Tag: ಹರ್ಷಾ

  • ನಟ ಇಶಾನ್ ಹಿಂದೆ ಬಿದ್ದ ಕನ್ನಡದ ಸ್ಟಾರ್ ನಿರ್ದೇಶಕರು

    ನಟ ಇಶಾನ್ ಹಿಂದೆ ಬಿದ್ದ ಕನ್ನಡದ ಸ್ಟಾರ್ ನಿರ್ದೇಶಕರು

    ಪವನ್ ಒಡೆಯರ್ ಮತ್ತು ಇಶಾನ್ ಕಾಂಬಿನೇಶನ್ ನಲ್ಲಿ ಬರ್ತಿರುವ ‘ರೆಮೋ’ ಸಿನಿಮಾ ಸೌಂಡ್ ಸ್ಯಾಂಡಲ್ ವುಡ್ ಅಂಗಳದಲ್ಲಿ ಜೋರಾಗಿದೆ. ಸೆಟ್ಟೇರಿದ ದಿನದಿಂದ ಸಖತ್ ಸುದ್ದಿಯಲ್ಲಿರುವ ಈ ಅದ್ದೂರಿ ಚಿತ್ರ ನವೆಂಬರ್ 25ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಆದ್ರೆ ಸಿನಿಮಾ ಬಿಡುಗಡೆಗೂ ಮುನ್ನವೇ ನಾಯಕ ನಟ ಇಶಾನ್ ಗೆ ಸ್ಟಾರ್ ನಿರ್ದೇಶಕರಿಂದ ಆಫರ್ ಮೇಲೆ ಆಫರ್ ಬರ್ತಿದ್ದು, ‘ರೆಮೋ’ ನಂತರ ಇಂಡಸ್ಟ್ರಿಯಲ್ಲಿ ಫುಲ್ ಬ್ಯುಸಿಯಾಗಲಿದ್ದಾರೆ ಹ್ಯಾಂಡ್ಸಮ್ ಹಂಕ್.

    ಹೌದು, ‘ರೆಮೋ’ ಹಾಡು, ಟೀಸರ್, ಟ್ರೇಲರ್ ಎಲ್ಲವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಆದ್ರೆ ಅದಕ್ಕೂ ಮಿಗಿಲಾಗಿ ನಾಯಕ ನಟ ಇಶಾನ್ ನಟನೆ, ಲುಕ್, ಪರ್ಸನಾಲಿಟಿ, ಸ್ಕ್ರೀನ್ ಅಪಿಯರೆನ್ಸ್ ಎಲ್ಲವೂ ಪ್ರೇಕ್ಷಕರ ಜೊತೆಗೆ ಚಂದನವನದ ಸ್ಟಾರ್ ನಿರ್ದೇಶಕರನ್ನೂ ಇಂಪ್ರೆಸ್ ಮಾಡಿದೆ. ಇದ್ರಿಂದಾಗಿ ಇಶಾನ್ ಜೊತೆ ಸಿನಿಮಾ ಮಾಡಲು ಚಂದನವನದ ಖ್ಯಾತ ನಿರ್ದೇಶಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಇದನ್ನೂ ಓದಿ:ಕೇಕ್‌ ಕತ್ತರಿಸಿ ಸಕ್ಸಸ್ ಆಚರಿಸಿದ ‌ʻಗಂಧದ ಗುಡಿʼ ಟೀಮ್

    ಜೇಮ್ಸ್ ಖ್ಯಾತಿಯ ಚೇತನ್ ಕುಮಾರ್ ಇಶಾನ್ ಜೊತೆ ಈಗಾಗಲೇ ಹೊಸ ಸಿನಿಮಾ ಘೋಷಿಸಿದ್ದಾರೆ. ಲೇಟೆಸ್ಟ್ ಸಮಾಚಾರ ಅಂದ್ರೆ ಭಜರಂಗಿ ಖ್ಯಾತಿಯ ಎ ಹರ್ಷ, ರ್ಯಾಂಬೋ ಖ್ಯಾತಿಯ ಅನಿಲ್ ಹಾಗೂ ಯುವ ರಾಜ್ ಕುಮಾರ್ ಮೊದಲ‌ ಸಿನಿಮಾ ಘೋಷಿಸಿದ್ದ ಪುನೀತ್ ರುದ್ರನಾಗ್ ಇಶಾನ್ ಜೊತೆ ಸಿನಿಮಾ ಮಾಡಲು ರೆಡಿಯಾಗಿದ್ದಾರೆ. ಈ ಬಗ್ಗೆ ನಾಯಕ ಇಶಾನ್ ಜೊತೆ ಒಂದು ಸುತ್ತಿನ ಮಾತುಕತೆಯನ್ನು ನಡೆಸಿದ್ದು, ಇಶಾನ್ ಕಾಲ್ ಶೀಟ್ ಗಾಗಿ ಕಾಯುತ್ತಿದ್ದಾರೆ ಎನ್ನಲಾಗ್ತಿದೆ. ಸದ್ಯ ರೆಮೋ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಇಶಾನ್ ಸಿನಿಮಾ ಬಿಡುಗಡೆಯ ನಂತರ ಹೊಸ ಸಿನಿಮಾಗಳ ಬಗ್ಗೆ ಅಪ್ಡೇಟ್ ನೀಡಲಿದ್ದಾರೆ.

    ರೆಮೋ ಬಿಡುಗಡೆಯ ಮುನ್ನವೇ ಇಷ್ಟೊಂದು ನಿರ್ದೇಶಕರನ್ನು ಇಂಪ್ರೆಸ್ ಮಾಡಿದ್ದಾರೆ ಅಂದ್ರೆ ಭವಿಷ್ಯದಲ್ಲಿ ಸ್ಯಾಂಡಲ್ ವುಡ್ ಅಂಗಳಕ್ಕೆ ಇಶಾನ್ ಒಬ್ಬ ಭರವಸೆಯ ನಾಯಕ ನಟನಾಗಿ ನಿಲ್ಲೋದ್ರಲ್ಲಿ ಡೌಟೇ ಇಲ್ಲ.

    Live Tv
    [brid partner=56869869 player=32851 video=960834 autoplay=true]

  • ಗೋಲಿಬಾರ್, ಬಾಂಬ್ ಪ್ರಕರಣ ನಿಭಾಯಿಸಿದ್ದ ಮಂಗಳೂರು ಕಮಿಷನರ್ ಹರ್ಷಾ ವರ್ಗ

    ಗೋಲಿಬಾರ್, ಬಾಂಬ್ ಪ್ರಕರಣ ನಿಭಾಯಿಸಿದ್ದ ಮಂಗಳೂರು ಕಮಿಷನರ್ ಹರ್ಷಾ ವರ್ಗ

    – ತುಳುವಿನಲ್ಲೇ ಜನತೆಗೆ ಭಾವನಾತ್ಮಕ ವಿದಾಯ ಹೇಳಿದ ಡಾ.ಪಿ.ಎಸ್.ಹರ್ಷಾ

    ಮಂಗಳೂರು: ನಗರ ಪೊಲೀಸ್ ಆಯುಕ್ತರಾಗಿದ್ದ, ಇದೀಗ ವಾರ್ತಾ ಇಲಾಖೆಯ ಆಯುಕ್ತರಾಗಿ ಬೆಂಗಳೂರಿಗೆ ವರ್ಗಾವಣೆಯಾದ ಡಾ.ಪಿ.ಎಸ್.ಹರ್ಷ ಅವರು ಮಂಗಳೂರಿನ ಜನತೆಯ ಜೊತೆಗೆ ಬಹಳಷ್ಟು ಒಡನಾಟ ಹೊಂದಿದ್ದರು. ಹೀಗಾಗಿ ತಾನು ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿರುವ ಮಂಗಳೂರಿನ ಜನತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಹುಸಂಖ್ಯಾತರ ಮಾತೃ ಭಾಷೆಯಾದ ತುಳುವಿನಲ್ಲಿ ಪ್ರೀತಿ ಪೂರ್ವಕವಾಗಿ ವಿದಾಯ ಪತ್ರ ಬರೆದಿದ್ದಾರೆ.

    ಮಂಗಳೂರು ಸಿಟಿ ಪೊಲೀಸ್ ಫೇಸ್ಬುಕ್ ಪೇಜ್‍ನಲ್ಲಿ ಪತ್ರ ಬರೆದಿರುವ ಅವರು, ಇಡೀ ಪತ್ರವನ್ನು ತುಳು ಭಾಷೆಯಲ್ಲಿಯೇ ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ. ಕುಡ್ಲದ ಎನ್ನ ಮೋಕೆದ ಜನಕುಲೇ(ಮಂಗಳೂರಿನ ನನ್ನ ಪ್ರೀತಿಯ ಜನರೇ) ಎಂದು ಆರಂಭಿಸಿ, ಅಧಿಕಾರಿದ ಅವಧಿಯಲ್ಲಿ ನಡೆದ ಎಲ್ಲ ಘಟನೆಗಳನ್ನು ತುಳುವಿನಲ್ಲೇ ವಿವರಿಸಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತುಳು ಭಾಷೆಯಲ್ಲೆ ಹೇಳಿರುವುದು ವಿಶೇಷವಾಗಿದೆ.

    https://www.facebook.com/MangaluruCityPolice/photos/a.1924100667625353/3082831651752243

    ಮಂಗಳೂರಿನಲ್ಲಿ ಮೈ ಬೀಟ್ ಮೈ ಪ್ರೈಡ್ ಎನ್ನುವ ಹೊಸ ಯೋಜನೆಯ ಮೂಲಕ ನೇರವಾಗಿ ಜನರ ಬಳಿಯೇ ಪೊಲೀಸರು ಸಮಸ್ಯೆಗಳನ್ನು ಆಲಿಸುವ, ಮಾಹಿತಿ ಸಂಗ್ರಹಿಸುವ ಕೆಲಸ ಮಾಡಿದ್ದ ಹರ್ಷಾ ಅವರು, ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು. ಮಾತ್ರವಲ್ಲದೆ ಇತ್ತೀಚೆಗೆ ನಡೆದ ಎನ್‍ಆರ್‍ಸಿ ಹೋರಾಟ, ಗೋಲಿಬಾರ್, ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿದ್ದ ಅಧಿಕಾರಿ ಎಂಬ ಮೆಚ್ಚುಗೆಗೆ ಪಾತ್ರರಾಗಿದ್ದರು.