Tag: ಹರಿದ್ವಾರ

  • ಪೇಜಾವರ ವಿಶ್ವೇಶತೀರ್ಥರ ಶಿಷ್ಯೆ ತಪೋವನಿ ಮಾತಾಜಿ ಇನ್ನಿಲ್ಲ

    ಪೇಜಾವರ ವಿಶ್ವೇಶತೀರ್ಥರ ಶಿಷ್ಯೆ ತಪೋವನಿ ಮಾತಾಜಿ ಇನ್ನಿಲ್ಲ

    ಉಡುಪಿ/ಹರಿದ್ವಾರ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಮಂತ್ರೋಪದೇಶ ಪಡೆದು ಸುಭದ್ರಾ ಎಂದು ಹೆಸರಿಸಲ್ಪಟ್ಟು, ಅಧ್ಯಾತ್ಮದ ಪಥದಲ್ಲಿ ಉನ್ನತ ಸಾಧನೆ ಮಾಡಿದ್ದ ತಪೋವನಿ ಮಾತಾಜಿ ಸುಭದ್ರಾ ಗುರುವಾರ ಹರಿದ್ವಾರದ ರಾಮಕೃಷ್ಣ ಆಶ್ರಮದ ಆಸ್ಪತ್ರೆಯಲ್ಲಿ ಅಸುನೀಗಿದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.

    ಮೂಲತಃ ಉಡುಪಿಯ ಪಂದುಬೆಟ್ಟಿನವರಾಗಿದ್ದು, ಎಳವೆಯಲ್ಲಿಯೇ ಆಧ್ಯಾತ್ಮದತ್ತ ಆಕರ್ಷಿತರಾಗಿದ್ದರು. ಕಳೆದ ಸುಮಾರು 60 ವರ್ಷಗಳ ಹಿಂದೆ ಹಿಮಾಲಯ ಸೇರಿ, ಪ್ರತಿಕೂಲ ವಾತಾವರಣದಲ್ಲೂ ನಿರಂತರ 9 ವರ್ಷ ಕಾಲ ತಪಸ್ಸನ್ನಾಚರಿಸಿದ್ದರು. ಅವರ ಆ ಸಾಧನೆಯಿಂದಲೇ ಹಿಮಾಲಯ ಪ್ರದೇಶದಲ್ಲಿ ತಪೋವನಿ ಮಾ ಎಂದೇ ಪ್ರಸಿದ್ಧರಾಗಿದ್ದರು.

    ಹಿಮಾಲಯದ ಪ್ರದೇಶದಲ್ಲೇ ಆಶ್ರಮವೊಂದನ್ನು ತೆರೆದು ಸಾಧುಗಳು, ಯಾತ್ರಿಗಳಿಗೆ ಊಟೋಪಚಾರ, ಆರೋಗ್ಯ ಸೇವೆ ನಡೆಸುತ್ತಿದ್ದರು. ಅನಾರೋಗ್ಯಕ್ಕೊಳಗಾದ ಬಳಿಕ ಹರಿದ್ವಾರದ ಆಚಾರ್ಯ ಬಾಲಕೃಷ್ಣ ವಿಶೇಷ ಮುತುವರ್ಜಿಯಲ್ಲಿ ಸ್ಥಳೀಯ ರಾಮಕೃಷ್ಣ ಆಶ್ರಮ ಆಸ್ಪತ್ರೆಯಲ್ಲಿ ಕಳೆದ ಕೆಲವು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರು.

    ಅವರ ಆಧ್ಯಾತ್ಮ ಸಾಧನೆ ಕುರಿತು ಹಿಂದಿಯಲ್ಲಿ ಪುಸ್ತಕವೊಂದು ಪ್ರಕಟವಾಗಿದೆ. ಅದರ ಕನ್ನಡ ಅನುವಾದವನ್ನು ಪ್ರೊ. ಭಾಸ್ಕರ ಮಯ್ಯ ಮಾಡಿದ್ದು, ಅದನ್ನು ಈಚೆಗೆ ಹರಿದ್ವಾರ ಭೇಟಿ ಸಂದರ್ಭದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮತ್ತು ಆಚಾರ್ಯ ಬಾಲಕೃಷ್ಣ ಅವರು ಮಾತಾಜಿ ಸಮ್ಮುಖದಲ್ಲಿ ಅನಾವರಣಗೊಳಿಸಿದ್ದರು. ಅದಕ್ಕಾಗಿ ವಾಸುದೇವ ಭಟ್ ಪೆರಂಪಳ್ಳಿ ಶ್ರಮಿಸಿದ್ದರು.

  • ಆತ್ಮಹತ್ಯೆಗೆ ಶರಣಾದ ಪತಿಯ ಮೃತದೇಹಕ್ಕಾಗಿ 7 ಜನ ಪತ್ನಿಯರ ಕಿತ್ತಾಟ

    ಆತ್ಮಹತ್ಯೆಗೆ ಶರಣಾದ ಪತಿಯ ಮೃತದೇಹಕ್ಕಾಗಿ 7 ಜನ ಪತ್ನಿಯರ ಕಿತ್ತಾಟ

    ಡೆಹ್ರಾಡೂನ್: ಆತ್ಮಹತ್ಯೆಗೆ ಶರಣಾದ ಪತಿಯ ಮೃತದೇಹಕ್ಕಾಗಿ 7 ಜನ ಪತ್ನಿಯರು ಕಿತ್ತಾಡಿಕೊಂಡ ವಿಚಿತ್ರ ಪ್ರಸಂಗವೊಂದು ಉತ್ತರಾಖಂಡ ರಾಜ್ಯದಲ್ಲಿ ನಡೆದಿದೆ.

    ಹರಿದ್ವಾರದ ರವಿದಾಸ್ ಬಸ್ತಿಯ ನಿವಾಸಿ ಪವನ್ ಕುಮಾರ್ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪವನ್ ಕುಮಾರ್ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದೇ ದಿನ ರಾತ್ರಿ ಐವರು ಮಹಿಳೆಯರು ಹಾಗೂ ಮಾರನೇ ದಿನ ಇಬ್ಬರು ಪವನ್ ಕುಮಾರ್ ನನ್ನ ಪತಿ ಎಂದು ಪರಸ್ಪರ ಕಿತ್ತಾಡಿಕೊಂಡು ಹೈಡ್ರಾಮಾ ಸೃಷ್ಟಿಸಿದ್ದಾರೆ.

    ಚಾಲಕನಾಗಿ ಕೆಲಸ ಮಾಡುತ್ತಿದ್ದ ಪವನ್ ಕುಮಾರ್ ಭಾನುವಾರ ರಾತ್ರಿ ವಿಷ ಕುಡಿದು ಒದ್ದಾಡುತ್ತಿದ್ದ. ಇದನ್ನು ನೋಡಿದ ಪತ್ನಿ ಪವನ್ ಕುಮಾರ್ ನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ ನಾಲ್ವರು ಮಹಿಳೆಯರು ಪವನ್ ಕುಮಾರ್ ತಮ್ಮ ಪತಿ ಎಂದು ವಾದಿಸಲು ಆರಂಭಿಸಿದರು. ಅವರ ವಾದವನ್ನು ತಳ್ಳಿ ಹಾಕಿದ ಪವನ್ ಕುಮಾರ್ ಪತ್ನಿ, ನನ್ನ ಪತಿ ನನ್ನನ್ನು ಬಿಟ್ಟರೆ ಬೇರೆ ಯಾವ ಮಹಿಳೆಯ ಜೊತೆಗೂ ಸಂಪರ್ಕ ಇಟ್ಟುಕೊಂಡಿಲ್ಲ ಎಂದು ತಿಳಿಸಿದ್ದಾರೆ.

    ಐವರು ಪತ್ನಿಯರು ಆಸ್ಪತ್ರೆ ಹೊರಗೆ ಜಗಳವಾಡುತ್ತಿದ್ದರು. ಇದನ್ನು ನೋಡಿದ ಪೊಲೀಸರಿಗೆ ಏನು ಮಾಡಬೇಕು ಎನ್ನುವುದೇ ಅರ್ಥವಾಗಲಿಲ್ಲ. ಪವನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎನ್ನುವುದಕ್ಕಿಂತ ಆತ ಯಾರ ಪತಿ ಎಂಬ ಕುರಿತೇ ಕುತೂಹಲ ಹೆಚ್ಚಾಗಿತ್ತು. ಕೊನೆಗೂ ಆ ಐವರು ಪತ್ನಿಯರ ಒಪ್ಪಿಗೆ ಬಳಿಕ ಪತಿಯ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

    ಆದರೆ ಐವರು ಪತ್ನಿರ ಕಿತ್ತಾಟಕ್ಕೆ ಪವನ್ ಕುಮಾರ್ ಸ್ಟೋರಿ ಮುಕ್ತಾಯವಾಗಲಿಲ್ಲ. ಆತನ ಅಂತ್ಯಸಂಸ್ಕಾರ ನೆರವೇರಿಸಿದ ಮಾರನೇ ದಿನ (ಸೋಮವಾರ) ಮತ್ತೆ ಇಬ್ಬರು ಮಹಿಳೆಯರು ಪೊಲೀಸ್ ಠಾಣೆಗೆ ಬಂದು ತಮಗೆ ತಿಳಿಸದೆ ಪತಿಯ ಅಂತ್ಯಸಂಸ್ಕಾರ ಮಾಡಿರುವುದು ಸರಿಯಲ್ಲ ಎಂದು ಗಲಾಟೆ ಮಾಡಿದ್ದಾರೆ. ಈ ಬೆಳವಣಿಗೆಯಿಂದ ಶಾಕ್‍ಗೆ ಒಳಗಾದ ಪೊಲೀಸರು, ಮತ್ತೆ ಯಾರಾದರು ಪವನ್ ಕುಮಾರ್ ತಮ್ಮ ಪತಿ ಅಂತ ಪೊಲೀಸ್ ಠಾಣೆಗೆ ಬರುತ್ತಾರಾ ಎಂದು ಕಾದು ನೋಡುತ್ತಿದ್ದಾರೆ. ಹೀಗಾಗಿ ನಾಲ್ಕೈದು ದಿನ ಕಾದು ನೋಡಿ ಪ್ರಕರಣದ ಕುರಿತು ತನಿಖೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

    ಮಹಿಳೆಯರು ಹಣಕ್ಕಾಗಿ ಪವನ್ ಕುಮಾರ್ ತಮ್ಮ ಪತಿ ಎಂದು ಹೇಳುತ್ತಿದ್ದಾರೆ ಎಂಬ ಅನುಮಾನ ಪೊಲೀಸರಿಗೆ ಮೂಡಿತ್ತು. ಈ ಸಂಬಂಧ ವಿವಾರಣೆ ಮಾಡಿದಾಗ, ಪವನ್ ಕುಮಾರ್ ಖಾತೆಯಲ್ಲಿ ಹಣವೇ ಇಲ್ಲ. ಅಷ್ಟೇ ಅಲ್ಲದೆ ಆತ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಇದರಿಂದಾಗಿ ಯಾರು ನಿಜವಾದ ಪತ್ನಿ, ಬೇರೆಯವರು ಯಾಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಶ್ವಾನ ಕೊಂದಿದ್ದಕ್ಕೆ ಸಿಟ್ಟು – ವಿಷ ಹಾಕಿ ಮೂರು ಚಿರತೆಗಳನ್ನು ಕೊಂದ ಮಾಲೀಕ

    ಶ್ವಾನ ಕೊಂದಿದ್ದಕ್ಕೆ ಸಿಟ್ಟು – ವಿಷ ಹಾಕಿ ಮೂರು ಚಿರತೆಗಳನ್ನು ಕೊಂದ ಮಾಲೀಕ

    ಹರಿದ್ವಾರ: ತಾನು ಪ್ರೀತಿಯಿಂದ ಸಾಕಿದ್ದ ನಾಯಿಯನ್ನು ಕೊಂದು ಹಾಕಿವೆ ಎಂಬ ಕಾರಣಕ್ಕೆ ಮಾಲೀಕ ವಿಷ ಹಾಕಿ ಮೂರು ಚಿರತೆಗಳನ್ನು ಕೊಂದಿರುವ ಘಟನೆ ಹರಿದ್ವಾರದಲ್ಲಿ ನಡೆದಿದೆ.

    ನಾಯಿಯ ಮಾಲೀಕನನ್ನು ಸುಖ್‍ಪಾಲ್ ಎಂದು ಗುರುತಿಸಿದ್ದು, ಆರೋಪಿಯು ನಾನು ಚಿರತೆಗಳಿಗೆ ವಿಷಪ್ರಾಶನ ಮಾಡಿದ್ದೆ ಎಂದು ಒಪ್ಪಿಕೊಂಡಿದ್ದಾನೆ. ನನ್ನ ಮೂರು ನಾಯಿ ಮರಿಗಳನ್ನು ಹೊತ್ತುಕೊಂಡು ಹೋಗಿದ್ದ ಚಿರತೆ ಒಂದನ್ನು ಸಾಯಿಸಿ ಇನ್ನೆರೆಡು ಮರಿಗಳನ್ನು ತೀವ್ರವಾಗಿ ಗಾಯಗೊಳಿಸಿದ್ದವು. ಈ ಕಾರಣದಿಂದ ನಾನು ಚಿರತೆಗಳಿಗೆ ವಿಷ ಹಾಕಿದ್ದೆ ಎಂದು ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.

    ಈ ಘಟನೆ ರಾಜಾಜಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದ್ದು, ಆರೋಪಿ ಸುಖ್‍ಪಾಲ್ ಕೀಟನಾಶಕವನ್ನು ಸತ್ತ ನಾಯಿಯ ಶವದ ಮೇಲೆ ಅಪಾರ ಪ್ರಮಾಣದಲ್ಲಿ ಸಿಂಪಡಿಸಿ ನಂತರ ಮೃತ ದೇಹವನ್ನು ಕಾಡಿನೊಳಗೆ ಎಸೆದಿದ್ದಾನೆ. ನಾಯಿಯ ಮಾಂಸವನ್ನು ತಿಂದ ಮೂರು ಚಿರತೆಗಳು ಸಾವನ್ನಪ್ಪಿವೆ.

    ಆಗಸ್ಟ್ 5 ರಂದು ಉದ್ಯಾನವನದ ವಿವಿಧ ಭಾಗಗಳಲ್ಲಿ ಮೂರು ಚಿರತೆಯ ಶವಗಳು ಪತ್ತೆಯಾದ ಕಾರಣ ಅಲ್ಲಿನ ಅಧಿಕಾರಿಗಳು ಚಿರತೆಗಳ ಮರಣೋತ್ತರ ಪರೀಕ್ಷೆ ಮಾಡಿಸಿದ್ದಾರೆ. ಈ ವೇಳೆ ಮೂರು ಚಿರತೆಗಳು ಒಂದೇ ನಾಯಿಯ ಮಾಂಸವನ್ನು ಸೇವಿಸಿ ಮೃತ ಪಟ್ಟಿವೆ, ಅ ಮಾಂಸದಲ್ಲಿ ಅಪಾರ ಪ್ರಮಾಣದ ವಿಷ ಇದೆ ಎಂದು ವಿಧಿವಿಜ್ಞಾನ ತಜ್ಞರು ತಿಳಿಸಿದ್ದರು.

    ಮರಣೋತ್ತರ ಪರೀಕ್ಷೆ ಮಾಹಿತಿ ಪಡೆದ ಅಧಿಕಾರಿಗಳು ತನಿಖೆ ಮಾಡಿದಾಗ, ಅರಣ್ಯದ ನರ್ಸರಿಯಲ್ಲಿ ಬಳಸುವ ಕೀಟನಾಶಕದಿಂದ ಚಿರತೆಗಳು ಸಾವನ್ನಪಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಸಿದ ಅಧಿಕಾರಿಗಳಿಗೆ ಸುಖ್‍ಪಾಲ್ ಚಿರತೆಗಳಿಗೆ ವಿಷ ಹಾಕಿರುವುದು ತಿಳಿದು ಬಂದಿದೆ. ಆರೋಪಿ ಸುಖ್‍ಪಾಲ್‍ನ ಹೆಂಡತಿ ಅರಣ್ಯದ ನರ್ಸರಿಯಲ್ಲಿ ಗುತ್ತಿಗೆ ಕೆಲಸಗಾರ್ತಿಯಾಗಿ ಕೆಲಸ ಮಾಡುತ್ತಿದ್ದು, ಅವಳ ಕಡೆಯಿಂದ ಸತ್ತ ನಾಯಿಯ ದೇಹಕ್ಕೆ ಕೀಟನಾಶಕವನ್ನು ಹಾಕಿ ಚಿರತೆಗಳನ್ನು ಕೊಂದೆ ಎಂದು ಸುಖ್‍ಪಾಲ್ ಒಪ್ಪಿಕೊಂಡಿದ್ದಾನೆ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಅಪಾರ ಪ್ರಮಾಣದ ಕೀಟನಾಶಕವನ್ನು ನಾಯಿಯ ದೇಹದ ಮೇಲೆ ಹಾಕಿದ ಕಾರಣ ಅದನ್ನು ಸೇವಿಸಿದ ಮೂರು ಚಿರತೆ ಮರಿಗಳು ಸಾವನ್ನಪ್ಪಿವೆ. ಸುಖ್‍ಪಾಲ್‍ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ ಆತನನ್ನು 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ ಎಂದು ತಿಳಿಸಿದ್ದಾರೆ.

  • ಮೊಬೈಲ್ ಕದ್ದಿದ್ದಾನೆಂದು ಯುವಕನನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

    ಮೊಬೈಲ್ ಕದ್ದಿದ್ದಾನೆಂದು ಯುವಕನನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

    ಡೆಹ್ರಾಡೂನ್: ಮೊಬೈಲ್ ಕಳ್ಳತನದ ಶಂಕೆಯ ಮೇಲೆ ಯುವಕನೊಬ್ಬನನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿ ಗ್ರಾಮಸ್ಥರು ಥಳಿಸಿದ ಅಮಾನವೀಯ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

    ಹರಿದ್ವಾರದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಯುವಕನನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿದ್ದ ಕೆಲವರು, ಕೋಲು ಹಿಡಿದು ಥಳಿಸಿದ್ದಾರೆ. ಪರಿಣಾಮ ಹಲ್ಲೆಗೆ ಒಳಗಾದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.

    ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಹರಿದ್ವಾರ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಇಂತಹದ್ದೇ ಘಟನೆ ಹರಿದ್ವಾರದಲ್ಲಿ ಕಳೆದ ತಿಂಗಳು ನಡೆದಿತ್ತು. ಕಳ್ಳತನ ಶಂಕೆಯ ಮೇಲೆ ಗ್ರಾಮಸ್ಥರು ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸಿದೆ ಆತನು ಮೃತಪಟ್ಟಿದ್ದ.

    ಮೃತನ ಕುಟುಂಬಸ್ಥರು ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಹರಿದ್ವಾರದಿಂದ ಮುಸ್ಲಿಂರನ್ನು ಬಹಿಷ್ಕರಿಸಿ: ಸಾಧ್ವಿ ಪ್ರಾಚಿ

    ಹರಿದ್ವಾರದಿಂದ ಮುಸ್ಲಿಂರನ್ನು ಬಹಿಷ್ಕರಿಸಿ: ಸಾಧ್ವಿ ಪ್ರಾಚಿ

    ಲಕ್ನೋ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹರಿದ್ವಾರದಲ್ಲಿರುವ ಮುಸ್ಲಿಂರನ್ನು ಬಹಿಷ್ಕರಿಸಿ ಎಂದು ಸಾಧ್ವಿ ಪ್ರಾಚಿ ಹೇಳಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ.

    ಕೈರನಾ ಶಾಸಕ ನಾಹಿದ್ ಹಸನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಾಧ್ವಿ ಪ್ರಾಚಿ, ಶಾಸಕರು ಮುಸ್ಲಿಂರಿಗೆ ಹಿಂದೂಗಳ ಅಂಗಡಿಯಿಂದ ವಸ್ತುಗಳನ್ನು ಖರೀದಿಸದಂತೆ ಹೇಳುತ್ತಾರೆ. ನಾನು ಹರಿದ್ವಾರದ ಎಲ್ಲ ಹಿಂದೂಗಳಲ್ಲಿ ಮುಸ್ಲಿಂರು ತಯಾರಿಸುವ ಕಾಂವಡಾ(ಪೂಜಾ ಸಾಮಾಗ್ರಿ) ಖರೀದಿಸಬಾರದು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಸಾರ್ವಜನಿಕ ಸಮಾರಂಭದಲ್ಲಿ ಹೇಳಿದ್ದಾರೆ.

    ಹರಿದ್ವಾರದಲ್ಲಿರುವ ಶೇ.99ರಷ್ಟು ಮುಸ್ಲಿಂರು ಹಿಂದೂಗಳ ಪೂಜೆಗೆ ಬೇಕಾಗುವ ಕಾಂವಡಾ ತಯಾರಿಸುತ್ತಾರೆ. ಮುಸ್ಲಿಂರನ್ನು ಹರಿದ್ವಾರದ ಕಳುಹಿಸಲು ಅವರು ತಯಾರಿಸುವ ವಸ್ತುಗಳನ್ನು ಖರೀದಿಸಬೇಡಿ. ಹರಿದ್ವಾರದಲ್ಲಿರುವ ಹಿಂದೂಗಳಿಗೂ ದಿನಗೂಲಿ ಸಿಗಬೇಕೆಂದ್ರೆ ಮುಸ್ಲಿಂರನ್ನು ಬಹಿಷ್ಕರಿಸಿ ಎಂದು ಒತ್ತಾಯಿಸಿದ್ದಾರೆ.

    ಎಲ್ಲಿ ಮುಸ್ಲಿಂರ ಸಂಖ್ಯೆ ಹೆಚ್ಚಾಗಿರುತ್ತೋ ಅಲ್ಲಿ ವಿವಾದ ಹುಟ್ಟಿಕೊಳ್ಳುತ್ತದೆ. ಈ ಮೊದಲು ಕೈರನಾದಿಂದ ಹಿಂದೂಗಳ ಮನೆಯನ್ನು ಖಾಲಿ ಮಾಡಿಸಲಾಯ್ತು. ಇದೀಗ ಹಿಂದೂಗಳ ಅಂಗಡಿಗಳಿಂದ ವಸ್ತುಗಳನ್ನು ಖರೀದಿಸಬಾರದು ಶಾಸಕ ಹಸನ್ ಹೇಳುತ್ತಾರೆ. ನೀವು ಮುಸ್ಲಿಂರು ತಯಾರಿಸುವ ಕಾಂವಡಾ ಖರೀದಿಸಬೇಡಿ. ನಾವುಗಳು ಹಿಂದೂ, ಹಿಂದೂಸ್ಥಾನ್ ನಮ್ಮದು. ಮಾನವೀಯತೆ ದೃಷ್ಟಿಯಿಂದ ಭಾರತದಲ್ಲಿ ಮುಸ್ಲಿಂರು ವಾಸಿಸುತ್ತಿದ್ದಾರೆ. ಇಲ್ಲಿ ಕಳ್ಳತನ, ಸುಲಿಗೆ ಮಾಡಿದ್ರೆ ಸುಮ್ಮನೆ ಕುಳಿತುಕೊಳ್ಳಲು ನಾವು ಮಹಾತ್ಮ ಗಾಂಧೀಜಿ ಅಲ್ಲ. ಮುಸ್ಲಿಂರೇ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಜೈ ಶ್ರೀರಾಮ ಹೇಳದಿದ್ದರೆ ಚೆನ್ನಾಗಿರಲ್ಲ ಎಂದು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಶಾಸಕ ನಾಹಿದ್ ಹಸನ್ ಹೇಳಿದ್ದೇನು?
    ಕೈರನಾ ಮತ್ತು ಸುತ್ತಮುತ್ತಲಿನ ಗ್ರಾಮದ ನೀವು ಇಲ್ಲಿಯ ಬಿಜೆಪಿ ಬೆಂಬಲಿತರ ಅಂಗಡಿಯಲ್ಲಿ ಯಾವ ವಸ್ತುವನ್ನು ಖರೀದಿಸಬೇಡಿ ಎಂದು ನಾಹಿದ್ ಹಸನ್ ವಿವಾವಾದತ್ಮಕ ಹೇಳಿಕೆ ನೀಡಿದ್ದರು. ಹತ್ತು ಅಥವಾ ಒಂದು ತಿಂಗಳು ಕಷ್ಟವಾದರೂ ಪರವಾಗಿಲ್ಲ ಪಾಣಿಪತ್ ಗೆ ತೆರಳಿ ವಸ್ತುಗಳನ್ನು ಖರೀದಿಸಿ. ಮುಂದಿನ ಒಳ್ಳೆಯ ದಿನಕ್ಕಾಗಿ ಸ್ವಲ್ಪ ಕಷ್ಟ ಅನುಭವಿಸಬೇಕಿದೆ ಎಂದು ಶಾಸಕ ಹಸನ್ ತಮ್ಮ ಕ್ಷೇತ್ರದ ಮುಸ್ಲಿಂ ಜನತೆಯಲ್ಲಿ ಕೈ ಮುಗಿದು ನಿಮ್ಮಲ್ಲಿ ಮನವಿ ಮಾಡಿಕೊಂಡಿದ್ದರು.

  • ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ರಕ್ಷಿಸಿದ ಪೊಲೀಸ್ – ವಿಡಿಯೋ

    ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ರಕ್ಷಿಸಿದ ಪೊಲೀಸ್ – ವಿಡಿಯೋ

    ಡೆಹ್ರಾಡೂನ್: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ಪೊಲೀಸ್ ಅಧಿಕಾರಿಯೊಬ್ಬರು ಕಾಪಾಡಿರುವ ಘಟನೆ ಉತ್ತರಾಖಂಡ್‍ನಲ್ಲಿ ನಡೆದಿದೆ.

    ಈ ಘಟನೆ ಉತ್ತರಾಖಂಡ್‍ನ ಹರಿದ್ವಾರದಲ್ಲಿ ನಡೆದಿದ್ದು, ಗಂಗಾ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಕಾಪಾಡಲು ಪೊಲೀಸ್ ಅಧಿಕಾರಿಯೊಬ್ಬರು ಲೈಫ್ ಜಾಕೆಟ್ ಧರಿಸಿ ನದಿಗೆ ಹಾರಿದ್ದಾರೆ. ಇದನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು ಉತ್ತರಾಖಂಡ್ ಪೊಲೀಸರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ನದಿಗೆ ಹಾರಿದ ಪೊಲೀಸ್ ಅಧಿಕಾರಯನ್ನು ಸನ್ನಿ ಎಂದು ಗುರುತಿಸಲಾಗಿದೆ. ಇನ್ನು ಹರಿಯಾಣದ ನಿವಾಸಿಯಾದ ವಿಶಾಲ್ ಕಾಂಗ್ರಾ ಘಾಟ್‍ನಲ್ಲಿ ಸ್ನಾನ ಮಾಡಲು ಹೋಗಿ ಸಮತೋಲನ ಕಳೆದುಕೊಂಡು ನದಿಯಲ್ಲಿ ಬಿದ್ದಿದ್ದಾನೆ. ವೇಗದಿಂದ ಹರಿಯುತ್ತಿದ್ದ ಕಾರಣ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ.

    https://twitter.com/subodhh9879/status/1152999979054768131

    ಈ ಸಮಯದಲ್ಲಿ ಅಲ್ಲೇ ಇದ್ದ ಸನ್ನಿಯವರು ಯುವಕನನ್ನು ಕಾಪಾಡಿದ್ದಾರೆ. ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ವೀಡಿಯೊವನ್ನು 55,000 ಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ ಮತ್ತು ಪೊಲೀಸ್ ಅಧಿಕಾರಿಯ ಧೈರ್ಯವನ್ನು ಶ್ಲಾಘಿಸಿ ತುಂಬಾ ಜನ ಕಮೆಂಟ್ ಮಾಡಿದ್ದಾರೆ.

    ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಆಗಿದ್ದು, ಗಂಗಾ ನದಿಯ ನೀರಿನ ಮಟ್ಟವನ್ನು ಹೆಚ್ಚಾಗಿದೆ. ಈಗ ಅಲ್ಲಿ ನಡೆಯುತ್ತಿರುವ ಕನ್ವರ್ ಯಾತ್ರೆಯಲ್ಲಿ ಜನರು ನೀರಿಗೆ ಇಳಿಯದಂತೆ ನೋಡಿಕೊಳ್ಳಲು ಜಲ ಪೊಲೀಸ್ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್‍ಡಿಆರ್‍ಎಫ್) ತಂಡಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

  • ಹರಿದ್ವಾರದಲ್ಲಿ ಹುತಾತ್ಮ ಯೋಧನಿಗೆ ಅಂತಿಮ ನಮನ- ಹರಿದುಬಂತು ಜನಸಾಗರ

    ಹರಿದ್ವಾರದಲ್ಲಿ ಹುತಾತ್ಮ ಯೋಧನಿಗೆ ಅಂತಿಮ ನಮನ- ಹರಿದುಬಂತು ಜನಸಾಗರ

    ಡೆಹ್ರಾಡೂನ್(ಉತ್ತರಾಖಂಡ್): ಜಮ್ಮು- ಕಾಶ್ಮೀರದ ರಜೌರಿಯಲ್ಲಿ ಶನಿವಾರ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಗೊಂಡು ಮೇಜರ್ ಚಿತ್ರೇಶ್ ಬಿಸ್ತ್ ಹುತಾತ್ಮರಾಗಿದ್ದು, ಇಂದು ಅವರಿಗೆ ಹರಿದ್ವಾರದಲ್ಲಿ ಅಂತಿಮ ನಮನ ಸಲ್ಲಿಸಲಾಗುತ್ತಿದೆ.

    ಒಂದೆಡೆ ಪುಲ್ವಾಮಾದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ಮಾಡುತ್ತಿದೆ. ಇನ್ನೊಂದೆಡೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರ ಅಂತಿಮ ಯಾನ ನಡೆಯುತ್ತಿದೆ. ಬಿಸ್ತ್ ಅವರಿಗೆ ಅಂತಿಮ ನಮನ ಸಲ್ಲಿಸಲು ಹರಿದ್ವಾರದಲ್ಲಿ ಜನಸಾಗರವೇ ಹರಿದು ಬರುತ್ತಿದ್ದು, `ಅಮರ್ ರಹೇ’ `ಅಮರ್ ರಹೇ’ ಎಂಬ ಘೋಷಣೆ ಕೂಗುತ್ತಿದ್ದಾರೆ. ಸಾವಿರಾರು ಜನ ಅಂತಿಮ ದರ್ಶನ ಪಡೆಯಲು ಬರುತ್ತಿದ್ದು, ಇನ್ನು ಹಲವರು ತಮ್ಮ ಮನೆಯ ಬಾಲ್ಕನಿಯಲ್ಲಿ ನಿಂತು ವೀರ ಯೋಧನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

    ಹುತಾತ್ಮರಾಗಿದ್ದು ಹೇಗೆ?
    ಪುಲ್ವಾಮಾ ದಾಳಿ ನಡೆದು 40 ಸೈನಿಕರು ಹುತಾತ್ಮರಾದ ಬೆನ್ನಲ್ಲೇ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿ ನೆಲದ ಒಳಗಡೆ ಉಗ್ರರು ಹುದುಗಿಸಿಟ್ಟಿದ್ದ ಐಇಡಿ ಸ್ಫೋಟಗೊಂಡು ಸೇನೆಯ ಅಧಿಕಾರಿ ಚಿತ್ರೇಶ್ ಹುತಾತ್ಮರಾಗಿದ್ದರು. ಶನಿವಾರ ಸಂಜೆ 3 ಗಂಟೆಯ ವೇಳೆಗೆ ನಡೆದ ಈ ಘಟನೆಯಲ್ಲಿ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಗಡಿ ನಿಯಂತ್ರಣ ರೇಖೆಯ ಬಳಿಯಿಂದ 1.5 ಕಿ.ಮೀ ದೂರದಲ್ಲಿ ಐಇಡಿಯನ್ನು ಇಡಲಾಗಿತ್ತು. ಗಡಿ ನಿಯಂತ್ರಣ ರೇಖೆಯ ಬಳಿ ಸೇನೆಯ ಅಧಿಕಾರಿಗಳು ಗಸ್ತು ತಿರುಗುವ ವೇಳೆ ಮಣ್ಣಿನಲ್ಲಿ ಹೂತ್ತಿದ್ದ ವಸ್ತು ಪತ್ತೆಯಾಗಿದೆ. ಈ ವಸ್ತುವನ್ನು ಮಣ್ಣಿನಿಂದ ತೆಗೆಯುವಾಗ ಸ್ಫೋಟಗೊಂಡಿತ್ತು. ಇದನ್ನೂ ಓದಿ; ಮುಂದಿನ ತಿಂಗ್ಳು ನಿಶ್ಚಯವಾಗಿತ್ತು ಹುತಾತ್ಮರಾದ ಮೇಜರ್ ಮದ್ವೆ

    ಮದುವೆ ಫಿಕ್ಸ್ ಆಗಿತ್ತು:
    31 ವರ್ಷದ ಮೇಜರ್ ಬಿಸ್ತ್ ಅವರಿಗೆ ಮದುವೆ ನಿಗದಿಯಾಗಿದ್ದು, ಇದೇ ತಿಂಗಳು 28ರಂದು ಊರಿಗೆ ತೆರಳುವವರಿದ್ದರು. ಮಾರ್ಚ್ 7ರಂದು ಮದುವೆ ಫಿಕ್ಸ್ ಆಗಿತ್ತು. ಹೀಗಾಗಿ ಅವರು ಮದುವೆ ತಯಾರಿಯಲ್ಲಿದ್ದರು. ಆದ್ರೆ ಇದೀಗ ಮೇಜರ್ ಚಿತ್ರೇಶ್, ಫಿಯಾನ್ಸಿ, ಫೋಷಕರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇವರ ತಂದೆ ನಿವೃತ್ತ ಪೊಲೀಸ್ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ.

    ಇಂದು ಭಾರತದಿಂದ ಪ್ರತಿಕಾರ:
    ಆತ್ಮಾಹುತಿ ದಾಳಿ ನಡೆದ ಆವಂತಿಪೂರದಿಂದ ಕೇವಲ 10 ಕಿ.ಮೀ ದೂರದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದರು. ಭಾನುವಾರ ರಾತ್ರಿ 8.30ರ ಹೊತ್ತಿಗೆ ಪಿಂಗ್ಲಾನ್ ಪ್ರಾಂತ್ಯದ ಕಟ್ಟಡವೊಂದರಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಸೇನೆಗೆ ಸಿಕ್ಕಿದೆ. ಬಳಿಕ ಮಧ್ಯರಾತ್ರಿ ಹೊತ್ತಿಗೆ ಪಿಂಗ್ಲಾನ್ ಪ್ರಾಂತ್ಯದ ಆ ಕಟ್ಟಡವನ್ನು ಸೇನೆ ಸುತ್ತುವರಿದಿತ್ತು. 55 ರಾಷ್ಟ್ರೀಯ ರೈಫಲ್ಸ್ ರೆಜಿಮೆಂಟ್, ಪೊಲೀಸ್ ಮತ್ತು ಸಿಆರ್‍ಪಿಎಫ್ ಒಳಗೊಂಡು ಭಾರತೀಯ ಸೇನೆ ಈ ಕಾರ್ಯಚರಣೆ ನಡೆಸಿ ಮೊದಲು ಉಗ್ರರಿಗೆ ಶರಣಾಗಲು ಸೂಚಿಸಿದ್ದರು. ಆದರೆ ಉಗ್ರರು ಶರಣಾಗುವ ಬದಲು ಯೋಧರಿಗೆ ಗುಂಡಿನ ದಾಳಿ ನಡೆಸಿದ್ದರು. ಇಂದು ಬೆಳಗ್ಗಿನ ಜಾವದವರೆಗೂ ನಿರಂತರವಾಗಿ ಭೀಕರ ಗುಂಡಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಯೋಧರ ಬಲಿಗೆ ಕಾರಣನಾದ ಮಾಸ್ಟರ್ ಮೈಂಡ್ ಫಿನಿಶ್!

    ಗುಂಡಿನ ಚಕಮಕಿ ವೇಳೆ ಓರ್ವ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದರು. ಆದರೂ ಎದೆಗುಂದದೆ ಯೋಧರು ಕಾರ್ಯಾಚರಣೆ ಮುಂದುವರಿಸಿ ಕಾರ್ಯಾಚರಣೆ ನಡೆಸಿ ಉಗ್ರರು ಅಡಗಿದ್ದ ಇಡೀ ಕಟ್ಟಡವನ್ನೇ ಉಡಾಯಿಸಿದ್ದಾರೆ. ಪರಿಣಾಮ ಸದ್ಯ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ರಕ್ತ ರಕ್ಕಸ ಅಬ್ದುಲ್ ರಶೀದ್ ಘಾಸಿ ಹಾಗೂ ಜೈಷ್ ಸಂಘಟನೆಯ ಮತ್ತೋರ್ವ ಕಮಾಂಡರ್ ಕಮ್ರಾನ್‍ನನ್ನು ಯೋಧರು ಹತ್ಯೆ ಮಾಡಿದ್ದಾರೆ. ಸುದೀರ್ಘ 9 ಗಂಟೆಗಳ ಗುಂಡಿನ ಚಕಮಕಿ ನಂತರ ಈ ಕಾರ್ಯಚರಣೆ ಯಶಸ್ವಿಯಾಗಿ ನಡೆದಿದೆ. ಇನ್ನೂ 6 ಮಂದಿ ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಭಾರತೀಯ ಸೇನೆ ತನ್ನ ಕಾರ್ಯಾಚರಣೆ ಮುಂದುವರಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನನ್ನಿಂದ ಜಲಾಭಿಷೇಕ ಮಾಡಿಸಿಕೊಳ್ಳಲು ಶಿವ ಬಯಸಿದ್ದಾನೆ, 6 ದಿನ ರಜೆ ಕೊಡಿ: ಪೇದೆ ಪತ್ರ ವೈರಲ್

    ನನ್ನಿಂದ ಜಲಾಭಿಷೇಕ ಮಾಡಿಸಿಕೊಳ್ಳಲು ಶಿವ ಬಯಸಿದ್ದಾನೆ, 6 ದಿನ ರಜೆ ಕೊಡಿ: ಪೇದೆ ಪತ್ರ ವೈರಲ್

    ಲಕ್ನೋ: ಹರಿದ್ವಾರದ ಶಿವ ನನ್ನಿಂದ ಜಲಾಭಿಷೇಕ ಮಾಡಿಸಿಕೊಳ್ಳಲು ಬಯಸಿದ್ದಾನೆ, ಹೀಗಾಗಿ ನನಗೆ ರಜೆ ನೀಡಬೇಕು ಎಂದು ಉತ್ತರ ಪ್ರದೇಶ ಪೇದೆಯೊಬ್ಬ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಬುಲಂದ್‍ಶಹರದ ಸಿಯಾನಾ ಪೊಲೀಸ್ ಠಾಣೆಯ ವಿನೋದ್ ಕುಮಾರ್ ಹೀಗೆ ಪತ್ರ ಬರೆದ ಪೇದೆ. ಆಗಸ್ಟ್ 5 ರಂದು ವಿನೋದ್ ಕುಮಾರ್ ಡೆಪ್ಯುಟಿ ಎಸ್‍ಪಿಗೆ 6 ದಿನಗಳ ರಜೆ ಕೋರಿ, ಪತ್ರ ಬರೆದಿದ್ದರು. ಇದು ವೈರಲ್ ಆಗಿದ್ದು, ನೆಟ್ಟಿಗರಿಂದ ಭಾರೀ ಕಮೆಂಟ್ ಹರಿದಾಡುತ್ತಿವೆ.

    ಪತ್ರದಲ್ಲಿ ಏನಿದೆ?
    ನನ್ನ ಕನಸಿನಲ್ಲಿ ಶಿವ ಕನಸಿನಲ್ಲಿ ಬಂದಿದ್ದನು. ಶ್ರಾವಣ ಮಾಸದಲ್ಲಿ ನಡೆಯುವ ಕನ್ವರ್ ತೀರ್ಥಯಾತ್ರೆ ಪಾಲ್ಗೊಂಡು, ಹರಿದ್ವಾರದಲ್ಲಿ ತನಗೆ ಜಲಾಭಿಷೇಕ ಮಾಡುವಂತೆ ಸೂಚಿಸಿದ್ದಾನೆ. ಹೀಗಾಗಿ ದಯವಿಟ್ಟು ನನಗೆ 6 ದಿನಗಳ ರಜೆಯನ್ನು ನೀಡಿ ಎಂದು ವಿನೋದ್ ಕುಮಾರ್ ಬರೆದು ಡೆಪ್ಯುಟಿ ಎಸ್‍ಪಿಗೆ ನೀಡಿದ್ದರು.

    ರಜೆ ಕೇಳಿ ಇದೇ ಮೊದಲ ಬಾರಿಗೆ ಇಂತಹ ಅರ್ಜಿಯೊಂದು ಬಂದಿದ್ದು, ಅರ್ಜಿ ಪರಿಗಣಿಸಿರುವ ಮೇಲಾಧಿಕಾರಿಗಳು ವಿನೋದ್‍ಗೆ 6 ದಿನಗಳ ರಜೆ ಮಂಜೂರು ಮಾಡಿದ್ದಾರೆ ಎಂದು ಸಿಯಾನಾ ಠಾಣೆಯ ಎಎಸ್‍ಪಿ ಪ್ರಮೋದ್ ಕುಮಾರ್ ಹೇಳಿದ್ದಾಗಿ ವರದಿಯಾಗಿದೆ.

  • 6 ಕೋಟಿ ರೂ. ಮೌಲ್ಯದ ಚಿನ್ನಾಭರಣ ಧರಿಸಿ ಗೋಲ್ಡನ್ ಬಾಬಾ ಯಾತ್ರೆ

    6 ಕೋಟಿ ರೂ. ಮೌಲ್ಯದ ಚಿನ್ನಾಭರಣ ಧರಿಸಿ ಗೋಲ್ಡನ್ ಬಾಬಾ ಯಾತ್ರೆ

    ಹರಿದ್ವಾರ: ಉತ್ತರಾಖಂಡ ಪ್ರಸಿದ್ಧ ಕನ್ವರ ಯಾತ್ರೆ ಆರಂಭವಾಗಿದ್ದು, ಪ್ರತಿ ಬಾರಿ ಯಾತ್ರೆಯಲ್ಲಿ ಕೇಂದ್ರ ಬಿಂದುವಾಗುವ ಗೋಲ್ಡನ್ ಬಾಬಾ ಈ ಬಾರಿಯೂ ತಾವು ಧರಿಸುವ ಚಿನ್ನಾಭರಣದಿಂದ ಎಲ್ಲರ ಗಮನ ಸೆಳೆದಿದ್ದಾರೆ.

    56 ವರ್ಷದ ಗೋಲ್ಡನ್ ಬಾಬಾ ಖ್ಯಾತಿಯ ಪುರಿ ಮಹಾರಾಜ್ ಅವರು ಈ ಬಾರಿ ಸುಮಾರು 6 ಕೋಟಿ ರೂ. ಮೌಲ್ಯದ 20 ಕೆಜಿ ಚಿನ್ನಾಭರಣವನ್ನು ಧರಿಸಿ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ತಾವು ಯಾತ್ರೆಯ ಕೇಂದ್ರ ಬಿಂದುವಾಗಿ ಗುರುತಿಸಿಕೊಂಡಿದ್ದು, ಜನರು ನಾನು ತೆರಳುವ ಎಲ್ಲಾ ಸ್ಥಳಗಳಿಗೆ ಆಗಮಿಸುತ್ತಾರೆ. ಯಾತ್ರೆ ವೇಳೆ ಪೊಲೀಸರು ನನಗೆ ರಕ್ಷಣೆ ನೀಡುತ್ತಾರೆ ಎಂದು ತಿಳಿಸಿದ್ದಾರೆ.

    ಕಾರು ಹಾಗೂ ಚಿನ್ನದ ಮೇಲಿನ ಆಕರ್ಷಣೆ ನಾನು ಮೃತ ಪಡುವವರೆಗೂ ಹೋಗುವುದಿಲ್ಲ. ಅಲ್ಲದೇ ನಾನು 25 ಬಾರಿ ಕನ್ವರ್ ಯಾತ್ರೆ ಮಾಡುತ್ತಿದ್ದು, ಇದು ಕೊನೆಯ ಯಾತ್ರೆಯಾಗಿದೆ. ಈ ಯಾತ್ರೆಯ ಅವಧಿಯಲ್ಲಿ ಮಾತ್ರ ಚಿನ್ನಾಭರಣಗಳನ್ನು ಧರಿಸುತ್ತೇನೆ. ಹೆಚ್ಚಿನ ತೂಕದ ಅಭರಣ ಧರಿಸುವುದರಿಂದ ನನ್ನ ದೇಹದ ಆರೋಗ್ಯದ ಮೇಲೆ ಹೆಚ್ಚಿನ ಪ್ರಭಾವ ಉಂಟಾಗುತ್ತದೆ ಎಂದು ಹೇಳಿದ್ದಾರೆ.

    ಅಂದಹಾಗೇ ಪುರಿ ಮಹಾರಾಜ್ ಬಾಬಾ ಆಗುವ ಮುನ್ನ ದೆಹಲಿಯಲ್ಲಿ ಉದ್ಯಮಿಯಾಗಿದ್ದು, ಬಳಿಕ ಬಾಬಾ ಆಗಿ ಪರಿವರ್ತನೆಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಪುರಿ ಮಹಾರಾಜ್ 25 ಬಾರಿ ಕನ್ವರ್ ಯಾತ್ರೆಯಲ್ಲಿ ಭಾಗವಹಿಸಿದ್ದು, ಅವರೊಂದಿಗೆ ಭಾಗವಹಿಸುವ ಇತರೇ ಮಂದಿಗೆ 1.25 ಕೋಟಿ ರೂ. ಖರ್ಚು ಮಾಡಿದ್ದಾರೆ. ಅವರೊಂದಿಗೆ ಬರುವ 250 ರಿಂದ 300 ಮಂದಿ ಯಾತ್ರಿಗಳ ಊಟ, ವಸತಿ, ಆಹಾರ, ವೈದ್ಯಕೀಯ ಸೇವೆಯನ್ನು ನೀಡುತ್ತಿದ್ದಾರೆ.

    ಕೇವಲ ಚಿನ್ನಾಭರಣಗಳನ್ನ ಮಾತ್ರ ಧರಿಸದೇ ಬಾಬಾ 27 ಲಕ್ಷ ರೂ. ಮೌಲ್ಯದ ರೋಲೆಕ್ಸ್ ವಾಚ್ ಸಹ ಹೊಂದಿದ್ದು, ಸ್ವತಃ ಬಿಎಂಡಬ್ಲೂ, 3 ಫಾರ್ಚುನರ್, 2 ಆಡಿ ಹಾಗೂ 2 ಇನ್ನೋವಾ ಕಾರುಗಳನ್ನು ಹೊಂದಿದ್ದಾರೆ. ಅಲ್ಲದೇ ಯಾತ್ರೆಯ ವೇಳೆ ಜಾಗ್ವಾರ್ ಸೇರಿದಂತೆ ಹಲವು ಐಷಾರಾಮಿ ಕಾರುಗಳನ್ನು ಬಾಡಿಗೆಗೆ ಸಹ ಪಡೆಯುತ್ತಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

  • ನೋಡ ನೋಡುತ್ತಿದ್ದಂತೆಯೇ ಪ್ರವಾಹದಲ್ಲಿ ಕೊಚ್ಚಿಹೋದ ಕಾರು: ವಿಡಿಯೋ ನೋಡಿ

    ನೋಡ ನೋಡುತ್ತಿದ್ದಂತೆಯೇ ಪ್ರವಾಹದಲ್ಲಿ ಕೊಚ್ಚಿಹೋದ ಕಾರು: ವಿಡಿಯೋ ನೋಡಿ

    ಡೆಹ್ರಾಡೂನ್: ಹರಿದ್ವಾರದ ಖರ್ ಖರಿ  ಪ್ರದೇಶದಲ್ಲಿ ನೋಡ ನೋಡುತ್ತಿದ್ದಂತೆಯೇ ಪ್ರವಾಹದಲ್ಲಿ ಮಾರುತಿ ಕಾರೊಂದು ಕೊಚ್ಚಿ ಹೋಗಿದೆ.

    ಪ್ರವಾಹದಿಂದಾಗಿ ಹರಿದ್ವಾರದ ಖರ್ ಖರಿ ಪ್ರದೇಶದಲ್ಲಿ ನಿಲ್ಲಿಸಿದ್ದ ಮಾರುತಿ ಕಂಪೆನಿಯ ಕಾರೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಪ್ರವಾಹದ ಪ್ರಮಾಣ ತಗ್ಗಿದ ಬಳಿಕ ಸ್ಥಳೀಯರ ಸಹಾಯದಿಂದ ಕಾರನ್ನು ಹೊರಕ್ಕೆ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಕಾರು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

    ಉತ್ತರಾಖಂಡ್ ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಬಹುತೇಕ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಅಲ್ಲದೇ ಇಂದಿನಿಂದ ಒಂದು ವಾರಗಳ ಕಾಲ ಹರಿದ್ವಾರ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

    ಹರಿದ್ವಾರದ ಬಳಿ ಇರುವ ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ಸ್ಥಳೀಯರಲ್ಲಿ ಪ್ರವಾಹ ಭೀತಿ ಎದುರಾಗಿದೆ.

    https://www.youtube.com/watch?v=HA44Fmg-tuo