Tag: ಹರಿಕೃಷ್ಣ

  • ರಿಲೀಸ್ ಆಯಿತು ‘ಗರಡಿ’ ಸಿನಿಮಾದ ಮೂರನೇ ಹಾಡು

    ರಿಲೀಸ್ ಆಯಿತು ‘ಗರಡಿ’ ಸಿನಿಮಾದ ಮೂರನೇ ಹಾಡು

    ನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ‘ಗರಡಿ’ (Garadi) ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರು ಬರೆದಿರುವ ‘ಬಡವನ ಹೃದಯ’ ಎಂಬ ಮನಸ್ಸಿಗೆ ಹತ್ತಿರವಾಗುವ ಈ ಹಾಡು ಸೋಮವಾರ ಬಿಡುಗಡೆಯಾಗಿದೆ. ವಿ.ಹರಿಕೃಷ್ಣ (Harikrishna)ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಕರುನಾಡ ಕಲಾರಸಿಕರು ತಲೆದೂಗುತ್ತಿದ್ದಾರೆ. ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಹಾಡು ಬಿಡುಗಡೆ ಮಾಡಿದ ಚಿತ್ರತಂಡ, ಪತ್ರಿಕಾಗೋಷ್ಠಿಯಲ್ಲಿ ಹಾಡಿನ ಬಗ್ಗೆ ವಿವರಣೆ ನೀಡಿತು.

    ಎರಡನೇ ಲಾಕ್‌ಡೌನ್ ಸಮಯದಲ್ಲೇ ಈ ಹಾಡು ಬರೆದಿದ್ದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಹಾಗೂ ಗೀತರಚನೆಕಾರ ಯೋಗರಾಜ್ ಭಟ್, ಈ ಹಾಡು, ನನಗೆ ಹಾಗೂ ನಿರ್ಮಾಪಕರಿಗೆ ಅಚ್ಚುಮೆಚ್ಚು. ಬಾದಾಮಿ, ಬೆಂಗಳೂರು ಸೇರಿದಂತೆ ಅನೇಕ ಕಡೆ ಹಾಡಿನ ಚಿತ್ರೀಕರಣ ನಡೆದಿದೆ. ಹರಿಕೃಷ್ಣರ ಸಂಗೀತ, ವಿಜಯ್ ಪ್ರಕಾಶ್ ಗಾಯನ, ಸೂರ್ಯ, ಸೋನಾಲ್ ಮೊಂತೆರೊ ಹಾಗೂ ಸುಜಯ್ ಅವರ ಅಭಿನಯ ಚೆನ್ನಾಗಿದೆ. ‘ದಯಮಾಡಿ ಉರಿಸ ಬೇಡ ಬಡವನ ಹೃದಯ’ ಎಂಬ ಮೊದಲ ಸಾಲೇ ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ ಎಂದರು.

    ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡು ಕೇಳಿದಾಗ ನನಗೆ “ಮುಂಗಾರು ಮಳೆ” ಚಿತ್ರದ ‘ಅನಿಸುತಿದೆ ಯಾಕೋ ಇಂದು’ ಹಾಡು ನೆನಪಾಯಿತು. ಈ ಹಾಡಿನ ಸಾಹಿತ್ಯ, ಗಾಯನ ಹಾಗೂ ನಟನೆ ಎಲ್ಲವೂ ಚೆನ್ನಾಗಿದೆ. ನವೆಂಬರ್ 1 ರಂದು ರಾಣಿಬೆನ್ನೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಲಿದೆ. ದರ್ಶನ್ ಅವರು ಕಾರ್ಯಕ್ರಮಕ್ಕೆ ಬರಲಿದ್ದಾರೆ. ನವೆಂಬರ್ 10 ರಂದು ಚಿತ್ರ ಬಿಡುಗಡೆಯಾಗುತ್ತಿದೆ‌. ನೋಡಿ ಪ್ರೋತ್ಸಾಹಿಸಿ ಎಂದರು ನಿರ್ಮಾಪಕ ಹಾಗೂ ನಟ ಬಿ.ಸಿ.ಪಾಟೀಲ್.

    ಈ ಹಾಡಿಗಾಗಿ ಸಾಕಷ್ಟು ಶ್ರಮ ಪಟ್ಟಿದ್ದೇನೆ. ‘ಬಡವನ ಹೃದಯ’ ಹಾಡು ಯೋಗರಾಜ್ ಭಟ್ ಅವರು ನನಗಾಗಿ ಬರೆದ ಹಾಗಿದೆ. ಈ ಹಾಡನ್ನು ದರ್ಶನ್ ಸರ್‌ಗೆ ಕೇಳಿಸಿದ್ದೆ.‌‌ ಹಾಡಿನ ಸಾಹಿತ್ಯವನ್ನು ಅವರು ಬಹಳ ಇಷ್ಟ ಪಟ್ಟಿದ್ದರು.‌ ವಿ.ಹರಿಕೃಷ್ಣ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ, ವಿಜಯ್ ಪ್ರಕಾಶ್  ಗಾಯನ ಹಾಗೂ ಮದನ್ – ಹರಿಣಿ ಅವರ ನೃತ್ಯ ನಿರ್ದೇಶನ ಹಾಡಿನ ಹೈಲೆಟ್ ಎಂದು ನಾಯಕ ಸೂರ್ಯ ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಗರಡಿ’ ಟೈಟಲ್ ಟ್ರ್ಯಾಕ್ ರಿಲೀಸ್: ಯೋಗರಾಜ್ ಭಟ್ ಸಾಹಿತ್ಯ, ಹರಿಕೃಷ್ಣ ಸಂಗೀತ

    ‘ಗರಡಿ’ ಟೈಟಲ್ ಟ್ರ್ಯಾಕ್ ರಿಲೀಸ್: ಯೋಗರಾಜ್ ಭಟ್ ಸಾಹಿತ್ಯ, ಹರಿಕೃಷ್ಣ ಸಂಗೀತ

    ನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’  (Garadi) ಚಿತ್ರದ ಟೈಟಲ್ ಟ್ರ್ಯಾಕ್ (Title Track) ಇತ್ತೀಚೆಗೆ ಬಿಡುಗಡೆಯಾಗಿದೆ. ಯೋಗರಾಜ್ ಭಟ್ (Yogaraj Bhatt) ಅವರು ಬರೆದಿರುವ ‘ಲೋಕಾನೆ ಗರಡಿ.. ಬಾಳೇ ಅಖಾಡ’ ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ವಿ.ಹರಿಕೃಷ್ಣ ಅವರೇ ಮುಖ್ಯ ಗಾಯಕರಾಗಿ ಹಾಡನ್ನು ಹಾಡಿದ್ದಾರೆ. ಹರಿಕೃಷ್ಣ (Harikrishna) ಅವರ ಜೊತೆಗೆ ಸಾಕಷ್ಟು ಪ್ರತಿಭಾವಂತ ‌ಗಾಯಕರು ಸಹ ಈ ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ನಡೆದ ಈ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.

    ಗರಡಿ ಎಂದರೆ ಒಂದು ಊರನ್ನು ಕಾಯುವ ಪೊಲೀಸ್ ಠಾಣೆ ಇದ್ದ ಹಾಗೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ಹಿಂದೆ ಒಂದು ಊರಿನ ರಕ್ಷಣೆಗೆ ಗರಡಿ ಬಹು ಮುಖ್ಯವಾಗಿತ್ತು. ಊರಿನವರು ಸಹ ಗರಡಿ ಮನೆಯ ಕುಸ್ತಿಪಟುಗಳನ್ನು ತಮ್ಮ ಮನೆಯವರಂತೆಯೇ ನೋಡಿಕೊಳ್ಳುತ್ತಿದ್ದರು. ಅಂತಹ ಗರಡಿ ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ಗರಡಿ ಮನೆಯ ಯಜಮಾನನಾಗಿ ಬಿ.ಸಿ.ಪಾಟೀಲ್ (BC Patil) ಅಭಿನಯಿಸಿದ್ದಾರೆ. ಅವರ ಶಿಷ್ಯನಾಗಿ ಸೂರ್ಯ ಅಭಿನಯಿಸಿದ್ದಾರೆ. ಇದು ಒಂದು ರೀತಿ ದ್ರೋಣಾಚಾರ್ಯ ಹಾಗೂ ಏಕಲವ್ಯನ ಕಥೆ ಎನ್ನಬಹುದು. ಇನ್ನು ಇಂದು ಬಿಡುಗಡೆಯಾಗಿರುವ ಹಾಡನ್ನು ಹರಿಕೃಷ್ಣ ಅದ್ಭುತವಾಗಿ ಸಂಯೋಜಿಸಿ ಹಾಡಿದ್ದಾರೆ. ಚಿತ್ರ ನವೆಂಬರ್ 10ರಂದು ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಹಾರೈಸಿ ಎಂದರು.

    ಗರಡಿ ಚಿತ್ರ ಆರಂಭವಾಗಿ ಈ ನವೆಂಬರ್ 14ಕ್ಕೆ ಎರಡು ವರ್ಷಗಳಾಗುತ್ತದೆ. ನನ್ನ ಹುಟ್ಟುಹಬ್ಬಕ್ಕೆ ಈ ಚಿತ್ರ ಆರಂಭವಾಗಿತ್ತು. ದರ್ಶನ್ ಅವರು ಶೀರ್ಷಿಕೆ ಅನಾವರಣ ಮಾಡಿದ್ದರು. ಈ ಬಾರಿಯ ಹುಟ್ಟುಹಬ್ಬದ ಸಂದರ್ಭದಲ್ಲಿ (ನವೆಂಬರ್ 10) ಚಿತ್ರ ಬಿಡುಗಡೆಯಾಗುತ್ತದೆ. ಯೋಗರಾಜ್ ಭಟ್ ಅವರು ಬಹಳ ಶ್ರಮವಹಿಸಿ ಚಿತ್ರವನ್ನು ಉತ್ತಮವಾಗಿ ನಿರ್ದೇಶನ ಮಾಡಿದ್ದಾರೆ. ನಾನು ಈಗಾಗಲೇ ಚಿತ್ರವನ್ನು ಸಾಕಷ್ಟು ಸಲ ನೋಡಿ ಖುಷಿ ಪಟ್ಟಿದ್ದೇನೆ. ನಿಮಗೂ ಚಿತ್ರ ಹಿಡಿಸಲಿದೆ ಎಂದರು ಹಿರಿಯ ನಟ ಬಿ.ಸಿ.ಪಾಟೀಲ್. ಇದನ್ನೂ ಓದಿ:‘ಲಿಯೋ’ ಬಿಡುಗಡೆಗೂ ಮುನ್ನ ಮತ್ತೊಂದು ಸಿನಿಮಾ ಘೋಷಿಸಿದ ವಿಜಯ್

    ಈ ಚಿತ್ರದಲ್ಲೂ ನನ್ನ ಹೆಸರು ಸೂರ್ಯ ಅಂತ. ಎಲ್ಲರೂ ಗರಡಿ ಸೂರಿ ಅಂತ ಕರೆಯುತ್ತಿರುತ್ತಾರೆ. ಈ ಚಿತ್ರದಲ್ಲಿ ನನಗೆ ಅವಕಾಶ ಸಿಗಲು ದರ್ಶನ್ ಅವರು ಕಾರಣ. ಅವರು ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಇಂದು ಬಿಡುಗಡೆಯಾಗಿರುವ ಟೈಟಲ್ ಸಾಂಗ್ ನಲ್ಲಿ ನಾನು ಸಖತ್ ಡ್ಯಾನ್ಸ್ ಮಾಡಿದ್ದೇನೆ. ಯೋಗರಾಜ್ ಭಟ್ ಅವರ ಸಾಹಿತ್ಯ ಹಾಗೂ ಹರಿಕೃಷ್ಣ ಅವರ ಸಂಗೀತದಲ್ಲಿ ಹಾಡು ಅದ್ಭುತವಾಗಿ ಮೂಡಿಬಂದಿದೆ ಎನ್ನುತ್ತಾರೆ ನಾಯಕ ಸೂರ್ಯ.

    ನಾಯಕಿ ಸೋನಾಲ್ ಮಾಂತೆರೊ, ಚಿತ್ರದಲ್ಲಿ ನಟಿಸಿರುವ ಸುಜಯ್, ಧರ್ಮಣ್ಣ, ರಾಘು, ಛಾಯಾಗ್ರಾಹಕ ನಿರಂಜನ್ ಬಾಬು, ನೃತ್ಯ ನಿರ್ದೇಶಕ ಧನಂಜಯ ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕಿ ವನಜಾ ಪಾಟೀಲ್ ಎಲ್ಲರಿಗೂ ಧನ್ಯವಾದ ತಿಳಿಸಿದರು. ಕಾರ್ಯಕಾರಿ ನಿರ್ಮಾಪಕಿ ಸೃಷ್ಟಿ ಪಾಟೀಲ್ ಗರಡಿ ಚಿತ್ರ ಸಾಗಿಬಂದ ಬಗ್ಗೆ ವಿವರಣೆ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಸರಾ ವೈಭವದ ಜೊತೆಗೆ ಜಗ್ಗಣ್ಣನ 8ಎಂಎಂ ಎಂಟ್ರಿ!

    ದಸರಾ ವೈಭವದ ಜೊತೆಗೆ ಜಗ್ಗಣ್ಣನ 8ಎಂಎಂ ಎಂಟ್ರಿ!

    ಒಂದು ದೊಡ್ಡ ಗ್ಯಾಪಿನ ನಂತರ ನವರಸ ನಾಯಕ ಜಗ್ಗೇಶ್ ನಾಯಕನಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಅದೂ ಕೂಡಾ ಭಾರೀ ಬದಲಾವಣೆಯೊಂದಿಗೆ. ಜಗ್ಗೇಶ್ ಅಂದರೆ ಅವರ ವಿಶಿಷ್ಟವಾದ ಮ್ಯಾನರಿಸಂ ನೆನಪಾಗುತ್ತದೆ. ಡೈಲಾಗುಗಳ ಗೊಡವೆಯೇ ಇಲ್ಲದೇ ಬರೀ ಮ್ಯಾನರಿಸಂ ಮೂಲಕವೇ ನಗೆಯುಕ್ಕಿಸಬಲ್ಲ ಜಗ್ಗೇಶ್ ನಗುವಿಗೇ ಹೆಸರಾದವರು. ಹೀಗೆ ಕಾಮಿಡಿ ಪಾತ್ರಗಳಾಚೆಗೆ ಗಂಭೀರವಾದ ತುಡಿತ ಹೊಂದಿದ್ದ ಜಗ್ಗೇಶ್ 8ಎಂಎಂ ಚಿತ್ರದ ನಾಯಕರಾಗಿ ಚಿತ್ರೀಕರಣ ಪೂರೈಸಿಕೊಂಡಿದ್ದಾರೆ. ಈ ಚಿತ್ರದ ಬಿಡುಗಡೆಯ ದಿನಾಂಕವೂ ಬಯಲಾಗಿದೆ.

    ದಸರಾ ಮುಗಿದಾಕ್ಷಣವೇ ಈ ಚಿತ್ರ ತೆರೆ ಕಾಣಲಿದೆ. ಅಂದರೆ ಅಕ್ಟೋಬರ್ 26ರಂದು 8 ಎಂಎಂ ಚಿತ್ರ ರಾಜ್ಯಾದ್ಯಂತ ತೆರೆ ಕಾಣಲಿದೆ. ಈ ಮೂಲಕ ಜಗ್ಗೇಶ್ ಅವರನ್ನು ಹೊಸ ರೂಪದಲ್ಲಿ ನೋಡೋ ದಿನಾಂಕವೂ ನಿಗದಿಯಾದಂತಾಗಿದೆ.

    8 ಎಂಎಂ ಚಿತ್ರದ ಮೂಲಕ ಹರಿಕೃಷ್ಣ ನಿರ್ದೇಶಕರಾಗಿ ಎಂಟ್ರಿ ಕೊಡುತ್ತಿದ್ದಾರೆ. ಇದು ಅಕಿರಾ ಕುರಸೋವಾ ಅವರ ಪ್ರಸಿದ್ಧ ಚಿತ್ರವೊಂದರಿಂದ ಸ್ಫೂರ್ತಿ ಪಡೆದ ಕಥೆಯನ್ನು ಹೊಂದಿದ್ದರೂ ಸ್ವತಂತ್ರ ಧಾಟಿಯ ಕಥಾ ಹಂದರ ಹೊಂದಿದೆಯಂತೆ. ಪೊಲೀಸ್ ಹಾಗೂ ಕ್ರಿಮಿನಲ್ ಕೆಲಸ ಮಾಡಿದ ವ್ಯಕ್ತಿಯೋರ್ವನ ನಡುವೆ ನಡೆಯೋ ರೋಚಕ ಕಥಾ ಎಳೆಯನ್ನು ‘8 ಎಂಎಂ’ ಚಿತ್ರ ಒಳಗೊಂಡಿದೆಯಂತೆ.

    ನೀರ್ ದೋಸೆ ಚಿತ್ರದ ನಂತರ ಜಗ್ಗೇಶ್ ಅವರು ಯಾವುದೇ ಚಿತ್ರ ಒಪ್ಪಿಕೊಳ್ಳದಿರಲು ಕಾರಣ ಅವಕಾಶದ ಅಭಾವವೇನಲ್ಲ. ಅವರೇ ಹೇಳಿರೋ ಪ್ರಕಾರ ಒಂದಷ್ಟು ಕಥೆಗಳನ್ನು ಕೇಳಿಸಿಕೊಂಡು ನಿರಾಕರಿಸಿದ್ದಾರಂತೆ. ಈ ನಿರಾಕರಣೆಗೂ ಕಾರಣ ಇಲ್ಲದಿಲ್ಲ. ಸಾಮಾನ್ಯವಾಗಿ ಬಂದ ಕಥೆಗಳೆಲ್ಲವೂ ಈವರೆಗೆ ಜಗ್ಗೇಶ್ ಅವರಿಗಿದ್ದ ಕಾಮಿಡಿ ಇಮೇಜ್‍ಗೆ ಪೂರಕವಾಗಿಯೇ ಹೆಣೆದ ಕಥೆಗಳು ಮತ್ತು ನೀರ್ ದೋಸೆ ಮಾದರಿಯದ್ದೇ ಕಥೆಗಳಾಗಿದ್ದವಂತೆ.

    ಈಗ ಐವತ್ತೈದರ ಹೊಸ್ತಿಲಲ್ಲಿರೋ ಜಗ್ಗೇಶ್ ಬೇರೆಯದ್ದೇ ಬಗೆಯ ಪಾತ್ರವೊಂದಕ್ಕಾಗಿ ತಹತಹಿಸುತ್ತಿದ್ದರಂತೆ. ಇದೇ ಹೊತ್ತಿಗೆ ಈ ಹಿಂದೆ ಟೀಸರ್ ಒಂದರ ಮೂಲಕ ಸದ್ದು ಮಾಡಿದ್ದ ಹರಿಕೃಷ್ಣ ಕೂಡಾ ಒಂದೊಳ್ಳೆ ಕಥೆ ಮಾಡಿಕೊಂಡು ನಿರ್ಮಾಪಕರನ್ನು ಭೇಟಿಯಾಗಿದ್ದರು. ಆದರೆ ಕಥೆ ಕೇಳಿದ ನಿರ್ಮಾಪಕರು ಜಗ್ಗೇಶ್ ನಟಿಸೋದಾದರೆ ಮಾತ್ರ ಹಣ ಹೂಡೋದಾಗಿ ಹೇಳಿ ಜಗ್ಗಣ್ಣನನ್ನು ಒಪ್ಪಿಸೋ ಜವಾಬ್ದಾರಿಯನ್ನೂ ಕೂಡಾ ಹರಿಕೃಷ್ಣ ಹೆಗಲಿಗೆ ಹಾಕಿದ್ದರಂತೆ. ತುಸು ಹೆದರಿಕೆಯಿಂದಲೇ ಅದನ್ನು ಒಪ್ಪಿಕೊಂಡ ಹರಿಕೃಷ್ಣ ಕಡೆಗೂ ಅದರಲ್ಲಿ ಯಶಸ್ವಿಯಾಗಿದ್ದರು.

    ಅಳುಕಿನೊಂದಿಗೇ ಜಗ್ಗೇಶ್ ಅವರನ್ನು ಭೇಟಿಯಾಗಿ ರಿವರ್ಸ್ ವರ್ಷನ್ನಲ್ಲಿ ಕಥೆ ಹೇಳಿದೇಟಿಗೆ ಜಗ್ಗೇಶ್ ಸಂಪೂರ್ಣ ಒಪ್ಪಿಗೆ ಸೂಚಿಸಿದ್ದರಂತೆ. ಈ ಕಥೆಯಲ್ಲಿ ಜಗ್ಗೇಶ್ ಅವರನ್ನು ಅವರ ವಯಸ್ಸಿಗೆ ತಕ್ಕುದಾಗಿಯೇ ತೋರಿಸಿದ್ದು ಮತ್ತು ಮನ ಮಿಡಿಯುವ ಕ್ಲೈಮ್ಯಾಕ್ಸ್ ಕಥೆ ಒಪ್ಪಿಕೊಳ್ಳಲು ಕಾರಣ ಎಂಬುದು ಜಗ್ಗಣ್ಣನ ಅಭಿಪ್ರಾಯ. ಅಂತೂ ಈಗ ಸಿಕ್ಕಿರೋ ಸುಳಿವುಗಳ ಪ್ರಕಾರ ಹೇಳೋದಾದರೆ 8 ಎಂಎಂ ಚಿತ್ರ ಹಲವಾರು ವಿಶೇಷತೆಗಳನ್ನು ಹೊಂದಿದೆ. ಈ ಕಾರಣದಿಂದಲೇ ಕುತೂಹಲ ಹುಟ್ಟಿಸಿರೋ ಈ ಚಿತ್ರ ದಸರಾ ವೈಭವದ ಜೊತೆ ಜೊತೆಗೆ ಯಶಸ್ಸಿನ ವೈಭವವನ್ನೂ ತನ್ನದಾಗಿಸಿಕೊಳ್ಳೋ ಲಕ್ಷಣಗಳಿವೆ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತಂದೆ ಸಾವಿನ ದುಃಖದ ನಡುವೆಯೂ ಶೂಟಿಂಗ್ ಗೆ ಹಾಜರಾಗಿ ಕರ್ತವ್ಯ ಪ್ರಜ್ಞೆ ಮೆರೆದ ಜೂ.ಎನ್‍ಟಿಆರ್

    ತಂದೆ ಸಾವಿನ ದುಃಖದ ನಡುವೆಯೂ ಶೂಟಿಂಗ್ ಗೆ ಹಾಜರಾಗಿ ಕರ್ತವ್ಯ ಪ್ರಜ್ಞೆ ಮೆರೆದ ಜೂ.ಎನ್‍ಟಿಆರ್

    ಹೈದರಾಬಾದ್: ಟಾಲಿವುಡ್ ನಟ ಜೂ.ಎನ್‍ಟಿಆರ್ ತಂದೆ ಹರಿಕೃಷ್ಣರ ಸಾವಿನ ನೋವಿನಲ್ಲೂ ತಮ್ಮ ಮುಂದಿನ ಸಿನಿಮಾ ‘ಅರವಿಂದ ಸಮೇತ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

    ಚಿತ್ರದ ಬಿಡುಗಡೆಯ ಸಮಯ ಹತ್ತಿರವಾಗಿರುವುದರಿಂದ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸುವುದು ಅನಿವಾರ್ಯವಾಗಿದ್ದು, ಇಲ್ಲವಾದಲ್ಲಿ ನಿರ್ಮಾಪಕರು ಭಾರೀ ನಷ್ಟ ಅನುಭವಿಸುವ ಸಾಧ್ಯತೆ ಇತ್ತು. ಇದನ್ನು ತಿಳಿದ ನಟ ಎನ್‍ಟಿಆರ್ ಚಿತ್ರ ನಿಂತು ಹೋಗುವುದರಿಂದ ತಂಡಕ್ಕೆ ಉಂಟಾಗಬಹುದಾದ ನಷ್ಟವನ್ನು ತಪ್ಪಿಸಲು ಶನಿವಾರದಿಂದಲೇ ಚಿತ್ರೀಕರಣಕ್ಕೆ ಹಾಜರಾಗಿದ್ದಾರೆ.

    ರಾಧಾ ಕೃಷ್ಣ ನಿರ್ಮಾಣದ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದಲ್ಲಿ ಸಿನಿಮಾ ಮೂಡಿಬರುತ್ತಿದೆ. ಹರಿಕೃಷ್ಣರ ಹಠಾತ್ ಮರಣದಿಂದ ಪುತ್ರ ಎನ್‍ಟಿಆರ್ ತೀವ್ರವಾಗಿ ನೊಂದಿದ್ದರು. ಇದರಿಂದ ಈ ಹಿಂದೆ ಚಿತ್ರತಂಡ ತಿಳಿದಂತೆ ದಸರಾಗೆ ಸಿನಿಮಾ ಬಿಡುಗಡೆ ಕಷ್ಟಸಾಧ್ಯ ಎಂಬ ಮಾತು ಕೇಳಿಬಂದಿತ್ತು. ಆದರೆ ತೀವ್ರ ದುಃಖದ ನಡುವೆಯೂ ತಮ್ಮ ಸಿನಿಮಾ ಪೂರ್ಣಗೊಳಿಸಲು ಎನ್‍ಟಿಆರ್ ಮುಂದಾಗಿದ್ದಾರೆ. ಇದೇ ಆಕ್ಟೋಬರ್ 11ಕ್ಕೆ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆ ಇದೆ.

    ಸದ್ಯ ಹರಿಕೃಷ್ಣರ ಸಾವಿನ ಶಾಕ್ ನಲ್ಲಿರುವ ಎನ್‍ಟಿಆರ್ ಕುಟುಂಬಕ್ಕೆ ಹರಿಕೃಷ್ಣ ಸಹೋದರ ನಟ ಬಾಲಕೃಷ್ಣ ಹತ್ತಿರವಾಗಿದ್ದಾರೆ ಎಂಬ ಮಾತು ಟಾಲಿವುಡ್‍ನಲ್ಲಿ ಕೇಳಿಬಂದಿದೆ. ಅಲ್ಲದೇ ಇದೂವರೆಗೂ ಇದ್ದ ಎಲ್ಲಾ ಮನಸ್ತಾಪಗಳನ್ನು ಮರೆತು ಎನ್‍ಟಿಆರ್ ರ `ಅರವಿಂದ ಸಮೇತ’ ಸಿನಿಮಾ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಭಾಗವಹಿಸುವ ಸಾಧ್ಯತೆ ಇದೆ. ಇದನ್ನು  ಓದಿ: ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆ ಸೆಲ್ಫಿ: ಸಿಬ್ಬಂದಿ ವಜಾ

    ಟಾಲಿವುಡ್ ಸ್ಟಾರ್ ನಿರ್ದೇಶಕರಾಗಿರುವ ತ್ರಿವಿಕ್ರಮ್ ಹಾಗೂ ಎನ್‍ಟಿಆರ್ ಕಾಂಬಿನೇಷನ್‍ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಿನಿಮಾ ಆಡಿಯೋ ಬಿಡುಗೆಡಯಾಗುವ ಮಾಡುವ ಕುರಿತು ಚಿತ್ರತಂಡ ಮಾಹಿತಿ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದಿದ್ದ ನಂದಮೂರಿ ಹರಿಕೃಷ್ಣ

    ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದಿದ್ದ ನಂದಮೂರಿ ಹರಿಕೃಷ್ಣ

    ಹೈದರಾಬಾದ್: ಟಾಲಿವುಡ್ ನಟ, ಆಂಧ್ರಪ್ರದೇಶ ಮಾಜಿ ಸಿಎಂ ನಂದಮೂರಿ ರಾಮಾರಾವ್ ಅವರ ಪುತ್ರ ಹರಿಕೃಷ್ಣರ ಆಕಾಲಿಕ ಮರಣ ಅಭಿಮಾನಿಗಳು ಹಾಗೂ ಕುಟುಂಬಸ್ಥರಿಗೆ ತೀವ್ರ ದು:ಖ ಉಂಟು ಮಾಡಿದ್ದು, ಕಳೆದ ಕೆಲ ದಿನಗಳ ಹಿಂದೆ ಹರಿಕೃಷ್ಣ ಅವರು ಅಭಿಮಾನಿಗಳಿಗೆ ಬರೆದ ಪತ್ರ ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ.

    ಹರಿಕೃಷ್ಣ ಅವರು ಬದುಕಿದ್ದರೆ ಸೆಪ್ಟೆಂಬರ್ 2ರಂದು 62ಕ್ಕೆ ವಸಂತಕ್ಕೆ ಕಾಲಿಡುತ್ತಿದ್ದರು. ಈ ವೇಳೆ ಪ್ರತಿ ವರ್ಷದಂತೆ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿ ತಮ್ಮ ನೆಚ್ಚಿನ ನಟನ ಹುಟ್ಟಹಬ್ಬ ಆಚರಿಸುತ್ತಿದ್ದರು. ಇದನ್ನು ತಿಳಿದಿದ್ದ ಹರಿಕೃಷ್ಣ ಅವರು ಈ ಬಾರಿ ಕೇರಳದಲ್ಲಿ ಮಳೆಯಿಂದ ಪ್ರವಾಹ ಉಂಟಾಗಿದ್ದು, ಅಭಿಮಾನಿಗಳು ತಮ್ಮ ಹುಟ್ಟು ಹಬ್ಬ ಆಚರಣೆ ಮಾಡದೆ ಆ ಹಣವನ್ನು ಸಂತ್ರಸ್ತರಿಗೆ ನೀಡುವಂತೆ ಮನವಿ ಮಾಡಿದ್ದರು. ಇದನ್ನು ಓದಿ:  ದಯವಿಟ್ಟು ನೈಟ್ ಜರ್ನಿ ವೇಳೆ ಸ್ವಲ್ಪ ಹುಷಾರಾಗಿರಿ ಎಂದು ಹೇಳಿ ನಂದಮೂರಿ ನಿಧನಕ್ಕೆ ಹ್ಯಾಟ್ರಿಕ್ ಹೀರೋ ಸಂತಾಪ

    https://twitter.com/TollyBattel/status/1034655323934535680

    ಈ ಕುರಿತು ತಮ್ಮ ಅಭಿಮಾನಿಗಳಿಗೆ ಸ್ವತಃ ಒಂದು ಪುಟದ ಪತ್ರ ಬರೆದಿದ್ದ ಅವರು, ಆಂಧ್ರಪ್ರದೇಶ ಕೆಲ ಜಿಲ್ಲೆಗಳು ಹಾಗೂ ಕೇರಳದಲ್ಲಿ ಪ್ರವಾಹದಿಂದ ಸಾಕಷ್ಟು ಮಂದಿ ಜೀವ ಕಳೆದುಕೊಂಡಿದ್ದಾರೆ. ಹಲವರು ನಿರಾಶ್ರಿತರಾಗಿದ್ದಾರೆ. ಅದ್ದರಿಂದ ತಮ್ಮ ಹುಟ್ಟುಹಬ್ಬದಂದು ಹಾಕುವ ಫ್ಲೆಕ್ಸ್, ಹೂವಿನ ಹಾರ, ಕೇಕ್‍ಗೆ ವೆಚ್ಚ ಮಾಡುವ ಹಣವನ್ನು ಸಂತ್ರಸ್ತರಿಗೆ ನೀಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಇದನ್ನು ಓದಿ: ಎನ್‍ಟಿಆರ್ ಕುಟುಂಬಕ್ಕೆ ನಲ್ಗೊಂಡ ಮಾರ್ಗ ಶಾಪವೇ?

    ಸದ್ಯ ಹರಿಕೃಷ್ಣ ಅವರ ಪಾರ್ಥಿಕ ಶರೀರವನ್ನು ಹೈದರಾಬಾದ್‍ನಲ್ಲಿರುವ ಅವರ ನಿವಾಸಕ್ಕೆ ಸಾಗಿಸಲಾಗಿದೆ. ಭಾರತದ ಹಲವು ಚಿತ್ರರಂಗದ ಗಣ್ಯರು ನಿವಾಸಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಹರಿಕೃಷ್ಣ ಅವರ ಅಂತಿಮ ಸಂಸ್ಕಾರಗಳು ನಾಳೆ ನಡೆಯಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಈ ಹಿಂದೆ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಜಾನಕಿರಾಮ್‍ರ ಪಕ್ಕದಲ್ಲೇ ಹರಿಕೃಷ್ಣ ಸಂಸ್ಕಾರ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಹರಿಕೃಷ್ಣ ಅವರ ಅಂತಿಮ ಸಂಸ್ಕಾರಕ್ಕೆ ತೆಲಂಗಾಣ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಇದನ್ನು ಓದಿ: ಡ್ರೈವರಿಂದ ಸ್ಟಾರ್ ವರೆಗೂ ಎಲ್ಲರನ್ನೂ ಒಂದೇ ರೀತಿಯಾಗಿ ನೋಡ್ತಿದ್ರು: ಹರಿಕೃಷ್ಣ ಬಗ್ಗೆ ರವಿಶಂಕರ್ ಮಾತು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=2283Fb13–Y

     

  • ಡ್ರೈವರಿಂದ ಸ್ಟಾರ್ ವರೆಗೂ ಎಲ್ಲರನ್ನೂ ಒಂದೇ ರೀತಿಯಾಗಿ ನೋಡ್ತಿದ್ರು: ಹರಿಕೃಷ್ಣ ಬಗ್ಗೆ ರವಿಶಂಕರ್ ಮಾತು

    ಡ್ರೈವರಿಂದ ಸ್ಟಾರ್ ವರೆಗೂ ಎಲ್ಲರನ್ನೂ ಒಂದೇ ರೀತಿಯಾಗಿ ನೋಡ್ತಿದ್ರು: ಹರಿಕೃಷ್ಣ ಬಗ್ಗೆ ರವಿಶಂಕರ್ ಮಾತು

    ಬೆಂಗಳೂರು: ಇಂದು ಕಾರು ಅಪಘಾತದಲ್ಲಿ ಮೃತಪಟ್ಟ ತೆಲುಗಿನ ಖ್ಯಾತ ನಟ ನಂದಮೂರಿ ಹರಿಕೃಷ್ಣ ಅವರ ಕುಟುಂಬವೇ ನನಗೆ ಪರಿಚಯವಿದೆ. ಹರಿಕೃಷ್ಣ ಅವರು ಮಿ. ಪರ್ಫೆಕ್ಟ್ ಅಂತಾನೇ ಹೇಳಬಹುದು. ಯಾಕಂದ್ರೆ ಅಂತ ಒಂದು ವ್ಯಕ್ತಿತ್ವ ಅವರದ್ದಾಗಿದ್ದು, ಎಲ್ಲರನ್ನೂ ಒಂದೇ ರೀತಿಯಾಗಿ ಕಾಣುತ್ತಿದ್ದರು ಅಂತ ನಟ ರವಿಶಂಕರ್ ಹೇಳಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸುಮಾರು 30-25 ವರ್ಷಗಳಿಂದ ಅವರು ಗೊತ್ತು. ಅವರ ಮಗ ಎನ್ ಟಿಆರ್ ಜೊತೆನೂ ಕೆಲಸ ಮಾಡಿದ್ದೀನಿ. ಕಲ್ಯಾಣ್ ರಾಮ್ ಜೊತೆಯೂ ಕೆಲಸ ಮಾಡಿದ್ದೀನಿ. ಆದ್ರೆ ಇದೀಗ ಅವರು ನಮ್ಮನ್ನು ಬಿಟ್ಟು ಹೋಗಿದ್ದಾರೆ ಅನ್ನೋ ವಿಷಯ ಕೇಳಿ ಮನಸ್ಸಿಗೆ ತುಂಬಾ ನೋವಾಗುತ್ತಿದೆ. ಅಲ್ಲದೇ ಇಂದು ನಾನು ಬೆಳಗ್ಗೆ ಎದ್ದ ತಕ್ಷಣವೇ ಸುದ್ದಿ ಕೇಳಿ ನಿಜಕ್ಕೂ ಶಾಕ್ ಆಯಿತು ಅಂದ್ರು.

    ದೊಡ್ಡ ಫ್ಯಾಮಿಲಿ:
    ರಾಮರಾವ್ ಅಂದ್ರೆ ಅವರದ್ದು ದೊಡ್ಡ ಕುಟುಂಬ. ಹರಿಕೃಷ್ಣ ಆಗಿರಲಿ ಅಥವಾ ಬಾಲಕೃಷ್ಣ ಆಗಿರಲಿ. ಅವರ ಜೊತೆ ಕೆಲಸ ಮಾಡಿದ್ದೀನಿ. ಹರಿಕೃಷ್ಣ ತುಂಬಾ ಒಳ್ಳೆಯ ಮನುಷ್ಯ. ಒಬ್ಬರನ್ನು ಹೆಸರು ಹಿಡಿದು ಕರೆದವರಲ್ಲ. ಎಲ್ಲರನ್ನೂ ಬ್ರದರ್ ಅಂತ ಕರೆದು ಅವರ ತಂದೆಯ ರೀತಿಯಲ್ಲೇ ಮಾತನಾಡಿಸುತ್ತಿದ್ದರು. ಆತ ಡ್ರೈವರೇ ಆಗಿರಲಿ ಅಥವಾ ದೊಡ್ಡ ಸ್ಟಾರೇ ಆಗಿರಲಿ. ಹರಿಕೃಷ್ಣ ಅವರಿಗೆ ಎಲ್ಲರೂ ಒಂದೇ. ಎಲ್ಲರ ಜೊತೆನೂ ಒಂದೇ ರೀತಿಯಲ್ಲಿ ವರ್ತಿಸುತ್ತಿದ್ದರು ಅಂತ ತಿಳಿಸಿದ್ರು.

    ಒಳ್ಳೆಯ ವ್ಯಕ್ತಿತ್ವ ಹಾಗೂ ಶಿಸ್ತಿನ ಮನುಷ್ಯ. ಮೂಲತಃ ಅವರು ಒಬ್ಬ ಬೆಸ್ಟ್ ಕಾರ್ ಡ್ರೈವರ್ ಕೂಡ. ಈಗಲ್ಲ ಅವರ ತಂದೆ ಮೊದಲು ತೆಲುಗು ದೇಶಂ ಪಾರ್ಟಿ ಸ್ಥಾಪನೆ ಮಾಡುವಾಗ ಚೈತನ್ಯರಾಧಾ ಎಂಬ ಗಾಡಿಗೆ ಡ್ರೈವರ್ ಯಾರೂ ಇರಲಿಲ್ಲ. ಆವಾಗ ಆ ಗಾಡಿಯನ್ನು ಆಂಧ್ರಪ್ರದೇಶದಲ್ಲಿ ಓಡಿಸಿದ್ದು ಹರಿಕೃಷ್ಣ ಅವರೇ. ಹೀಗೆ ಕಾರು ಚಾಲನೆಯಲ್ಲೂ ನಿಪುಣನಾಗಿದ್ದ ಹರಿಕೃಷ್ಣ ಅವರಿಗೆ ಇಂದು ಈ ದುರಂತ ಸಂಭವಿಸಿರುವುದು ವಿಷಾದನೀಯ ಸಂಗತಿಯಾಗಿದೆ ಅಂತ ಹೇಳಿದ್ರು.

    ಡ್ರೈವರ್ ಕಾರ್ ಓಡಿಸ್ತೀನಿ ಅಂದಾಗ ಬೇಡ ಅಂತ ಹೇಳಿ ಹರಿಕೃಷ್ಣ ಅವರೇ ಓಡಿಸಿದ್ದಾರಂತೆ. ಹೀಗಾಗಿ ಈ ರೀತಿ ಆಗಿದೆ. ಇಷ್ಟು ಮಾತ್ರವಲ್ಲದೇ ಸೀಟ್ ಬೆಲ್ಟ್ ಹಾಕಿಲ್ಲ. ಹಾಗೂ ಅತಿಯಾದ ವೇಗದ ಚಾಲನೆಯಿಂದ ಈ ಘಟನೆ ನಡೆದಿದೆ ಅಂತ ಕೇಳ್ಪಟ್ಟೆ. ಆದ್ರೆ ಇಂದು ಬೆಳಗ್ಗೆ ಈ ಸುದ್ದಿ ಬರುತ್ತೆ ಅಂತ ಅಂದುಕೊಂಡಿರಲಿಲ್ಲ. ಇಂತಹ ಒಂದು ಸಮಯದಲ್ಲಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮಕ್ಕಳು ಕಲ್ಯಾಣ್, ಎನ್‍ಟಿಆರ್ ಹಾಗೆಯೇ ಅವರ ಕುಟುಂಬಸ್ಥರಿಗೆ ದುಃಖಭರಿಸುವ ಶಕ್ತಿ ನೀಡಲಿ ಅಂತ ದೇವರಲ್ಲಿ ಬೇಡಿಕೊಳ್ಳುತ್ತೇನೆ ಅಂದ್ರು.

    2009ರಲ್ಲಿ ಜ್ಯೂನಿಯರ್ ಎನ್ ಟಿಆರ್ ಅವರು ಪ್ರಚಾರಕ್ಕೆ ಹೋಗುವಾಗ ನಲ್ಗೊಂಡದ ಅದೇ ಜಾಗದಲ್ಲಿ ಅಪಘಾತವಾಗಿತ್ತು. 4 ವರ್ಷದ ಹಿಂದೆ ಹರಿಕೃಷ್ಣ ಅವರ ದೊಡ್ಡ ಮಗ ಜಾನಕೀರಾಮ್ ಅವರು ಅದೇ ಪ್ರದೇಶಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ರು. ಇಂದು ಹರಿಕೃಷ್ಣ ಅವರ ಕಾರ್ ಅಪಘಾತವೂ ಕೂಡ ಅದೇ ಜಾಗದಲ್ಲಾಗಿರುವುದು ವಿಚಿತ್ರ. ಹೀಗಾಗಿ ಏನೂ ಅರ್ಥವಾಗುತ್ತಿಲ್ಲ ಅಂತ ಅವರು ಬೇಸರ ವ್ಯಕ್ತಪಡಿಸಿದ್ರು.

    ಕಾರ್ ಅಪಘಾತ:
    ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ನಂದಮೂರಿ ತಾರಕ ರಾಮಾರಾವ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಅವರು ಚಲಿಸುತ್ತಿದ್ದ ಕಾರು ಇಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅನ್ನೇಪರ್ತಿ ಬಳಿ ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಹರಿಕೃಷ್ಣ ಅವರಿಗೆ ಗಂಬೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಕಾಮಿನೇನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

    ಹರಿಕೃಷ್ಣ ಅವರು ಅಭಿಮಾನಿಯ ಪುತ್ರನ ಮದುವೆಗೆ ತೆರಳುತ್ತಿದ್ದರು. ಬೆಳಗ್ಗೆ 4.30ರ ಸುಮಾರಿನಲ್ಲಿ ಹೈದರಾಬಾದ್ ನಿಂದ ಆಂಧ್ರಪ್ರದೇಶದ ನಲ್ಲೂರಿಗೆ ತಾವೇ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹರಿಕೃಷ್ಣ ಅವರು ಬಾಲನಟನಾಗಿ ಹಾಗೂ ನಟನಾಗಿ 13 ಚಿತ್ರಗಳಲ್ಲಿ ನಟಿಸಿದ್ದು, ಶ್ರಾವಣಮಾಸಂ ಅವರ ಕೊನೆಯ ಚಿತ್ರವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv