Tag: ಹರಿವು

  • ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ : ರಾಷ್ಟ್ರ ಪ್ರಶಸ್ತಿ ಪಡೆದ 4 ಚಿತ್ರಗಳಲ್ಲಿ ವಿಜಯ್ ನಟನೆ

    ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ : ರಾಷ್ಟ್ರ ಪ್ರಶಸ್ತಿ ಪಡೆದ 4 ಚಿತ್ರಗಳಲ್ಲಿ ವಿಜಯ್ ನಟನೆ

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಸಂಚಾರಿ ವಿಜಯ್ ನಟನೆಯ ಕೊನೆಯ ಸಿನಿಮಾ ತಲೆದಂಡ ಚಿತ್ರಕ್ಕೆ ಅತ್ಯುತ್ತಮ ಪರಿಸರ ಕಾಳಜಿ ಸಿನಿಮಾ ರಾಷ್ಟ್ರೀಯ ಗರಿ ದೊರೆತಿದೆ. ಕೃಪಾಕರ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾದಲ್ಲಿ ವಿಜಯ್ ವಿಶೇಷ ಚೇತನ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ನಟನೆಗಾಗಿ ಮತ್ತೊಮ್ಮೆ ವಿಜಯ್ ನ್ಯಾಷಿನಲ್ ಅವಾರ್ಡ್ ಪಡೆಯುತ್ತಾರೆ ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದರೆ, ಸಿನಿಮಾಗೆ ಈ ಬಾರಿ ಪ್ರಶಸ್ತಿ ಸಂದಿದೆ.

    ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದಿರುವ ವಿಜಯ್, ಹಲವು ವರ್ಷಗಳ ನಂತರ ಕನ್ನಡಕ್ಕೆ ಇಂಥದ್ದೊಂದು ಗೌರವ ಸಿಗಲು ಕಾರಣರಾಗಿದ್ದರು. ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದ ‘ನಾನು ಅವನಲ್ಲ ಅವಳು’ ಸಿನಿಮಾಗಾಗಿ ವಿಜಯ್ ಅವರಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಬಂದಿತ್ತು. ಅಲ್ಲದೇ, ವಿಜಯ್ ನಟನೆಯ ನಾಲ್ಕು ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಬಂದಿದ್ದು, ಮೂರು ಸಿನಿಮಾಗಳಿಗೆ ಮತ್ತು ಒಂದು ಚಿತ್ರಕ್ಕಾಗಿ ವಿಜಯ್ ವೈಯಕ್ತಿಕ ಪ್ರಶಸ್ತಿ ಪಡೆದಿದ್ದಾರೆ. ಓದಿ: Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದ ವರ್ಷವೇ, ವಿಜಯ್ ನಟನೆಯ ಮಂಸೋರೆ ನಿರ್ದೇಶನದ ‘ಹರಿವು’ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿ ಸಿನಿಮಾ ರಾಷ್ಟ್ರ ಪ್ರಶಸ್ತಿ ಸಂದಿತ್ತು. ಅಲ್ಲದೇ, 2018ರಲ್ಲಿ ಮಂಸೋರೆ ನಿರ್ದೇಶನದ ‘ನಾತಿಚರಾಮಿ’ ಸಿನಿಮಾಗೂ ಅತ್ಯುತ್ತಮ ಪ್ರಾದೇಶಿ ಸಿನಿಮಾ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಈ ಸಿನಿಮಾದಲ್ಲೂ ವಿಜಯ್ ನಟಿಸಿದ್ದಾರೆ. ಈ ಬಾರಿ ಕೃಪಾಕರ ನಿರ್ದೇಶನದಲ್ಲಿ ಮೂಡಿ ಬಂದಿರುವ ತಲೆದಂಡ ಸಿನಿಮಾಗೆ ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿಯಾಗಿದೆ. ಈ ಸಂದರ್ಭದಲ್ಲಿ ವಿಜಯ್ ಇರಬೇಕಿತ್ತು ಎನ್ನುವ ಬೇಡಿಕೆ ಹೆ‍ಚ್ಚಿದೆ.

    Live Tv
    [brid partner=56869869 player=32851 video=960834 autoplay=true]

  • ನಾನು ‘ಸಂಚಾರಿ ವಿಜಯ್’ ಹಾಗೂ ರಾಷ್ಟ್ರೀಯ ಹೆದ್ದಾರಿ 4 : ನಿರ್ದೇಶಕ ಮಂಸೋರೆ ಮನದಾಳ

    ನಾನು ‘ಸಂಚಾರಿ ವಿಜಯ್’ ಹಾಗೂ ರಾಷ್ಟ್ರೀಯ ಹೆದ್ದಾರಿ 4 : ನಿರ್ದೇಶಕ ಮಂಸೋರೆ ಮನದಾಳ

    ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ದೈಹಿಕವಾಗಿ ಅಗಲಿ ಇಂದಿಗೆ ಒಂದು ವರ್ಷ. ವಿಜಯ್ ಅವರ ಆತ್ಮೀಯ ಸ್ನೇಹಿತರು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರೂ ಆದ ಮಂಸೋರೆ ಅವರು, ವಿಜಯ್ ಜೊತೆಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ. ಅಲ್ಲದೇ, ಕೊನೆ ದಿನವನ್ನೂ ನೆನಪಿಸಿಕೊಂಡಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ 4, ನನ್ನ ಜೀವನದಲ್ಲಿ ಬಹು ಮುಖ್ಯವಾದ ಅಧ್ಯಾಯ. ಬೆಂಗಳೂರು ಚೆನ್ನೈ ನಗರವನ್ನು ಸಂಪರ್ಕಿಸುವ ಇಂದಿನ ರಾಷ್ಟ್ರೀಯ ಹೆದ್ದಾರಿ 75 ಚತುಷ್ಪಥ ರಸ್ತೆ ಆಗುವ ಮೊದಲು ರಾಷ್ಟ್ರೀಯ ಹೆದ್ದಾರಿ 4 ಎಂದಿತ್ತು.  ಅದು ನಮ್ಮೂರನ್ನು ಹಾದು ಹೋಗುವ ಹೆದ್ದಾರಿ ಆದ್ದರಿಂದ ಸಹಜವಾಗಿಯೇ ಅದರೊಂದಿಗೆ ಒಂದು ನಾಸ್ಟಾಲಜಿ ಬೆಸೆದುಕೊಂಡಿರುತ್ತದೆ. ಆದರೆ ನನಗೆ ರಾಷ್ಟ್ರೀಯ ಹೆದ್ದಾರಿ 4 ಹೆಚ್ಚು ಮುಖ್ಯವಾದದ್ದು, ಹರಿವು ಸಿನೆಮಾದ ಕಾರಣಕ್ಕೆ.

    ಹರಿವು-ಮೊದಲ ನಿರ್ದೇಶನದ ಸಿನೆಮಾ, ಮೊದಲ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ತಂದುಕೊಟ್ಟ ಸಿನೆಮಾ, ನಾನಾ ಕೆಲಸಗಳನ್ನು ಮಾಡಿಕೊಂಡಿದ್ದ ನನಗೆ, ನಿರ್ದೇಶಕನಾಗಿ ಒಂದು ಗಟ್ಟಿಯಾದ ನೆಲೆ ಕೊಟ್ಟ ಸಿನೆಮಾ, ಅದೆಲ್ಲದಕ್ಕಿಂತ ಹೆಚ್ಚಾಗಿ ‘ಸಂಚಾರಿ ವಿಜಯ್’ ಎಂಬ ಆಪ್ತ ಗೆಳೆಯನನ್ನು ಕೊಟ್ಟ ಸಿನೆಮಾ. ಮುಖ್ಯ ಪಾತ್ರ ನಾಯಕನಾಗಿ ವಿಜಯ್ ಸರ್ ಮೊದಲ ಸಿನೆಮಾ ಹರಿವು, ಅದರ ಮೊದಲ ಶಾಟ್ 2012ರಲ್ಲಿ ಚಿತ್ರೀಕರಣವಾದದ್ದು ಇದೇ ರಾಷ್ಟ್ರೀಯ ಹೆದ್ದಾರಿ 4, ನಾನು ನಿರ್ದೇಶಕನಾಗಿ ಮೊದಲ ಬಾರಿಗೆ Action-Cut ಹೇಳಿದ್ದು ಇದೇ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ. ಇದನ್ನೂ ಓದಿ: ಸ್ವಯಂ ಪ್ರೇರಿತನಾಗಿ ಡ್ರಗ್ಸ್ ಸೇವಿಸಿಲ್ಲ, ಬೆಂಗಳೂರು ಪೊಲೀಸ್ ಒಳ್ಳೆಯವರು : ಬಾಲಿವುಡ್ ನಟ ಸಿದ್ಧಾಂತ್ ಕಪೂರ್

    ಆ ಸಿನೆಮಾ ಚಿತ್ರೀಕರಣವಾದದ್ದು ಇದೇ ರಾಷ್ಟ್ರೀಯ ಹೆದ್ದಾರಿ 4ರಲ್ಲಿ. ‘ಹರಿವು’ ಸಿನೆಮಾದ ಮುಖ್ಯ ಕತೆ ಅನಾವರಣಗೊಳ್ಳುವುದು ಇದೇ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ. 2012ರಲ್ಲಿ ಮೊದಲ ಬಾರಿಗೆ ಚಿತ್ರೀಕರಣ ಆರಂಭಿಸಿದಾಗ ಮಾಡಿಕೊಂಡ ಅವಾಂತರಗಳು, ಕಲಿಸಿದ ಪಾಠಗಳು, ನಿರ್ದೇಶನದ ಕಡೆಗೆ ಇರಬೇಕಾದ ಬದ್ಧತೆಗಳನ್ನು ಕಲಿಸಿಕೊಟ್ಟದ್ದು ಇದೇ ರಾಷ್ಟ್ರೀಯ ಹೆದ್ದಾರಿ 4. ಈ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ನಾನು ‘ಸಂಚಾರಿ ವಿಜಯ್’ ಸರ್ ಸಾಕಷ್ಟು ಬಾರಿ ಜೊತೆಯಾಗಿ ಪ್ರಯಾಣ ಮಾಡಿದ್ದೇವೆ.  ಆದರೆ ಈ ರಾಷ್ಟ್ರೀಯ ಹೆದ್ದಾರಿ 4 ನನ್ನ ಪಾಲಿಗೆ ಶಾಶ್ವತವಾದ ದುಃಖದ ನೆನಪೊಂದನ್ನು ಉಳಿಸಿ ಬಿಡುತ್ತದೆ ಎಂದು ಯಾವತ್ತೂ ಯೋಚಿಸಿರಲಿಲ್ಲಾ.

    ಎಷ್ಟೊ ಕನಸುಗಳು, ನಗು, ಜಗಳ, ನೆನಪುಗಳ ಮೂಲಕ ಸಂಚರಿಸಿದ್ದ ಈ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ, ನನ್ನ ಗೆಳೆಯನ ಜೊತೆ ಅಂತಿಮ ಪ್ರಯಾಣ ಮಾಡುವ ದಿನ ಬಂದಿದ್ದು ನನ್ನ ಪಾಲಿನ ಬಹು ದೊಡ್ಡ ದುರಂತ. ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ, ಈ ರಾಷ್ಟ್ರೀಯ ಹೆದ್ದಾರಿ 4ರ ಮೂಲಕ ಆಪ್ತ ಗೆಳೆಯನನ್ನು Ambulance ಅಲ್ಲಿ ಮಲಗಿಸಿಕೊಂಡು, ಅವರ ಆಪ್ತವಾದ ಸಾಕಷ್ಟು ಕನಸುಗಳನ್ನು ಕಂಡಿದ್ದ ಅವರ ದುಡಿಮೆಯ ಗಳಿಕೆಯಿಂದ ಕೊಂಡುಕೊಂಡಿದ್ದ ಅವರ ತೋಟಕ್ಕೆ ಕರೆದುಕೊಂಡು ಹೋಗಿ ಬಿಟ್ಟು ಬರುವಂತ ದಿನ ಬರುತ್ತದೆ ಎಂದು ಯಾವತ್ತೂ ಊಹಿಸಿರಲಿಲ್ಲಾ.. ಅಂತ ದುರಂತದ ದಿನಕ್ಕೆ ಇಂದಿಗೆ ಒಂದು ವರ್ಷ.

    ವಿಜಯ್ ಸರ್ ನನಗೆ ಪರಿಚಯ ಆಗಿದ್ದು, ಮೊದಲ ಬಾರಿ ಮಾತನಾಡಿದ್ದು 13-06-2012  ಅವರು ನನ್ನೊಂದಿಗೆ ಮಾತು ನಿಲ್ಲಿಸಿ ಮೌನವಾಗಿದ್ದು 13-06-2021 . ಅಪ್ಪನ ಜೊತೆಯ ನೆನಪಿನ ಕೊನೆಯ ಪಯಣವೂ ಇದೇ ರೀತಿ ಆಂಬ್ಯುಲೆನ್ಸ್ ನಲ್ಲೇ ಸಾಗಿತ್ತು, ಅಷ್ಟೇ ಆಪ್ತನಾದ ಗೆಳೆಯನ ಜೊತೆಯ ಕೊನೆಯ ಪಯಣವೂ ಆಂಬ್ಯುಲೆನ್ಸಲ್ಲೇ ಸಾಗುವಂತಾಯಿತು. ಅದು ನಮ್ಮಿಬ್ಬರ ಪಾಲಿನ, ಜೀವನದಲ್ಲಿ ಮುಖ್ಯವಾದ ಹೆದ್ದಾರಿಯಲ್ಲಿ.  ಆ ಹೆದ್ದಾರಿಯಲ್ಲಿ ಒಂದೊಂದು ಹಂತದಲ್ಲೂ ಒಂದೊಂದು ನೆನಪುಗಳಿವೆ, ಪ್ರತೀ ಬಾರಿ ಹೋದಾಗಲೂ ಆ ನೆನಪುಗಳು ಕಾಡುತ್ತಲೇ ಇರುತ್ತವೆ, ಮಿಸ್ ಯೂ ‘ಸಂಚಾರಿ ವಿಜಯ್’ ಸರ್.

  • ಮತ್ತೆ ನೈಜಘಟನೆಯ ಬೆನ್ನುಹತ್ತಿದ ನಿರ್ದೇಶಕ ಮಂಸೋರೆ

    ಮತ್ತೆ ನೈಜಘಟನೆಯ ಬೆನ್ನುಹತ್ತಿದ ನಿರ್ದೇಶಕ ಮಂಸೋರೆ

    ರಡು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಮಂಸೋರೆ, ಇದೀಗ ಮತ್ತೊಂದು ಸಿನಿಮಾಗೆ ಆಕ್ಸನ್ ಕಟ್ ಹೇಳುತ್ತಿದ್ದು, ಈ ಸಿನಿಮಾ ಇಂದಿನಿಂದ ಚಿತ್ರೀಕರಣ ಆರಂಭಿಸಿದೆ. ಇವರ ಚೊಚ್ಚಲು ಸಿನಿಮಾ ‘ಹರಿವು’ ಕೂಡ ನೈಜಘಟನೆಯನ್ನೇ ಆಧರಿಸಿತ್ತು. ಇದೀಗ ನಾಲ್ಕನೇ ಚಿತ್ರಕ್ಕೂ ಅವರು ನಡೆದ ಘಟನೆಯನ್ನೇ ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ಹರಿವು ಸಿನಿಮಾದಲ್ಲಿ ಮಗನನ್ನು ಕಳೆದುಕೊಂಡ ಅಸಹಾಯಕ ತಂದೆಯೊಬ್ಬರು ಬೆಂಗಳೂರಿನಿಂದ ಉತ್ತರ ಕರ್ನಾಟಕದ ಹಳ್ಳಿಗೆ ತಮ್ಮ ಮಗನ ಶವವನ್ನು ಪೆಟ್ಟಿಗೆಯಲ್ಲಿ  ತಗೆದುಕೊಂಡು ಹೋದ ಅಮಾನವೀಯ ಘಟನೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಬಾರಿ ಅವರು ಘಟನೆಯ ಬಗ್ಗೆ ಹೇಳಿಕೊಳ್ಳದೇ ‘ಈ ನೆಲದ ಮಣ್ಣಿನ ಜನರ ಆರ್ದ್ರ ಬದುಕಿನ ನೈಜ ಘಟನೆಯೊಂದನ್ನು ತೆರೆಯ ಮೇಲೆ ತರುವ ಪ್ರಯತ್ನ ಮಾಡುತ್ತಿದ್ದೇನೆ’ ಎಂದಷ್ಟೇ ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ಸಿನಿಮಾದ ಶೀರ್ಷಿಕೆಯೇ ಆಕರ್ಷಕವಾಗಿದೆ ಮತ್ತು ಕುತೂಹಲ ಮೂಡಿಸುತ್ತದೆ. ತಮ್ಮ ನಾಲ್ಕನೇ ಸಿನಿಮಾಗೆ ಅವರು ’19, 20, 21’ ಎಂದು ಹೆಸರಿಟ್ಟಿದ್ದಾರೆ. ಈ ಟೈಟಲ್ ನಾನಾ ಅರ್ಥಗಳನ್ನು ಹೇಳುತ್ತಿದೆ. ಈ ಮೂರು ತಾರೀಖಿನ ದಿನಗಳಲ್ಲಿ ನಡೆದ ಘಟನೆಯಾ? ಅಥವಾ ಆರ್ಟಿಕಲ್ 19, 20, 21ರ ಬಗೆಗಿನ ಕಥಾನಕವಾ ಎನ್ನುವುದು ಸದ್ಯ ಚರ್ಚೆಯ ವಿಷಯವಾಗಿದೆ. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

    ಎರಡ್ಮೂರು ದಿನಗಳ ಹಿಂದೆಯೇ ಇಡೀ ಟೀಮ್ ಕಟ್ಟಿಕೊಂಡು ಮಲೆನಾಡಿನ ಸೆರೆಗಿನಲ್ಲಿ ಬೀಡುಬಿಟ್ಟಿದ್ದಾರೆ ಮಂಸೋರೆ. ಉತ್ತರ ಕರ್ನಾಟಕದ ಕೆಲ ಕಡೆ ಮತ್ತು ಕರಾವಳಿ ಭಾಗದಲ್ಲೂ ಒಂದಷ್ಟು ದಿನಗಳ ಕಾಲ ಚಿತ್ರೀಕರಣ ನಡೆಸಲಿದೆ ತಂಡ. ಎಂದಿನಂತೆ ಬಹುತೇಕ ಆಕ್ಟ್ 1978 ಸಿನಿಮಾದಲ್ಲಿ ಕೆಲಸ ಮಾಡಿದವರೇ ಈ ಟೀಮ್ ನಲ್ಲೂ ಮುಂದುವರೆದಿದ್ದಾರೆ. ಸತ್ಯಾ ಹೆಗಡೆ ಅವರ ಸಿನಿಮಾಟೋಗ್ರಫಿ, ದೇವರಾಜ್ ಅವರ ನಿರ್ಮಾಣ ಚಿತ್ರಕ್ಕಿದೆ.

  • ಆಕ್ಟ್-1978: ಟ್ರೇಲರ್ ಮೂಲಕ ಕೌತುಕದ ಬಾಂಬಿಟ್ಟರು ಮಂಸೋರೆ!

    ಆಕ್ಟ್-1978: ಟ್ರೇಲರ್ ಮೂಲಕ ಕೌತುಕದ ಬಾಂಬಿಟ್ಟರು ಮಂಸೋರೆ!

    – ಕೊರೊನಾ ಕಂಟಕವನ್ನೂ ಛಿದ್ರಗೊಳಿಸೋ ಲಕ್ಷಣ!

    ಒಂದೊಳ್ಳೆ ಸಿನಿಮಾ ಎಂಟ್ರಿ ಕೊಟ್ರೆ ತಿಂಗಳಿಂದೀಚೆಗೆ ಕವುಚಿಕೊಂಡಿರೋ ಕೊರೊನಾ ಗ್ರಹಣ ತಂತಾನೇ ಕಳಚಿಕೊಳ್ಳುತ್ತೆ. ಇದು ಸಿನಿಮಾ ಪ್ರೇಮಿಗಳ ಒಕ್ಕೊರಲಿನ ಅಭಿಪ್ರಾಯ. ಅದರಲ್ಲಿಯೇ ಮತ್ತೆ ಸಿನಿಮಾ ಮಂದಿರಗಳು ಗಿಜಿಗುಡುತ್ತಾ ಕಳೆಗಟ್ಟಿಕೊಳ್ಳಲೆಂಬ ಹಾರೈಕೆಯೂ ಇದೆ. ಅದೆಷ್ಟೋ ಸಿನಿಮಾ ಪ್ರೇಮಿಗಳ ಈ ಮನದಿಂಗಿತವನ್ನು ನಿಜವಾಗಿಸುವಂಥಾ ಗಾಢ ಭರವಸೆ ಹೊತ್ತು ಆಕ್ಟ್-1978 ಚಿತ್ರದ ಟ್ರೇಲರ್ ಲಾಂಚ್ ಆಗಿದೆ.

    ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಅದಕ್ಕೆ ದಕ್ಕಿರೋ ವೀಕ್ಷಣೆ, ನಾನಾ ದಿಕ್ಕುಗಳಿಂದ ಹರಿದು ಬರುತ್ತಿರೋ ಸದಭಿಪ್ರಾಯಗಳೆಲ್ಲವೂ ಒಂದು ಮಹಾ ಗೆಲುವಿನ ಮುನ್ಸೂಚನೆಯಂತೆಯೂ, ಚಿತ್ರರಂಗದ ಪಾಲಿಗೆ ಸುಗ್ಗಿ ಸಂಭ್ರಮ ಪಡಿಮೂಡಿಕೊಳ್ಳುವ ಶುಭ ಸೂಚನೆಯಂತೆಯೂ ಕಾಣಿಸಲಾರಂಭಿಸಿದೆ.

    ಇದು ಹರಿವು ಮತ್ತು ನಾತಿಚರಾಮಿಯಂಥ ಸದಭಿರುಚಿಯ ಸಿನಿಮಾಗಳನ್ನು ಕೊಡಮಾಡಿರುವ ಮಂಸೋರೆ ನಿರ್ದೇಶನದ ಚಿತ್ರ. ಈ ಹಿಂದೆ ಒಂದೇ ಒಂದು ಪೋಸ್ಟರ್ ಮೂಲಕ ಈ ಸಿನಿಮಾ ಸೃಷ್ಟಿಸಿದ್ದ ಕ್ರೇಜ್ ಎಂಥಾದ್ದೆಂಬುದನ್ನ ಯಾರೂ ಮರೆಯಲು ಸಾಧ್ಯವಿಲ್ಲ. ಆ ದೆಸೆಯಿಂದಲೇ ಆಕ್ಟ್-1978  ಬಗ್ಗೆ ವಿಶೇಷವಾದ ಕುತೂಹಲ ಮೂಡಿಕೊಂಡಿತ್ತು. ಈಗ ಪುನೀತ್ ರಾಜ್ ಕುಮಾರ್ ಅವರ ಪಿಆರ್‍ಕೆ ಯೂಟ್ಯೂಬ್ ಚಾನೆಲ್ ಮೂಲಕ ಲಾಂಚ್ ಆಗಿರೋ ಟ್ರೇಲರ್ ಎಲ್ಲ ನಿರೀಕ್ಷೆಗಳನ್ನೂ ಮತ್ತಷ್ಟು ಉದ್ದೀಪಿಸುವಂತೆ ಮೂಡಿ ಬಂದಿದೆ. ನಿರ್ದೇಶಕ ಮಂಸೋರೆ ಈ ಬಾರಿ ಎಲ್ಲರ ಮನಸುಗಳಿಗೂ ಕೌತುಕದ ಬಾಂಬಿಟ್ಟು ಬಿಟ್ಟಿದ್ದಾರೆ.

    ಮಂಸೋರೆ ಭಿನ್ನ ಪಥದಲ್ಲಿಯೇ ಸದ್ದು ಮಾಡುತ್ತಾ, ಪ್ರತಿ ಹೆಜ್ಜೆಯಲ್ಲಿಯೂ ಹೊಸಾ ಸಾಧ್ಯತೆಗಳತ್ತ ಕೈ ಚಾಚುತ್ತಾ ಈ ನೆಲದ ಕಥೆಗಳಿಗೆ ದೃಶ್ಯ ರೂಪ ನೀಡೋ ಅಪರೂಪದ ನಿರ್ದೇಶಕ. ಅವರು ಈ ಬಾರಿ ಪಕ್ಕಾ ಥ್ರಿಲ್ಲರ್ ಕಥಾನಕದೊಂದಿಗೆ ಅಡಿಯಿರಿಸುತ್ತಿದ್ದಾರೆ. ಈ ವ್ಯವಸ್ಥೆಯ ವಿರುದ್ಧ ಸಿಡಿದೆದ್ದು ಒಂದು ಸರ್ಕಾರಿ ಕಚೇರಿಯನ್ನೇ ಹೈಜಾಕ್ ಮಾಡೋ ದೃಶ್ಯಾವಳಿಗಳೊಂದಿಗೆ ಈ ಟ್ರೇಲರ್ ಎಲ್ಲರನ್ನೂ ಸೆಳೆದುಕೊಂಡಿದೆ. ಮೈಗೆ ಬಾಂಬು ಕಟ್ಟಿಕೊಂಡಿರೋ ಬಸುರಿ ಹೆಂಗಸಿನ ರೆಬೆಲ್ ಪಾತ್ರದಲ್ಲಿ ಯಜ್ಞ ಶೆಟ್ಟಿ ಅಕ್ಷರಶಃ ಮಿಂಚಿದ್ದಾರೆ. ಮಿಕ್ಕುಳಿದ ಪಾತ್ರಗಳೂ ಕೂಡಾ ಅಷ್ಟೇ ಮಜವಾಗಿ ಮೂಡಿ ಬಂದಿರೋದರ ಸೂಚನೆಗಳೂ ಈ ಟ್ರೇಲರ್‌ನಲ್ಲಿ ಕಾಣಿಸಿವೆ.

    ವ್ಯವಸ್ಥೆಯ ವಿರುದ್ಧ ಜನಸಾಮಾನ್ಯರೂ ಕೂಡಾ ಕುದಿತವೊಂದನ್ನು ಒಳಗಿಟ್ಟುಕೊಂಡಿರುತ್ತಾರೆ. ಆದರೆ, ಅದರ ವಿರುದ್ಧದ ಹೋರಾಟ, ಕ್ರಾಂತಿಗೆ ಮತ್ಯಾವುದೋ ಮಹಾ ಶಕ್ತಿಯೇ ಧರೆಗಿಳಿದು ಬರಬೇಕೆಂಬಂತೆ ಎಲ್ಲವನ್ನೂ ಅವುಡುಗಚ್ಚಿ ಸಹಿಸಿಕೊಂಡಿರುತ್ತಾರೆ. ಆದರೆ ಮನಸು ಮಾಡಿದರೆ ಸಾಮಾನ್ಯರ ಕುದಿತ, ಬೇಗುದಿಗಳೂ ಅಸಾಧಾರಣ ರೀತಿಯಲ್ಲಿ ಆಸ್ಫೋಟಗೊಳ್ಳಬಹುದೆಂಬ ಕಥಾ ಹೂರಣ ಈ ಟ್ರೇಲರ್‍ನಲ್ಲಿ ಧ್ವನಿಸಿದೆ. ಅಂತೂ ಪ್ರತಿ ಕ್ಷಣವೂ ಉಸಿರು ಬಿಗಿಹಿಡಿದು ಕಾಯುವಂಥಾ ಬಿಗುವಿನೊಂದಿಗೆ ಈ ಸಿನಿಮಾ ಮೂಡಿಬಂದಿದೆ ಅನ್ನೋ ನಂಬಿಕೆ ಪ್ರತಿಯೊಬ್ಬರಲ್ಲಿಯೂ ಮೂಡಿಕೊಂಡಿದೆ.

    ಈ ಹಿಂದಿನ ಸಿನಿಮಾಗಳನ್ನು ನೋಡಿದ ಬಹುತೇಕರು ನಿರ್ದೇಶಕ ಮಂಸೋರೆಯ ಅಗಾಧ ಪ್ರತಿಭೆಯನ್ನು ಮೆಚ್ಚಿಕೊಂಡಿದ್ದರು. ಅವರೀಗ ಪರಭಾಷಾ ಚಿತ್ರರಂಗಗಳ ಮಂದಿಯೇ ನಿಬ್ಬೆರಗಾಗೋ ಕಥಾ ವಸ್ತುವಿನೊಂದಿಗೆ ಕಮಾಲ್ ಮಾಡಲು ಮುಂದಾಗಿದ್ದಾರೆ. ಯಜ್ಞ ಶೆಟ್ಟಿಯನ್ನಂತೂ ಈ ಬಸುರಿ ಹೆಂಗಸಿನ ಪಾತ್ರ ಮತ್ತೊಂದು ಎತ್ತರಕ್ಕೇರಿಸೋದರಲ್ಲಿ, ಈ ಸಿನಿಮಾ ಮೂಲಕವೇ ಅವರ ವೃತ್ತಿ ಬದುಕಿನ ದಿಕ್ಕು ಬದಲಾಗೋದು ಗ್ಯಾರೆಂಟಿ ಅಂತ ನೋಡುಗರೇ ಭವಿಷ್ಯ ನುಡಿಯುತ್ತಿದ್ದಾರೆ. ಒಂದು ಟ್ರೇಲರ್ ಇಂಥಾ ಅಭಿಪ್ರಾಯಗಳನ್ನು ಹೊಮ್ಮಿಸುವಂತೆ ಮಾಡೋದು ಆರಂಭಿಕ ಗೆಲುವು. ಅದು ಆಕ್ಟ್-1978  ಚಿತ್ರಕ್ಕೆ ದಕ್ಕಿದೆ. ಮುಂದೆ ಮಹಾ ಗೆಲುವೊಂದು ಬಾಚಿ ತಬ್ಬಿಕೊಳ್ಳಲು ಕಾದು ನಿಂತಿರುವಂತಿದೆ!