Tag: ಹರಿಹರ ವೀರ ಮಲ್ಲು

  • ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಟೀಸರ್ ರಿಲೀಸ್

    ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಟೀಸರ್ ರಿಲೀಸ್

    ತೆಲುಗು ಸ್ಟಾರ್ ಪವನ್ ಕಲ್ಯಾಣ್ (Pawan Kalyan) ಸದ್ಯ ಚುನಾವಣಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ‘ಹರಿಹರ ವೀರ ಮಲ್ಲು’ (Harihara Veera Mallu) ಚಿತ್ರದ ಟೀಸರ್ ರಿಲೀಸ್ ಆಗಿದೆ. ಟೀಸರ್‌ನಲ್ಲಿ ಸಖತ್ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಧರ್ಮಕ್ಕೋಸ್ಕರ ಯುದ್ಧ ಮಾಡಲು ಪವನ್ ಸಜ್ಜಾಗಿದ್ದಾರೆ.

    17ನೇ ಶತಮಾನದ ಮೊಘಲರು ಆಳ್ವಿಕೆಯಲ್ಲಿ ನಡೆದ ಒಂದಿಷ್ಟು ನೈಜ ಕಥೆಯನ್ನಿಟ್ಟು ಸಿನಿಮಾ ಮಾಡಲಾಗಿದ್ದು, ಇದರ ಝಲಕ್‌ ಅನ್ನು ಟೀಸರ್‌ನಲ್ಲಿ ತೋರಿಸಿದ್ದಾರೆ. ಎರಡು ಭಾಗಗಳಲ್ಲಿ ಸಿನಿಮಾ ಬರಲಿದೆ. 5 ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗಲಿದೆ. ಇದನ್ನೂ ಓದಿ:‘ಪುಷ್ಪ 2’ ಸಾಂಗ್ ಟ್ರೆಂಡಿಂಗ್- ತಗ್ಗೋದೇ ಇಲ್ಲ ಎಂದ ಪುಷ್ಪರಾಜ್‌ಗೆ ಫ್ಯಾನ್ಸ್ ಫಿದಾ

    ರಾಜರು, ನವಾಬರು ಜನರ ಡುಡಿಮೆಯನ್ನು ಕಿತ್ತುಕೊಳ್ಳಲು ಬಂದರೆ ಅವರಿಂದ ಕಾಪಾಡಲು ದೇವರು ಒಂದಲ್ಲ ಒಂದು ರೂಪದಲ್ಲಿ ಬರುತ್ತಾನೆ ಎಂದು ಹಿನ್ನೆಲೆ ಧ್ವನಿ ಟೀಸರ್‌ನಲ್ಲಿ ಹೈಲೆಟ್ ಆಗಿದೆ. ಅದರಲ್ಲಿ ಪವನ್ ಕಲ್ಯಾಣ್ ಎಂಟ್ರಿ ಮತ್ತು ಮೊಘಲ್ ಚಕ್ರವರ್ತಿ ಆಗಿರುವ ಬಾಬಿ ಡಿಯೋಲ್ (Bobby Deol) ಆಗಮನ ಖಡಕ್ ಆಗಿದೆ.

    ಪವನ್ ಕಲ್ಯಾಣ್‌ಗೆ ನಾಯಕಿಯಾಗಿ ಬೆಂಗಳೂರಿನ ಬೆಡಗಿ ನಿಧಿ ಅಗರ್ವಾಲ್ (Nidhdhi Agerwal) ನಟಿಸಿದ್ದಾರೆ. ಸ್ಟಾರ್ ಕಲಾವಿದರ ದಂಡೆ ಇರುವ ಈ ಚಿತ್ರವು ವರ್ಷದ ಕೊನೆಯಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಚುನಾವಣೆ ಪ್ರಚಾರ ಜೋರಾಗಿದೆ. ಈ ಹೊತ್ತಲ್ಲಿ ಅಭಿಮಾನಿಗಳ ಗಮನ ಸೆಳೆಯಲು ಚಿತ್ರದ ಟೀಸರ್ ರಿಲೀಸ್ ಮಾಡಿ ತಂತ್ರ ರೂಪಿಸಿದ್ದಾರೆ ಎಂದು ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

  • ಶೂಟಿಂಗ್ ಸೆಟ್ ನಲ್ಲಿ ಬೆಂಕಿ ಅವಘಡ: ಕಣ್ಮುಂದೆ ಭಸ್ಮವಾಯ್ತು ₹6 ಕೋಟಿ ಸೆಟ್

    ಶೂಟಿಂಗ್ ಸೆಟ್ ನಲ್ಲಿ ಬೆಂಕಿ ಅವಘಡ: ಕಣ್ಮುಂದೆ ಭಸ್ಮವಾಯ್ತು ₹6 ಕೋಟಿ ಸೆಟ್

    ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ನಟನೆಯ ‘ಹರಿಹರ ವೀರ ಮಲ್ಲು’ (Harihara Veera Mallu) ಸಿನಿಮಾ ಸೆಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದೊಂದು ಐತಿಹಾಸಿಕ ಸಿನಿಮಾವಾಗಿದ್ದರಿಂದ ಭಾರೀ ಪ್ರಮಾಣದ ಸೆಟ್ ಹಾಕಲಾಗಿತ್ತು. ಭಾನುವಾರ ತಡರಾತ್ರಿ ಸೆಟ್ (Set) ನಲ್ಲಿ ಬೆಂಕಿ (Fire) ಕಾಣಿಸಿಕೊಂಡು, 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸೆಟ್ ಬಹುತೇಕ ಸುಟ್ಟು ಹೋಗಿದೆ.

    ಸಂಪೂರ್ಣವಾಗಿ ಸೆಟ್ ಸುಟ್ಟು ಭಸ್ಮವಾಗಿದೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಚಿತ್ರತಂಡ ಹೇಳಿಕೊಂಡಿದೆ. ಬೆಂಕಿ ನಂದಿಸಲು ಹರಸಾಹಸಪಟ್ಟರು ಸಾಧ್ಯವಾಗದೇ ಇರುವಷ್ಟು ಭಾರೀ ಪ್ರಮಾಣದಲ್ಲೇ ಬೆಂಕಿ ಕಾಣಿಸಿಕೊಂಡಿತ್ತು. ಸೆಟ್ ಹಾಗೂ ಶೂಟಿಂಗ್ ಗಾಗಿ ಬಳಸುತ್ತಿದ್ದ ಪರಿಕರಗಳು ಕೂಡ ಬೆಂಕಿಗೆ ಆಹುತಿಯಾಗಿವೆ. ಇದನ್ನೂ ಓದಿ:ರಾಜಕಾರಣ ಬದಿಗಿಟ್ಟು ಪುತ್ರನ ಮದುವೆಗೆ ಮುಖ್ಯಮಂತ್ರಿಯನ್ನು ಆಹ್ವಾನಿಸಿದ ಸುಮಲತಾ

    ತೆಲಂಗಾಣದ ದುಂಡಿಗಲ್ ನ ಬೀರಂಪೇಟೆಯಲ್ಲಿ ಅದ್ದೂರಿ ಸೆಟ್ ಹಾಕಲಾಗಿತ್ತು. ಸಿನಿಮಾದ ಬಹುತೇಕ ಶೂಟಿಂಗ್ ಇದೇ ಸೆಟ್ ನಲ್ಲೇ ನಡೆದಿದೆ ಎಂದು ಹೇಳಲಾಗುತ್ತಿದೆ. ಶೇಕಡಾ 75ರಷ್ಟು ಇದೇ ಸೆಟ್ ನಲ್ಲೇ ಚಿತ್ರೀಕರಣವಾಗಿದ್ದು, ಬಾಕಿ ಉಳಿದ ಚಿತ್ರೀಕರಣಕ್ಕಾಗಿ ಮತ್ತೆ ಸೆಟ್ ಹಾಕಬೇಕಾದ ಅನಿವಾರ್ಯತೆ ಎದುರಾಗಿದೆ.

    17ನೇ ಶತಮಾನದ ಕಥೆಯನ್ನು ಹೊಂದಿರುವ ಸಿನಿಮಾ ಇದಾಗಿದ್ದು, ಇದೇ ಮೊದಲ ಬಾರಿಗೆ ಪವನ್ ಕಲ್ಯಾಣ್ ಐತಿಹಾಸಿಕ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಬಿ ಡಿಯೋಲ್, ನಿಧಿ ಅಗರ್ವಾಲ್, ನರ್ಗಿಸ್ ಫಕ್ರಿ ಸೇರಿದಂತೆ ಹೆಸರಾಂತ ತಾರಾಬಳಗವೇ ಈ ಸಿನಿಮಾದಲ್ಲಿದೆ. ಕ್ರಿಶ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.