವರ ಪಾಲಿಗೆ ಸಿನಿಮಾ ಮಾಡಬೇಕೆಂಬುದು ಹಳೆಯ ಕನಸು. ಹಾಗಂತ ಅದಕ್ಕೇನೂ ರೂಪುರೇಷೆ ಇಲ್ಲದಿರಲಿಲ್ಲ. ಒಟ್ಟಾರೆ ಒಂದು ಸಿನಿಮಾ ಮಾಡಿ ನಿರ್ಮಾಪಕ ಅನ್ನಿಸಿಕೊಳ್ಳುವ ಯಾವ ಅವಸರವೂ ಅವರಿಗಿರಲಿಲ್ಲ. ಎಲ್ಲ ರೀತಿಯಿಂದಲೂ ತಮಗೆ ಒಪ್ಪಿಗೆಯಾಗುವ, ಕೇಳಿದಾಕ್ಷಣವೇ ಗೆಲುವಿನ ಸೂಚನೆ ಸಿಗುವಂಥಾ ಕಥೆ ಸಿಕ್ಕಿದಾಗಲಷ್ಟೇ ನಿರ್ಮಾಪಕರಾಗಿ ಹೊಸ ಯಾನ ಆರಂಭಿಸಬೇಕೆಂಬ ನಿರ್ಧಾರ ಅವರದ್ದಾಗಿತ್ತು.

    ಇಂಥಾದ್ದೊಂದು ಅಚಲ ನಿರ್ಧಾರಕ್ಕೆ ಹೊಸಾ ಆವೇಗ ಸಿಕ್ಕಿದ್ದು ಎರಡು ವರ್ಷಗಳ ಹಿಂದೆ. ಈ ಸಿನೆಮಾದ ನಿರ್ದೇಶಕ ಪ್ರಕಾಶ್ ಹೆಬ್ಬಾಳ ಮಂಜುನಾಥ್ ಅವರಿಗೆ ಬಹು ಕಾಲದ ಗೆಳೆಯ. ಅದೊಂದು ದಿನ ಎಲ್ಲ ತಯಾರಿ ಮಾಡಿಕೊಂಡು ಬಂದಿದ್ದ ಪ್ರಕಾಶ್ ಹಫ್ತಾ ಚಿತ್ರದ ಕಥೆಯನ್ನು ಮಂಜುನಾಥ್ ಅವರಿಗೆ ಒಪ್ಪಿಸಿದ್ದರಂತೆ. ಪೂರ್ತಿ ಕಥೆ ಕೇಳಿದವರಿಗೆ ತಾನು ನಿರ್ಮಾಪಕನಾಗಿ ಪಾದಾರ್ಪಣೆ ಮಾಡಲು ಇದೇ ಸರಿಯಾದ ಕಥೆ ಅಂತ ಆ ಕ್ಷಣವೇ ಅನ್ನಿಸಿತ್ತಂತೆ. ಈ ಕಾರಣದಿಂದಲೇ ಮೈತ್ರಿ ಪ್ರೊಡಕ್ಷನ್ಸ್ ಅಸ್ತಿತ್ವಕ್ಕೆ ಬಂದು ಹಫ್ತಾ ಚಿತ್ರಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿತ್ತು.

    ಬೆಂಗಳೂರಿನವರೇ ಆದ ಮಂಜುನಾಥ್ ಪಾಲಿಗೆ ಸಿನಿಮಾ ಆಕರ್ಷಣೆ ಇಂದು ನಿನ್ನೆಯದ್ದಲ್ಲ. ಈ ಬಗ್ಗೆ ಅಪಾರ ಕ್ರೇಜ್ ಹೊಂದಿದ್ದ ಅವರು ಕೆಲ ಕಿರು ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ಅದನ್ನು ಸಿನಿಮಾ ಮಾಡುವ ತಯಾರಿಯೆಂದೇ ಪರಿಗಣಿಸಿದ್ದರು. ತಾವೊಂದು ಸಿನಿಮಾ ನಿರ್ಮಾಣ ಮಾಡಿದರೆ ಅದು ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರಬೇಕೆಂದು ಆಶಿಸಿದ್ದ ಮಂಜುನಾಥ್ ಹಫ್ತಾ ಚಿತ್ರವನ್ನೂ ಕೂಡಾ ಅದರಂತೆಯೇ ರೂಪಿಸಿದ ಖುಷಿ ಹೊಂದಿದ್ದಾರೆ.

    ಹಫ್ತಾ ಚಿತ್ರ ಶುರುವಾದ ಮೊದಲ ದಿನವೇ ನೂರಾರು ಮಂದಿಗೆ ಕೆಲಸ ಕೊಟ್ಟ ತೃಪ್ತ ಭಾವವನ್ನೂ ತುಂಬಿಕೊಂಡಿದ್ದ ಮೈತ್ರಿ ಮಂಜುನಾಥ್ ಪಾಲಿಗೆ ಆರಂಭದಿಂದ ಇಲ್ಲಿಯವರೆಗೂ ಒಳ್ಳೆಯ ಅನುಭವಗಳೇ ಕೈ ಹಿಡಿದಿವೆ. ಆರಂಭದಲ್ಲಿ ಪ್ರಕಾಶ್ ಕಥೆ ಹೇಳುವಾಗ ಇದ್ದ ಫೀಲ್‍ಗೆ ಅನುಗುಣವಾಗಿಯೇ ಚಿತ್ರ ಮೂಡಿ ಬಂದಿರೋದರಿಂದ ಅವರಲ್ಲಿ ಗೆಲ್ಲುವ ಭರವಸೆ ಹೆಚ್ಚಾಗಿದೆ. ಕರಾವಳಿ ತೀರದ ಭೂಗತ ಜಗತ್ತಿನ ಕಥೆಯನ್ನು ವಿಭಿನ್ನವಾಗಿಯೇ ತೆರೆ ಮೇಲೆ ತಂದಿರೋದರ ಬಗ್ಗೆ ಖುಷಿ, ಮತ್ತದು ಎಲ್ಲಾ ಪ್ರೇಕ್ಷಕರಿಗೂ ಇಷ್ಟವಾಗುತ್ತದೆ ಎಂಬ ಭರವಸೆ ಮಂಜುನಾಥ್ ಅವರದ್ದು.

    ಇದು ಮೈತ್ರಿ ಮಂಜುನಾಥ್ ನಿರ್ಮಾಣದ ಮೊದಲ ಚಿತ್ರ. ಇದರ ಬಗ್ಗೆ ಈಗ ಅಷ್ಟ ದಿಕ್ಕುಗಳಿಂದಲೂ ಒಳ್ಳೆ ಮಾತುಗಳೇ ಕೇಳಿ ಬರುತ್ತಿವೆ. ಈ ಮೂಲಕವೇ ಪುಷ್ಕಳವಾದ ಗೆಲುವು ದಕ್ಕುತ್ತದೆ ಎಂಬ ಭರವಸೆಯೂ ಗಟ್ಟಿಯಾಗುತ್ತಿದೆ. ಇದುವೇ ಮಂಜುನಾಥ್ ಅವರಲ್ಲಿ ನಿರ್ಮಾಪಕರಾಗಿ ನೆಲೆ ಕಂಡುಕೊಳ್ಳುವ ಇರಾದೆಯನ್ನೂ ಹುಟ್ಟಿಸಿದೆ. ಈಗಾಗಲೇ ಅವರು ಎರಡನೇ ಚಿತ್ರಕ್ಕಾಗಿ ತಯಾರಿ ಆರಂಭಿಸಿದ್ದಾರೆ. ಇದು ಹಫ್ತಾ ಬಿಡುಗಡೆ ಪೂರ್ವದಲ್ಲಿಯೇ ಸೃಷ್ಟಿಸಿರೋ ಕ್ರೇಜ್‍ನ ಪರಿಣಾಮ!

    https://www.youtube.com/watch?v=zZefRDFISRU

  • ಹಫ್ತಾದ ಮೆಲೋಡಿ ಹಾಡು ಬಿಡುಗಡೆಗೊಳಿಸಿದರು ದುನಿಯಾ ವಿಜಯ್!

    ಹಫ್ತಾದ ಮೆಲೋಡಿ ಹಾಡು ಬಿಡುಗಡೆಗೊಳಿಸಿದರು ದುನಿಯಾ ವಿಜಯ್!

    ಬೆಂಗಳೂರು: ಪ್ರಕಾಶ್ ಹೆಬ್ಬಾಳ ನಿರ್ದೇಶನದ ಹಫ್ತಾ ಚಿತ್ರವೀಗ ಬಿಡುಗಡೆಯ ಸನ್ನಾಹದಲ್ಲಿದೆ. ಮಾಸ್ ಹಾಗೂ ಕ್ಯಾಚೀ ಟೈಟಲ್ಲಿನ ಮೂಲಕವೇ ಸದ್ದು ಮಾಡುತ್ತಾ ಬಂದಿರೋ ಈ ಚಿತ್ರದ ಆಡಿಯೂ ಕೆಲ ದಿನಗಳ ಹಿಂದೆ ಬಿಡುಗಡೆಯಾಗಿ ವ್ಯಾಪಕ ಮೆಚ್ಚುಗೆಯನ್ನೂ ಗಳಿಸಿಕೊಂಡಿದೆ. ಈ ಅಲೆಯಲ್ಲಿಯೇ ವೀಡಿಯೋ ಹಾಡೊಂದನ್ನು ದುನಿಯಾ ವಿಜಯ್ ಬಿಡುಗಡೆಗೊಳಿಸಿದ್ದಾರೆ.

    ಈ ಲಿರಿಕಲ್ ವೀಡಿಯೋವನ್ನು ಬಿಡುಗಡೆಗೊಳಿಸಿರುವ ವಿಜಯ್, ಈ ಹೊಸಬರ ಪ್ರತಿಭಾವಂತ ತಂಡವನ್ನು ಪ್ರೋತ್ಸಾಹಿಸಿ ಗೆಲ್ಲಿಸುವಂತೆ ವಿನಂತಿಸಿಕೊಂಡಿದ್ದಾರೆ. ನೀನೇ ನೀನೇ ಜೊತೆಯಲಿ ನಿನ್ನ ಮಾತೇ ಸಿಹಿಚಳಿ ಎಂಬ ಮಧುರವಾದ ಈ ಹಾಡನ್ನು ಕೊಂಡಾಡುತ್ತಲೇ ವಿಜಯ್ ಅನಾವರಣಗೊಳಿಸಿದ್ದಾರೆ.

    ಇದು ಅಪ್ಪಟ ಮೆಲೋಡಿ ಹಾಡು. ಈ ಹಾಡಿಗೆ ವಿಜಯ್ ಯಾಡ್ರ್ಲಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಎಂಥವರನ್ನೂ ಮೋಹಕ್ಕೀಡು ಮಾಡುವಂಥಾ ಸಾಲುಗಳನ್ನು ಹೊಂದಿರೋ ಈ ಹಾಡನ್ನು ಅನುರಾಧಾ ಭಟ್ ಮತ್ತು ಹರಿಚರಣ್ ಹಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಆಡಿಯೋ ಬಿಡುಗಡೆಯಾಗಿತ್ತಲ್ಲಾ? ಅದರಲ್ಲಿನ ಎಲ್ಲ ಹಾಡುಗಳೂ ಜನಮಾನಸ ತಲುಪಿಕೊಂಡಿವೆ. ಅದರಲ್ಲಿಯೂ ಟೈಟಲ್ ಸಾಂಗ್ ಅಂತೂ ಟ್ರೆಂಡಿಂಗ್ ನಲ್ಲಿದೆ. ಈಗ ಬಿಡುಗಡೆಯಾಗಿರೋ ಈ ಮೆಲೋಡಿ ಲಿರಿಕಲ್ ವೀಡಿಯೋ ಸಾಂಗ್ ಕೂಡಾ ಅಂಥಾದ್ದೇ ಮೋಡಿ ಮಾಡೋ ಲಕ್ಷಣಗಳೇ ದಟ್ಟವಾಗಿವೆ.

    ಈ ಹಿಂದೆ ದಯಾಳ್ ಮತ್ತು ರಮೇಶ್ ಅರವಿಂದ್ ಅವರ ಜೊತೆ ಕೆಲಸ ಮಾಡಿರುವ ಪ್ರಕಾಶ್ ನಿರ್ದೇಶನದ ಮೊದಲ ಚಿತ್ರ ಹಫ್ತಾ. ಮೈತ್ರಿ ಮಂಜುನಾಥ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವರ್ಧನ್ ತೀರ್ಥಹಳ್ಳಿ ಮತ್ತು ರಾಘವ್ ನಾಗ್ ನಾಯಕರಾಗಿ ನಟಿಸಿದ್ದಾರೆ. ಇದುವರೆಗೂ ಹಲವಾರು ಚಿತ್ರಗಳಲ್ಲಿ ಖಳನಾಗಿ ಅಬ್ಬರಿಸಿರುವ ವರ್ಧನ್ ತೀರ್ಥಹಳ್ಳಿ ಈ ಸಿನಿಮಾ ಮೂಲಕ ನಾಯಕನಾಗಿದ್ದಾರೆ. ಕರಾವಳಿ ತೀರದ ಭೂಗತ ಜಗತ್ತಿನ ಕಥೆ ಹೊಂದಿರುವ ಈ ಚಿತ್ರದಲ್ಲಿ ವರ್ಧನ್ ಎರಡು ಶೇಡುಗಳ ಪಾತ್ರದಲ್ಲಿ ಮಿಂಚಿದ್ದಾರಂತೆ.

  • ಹಫ್ತಾದ ಮೆಲೋಡಿ ಹಾಡು ಬಿಡುಗಡೆಗೊಳಿಸಲಿದ್ದಾರೆ ದುನಿಯಾ ವಿಜಯ್!

    ಹಫ್ತಾದ ಮೆಲೋಡಿ ಹಾಡು ಬಿಡುಗಡೆಗೊಳಿಸಲಿದ್ದಾರೆ ದುನಿಯಾ ವಿಜಯ್!

    ಬೆಂಗಳೂರು: ಪ್ರಕಾಶ್ ಹೆಬ್ಬಾಳ ನಿರ್ದೇಶನದ ಹಫ್ತಾ ಚಿತ್ರವೀಗ ಬಿಡುಗಡೆಯ ಸನ್ನಾಹದಲ್ಲಿದೆ. ಮಾಸ್ ಹಾಗೂ ಕ್ಯಾಚೀ ಟೈಟಲ್ಲಿನ ಮೂಲಕವೇ ಸದ್ದು ಮಾಡುತ್ತಾ ಬಂದಿರೋ ಈ ಚಿತ್ರದ ಆಡಿಯೋ ಕೆಲ ದಿನಗಳ ಹಿಂದೆ ಬಿಡುಗಡೆಯಾಗಿ ವ್ಯಾಪಕ ಮೆಚ್ಚುಗೆಯನ್ನೂ ಗಳಿಸಿಕೊಂಡಿದೆ. ಈ ಅಲೆಯಲ್ಲಿಯೇ ವೀಡಿಯೋ ಹಾಡೊಂದನ್ನು ಬಿಡುಗಡೆ ಮಾಡಲು ಚಿತ್ರ ತಂಡ ಸಜ್ಜುಗೊಂಡಿದೆ.

    ಈ ಲಿರಿಕಲ್ ವೀಡಿಯೋ ನಾಳೆ ಸಂಜೆ ಬಿಡುಗಡೆಯಾಗಲಿದೆ. ಇದು ಅಪ್ಪಟ ಮೆಲೋಡಿ ಹಾಡು. ವಿಶೇಷವೆಂದರೆ ಇದನ್ನು ಮಾಸ್ ಹೀರೋ ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಅವರು ಬಿಡುಗಡೆಗೊಳಿಸಲಿದ್ದಾರೆ!

    ಈ ಹಾಡಿಗೆ ವಿಜಯ್ ಯಾಡ್ರ್ಲಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಎಂಥವರನ್ನೂ ಮೋಹಕ್ಕೀಡು ಮಾಡುವಂಥಾ ಸಾಲುಗಳನ್ನು ಹೊಂದಿರೋ ಈ ಹಾಡನ್ನು ಅನುರಾಧಾ ಭಟ್ ಮತ್ತು ಹರಿಚರಣ್ ಹಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಆಡಿಯೋ ಬಿಡುಗಡೆಯಾಗಿತ್ತಲ್ಲಾ? ಅದರಲ್ಲಿನ ಎಲ್ಲ ಹಾಡುಗಳೂ ಜನಮಾನಸ ತಲುಪಿಕೊಂಡಿವೆ. ಅದರಲ್ಲಿಯೂ ಟೈಟಲ್ ಸಾಂಗ್ ಅಂತೂ ಟ್ರೆಂಡಿಂಗ್ ನಲ್ಲಿದೆ. ನಾಳೆ ಬಿಡುಗಡೆಯಾಗಲಿರೋ ಈ ಮೆಲೋಡಿ ಲಿರಿಕಲ್ ವೀಡಿಯೋ ಸಾಂಗ್ ಕೂಡಾ ಅಂಥಾದ್ದೇ ಮೋಡಿ ಮಾಡೋ ಭರವಸೆ ಚಿತ್ರತಂಡದಲ್ಲಿದೆ.

    ಈ ಹಿಂದೆ ದಯಾಳ್ ಮತ್ತು ರಮೇಶ್ ಅರವಿಂದ್ ಅವರ ಜೊತೆ ಕೆಲಸ ಮಾಡಿರುವ ಪ್ರಕಾಶ್ ನಿರ್ದೇಶನದ ಮೊದಲ ಚಿತ್ರ ಹಫ್ತಾ. ಮೈತ್ರಿ ಮಂಜುನಾಥ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವರ್ಧನ್ ತೀರ್ಥಹಳ್ಳಿ ಮತ್ತು ರಾಘವ್ ನಾಗ್ ನಾಯಕರಾಗಿ ನಟಿಸಿದ್ದಾರೆ. ಇದುವರೆಗೂ ಹಲವಾರು ಚಿತ್ರಗಳಲ್ಲಿ ಖಳನಾಗಿ ಅಬ್ಬರಿಸಿರುವ ವರ್ಧನ್ ತೀರ್ಥಹಳ್ಳಿ ಈ ಸಿನಿಮಾ ಮೂಲಕ ನಾಯಕನಾಗಿದ್ದಾರೆ. ಕರಾವಳಿ ತೀರದ ಭೂಗತ ಜಗತ್ತಿನ ಕಥೆ ಹೊಂದಿರುವ ಈ ಚಿತ್ರದಲ್ಲಿ ವರ್ಧನ್ ಎರಡು ಶೇಡುಗಳ ಪಾತ್ರದಲ್ಲಿ ಮಿಂಚಿದ್ದಾರಂತೆ.

  • ಹಫ್ತಾ ಹಾಡುಗಳು ಹೊರಬಂದಿವೆ

    ಹಫ್ತಾ ಹಾಡುಗಳು ಹೊರಬಂದಿವೆ

    ಬೆಂಗಳೂರು: ಪ್ರಕಾಶ್ ಹೆಬ್ಬಾಳ ಕತೆ, ಚಿತ್ರಕತೆ, ಸಂಭಾಷಣೆ ಬರೆದು ಪ್ರಥಮ ಬಾರಿ ನಿರ್ದೇಶನ ಮಾಡಿರುವ ‘ಹಫ್ತಾ’ ಚಿತ್ರದ ಹಾಡುಗಳು ಅನಾವರಣಗೊಂಡಿವೆ. ಹಫ್ತಾ ಚಿತ್ರಕ್ಕೆ ಸೆಂಟಿಮೆಂಟ್ ನಾಟ್ ಅಲೌಡ್ ಎಂಬ ಟ್ಯಾಗ್ ಲೈನ್ ಎಂದು ನೀಡಲಾಗಿದೆ. ಗೌತಮ್ ಶ್ರೀವತ್ಸ ಹಿನ್ನಲೆ ಸಂಗೀತ ನೀಡಿರುವ ಈ ಚಿತ್ರಕ್ಕೆ ವಿಜಯ್ ಯಾಡ್ರ್ಲಿ ಒಂದು ಡ್ಯುಯೆಟ್ ಮತ್ತು ಪ್ಯಾಥೋ ಹಾಡಿಗೆ ರಾಗ ಸಂಯೋಜಿಸಿದ್ದಾರೆ.

    ಕಡಲ ತೀರದ ಭೂಗತಲೋಕ ಮತ್ತು ಸುಪಾರಿ ಕಿಲ್ಲಿಂಗ್ ಜೊತೆಗೆ ಯಾರೂ ನಿರೀಕ್ಷಿಸದ ಪ್ರಮುಖ ವಿಷಯವನ್ನು ಸೇರಿಸಿ ಸಸ್ಪೆನ್ಸ್ ಥ್ರಿಲ್ಲರ್ ಮಾದರಿಯಲ್ಲಿ ಚಿತ್ರವನ್ನು ಕಟ್ಟಿಕೊಡಲಾಗಿದೆ. ದುಷ್ಟರನ್ನು ಸಂಹಾರ ಮಾಡಲು ದುಷ್ಟನೇ ಬರಬೇಕೆನ್ನುವ ಫಾರ್ಮುಲಾ ಈ ಚಿತ್ರದ್ದಾಗಿದೆ. ಮಂಗಳೂರು, ಮುರುಡೇಶ್ವರ, ಗೋಕರ್ಣ ಮತ್ತು ಬೆಂಗಳೂರು ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ, ಖಳನಟನಾಗಿ ನಟಿಸಿದ್ದ ವರ್ಧನ್ ತೀರ್ಥಹಳ್ಳಿ ಮೊದಲ ಬಾರಿ ನಾಯಕನಾಗಿ ಎರಡು ಶೇಡ್‍ಗಳಲ್ಲಿ ಅದರಲ್ಲೂ ಒಂದು ಹಂತದಲ್ಲಿ ಮಂಗಳಮುಖಿಯಾಗಿ ಕಾಣಿಸಿಕೊಂಡಿರುವುದು ವಿಶೇಷ.

    ಬುದ್ಧಿವಂತಿಕೆಯಿಂದ ಅಪರಾಧದ ಸುಳಿವು ಸಿಗದಂತೆ ಸೈಲೆಂಟ್ ಕಿಲ್ಲರ್. ಇವನದು ಏನಿದ್ದರೂ ಗನ್ ಮಾತಾಡುತ್ತೆ ಎನ್ನುವ ಪಾತ್ರದಲ್ಲಿ ರಾಘವ ನಾಗ್ ನಟಿಸಿದ್ದಾರೆ. ಭರತನಾಟ್ಯ ವಿದ್ಯಾರ್ಥಿಯಾಗಿ ಬಿಂಬ ಶ್ರೀ ನೀನಾಸಂ ಅವರಿಗೆ ರಾಮರಾಮರೇ ನಂತರ ನಾಯಕಿಯಾಗಿ ಅವಕಾಶ ಸಿಕ್ಕಿದೆಯಂತೆ. ಕೂರ್ಗ್ ಮೂಲದ ಸೌಮ್ಯ ತಿತೀರ ಚೊಚ್ಚಲ ಚಿತ್ರದಲ್ಲೇ ಲೈಂಗಿಕ ಕಾರ್ಯಕರ್ತೆಯ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಮುಖ್ಯ ಖಳನಾಯಕನಾಗಿ ಬಾಲ್‍ರಾಜ್ ವಾಡಿ ಉಳಿದಂತೆ ದಶಾವರ ಚಂದ್ರು, ಉಗ್ರಂ ರವಿ ಮುಂತಾದವರು ತಂಡದಲ್ಲಿ ಇದ್ದಾರೆ. ಛಾಯಾಗ್ರಹಣ ಸೂರಿ ಸಿನಿಟೆಕ್, ಸಂಕಲನ ರಘುನಾಥ್ ಎಲ್. ನಿರ್ವಹಿಸಿದ್ದಾರೆ.

    ಸಿಡಿ ಬಿಡುಗಡೆ ಮಾಡಿದ ಲಹರಿವೇಲು ಮಾತನಾಡಿ, ಒಂದು ಕಾಲದಲ್ಲಿ ಸೂಪರ್ ಕಾಪ್ ಪೋಲೀಸ್ ಅಧಿಕಾರಿಗಳು ಈ ಪದವನ್ನು ಉಪಯೋಗಿಸುತ್ತಿದ್ದುದನ್ನು ಕೇಳಿದ್ದೇನೆ. ಈಗ ನೋಡಿದರೆ ಇದೇ ಹೆಸರಿನಲ್ಲಿ ಸಿನಿಮಾ ಸಿದ್ಧಗೊಂಡಿದೆ. ತಂಡಕ್ಕೆ ಒಳ್ಳೆಯದಾಗಲಿ ಎಂದರು. ನಿರ್ಮಾಪಕನಾಗಿ ಇದು ನನ್ನ ಎರಡನೆ ಪ್ರಯತ್ನ. ಕತೆ ಚೆನ್ನಾಗಿರುವುದರಿಂದಲೇ ಹಣ ಹೂಡಿದ್ದೇನೆ ಎಂದು ಮೈತ್ರಿ ಕಟ್ಟಡಗಳ ಮಾಲೀಕ ಮೈತ್ರಿ ಮಂಜುನಾಥ್ ಕೋರಿದರು. ಸಹ ನಿರ್ಮಾಪಕ ಬಾಲರಾಜ್ ಟಿ.ಸಿ.ಪಾಳ್ಯ, ಅತಿಥಿಗಳಾಗಿ ಚಕ್ರಪಾಣಿ, ದಾಪಿ ಆಂಜನಪ್ಪ, ದಯಾಳ್ ಆಗಮಿಸಿದ್ದರು. ಯು/ಎ ಪ್ರಮಾಣ ಪತ್ರ ಪಡೆದುಕೊಂಡಿರುವ ಸಿನಿಮಾವನ್ನು ಸದ್ಯದಲ್ಲೇ ಜನರಿಗೆ ತೋರಿಸಲು ನಿರ್ಮಾಪಕರು ಯೋಜನೆ ಹಾಕಿಕೊಂಡಿದ್ದಾರೆ.

  • ಹಫ್ತಾ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್

    ಹಫ್ತಾ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್

    ಮೈತ್ರಿ ಪ್ರೊಡಕ್ಷನ್ ಲಾಂಛನದಲ್ಲಿ ಮೈತ್ರಿ ಮಂಜುನಾಥ್ ನಿರ್ಮಾಣದ ಹಫ್ತಾ ಚಿತ್ರಕ್ಕೆ ಕಳೆದ ವಾರ ಸೆನ್ಸಾರ್ ಮಂಡಳಿಯು ಯು/ಎ ಸರ್ಟಿಪಿಕೇಟ್ ನೀಡಿದೆ. ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಪ್ರಕಾಶ್ ಹೆಬ್ಬಾಳ್ ನಿರ್ದೇಶನವಿದೆ.

    ಸೂರಿ ಸಿನಿಟೆಕ್- ಛಾಯಾಗ್ರಹಣ, ಸಂಗೀತ – ವಿಜಿ ಯಾಡ್ರ್ಲಿ, ಹಿನ್ನೆಲೆ ಸಂಗೀತ – ಗೌತಮ್ ಶ್ರೀವತ್ಸ, ಸಂಕಲನ -ವೆಂಕಿ ಯು.ಡಿ.ವಿ, ಸಹನಿರ್ದೇಶನ – ಕುಮಾರ್ ಟಿ ಗೌಡ ಬಸವರಾಜ್, ಸಾಹಸ – ರಾಕಿ ರಮೇಶ್, ನೃತ್ಯ – ಜೈ ನಿರ್ಮಾಣ ನಿರ್ವಹಣೆ – ಅಚ್ಯುತ್‍ರಾವ್, ದಶಾವರ ಚಂದ್ರು.

    ಈ ಚಿತ್ರವು ಸಂಪೂರ್ಣ ವಾಣಿಜ್ಯಾತ್ಮಕ ಮನರಂಜನೆಯ ಚಿತ್ರವಾಗಿದ್ದು ಚಿತ್ರಕಥೆಯು ಭೂಗತ ಜಗತ್ತಿನ ಹಫ್ತಾ ವಸೂಲಿ ಮತ್ತು ಸುಪಾರಿ ಕಿಲ್ಲರ್ ಗಳ ಅಂಶಗಳನ್ನು ಒಳಗೊಂಡಿರುತ್ತದೆ. ತಾರಾಗಣದಲ್ಲಿ ವರ್ಧನ್ ತೀರ್ಥಹಳ್ಳಿ, ಬಿಂಬಶ್ರೀ ನಿನಾಸಂ, ರಾಘವ್ ನಾಗ್, ಸೌಮ್ಯ ತತೀರ, ಬಲರಾಜ್ ವಾಡಿ, ದಶಾವರ ಚಂದ್ರು, ಉಗ್ರಂ ರವಿ, ಚಂದ್ರು ಮುಂತಾದವರಿದ್ದಾರೆ.