Tag: ಹರಿಹರ

  • ಹರಿಹರದ ಬೆಸ್ಕಾಂ ಉಗ್ರಾಣದಲ್ಲಿ ಗೋಲ್ಮಾಲ್‌ – ರೈತರಿಗೆ ಸೇರಬೇಕಿದ್ದ 3.85 ಕೋಟಿ ಮೌಲ್ಯದ ವಿದ್ಯುತ್ ಪರಿಕರಗಳು ಭ್ರಷ್ಟರ ಪಾಲು!

    ಹರಿಹರದ ಬೆಸ್ಕಾಂ ಉಗ್ರಾಣದಲ್ಲಿ ಗೋಲ್ಮಾಲ್‌ – ರೈತರಿಗೆ ಸೇರಬೇಕಿದ್ದ 3.85 ಕೋಟಿ ಮೌಲ್ಯದ ವಿದ್ಯುತ್ ಪರಿಕರಗಳು ಭ್ರಷ್ಟರ ಪಾಲು!

    ದಾವಣಗೆರೆ: ಬೆಸ್ಕಾಂ (BESCOM) ಇಲಾಖೆಯಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ರೈತರಿಗೆ (Farmers) ಸೇರಬೇಕಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಪರಿಕರಗಳು ನಾಪತ್ತೆಯಾಗಿದ್ದು ಇದ್ದ ಮೂವರಲ್ಲಿ ಕದ್ದವರು ಯಾರು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ.

    ದಾವಣಗೆರೆಯ (Davanagere) ಹರಿಹರದ (Harihara) ಬೆಸ್ಕಾಂ ವಿಭಾಗೀಯ ಉಗ್ರಾಣದಲ್ಲಿ ಆಂತರಿಕ ಲೆಕ್ಕಪರಿಶೋಧನೆ ವೇಳೆ ಅಧಿಕಾರಿಗಳ ಕಳ್ಳಾಟ ಬಯಲಿಗೆ ಬಂದಿದೆ.ಬೆಸ್ಕಾಂ ವಿಭಾಗೀಯ ಉಗ್ರಾಣದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದೆ. ಆದರೂ ಸಹ ಅಲ್ಲಿನ ಅಧಿಕಾರಿಗಳು ಯಾವುದೇ ತನಿಖೆಗೆ ಮುಂದಾಗಿಲ್ಲ. ಕನಿಷ್ಠ ಠಾಣೆಗೆ ದೂರು ಸಹ ದಾಖಲಿಸದೇ ಇರುವುದು ಭಾರೀ ಅನುಮಾನಕ್ಕೆ ಕಾರಣವಾಗಿದೆ. ಇನ್ನೇನು ನನ್ನ ತಲೆ ಬಂದರೆ ಕಷ್ಟ ಆಗಬಹುದು ಎಂದು ಭಾವಿಸಿ ಈಗ ಅಧಿಕಾರಿಗಳು ತುರ್ತಾಗಿ ಹರಿಹರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ತನಿಖೆಯ ವೇಳೆ ಉಗ್ರಾಣದಿಂದ ಬರೋಬರಿ 72.58 ಲಕ್ಷ ರೂ. ಮೌಲ್ಯದ 102 ಪರಿವರ್ತಕಗಳೇ (TC) ಮಾಯವಾಗಿವೆ ಎಂಬುದು ಆಂತರಿಕ ಲೆಕ್ಕ ಪರಿಶೋಧನೆಯಿಂದ ಗೊತ್ತಾಗಿದೆ ಎಂದು ದಾವಣಗೆರೆ ಎಸ್‌ಪಿ ಉಮಾಪ್ರಶಾಂತ್ ತಿಳಿಸಿದ್ದಾರೆ.

    ಇಲ್ಲಿ ನಾಪತ್ತೆಯಾಗಿರುವುದು ಒಂದೇರಡಲ್ಲ. 89,270 ಲೀಟರ್ ಟಿ.ಸಿ. ಆಯಿಲ್‌ನ ಲೆಕ್ಕವಂತೂ ಇಲ್ವೇ ಇಲ್ಲ. ಒಟ್ಟು 3.85 ಕೋಟಿ ಮೌಲ್ಯದ 42 ವಿವಿಧ ಸಾಮಗ್ರಿಗಳ ದುರುಪಯೋಗ ಮಾಡಿಕೊಳ್ಳಲಾಗಿದೆ. ವಿದ್ಯುತ್ ಪರಿವರ್ತಕ, ಪೋಲ್, ವಯರ್‌,  ಲೈನ್ ಮಟೇರಿಯಲ್ಸ್ ಪಿವಿಸಿ ಅಲ್ಯುಮಿನಿಯಮ್ ರೀಡ್ ವೈರ್, ಆಯಿಲ್ ಸೇರಿ 42 ಸಾಮಗ್ರಿಗಳನ್ನು ದುರುಪಯೋಗ ಮಾಡಲಾಗಿದೆ.

    2018 ರ ಜೂನ್ 19 ರಿಂದ 2025 ರ ಸೆಪ್ಟೆಂಬರ್ 16 ರವರೆಗೆ ಹರಿಹರ ಬೆಸ್ಕಾಂ ಉಗ್ರಾಣದಲ್ಲಿ ಸಹಾಯಕ ಉಗ್ರಾಣ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅರುಣಕುಮಾರ್ ಅವರು ಸಾಮಾಗ್ರಿಗಳು ಉಗ್ರಣದಲ್ಲೇ ಇರುವಂತೆ ಕಡತದಲ್ಲಿ ನಮೂದಿಸಿ ಅವುಗಳನ್ನು ಹೊರಕ್ಕೆ ಸಾಗಿಸಿ ದುರುಪಯೋಗ ಮಾಡಿಕೊಂಡಿದ್ದು, ಇನ್ ವಾಯ್ಸ್ ಸಂಖ್ಯೆಗಳನ್ನು ಮಾತ್ರ ಕಡತದಲ್ಲಿ ದಾಖಲಿಸಿ ವಂಚಿಸಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದನ್ನೂ ಓದಿಅನಧಿಕೃತ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ UP ಮುಸ್ಲಿಮರು!

    2025 ರ ಏಪ್ರಿಲ್ ನಲ್ಲಿ ತ್ರೈಮಾಸಿಕ ಪರಿಶೀಲನೆ ನಡೆಸಿದ್ದು, ಪರಿವರ್ತನೆ ತೈಲದಲ್ಲಿ 89,270 ಲೀಟರ್ ಕೊರತೆ ಕಂಡು ಬಂದಿದ್ದು 56,67,864 ರೂ. ನಷ್ಟ ಉಂಟಾಗಿದೆ. ಅಷ್ಟೇ ಅಲ್ಲದೇ 72.58 ಲಕ್ಷ ರೂ.ಮೌಲ್ಯದ 102 ಪರಿವರ್ತಕಗಳು ಬಫರ್ ಸ್ಟಾಕ್ ನಿಂದ ಕಣ್ಮರೆಯಾಗಿದ್ದವು. ಇದರಲ್ಲದೇ 12.75 ಲಕ್ಷ ರೂ. ಮೌಲ್ಯದ 21 ಪರಿವರ್ತಕಗಳನ್ನು ಲೆಡ್ಜರ್ ನಲ್ಲಿ ದುರಸ್ಥಿದಾರರಿಗೆ ಇನ್ ವಾಯ್ಸ್ ಮಾಡಿದಂತೆ ದಾಖಲಾಗಿದ್ದರೂ ವಾಸ್ತವದಲ್ಲಿ ದುರಸ್ಥಿದಾರರಿಗೆ ಹಸ್ತಾಂತರವಾಗಿರಲಿಲ್ಲ. ಈ ರೀತಿಯಲ್ಲಿ ಒಟ್ಟು 3.85 ಕೋಟಿ ರೂ. ಮೌಲ್ಯದ ಸಾಮಾಗ್ರಿಗಳನ್ನು ದುರುಪಯೋಗ ಮಾಡಲಾಗಿದೆ ಎಂಬುದು ಪರಿಶೀಲನೆಯಿಂದ ದೃಢಪಟ್ಟಿದ್ದು ಕಾನೂನು ಕ್ರಮ ಜರುಗಿಸಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ರವಿಕಿರಣ್ ಇದೀಗ ಹರಿಹರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಎಫ್‌ಐಆರ್ ದಾಖಲಾಗುತ್ತಿದ್ದಂತೆ ಬೆಸ್ಕಾಂ ಹರಿಹರ ಉಗ್ರಾಣಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೂರುದಾರ ಇಇ ರವಿಕುಮಾರ್ ನಿಂದ ಮಾಹಿತಿ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಂಧನ ಇಲಾಖೆಯ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಇದೇ ರೀತಿ ಗೋಲ್‌ಮಾಲ್ ಆಗಿದೆ ಎಂಬ ಆರೋಪ ಕೂಡಾ ಕೇಳಿ ಬಂದಿದೆ.

    ಕೆಪಿಟಿಸಿಎಲ್ ಅಡಿಯಲ್ಲಿ ಬರುವ ಬೆಸ್ಕಾಂ, ಎಸ್ಕಾಂ ಜೆಸ್ಕಾಂ ಸೇರಿದಂತೆ ಎಲ್ಲಾ ನಿಗಮಗಳಲ್ಲಿ ಕೂಡ ತನಿಖೆ ನಡೆಸಿದರೆ ಇನ್ನು ಹೆಚ್ಚಿನ ಅವ್ಯವಹಾರ ಬೆಳಕಿಗೆ ಬರುತ್ತದೆ ಎಂದು ಸಾಮಾಜಿಕ ಹೋರಾಟಗಾರ ಗಿರೀಶ್ ಎಸ್ ದೇವರಮನಿ ತಿಳಿಸಿದ್ದಾರೆ.

  • ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ತಾಯಿ, ಅಂಗವಿಕಲೆ ಮಗಳು ಆತ್ಮಹತ್ಯೆ

    ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ತಾಯಿ, ಅಂಗವಿಕಲೆ ಮಗಳು ಆತ್ಮಹತ್ಯೆ

    ದಾವಣಗೆರೆ: ಸಾಲ ಮರುಪಾವತಿಸುವಂತೆ ಮೈಕ್ರೋ ಫೈನಾನ್ಸ್ (Micro Finance) ಹಾಗೂ ಸ್ವಸಹಾಯ ಸಂಘಗಳ ಕಿರುಕುಳಕ್ಕೆ ಬೇಸತ್ತು ತಾಯಿ ಹಾಗೂ ಅಂಗವಿಕಲೆ ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ (Harihara) ನಗರದ ಬಳಿ ಇರುವ ತುಂಗಭದ್ರ ನದಿ ಸೇತುವೆ ಬಳಿ ನಡೆದಿದೆ.

    ಗಂಗನರಸಿ ಗ್ರಾಮದ ಸುವರ್ಣಮ್ಮ (56), ಅಂಗವಿಕಲ ಮಗಳು ಗೌರಮ್ಮ (26) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಕೂಲಿ ಮಾಡಿ ಜೀವನ ನಡೆಸುತ್ತಿದ್ದ ಸುವರ್ಣಮ್ಮ, ಕೆಲ ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಮೂವರು ಪುತ್ರಿಯರಲ್ಲಿ ಇಬ್ಬರ ವಿವಾಹವಾಗಿದ್ದು, ಅಂಗವಿಕಲೆಯಾದ ಗೌರಮ್ಮ ತಾಯಿಯೊಂದಿಗೆ ನೆಲೆಸಿದ್ದರು. ಕೂಲಿ ಮಾಡಿಕೊಂಡು ಸಂಸಾರ ಸಾಗಿಸುತ್ತಿದ್ದ ಸುವರ್ಣಮ್ಮ, ಸಾಲದ ಹೊರೆಗೆ ಬಳಲಿದ್ದರು ಎನ್ನಲಾಗುತ್ತಿದ್ದು, ಮೈಕ್ರೊ ಫೈನಾನ್ಸ್ ಮತ್ತು ಸ್ವಸಹಾಯ ಸಂಘಗಳಲ್ಲಿ 3 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು. 2 ಸಾಲಕ್ಕೆ ವಾರಕ್ಕೊಮ್ಮೆ ಹಾಗೂ 1 ಸಾಲಕ್ಕೆ ತಿಂಗಳ ಕಂತುಗಳಲ್ಲಿ ಮರುಪಾವತಿ ಮಾಡಬೇಕಿತ್ತು. ಸಾಲದ ಕಂತು ಸರಿಯಾಗಿ ಪಾವತಿಸಲು ಕಷ್ಟಪಡುತ್ತಿದ್ದರು. ಇದನ್ನೂ ಓದಿ: ಕಲಬುರಗಿ | ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ಕಾಲ್ತುಳಿತ – ಮಹಿಳೆ ಸಾವು

    ಸಾಲಗಾರರ ಕಾಟ ತಾಳಲಾರದೆ ಇಂದು ತುಂಗಾಭದ್ರಾ ನದಿಗೆ ನಿರ್ಮಿಸಿದ ರೈಲ್ವೆ ಸೇತುವೆಯ ಮೇಲೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮೃತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

  • ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಇಬ್ಬರು ಯುವತಿಯರು ಸಾವು

    ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಇಬ್ಬರು ಯುವತಿಯರು ಸಾವು

    ದಾವಣಗೆರೆ: ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ದಾವಣಗೆರೆ(Davanagere) ಜಿಲ್ಲೆಯ ಹರಿಹರ(Harihara) ತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಹೊಳೆಸಿರಿಗೆರೆ ಸುಮಾ(24), ಕಡರನಾಯ್ಕನಹಳ್ಳಿ ಪಲ್ಲವಿ(23) ಮೃತ ದುರ್ದೈವಿಗಳು. ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ ಬೈಕ್ ಸವಾರ ಸಚಿನ್‌ಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: Madikeri | ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

    ಸಚಿನ್ ಬುಧವಾರ ಸಂಜೆ ಸಂಬಂಧಿಗಳಾದ ಸುಮಾ ಮತ್ತು ಪಲ್ಲವಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಬರುವಾಗ ಎದುರುಗಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಯುವತಿಯರು ರಸ್ತೆಗೆ ಎಸೆಯಲ್ಪಟ್ಟಿದ್ದರು. ಸುಮಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗಳಾಗಿದ್ದ ಪಲ್ಲವಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 31 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಗಂಭೀರ ಗಾಯಗಳಾದ ಸಚಿನ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಹಾಗೂ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ(Malebennuru Police Station) ಪ್ರಕರಣ ದಾಖಲಾಗಿದೆ.

  • ವರದಕ್ಷಿಣೆಗಾಗಿ ಪತ್ನಿಯನ್ನೇ ಕೊಂದ ಪಾಪಿ ಗಂಡ

    ವರದಕ್ಷಿಣೆಗಾಗಿ ಪತ್ನಿಯನ್ನೇ ಕೊಂದ ಪಾಪಿ ಗಂಡ

    ದಾವಣಗೆರೆ: ವರದಕ್ಷಿಣೆಗಾಗಿ ಪತಿಯೇ, ಪತ್ನಿಯ ಕತ್ತನ್ನು ಸೀರೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಂದಿರುವ ಘಟನೆ ಹರಿಹರ (Harihara) ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.

    ನೇತ್ರಾವತಿ(26) ಕೊಲೆಯಾದ ಪತ್ನಿ. ಕಳೆದ 7 ವರ್ಷದ ಹಿಂದೆ ಕುಟುಂಬಸ್ಥರು ಹರಳಹಳ್ಳಿ ಗ್ರಾಮದ ದೇವೇಂದ್ರಪ್ಪನ ಜೊತೆ ನೇತ್ರಾವತಿಯವರನ್ನು ಮದುವೆ ಮಾಡಿಕೊಟ್ಟಿದ್ದರು. ಮದುವೆ ಸಂದರ್ಭದಲ್ಲಿ ಕುಟುಂಬಸ್ಥರು ವರದಕ್ಷಿಣೆಯಾಗಿ 10 ತೊಲ ಬಂಗಾರ 1 ಲಕ್ಷ ರೂ. ನಗದು ಹಾಗೂ ಬೈಕ್ ಕೊಡಿಸಿದ್ದರು. ಮೃತ ನೇತ್ರಾವತಿ ಒಂದು ಗಂಡು ಮತ್ತು ಹೆಣ್ಣು ಮಗುವನ್ನು ಹೊಂದಿದ್ದರು. ಇದನ್ನೂ ಓದಿ: Gold Smuggling Case | ಸ್ವಂತ ಚಿನ್ನಾಭರಣ ಮಳಿಗೆ ಆರಂಭಿಸಲು ಪ್ಲ್ಯಾನ್‌ ಮಾಡಿದ್ದ ರನ್ಯಾ

    ದೇವೇಂದ್ರಪ್ಪನ ಕುಟುಂಬಸ್ಥರು ವರದಕ್ಷಿಣೆಗಾಗಿ ಹಲವು ಬಾರಿ ಪೀಡಿಸಿ ಹಲ್ಲೆ ನಡೆಸಿದ್ದರು. ಈ ಹಿಂದೆ ಕೂಡಾ ನೇತ್ರಾವತಿ ಮೇಲೆ ಹಲ್ಲೆ ನಡೆಸಿದ್ದರು. ಹಿರಿಯರು ರಾಜಿ ಸಂಧಾನ ಮಾಡಿ ಇಬ್ಬರನ್ನು ಒಂದು ಮಾಡಿದ್ದರು. ಆದರೆ ಸೋಮವಾರ ರಾತ್ರಿ ದೇವೇಂದ್ರಪ್ಪ ಹಾಗೂ ಕುಟುಂಬಸ್ಥರು ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ನೇತ್ರಾವತಿ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸಂವಿಧಾನ ವಿರುದ್ಧವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟು, ಮತಬ್ಯಾಂಕ್‌ ಗಟ್ಟಿಮಾಡಿಕೊಳ್ತಿದೆ: ಬೊಮ್ಮಾಯಿ

    ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ನೇತ್ರಾವತಿ ಮೃತದೇಹವನ್ನು ದಾವಣಗೆರೆ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.

  • ದೀಪಾವಳಿ ಪೂಜೆಗೆ ಟ್ರ್ಯಾಕ್ಟರ್ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ಇಬ್ಬರು ನೀರುಪಾಲು

    ದೀಪಾವಳಿ ಪೂಜೆಗೆ ಟ್ರ್ಯಾಕ್ಟರ್ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ಇಬ್ಬರು ನೀರುಪಾಲು

    ದಾವಣಗೆರೆ: ದೀಪಾವಳಿ ಅಮಾವಾಸ್ಯೆಗೆ ಟ್ರ‍್ಯಾಕ್ಟರ್ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ಇಬ್ಬರು ನೀರುಪಾಲಾದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ಗುತ್ತೂರು ಗ್ರಾಮದ ಬಳಿ ನಡೆದಿದೆ.

    ತುಂಗಾಭದ್ರ ನದಿ (Tungabhadra River) ಪಾತ್ರದಲ್ಲಿ ಟ್ರ‍್ಯಾಕ್ಟರ್ ತೊಳೆಯಲು ಹೋಗಿದ್ದ ಗ್ರಾಮದ ಪರಶುರಾಮ್(14) ಹಾಗೂ ಆತನ ಚಿಕ್ಕಪ್ಪ ಅಣ್ಣಪ್ಪ (45) ಮೃತ ದುರ್ದೈವಿಗಳು. ಮರಳುಗಾರಿಕೆಯಿಂದ ತುಂಗಾಭದ್ರ ನದಿಯಲ್ಲಿ ಗುಂಡಿಗಳಾಗಿರುವ ಹಿನ್ನೆಲೆ, ಗುಂಡಿಗಳಲ್ಲಿ ಸಿಲುಕಿ ನೀರಲ್ಲಿ ಮುಳುಗಿದ್ದಾರೆ. ಈ ವೇಳೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದರು. ದುರಾದೃಷ್ಟವಶಾತ್ ರಕ್ಷಣೆ ಮಾಡುವ ವೇಳೆಗೆ ಇಬ್ಬರೂ ಸಾವನ್ನಪ್ಪಿದ್ದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆ ಕೊಡಲು ಆಗದ ಕಾಂಗ್ರೆಸ್ ಸರ್ಕಾರ ಯೂಟರ್ನ್ ಸರ್ಕಾರ: ಛಲವಾದಿ ನಾರಾಯಣಸ್ವಾಮಿ

    ತುಂಗಾಭದ್ರ ನದಿಪಾತ್ರದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಕ್ರಮ ಮರಳುಗಾರಿಕೆಯಿಂದಲೇ ಇಂತಹ ಅನಾಹುತ ಆಗಿದೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ. ಹರಿಹರ (Harihara) ಗ್ರಾಮಾಂತರ ಠಾಣಾ ವ್ಯಾಪ್ತಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಒಳಮೀಸಲಾತಿಗೆ ಆಯೋಗ ರಚನೆ, ವಿಳಂಬ ನೀತಿ ಅಲ್ಲ: ಸಿದ್ದರಾಮಯ್ಯ

  • ಹೆಚ್ಚಿದ ತುಂಗಭದ್ರಾ ನೀರಿನ ಮಟ್ಟ – ಜಾನುವಾರು ಮೈತೊಳೆಯಲು ತೆರಳಿದ್ದ ಯುವಕ ನೀರುಪಾಲು

    ಹೆಚ್ಚಿದ ತುಂಗಭದ್ರಾ ನೀರಿನ ಮಟ್ಟ – ಜಾನುವಾರು ಮೈತೊಳೆಯಲು ತೆರಳಿದ್ದ ಯುವಕ ನೀರುಪಾಲು

    ದಾವಣಗೆರೆ: ತುಂಗಭದ್ರಾ ನದಿ (Tungabhadra River) ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಾನುವಾರು ಮೈತೊಳೆಯಲು ಹೋಗಿದ್ದ ಯುವಕ ನೀರುಪಾಲಾದ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ.

    ಹರಿಹರ (Harihara) ತಾಲೂಕಿನ ಧೂಳೆಹೊಳೆ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಘಟನೆ ನಡೆದಿದ್ದು, ಇಂಗಳಗೊಂದಿ ಜಯಪ್ಪ (32) ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ನದಿ ನೀರಿನ ಮಟ್ಟ ಹೆಚ್ಚಾಗಿದ್ದನ್ನು ಗಮನಿಸದೆ ಜಯಪ್ಪ ನದಿಗಿಳಿದು ಜಾನುವಾರುಗಳ ಮೈತೊಳೆಯಲು ಮುಂದಾಗಿದ್ದರು. ಇದ್ದಕ್ಕಿದ್ದಂತೆ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ – ಕಂಡಲ್ಲಿ ಗುಂಡು ಹಾರಿಸಲು ಸೂಚನೆ

    ಧೂಳೆಹೊಳೆಯಿಂದ 2 ಕಿಲೋ ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಈ ಕುರಿತು ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂ ಭರ್ತಿಗೆ ಕೇವಲ 2 ಅಡಿಯಷ್ಟೇ ಬಾಕಿ

  • ಉಪವಾಸ ಅಂತ್ಯಗೊಳಿಸಿ ಪಾನಿಪುರಿ ತಿಂದ 19 ಮಕ್ಕಳು ಅಸ್ವಸ್ಥ – ನಾಲ್ವರ ಸ್ಥಿತಿ ಚಿಂತಾಜನಕ

    ಉಪವಾಸ ಅಂತ್ಯಗೊಳಿಸಿ ಪಾನಿಪುರಿ ತಿಂದ 19 ಮಕ್ಕಳು ಅಸ್ವಸ್ಥ – ನಾಲ್ವರ ಸ್ಥಿತಿ ಚಿಂತಾಜನಕ

    ದಾವಣಗೆರೆ: ಪಾನಿಪುರಿ (Panipuri) ತಿಂದು 19 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ (Harihara) ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ.

    ಮಲೆಬೆನ್ನೂರಿನ ಜಾಮಿಯಾ ಮಸೀದಿ ಬಳಿ ಘಟನೆ ನಡೆದಿದ್ದು, ಉಪವಾಸ (Fasting) ಅಂತ್ಯ ಮಾಡಿದ ನಂತರ ಮಸೀದಿ (Mosque) ಮುಂಭಾಗ ಮಾರಾಟ ಮಾಡುತ್ತಿದ್ದ ಪಾನಿಪುರಿ ತಿಂದು 19 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಪಾನಿಪುರಿ ತಿಂದು ಕೆಲವೇ ಹೊತ್ತಿನಲ್ಲಿ ವಾಂತಿಯಾಗಿ ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೂಡಲೇ ಪೋಷಕರು ಮಕ್ಕಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ದೆಹಲಿ ಮದ್ಯ ನೀತಿ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌

    19 ಮಕ್ಕಳ ಪೈಕಿ 4 ಮಕ್ಕಳ ಆರೋಗ್ಯ ಚಿಂತಾಜನಕವಾಗಿದೆ. ಇವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹರಿಹರ ತಹಶೀಲ್ದಾರ್ ಗುರುಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಭಾನುವಾರವೂ ತೆರೆಯಲಿದೆ ಉಪನೋಂದಣಿ ಕಚೇರಿ

  • ಕಾಂಪೌಂಡ್ ಹತ್ತುವ ವೇಳೆ ಜಾರಿಬಿದ್ದು ವಿದ್ಯಾರ್ಥಿನಿ ಸಾವು

    ಕಾಂಪೌಂಡ್ ಹತ್ತುವ ವೇಳೆ ಜಾರಿಬಿದ್ದು ವಿದ್ಯಾರ್ಥಿನಿ ಸಾವು

    ದಾವಣಗೆರೆ: ಕಾಂಪೌಂಡ್ (Compound) ಹತ್ತುವ ವೇಳೆ ಜಾರಿ ಬಿದ್ದು ವಿದ್ಯಾರ್ಥಿನಿ (Student) ಸಾವನ್ನಪಿದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ (Harihara) ತಾಲೂಕಿನಲ್ಲಿ ನಡೆದಿದೆ.

    ಹರಿಹರದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜ್‌ನಲ್ಲಿ (Residential College) ಘಟನೆ ನಡೆದಿದ್ದು, ಸಿನಿಕ್ಷಾ (16) ಕಾಂಪೌಂಡ್‌ನಿಂದ ಜಾರಿಬಿದ್ದು ಮೃತಪಟ್ಟಿದ್ದಾಳೆ. ವಿಜಯನಗರ (Vijayanagara) ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದ ಶಶಿಕಾಂತ್ ದಂಪತಿಯ ಪುತ್ರಿಯಾದ ಈಕೆ ಕಳೆದ ನಾಲ್ಕು ದಿನಗಳ ಹಿಂದಷ್ಟೇ ವಸತಿ ಶಾಲೆಗೆ ಸೇರಿದ್ದಳು. ಮಂಗಳವಾರ ರಾತ್ರಿ 11:30ರ ವೇಳೆಗೆ ವಸತಿ ಶಾಲೆಯ ಕಾಂಪೌಂಡ್ ಹತ್ತುವ ಸಂದರ್ಭ ಸಿನಿಕ್ಷಾ ಜಾರಿ ಬಿದ್ದಿದ್ದಾಳೆ. ಇದನ್ನೂ ಓದಿ: ಬೆಂ-ಮೈ ಹೆದ್ದಾರಿಯಲ್ಲಿ ಭೀಕರ ಅಪಘಾತ – ಮೂವರ ಸಾವು, ಓರ್ವನ ಸ್ಥಿತಿ ಗಂಭೀರ

    ಘಟನೆಯಿಂದ ತೀವ್ರ ಗಾಯಗೊಂಡಿದ್ದ ಸಿನಿಕ್ಷಾಳನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ. ವಿದ್ಯಾರ್ಥಿನಿ ರಾತ್ರಿಯ ವೇಳೆ ಕಾಂಪೌಂಡ್ ಯಾಕೆ ಏರಿದಳು ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬೈಕ್‌ ಸ್ಕಿಡ್‌ ಆಗಿ ಡಿವೈಡರ್‌ಗೆ ಡಿಕ್ಕಿ – ಕಾನೂನು ವಿದ್ಯಾರ್ಥಿ ದುರ್ಮರಣ

  • ನಟ ಮಾಸ್ಟರ್ ಆನಂದ್ ನೇತೃತ್ವದಲ್ಲಿ ಹರಿಹರದಲ್ಲಿ ಸ್ವಚ್ಛತಾ ಕಾರ್ಯ

    ನಟ ಮಾಸ್ಟರ್ ಆನಂದ್ ನೇತೃತ್ವದಲ್ಲಿ ಹರಿಹರದಲ್ಲಿ ಸ್ವಚ್ಛತಾ ಕಾರ್ಯ

    ದಾವಣಗೆರೆ: ಸ್ಯಾಂಡಲ್‍ವುಡ್ ನಟ ಮಾಸ್ಟರ್ ಆನಂದ್ ನೇತೃತ್ವದಲ್ಲಿ ನಗರದ ಹರಿಹರ ತಾಲೂಕಿನಲ್ಲಿ ಗ್ರೀನ್ ಗೆಳೆಯರ ತಂಡದಿಂದ ಸ್ವಚ್ಛತಾ ಕಾರ್ಯ ಆಯೋಜಿಸಲಾಗಿದೆ.

    ಜಿಲ್ಲೆಯ ಹರಿಹರದ ಪ್ರಮುಖ ರಸ್ತೆಗಳು, ತುಂಗಾ ಭಧ್ರಾ ನದಿಯ ದಡದಲ್ಲಿ ಸ್ವಚ್ಚತಾ ಕಾರ್ಯ ಆಯೋಜಿಸಲಾಗಿದೆ. ಮಾಸ್ಟರ್ ಆನಂದ್ ಅವರು ಇಂದು ಹರಿಹರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸ್ವಚ್ಛತಾ ಕಾರ್ಯ ಆರಂಭವಾಗಿದೆ. ಇದನ್ನೂ ಓದಿ: ನೂಪೂರ್ ವಿರುದ್ಧ ಪ್ರತಿಭಟಿಸಿದವರು ಕುವೈತ್‍ನಿಂದ ಗಡಿಪಾರು – ನಮ್ಮಲ್ಲಿ ಕಠಿಣ ಕ್ರಮ ಯಾವಾಗ ಎಂದ ನೆಟ್ಟಿಗರು?

    ದೇವಸ್ಥಾನದ ಮುಂಭಾಗ ಇರುವ ರಸ್ತೆ ಸ್ವಚ್ಚತೆ ಮಾಡುತ್ತಿದ್ದು, ಹರಿಹರದ ನಾಗರಿಕರು, ಗ್ರೀನ್ ಗೆಳೆಯರ ಬಳಗದಿಂದ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇವತ್ತು ಇಡೀ ದಿನ ಗ್ರೀನ್ ಗೆಳೆಯರ ತಂಡ ಹರಿಹರದ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛತೆ ಮಾಡಲಿದ್ದಾರೆ. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್‌ನೆಟ್ ಸ್ಥಗಿತ, 70 ಮಂದಿ ಅರೆಸ್ಟ್

  • ತುಂಗಾಭದ್ರಾ ಆರತಿಯಿಂದ ಹರಿಹರದ ಗತವೈಭವ ಮರಳಿ ಪಡೆಯುವ ಗುರಿ: ವಚನಾನಂದ ಸ್ವಾಮೀಜಿ

    ತುಂಗಾಭದ್ರಾ ಆರತಿಯಿಂದ ಹರಿಹರದ ಗತವೈಭವ ಮರಳಿ ಪಡೆಯುವ ಗುರಿ: ವಚನಾನಂದ ಸ್ವಾಮೀಜಿ

    – ಹರಿಹರ ನಗರದ ಸರ್ವತೋಮುಖ ಅಭಿವೃದ್ದಿಯ ಗುರಿ

    ಬೆಂಗಳೂರು: ಹರಿಹರದ ಗತವೈಭವವನ್ನು ಮರಳಿ ಪಡೆಯುವ ಹಾಗೂ ದೇಶದಲ್ಲೇ ಹಿಂದೂಗಳ ಪ್ರಮುಖ ಯಾತ್ರಾಸ್ಥಳವನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು.

    ಇಂದು ಬೆಂಗಳೂರಿನ ಶ್ವಾಸಯೋಗ ಕೇಂದ್ರದಲ್ಲಿ ಫೆಬ್ರವರಿ 20 2022 ರಂದು ಸಿಎಂಗಳಿಂದ ನಡೆಯಲಿರುವ 108 ತುಂಗಾಭದ್ರಾ ಆರತಿ ಮಂಟಪಗಳ ‘ಶಿಲಾನ್ಯಾಸ ಕಾರ್ಯಕ್ರಮ’ದ ಮಾಹಿತಿ ಹಾಗೂ ಕಾನ್ಸೆಪ್ಟ್ ವೀಡಿಯೋವನ್ನು ಬಿಡುಗಡೆಗೊಳಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಅವರು, ಉತ್ತರಕ್ಕೆ ಗಂಗೆಯ ರೀತಿ ದಕ್ಷಿಣ ಭಾರತಕ್ಕೆ ತುಂಗಾ ನದಿ ಪವಿತ್ರ ಎನಿಸಿದೆ. ಗಂಗಾ ಸ್ನಾನ-ತುಂಗಾ ಪಾನ ಎನ್ನುವ ಉಕ್ತಿಯೂ ಇದೆ ಎಂದು ಮಾತನಾಡಿದರು.  ಇದನ್ನೂ ಓದಿ:  ನ್ಯಾಯಾಲಯ ಆದೇಶಕ್ಕೆ ಧಾರ್ಮಿಕ ಮುಖಂಡರಿಂದ ಬೆಂಬಲ: ರಾಯಚೂರಿನಲ್ಲಿ ಗಲಾಟೆ ಇಲ್ಲ

    ಗಂಗಾರತಿಯ ರೀತಿಯಲ್ಲಿಯೇ ತುಂಗಾರತಿಯನ್ನು ಏಕೆ ಆರಂಭಿಸಬಾರದು ಎನ್ನುವ ವಿಷಯ ನಮ್ಮ ಮನಸ್ಸಿಗೆ ಬಂದಿತ್ತು. ಈ ಯೋಚನೆ ಬರುತ್ತಿದ್ದಂತೆ, ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಬಳಿಯಿರುವ ತುಂಗಾ ತಟದಲ್ಲಿ ತುಂಗಾರತಿಯನ್ನು ಆರಂಭಿಸಲು ಯೋಚಿಸಿದೆವು. ಜೊತೆಗೆ ಗಂಗೆಯಂತೆ ತುಂಗಾ ನದಿಯನ್ನೂ ಶುಚಿಗೊಳಿಸಬೇಕು ಎನ್ನುವ ಮಹತ್ವಾಕಾಂಕ್ಷೆ ಬಂದಾಗ ಭಕ್ತಗಣದೊಂದಿಗೆ ಸೇರಿ ತುಂಗಾ ನದಿಯನ್ನು ಶುಚಿಗೊಳಿಸುವ, ನಮಾಮಿ ತುಂಗೆ ಯೋಜನೆಗೆ ಚಾಲನೆ ನೀಡಿದೆವು ಎಂದು ವಿವರಿಸಿದರು.

    ಪ್ರತಿ ನಿತ್ಯ ಸೂರ್ಯಾಸ್ತವಾದ ನಂತರ ಗಂಗೋತ್ರಿ, ರುದ್ರಪ್ರಯಾಗ ದೇವಪ್ರಯಾಗ, ಋಷಿಕೇಶ, ಹರಿದ್ವಾರ ಸೇರಿದಂತೆ ನೂರಾರು ಪವಿತ್ರ ಗಂಗಾ ತಟಗಳಲ್ಲಿ ಗಂಗಾರತಿ ನಡೆಯುವ ರೀತಿಯಲ್ಲಿಯೇ ನಮ್ಮ ತುಂಗಾ ನದಿ ತಟದಲ್ಲೂ ತುಂಗಾರತಿ ಪ್ರಾರಂಭಿಸಬೇಕು. ಹೇಗೆ ಮನಮೋಹಕ ಗಂಗಾರತಿ ಲಕ್ಷಾಂತರ ಭಕ್ತರನ್ನು ಸೆಳೆಯಿತೋ ಹಾಗೆ, ತುಂಗಾರತಿ ಕೂಡ ನಾಡಿನ ಭಕ್ತರನನು ಸೆಳೆಯಬೇಕು ಎನ್ನುವುದು ನಮ್ಮ ಇಚ್ಛೆಯಾಗಿತ್ತು ಎಂದರು.

    ಈ ಹಿನ್ನೆಲೆಯಲ್ಲಿ ನಾವು ಮಾಡಿದ ಮನವಿಗೆ ಸೂಕ್ತವಾಗಿ ಕರ್ನಾಟಕ ಸರ್ಕಾರ ಸ್ಪಂದಿಸಿದೆ. ಅಲ್ಲದೇ, 30 ಕೋಟಿ ರೂಪಾಯಿಗಳ ಅನುದಾನವೂ ನೀಡಿದ್ದು, ಭಾನುವಾರ ಫೆಬ್ರವರಿ 20 2022 ರಂದು ಮುಖ್ಯಮಂತ್ರಿಗಳು ಈ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

    ಏನಿದು ‘ತುಂಗಾಭದ್ರಾ ಆರತಿ’ ಯೋಜನೆ?
    ಹರಿಹರದ ತುಂಗಭದ್ರಾ ನದಿ ತಟದಲ್ಲಿನ ರಾಘವೇಂದ್ರ ಶ್ರೀಗಳ ದೇವಸ್ಥಾನದಿಂದ ಹರಿಹರೇಶ್ವರ ದೇವಸ್ಥಾನದ ಮಧ್ಯದಲ್ಲಿ ತುಂಗಾ ಮಂಟಪಗಳನ್ನು ನಿರ್ಮಾಣ ಮಾಡುವ ಯೋಜನೆ ಇದಾಗಿದೆ. ಇದಕ್ಕೆ 30 ಕೋಟಿ ರೂ. ಖರ್ಚಾಗಬಹುದೆಂದು ಅಂದಾಜಿಸಲಾಗಿದೆ. 108 ಮಂಟಪ ನಿರ್ಮಾಣ, ಗಂಗಾ ಆರತಿಯಂತೆ ಪ್ರತಿನಿತ್ಯ ತುಂಗಾಭದ್ರಾ ಆರತಿ, ಪೂಜೆ ನಡೆಸುವ ಯೋಜನೆ ಇದಾಗಿದೆ ಎಂದು ವಿವರಿಸಿದರು.

    ಉತ್ತರ ಮತ್ತು ದಕ್ಷಿಣ ಕರ್ನಾಟಕ ಒಂದುಗೂಡಿಸುವ ಮಹತ್ವದ ಯೋಜನೆ ಇದಾಗಿರಲಿದೆ. ಇದಕ್ಕೆ ಈಗಾಗಲೇ ಅನುದಾನ ಬಿಡುಗಡೆ ಆಗಿದ್ದು, ಯೋಜನೆಯ ನೀಲೀ ನಕ್ಷೆಯನ್ನು ಅಂತಿಮಗೊಳಿಸಲಾಗಿದೆ. ಅಲ್ಲದೆ, ಫೆಬ್ರವರಿ 20 ರಂದು ಮುಖ್ಯಮಂತ್ರಿಗಳು ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

    ಗತವೈಭವ ಮರಳಿಸುವ ಗುರಿ!
    ತುಂಗಾಭದ್ರಾ ಆರತಿಯ ಅನುಷ್ಠಾನದಿಂದ ಹರಿಹರ ನಗರ ಹಾಗೂ ತುಂಗಾಭದ್ರಾ ನದಿ ಹರಿಯುವ ಎಲ್ಲ ಕಡೆಯೂ ಪ್ರವಾಸೋದ್ಯಮ, ಉದ್ಯೋಗಾವಕಾಶ ಹಾಗೂ ಗತವೈಭವವನ್ನು ಮರಳಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಹೇಗೆ ವಾರಣಾಸಿ ಕಾರಿಡಾರ್‍ನಲ್ಲಿ ಗಂಗಾನದಿ ಹರಿಯುವ ಎಲ್ಲ ಕಡೆಯೂ ಗಂಗಾ ಆರತಿ ನಡೆಯುವಂತೆ ತುಂಗಾಭದ್ರಾ ನದಿ ಹರಿಯುವ ಎಲ್ಲೆಡೆಯೂ ಆರತಿ ಕಾರ್ಯಕ್ರಮ ನಡೆಯಬೇಕು. ಈ ಮೂಲಕ ಜೀವ ನದಿಯನ್ನು ಸ್ವಚ್ಚವಾಗಿಟ್ಟುಕೊಳ್ಳುವ ಹಾಗೂ ಅದರ ಸುತ್ತಮುತ್ತಲಿನ ನಗರಗಳ ಸರ್ವತೋಮುಖ ಅಭಿವೃದ್ದಿಯಾಗುವುದು ನಮ್ಮ ಉದ್ದೇಶ ಮತ್ತು ಗುರಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ:  ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್

    ತುಂಗಾಭದ್ರಾ ನದಿ ಹರಿಯುವ ಎಲ್ಲ ಸ್ಥಳಗಳಲ್ಲಿಯೂ ಕೂಡಾ ನಾವು ಪ್ರವಾಸೋದ್ಯಮ, ಉದ್ಯೋಗಾವಕಾಶ ಹೆಚ್ಚಿಸುವುದು ಮತ್ತು ದೇಶದ ಪ್ರಮುಖ ಹಿಂದೂಯಾತ್ರಾ ಸ್ಥಳಗಳಲ್ಲಿ ಒಂದಾಗಿ ಗುರುತಿಸುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ. ಈ ಕಾರ್ಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಮ್ಮ ಅಭಿನಂದನೆಗಳನ್ನು ತಿಳಿಸಿದರು.