Tag: ಹರಿಪ್ರಿಯ

  • ಸೆಪ್ಟೆಂಬರ್ 20ಕ್ಕೆ ಸತೀಶ್ ನೀನಾಸಂ, ಹರಿಪ್ರಿಯ ಜೋಡಿಯ ‘ಪೆಟ್ರೋಮ್ಯಾಕ್ಸ್’ ಟ್ರೇಲರ್ ಬಿಡುಗಡೆ

    ಸೆಪ್ಟೆಂಬರ್ 20ಕ್ಕೆ ಸತೀಶ್ ನೀನಾಸಂ, ಹರಿಪ್ರಿಯ ಜೋಡಿಯ ‘ಪೆಟ್ರೋಮ್ಯಾಕ್ಸ್’ ಟ್ರೇಲರ್ ಬಿಡುಗಡೆ

    ಬೆಂಗಳೂರು: ಸೆಪ್ಟೆಂಬರ್ 20ಕ್ಕೆ ಸತೀಶ್ ನೀನಾಸಂ, ಹರಿಪ್ರಿಯ ಜೋಡಿಯ ‘ಪೆಟ್ರೋಮ್ಯಾಕ್ಸ್’ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

    ಸತೀಶ್ ನೀನಾಸಂ, ಹರಿಪ್ರಿಯ ಜೋಡಿ ಅಭಿನಯದ ‘ಪೆಟ್ರೋಮ್ಯಾಕ್ಸ್’ ಚಿತ್ರ ಬಹಳ ನಿರೀಕ್ಷೆ ಮೂಡಿಸಿದೆ. ನೀರ್ ದೋಸೆ ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರ ಸದ್ಯದಲ್ಲೇ ಟ್ರೇಲರ್ ಮೂಲಕ ಗಮನ ಸೆಳೆಯಲು ಸಜ್ಜಾಗಿದೆ.

    ಸೆಪ್ಟೆಂಬರ್ 20ರಂದು ‘ಪೆಟ್ರೋಮ್ಯಾಕ್ಸ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. 36 ದಿನದಲ್ಲಿ ಚಿತ್ರೀಕರಣ ಮುಗಿಸಿರುವ ಪೆಟ್ರೋಮ್ಯಾಕ್ಸ್ ಚಿತ್ರದಲ್ಲಿ ಹತ್ತು ಹಲವು ವಿಶೇಷತೆಗಳಿವೆ. ಇದೇ ಮೊದಲ ಬಾರಿಗೆ ಸತೀಶ್ ನೀನಾಸಂ, ಹರಿಪ್ರಿಯ ತೆರೆ ಹಂಚಿಕೊಳ್ಳುತ್ತಿದ್ದು, ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಹಾಸ್ಯದ ಜೊತೆಗೆ ಇಂಟ್ರಸ್ಟಿಂಗ್ ಕಥೆಯೂ ಚಿತ್ರದಲ್ಲಿದ್ದೂ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಲಿದೆ ಎನ್ನುತ್ತದೆ ಚಿತ್ರತಂಡ. ಇದೀಗ ಟ್ರೇಲರ್ ಮೂಲಕ ಚಿತ್ರದ ಝಲಕ್ ತೋರಿಸಲು ಚಿತ್ರತಂಡ ಮುಂದಾಗಿದೆ.

    ನಿರ್ದೇಶನದ ಜೊತೆಗೆ ಚಿತ್ರಕ್ಕೆ ಕಥೆ ಚಿತ್ರಕಥೆ ಕೂಡ ವಿಜಯ ಪ್ರಸಾದ್ ಅವರದ್ದೇ. ವಿಜಯಲಕ್ಷೀ ಸಿಂಗ್, ಕಾರುಣ್ಯ ರಾಮ್ ಸೇರಿದಂತೆ ಚಿತ್ರದಲ್ಲಿ ಹಲವು ಕಲಾವಿದರು ಬಣ್ಣಹಚ್ಚಿದ್ದಾರೆ.

    ಸತೀಶ್ ನೀನಾಸಂ, ರಾಕೆಟ್ ಸಿನಿಮಾ ನಂತರ ಮತ್ತೊಮ್ಮೆ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದು, ಈ ಚಿತ್ರದ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ. ಸತೀಶ್ ಪಿಕ್ಚರ್ ಹೌಸ್, ಸ್ಟುಡಿಯೋ 18, ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹಭಾಗಿತ್ವದಲ್ಲಿ ಸಿನಿಮಾ ನಿರ್ಮಾಣವಾಗಿದೆ. ಅನೂಪ್ ಸಿಳೀನ್ ಸಂಗೀತ ನಿರ್ದೇಶನ, ನಿರಂಜನ್ ಬಾಬು ಕ್ಯಾಮೆರಾ ವರ್ಕ್ ‘ಪೆಟ್ರೋಮ್ಯಾಕ್ಸ್’ ಚಿತ್ರಕ್ಕಿದೆ.

  • ಚಿರು ಯಾವತ್ತೂ ಚಿರಂಜೀವಿನೇ, ಮೇಘನಾನ ನೋಡಿ ಸಂಕಟವಾಯ್ತು: ಹರಿಪ್ರಿಯ

    ಚಿರು ಯಾವತ್ತೂ ಚಿರಂಜೀವಿನೇ, ಮೇಘನಾನ ನೋಡಿ ಸಂಕಟವಾಯ್ತು: ಹರಿಪ್ರಿಯ

    ಬೆಂಗಳೂರು: ನಟ ಚಿರು ಯಾವತ್ತೂ ಚಿರಂಜೀವಿನೇ ಎಂದು ನಟಿ ಹರಿಪ್ರಿಯ ಅವರು ಚಿರು ಸಾವಿನ ಬಗ್ಗೆ ತಮ್ಮ ಬ್ಲಾಗ್‍ನಲ್ಲಿ ಬರೆದುಕೊಂಡಿದ್ದಾರೆ.

    ಚಿರು ಅವರ ಜೊತೆ ಕಳೆದ ಸಮಯ ಮತ್ತು ಅವರ ಸಾವಿನ ಸುದ್ದಿಯನ್ನು ಕೇಳಿದಾಗ ಆದ ಆಘಾತವನ್ನು ಹರಿಪ್ರಿಯ ಇಲಿಹಂಚಿಕೊಂಡಿದ್ದಾರೆ. ಜೊತೆಗೆ ಚಿರು ಅವರನ್ನು ನೋಡಲು ಹೋದಾಗ ಅವರಿಗಾದ ನೋವು, ಮೇಘನಾ, ಅರ್ಜುನ್ ಸರ್ಜಾ ಮತ್ತು ಧ್ರುವ ಅವರ ಬಗ್ಗೆಯೂ ಭಾವನಾತ್ಮಕವಾದ ಸಾಲುಗಳನ್ನು ಬರೆದುಕೊಂಡಿದ್ದಾರೆ.

    ಭಾನುವಾರ ನನ್ನ ಆಪ್ತರಿಂದ ಒಂದು ಮೆಸೇಜ್ ಬಂದಿತ್ತು. ನಾನ್ ಅದನ್ನು ನಾಲ್ಕೈದು ಸಲ ಓದಿದೆ. ಯಾಕೆಂದರೆ ಆ ಮೆಸೇಜ್‍ನ ನಂಗೆ ನಂಬುವುದಕ್ಕೆ ಸಾಧ್ಯನೇ ಆಗಲಿಲ್ಲ. ನಾನೇ ಏನಾದರೂ ತಪ್ಪು ಓದುತ್ತಿದ್ದೇನಾ ಎಂದು ಮತ್ತೆ ಮತ್ತೆ ಓದಿಕೊಂಡೆ. ಅಷ್ಟರಲ್ಲಿ ಬೇರೆ ಬೇರೆ ಕಡೆಯಿಂದಲೂ ಅದೇ ಮೆಸೇಜ್ ಬರುತ್ತಿತ್ತು. ಟಿವಿಯಲ್ಲೂ ಅದೇ ಬ್ರೇಕಿಂಗ್ ನ್ಯೂಸ್. `ಚಿರು ಇನ್ನಿಲ್ಲ’ ಅನ್ನೋ ಸುದ್ದಿ ಇನ್ನೂ ಪೂರ್ತಿಯಾಗಿ ನಂಬುವುದಕ್ಕೆ ಆಗಲ್ಲ ಎಂದು ಹರಿಪ್ರಿಯ ಹೇಳಿದ್ದಾರೆ.

    ಚಿರು ಮಾತ್ರ ಅಲ್ಲ, ಅವರ ಫ್ಯಾಮಿಲಿ ಎಲ್ಲರ ಜೊತೆ ಆ್ಯಕ್ಟ್ ಮಾಡಿದ್ದೀನಿ. ನಾನು, ಚಿರು `ಸಂಹಾರ’ ಸಿನಿಮಾದಲ್ಲಿ ಆ್ಯಕ್ಟ್ ಮಾಡಿದ್ದೆವು. ಅಲ್ಲಿ ಹೀರೋಯಿನ್ ವಿಲನ್ ರೋಲ್. ಹಾಗಾಗಿ ನನಗೂ ಚಿರುಗೂ ಒಟ್ಟಿಗೆ ಇರೋ ಸೀನ್ಸ್ ಜಾಸ್ತಿ ಇರಲಿಲ್ಲ. ಆದರೆ ಸಾಂಗ್ ಶೂಟ್‍ನಲ್ಲಿ ನಾವಿಬ್ಬರೂ ತುಂಬಾ ಮಾತಾಡಿದ್ದು, ನಕ್ಕಿದ್ದು ಇದೆ. ಅದರಲ್ಲಿ ಕೊನೆಗೆ ಒಂದು ಫೈಟ್ ಇತ್ತು. ಆಗ ಒಂದು ಪಲ್ಟಿ ಹೊಡೆಯುವಾಗ ಆಯತಪ್ಪಿ ಜೋರಾಗಿ ನೆಲಕ್ಕೆ ಬಿದ್ದು `ಅಮ್ಮಾ’ ಅಂತ ಕಿರುಚಿದ್ದೆ. ಆವಾಗಿಂದ ಶೂಟಿಂಗ್ ಮುಗಿಯುವರೆಗೂ ನಾನು ಕಿರುಚಿದ ಟೋನ್‍ನಲ್ಲೇ `ಅಮ್ಮಾ’ ಎಂದು ರೇಗಿಸುತ್ತಿದ್ದರು ಚಿರು ಎಂದು ಹರಿಪ್ರಿಯ ಬರೆದುಕೊಂಡಿದ್ದಾರೆ.

    ಚಿರು ಇಲ್ಲ ಅಂದ ತಕ್ಷಣ ಶಾಕ್ ಆಗಿತ್ತು. ಭಾನುವಾರ ಟಿವಿಲಿ ನೋಡ್ತಾ ಮನೆಯಲ್ಲೇ ತುಂಬಾ ಅತ್ತಿದ್ದೆ. ಚಿರುನ ಆ ರೀತಿಯಲ್ಲಿ ಹೇಗೆ ನೋಡೋದು ಎಂದು ಹೋಗುವುದಕ್ಕೂ ಹಿಂಜರಿದೆ. ಸೋಮವಾರ ಕೊನೆದಾಗಿ ಒಂದು ಬಾರಿ ನೋಡಬೇಕು ಎಂದು ತಕ್ಷಣ ಹೊರಟೆ. ಆದರೆ ಅಲ್ಲಿ ಮೇಘನಾನ ಕಂಡು ನನಗೆ ಇನ್ನೂ ಜಾಸ್ತಿ ದುಃಖ ಆಯ್ತು. ಏನ್ ಸಮಾಧಾನ ಹೇಳುವುದಕ್ಕೂ ಮಾತೇ ಬರಲಿಲ್ಲ.

    ಅಲ್ಲಿ ಯಾರೋ ಹೇಳುತ್ತಿದ್ದರು. ಮೇಘನಾ ಗರ್ಭಿಣಿ ಎಂಬ ವಿಷಯಾನ ಚಿರು ಸ್ವಲ್ಪದಿನದಲ್ಲೇ ಪಬ್ಲಿಕ್ ಮಾಡುತ್ತಿದ್ದರು ಎಂದು. ಆದರೆ ಅಷ್ಟರಲ್ಲಿ ಏನೇನಾಯ್ತಲ್ಲ? ಲೈಫ್ ಎಷ್ಟು ಅನ್‍ಪ್ರೆಡಿಕ್ಟೇಬಲ್ ಅಲ್ವಾ? ಒಬ್ಬರ ಸ್ಥಾನವನ್ನು ಇನ್ನೊಬ್ಬರು ಯಾವತ್ತೂ ತುಂಬಲು ಆಗಲ್ಲ ಎಂದು ಹರಿಪ್ರಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಅರ್ಜುನ್ ಸರ್, ಕಾಫೀನ್ ಬಾಕ್ಸ್ ಗ್ಲಾಸ್‍ಗೆ ತಲೆ ಕೊಟ್ಟು, `ಚಿರು ಮಾಮ ಬಂದಿದ್ದೀನಿ, ಎದ್ದೇಳೋ’ ಅಂದಿದನ್ನು ನೋಡಿದಾಗ ತುಂಬಾ ಸಂಕಟ ಆಗಿತ್ತು. ಬೆಳೆದು ನಿಂತಿರೋ ಮಗನನ್ನು ಕಳೆದುಕೊಂಡ ಸಂಕಟದಲ್ಲಿರೋ ಅಪ್ಪ-ಅಮ್ಮಂಗೆ ಯಾವ ಸಾಂತ್ವನ ಸಮಾಧಾನ ಹೇಳೋಕೆ ಸಾಧ್ಯ? ಚಿಕ್ಕಂದಿನಿಂದ ಒಟ್ಟಿಗೇ ಆಡಿ ಬೆಳೆದ ಧ್ರುವಂಗೆ ಆಗಿರೋ ಕಷ್ಟ ಯಾರಾದರೂ ಊಹಿಸೋಕೆ ಸಾಧ್ಯನಾ? ಈ ಲಾಕ್‍ಡೌನ್ ಟೈಮಲ್ಲಿ ಎಲ್ಲ ಮನೇಲೇ ಇದ್ದು ಎಂದಿಗಿಂತ ಜಾಸ್ತಿ ಸಮಯ ಒಟ್ಟಿಗೇ ಕಳೆದಿರುತ್ತಾರೆ. ಆದರೆ ಈ ಸಮಯದಲ್ಲೇ ಹೀಗಾದರೆ ಹೇಗೆ ಎಂದು ಹರಿಪ್ರಿಯ ಪ್ರಶ್ನೆ ಮಾಡಿದ್ದಾರೆ.

    ನಾನಲ್ಲ ಯಾರೇ ಆದರೂ ಸಾಂತ್ವನ ಹೇಳುವುದು ಬಿಟ್ಟು ಬೇರೇನೂ ಮಾಡೋಕಾಗಲ್ಲ. ಮೇಘನಾಗೆ ಅವರ ಅಮ್ಮ-ಅಪ್ಪಂಗೆ, ಅರ್ಜುನ್ ಸರ್‍ಗೆ, ಧ್ರುವಂಗೆ, ಅವರೆಲ್ಲರಿಗೂ ದುಃಖ ಸಹಿಸಿಕೊಳ್ಳುವ ಶಕ್ತಿ ಕೊಡು ದೇವರೇ ಅಂತ ಪ್ರಾರ್ಥನೆ ಮಾಡೋಣ. ಹೋದವರು ಹೋದಾಗ ಆಗೋ ನೋವಿಗಿಂತ ಆಮೇಲೆ ಅವರ ನೆನಪಾಗಿ ಆಗೋ ನೋವೇ ಅದೇ ದೊಡ್ಡ ಯಾತನೆ. ಅದನ್ನು ಸಹಿಸಿಕೊಳ್ಳುವ ಶಕ್ತಿ ಚಿರು ಫ್ಯಾಮಿಲಿಗೆ ದೇವರು ಕೊಡಲಿ ಎಂದು ಹರಿಪ್ರಿಯ ಬೇಡಿಕೊಂಡಿದ್ದಾರೆ.

    ಚಿರು ಸಿನಿಮಾಗಳು ರಿಲೀಸ್ ಆಗೋದಿವೆ. ಇನ್ನೂ ತುಂಬಾ ಸಿನಿಮಾ ಮಾಡೋದಿತ್ತು. ಆದರೆ ಚಿರು ಇಲ್ಲ ಅನ್ನುವುದನ್ನು ನನಗೆ ಇನ್ನೂ ನಂಬುವುದಕ್ಕೇ ಆಗುತ್ತಿಲ್ಲ. ನೋಡಲು, ಮಾತನಾಡಲು, ರೇಗಿಸಲು ಚಿರು ಇನ್ನು ಕಾಣಿಸದೇ ಇರಬಹುದು. ಆದರೆ ಎಲ್ಲರ ಮನಸ್ಸಿಲ್ಲಿ ಚಿರು ಯಾವತ್ತೂ ಚಿರಂಜೀವಿನೇ ಎಂದು ಹರಿಪ್ರಿಯ ತಿಳಿಸಿದ್ದಾರೆ.

  • ಸಸ್ಪೆನ್ಸ್-ಥ್ರಿಲ್ಲರ್ ಕಥೆಯಲ್ಲಿ ಟಾಕಿಂಗ್ ಸ್ಟಾರ್? – ಮತ್ತೆ ಒಂದಾಯ್ತು ‘ಎಲ್ಲಿದ್ದೆ ಇಲ್ಲಿ ತನಕ’ ಜೋಡಿ?

    ಸಸ್ಪೆನ್ಸ್-ಥ್ರಿಲ್ಲರ್ ಕಥೆಯಲ್ಲಿ ಟಾಕಿಂಗ್ ಸ್ಟಾರ್? – ಮತ್ತೆ ಒಂದಾಯ್ತು ‘ಎಲ್ಲಿದ್ದೆ ಇಲ್ಲಿ ತನಕ’ ಜೋಡಿ?

    ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಫ್ಯಾನ್ಸ್ ಗಳಿಗೊಂದು ಖುಷಿ ವಿಷ್ಯ ಇದೆ. ಹೌದು ಸಖತ್ ಮಾತು, ಮೋಜು ಮಸ್ತಿ ಮಾಡ್ತಾ ಅಭಿಮಾನಿಗಳ ಹಾರ್ಟ್ ಫೇವರೀಟ್ ಟಾಕಿಂಗ್ ಆಗಿದ್ದ ಸೃಜಾ ‘ಎಲ್ಲಿದ್ದೆ ಇಲ್ಲಿ ತನಕ’ ಅಂತ ಸ್ಯಾಂಡಲ್‍ವುಡ್ ನಾಯಕನಾಗಿ ಹರಿಪ್ರಿಯ ಜೊತೆ ಡ್ಯುಯೇಟ್ ಮಾಡಿದ್ದರು. ಚಿತ್ರ ಇಷ್ಟ ಪಟ್ಟಿದ್ದ ಫ್ಯಾನ್ಸ್ ಮತ್ಯಾವ ಸಿನೆಮಾದಲ್ಲಿ ಸೃಜಾ ಬಿಗ್ ಸ್ಕ್ರೀನ್ ನಲ್ಲಿ ಕಾಣ್ತಾರೆ ಅನ್ನೋ ಕ್ಯೂರಿಯಾಸಿಟಿಯಲ್ಲಿದ್ದರು. ಆದರೆ ಆ ಪ್ರಶ್ನೆಗೀಗ ಉತ್ತರ ಸಿಕ್ಕಿದೆ.

    ‘ಎಲ್ಲಿದ್ದೆ ಇಲ್ಲಿ ತನಕ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ತೇಜಸ್ವಿಯವರೇ ಸೃಜಾರ ಮತ್ತೊಂದು ಸಿನೆಮಾಗೂ ನಿರ್ದೇಶನ ಮಾಡ್ತಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಕೆಲಸ ಬಹುತೇಕ ಮುಗಿದಿದ್ದು, ನಾಯಕಿ ಮತ್ತು ಸಂಗೀತ ನಿರ್ದೇಶಕರ ಹುಡುಕಾಟದಲ್ಲಿದೆಯಂತೆ ಚಿತ್ರತಂಡ. ಕೊಂಚ ಡಿಫ್ರೆಂಟ್ ಅನ್ನಿಸೋ ಎಳೆಯ ಕಥಾಹಂದರವಿರೋ ಈ ಚಿತ್ರದಲ್ಲಿ ಸಸ್ಪೇನ್ಸ್ ಥ್ರಿಲ್ಲರ್ ಅಂಶಗಳಿದ್ದು, ಕಥೆಯೇ ಪ್ರಧಾನವಂತೆ. ಜೊತೆಗೆ ಇನ್ನೂ ಶೀರ್ಷಿಕೆ ಫೈನಲ್ ಆಗದ ಈ ಚಿತ್ರಕ್ಕೆ ವೇಣು ಸಿನಿಮಾಟೋಗ್ರಾಫರ್ ಇರಲಿದೆ. ಪ್ರಸ್ತುತ ಸಮಾಜದಲ್ಲಿ ಆತಂಕಕ್ಕೆ ಕಾರಣವಾಗ್ತಿರೋ, ಅಪಹರಣ, ಅತ್ಯಾಚಾರಗಳ ವಿಷಯದ ಎಳೆ ಹೊತ್ತಿರೋ ಚಿತ್ರದ ಶೂಟಿಂಗ್ ಕೆಲಸ ಫೆಬ್ರವರಿಯಿಂದ ಶುರುವಾಗಲಿದ್ದು, ಮತ್ತೆ ಒಂದಾದ ಸೃಜನ್-ತೇಜಸ್ವಿ ಜೋಡಿ ಮೇಲೆ ಕುತೂಹಲ ಸಾಮಾನ್ಯವಾಗೇ ಹೆಚ್ಚಾಗಿದೆ.