Tag: ಹರ್ ಘರ್ ತಿರಂಗ

  • ಹರ್‌ ಘರ್‌ ತಿರಂಗ – ಭಯೋತ್ಪಾದಕರ ಕುಟುಂಬ ಸದಸ್ಯರಿಂದ ತ್ರಿವರ್ಣ ಧ್ವಜ ಹಾರಾಟ

    ಹರ್‌ ಘರ್‌ ತಿರಂಗ – ಭಯೋತ್ಪಾದಕರ ಕುಟುಂಬ ಸದಸ್ಯರಿಂದ ತ್ರಿವರ್ಣ ಧ್ವಜ ಹಾರಾಟ

    ಶ್ರೀನಗರ: ಪರಾರಿಯಾಗಿರುವ ಭಯೋತ್ಪಾದಕರ ಕುಟುಂಬದ ಸದಸ್ಯರು, 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು.

    ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ʼಹರ್‌ ಘರ್‌ ತಿರಂಗʼ ಅಭಿಯಾನ ಕೈಗೊಂಡಿದೆ. ದೇಶದ ಪ್ರತಿಯೊಬ್ಬ ಪ್ರಜೆಯೂ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ಗೌರವ ಸಲ್ಲಿಸುವಂತೆ ಕೇಂದ್ರ ಸರ್ಕಾರ ಕರೆ ನೀಡಿದೆ. ಇದನ್ನೂ ಓದಿ: ತ್ರಿವರ್ಣ ಧ್ವಜ ಭಾರತೀಯರಿಗಷ್ಟೇ ಅಲ್ಲ, ವಿದೇಶದಲ್ಲಿರುವ ಪ್ರಜೆಗಳಿಗೂ ರಕ್ಷಣಾತ್ಮಕ ಗುರಾಣಿ: ಮೋದಿ ಬಣ್ಣನೆ

    ಹರ್‌ ಘರ್‌ ತಿರಂಗ ಅಭಿಯಾನದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಧ್ವಜವನ್ನು ಹಾರಿಸಲಾಗುತ್ತಿದೆ. ಹೀಗಾಗಿ ಪರಾರಿಯಾಗಿರುವ ಇಬ್ಬರು ಭಯೋತ್ಪಾದಕರ ಕುಟುಂಬದವರು ದೋಡಾದಲ್ಲಿರುವ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು.

    ಈ ಕುರಿತು ಪ್ರತಿಕ್ರಿಯಿಸಿರುವ ಅವರು, ನಾವು ಪ್ರತಿವರ್ಷವೂ ಸ್ವಾತಂತ್ರ್ಯ ದಿನದಂದು ತಿರಂಗವನ್ನು ಹಾರಿಸುತ್ತೇವೆ. ನನ್ನ ಸಹೋದರ ಪಾಕಿಸ್ತಾನದಲ್ಲಿ ಭಯೋತ್ಪಾದಕ. ಅವನು ಅಪ್ರಾಪ್ತನಾಗಿದ್ದಾಗಲೇ ಅಲ್ಲಿಗೆ ಹೋಗಿ ಸೇರಿಕೊಂಡಿದ್ದಾನೆ. ಅವನು ಅದೆಲ್ಲವನ್ನು ಬಿಟ್ಟು ಹಿಂತಿರುಗಬೇಕೆಂದು ನಾವು ಬಯಸುತ್ತೇವೆ ಎಂದು ಕುಟುಂಬ ಸದಸ್ಯರು ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ‘ಹರ್ ಘರ್ ತಿರಂಗ’ ರ‍್ಯಾಲಿ ವೇಳೆ ಮಾಜಿ ಸಿಎಂ ನಿತಿನ್ ಪಟೇಲ್‍ಗೆ ತಿವಿದ ಹಸು

    Live Tv
    [brid partner=56869869 player=32851 video=960834 autoplay=true]

  • ‘ಹರ್ ಘರ್ ತಿರಂಗ’ ರ‍್ಯಾಲಿ ವೇಳೆ ಮಾಜಿ ಸಿಎಂ ನಿತಿನ್ ಪಟೇಲ್‍ಗೆ ತಿವಿದ ಹಸು

    ‘ಹರ್ ಘರ್ ತಿರಂಗ’ ರ‍್ಯಾಲಿ ವೇಳೆ ಮಾಜಿ ಸಿಎಂ ನಿತಿನ್ ಪಟೇಲ್‍ಗೆ ತಿವಿದ ಹಸು

    ಗಾಂಧೀನಗರ: ‘ಹರ್ ಘರ್ ತಿರಂಗ’ ಯಾತ್ರೆಯ ರ‍್ಯಾಲಿ ವೇಳೆ ಗುಜರಾತ್‍ನ ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಮೇಲೆ ರಸ್ತೆಯಲ್ಲಿ ಬಿಡಾಡುತ್ತಿದ್ದ ಹಸುಗಳು ದಾಳಿ ನಡೆಸಿರುವ ಘಟನೆ ಮೆಹ್ಸಾನಾ ಜಿಲ್ಲೆಯ ಕಡಿ ಪ್ರದೇಶದಲ್ಲಿ ನಡೆದಿದೆ.

    ಕಡಿಯಲ್ಲಿ ನಡೆದ ತ್ರಿವರ್ಣ ಧ್ವಜಾರೋಹಣದ ವೇಳೆ ಈ ಘಟನೆ ನಡೆದಿದೆ. ಕಾರನ್‍ಪುರ ತರಕಾರಿ ಮಾರುಕಟ್ಟೆಯಲ್ಲಿ ಓಡಾಡುತ್ತಿದ್ದ ಹಸು ನಿತಿನ್ ಪಟೇಲ್ ಅವರಿಗೆ ತಿವಿದಿದೆ. ಇದರಿಂದಾಗಿ ನಿತಿನ್ ಪಟೇಲ್ ಅವರ ಕಾಲಿಗೆ ಗಾಯವಾಗಿದ್ದು, ನಂತರ ಅವರನ್ನು ಸ್ಥಳೀಯರ ನೆರವಿನಿಂದ ತಕ್ಷಣ ಭಾಗ್ಯೋದಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಇದನ್ನೂ ಓದಿ: ಎಣ್ಣೆ ಏಟಲ್ಲಿ ರೆಸ್ಟೋರೆಂಟ್‍ನಲ್ಲಿ ರಂಪಾಟ – ಗಗನಸಖಿ ಸೇರಿ ಮೂವರು ಅರೆಸ್ಟ್

    ಚಿಕಿತ್ಸೆ ನಂತರ ನಿತಿನ್ ಪಟೇಲ್ ಅವರು ಅಹಮದಾಬಾದ್‍ನಲ್ಲಿರುವ ತಮ್ಮ ನಿವಾಸಕ್ಕೆ ತೆರಳಲಿದ್ದಾರೆ. ಇದೀಗ ನಿತಿನ್ ಪಟೇಲ್ ಅವರು ವೀಲ್ ಚೇರ್ ಮೇಲೆ ಕುಳಿತುಕೊಂಡಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಜೈಲಿನ ಕೈದಿಗೆ ಚಿಕನ್ ಪೀಸ್‍ನಲ್ಲಿ ಗಾಂಜಾ ಸಾಗಾಟ- ಪೊಲೀಸರಿಂದ ಜಪ್ತಿ

    Live Tv
    [brid partner=56869869 player=32851 video=960834 autoplay=true]

  • ಹರ್ ಘರ್ ತಿರಂಗ: ರಾಷ್ಟ್ರಧ್ವಜವನ್ನ ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸಲಿದೆ ಭಾರತೀಯ ಅಂಚೆ ಸೇವೆ

    ಹರ್ ಘರ್ ತಿರಂಗ: ರಾಷ್ಟ್ರಧ್ವಜವನ್ನ ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸಲಿದೆ ಭಾರತೀಯ ಅಂಚೆ ಸೇವೆ

    ನವದೆಹಲಿ: ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಮುನ್ನ, ಭಾರತೀಯ ಅಂಚೆ ಸೇವೆಯು ರಾಷ್ಟ್ರಧ್ವಜವನ್ನು ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸುತ್ತಿದೆ.

    ತ್ರಿವರ್ಣ ಧ್ವಜವನ್ನು 25 ರೂ. ದರದಲ್ಲಿ ಇಂಡಿಯಾ ಪೋಸ್ಟ್‌ನ ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಖರೀದಿಸಬಹುದು. ಇದರಲ್ಲಿ ಯಾವುದೇ ಜಿಎಸ್‍ಟಿ ಅನ್ವಯಿಸುವುದಿಲ್ಲ. ಧ್ವಜವನ್ನು ಖರೀದಿಸಲು ಆಸಕ್ತಿಯುಳ್ಳವರು ePostoffice ಪೋರ್ಟಲ್‍ನಿಂದ ಆರ್ಡರ್ ಮಾಡಬಹುದು. ಪರ್ಯಾಯವಾಗಿ, ರಾಷ್ಟ್ರಧ್ವಜವನ್ನು ಖರೀದಿಸಲು ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು. ಇದನ್ನೂ ಓದಿ: ನಿರಂತರ ಜಿಟಿ ಜಿಟಿ ಮಳೆ – ಮನೆ ಗೋಡೆ ಕುಸಿದು ಬಿದ್ದು ಯುವಕ ಸಾವು 

    ಇಂಡಿಯಾ ಪೋಸ್ಟ್ ಈ ಕುರಿತು ಟ್ವಿಟ್ಟರ್‌ನಲ್ಲಿ, ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ತಿರಂಗಾ ಮಾರಾಟ ಮತ್ತು ವಿತರಣೆಯನ್ನು ಸುಲಭಗೊಳಿಸಲಾಗುವುದು. 2022ರ ಸ್ವಾತಂತ್ರ್ಯ ದಿನಾಚರಣೆಯ ಮೊದಲ ರಜಾದಿನಗಳಲ್ಲಿ ಎಲ್ಲ ಅಂಚೆ ಕಚೇರಿಗಳು ಕಾರ್ಯನಿರ್ವಹಿಸುತ್ತವೆ ಎಂದು ಬರೆದು ಪೋಸ್ಟ್ ಮಾಡಿದೆ.

    ಸಾರ್ವಜನಿಕ ರಜಾದಿನಗಳಲ್ಲಿ ರಾಷ್ಟ್ರಧ್ವಜಗಳನ್ನು ಅಂಚೆ ಕಚೇರಿಗಳಲ್ಲಿ ಕನಿಷ್ಠ ಒಂದು ಕೌಂಟರ್ ಮೂಲಕ ಮಾರಾಟ ಮಾಡಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ವೆಬ್‍ಸೈಟ್‍ನಲ್ಲಿ ತಿಳಿಸಿದೆ. ಇದನ್ನೂ ಓದಿ: ಹೆಂಗಳೆಯರ ಮನಗೆದ್ದ ʼಗೋಬಿ ಮಂಚೂರಿʼ ಮಾಡುವ ಸಿಂಪಲ್ ವಿಧಾನ

    ಕೇಂದ್ರ ಸರ್ಕಾರದ ಬಜೆಟ್ ಡಾಕ್ಯುಮೆಂಟ್ ಪ್ರಕಾರ, ಭಾರತವು 1,55,000 ಅಂಚೆ ಕಛೇರಿಗಳೊಂದಿಗೆ ವಿಶ್ವದ ಅತಿದೊಡ್ಡ ಅಂಚೆ ಜಾಲವನ್ನು ಹೊಂದಿದೆ. 89 ಪ್ರತಿಶತ ಗ್ರಾಮೀಣ ಪ್ರದೇಶಗಳಲ್ಲಿ ಅಂಚೆ ಕಚೇರಿಗಳು ಸ್ಥಾಪನೆಯಾಗಿವೆ.

    Live Tv
    [brid partner=56869869 player=32851 video=960834 autoplay=true]

  • ಧ್ವಜ ಖರೀದಿಗೆ ವೇತನದಲ್ಲಿ 38 ರೂ. ಖಡಿತಗೊಳಿಸಿದ ರೈಲ್ವೆ ಇಲಾಖೆ- ನೌಕರರಿಂದ ಅಸಮಾಧಾನ

    ಧ್ವಜ ಖರೀದಿಗೆ ವೇತನದಲ್ಲಿ 38 ರೂ. ಖಡಿತಗೊಳಿಸಿದ ರೈಲ್ವೆ ಇಲಾಖೆ- ನೌಕರರಿಂದ ಅಸಮಾಧಾನ

    ನವದೆಹಲಿ: ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ರೈಲ್ವೆ ತನ್ನ ಎಲ್ಲಾ ಉದ್ಯೋಗಿಗಳಿಗೆ ನೀಡಿರುವ ರಾಷ್ಟ್ರ ಧ್ವಜದ ವೆಚ್ಚವನ್ನು ಅವರ ಸಂಬಳದಿಂದ ವಸೂಲಿ ಮಾಡುತ್ತಿದ್ದು, ಇಲಾಖೆಯ ಈ ಕ್ರಮಕ್ಕೆ ರೈಲ್ವೆ ನೌಕರರ ಸಂಘದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

    75ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಆಜಾದಿ ಕಾ ಅಮೃತ ಮಹೋತ್ಸವದ ಅಡಿಯಲ್ಲಿ ಕೇಂದ್ರವು ಹರ್ ಘರ್ ತಿರಂಗಾ ಅಭಿಯಾನವನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಏಜೆನ್ಸಿಯಿಂದ ರೈಲ್ವೆ ನೌಕರರಿಗೆ ರಾಷ್ಟ್ರಧ್ವಜವನ್ನು ನೀಡಿದ್ದಾರೆ. ಆದರೆ ಈ ಧ್ವಜದ ಬೆಲೆಯನ್ನು 38 ರೂ.ಗಳಲ್ಲಿ ಇರಿಸಲಾಗಿದೆ. ರೈಲ್ವೆ ನೌಕರರು ಹಣವನ್ನು ಪಾವತಿಸಿ ಈ ರಾಷ್ಟ್ರ ಧ್ವಜವನ್ನು ಖರೀದಿಸಬೇಕಿಲ್ಲ. ಆದರೆ ಅವರ ಸಂಬಳದಿಂದ ಈ ಹಣ ಕಡಿತಗೊಳ್ಳುತ್ತದೆ. ಇದಕ್ಕೆ ಉತ್ತರ ಮಧ್ಯ ರೈಲ್ವೆ ನೌಕರರ ಸಂಘ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದೆ.

    ವಿಭಾಗೀಯ ಸಚಿವ ಚಂದನ್ ಸಿಂಗ್ ಮಾತನಾಡಿ, ಈ ಧ್ವಜವನ್ನು ಸಿಬ್ಬಂದಿಗೆ ನೌಕರರ ಪ್ರಯೋಜನ ನಿಧಿಯಿಂದ ನೀಡಲಾಗುತ್ತಿದೆ. ನಂತರ ಅವರ ಸಂಬಳದಿಂದ ಕಡಿತಗೊಳಿಸಿದ ಹಣವನ್ನು ನೌಕರರ ಲಾಭ ನಿಧಿಗೆ ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ತಗ್ಗಿದ ಮಳೆ – ರೆಡ್‌ನಿಂದ ಆರೆಂಜ್ ಅಲರ್ಟ್‌ನತ್ತ ಕರಾವಳಿ

    ಈ ಧ್ವಜಗಳು ಬಿಜೆಪಿ ಕಚೇರಿಯಲ್ಲಿ 20 ರೂ.ಗೆ ಲಭ್ಯವಿದ್ದು, ಪ್ರಧಾನ ಅಂಚೆ ಕಚೇರಿಯಲ್ಲಿ 25 ರೂ.ಗೆ ಖರೀದಿಸಬಹುದು. ಸ್ವಸಹಾಯ ಸಂಘಗಳು ಸಹ 20 ರೂ.ಗೆ ಧ್ವಜವನ್ನು ನೀಡುತ್ತಿವೆ. ಇದನ್ನೂ ಓದಿ: ಕುಟುಂಬ ಕಲಹ – ವಿದ್ಯುತ್ ಹೈಟೆನ್ಷನ್ ಟವರ್ ಏರಿ ವ್ಯಕ್ತಿ ಹೈಡ್ರಾಮಾ

    Live Tv
    [brid partner=56869869 player=32851 video=960834 autoplay=true]

  • 75ನೇ ಸ್ವಾತಂತ್ರ್ಯ ಸಂಭ್ರಮ – ಬಾವುಟವನ್ನು ಮಡಿಸೋದು ಹೇಗೆ?

    75ನೇ ಸ್ವಾತಂತ್ರ್ಯ ಸಂಭ್ರಮ – ಬಾವುಟವನ್ನು ಮಡಿಸೋದು ಹೇಗೆ?

    ನವದೆಹಲಿ: ಕೇಂದ್ರ ಸರ್ಕಾರವೂ 75ನೇ ಸ್ವಾಂತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಈಗಾಗಲೇ ಸಿದ್ಧಗೊಂಡಿದ್ದು ಅಜಾದಿ ಕಾ ಅಮೃತ ಮಹೋತ್ಸವದ ಅಡಿಯಲ್ಲಿ ಅನೇಕ ಕಾರ್ಯಕ್ರಮವನ್ನುಜಾರಿಗೆ ತರುತ್ತಿದೆ. ಹರ್ ಘರ್ ತಿರಂಗ (ಪ್ರತಿ ಮನೆಯಲ್ಲೂ ಬಾವುಟ)ವು ಅಜಾದಿ ಕಾ ಅಮೃತ ಮಹೋತ್ಸವ ಅಡಿಯಲ್ಲಿ ಬರುವ ಮಹತ್ವದ ಕಾರ್ಯಕ್ರಮವಾಗಿದೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸೂಚನೆಯೊಂದನ್ನು ಬಿಡುಗಡೆ ಮಾಡಿದೆ.

    ಹೌದು.. ಹರ್ ಘರ್ ತಿರಂಗ ಆಚರಿಸುವ ಉತ್ಸಾಹದಲ್ಲಿ ಯಾವುದೇ ಪ್ರಮಾದ ಅಥವಾ ದೇಶ ದ್ರೋಹದ ಕೆಲಸವಾಗದಿರಲಿ ಎಂದು ಬಾವುಟವನ್ನು ಮಡಿಸುವ ಸರಿಯಾದ ಮಾರ್ಗದ ಬಗ್ಗೆ ಪಟ್ಟಿಯೊಂದನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಬಾವುಟವನ್ನು ಹಂತ ಹಂತವಾಗಿ ಯಾವ ರೀತಿಯಾಗಿಮಡಿಸಬೇಕು ಎನ್ನುವ ಎಲ್ಲಾ ಕ್ರಮಗಳನ್ನು ನೀಡಿದೆ. ಅವು ಈ ರೀತಿ ಆಗಿದೆ.

    ಮೊದಲಿಗೆ ರಾಷ್ಟ್ರಧ್ವಜವನ್ನು ಅಡ್ಡಲಾಗಿ ಇರಿಸಬೇಕು. ನಂತರ ಮಧ್ಯದಲ್ಲಿರುವ ಬಿಳಿ ಪಟ್ಟಿಯ ಅಡಿಯಲ್ಲಿ ಕೇಸರಿ ಹಾಗೂ ಹಸಿರು ಪಟ್ಟಿಗಳನ್ನು ಮಡಿಸಬೇಕು. ಅದಾದ ಬಳಿಕ ಕೇಸರಿ ಮತ್ತು ಹಸಿರು ಬಣ್ಣದ ಪಟ್ಟಿಯೊಂದಿಗೆ ಅಶೋಕ ಚಕ್ರ ಮಾತ್ರ ಕಾಣುವ ರೀತಿಯಲ್ಲಿ ಬಿಳಿ ಬಣ್ಣದ ಪಟ್ಟಿಯನ್ನು ಮಡಿಸಬೇಕು. ಇದಾದ ನಂತರ ಮಡಿಸಿದ ರಾಷ್ಟ್ರ ಧ್ವಜವನ್ನು ಅಂಗೈ ಅಥವಾ ತೋಳುಗಳ ಮೇಲೆ ತೆಗೆದುಕೊಂಡು ಹೋಗಬೇಕು. ಈ ಎಲ್ಲಾ ನಿಯಮಗಳು ರಾಷ್ಟ್ರಧ್ವಜವನ್ನು ಮಡಿಸುವಾಗ ಅನುಸರಿಸಲೇ ಬೇಕಾದ ಕ್ರಮಗಳಾಗಿವೆ. ಇದನ್ನೂ ಓದಿ: ಆಜಾದಿ ಕಾ ಅಮೃತ ಮಹೋತ್ಸವಕ್ಕೆ ಉಗ್ರರ ಕರಿ ನೆರಳು – ಕೆಂಪುಕೋಟೆಯ ಸುತ್ತ 1,000 ಅಧಿಕ ಸಿಸಿಟಿವಿ ಕ್ಯಾಮೆರಾ

    75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮಂಗಳವಾರದಂದು ಪ್ರಧಾನಿ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ರಾಷ್ಟ್ರಧ್ವಜವನ್ನು ತಮ್ಮ ಪ್ರೊಫೈಲ್ ಪಿಕ್ಚರ್ ಆಗಿ ಬದಲಾಯಿಸಿಕೊಂಡಿದ್ದರು. ಅಷ್ಠ ಅಲ್ಲದೇ ಈ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದರು. ಈ ಅಭಿಯಾನಕ್ಕೆ ಈಗಾಗಲೇ ದೇಶಾದ್ಯಂತ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಅನೇಕ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ.

    ಕೇವಲ ಬಿಜೆಪಿಯೊಂದೇ ಅಲ್ಲದೇ ಕಾಂಗ್ರೆಸ್‍ನವರು ಈ ಅಭಿಯಾನಕ್ಕೆ ಕೈ ಜೋಡಿಸಿದ್ದು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ತಮ್ಮ ಪ್ರೊಫೈಲ್‍ನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ರಾಷ್ಟ್ರಧ್ವಜವನ್ನು ಹಿಡಿದಿರುವ ಫೋಟೋವನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೇ ರಾಹುಲ್ ಗಾಂಧಿ ನಮ್ಮ ತಿರಂಗ, ನಮ್ಮ ದೇಶದ ಹೆಮ್ಮೆ, ರಾಷ್ಟ್ರಧ್ವಜ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲೂ ಇದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಷ್ಟ್ರಧ್ವಜದ ಮೇಲೆ ಕಾಂಗ್ರೆಸ್‍ನವರಿಗೆ ಇರುವುದು ಹುಸಿ ಪ್ರೇಮ: ಬಿಜೆಪಿ

    Live Tv
    [brid partner=56869869 player=32851 video=960834 autoplay=true]