Tag: ಹರ್ಷ

  • ಜೈಲಾಧಿಕಾರಿಗಳ ಜೊತೆ ಕಿರಿಕ್‌ – ಹರ್ಷ ಕೊಲೆ ಆರೋಪಿಗಳಿಗೆ ಜೈಲಿನಲ್ಲಿ ಕ್ಲಾಸ್‌

    ಜೈಲಾಧಿಕಾರಿಗಳ ಜೊತೆ ಕಿರಿಕ್‌ – ಹರ್ಷ ಕೊಲೆ ಆರೋಪಿಗಳಿಗೆ ಜೈಲಿನಲ್ಲಿ ಕ್ಲಾಸ್‌

    ಬಳ್ಳಾರಿ: ಶಿವಮೊಗ್ಗ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಆಟಾಟೋಪಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರದ ಬೆನ್ನಲ್ಲೇ ಕಾರಾಗೃಹ ಇಲಾಖೆಯ ಡಿಐಜಿ ಶೇಷಾ ಬಳ್ಳಾರಿ ಜೈಲಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

    ಆರೋಪಿಗಳಾದ ಜಿಲಾನ್ ಹಾಗೂ ಸೈಯದ್ ಇಬ್ಬರೂ ಜೈಲಿನಲ್ಲಿರೋ ಹಳೆಯ ವಿಡಿಯೋ ವೈರಲ್ ಮಾಡುವುದಾಗಿ ಜೈಲಿನ ಸಿಬ್ಬಂದಿಗೆ ಬೆದರಿಕೆ ಹಾಕುತ್ತಿದ್ದರು. ಅಲ್ಲದೇ ಸಿಬ್ಬಂದಿ ಜೊತೆ ಕಿರಿಕ್ ಮಾಡುತ್ತಾ ದಾಂಧಲೆ ಮಾಡುತ್ತಿದ್ದರು. ಈ ಕುರಿತು ವಿಡಿಯೋ ಸಮೇತವಾಗಿ ಪಬ್ಲಿಕ್ ಟಿವಿ ವರದಿ ಬಿತ್ತರಿಸಿತ್ತು.  ಇದನ್ನೂ ಓದಿ: Chinnaswamy Stampede| ಕುಮಾರಸ್ವಾಮಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡ!

    ವರದಿ ಬೆನ್ನಲ್ಲೇ ಕಾರಾಗೃಹ ಇಲಾಖೆ ವರದಿ ಕೇಳಿದೆ. ಕೈದಿಗಳು ಯಾವ ವಿಡಿಯೋ ಇಟ್ಟುಕೊಂಡು ಕೈದಿಗಳು ಬ್ಲಾಕ್ ಮೇಲ್ ಮಾಡ್ತಿದ್ದಾರೆ? ಜೈಲು ಸಿಬ್ಬಂದಿ ಜೊತೆ ಕೈದಿಗಳು ಜಗಳವಾಡುತ್ತಿರುವ ವಿಡಿಯೋ ಹೊರಗೆ ಹೋಗಿದ್ದೇಗೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ತನಿಖೆ ಬಂದಿರುವ ಡಿಐಜಿ ಶೇಷಾ, ಸಿಬ್ಬಂದಿ ಜೊತೆ ಕಿರಿಕ್ ಮಾಡಿದ್ದ ಆರೋಪಿಗಳಿಗೆ ಕ್ಲಾಸ್ ಮಾಡಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ಸರ್ಕಾರಕ್ಕೆ ಪತ್ರ – ಪ್ರಶ್ನೆ ಕೇಳಿದ್ದಕ್ಕೆ ಉತ್ತರ ನೀಡದೇ ತೆರಳಿದ ಡಿಕೆಶಿ

    ಶಿವಮೊಗ್ಗದಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ ಹರ್ಷ
    ಶಿವಮೊಗ್ಗದಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ ಹರ್ಷ

    ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯ್ಯದ್ ಅವರನ್ನು ಕಳೆದ ತಿಂಗಳು ಧಾರವಾಡದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಈ ಇಬ್ಬರೂ ಜೈಲಿನ ಸಿಬ್ಬಂದಿ, ಅಧಿಕಾರಿಗಳ ಜೊತೆ ನಿತ್ಯ ಜಗಳ ಮಾಡಿ ಅವಾಜ್ ಹಾಕಿ, ಕಿರಿಕ್ ಮಾಡುತ್ತಿದ್ದಾರೆ. ಕಿರಿಕ್‌ ಮಾಡುತ್ತಿರುವ ವಿಡಿಯೋ ಹೊರಬಂದಿತ್ತು. Exclusive | ಮತ್ತೊಂದು ಭಂಡಾಟ ಬಯಲು – ಸಿಬ್ಬಂದಿ, ಸಮಯಾವಕಾಶದ ಕೊರತೆ ಅಂದ್ರೂ ಡೋಂಟ್ ಕೇರ್ ಅಂದಿದ್ದ ಸರ್ಕಾರ

    ಜೈಲಿನಲ್ಲಿ ಬೇರೇ ಬೇರೆ ಕೋಣೆಗೆ ಅಥವಾ ಜೈಲರ್ ಕೊಠಡಿಗೆ ಹೋಗುವಾಗ ಕಡ್ಡಾಯವಾಗಿ ಚೆಕಪ್ ಮಾಡಲಾಗುತ್ತದೆ. ಆದರೆ ನಮ್ಮನ್ನು ನೀವು ಪರಿಶೀಲನೆ ಮಾಡಬೇಡಿ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ಸಣ್ಣ ಪುಟ್ಟ ವಿಚಾರಕ್ಕೂ ಜೈಲು ಸಿಬ್ಬಂದಿಯನ್ನು ಆರೋಪಿಗಳು ನಿಂದಿಸುತ್ತಿದ್ದಾರೆ.

    ಆರೋಪಿಗಳು ಇದೇ ರೀತಿ ಕಿರಿಕ್ ಮಾಡಿ ಬೆಂಗಳೂರು, ಗುಲ್ಬರ್ಗ, ಧಾರವಾಡ ಜೈಲಿಗೆ ಹೋಗಿದ್ದರು. ಈಗ ಅದೇ ಚಾಳಿಯನ್ನು ಬಳ್ಳಾರಿ ಜೈಲಿನಲ್ಲೂ ಮುಂದುವರಿಸುತ್ತಿದ್ದಾರೆ.

  • ಜೈಲಿನಲ್ಲಿ ನಿತ್ಯ ಒಂದೊಂದು ಸೌಲಭ್ಯ ನೀಡುವಂತೆ ಹರ್ಷ ಕೊಲೆ ಆರೋಪಿಗಳು ಕಿರಿಕ್‌

    ಜೈಲಿನಲ್ಲಿ ನಿತ್ಯ ಒಂದೊಂದು ಸೌಲಭ್ಯ ನೀಡುವಂತೆ ಹರ್ಷ ಕೊಲೆ ಆರೋಪಿಗಳು ಕಿರಿಕ್‌

    – ಬಳ್ಳಾರಿ ಜೈಲಿನಲ್ಲಿರುವ ಜಿಲಾನ್, ಸೈಯ್ಯದ್ ನಿಹಾಲ್

    ಬಳ್ಳಾರಿ: ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ (Harsha Muder Case)  ಆರೋಪಿಗಳು ಬಳ್ಳಾರಿ ಜೈಲಿನಲ್ಲಿ (Ballari Jail) ರಂಪಾಟ ಮಾಡುತ್ತಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯ್ಯದ್ ನಿಹಾಲ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಇಬ್ಬರೂ ಜೈಲಿನ ಸಿಬ್ಬಂದಿ, ಅಧಿಕಾರಿಗಳ ಜೊತೆ ನಿತ್ಯ ಜಗಳ ಮಾಡಿ ಅವಾಜ್ ಹಾಕಿ, ಕಿರಿಕ್ ಮಾಡುತ್ತಿದ್ದಾರೆ. ಕಿರಿಕ್‌ ಮಾಡುತ್ತಿರುವ ವಿಡಿಯೋ ಈಗ ಲಭ್ಯವಾಗಿದೆ.

    ನಿತ್ಯ ಒಂದೊಂದು ಸೌಲಭ್ಯ ಕೇಳಿ ಜೈಲು ಸಿಬ್ಬಂದಿಗೆ ಧಮ್ಕಿ ಹಾಕುತ್ತಿದ್ದಾರೆ. ಜೈಲಿನಲ್ಲಿ ನಡೆದ ಹಳೆ ಘಟನೆಗಳ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಹೇಳುತ್ತಿದ್ದಾರೆ. ನಮ್ಮನ್ನು ಸಾಮಾನ್ಯ ಕೈದಿಗಳಂತೆ ಟ್ರೀಟ್ ಮಾಡಿ ಪ್ರತ್ಯೇಕ ಕೊಠಡಿ ಕೊಡಿ, ವಿಶೇಷ ಸೌಲಭ್ಯ ನೀಡಿ ಎಂದು ಇಬ್ಬರು ಗಲಾಟೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಯೋಧರಿಂದಲೇ `ಆಪರೇಷನ್ ಸಿಂಧೂರ’ ಲೋಗೋ ವಿನ್ಯಾಸ

    ಶಿವಮೊಗ್ಗದಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ ಹರ್ಷ

    ಜೈಲಿನಲ್ಲಿ ಬೇರೇ ಬೇರೆ ಕೋಣೆಗೆ ಅಥವಾ ಜೈಲರ್ ಕೊಠಡಿಗೆ ಹೋಗುವಾಗ ಕಡ್ಡಾಯವಾಗಿ ಚೆಕಪ್ ಮಾಡಲಾಗುತ್ತದೆ. ಆದರೆ ನಮ್ಮನ್ನು ನೀವು ಪರಿಶೀಲನೆ ಮಾಡಬೇಡಿ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ಸಣ್ಣ ಪುಟ್ಟ ವಿಚಾರಕ್ಕೂ ಜೈಲು ಸಿಬ್ಬಂದಿಯನ್ನು ಆರೋಪಿಗಳು ನಿಂದಿಸುತ್ತಿದ್ದಾರೆ. ಇದನ್ನೂ ಓದಿ: ಮಹಿಂದ್ರಾ ಥಾರ್‌, ರಾಯಲ್‌ ಎನ್‌ಫೀಲ್ಡ್‌, ರೋಲೆಕ್ಸ್ ವಾಚ್‌, 1 ಕೋಟಿ ಮೌಲ್ಯದ ಫ್ಲಾಟ್‌ ಹೊಂದಿದ್ದ ಲೇಡಿ ಕಾನ್‌ಸ್ಟೇಬಲ್‌ ಅರೆಸ್ಟ್‌!

    ಆರೋಪಿಗಳು ಇದೇ ರೀತಿ ಕಿರಿಕ್ ಮಾಡಿ ಬೆಂಗಳೂರು, ಗುಲ್ಬರ್ಗ, ಧಾರವಾಡ ಜೈಲಿಗೆ ಹೋಗಿದ್ದರು. ಈಗ ಅದೇ ಚಾಳಿಯನ್ನು ಬಳ್ಳಾರಿ ಜೈಲಿನಲ್ಲೂ ಮುಂದುವರಿಸುತ್ತಿದ್ದಾರೆ.

  • Exclusive: ನೀಲಿ ಚಿತ್ರದಲ್ಲಿ ಆಕ್ಟ್‌ ಮಾಡ್ತೀಯಾ ಎಂದು ಕೇಳಿದ್ರಾ ಹರ್ಷ? ಸ್ಪಷ್ಟನೆ ನೀಡಿದ ನಟ

    Exclusive: ನೀಲಿ ಚಿತ್ರದಲ್ಲಿ ಆಕ್ಟ್‌ ಮಾಡ್ತೀಯಾ ಎಂದು ಕೇಳಿದ್ರಾ ಹರ್ಷ? ಸ್ಪಷ್ಟನೆ ನೀಡಿದ ನಟ

    ನ್ನಡದ ‘ಪೆಂಟಗನ್’ (Pentagon) ಚಿತ್ರದ ನಟಿ ತನಿಷಾ ಕುಪ್ಪಂಡ (Tanisha Kuppanda)  ಕಳೆದೆರೆಡು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಯುಟ್ಯೂಬರ್‌ಯೊಬ್ಬ ಬ್ಲೂಫಿಲ್ಮ್ ಮಾಡ್ತೀರಾ ಎಂದು ಕೇಳಿದ್ದಕ್ಕೆ ನಟಿ ಖಡಕ್ ಕ್ಲಾಸ್ ತೆಗೆದುಕೊಂಡಿದ್ದರು. ಬಳಿಕ ‘ರಾಜಹುಲಿ’ (Rajahuli) ನಟ ಹರ್ಷ (Harsha) ವಿರುದ್ಧ ತನಿಷಾ ಆರೋಪಿಸಿದ್ದರು. ಅಸಭ್ಯ ಸಂದೇಶ ಕಳುಹಿಸಿದ್ದಾರೆ ಎಂದು ಮಾಧ್ಯಮದ ಮುಂದೆ ಕಣ್ಣೀರಿಟ್ಟಿದ್ದರು. ತನಿಷಾ ಮಾಡಿರುವ ಆರೋಪಕ್ಕೆ ಪಬ್ಲಿಕ್ ಟಿವಿ ಡಿಜಿಟಲ್‌ಗೆ ನಟ ಹರ್ಷ ಸ್ಪಷ್ಟನೆ ನೀಡಿದ್ದಾರೆ.

    ‘ಮಂಗಳ ಗೌರಿ’ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ನಟಿಸಿರುವ ತನಿಷಾ ಕುಪ್ಪಂಡ ಸದ್ಯ ‘ಪೆಂಟಗನ್’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗೆ ನೀಡಿದ ಸಂದರ್ಶನವೊಂದರಲ್ಲಿ, ನೀವು ನೀಲಿ ಚಿತ್ರದಲ್ಲಿ ನಟಿಸಲು ಸಿದ್ಧವಿದ್ದೀರಾ? ಎಂದು ಓರ್ವ ಯೂಟ್ಯೂಬರ್ ಪ್ರಶ್ನೆ ಮಾಡಿದ್ದರು. ಆಗ ಸಿಟ್ಟಾದ ತನಿಷಾ ಕುಪ್ಪಂಡ ಹಾಗಿದ್ರೆ ನಾನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರಬಾರದಿತ್ತು. ನೀಲಿ ಸಿನಿಮಾ ಇಂಡಸ್ಟ್ರಿಯಲ್ಲೇ ಇರಬೇಕಿತ್ತು. ಬೋಲ್ಡ್ ಆಗಿ ನಟಿಸಿದ್ದೀವಿ ಅಂದ ಮಾತ್ರಕ್ಕೆ. ಈ ತರಹ ಪ್ರಶ್ನೆ ಕೇಳೋದ್ರಲ್ಲಿ ಅರ್ಥವೇ ಇಲ್ಲ. ನೀಲಿ ಚಿತ್ರದ ತಾರೆಯರು ಬೆತ್ತಲಾಗುತ್ತಾರೆ. ನಾನು ನೀಲಿ ಚಿತ್ರದ ತಾರೆಯಲ್ಲ. ಯಾಕೆ ಈ ರೀತಿ ಪ್ರಶ್ನೆ ಮಾಡ್ತಿದ್ದೀರಾ.? ಪ್ರಶ್ನೆ ಮಾಡೋಕೂ ಮುನ್ನ ನಿಮಗೆ ಕಾಮನ್ ಸೆನ್ಸ್ ಇರಬೇಕು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರು ಬೆತ್ತಲೆ ಸಿನಿಮಾ ಮಾಡ್ತಿದ್ದಾರೆ? ಯಾಕೆ ಈ ರೀತಿ ಅಸಭ್ಯವಾಗಿ ಪ್ರಶ್ನೆಯನ್ನ ಕೇಳುತ್ತಿದ್ದೀರಾ? ಎಂದು ತನಿಷಾ ಖಡಕ್ ಉತ್ತರ ನೀಡಿದ್ದರು. ಇದನ್ನೂ ಓದಿ: ಕಿಸ್ಸಿಂಗ್ ಪ್ರಕರಣ: 16 ವರ್ಷಗಳ ನಂತರ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್

    ನಟ ಹರ್ಷ ಕೂಡ ನೀಲಿ ಸಿನಿಮಾ ಮಾಡ್ತೀರಾ ಎಂದು ಕೇಳಿದ್ದರು. ಅಸಭ್ಯ ಸಂದೇಶ ಕಳುಹಿಸಿದ್ದಾರೆ ಎಂದು ತನಿಷಾ ಆರೋಪಿಸಿದರು. ಈ ಬೆನ್ನಲ್ಲೇ ನಟ ಹರ್ಷ ಕೂಡ ತನಿಷಾ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮತ್ತು ತನಿಷಾ ಒಳ್ಳೆಯ ಸ್ನೇಹಿತರು. ನೀಲಿ ಚಿತ್ರದ ಬಗ್ಗೆ ಕೇಳಿದ್ದ ಯುಟ್ಯೂಬರ್ ವೈರಲ್ ವೀಡಿಯೋಗೆ ಪ್ರತಿಕ್ರಿಯಿಸಿ, ನಾನು ಸಂದೇಶ ಕಳಿಸಿದ್ದೇ ನಿಜ. ಆದರೆ ಯಾವುದೇ ಕೆಟ್ಟ ಆಲೋಚನೆಯಿಂದ ಅಲ್ಲ. ಬ್ಲೂಫಿಲ್ಮ್ ಮಾಡ್ತೀರಾ ಎಂದು ಆ ಯುಟ್ಯೂಬರ್ ಹೀಗ್ಯಾಕೆ ಕೇಳಿದ್ದರು ಎಂದು ಪ್ರಶ್ನೆ ಮಾಡುವ ರೀತಿಯಲ್ಲಿ ನಗುವಿನ ಇಮೋಜಿ ಕಳುಹಿಸಿದೆ ಅಷ್ಟೇ. ಆ ಸಂದೇಶವೇ ಈ ಗೊಂದಲಕ್ಕೆ ಕಾರಣವಾಗಿದೆ. ಅನ್ಯತಾ ಭಾವಿಸಬಾರದು ಎಂದು ಮತ್ತೆ ವಾಯ್ಸ್ ನೋಟ್ ಕಳುಹಿಸಿದ್ದೀನಿ. ಯುಟ್ಯೂಬರ್ ಯಾಕೆ ಹೀಗೆ ಪ್ರಶ್ನೆ ಮಾಡಿದ್ದರು ಎಂದು ಕೇಳಿದ್ದೀನಿ. ಅದು ಬಿಟ್ಟು ನೀಲಿ ಸಿನಿಮಾದಲ್ಲಿ ಆಕ್ಟ್ ಮಾಡ್ತೀರಾ ಎಂದು ನಾನು ಪ್ರಶ್ನೆ ಮಾಡಿಲ್ಲ. ಎಲ್ಲವೂ ನಾವು ಅರ್ಥ ಮಾಡಿಕೊಳ್ಳುವ ದೃಷ್ಟಿಕೋನದಲ್ಲಿದೆ ಎಂದು ನಟ ಹರ್ಷ ಸ್ಪಷ್ಟನೆ ನೀಡಿದ್ದಾರೆ.

    ಇನ್ನೂ ತನಿಷಾ ಅವರನ್ನು ಕೆಟ್ಟ ಆಲೋಚನೆಯಿಂದ ನಾನು ಸಂದೇಶ ಕಳುಹಿಸಿಲ್ಲ. ಇದೀಗ ಅವರ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಪ್ರಚಾರಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ತನಿಷಾ ಅವರ ನಡೆ ಎಷ್ಟು ಸರಿ ಎಂದು ಹರ್ಷ ಪ್ರಶ್ನೆ ಮಾಡಿದ್ದಾರೆ. ನಟಿಯಾಗಿ ಬೋಲ್ಡ್ ಸಿನಿಮಾದಲ್ಲಿ ನಟಿಸಿದ ಮೇಲೆ ಬೋಲ್ಡ್ ಪ್ರಶ್ನೆಗಳನ್ನ ಕೂಡ ಎದುರಿಸಲು ರೆಡಿಯಾಗಿಬೇಕು ಎಂದು ಹರ್ಷ ಮಾತನಾಡಿದ್ದಾರೆ.

    ಶೃತಿ ರಿಪ್ಪನ್‌ಪೇಟೆ, ಪಬ್ಲಿಕ್‌ ಟಿವಿ ಡಿಜಿಟಲ್‌ 

  • ಒಟಿಟಿಯಲ್ಲೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ವೇದ’ ಹೊಸ ರೆಕಾರ್ಡ್

    ಒಟಿಟಿಯಲ್ಲೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ವೇದ’ ಹೊಸ ರೆಕಾರ್ಡ್

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (ShivrajKumar) ಅಭಿನಯದ 125ನೇ ಸಿನಿಮಾ ‘ವೇದ’ (Veda) ಚಿತ್ರಮಂದಿರದಲ್ಲಿ ರೆಕಾರ್ಡ್ ಕ್ರಿಯೇಟ್ ಮಾಡಿದ್ದು ಗೊತ್ತೇ ಇದೆ. ಚಿತ್ರಮಂದಿರದಲ್ಲಿ ಸೂಪರ್ ಸಕ್ಸಸ್ ಕಂಡ ಸಿನಿಮಾ ಫೆಬ್ರವರಿ 10ರಂದು ZEE5ನಲ್ಲಿ ಬಿಡುಗಡೆಗೊಂಡು ಇಲ್ಲಿಯೂ ಹೊಸ ದಾಖಲೆ ಬರೆದಿದೆ. ಬಿಡುಗಡೆಯಾದ ಕೆಲವೇ ದಿನದಲ್ಲಿ 125 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಸ್ ಕಂಡು ರೆಕಾರ್ಡ್ (Record) ಕ್ರಿಯೇಟ್ ಮಾಡಿದೆ. ಇದೇ ಖುಷಿಯಲ್ಲಿ ZEE5 ಸಂತೋಷ್ ಚಿತ್ರಮಂದಿರದಲ್ಲಿ ಸಂಭ್ರಮ ಆಚರಿಸಿದೆ.

    ಸಂತೋಷ್ ಚಿತ್ರಮಂದಿರದಲ್ಲಿ ‘ವೇದ’ ಚಿತ್ರದ ಶಿವಣ್ಣ ಕಟೌಟ್ ನಿಲ್ಲಿಸಿ ZEE5 ಸಂಭ್ರಮ ಆಚರಣೆ ಮಾಡಿದೆ. ಈ ಸಂಭ್ರಮಾಚರಣೆಯಲ್ಲಿ ದೊಡ್ಮನೆ ಅಭಿಮಾನಿಗಳು ಭಾಗಿಯಾಗಿ ಸಂತಸ ಪಟ್ಟಿದ್ದಾರೆ. ಒಟಿಟಿಯಲ್ಲಿ ಅತಿ ಕಡಿಮೆ ಅವಧಿಯಲ್ಲಿ 125 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಸ್ ಕಂಡಿದ್ದು ZEE5 ನಲ್ಲಿ ದಾಖಲೆ ಬರೆದಿದೆ. ಈ ಮೂಲಕ ಚಿತ್ರಮಂದಿರದ ಜೊತೆಗೆ ZEE5 ಒಟಿಟಿಯಲ್ಲೂ ಸಿನಿಮಾ ಹೊಸ ದಾಖಲೆ ತನ್ನದಾಗಿಸಿಕೊಂಡಿದೆ. ಇದನ್ನೂ ಓದಿ ಸ್ವೀಟ್‌ ಹಾರ್ಟ್‌ಗೆ ವಿಶ್‌ ಮಾಡಿದ ರಿಷಬ್ ಶೆಟ್ಟಿ

    ‘ವೇದ’ ಸಿನಿಮಾ ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್ ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ. ಸಾಕಷ್ಟು ನಿರೀಕ್ಷೆಯೊಂದಿಗೆ ಡಿಸೆಂಬರ್ 23ರಂದು ಬಿಡುಗಡೆಗೊಂಡಿತ್ತು. ಗೀತಾ ಶಿವರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾವಾಗಿರುವ ಈ ಚಿತ್ರ ಶಿವಣ್ಣ ಅಭಿನಯದ 125ನೇ ಸಿನಿಮಾ ಅನ್ನೋದು ಚಿತ್ರದ ವಿಶೇಷ.

    ಚಿತ್ರದಲ್ಲಿ ಗಾನವಿ ಲಕ್ಷ್ಮಣ್, ಶ್ವೇತ ಚೆಂಗಪ್ಪ, ಉಮಾಶ್ರೀ, ಅದಿತಿ ಸಾಗರ್, ವೀಣಾ ಪೊನ್ನಪ್ಪ, ಕುರಿ ಪ್ರತಾಪ್, ಲಾಸ್ಯ ನಾಗರಾಜ್ ಸೇರಿದಂತೆ ಬಹುದೊಡ್ಡ ತಾರಗಣ ‘ವೇದ’ ಚಿತ್ರದಲ್ಲಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಚಿತ್ರದ ಹಾಡುಗಳು ಮೋಡಿ ಮಾಡಿದ್ದು, ಸ್ವಾಮಿ ಜೆ ಗೌಡ ಛಾಯಾಗ್ರಹಣ, ದೀಪು.ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ.

  • ಶಿವಮೊಗ್ಗ ಮತ್ತೆ ಉದ್ವಿಗ್ನ – ಹರ್ಷನ ಮನೆ ಮುಂದೆ ಲಾಂಗು, ಮಚ್ಚು ಹಿಡಿದು ಓಡಾಟ

    ಶಿವಮೊಗ್ಗ ಮತ್ತೆ ಉದ್ವಿಗ್ನ – ಹರ್ಷನ ಮನೆ ಮುಂದೆ ಲಾಂಗು, ಮಚ್ಚು ಹಿಡಿದು ಓಡಾಟ

    ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸೀಗೆಹಟ್ಟಿಯ ಹಿಂದೂ ಕಾರ್ಯಕರ್ತ ಮೃತ ಹರ್ಷ (Harsha) ಕುಟುಂಬಸ್ಥರಿಗೆ ಬೆದರಿಕೆ ಬಂದಿದೆ.

    ಸೀಗೆಹಟ್ಟಿಯ ನಿವಾಸ, ರವಿ ವರ್ಮ ಬೀದಿ, ಕೆ.ಆರ್ ಪುರಂ ರಸ್ತೆ ಮುಂತಾದೆಡೆ 2 ಬೈಕ್‍ಗಳಲ್ಲಿ ಬಂದ 6 ಮಂದಿ ಮುಸ್ಲಿಂ ಯುವಕರು ಮಚ್ಚು-ಲಾಂಗ್ ಹಿಡಿದು ಭಯ ಹುಟ್ಟಿಸಿದ್ದಾರೆ. ಮುಸ್ಲಿಂ ಪರ ಘೋಷಣೆ ಕೂಗುತ್ತಾ, ಲಾಂಗ್ ಬೀಸಿದ್ದಾರೆ.

    ಮತ್ತೊಂದೆಡೆ ಸಿಗೇಹಟ್ಟಿಯಲ್ಲಿ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆದಿದ್ದು, ಪ್ರಕಾಶ್ (25) ಎಂಬಾತ ಗಾಯಗೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದುಷ್ಕರ್ಮಿಗಳಿಂದ ಭಯ ಹುಟ್ಟಿಸೋ ಪ್ರಕರಣ- ನಮಗೆ ಸೂಕ್ತ ರಕ್ಷಣೆ ಬೇಕು: ಹರ್ಷ ಸಹೋದರಿ

    ನಿನ್ನೆಯಷ್ಟೇ ಆಜಾದ್ ನಗರದಲ್ಲಿ ಕಾರು ಜಖಂ ಪ್ರಕರಣಕ್ಕೆ ಸಂಬಂಧಿಸಿ ಹರ್ಷ ಸಹೋದರಿ ಅಶ್ವಿನಿ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಕಲ್ಲಪ್ಪನಕೇರಿಯಿಂದ ಅಜಾನ್ ನಗರಕ್ಕೆ ಬೈಕ್‍ನಲ್ಲಿ ಬಂದ 10 ರಿಂದ 15 ಜನರ ಗುಂಪು ಸಯ್ಯದ್ ಫರ್ವೀಜ್ ಎಂಬವರಿಗೆ ಸೇರಿದ್ದ ಇನ್ನೋವಾ ಕಾರನ್ನು ಜಖಂ ಮಾಡಿದ್ದರು. ಈ ವೇಳೆ ಕಾರಿನ ಎಡಭಾಗದ ಹೆಡ್ ಲೈಟ್, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್ ಹಾನಿಯಾಗಿತ್ತು. ಅಷ್ಟೇ ಅಲ್ಲದೇ ಆ ಗುಂಪು ಜೈ ಶ್ರೀರಾಮ್ ಎಂದು ಕೂಗುತ್ತಾ ಕೇಸರಿ ಬಾವುಟ ಹಿಡಿದುಕೊಂಡಿತ್ತು.

    ಘಟನೆಗೆ ಸಂಬಂಧಿಸಿ ಹರ್ಷನ ಸಹೋದರಿ ಅಶ್ವಿನಿ ಸೇರಿ 10-15 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಫೆ.20ರಂದು ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೀಡಾಗಿದ್ದ.

    Live Tv
    [brid partner=56869869 player=32851 video=960834 autoplay=true]

  • ದುಷ್ಕರ್ಮಿಗಳಿಂದ ಭಯ ಹುಟ್ಟಿಸೋ ಪ್ರಕರಣ- ನಮಗೆ ಸೂಕ್ತ ರಕ್ಷಣೆ ಬೇಕು: ಹರ್ಷ ಸಹೋದರಿ

    ದುಷ್ಕರ್ಮಿಗಳಿಂದ ಭಯ ಹುಟ್ಟಿಸೋ ಪ್ರಕರಣ- ನಮಗೆ ಸೂಕ್ತ ರಕ್ಷಣೆ ಬೇಕು: ಹರ್ಷ ಸಹೋದರಿ

    ಶಿವಮೊಗ್ಗ: ದುಷ್ಕರ್ಮಿಗಳಿಂದ ಭಯ ಹುಟ್ಟಿಸುವ ಪ್ರಕರಣ ಹಿನ್ನೆಲೆಯಲ್ಲಿ ಇದೀಗ ನಮಗೆ ಸೂಕ್ತ ರಕ್ಷಣೆ ಬೇಕು ಎಂದು ಹಿಂದೂ ಕಾರ್ಯಕರ್ತ ದಿ. ಹರ್ಷ (Harsha) ಸಹೋದರಿ ಅಶ್ವಿನಿ (Ashwini) ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಗೆ ಹರ್ಷ ತಾಯಿ ಪದ್ಮಾವತಿ ಹಾಗೂ ಹರ್ಷ ಸಹೋದರಿ ಅಶ್ವಿನಿ ಮಾತನಾಡಿ, ರಾತ್ರಿ 11.15 ರ ಸಮಯಕ್ಕೆ 3-4 ಬೈಕ್ ನಲ್ಲಿ ಯುವಕರು ಬಂದಿದ್ದರು. ಮಾರಕಾಸ್ತ್ರ ಹಿಡಿದುಕೊಂಡು ಓಡಾಡುತ್ತಿದ್ದರು ಎಂದು ಹೇಳಿದರು.

    ಹರ್ಷನ ತೆಗೆದಿದ್ದು ಸಾಲದಾ, ನಿಮ್ಮನ್ನೂ ತೆಗೆಯಬೇಕಾ. ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಯುವಕರ ಗುಂಪು ಅವಾಜ್ ಹಾಕಿದ್ದಾರೆ. ಇನ್ನು ಎಷ್ಟು ಮಂದಿ ಹಿಂದೂ ಯುವಕರ ಬಲಿಯಾಗಬೇಕು..?. ನನ್ನ ಸಹೋದರ ಹರ್ಷ ಹೋದ, ಪ್ರವೀಣ್ ನೆಟ್ಟಾರ್ (Praveen Nettar) ಹೋದ. ಆದರೂ ಅವರ ದಾಹ ಇನ್ನೂ ತೀರಿಲ್ಲ. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನಮಗೆ ಸೂಕ್ತ ರಕ್ಷಣೆ ಕೊಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಆಜಾದ್ ನಗರದಲ್ಲಿ ಕಾರು ಜಖಂ – ಹರ್ಷ ಸಹೋದರಿ ಅಶ್ವಿನಿ ವಿರುದ್ಧ FIR

    ಸೀಗೆಹಟ್ಟಿಯ ನಿವಾಸ, ರವಿ ವರ್ಮ ಬೀದಿ, ಕೆ.ಆರ್ ಪುರಂ ರಸ್ತೆ ಮುಂತಾದೆಡೆ 2 ಬೈಕ್‍ಗಳಲ್ಲಿ ಬಂದ 6 ಮಂದಿ ಮುಸ್ಲಿಂ ಯುವಕರು ಮಚ್ಚು-ಲಾಂಗ್ ಹಿಡಿದು ಭಯ ಹುಟ್ಟಿಸಿದ್ದಾರೆ. ಮುಸ್ಲಿಂ ಪರ ಘೋಷಣೆ ಕೂಗುತ್ತಾ, ಲಾಂಗ್ ಬೀಸಿದ್ದಾರೆ. ಮತ್ತೊಂದೆಡೆ ಸಿಗೇಹಟ್ಟಿಯಲ್ಲಿ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆದಿದ್ದು, ಪ್ರಕಾಶ್ (25) ಎಂಬಾತ ಗಾಯಗೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಘಟನೆಗೆ ಸಂಬಂಧಿಸಿ ಹರ್ಷನ ಸಹೋದರಿ ಅಶ್ವಿನಿ ಸೇರಿ 10-15 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಫೆ.20ರಂದು ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೀಡಾಗಿದ್ದ.

    Live Tv
    [brid partner=56869869 player=32851 video=960834 autoplay=true]

  • ಆಜಾದ್ ನಗರದಲ್ಲಿ ಕಾರು ಜಖಂ – ಹರ್ಷ ಸಹೋದರಿ ಅಶ್ವಿನಿ ವಿರುದ್ಧ FIR

    ಆಜಾದ್ ನಗರದಲ್ಲಿ ಕಾರು ಜಖಂ – ಹರ್ಷ ಸಹೋದರಿ ಅಶ್ವಿನಿ ವಿರುದ್ಧ FIR

    ಶಿವಮೊಗ್ಗ: ಆಜಾದ್ ನಗರದಲ್ಲಿ ಕಾರು (Car) ಜಖಂ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ (Shivamogga) ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಹರ್ಷ (Harsha) ಸಹೋದರಿ ಅಶ್ವಿನಿ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ.

    ಕಲ್ಲಪ್ಪನಕೇರಿಯಿಂದ ಅಜಾನ್ ನಗರಕ್ಕೆ ಬೈಕ್‍ನಲ್ಲಿ (Bike) ಬಂದ 10ರಿಂದ 15 ಜನರ ಗುಂಪು ಸಯ್ಯದ್ ಫರ್ವೀಜ್ ಎಂಬವರಿಗೆ ಸೇರಿದ್ದ ಇನ್ನೋವಾ ಕಾರನ್ನು ಜಖಂ ಮಾಡಿದ್ದಾರೆ. ಈ ವೇಳೆ ಕಾರಿನ ಎಡಭಾಗದ ಹೆಡ್ ಲೈಟ್, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್ ಹಾನಿಯಾಗಿದೆ. ಅಷ್ಟೇ ಅಲ್ಲದೇ ಆ ಗುಂಪು ಜೈ ಶ್ರೀರಾಮ್ ಎಂದು ಕೂಗುತ್ತಾ ಕೇಸರಿ ಬಾವುಟ ಹಿಡಿದುಕೊಂಡಿತ್ತು ಎಂದು ಸಯ್ಯದ್ ಫರ್ವೀಜ್ ಆರೋಪಿಸಿದ್ದಾರೆ. ಇದನ್ನೂ ಓದಿ: 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್- ಓರ್ವ ಮಹಿಳೆ ಸೇರಿ ಮೂವರು ಅರೆಸ್ಟ್

    ಘಟನೆಗೆ ಸಂಬಂಧಿಸಿ ಹರ್ಷನ ಸಹೋದರಿ ಅಶ್ವಿನಿ ಸೇರಿ 10-15 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಫೆ.20ರಂದು ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೀಡಾಗಿದ್ದ. ಇದನ್ನೂ ಓದಿ: ಮೊಬೈಲ್‍ ನೋಡ್ತಿದ್ದಕ್ಕೆ ಗದರಿದ ತಾಯಿ – ಮನನೊಂದು ನೇಣಿಗೆ ಶರಣಾದ ಮಗಳು

    Live Tv
    [brid partner=56869869 player=32851 video=960834 autoplay=true]

  • ಶಿವಮೊಗ್ಗ ಅದ್ಧೂರಿ ಗಣೇಶೋತ್ಸವಕ್ಕೆ ತೆರೆ

    ಶಿವಮೊಗ್ಗ ಅದ್ಧೂರಿ ಗಣೇಶೋತ್ಸವಕ್ಕೆ ತೆರೆ

    ಶಿವಮೊಗ್ಗ: ರಾಜ್ಯದ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಅದ್ಧೂರಿ ಗಣೇಶೋತ್ಸವಕ್ಕೆ ತೆರೆ ಬಿದ್ದಿದೆ.

    ಮೆರವಣಿಗೆ ಮೂಲಕ ಮುಂಜಾನೆ 3 ಗಂಟೆಗೆ ಗಣಪತಿಯನ್ನು ವಿಸರ್ಜನೆ ಮಾಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ಬಣ್ಣ ಬಣ್ಣದ ಲೈಟ್‍ಗಳ ಮಧ್ಯೆ ಡಿಜೆ ಸದ್ದಿಗೆ ಯುವಕರು ಹೆಜ್ಜೆ ಹಾಕಿದರು.

    ಶೋಭಾಯಾತ್ರೆಯಲ್ಲಿ ವೀರ ಸಾವರ್ಕರ್, ಗೋಡ್ಸೆ, ಹರ್ಷ, ಪ್ರವೀಣ್ ನೆಟ್ಟಾರು ಭಾವಚಿತ್ರಗಳು ರಾರಾಜಿಸಿದ್ದವು. ಕಲಾತಂಡಗಳು ಮೆರವಣಿಗೆಗೆ ಇನ್ನಷ್ಟು ಮೆರಗು ತಂದು ಕೊಟ್ಟವು. ಇದನ್ನೂ ಓದಿ: ಗಣಪತಿ ಶೋಭಾಯಾತ್ರೆ ವೇಳೆ ರಾಷ್ಟ್ರೀಯ ಲಾಂಛನಕ್ಕೆ ಅಪಮಾನ

    ಮಾರ್ಗದುದ್ದಕ್ಕೂ ಜೈ ಶ್ರೀ ರಾಮ್ ಘೋಷಣೆ, ಎಸ್‍ಪಿಎಂ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ ಹಾಗೂ ಪ್ರಮುಖ ರಸ್ತೆಗಳಲ್ಲಿ ಕೇಸರಿ ಬಾವುಟ, ವಿವಾದಿತ ಅಮೀರ್ ಅಹಮ್ಮದ್ ವೃತ್ತದಲ್ಲಿ ವೀರ ಸಾವರ್ಕರ್ ಬೃಹತ್ ಫ್ಲೆಕ್ಸ್ ರಾರಾಜಿಸಿತು.

    ನೆಹರೂ ರಸ್ತೆಯಲ್ಲಿ ಭಗತ್‍ಸಿಂಗ್, ಸ್ವಾಮಿ ವಿವೇಕಾನಂದ, ಅಂಬೇಡ್ಕರ್ ಸೇರಿ ಅನೇಕ ಮಹನೀಯರ ಕಟೌಟ್‍ಗಳನ್ನು ಹಾಕಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಶಿವಮೊಗ್ಗ ಹರ್ಷ ಕೊಲೆ ಸಂಚು ಬಹಿರಂಗ- ಹಿಂದೂ ಸಂಘಟನೆಗಳ ಸದ್ದಡಗಿಸಲು ಮರ್ಡರ್

    ಶಿವಮೊಗ್ಗ ಹರ್ಷ ಕೊಲೆ ಸಂಚು ಬಹಿರಂಗ- ಹಿಂದೂ ಸಂಘಟನೆಗಳ ಸದ್ದಡಗಿಸಲು ಮರ್ಡರ್

    – ಸಾವಿರ ಪುಟಗಳ ಚಾರ್ಜ್‍ಶೀಟ್‍ನಲ್ಲಿ ಅಚ್ಚರಿ ಸಂಗತಿ

    ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಹತ್ಯೆ ಹಿಂದಿನ ಸ್ಫೋಟಕ ರಹಸ್ಯ ಬಟಾಬಯಲಾಗಿದೆ. ಕೊಲೆ ಸಂಬಂಧ ತನಿಖೆ ನಡೆಸಿದ ಎನ್‍ಐಎ 10 ಆರೋಪಿಗಳ ಮೇಲೆ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದೆ. ಸಾವಿರ ಪುಟದ ಚಾರ್ಜ್‍ಶೀಟ್‍ನಲ್ಲಿ ಹತ್ಯೆ ಹಿಂದಿನ ಒಳಸಂಚು ಬಯಲಾಗಿದೆ.

    ಹೌದು, ಹರ್ಷ ಹತ್ಯೆ ಹಂತಕರ ಉದ್ದೇಶ ಹಿಂದೂ ಸಂಘಟನೆಯ ಒಬ್ಬರನ್ನ ಹತ್ಯೆ ಮಾಡಿ ಹಿಂದೂ ಸಂಘಟನೆಗಳನ್ನು ಬೆದರಿಸುವುದು. ಹಿಂದೂ ಸಂಘಟನೆಗಳ ಉಪಟಳಕ್ಕೆ ಬ್ರೇಕ್ ಹಾಕಬೇಕು ಅನ್ನೋ ಕಾರಣಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆ ಮಾಡೋದು ಉದ್ದೇಶ ಆಗಿತ್ತಂತೆ. ಆಗ ಹತ್ಯೆಗೆ ಸ್ಕೆಚ್ ಹಾಕಿದ್ದಾಗ ಕಣ್ಣಿಗೆ ಬಿದ್ದದ್ದು ಹರ್ಷ. ಇದನ್ನೂ ಓದಿ: ಖ್ಯಾತ ವೈದ್ಯ, ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಗುರುರಾಜ್ ಹೆಬ್ಬಾರ್ ನಿಧನ

    ಹಳೆಯ ದ್ವೇಷ ಇಟ್ಟುಕೊಂಡಿದ್ದ ಹರ್ಷನನ್ನ ಮುಗಿಸೋಕೆ ಪ್ಲಾನ್ ಮಾಡಿಕೊಂಡಿದ್ದ ಹಂತಕರು, 15 ದಿನಗಳ ಕಾಲ ಹೊಂಚು ಹಾಕಿ ಕೂತಿದ್ರು. ಹರ್ಷನ ಹಿಂದೆ ಹಿಂದೆ ಸುತ್ತಿ ಕೊನೆಗೆ ಹತ್ಯೆ ಮಾಡಿಮುಗಿಸಿದ್ದಾರೆಂದು ಎನ್‍ಐಎ ನ್ಯಾಯಾಲಯಕ್ಕೆ ಸಲ್ಲಿಸಿರೋ ದೋಷಾರೋಪ ಪಟ್ಟಿ ನಮೂದಿಸಲಾಗಿದೆ. ಹರ್ಷ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಹೀಗಾಗಿ ಹರ್ಷನನ್ನು ಕೊಲೆ ಮಾಡಿದ್ರೆ ಹಿಂದೂ ಸಂಘಟನೆಯವರೆಲ್ಲಾ ಹೆದರಿ ತಣ್ಣಗಾಗ್ತಾರೆ ಅನ್ನೋದು ಹಂತಕರ ಉದ್ದೇಶ ಅಂತ ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಮಾಜಿ ಸಚಿವ ಈಶ್ವರಪ್ಪ ಮಾತನಾಡಿ, ಹೇಡಿ ಕೊಲೆಗಾರರು ಹಿಂದೂ ಹುಲಿಗಳ ಕೊಂದರೆ ಹಿಂದುತ್ವ ನಾಶ ಆಗಲ್ಲ. ಇದೇ ಆಟ ಮುಂದುವರಿಸಿದರೆ ಅದಕ್ಕೆ ಸರಿಯಾದ ಬೆಲೆ ತೆತ್ತಬೇಕು ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಸದ್ಯ ಎನ್‍ಐಎ ಅಧಿಕಾರಿಗಳು ಎನ್‍ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. 10 ಆರೋಪಿಗಳ ಹೇಳಿಕೆ ತಾಂತ್ರಿಕ ಸಾಕ್ಷ್ಯಗಳ ಜೊತೆಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪರಿಚಯಸ್ಥನ ಪತ್ನಿಯನ್ನು ವರಿಸಲು ಸ್ಕೆಚ್ – ಶಿವಮೊಗ್ಗ ಅನಾಮಧೇಯ ಗಲಭೆ ಪತ್ರದ ರಹಸ್ಯ ಬಯಲು

    ಪರಿಚಯಸ್ಥನ ಪತ್ನಿಯನ್ನು ವರಿಸಲು ಸ್ಕೆಚ್ – ಶಿವಮೊಗ್ಗ ಅನಾಮಧೇಯ ಗಲಭೆ ಪತ್ರದ ರಹಸ್ಯ ಬಯಲು

    ಶಿವಮೊಗ್ಗ: ನಗರದಲ್ಲಿ ನಡೆದ ಕೋಮು ಸಂಘರ್ಷವನ್ನು ತನ್ನ ವೈಯಕ್ತಿಕ ತೆವಲಿಗೆ ಬಳಸಿಕೊಳ್ಳಲು ಹೋಗಿ ಇಲ್ಲೊಬ್ಬ ಸಿಕ್ಕಿಹಾಕಿಕೊಂಡಿದ್ದಾನೆ. ಶಿವಮೊಗ್ಗದಲ್ಲಿ ಮತ್ತೆ ಮೂವರನ್ನು ಕೊಲೆ ಮಾಡಬೇಕು. ಶಿವಮೊಗ್ಗದಲ್ಲಿ ಗಣಪತಿ ಹಬ್ಬ ಮಾಡಲು ಬಿಡಬಾರದು. ಮತ್ತೆ ನೆತ್ತರು ಹರಿಯಬೇಕು ಎಂದು ಹೇಳಿ ಮತ್ತೆ ಕೋಮು ದಳ್ಳುರಿ ನಡೆಯುವ ಕಪೋಲಕಲ್ಪಿತ ಕಥೆ ಕಟ್ಟಿ ಪತ್ರ ಬರೆದಿದ್ದ ಕಿಡಿಗೇಡಿಯ ಪತ್ರದ ಹಿಂದಿನ ಕಹಾನಿ ಇದೀಗ ಬಯಲಾಗಿದೆ.

    ಹೇಳಿ ಕೇಳಿ ಶಿವಮೊಗ್ಗ ಸೂಕ್ಷ್ಮ ಜಿಲ್ಲೆ. ಕಳೆದ ಹಲವಾರು ವರ್ಷಗಳಿಂದಲೂ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ದಳ್ಳುರಿ, ಆಗಿದ್ದಾಗೆ ಹೊತ್ತಿಕೊಳ್ಳುತ್ತಲೇ ಇರುತ್ತದೆ. ಕೋಮು ಸಂಘರ್ಷ ಉಂಟಾದಾಗಲೆಲ್ಲಾ ಶಿವಮೊಗ್ಗದಲ್ಲಿ ಅಶಾಂತಿ ಸೃಷ್ಟಿಯಾಗಿ, ಜನಜೀವನ ಅಸ್ತವ್ಯಸ್ತಗೊಳ್ಳುವುದು ಸಹಜ. ಅಂದಹಾಗೆ, ಇತ್ತೀಚಿಗಷ್ಟೇ, ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಮತ್ತು ಆ. 15 ರಂದು ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಕೆ ವೇಳೆಯೂ ಕೋಮು ಸಂಘರ್ಷ ಉಂಟಾಗಿ, ಇದರ ಕರಿ ನೆರಳು ಇದೀಗ ಗಣಪತಿ ಹಬ್ಬದ ಮೇಲೂ ಬಿದ್ದಿದೆ. ಇದೇ ಅವಕಾಶವನ್ನು ಕೆಲವು ಕಿಡಿಗೇಡಿಗಳು ಬಳಸಿಕೊಳ್ಳುತ್ತಿದ್ದು, ಶಿವಮೊಗ್ಗದಲ್ಲಿ ಮತ್ತೆ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಅನಾಮಧೇಯ ಪತ್ರವೊಂದನ್ನು ಬರೆದು, ಶಿವಮೊಗ್ಗದ ಗಾಂಧಿ ಬಜಾರ್‌ನ ಗಂಗಾ ಪರಮೇಶ್ವರಿ ದೇವಾಲಯದೊಳಗಿನ ನವಗ್ರಹಗಳ ಪಕ್ಕದಲ್ಲಿ ಎಸೆದು ಹೋಗಿದ್ದಾರೆ. ಈ ಪತ್ರ ಸಿಕ್ಕವರು ಕೂಡಲೇ ಪೊಲೀಸರಿಗೆ ತಿಳಿಸಿ ಎಂದು ಕೂಡ ಪತ್ರದ ಕವರ್ ಮೇಲೆ ಬರೆದಿದ್ದರಂತೆ. ಈ ಪತ್ರ ಸಿಕ್ಕಿದ ಕೂಡಲೇ, ದೇವಾಲಯದ ಪಕ್ಕದ ನಿವಾಸಿಯೊಬ್ಬರು ಕೂಡಲೇ ಅನಾಮಧೇಯ ಬೆದರಿಕೆ ಪತ್ರವನ್ನು ಪೊಲೀಸರಿಗೆ ಮುಟ್ಟಿಸಿದ್ದಾರೆ. ಶಿವಮೊಗ್ಗದಲ್ಲಿ ಗಣಪತಿ ಹಬ್ಬ ಮಾಡಲು ಬಿಡಬಾರದು. ಮಂಗಳೂರಿನಿಂದ ಜನರನ್ನು ಕರೆಸಿ ಗಲಾಟೆ ಮಾಡಿಸಬೇಕು. ಮೂವರ ಕೊಲೆಯಾಗಬೇಕು. ಮೊನ್ನೆ ಪ್ರೇಮ್ ಸಿಂಗ್ ಮೇಲೆ ನಡೆದ ಹಲ್ಲೆ ಅರ್ಧಂಬರ್ಧ ಆಗಿದೆ. ಎಂದು ಬೆದರಿಕೆಯುಳ್ಳ ಪತ್ರವನ್ನು ಬರೆದಿದ್ದರು. ಇದನ್ನು ಪ್ರಶಾಂತ್ ಎಂಬುವವರು ಕೋಟೆ ಠಾಣೆ ಪೊಲೀಸರಿಗೆ ನೀಡಿ, ಕೇಸು ಕೂಡ ದಾಖಲಾಗಿತ್ತು. ಇದನ್ನೂ ಓದಿ: ಗೊಡ್ಡು ಬೆದರಿಕೆಗಳಿಗೆ, ಹೇಡಿಗಳಿಗೆ ಹೆದರಲ್ಲ: ಬೆದರಿಕೆ ಪತ್ರಕ್ಕೆ ಈಶ್ವರಪ್ಪ ರಿಯಾಕ್ಟ್

    ಬಳಿಕ ಈ ಅನಾಮಧೇಯ ಪತ್ರದ ಜಾಡು ಹಿಡಿದು ಹೊರಟ ಪೊಲೀಸರಿಗೆ ಆಘಾತಕಾರಿ ಸುದ್ದಿಯೊಂದು ಹೊರಬೀಳಬಹುದೆಂಬ ಗುಮಾನಿ ಇತ್ತು. ಆದರೆ, ಹಾಗಾಗಲಿಲ್ಲ. ಪತ್ರದ ಜಾಡು ಹಿಡಿದು ಪತ್ರದಲ್ಲಿ ಉಲ್ಲೇಖವಾಗಿರುವ ವ್ಯಕ್ತಿಯಾಗಿದ್ದ ಮೊಹಮ್ಮದ್ ಫೈಜಲ್‍ನ ವಿಚಾರಣೆ ನಡೆಸಿದ ಬಳಿಕ, ನಾನೆಲ್ಲೂ ಶಿವಮೊಗ್ಗದಲ್ಲಿ ಗಲಾಟೆ ಮಾಡಿಸಬೇಕೆಂದು ಮಾತನಾಡಿಯೇ ಇಲ್ಲ. ಇದು ಬೇರೆ ಯಾರದೋ ಕೈವಾಡ ಇರಬಹುದೆಂದು ಪೊಲೀಸರಿಗೆ ತಿಳಿಸಿದ್ದಾನೆ. ಅಷ್ಟೇ ಅಲ್ಲ. ಇತ್ತೀಚಿಗಷ್ಟೇ ಅಯೂಬ್ ಖಾನ್ ಎಂಬುವವನು ನನ್ನ ವಿರುದ್ಧ ಜಿದ್ದು ಸಾಧಿಸುತ್ತೆನೆಂದು ಹೇಳಿದ್ದ ಎಂದು ಕೂಡ ಪೊಲೀಸರ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಅದಷ್ಟೇ ಸಾಕಿತ್ತು, ಅಯೂಬ್ ಖಾನ್‍ನ್ನು ಹುಡುಕಿ ತಂದ ಪೊಲೀಸರಿಗೆ ಆಶ್ಚರ್ಯದ ಜೊತೆಗೆ ಟ್ವಿಸ್ಟ್ ಕೂಡ ಕಾದಿತ್ತು. ಇಡೀ ಸ್ಟೋರಿಯೇ ಬದಲಾಗಿ ಹೋಗಿತ್ತು. ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದ ಅಯೂಬ್ ಖಾನ್, ಇಡೀ ಸ್ಟೋರಿಗೆ ಟ್ವಿಸ್ಟ್ ನೀಡಿ, ನನಗೆ ಫೈಜಲ್ ಪತ್ನಿ ಮೇಲೆ ವ್ಯಾಮೋಹ ಇತ್ತು. ಹೀಗಾಗಿ, ಫೈಜಲ್ ಜೈಲಿಗೆ ಹೋದರೆ, ಫೈಜಲ್ ಪತ್ನಿ ಜೊತೆ ನಾನು ಇರಬಹುದೆಂದು ನಿರ್ಧರಿಸಿ, ಈ ರೀತಿ ಫೈಜಲ್ ವಿರುದ್ಧವಾಗಿ ಅನಾಮಧೇಯ ಪತ್ರ ಬರೆದಿದ್ದೆ ಎಂದು ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತಕ್ಕೆ 9 ಮಂದಿ ಬಲಿ

    ಶಿವಮೊಗ್ಗದಲ್ಲಿ ಕಳೆದ ವಾರವಷ್ಟೇ, ಕೋಮು ಸಂಘರ್ಷದಿಂದ, ಜನರು ಪರಿತಪಿಸುವಂತಾಗಿದ್ದರೆ, ಇತ್ತ ತಮ್ಮ ಖಾಸಗಿ ತೆವಲಿಗಾಗಿ, ಮತ್ತೆ ಶಿವಮೊಗ್ಗದಲ್ಲಿ ಕೋಮು ಸಂಘರ್ಷವನ್ನುಂಟು ಮಾಡುವ ಬೆದರಿಕೆ ಪತ್ರ ಬರೆದ ಅಯೂಬ್ ಖಾನ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಅನಾಮಧೇಯ ಪತ್ರದಿಂದಾಗಿ ಮತ್ತೆ ಆತಂಕಕ್ಕೆ ಕಾರಣವಾಗಿದ್ದ ಶಿವಮೊಗ್ಗ ಜನರು ಇದು ಫೇಕ್ ಪತ್ರ ಎಂದುಕೊಂಡು ನಿಟ್ಟುಸಿರು ಬಿಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]