Tag: ಹರ್ ಘರ್ ತಿರಂಗಾ

  • ಹರ್ ಘರ್ ತಿರಂಗ ಅಭಿಯಾನ – ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ

    ಹರ್ ಘರ್ ತಿರಂಗ ಅಭಿಯಾನ – ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ

    ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆಸಲಾಗುತ್ತಿರುವ ‘ಹರ್‌ ಘರ್‌ ತಿರಂಗ’ ಅಭಿಯಾನಕ್ಕೆ ಗೃಹ ಸಚಿವ ಅಮಿತ್‌ ಶಾ ಚಾಲನೆ ನೀಡಿದ್ದಾರೆ.

    ಪತ್ನಿ ಸೋನಲ್ ಶಾ ಅವರೊಂದಿಗೆ ದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಅಮಿತ್‌ ಶಾ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಟೆರೇಸ್‌ನಲ್ಲಿ ತಿರಂಗ ಹಾರಿಸುತ್ತಿರುವ ವೀಡಿಯೋ ವೈರಲ್‌ ಆಗಿದೆ.

    ಆಜಾದಿ ಕಾ ಅಮೃತ್ ಮಹೋತ್ಸವದ ಆಶ್ರಯದಲ್ಲಿ ಪ್ರಾರಂಭಿಸಲಾದ ಹರ್ ಘರ್ ತಿರಂಗ ಅಭಿಯಾನದ 4 ನೇ ಆವೃತ್ತಿಯನ್ನು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಘೋಷಿಸಿತು. ದೇಶಾದ್ಯಂತ ನಾಗರಿಕರು ಭಾರತೀಯ ರಾಷ್ಟ್ರೀಯ ಧ್ವಜವಾದ ತಿರಂಗವನ್ನು ಮನೆ ಮೇಲೆ ಹಾರಿಸುವಂತೆ ಪ್ರೇರೇಪಿಸಿತ್ತು.

    ದೇಶಾದ್ಯಂತ ನಡೆಸಲಾದ ಈ ಅಭಿಯಾನವು ಜನಾಂದೋಲನವಾಗಿ ಮಾರ್ಪಟ್ಟಿದೆ. ಅಭಿಯಾನದ ನಾಲ್ಕನೇ ವರ್ಷದಲ್ಲಿ 5 ಲಕ್ಷಕ್ಕೂ ಹೆಚ್ಚು ಮಂದಿ ನೋಂದಾಯಿಸಿಕೊಂಡಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.

    ಈ ವರ್ಷ ನಾವು ತಿರಂಗಾ ಅಭಿಯಾನದ ನಾಲ್ಕನೇ ಆವೃತ್ತಿಯನ್ನು ಆಚರಿಸಲಿದ್ದೇವೆ. ಇದಕ್ಕಾಗಿ 5 ಲಕ್ಷಕ್ಕೂ ಹೆಚ್ಚು ಜನರು ಸ್ವಯಂಸೇವಕರಾಗಿ ನೋಂದಾಯಿಸಿಕೊಂಡಿದ್ದಾರೆ. ಆ ಮೂಲಕ ತಿರಂಗಾ ಅಭಿಯಾನಕ್ಕೆ ಜನರನ್ನು ಪ್ರೇರೇಪಿಸುತ್ತಾರೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ.

    ಹರ್ ಘರ್ ತಿರಂಗ ಕೇವಲ ಅಭಿಯಾನ ಅಲ್ಲ. ಇದು ನಮ್ಮ ರಾಷ್ಟ್ರೀಯ ಧ್ವಜದ ಕಾಲಾತೀತ ಬಣ್ಣಗಳ ಅಡಿಯಲ್ಲಿ 1.4 ಶತಕೋಟಿ ಭಾರತೀಯರನ್ನು ಒಂದುಗೂಡಿಸುವ ಭಾವನಾತ್ಮಕ ಚಳವಳಿಯಾಗಿದೆ. ಇದು ದೇಶಭಕ್ತಿಯನ್ನು ಹುಟ್ಟುಹಾಕುವುದು, ನಾಗರಿಕ ಹೆಮ್ಮೆಯ ಭಾವನೆ ಮೂಡಿಸುವುದು, ನಮ್ಮ ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯದ ಜೀವಂತ ಸಂಕೇತವಾಗಿ ತಿರಂಗದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಶೇಖಾವತ್‌ ಹೇಳಿದ್ದಾರೆ.

  • ‘ಹರ್ ಘರ್ ತಿರಂಗಾʼ ಕಾರ್ಯಕ್ರಮಕ್ಕೆ ಬಿಜೆಪಿ ಚಾಲನೆ

    ‘ಹರ್ ಘರ್ ತಿರಂಗಾʼ ಕಾರ್ಯಕ್ರಮಕ್ಕೆ ಬಿಜೆಪಿ ಚಾಲನೆ

    ಬೆಂಗಳೂರು: ಸ್ವಾತಂತ್ರ್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ‘ಹರ್ ಘರ್ ತಿರಂಗಾ’ (Har Ghar Tiranga) ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಅವರು ತಿಳಿಸಿದರು.

    ಶಿವಾಜಿನಗರದ (Shivajinagara) ವಸಂತ ನಗರ ವಾರ್ಡಿನ ಬೂತ್ ನಂ.44ರಲ್ಲಿಂದು ಬೆಳಗ್ಗೆ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆಯ (Independence Day) ಶುಭ ಸಂದರ್ಭದಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು, ಯುವ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ದಿನಗಳನ್ನ ನೆನಪಿಸಿ ಕೊಡಬೇಕು. ತ್ಯಾಗ, ಬಲಿದಾನದ ಚರ್ಚೆ ಆಗಬೇಕು ಎಂದು ತಿಳಿಸಿದ್ದಾರೆ. ಅದಕ್ಕಾಗಿ ಯುವಜನತೆಯಲ್ಲೂ ದೇಶಭಕ್ತಿ ಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ವಿವರಿಸಿದರು.

    ಸಂಸದ ಪಿ.ಸಿ.ಮೋಹನ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೂತ್ ಸಂಖ್ಯೆ 44ರ ಅಧ್ಯಕ್ಷ ಸಾಗರ್, ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಅದೇರೀತಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ತಿರಂಗಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ಯುವಕರಿಂದ ಬೈಕ್ ರ‍್ಯಾಲಿ ಮೂಲಕ ತಿರಂಗಾ ಯಾತ್ರೆ ನಡೆಸಲಾಗುತ್ತಿದ್ದು, ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.

    ಇದೇ 11 ರಿಂದ 15ರವರೆಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಗಳು, ಪುತ್ಥಳಿಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ನಾಳೆ (ಆ.14) ದೇಶದ ವಿಭಜನೆಯ ಕರಾಳ ದಿನದ ನೆನಪನ್ನು ವಿಭಜನೆಯ ಸ್ಮೃತಿ ದಿನವಾಗಿ ನೆನಪಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

  • ಮನೆ ಬಾಲ್ಕನಿಯಲ್ಲಿ ರಾಷ್ಟ್ರ ಧ್ವಜ ಹಿಡಿದು ಸಂಭ್ರಮಿಸಿದ ಹೆಚ್‌ಡಿಡಿ

    ಮನೆ ಬಾಲ್ಕನಿಯಲ್ಲಿ ರಾಷ್ಟ್ರ ಧ್ವಜ ಹಿಡಿದು ಸಂಭ್ರಮಿಸಿದ ಹೆಚ್‌ಡಿಡಿ

    ಬೆಂಗಳೂರು: ದೇಶಾದ್ಯಂತ ಇಂದು 77ನೇ ಸ್ವಾತಂತ್ರ್ಯ ದಿನವನ್ನು (77th Independence Day) ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಗಳಿಗೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರು ಭಾರತದ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ.

    ಮಾಜಿ ಪ್ರಧಾನಿ ಹೆಚ್‌ಡಿಡಿ ಬೆಂಗಳೂರಿನ (Bengaluru) ತಮ್ಮ ನಿವಾಸದಲ್ಲಿ 77ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿದ್ದಾರೆ. ಮನೆಯ ಬಾಲ್ಕನಿಯಲ್ಲಿ ತಿರಂಗಾ ಹಿಡಿದು ಸಂಭ್ರಮಿಸಿದ್ದಾರೆ.

    ಸ್ವತಂತ್ರ್ಯ ದಿನದ ಹಿನ್ನೆಲೆ ಟ್ವೀಟ್ ಮಾಡಿ ಜನತೆಗೆ ಶುಭ ಕೋರಿದ ಅವರು, 77ನೇ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸೋಣ ಮತ್ತು ನಮ್ಮ ರಾಷ್ಟ್ರದ ಪ್ರಗತಿ ಮತ್ತು ಏಕತೆಗೆ ನಮ್ಮ ಕೊಡುಗೆ ನೀಡೋಣ ಎಂದಿದ್ದಾರೆ. ಇದನ್ನೂ ಓದಿ: ಮುಂದಿನ ವರ್ಷ ಸಿಗೋಣ; ಸ್ವಾತಂತ್ರ‍್ಯ ದಿನದ ಭಾಷಣದಲ್ಲಿ ಲೋಕಸಭೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ

    ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸ್ಮರಣಾರ್ಥವಾಗಿ ಕಳೆದ ವರ್ಷದಂತೆ ಈ ವರ್ಷವೂ ಆಗಸ್ಟ್ 13ರಿಂದ 15ರ ವರೆಗೆ ಹರ್ ಘರ್ ತಿರಂಗಾ ಅಭಿಮಾನದಲ್ಲಿ ಭಾಗವಹಿಸುವಂತೆ ಜನತೆಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಅಂದು ಬ್ರಿಟಿಷರು ಭಾರತದ ಸಂಪತ್ತನ್ನ ಹೊತ್ತೊಯ್ದರು, ಇಂದು ಬಂಡವಾಳಿಗರ ಬಳಿ ಶೇಖರಣೆಗೊಳ್ತಿದೆ: ಸಿದ್ದರಾಮಯ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • #HarGharTiranga: ಮೋದಿ ಕರೆಗೆ ಓಗೊಟ್ಟು ಡಿಪಿ ಬದಲಿಸಿ ಟ್ವಿಟ್ಟರ್‌ನಲ್ಲಿ ಬ್ಲೂ ಟಿಕ್‌ ಕಳೆದುಕೊಂಡ BCCI

    #HarGharTiranga: ಮೋದಿ ಕರೆಗೆ ಓಗೊಟ್ಟು ಡಿಪಿ ಬದಲಿಸಿ ಟ್ವಿಟ್ಟರ್‌ನಲ್ಲಿ ಬ್ಲೂ ಟಿಕ್‌ ಕಳೆದುಕೊಂಡ BCCI

    ನವದೆಹಲಿ: 77ನೇ ಸ್ವಾತಂತ್ರ್ಯ ದಿನಾಚರಣೆ ಬೆನ್ನಲ್ಲೇ ʻಹರ್‌ ಘರ್‌ ತಿರಂಗಾʼ (HarGharTiranga) ಅಭಿಯಾನ ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಡಿಪಿ ಚಿತ್ರದಲ್ಲಿ ರಾಷ್ಟ್ರ ಧ್ವಜ ಬಳಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಕರೆಗೆ ಓಗೊಟ್ಟು, ಡಿಪಿ ಬದಲಿಸಿದ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಟ್ವಿಟ್ಟರ್‌ (X)‌ ಖಾತೆಯಲ್ಲಿ ಬ್ಲೂ ಟಿಕ್‌ ಕಳೆದುಕೊಂಡಿದೆ.

    ಆಗಸ್ಟ್ 15 ರಂದು ದೇಶಾದ್ಯಂತ ಆಚರಿಸಲಾಗುವ 77ನೇ ಸ್ವಾತಂತ್ರ್ಯ ದಿನಾಚರಣೆಗೆ ಮುಂಚಿತವಾಗಿ, ಮೋದಿ (NarendraModi) ಅವರು ತಮ್ಮ ಪ್ರೊಫೈಲ್ ಚಿತ್ರಗಳ ಬದಲಿಗೆ ರಾಷ್ಟ್ರ ಧ್ವಜದ ಚಿತ್ರ ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಅದರಂತೆ ವೆಸ್ಟ್‌ ಇಂಡೀಸ್‌ ವಿರುದ್ಧ ಅಂತಿಮ ಟಿ20 ಪಂದ್ಯಕ್ಕೂ ಮುನ್ನ ಬಿಸಿಸಿಐ ಟ್ವಿಟ್ಟರ್‌ ಡಿಪಿಯಲ್ಲಿ ಬಿಸಿಸಿಐ ಲೋಗೋ ಬದಲಿಗೆ ರಾಷ್ಟ್ರ ಧ್ವಜದ ಚಿತ್ರ ಹಾಕಿಕೊಂಡಿತು. ಇದನ್ನೂ ಓದಿ: ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್‌ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ

    ಈ ಕಾರಣಕ್ಕೆ ಬಿಸಿಸಿಐ ತನ್ನ ಟ್ವಿಟ್ಟರ್‌ ಹ್ಯಾಂಡಲ್​​ನಲ್ಲಿ ತನ್ನ ಬ್ಲೂ ಟಿಕ್ ಕಳೆದುಕೊಂಡಿತು. ಎಕ್ಸ್​​ನ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ಎಕ್ಸ್ ಮ್ಯಾನೇಜ್ಮೆಂಟ್​ನ ಈಗ ಬಿಸಿಸಿಐನ ಪ್ರೊಫೈಲ್ ಅನ್ನು ಪರಿಶೀಲನೆ ನಡೆಸಬೇಕಾಗಿದೆ. ಬಿಸಿಸಿಐ ತನ್ನ ಲೋಗೋ ಬದಲಿಸಿದ ಬಳಿಕ ಎಲ್ಲ ಮಾರ್ಗಸೂಚಿಗಳನ್ನ ಪೂರೈಸಿದರೆ ಮಾತ್ರ ಬ್ಲ್ಯೂಟಿಕ್ ಮರುಸ್ಥಾಪನೆಯಾಗಲಿದೆ. ಸ್ವಾತಂತ್ರ್ಯ ದಿನಾಚರಣೆಯ ನಂತರ, ಬಿಸಿಸಿಐ ತನ್ನ ಮೂಲ ಲೋಗೋಗೆ ಮರಳಲಿದೆ. ಇದನ್ನೂ ಓದಿ: ನಾಟೌಟ್‌ ಅನ್ನು ಔಟ್‌ ಅಂತಾ ಬಿಟ್ಟುಕೊಟ್ರಾ? – DRS ತೆಗೆದುಕೊಳ್ಳದೇ ವಿಂಡೀಸ್‌ ವಿರುದ್ಧ ಮಕ್ಕರ್‌ ಆದ ಗಿಲ್‌

    ವಿಂಡೀಸ್‌ ವಿರುದ್ಧ ಸರಣಿ ಸೋಲು:
    5 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಲಷ್ಟೇ ಸಾಧ್ಯವಾಯಿತು. 166 ರನ್‌ಗಳ ಗುರಿ ಪಡೆದ ವಿಂಡೀಸ್ 18 ಓವರ್‌ಗಳಲ್ಲೇ ಕೇವಲ 2 ವಿಕೆಟ್ ನಷ್ಟಕ್ಕೆ 171 ರನ್ ಚಚ್ಚಿ ಜಯ ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 3-2 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡ ಹಿಜ್ಬುಲ್ ಭಯೋತ್ಪಾದಕನ ಸಹೋದರ

    ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡ ಹಿಜ್ಬುಲ್ ಭಯೋತ್ಪಾದಕನ ಸಹೋದರ

    ಶ್ರೀನಗರ: ಸ್ವಾತಂತ್ರ್ಯ ದಿನಾಚರಣೆಗೂ (Independence Day) ಮುನ್ನ ಹಿಜ್ಬುಲ್ ಭಯೋತ್ಪಾದಕನ (Hizbul Terrorist) ಸಹೋದರ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಸೋಪೋರ್‌ನಲ್ಲಿರುವ ತನ್ನ ನಿವಾಸದಲ್ಲಿ ರಾಷ್ಟ್ರಧ್ವಜ ಹಾರಿಸಿ ಹರ್ ಘರ್ ತಿರಂಗಾ (Har Ghar Tiranga) ಅಭಿಯಾನದಲ್ಲಿ ಪಾಲ್ಗೊಂಡಿದ್ದಾನೆ.

    ಹಿಜ್ಬುಲ್ ಭಯೋತ್ಪಾದಕ ಜಾವಿದ್ ಮಟ್ಟೂ (Javid Mattoo) ಸಹೋದರ ರಯೀಸ್ ಮಟ್ಟೂ ತನ್ನ ಮನೆಯ ಹೊರಗಡೆ ತ್ರಿವರ್ಣ ಧ್ವಜವನ್ನು ಹಾರಿಸಿರುವುದು ವೀಡಿಯೋವೊಂದರಲ್ಲಿ ಕಂಡುಬಂದಿದೆ. ಜಾವಿದ್ ಮಟ್ಟೂ ಹಿಜ್ಬುಲ್ ಮುಜೈದೀನ್ ಭಯೋತ್ಪಾದಕ ಮುಜೈದೀನ್ ಸಂಘಟನೆಗೆ ಸಂಬಂಧಿಸಿದ ಸಕ್ರಿಯ ಭಯೋತ್ಪಾದಕ. ಭದ್ರತಾ ಏಜೆನ್ಸಿಗಳು ಗುರಿಯಾಗಿಸಿಕೊಂಡಿರುವ ಟಾಪ್ 10 ಭಯೋತ್ಪಾದಕರ ಪಟ್ಟಿಯಲ್ಲಿ ಈತನೂ ಸೇರಿದ್ದಾನೆ.

    ಪ್ರಧಾನಿ ನರೇಂದ್ರ ಮೋದಿ ಸ್ವತಂತ್ರ್ಯ ದಿನಾಚರಣೆಗೂ ಮುನ್ನ ಆಗಸ್ಟ್ 13ರಿಂದ 15ರ ವರೆಗೆ ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಕರೆ ನೀಡಿದ್ದಾರೆ. ಭಾನುವಾರ ಶ್ರೀನಗರದಲ್ಲಿ ಬೃಹತ್ ‘ತಿರಂಗ’ ರ‍್ಯಾಲಿಯನ್ನು ಕೈಗೊಳ್ಳಲಾಯಿತು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: 7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್‌

    ಜಮ್ಮು ಮತ್ತು ಕಾಶ್ಮೀರದಲ್ಲಿ ತಿರಂಗಾ ಎತ್ತಲು ಯಾರೂ ಉಳಿಯುವುದಿಲ್ಲ ಎಂದು ಹೇಳುತ್ತಿದ್ದ ಅವರು, ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಬ್ಬ ಯುವಕರು ದೇಶದ ಇತರ ಭಾಗದ ಜನರಂತೆ ರಾಷ್ಟ್ರಧ್ವಜವನ್ನು ಪ್ರೀತಿಸುತ್ತಾರೆ ಎಂದು ಅರ್ಥಮಾಡಿಕೊಂಡಿದ್ದಾರೆ ಎಂದು ಮನೋಜ್ ಸಿನ್ಹಾ ಯಾವುದೇ ಹೆಸರನ್ನು ಎತ್ತದೇ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಭಾನುವಾರ ರಾತ್ರಿ ಗೆಹ್ಲೋಟ್ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರ್ ಘರ್ ತಿರಂಗಾ ಅಭಿಯಾನ – ಬಿಂದು ಅನ್ಮೋಲ್ ಅಪಾರ್ಟ್‍ಮೆಂಟ್ ನಿವಾಸಿಗಳಿಂದ ತಿರಂಗಾ ಅನಾವರಣ

    ಹರ್ ಘರ್ ತಿರಂಗಾ ಅಭಿಯಾನ – ಬಿಂದು ಅನ್ಮೋಲ್ ಅಪಾರ್ಟ್‍ಮೆಂಟ್ ನಿವಾಸಿಗಳಿಂದ ತಿರಂಗಾ ಅನಾವರಣ

    ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು ನಾಳೆಗೆ 75 ವರ್ಷ. ಈ ಅಮೃತ ಮಹೋತ್ಸವವನ್ನು ಇಡೀ ದೇಶದಲ್ಲಿ ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ದೇಶದಲ್ಲಿ ಹರ್ ಘರ್ ತಿರಂಗಾ ಅಭಿಯಾನ ನಡೆಯುತ್ತಿದೆ. ಇದರ ಭಾಗವಾಗಿ ನಗರದ ಬಿಂದು ಅನ್ಮೋಲ್ ಅಪಾರ್ಟ್‍ಮೆಂಟ್ ನಿವಾಸಿಗಳು ಇಂದು ತಿರಂಗಾ ಅನಾವರಣ ಮಾಡಿದರು.

    ದೇಶಾದ್ಯಂತ ನಿನ್ನೆಯಿಂದಲೇ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹರಿಸೋದಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಹಾಗಾಗಿ ಮೋದಿ ಕರೆಗೆ ಸಿಲಿಕಾನ್ ಸಿಟಿಯಲ್ಲಿ ಭರ್ಜರಿಯಾಗಿ ಸ್ಪಂದನೆ ಸಿಕ್ಕಿದ್ದು, ಮನೆ ಮನೆಗಳ ಮೇಲೆ ರಾಷ್ಟ್ರ ಧ್ಜಜ ರಾರಾಜಿಸುತ್ತಿದೆ. ಇದನ್ನೂ ಓದಿ: ಆಕಾಶ್ ಏರ್ ಹಾರಾಟ ಆರಂಭಿಸಿದ ಒಂದೇ ವಾರದಲ್ಲಿ ಇಹಲೋಕ ತ್ಯಜಿಸಿದ ಜುಂಜುನ್‍ವಾಲ – ಈಡೇರಿತು ಮಹತ್ತರವಾದ ಕನಸು

    ಇಂದು ಬೆಂಗಳೂರಿನ ವಿಜಯನಗರದ ಬಳಿ ಇರುವ ಪ್ರಶಾಂತ್ ನಗರದ ಬಿಂದು ಅನ್ಮೋಲ್ ಅಪಾರ್ಟ್‍ಮೆಂಟ್ ನಿವಾಸಿಗಳು ತಮ್ಮ ಪ್ಲಾಟ್‍ಗಳಲ್ಲಿ ತಿರಂಗವನ್ನು ಹಾರಿಸುವ ಮೂಲಕ ಅಮೃತ ಮಹೋತ್ಸವಕ್ಕೆ ಮತ್ತಷ್ಟು ಮೆರುಗು ತಂದರು. ಹಿರಿಯರ ಜೊತೆ ಪುಟಾಣಿಗಳು ಭಾರತದ ಧ್ವಜ ಹಿಡಿದು ಭಾರತ ಮಾತೆಗೆ ಜೈಕಾರ ಹಾಕಿ ಸ್ವಾತಂತ್ರ್ಯ ದಿನಚಾರಣೆಯ ಶುಭಾಶಯಗಳನ್ನು ದೇಶದ ಜನರಿಗೆ ಕೋರಿದರು. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ; ಗಡಿಯಲ್ಲಿ ಸಿಹಿ ಹಂಚಿಕೊಂಡು ಶುಭಕೋರಿದ ಭಾರತ-ಪಾಕ್‌ ಸೇನೆ

    Live Tv
    [brid partner=56869869 player=32851 video=960834 autoplay=true]

  • ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ

    ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ

    ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ `ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

    ಬಳಿಕ ಅಭಿಯಾನವನ್ನುದ್ದೇಶಿಸಿ ಮಾತನಾಡಿದ ಸಿಎಂ, ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗಬೇಕು. ದೇಶ ಮೊದಲು, ದೇಶದ ನಂತರ ನಾವೆಲ್ಲರೂ ಎಂಬುದನ್ನು ಪ್ರತಿಪಾದಿಸಬೇಕು. ಸಂಕುಚಿತ, ಸ್ವಾರ್ಥ ಮನೋಭಾವ ತೊರೆದು, ದೇಶಕ್ಕಾಗಿ ನಿಲ್ಲುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಕರೆ ನೀಡಿದರು. ಇದನ್ನೂ ಓದಿ: ತ್ರಿಕೋನ ಪ್ರೇಮ ಪ್ರಕರಣ – ರೆಡ್ ಹ್ಯಾಂಡಾಗಿ ಗೆಳೆಯನೊಂದಿಗೆ ಸಿಕ್ಕಿಬಿದ್ದ ಪ್ರೇಯಸಿಗೆ ನಡು ರಸ್ತೆಯಲ್ಲೇ ಚಾಕು ಇರಿದ ಪ್ರಿಯಕರ

    ಸ್ವಾತಂತ್ರ‍್ಯ ಪೂರ್ವದಲ್ಲಿ ಜನರು ದೇಶಕ್ಕಾಗಿ ಪ್ರಾಣ ಕೊಡುತ್ತಿದ್ದರು. ಈಗ ದೇಶಕ್ಕಾಗಿ ಬದುಕಿ, ದುಡಿಯಬೇಕು. ಇನ್ನು ಮುಂದಿನ 25 ವರ್ಷಗಳ ಕಾಲ ದೇಶಕ್ಕಾಗಿ ನಾನೇನು ಮಾಡಿದ್ದೇನೆ ಎಂಬುದಕ್ಕೆ ಉತ್ತರ ಕಂಡುಕೊಳ್ಳಬೇಕು. ದೇಶಕ್ಕೆ ಯುವಜನರೆಂದರೆ ಶಕ್ತಿ, ಯುವಜನರೆಂದರೆ ಭವಿಷ್ಯ. ನವಕರ್ನಾಟಕದಿಂದ ನವಭಾರತ ನಿರ್ಮಾಣ ಮಾಡಬೇಕಿದೆ. ಪ್ರಧಾನಮಂತ್ರಿಗಳು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಸಂಕಲ್ಪ ಮಾಡಿದ್ದು, ಅದಕ್ಕೆ ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕೊಡುಗೆಯನ್ನು ನೀಡುವ ಗುರಿ ಇದೆ ಎಂದು ಹೇಳಿದರು.

    ಭಾರತದ ಶಕ್ತಿ ಇಡೀ ವಿಶ್ವವೇ ಗಮನಿಸುತ್ತಿದೆ: ಯುವಕರು ಭಾರತದ ಮುಂದಿನ ಭವಿಷ್ಯವನ್ನು ನಿರ್ಮಿಸುವ ಭಾಗ್ಯಶಾಲಿಗಳು. 75 ವರ್ಷ ವ್ಯಕ್ತಿಗಾದರೆ ದೊಡ್ಡ ವಯಸ್ಸು. ಯುವಕರಿಗೆ ಸೇರಿರುವ ಯುವ ದೇಶ, ಭವ್ಯ ಭವಿಷ್ಯವಿರುವ ದೇಶ ನಮ್ಮದು. ಶೇ.46 ಯುವಶಕ್ತಿ ಇರುವ ದೇಶ ಭಾರತ. ಸರ್ಕಾರದ ವತಿಯಿಂದ 1.8 ಕೋಟಿ ಧ್ವಜಗಳನ್ನು ನೀಡಿದ್ದೇವೆ. ಜನ ಸ್ವಪ್ರೇರಣೆಯಿಂದ ಧ್ವಜ ಕೊಂಡಿದ್ದಾರೆ. 25 ಲಕ್ಷ ಮನೆಗಳ ಮೇಲೆ ಧ್ವಜ ಹಾರಾಡುತ್ತಿವೆ. ಪ್ರತಿ ಗ್ರಾಮ, ಮನೆಯಲ್ಲಿ ಧ್ವಜ ಹಾರಾಡುತ್ತಿದೆ. ತ್ರಿವರ್ಣದ ಶಕ್ತಿ ಎಲ್ಲರನ್ನು ಒಗ್ಗೂಡಿಸುವ ಶಕ್ತಿಯಾಗಿದ್ದು, ಭಾರತದ ಶಕ್ತಿಯನ್ನು ಇಡೀ ವಿಶ್ವವೇ ಗಮನಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಭೂಮಿಯ ತೇವಾಂಶ ಹೆಚ್ಚಾಯ್ತು – ಮಲೆನಾಡಲ್ಲಿ ಮಳೆ ಕಡಿಮೆಯಾದ್ರೂ ಅನಾಹುತ ಕಡಿಮೆಯಾಗ್ತಿಲ್ಲ

    ಸ್ವಾತಂತ್ರ‍್ಯ ಹೋರಾಟಕ್ಕೆ ದಿವ್ಯ ಇತಿಹಾಸವಿದೆ: ಸ್ವಾತಂತ್ರ‍್ಯ ಸುಲಭವಾಗಿ ಬಂದಿಲ್ಲ. ಹಲವರ ಹೋರಾಟ, ತ್ಯಾಗ, ಬಲಿದಾನದಿಂದ ಬಂದಿದೆ. ಸಾವಿರಾರು ಜನ ಅನಾಮಧೇಯ ಹೋರಾಟಗಾರರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ‍್ಯ ಎಲ್ಲರ ಹಕ್ಕು. ಹೋರಾಟವೂ ಸಾವಿರಾರು ಅನಾಮಧೇಯರಿಗೆ ಸೇರಿದೆ. ಯಾರದ್ದೇ ಸ್ವತ್ತಲ್ಲ. ಹೋರಾಟದಲ್ಲಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ವಿದ್ಯಾವಂತರು ಎಲ್ಲರೂ ಸೇರಿದ್ದರು. ಸ್ವಾತಂತ್ರ‍್ಯ ಹೋರಾಟಕ್ಕೆ ದಿವ್ಯ ಇತಿಹಾಸವಿದೆ. ಮೊಟ್ಟ ಮೊದಲು ಸ್ವಾತಂತ್ರ‍್ಯ ಹೋರಾಟದ ಕಹಳೆಯನ್ನು ಮೊಳಗಿಸಿದ್ದು ಕನ್ನಡ ನಾಡಿನ ಹೆಮ್ಮೆಯ ರಾಣಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ. ಸ್ವಾತಂತ್ರ‍್ಯಕ್ಕಾಗಿ ಪ್ರಾಣ ಕೊಟ್ಟವರು ರಾಜ್ಯದಲ್ಲಿ ಇದ್ದಾರೆ. ಮೈಲಾರ ಮಹಾದೇವಪ್ಪ ಬ್ರಿಟಿಷರ ಗುಂಡಿಗೆ ಬಲಿಯಾದರು. ಸಾಹುಕಾರ ಚೆನ್ನಯ್ಯ, ಇವರನ್ನು ನೆನಪಿಡಬೇಕು. ಇತಿಹಾಸದಲ್ಲಿದ್ದವರು ಭಾರತದ ಭವಿಷ್ಯ ಬರೆದಿದ್ದಾರೆ ಎಂದರು. ಇದನ್ನೂ ಓದಿ: ಒಡಿಶಾ ಸರ್ಕಾರದಿಂದ ನವ ವಿವಾಹಿತರಿಗೆ ಕಾಂಡೋಮ್, ಪ್ರೆಗ್ನೆನ್ಸಿ ಟೂಲ್ ಹೊಂದಿದ `ವೆಡ್ಡಿಂಗ್ ಕಿಟ್’ ಗಿಫ್ಟ್

    ಭಾರತವನ್ನು ಶ್ರೇಷ್ಠವಾಗಿಸುವ ಜವಾಬ್ದಾರಿ ಯುವಕರ ಮೇಲಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನು ದಕ್ಷತೆಯಿಂದ ನಡೆಸುತ್ತಿದ್ದಾರೆ. ಧೀಮಂತ ನಾಯಕರಾದ ಅವರು ಸಶಕ್ತ, ಸಂಪದ್ಭರಿತ ಭಾರತ ಕಟ್ಟಲು ಶ್ರಮಿಸುತ್ತಿದ್ದಾರೆ. ಆತ್ಮನಿರ್ಭರ ಭಾರತ ಎಂದು ಕರೆ ಕೊಟ್ಟಿದ್ದಾರೆ. ರೈತರು, ವಿದ್ಯಾರ್ಥಿಗಳು, ಬಡವರು, ಮಹಿಳೆಯರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು `ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್’ ಎಂಬುದು ಪ್ರಧಾನ ಮಂತ್ರಿಯವರ ಮೂಲಮಂತ್ರ. ಸ್ವಾತಂತ್ರ‍್ಯೋತ್ಸವ 75 ವರ್ಷಗಳ ಮುಂದಿನ 25 ವರ್ಷದ ಅಮೃತಕಾಲದಲ್ಲಿ ವಿಶ್ವದಲ್ಲಿ ಭಾರತವನ್ನು ಶ್ರೇಷ್ಠವಾಗಿಸುವ ಜವಾಬ್ದಾರಿ ನಮ್ಮೆಲ್ಲ ಯುವಕರ ಮೇಲಿದೆ. ಇದು ನಮ್ಮ ಬದ್ಧತೆ ಮತ್ತು ಸಂಕಲ್ಪ. ಸಮಬಾಳಿನ, ಸಮಪಾಲಿನ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕೆಂದು ಯುವಕರಿಗೆ ಕರೆ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ತ್ರಿವರ್ಣ ಧ್ವಜ ಭಾರತೀಯರಿಗಷ್ಟೇ ಅಲ್ಲ, ವಿದೇಶದಲ್ಲಿರುವ ಪ್ರಜೆಗಳಿಗೂ ರಕ್ಷಣಾತ್ಮಕ ಗುರಾಣಿ: ಮೋದಿ ಬಣ್ಣನೆ

    ತ್ರಿವರ್ಣ ಧ್ವಜ ಭಾರತೀಯರಿಗಷ್ಟೇ ಅಲ್ಲ, ವಿದೇಶದಲ್ಲಿರುವ ಪ್ರಜೆಗಳಿಗೂ ರಕ್ಷಣಾತ್ಮಕ ಗುರಾಣಿ: ಮೋದಿ ಬಣ್ಣನೆ

    ನವದೆಹಲಿ: ತ್ರಿವರ್ಣ ಧ್ವಜವು ಭಾರತೀಯರಿಗಷ್ಟೇ ಅಲ್ಲ, ವಿದೇಶಗಳಲ್ಲಿರುವ ಪ್ರಜೆಗಳಿಗೂ ರಕ್ಷಣಾತ್ಮಕ ಗುರಾಣಿಯಾಗಿದೆ ಎಂದು ತಿರಂಗಾದ ಮಹತ್ವದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮ್ಮ ಅಧಿಕೃತ ನಿವಾಸದಲ್ಲಿ ಕಾಮನ್‌ವೆಲ್ತ್- 2022 ಕ್ರೀಡಾಕೂಟದ ಎಲ್ಲಾ ಪದಕ ವಿಜೇತರೊಂದಿಗೆ ಸಂವಾದ ನಡೆಸಿದರು. ಯುದ್ಧಪೀಡಿತ ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಲ್ಲಿ ತ್ರಿವರ್ಣ ಧ್ವಜದ ಮಹತ್ವವನ್ನು ಪ್ರಧಾನಿ ಈ ವೇಳೆ ಸ್ಮರಿಸಿದ್ದಾರೆ. ಇದನ್ನೂ ಓದಿ: ‘ಹರ್ ಘರ್ ತಿರಂಗ’ ರ‍್ಯಾಲಿ ವೇಳೆ ಮಾಜಿ ಸಿಎಂ ನಿತಿನ್ ಪಟೇಲ್‍ಗೆ ತಿವಿದ ಹಸು

    ತ್ರಿವರ್ಣ ಧ್ವಜದ ಶಕ್ತಿ ಏನು? ನಾವು ಇದನ್ನು ಸ್ವಲ್ಪ ಕಾಲದ ಹಿಂದೆ ಉಕ್ರೇನ್‌ನಲ್ಲಿ ನೋಡಿದ್ದೇವೆ. ತ್ರಿವರ್ಣ ಧ್ವಜವು ಭಾರತೀಯರಿಗೆ ಮಾತ್ರವಲ್ಲದೆ ಇತರ ದೇಶಗಳಲ್ಲಿರುವ ಪ್ರಜೆಗಳಿಗೆ ಯುದ್ಧಭೂಮಿಯಿಂದ ಹೊರಬರಲು ರಕ್ಷಣಾತ್ಮಕ ಗುರಾಣಿಯಾಗಿದೆ ಎಂದು ಹೇಳಿದ್ದಾರೆ.

    ಕ್ರೀಡಾಪಟುಗಳ ಕಠಿಣ ಪರಿಶ್ರಮ ಮತ್ತು ಸ್ಫೂರ್ತಿದಾಯಕ ಸಾಧನೆಯಿಂದ ದೇಶವು ‘ಆಜಾದಿ ಕಾ ಅಮೃತ್ ಕಾಲ’ವನ್ನು ಪ್ರವೇಶಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ತ್ರಿವರ್ಣ ಧ್ವಜದ ಡಿಪಿ ಹಾಕಿದ ಆರ್‌ಎಸ್‌ಎಸ್‌

    ಇತ್ತೀಚೆಗೆ ಮುಕ್ತಾಯಗೊಂಡ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಅಥ್ಲೀಟ್‌ಗಳ ಸಾಧನೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಕ್ರೀಡಾಪಟುಗಳು ಕೇವಲ ದೇಶಕ್ಕಾಗಿ ಪದಕಗಳನ್ನು ಗೆದ್ದುಕೊಂಡಿಲ್ಲ. ‘ಏಕ ಭಾರತ, ಶ್ರೇಷ್ಠ ಭಾರತ’ ಎಂಬ ಮನೋಭಾವವನ್ನು ಬಲಪಡಿಸಿದ್ದಾರೆ. ಆ ಮೂಲಕ ಎಲ್ಲಾ ಕ್ಷೇತ್ರಗಳ ಯುವಕರನ್ನು ಪ್ರೇರೇಪಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಭಾರತ ಸರ್ಕಾರವು ಈ ವರ್ಷದ ಆರಂಭದಲ್ಲಿ ʻಆಪರೇಷನ್ ಗಂಗಾʼ ಪ್ರಾರಂಭಿಸಿತ್ತು. ಈ ವೇಳೆ ತ್ರಿವರ್ಣ ಧ್ವಜವನ್ನು ಹಿಡಿದು ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತವರಿಗೆ ಮರಳಿದ್ದರು. ಇದೇ ವೇಳೆ ಪಾಕಿಸ್ತಾನ ವಿದ್ಯಾರ್ಥಿಗಳು ಸಹ ಭಾರತದ ಧ್ವಜ ಹಿಡಿದು ಸುರಕ್ಷಿತವಾಗಿ ಹಿಂತಿರುಗಿ ಕೃತಜ್ಞತೆ ಸಲ್ಲಿಸಿದ್ದು ಸುದ್ದಿಯಾಗಿತ್ತು. ಇದನ್ನೂ ಓದಿ: ಮೋದಿ ಚೀನಾದೊಂದಿಗೆ `ರಾಷ್ಟ್ರಧ್ವಜ ಒಪ್ಪಂದ’ ಮಾಡ್ಕೊಂಡಿದ್ದಾರೆ – ರಾಹುಲ್ ಗಾಂಧಿ ಆರೋಪ

    ಭಾರತದ 75ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮಿಸಲು ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವುದಕ್ಕೆ ಉತ್ತೇಜಿಸಲು ಆಜಾದಿ ಕಾ ಅಮೃತ್ ಮಹೋತ್ಸವದ ಆಶಯದಲ್ಲಿ ‘ಹರ್ ಘರ್ ತಿರಂಗ’ ಅಭಿಯಾನ ನಡೆಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಇಂದಿನಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ

    ಇಂದಿನಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ

    ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75ನೇ ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದೆ. ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಲು ರಾಜ್ಯದಲ್ಲೂ ಸಕಲ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ, ಸರ್ಕಾರಿ, ಖಾಸಗಿ ಕಟ್ಟಡಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ ಇಟ್ಟುಕೊಳ್ಳಲಾಗಿದೆ.

    ಈಗಾಗಲೇ ಧ್ವಜ ಮಾರಾಟ, ವಿತರಣೆ ಕಾರ್ಯ ಬಹುತೇಕ‌ ಮುಗಿದಿದೆ.‌ ಇಂದಿನಿಂದ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ವಾತಾವರಣ ನಿರ್ಮಾಣ ಆಗಲಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸರ್ಕಾರಿ ಕಚೇರಿಗಳಲ್ಲಿ ಈ ಮೂರು ದಿನಗಳಂದು ಪ್ರತಿ ದಿನ ಬೆಳಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಇಳಿಸಬೇಕು. ಹಾಗೂ ಮನೆಗಳಲ್ಲಿ ಇಂದು ಬೆಳಗ್ಗೆ ಧ್ವಜಾರೋಹಣ ಮಾಡಿ 15ರವರೆಗೆ ಇರಿಸಬಹುದಾಗಿದೆ. ಇದನ್ನೂ ಓದಿ: ತ್ರಿವರ್ಣ ಧ್ವಜದ ಡಿಪಿ ಹಾಕಿದ ಆರ್‌ಎಸ್‌ಎಸ್‌

    ಹರ್ ಘರ್ ತಿರಂಗಾ ಯಶಸ್ವಿಗೊಳಿಸುವ ಸಂಬಂಧ ಮುಖ್ಯಮಂತ್ರಿಗಳು ಹಲವು ಸುತ್ತಿನ ಸಭೆಗಳನ್ನು ನಡೆಸಿ ಎಲ್ಲ ಜಿಲ್ಲಾಡಳಿತಗಳಿಗೂ ಅಗತ್ಯ ಸೂಚನೆ ನೀಡಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಗಳು ರಾಜ್ಯದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ಬೆಂಗಳೂರಿನಲ್ಲಿಂದು ಬೆಳಗ್ಗೆಯಿಂದಲೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಸಚಿವರು, ಸಂಸದರು, ಶಾಸಕರ ನೇತೃತ್ವದಲ್ಲಿ ತಿರಂಗಾ ಯಾತ್ರೆ ಮತ್ತು ಬೈಕ್ ರ‍್ಯಾಲಿಗಳನ್ನು ನಡೆಸಲಾಗುತ್ತದೆ. ಜಿಲ್ಲೆಗಳಲ್ಲೂ ತಿರಂಗಾ ಯಾತ್ರೆಗಳನ್ನು ಕೈಗೊಳ್ಳಲಾಗುತ್ತದೆ.‌

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ಶುರುವಾಯ್ತು ಹರ್ ಘರ್ ತಿರಂಗಾ ಹವಾ – ತಿರಂಗಾ ನಡೆಗೆ ಚಾಲನೆ ನೀಡಿದ ಪ್ರಹ್ಲಾದ್ ಜೋಶಿ

    ರಾಜ್ಯದಲ್ಲಿ ಶುರುವಾಯ್ತು ಹರ್ ಘರ್ ತಿರಂಗಾ ಹವಾ – ತಿರಂಗಾ ನಡೆಗೆ ಚಾಲನೆ ನೀಡಿದ ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕರೆ ನೀಡಿದ್ದಾರೆ.

    ನಾಳೆಯಿಂದ ಆರಂಭವಾಗಲಿರುವ ಹರ್ ಘರ್ ತಿರಂಗಾ ಅಭಿಯಾನದ ಮುನ್ನಾ ದಿನವೇ ರಾಜ್ಯದಲ್ಲಿ ಹರ್ ಘರ್ ತಿರಂಗಾ ಹವಾ ಆರಂಭವಾಗಿದೆ. ಮನೆ ಮನೆಗಳಲ್ಲೂ ತ್ರಿವರ್ಣ ಧ್ವಜ ಹಾರಾಡಬೇಕು. ಈ ನಿಟ್ಟಿನಲ್ಲಿ ಅಭಿಯಾನದ ಮುನ್ನಾ ದಿನವೇ ಪ್ರಹ್ಲಾದ್ ಜೋಶಿ ತಿರಂಗಾ ನಡೆ ಯಾತ್ರೆಗೆ ಚಾಲನೆ ನೀಡಿದರು.  ಇದನ್ನೂ ಓದಿ: ಆ.28ಕ್ಕೆ ನೋಯ್ಡಾದ ಸೂಪರ್‌ಟೆಕ್‌ನ ಅವಳಿ ಟವರ್‌ ನೆಲಸಮ – ಅವಧಿ ವಿಸ್ತರಿಸಿದ ಸುಪ್ರೀಂ

    ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಇಂದು ತಿರಂಗಾ ನಡೆ ಆಯೋಜಿಸಲಾಗಿತ್ತು. ತಿರಂಗಾ ನಡೆ ಯಾತ್ರೆಯನ್ನು ಪ್ರಹ್ಲಾದ್ ಜೋಶಿ ಉದ್ಘಾಟಿಸುವ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಾಥ್ ನೀಡಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ವಿಶೇಷವಾಗಿ ಪ್ರಹ್ಲಾದ್ ಜೋಶಿಯವರು ಈ ಯಾತ್ರೆಯಲ್ಲಿ ಡೋಲು ಹಾಗೂ ವೀರಗಾಸೆ ವಾದ್ಯಗಳನ್ನು ಬಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನಕ್ಕೆ ಜನರಲ್ಲಿ ಹುರುಪು ತುಂಬಿದರು.

    ದೇಶಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ಪ್ರತಿ ಮನೆಯ ಮೇಲೆ ನಮ್ಮ ರಾಷ್ಟ್ರಧ್ವಜವನ್ನು ಹಾರಿಸಿ ದೇಶದೊಂದಿಗೆ ನಮ್ಮ ರಾಷ್ಟ್ರ ಭಕ್ತಿಯನ್ನು ವ್ಯಕ್ತಪಡಿಸಬೇಕು. ಈ ಅಭಿಯಾನವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಪ್ರಹ್ಲಾದ್ ಜೋಶಿ ರಾಜ್ಯದ ಜನರಿಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಈಗ ಚುನಾವಣೆ ನಡೆದರೆ ಎನ್‌ಡಿಎಗೆ 286, ಕರ್ನಾಟಕದಲ್ಲಿ ಬಿಜೆಪಿಗೆ 13 ಸ್ಥಾನ

    Live Tv
    [brid partner=56869869 player=32851 video=960834 autoplay=true]