Tag: ಹರ್ಷ ಭೋಗ್ಲೆ

  • ನನ್ನಿಂದಾದ ತಪ್ಪಿಗೆ ತಂದೆಯನ್ನ ಅಪಹಾಸ್ಯ ಮಾಡಿದ್ದು ಎಷ್ಟು ಸರಿ- ಹಾರ್ದಿಕ್ ಪಾಂಡ್ಯ ಪ್ರಶ್ನೆ

    ನನ್ನಿಂದಾದ ತಪ್ಪಿಗೆ ತಂದೆಯನ್ನ ಅಪಹಾಸ್ಯ ಮಾಡಿದ್ದು ಎಷ್ಟು ಸರಿ- ಹಾರ್ದಿಕ್ ಪಾಂಡ್ಯ ಪ್ರಶ್ನೆ

    ಮುಂಬೈ: ನನ್ನಿಂದಾದ ತಪ್ಪಿಗೆ ತಂದೆಯನ್ನ ಅಪಹಾಸ್ಯ ಮಾಡಿದ್ದು ಎಷ್ಟು ಸರಿ ಎಂದು ಟೀಂ ಇಂಡಿಯಾ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ, ‘ಕಾಫಿ ವಿಥ್ ಕರಣ್’ ವಿವಾದವನ್ನು ಮತ್ತೊಮ್ಮೆ ನೆನೆದಿದ್ದಾರೆ.

    ಪ್ರಸ್ತುತ ಟೀಂ ತಂಡವು ಹೊಂದಿರುವ ಅತ್ಯಂತ ಪ್ರತಿಭಾವಂತ ಕ್ರಿಕೆಟಿಗರಲ್ಲಿ ಹಾರ್ದಿಕ್ ಪಾಂಡ್ಯ ಕೂಡ ಒಬ್ಬರಾಗಿದ್ದಾರೆ. ಆಲ್‍ರೌಂಡರ್ ಹಾರ್ದಿಕ್ ಅಭಿಮಾನಿಗಳಿಗೆ ಅನೇಕ ಸ್ಮರಣೀಯ ಪ್ರದರ್ಶನಗಳನ್ನು ನೀಡಿದ್ದರೂ ಟೀಕೆಗಳನ್ನು ಹೊಂದಿದ್ದಾರೆ. ವಿಶೇಷವಾಗಿ ಆಫ್-ಫೀಲ್ಡ್ ನಡವಳಿಕೆಯಿಂದಾಗಿ ಟೀಕೆಗೆ ಗುರಿಯಾಗಿದ್ದಾರೆ. ಅಂತಹ ಒಂದು ಘಟನೆಯೆಂದರೆ ‘ಕಾಫಿ ವಿಥ್ ಕರಣ್’ ವಿವಾದ. ಈ ವಿವಾದದಿಂದಾಗಿ ಅವರನ್ನು ಕೆಲ ಕಾಲ ಟೀಂ ಇಂಡಿಯಾದಿಂದ ಅಮಾನತುಗೊಳಿಸಲಾಗಿತ್ತು. ಆ ಸಮಯವನ್ನು ಆಲ್‍ರೌಂಡರ್ ಹಾರ್ದಿಕ್ ಮತ್ತೊಮ್ಮೆ ನೆನೆದಿದ್ದಾರೆ. ಇದನ್ನೂ ಓದಿ: ‘ಕಾಫಿ ತುಂಬಾ ಕಾಸ್ಟ್ಲಿ, ಗ್ರೀನ್ ಟೀ ಮಾತ್ರ ಕುಡಿಯಿರಿ’

    ಖ್ಯಾತ ಕ್ರಿಕೆಟ್ ವೀಕ್ಷಕ ವಿವರಣೆಕಾರ ಹರ್ಷ ಭೋಗ್ಲೆ ಅವರೊಂದಿಗಿನ ಲೈಲ್ ಚಾಟ್‍ನಲ್ಲಿ ಮಾತನಾಡಿದ ಹಾರ್ದಿಕ್ ಅವರು ತಮ್ಮ ತಪ್ಪುಗಳನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಅಂತಹ ಘಟನೆಯನ್ನು ಪುನರಾವರ್ತಿಸುವುದಿಲ್ಲ ಎಂದು ತಿಳಿಸಿದರು.

    “ನಾನು ಕುಟುಂಬವನ್ನು ಪ್ರೀತಿಸುವ ವ್ಯಕ್ತಿ. ಕುಟುಂಬವಿಲ್ಲದೆ ನಾನು ಏನೂ ಅಲ್ಲ. ಕುಟುಂಬವೇ ನನ್ನ ಬೆನ್ನೆಲುಬು. ನೀವು ನೋಡುತ್ತಿರುವ ಹಾರ್ದಿಕ್ ಪಾಂಡ್ಯ ಅವರನ್ನು ತೆರೆಮರೆಯಲ್ಲಿರುವ ಜನರು ನೋಡಿಕೊಳ್ಳುತ್ತಿದ್ದಾರೆ. ನಾನು ಮಾನಸಿಕವಾಗಿ ಸ್ಥಿರವಾಗಿದ್ದೇನೆ, ಸಂತೋಷವಾಗಿರುತ್ತೇನೆ ಅಂತ ಅವರು ಯಾವಾಗಲೂ ಖಚಿತಪಡಿಸಿಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.

    “ಕಾಫಿ ವಿಥ್ ಕರಣ್ ವಿವಾದವನ್ನು ಒಪ್ಪಿಕೊಳ್ಳಲು ಮತ್ತು ತಪ್ಪನ್ನು ಸರಿಪಡಿಸಲು ಪ್ರಯತ್ನಿಸಲು ಮುಂದಾಗಿದ್ದೆ. ಆಗ ಜನರು ನನ್ನ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದರು. ಘಟನೆ ಬಳಿಕ ನನ್ನ ತಂದೆ ಸಂದರ್ಶನವೊಂದರಲ್ಲಿ ಹೇಳಿದ ಮಾತಿಗೆ ಜನರು ಅಪಹಾಸ್ಯ ಮಾಡಿದರು. ನನ್ನಿಂದಾದ ತಪ್ಪಿಗೆ ಕುಟುಂಬವನ್ನು ದೂರುವುದು, ಅಪಹಾಸ್ಯ ಮಾಡುವುದು ಎಷ್ಟು ಸರಿ? ಅದು ಸ್ವೀಕಾರಾರ್ಹವಲ್ಲ” ಎಂದು ಅಸಮಾಧಾನ ಹೊರ ಹಾಕಿದ್ದಾರೆ.

  • ಟೀಂ ಇಂಡಿಯಾ ಕೋಚ್ ಆಯ್ಕೆ – ಕೊಹ್ಲಿ ನಡೆಗೆ ಹರ್ಷ ಭೋಗ್ಲೆ ಕಿಡಿ

    ಟೀಂ ಇಂಡಿಯಾ ಕೋಚ್ ಆಯ್ಕೆ – ಕೊಹ್ಲಿ ನಡೆಗೆ ಹರ್ಷ ಭೋಗ್ಲೆ ಕಿಡಿ

    ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ಪ್ರಧಾನ ಕೋಚ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವಾಗಲೇ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಬೆಂಬಲ ರವಿಶಾಸ್ತ್ರಿ ಅವರಿಗೆ ಎಂದು ಹೇಳುವ ಬಗ್ಗೆ ಕ್ರಿಕೆಟ್ ವಿಶ್ಲೇಷಕ ಹರ್ಷ ಬೋಗ್ಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಬಿಸಿಸಿಐ ಕೋಚ್ ಆಯ್ಕೆ ಮಾಡುವ ಕುರಿತ ಕಾರ್ಯಕ್ಕೆ ಚಾಲನೆ ನೀಡುವ ಸಿದ್ಧತೆಯಲ್ಲಿದೆ. ಈ ಸಂದರ್ಭದಲ್ಲಿ ಈ ರೀತಿ ಬಹಿರಂಗವಾಗಿ ಮಾತನಾಡುವುದು ಎಷ್ಟು ಸರಿ? ಈ ಪ್ರತಿಕ್ರಿಯೆ ಇನ್ನು ನಡೆಯುತ್ತಿರುವುದರಿಂದ ಕೋಚ್ ಆಯ್ಕೆಯಲ್ಲಿ ಮುಖ್ಯ ಪಾತ್ರವಹಿಸುವ ವ್ಯಕ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎದು ಭೋಗ್ಲೆ ಕಿಡಿಕಾರಿದ್ದಾರೆ.

    ಕಳೆದ ವಾರ ಕೋಚ್ ಆಯ್ಕೆ ಮಾಡುವ ಸಮಿತಿಯಲ್ಲಿದ್ದ ಸದಸ್ಯರಾದ ಅಂಶುಮಾನ್ ಗಾಯಕ್ವಾಡ್ ಕೂಡ ಕೋಚ್ ರವಿಶಾಸ್ತ್ರಿ ಪರವೇ ಹೇಳಿಕೆ ನೀಡಿದ್ದರು. ರವಿಶಾಸ್ತ್ರಿ ಕೋಚಿಂಗ್ ಅವಧಿಯಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನವನ್ನು ನೀಡಿದೆ ಎಂದಿದ್ದರು. ಇಬ್ಬರ ಹೇಳಿಕೆಯನ್ನು ಗಮನಿಸಿರುವ ಭೋಗ್ಲೆ ಈ ಕುರಿತು ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ವೆಸ್ಟ್ ಇಂಡೀಸ್ ಟೂರ್ನಿಗೆ ತೆರಳುವ ಮುನ್ನ ಪತ್ರಿಕಾಗೋಷ್ಠಿ ನಡೆಸಿದ್ದ ವಿರಾಟ್ ಕೊಹ್ಲಿ, ರೋಹಿತ್‍ರೊಂದಿಗೆ ತನಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಈ ಸಂದರ್ಭದಲ್ಲಿ ಕೋಚ್ ಆಯ್ಕೆ ಕುರಿತ ಪ್ರಶ್ನೆಗೆ ಉತ್ತರಿಸಿ, ರವಿಶಾಸ್ತ್ರಿ ಅವರನ್ನ ಮುಂದುವರಿಸಿದರೆ ತಮಗೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದರು. ಅಲ್ಲದೇ ಇದುವರೆಗೂ ಆಯ್ಕೆ ಸಮಿತಿ ಕೋಚ್ ನೇಮಕ ಬಗ್ಗೆ ಯಾವುದೇ ಅಭಿಪ್ರಾಯವನ್ನು ಕೇಳಿಲ್ಲ. ನನಗೂ ರವಿಶಾಸ್ತ್ರಿ ಅವರ ನಡುವೆ ಉತ್ತಮ ಸಮನ್ವಯ ಇದ್ದು, ಅವರೆ ಕೋಚ್ ಆಗಿ ಮುಂದುವರಿಯಬೇಕೆಂದು ಕೇಳಿಕೊಳ್ಳುತ್ತೇನೆ. ನನ್ನ ಅಭಿಪ್ರಾಯವನ್ನು ಸಮಿತಿ ಮುಂದೆ ಹೇಳುತ್ತೇನೆ ಎಂದಿದ್ದರು.