Tag: ಹರಿದ್ವಾರ

  • 250 ಮೀ ಆಳದ ಪ್ರಪಾತಕ್ಕೆ ಬಿದ್ದ ಬಸ್: 14 ಸಾವು, 18 ಜನರ ಸ್ಥಿತಿ ಗಂಭೀರ

    250 ಮೀ ಆಳದ ಪ್ರಪಾತಕ್ಕೆ ಬಿದ್ದ ಬಸ್: 14 ಸಾವು, 18 ಜನರ ಸ್ಥಿತಿ ಗಂಭೀರ

    ಡೆಹ್ರಾಡೂನ್: 205 ಮೀ ಆಳದ ಪ್ರಪಾತಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ 14 ಜನರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉತ್ತರಾಖಂಡ ರಾಜ್ಯದ ತೆಹರಿ ಜಿಲ್ಲೆಯಲ್ಲಿ ನಡೆದಿದೆ.

    ಉತ್ತರಾಖಂಡದ ಸಾರಿಗೆ ನಿಗಮಕ್ಕೆ ಸೇರಿದ್ದ ಬಸ್ ಇದಾಗಿದ್ದು, ಉತ್ತರ ಕಾಶಿಯಿಂದ ಹರಿದ್ವಾರಕ್ಕೆ ಹೊರಟಿತ್ತು. ದಾರಿ ಮಧ್ಯದಲ್ಲಿ ಜಾರ್ಜ್ ಸಮೀಪದ ಸುಲೀಧರ್ ಪ್ರದೇಶದ ಎತ್ತರ ಪರ್ವತ ಶ್ರೇಣಿಯ ಕಡಿದಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಉರುಳಿ ಬಿದ್ದಿದೆ. ಘಟನಾ ಸ್ಥಳದಲ್ಲಿಯೇ 14 ಜನರು ಮೃತಪಟ್ಟರೇ, 16 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅದರಲ್ಲಿ 6 ಮಹಿಳೆಯರ ಸ್ಥಿತಿ ಚಿಂತಾಜನಕವಾಗಿದೆ.

    ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು, ಅಧಿಕಾರಿಗಳು ಹಾಗೂ ಎಸ್‌ಡಿಆರ್‌ಎಫ್ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಗಾಯಾಳುಗಳನ್ನು ಹೃಷಿಕೇಶದ ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಅಪಘಾತದಲ್ಲಿ ಉತ್ತರಾಖಂಡ ರಾಜ್ಯ ಸರ್ಕಾರವು ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದೆ.

  • ಗಂಗಾ ನದಿಯಲ್ಲಿ ತ್ಯಾಜ್ಯ ಹಾಕಿದ್ರೆ 50 ಸಾವಿರ ದಂಡ

    ಗಂಗಾ ನದಿಯಲ್ಲಿ ತ್ಯಾಜ್ಯ ಹಾಕಿದ್ರೆ 50 ಸಾವಿರ ದಂಡ

    ನವದೆಹಲಿ: ಗಂಗಾ ನದಿ ದಂಡೆಯಿಂದ 500 ಮೀಟರ್ ದೂರದಲ್ಲಿ ಕಸ-ಕಡ್ಡಿ ಇನ್ನಿತರ ತ್ಯಾಜ್ಯ ವಸ್ತುಗಳನ್ನ ಸುರಿಯುವುದನ್ನು ನಿಷೇಧಿಸಿರುವ ರಾಷ್ಟ್ರೀಯ ಹಸಿರು ನ್ಯಾಯಧಿಕರಣ(ಎನ್‍ಜಿಟಿ) ಉಲ್ಲಂಘಿಸಿದವರಿಗೆ 50 ಸಾವಿರ ದಂಡ ವಿಧಿಸಲು ಗುರುವಾರ ಮಹತ್ವದ ಸೂಚನೆ ಸೂಚಿಸಿದೆ.

    ಗಂಗಾ ನದಿ ತಟದ ಉನ್ನಾವ್ ಮತ್ತು ಹರಿದ್ವಾರಗಳಲ್ಲಿ ನದಿಯ ದಡದಲ್ಲಿ ಕಸ ಹಾಕುವುದನ್ನು ತಡೆಯಬೇಕೆಂದು ಹಸಿರು ನ್ಯಾಯಪೀಠ ಅಲ್ಲಿನ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದೆ.

    ಗಂಗಾ ನದಿ ಸಮೀಪದಲ್ಲಿರುವ ಚರ್ಮ ಸಂಸ್ಕರಣಾ ಘಟಕಗಳನ್ನು ಆರು ವಾರದ ಒಳಗಡೆ ಸ್ಥಳಾಂತರಿಸುವಂತೆ ನ್ಯಾಯಪೀಠವು ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಅಲ್ಲದೆ, ಗಂಗಾ ನದಿ ದಂಡೆ ಅಸುಪಾಸು 100 ಮೀಟರ್ ಅಂತರ ಯಾವುದೇ ಅಭಿವೃದ್ಧಿ ಕೆಲಸ ಮಾಡುವಂತಿಲ್ಲ ಎಂದು ನ್ಯಾಯಪೀಠ ಸೂಚಿಸಿದೆ.

    ಈ ಗಂಗಾ ನದಿ ತೀರದಲ್ಲಿರುವ ಘಾಟ್ ಮತ್ತು ಪವಿತ್ರ ಸ್ಥಳಗಳಲ್ಲಿ ನದಿಗೆ ಯಾವುದೇ ರೀತಿ ಹಾನಿಯಾಗದಂತೆ ಧಾರ್ಮಿಕ ಆಚರಣೆಗಳನ್ನು ನಡೆಸಲು ಹಸಿರು ನ್ಯಾಯಾಧಿಕರಣವು ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯ ಸರ್ಕಾರಗಳಿಗೆ ಆದೇಶ ಹೊರಡಿಸಿದೆ.

  • ವಿಡಿಯೋ: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಗೋವನ್ನು ರಕ್ಷಿಸಿದ ರಕ್ಷಣಾ ತಂಡ

    ವಿಡಿಯೋ: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಗೋವನ್ನು ರಕ್ಷಿಸಿದ ರಕ್ಷಣಾ ತಂಡ

    ಡೆಹ್ರಾಡೂನ್: ಉತ್ತರಾಖಂಡ್‍ನ ವಿಷ್ಣುಪ್ರಯಾಗ ಬಳಿ ಭಾರೀ ಭೂಕುಸಿತ ಸಂಭವಿಸಿ ಸಾವಿರಾರು ಯಾತ್ರಿಕರು ಸಂಕಷ್ಟದಲ್ಲಿ ಸಿಲುಕಿದ ಬೆನ್ನಲ್ಲೇ ಅತ್ತ ಹರಿದ್ವಾರದಲ್ಲಿ ಹರಿಯುತ್ತಿರುವ ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ಗೋವೊಂದನ್ನು ರಕ್ಷಣೆ ಮಾಡಲಾಗಿದೆ.

    ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ಗೋವು ಅಪಾಯದಿಂದ ಪಾರಾಗಲು ಕಷ್ಟಪಡುತ್ತಿರೋ ದೃಶ್ಯ ಮನಕಲಕುವಂತಿದೆ. ಗೋವು ನೀರಿನಲ್ಲಿ ಒದ್ದಾಡುತ್ತಿರೋ ಮಾಹಿತಿ ತಿಳಿದ ತಕ್ಷಣವೇ ರಾಜ್ಯ ವಿಪತ್ತು ತಂಡ ಸ್ಥಳಕ್ಕಾಗಮಿಸಿ ಗೋವಿಗೆ ಹಗ್ಗ ಕಟ್ಟುವ ಮೂಲಕ ಸುರಕ್ಷಿತವಾಗಿ ದಡ ಸೇರಿಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

    ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಪ್ರಯಾಗ ಬಳಿ ಭಾರೀ ಭೂ ಕುಸಿತ ಸಂಭವಿಸಿದ್ದ ರಿಷಿಕೇಶ್ ಹಾಗೂ ಬದರೀನಾಥ್ ಸಂಪರ್ಕ ಕಲ್ಪಿಸುವ ಹೈವೇಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ ಕನ್ನಡಿಗರು ಸೇರಿದಂತೆ ಸಾವಿರಾರು ಯಾತ್ರಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿದ್ದರು. ಹಾಥಿ ಪಹಾರ್ ಪರ್ವತದಿಂದ ಭಾರಿ ಗಾತ್ರದ ಬಂಡೆಗಳು ರಸ್ತೆಗೆ ಕುಸಿದು ಬಿದ್ದಿವೆ. ಚಮೋಲಿ ಜಿಲ್ಲೆಯ ಜೋಶಿ ಮಠದಿಂದ 5 ಕಿ.ಮೀ ದೂರದಲ್ಲಿ ಈ ಅನಾಹುತ ನಡೆದಿತ್ತು. ಜೋಶಿಮಠ, ಕರ್ಣಪ್ರಯಾಗ, ಪೀಪಲ್‍ಕೋಟಿ, ಗೋವಿಂದಘಾಟ್ ಮತ್ತು ಬದರಿನಾಥದಲ್ಲಿ ಯಾತ್ರಿಕರು ಸಿಲುಕಿದ್ದರು.

    https://www.youtube.com/watch?v=a2xJzk9G3Zo&feature=youtu.be