Tag: ಹಲಗಲಿ ಸಿನಿಮಾ

  • ಬರ್ತ್‌ ಡೇ ಸೆಲೆಬ್ರೇಷನ್ – ಅಭಿಮಾನಿಗಳಿಗೆ ಶಾಕ್ ಕೊಟ್ಟ ನಟ ಡಾಲಿ ಧನಂಜಯ್!

    ಬರ್ತ್‌ ಡೇ ಸೆಲೆಬ್ರೇಷನ್ – ಅಭಿಮಾನಿಗಳಿಗೆ ಶಾಕ್ ಕೊಟ್ಟ ನಟ ಡಾಲಿ ಧನಂಜಯ್!

    ಸ್ಟಾರ್ ನಟರು ತಮ್ಮ ಹುಟ್ಟುಹಬ್ಬವನ್ನ ಅಭಿಮಾನಿಗಳ ಜೊತೆ ಆಚರಿಸಿಕೊಳ್ಳಲು ಇಷ್ಟಪಡೋದುಂಟು. ಆದರೆ ಕೆಲವು ಮುಖ್ಯ ಕಾರಣಕ್ಕೆ ಸ್ಟಾರ್‌ಗಳು ಅಭಿಮಾನಿಗಳೊಂದಿಗೆ (Fans) ಹುಟ್ಟುಹಬ್ಬ ಆಚರಿಸಿಕೊಳ್ಳೋದನ್ನ ಮಿಸ್ ಮಾಡ್ಕೊಳ್ತಾರೆ. ಇದೀಗ ಡಾಲಿ ಧನಂಜಯ್ (Daali Dhananjay) ಕೂಡ ಈ ಬಾರಿ ಹುಟ್ಟುಹಬ್ಬವನ್ನ ಅಭಿಮಾನಿಗಳ ಜೊತೆ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಕಾರಣವನ್ನೂ ತಿಳಿಸಿದ್ದಾರೆ ನಟ ರಾಕ್ಷಸ ಧನಂಜಯ್.

     

    View this post on Instagram

     

    A post shared by Daali Dhananjaya (@dhananjaya_ka) 

    ಆಗಸ್ಟ್ 23ಕ್ಕೆ ಧನಂಜಯ್ ಹುಟ್ಟುಹಬ್ಬ (Birthday) ಆಚರಿಸಿಕೊಳ್ತಿದ್ದಾರೆ. ಆದರೆ ಈ ಬಾರಿ ಧನಂಜಯ್ ಅಭಿಮಾನಿಗಳೊಂದು ಆಚರಿಸಿಕೊಳ್ತಿಲ್ಲ. ಕೆಲಸದ ನಿಮಿತ್ತ ಹೊರಗಡೆ ಹೋಗುವ ಕಾರಣಕ್ಕೆ ಸಂಭ್ರಮಾಚರಣೆಯನ್ನ ನಿಮ್ಮೊಂದಿಗೆ ಮಾಡುತ್ತಿಲ್ಲ ಎಂದಿದ್ದಾರೆ ಡಾಲಿ. ಅಂದಹಾಗೆ ಇದೀಗ ಧನಂಜಯ್ ಐತಿಹಾಸಿಕ ಹಲಗಲಿ (Halagali) ಚಿತ್ರ ಸೇರಿದಂತೆ ಹಲವು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ.

    ಇನ್ನು 666 ಸಿನಿಮಾದಲ್ಲಿ ಶೂಟಿಂಗ್ ನಿಮಿತ್ತ ಬೇರೆ ಊರಿನಲ್ಲಿ ಇರುವ ಸಾಧ್ಯತೆ ಇದೆ. ಹೀಗಾಗಿ ಧನಂಜಯ್ ಈ ಬಾರಿ ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ತಿಲ್ಲ. ಈ ಬಾರಿ ಬಹುತೇಕ ಸ್ಟಾರ್‌ಗಳು ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಅವರ ಸಾಲಿಗೆ ಇದೀಗ ಡಾಲಿ ಧನಂಜಯ್ ಕೂಡ ಸೇರಿದ್ದಾರೆ.

  • ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ಡಾಲಿ

    ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ಡಾಲಿ

    ನ್ನಡ ಚಿತ್ರರಂಗದ ಬಿಗ್ ಬಜೆಟ್ ‘ಹಲಗಲಿ’ (Halagali) ಸಿನಿಮಾ ಬಗ್ಗೆ ಇದೀಗ ಹೊಸ ಅಪ್‌ಡೇಟ್‌ವೊಂದು ಸಿಕ್ಕಿದೆ. ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಡಾರ್ಲಿಂಗ್ ಕೃಷ್ಣ ಈ ಚಿತ್ರದಿಂದ ಹೊರನಡೆದಿದ್ದರು. ಈ ಬೆನ್ನಲ್ಲೇ ಚಿತ್ರದ ಲೀಡ್ ಪಾತ್ರಕ್ಕೆ ನಟರಾಕ್ಷಸ ಡಾಲಿ ಎಂಟ್ರಿ ಕೊಡುವ ಬಗ್ಗೆ ಸುದ್ದಿ ಹಬ್ಬಿದೆ.

    ನಟ ಕಮ್ ನಿರ್ಮಾಪಕ ಡಾಲಿ ಧನಂಜಯ್ ಕನ್ನಡದ ಜೊತೆ ಪರಭಾಷಾ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಹೊಸ ಪ್ರತಿಭೆಗಳಿಗೆ ಡಾಲಿ ಅವಕಾಶ ನೀಡುತ್ತಿದ್ದಾರೆ. ಇದನ್ನೂ ಓದಿ:ಚಂದ್ರಕಾಂತ್, ಪವಿತ್ರಾ ಮದುವೆ ರೂಮರ್ಸ್ ಬಗ್ಗೆ ಸ್ಪಷ್ಟನೆ ನೀಡಿದ ಪುತ್ರ

    ‘ಹಲಗಲಿ’ ಸಿನಿಮಾ ಅತೀ ದೊಡ್ಡ ಪ್ರಾಜೆಕ್ಟ್ ಆಗಿದ್ದು, ಡಾಲಿ ಈ ಸಿನಿಮಾಗೆ ಎಂಟ್ರಿ ಕೊಡುವ ಬಗ್ಗೆ ಸುದ್ದಿ ಹಬ್ಬಿದೆ. ಸಿನಿಮಾ ಕಥೆ ಮತ್ತು ಪಾತ್ರದ ಬಗ್ಗೆ ಡಾಲಿ ಮಾತನಾಡಿ ಚಿತ್ರತಂಡ ಮಾತುಕತೆ ನಡೆಸಿದೆ. ಶೀಘ್ರದಲ್ಲೇ ಶೂಟಿಂಗ್‌ಗೆ ನಡೆಯಲಿದೆ ಎನ್ನಲಾಗಿದೆ. ಅಧಿಕೃತ ಮಾಹಿತಿ ಚಿತ್ರತಂಡದಿಂದ ಹೊರಬರಬೇಕಿದೆ.

    ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆರಿಲ್ಲಾ ವಾರ್ ಮಾಡುವ ಮೂಲಕ ಬ್ರಿಟಿಷರಿಗೆ ಸಿಂಹಸ್ವಪ್ನರಾಗಿದ್ದ ಹಲಗಲಿ ಬೇಡರ ಕಥೆಯನ್ನು ಸಿನಿಮಾ ನಿರ್ದೇಶಕ ಸುಕೇಶ್ ಡಿ.ಕೆ. ಮಾಡುತ್ತಿದ್ದಾರೆ. ಇದೊಂದು ಐತಿಹಾಸಿಕ ಸಿನಿಮಾವಾಗಿದ್ದರಿಂದ ಮತ್ತು ಆ ಕಾಲ ಘಟ್ಟವನ್ನು ಕಟ್ಟಿ ಕೊಡಬೇಕಾಗಿದ್ದರಿಂದ ಬರೋಬ್ಬರಿ 80 ಕೋಟಿ ರೂಪಾಯಿಯನ್ನು ಈ ಸಿನಿಮಾಗಾಗಿ ಖರ್ಚು ಮಾಡುತ್ತಿದ್ದಾರೆ ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಿಪಳ್ಯ. ಇದೊಂದು ಅಪರೂಪದ ಕಥನವಾಗಿದ್ದರಿಂದ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

  • ‘ಹಲಗಲಿ’ ಚಿತ್ರದಿಂದ ಹೊರಬಂದಿದ್ದೇಕೆ? ಕಾರಣ ತಿಳಿಸಿದ ಡಾರ್ಲಿಂಗ್ ಕೃಷ್ಣ

    ‘ಹಲಗಲಿ’ ಚಿತ್ರದಿಂದ ಹೊರಬಂದಿದ್ದೇಕೆ? ಕಾರಣ ತಿಳಿಸಿದ ಡಾರ್ಲಿಂಗ್ ಕೃಷ್ಣ

    ಸ್ಯಾಂಡಲ್‌ವುಡ್ ನಟ ಡಾರ್ಲಿಂಗ್ ಕೃಷ್ಣ (Darling Krishna) ತಮ್ಮ ಮೊದಲ ಪ್ಯಾನ್ ಇಂಡಿಯಾ ಚಿತ್ರ ಹಲಗಲಿ ಸಿನಿಮಾದಿಂದ ಹೊರಬಂದಿದ್ದಾರೆ. ಒಂದೇ ಚಿತ್ರಕ್ಕೆ 3 ವರ್ಷ ಡೇಟ್ಸ್ ಕೊಡೋಕೆ ಆಗಲ್ಲ ಅಂತ ಚಿತ್ರತಂಡ ಡಾರ್ಲಿಂಗ್ ಕೃಷ್ಣ ಹೊರನಡೆದಿದ್ದಾರೆ. ಈ ಚಿತ್ರದ ಕುರಿತು ಕೃಷ್ಣ ಮಾತನಾಡಿದ್ದಾರೆ. ಇದನ್ನೂ ಓದಿ:‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್ ರಿಲೀಸ್

    ‘ಹಲಗಲಿ’ (Halagali Film) ಸಿನಿಮಾ ಅತೀ ದೊಡ್ಡ ಪ್ರಾಜೆಕ್ಟ್ ಆದರೆ ಬೇರೆ ಸಿನಿಮಾಗಳಲ್ಲಿ ನಟಿಸುತ್ತಾ ಈ ಚಿತ್ರದಲ್ಲಿ ನಟಿಸಲು ಡಾರ್ಲಿಂಗ್ ಕೃಷ್ಣ ರೆಡಿ ಇದ್ದರು. ಆದರೆ ಚಿತ್ರತಂಡ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ಮೂರು ವರ್ಷ ಬೇರೆ ಸಿನಿಮಾದಲ್ಲಿ ನಟಿಸದೇ ಈ ಸಿನಿಮಾಗಾಗಿ ಮೀಸಲಿಡಲು ಸಾಧ್ಯವಿಲ್ಲ ಎಂದು ಕೃಷ್ಣ ಸಿನಿಮಾದಿಂದ ಹೊರಬಂದಿರುವ ಬಗ್ಗೆ ತಿಳಿಸಿದ್ದಾರೆ.

    ‘ಹಲಗಲಿ’ ಸಿನಿಮಾಗಾಗಿ ಕಳೆದ 6 ತಿಂಗಳಿಂದ ಬೇರೆ ಯಾವುದೇ ಸಿನಿಮಾವನ್ನು ಒಪ್ಪಿಕೊಂಡಿರಲಿಲ್ಲ. ಇತ್ತೀಚೆಗೆ ಫಾದರ್ ಸಿನಿಮಾದ ಆಫರ್ ಸಿಕ್ಕಿದೆ. ಇದಾದ ನಂತರ ಮತ್ತೆ ನಿರ್ದೇಶಕ ಶಶಾಂಕ್ ಜೊತೆ ಹೊಸ ಸಿನಿಮಾ ಮಾಡುವ ಬಗ್ಗೆ ಕೃಷ್ಣ ತಿಳಿಸಿದ್ದರು. ಆದರೆ ‘ಹಲಗಲಿ’ ಚಿತ್ರತಂಡ 3 ವರ್ಷದ ಕಮೀಟ್‌ಮೆಂಟ್ ಕೇಳಿದ್ರಿಂದ ಚಿತ್ರ ಕೈಬೀಡಬೇಕಾಯ್ತು ಎಂದು ಬೇರೆ ಏನು ವೈಯಕ್ತಿಕ ಕಾರಣ ಇಲ್ಲ ಎಂದು ಡಾರ್ಲಿಂಗ್ ಕೃಷ್ಣ ಹೇಳಿದ್ದಾರೆ.

    ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಗೆರಿಲ್ಲಾ ವಾರ್ ಮಾಡುವ ಮೂಲಕ ಬ್ರಿಟಿಷರಿಗೆ ಸಿಂಹಸ್ವಪ್ನರಾಗಿದ್ದ ಹಲಗಲಿ ಬೇಡರ ಕಥೆಯನ್ನು ಸಿನಿಮಾ ನಿರ್ದೇಶಕ ಸುಕೇಶ್ ಡಿ.ಕೆ. ಮಾಡುತ್ತಿದ್ದಾರೆ. ಇದೊಂದು ಐತಿಹಾಸಿಕ ಸಿನಿಮಾವಾಗಿದ್ದರಿಂದ ಮತ್ತು ಆ ಕಾಲ ಘಟ್ಟವನ್ನು ಕಟ್ಟಿ ಕೊಡಬೇಕಾಗಿದ್ದರಿಂದ ಬರೋಬ್ಬರಿ 80 ಕೋಟಿ ರೂಪಾಯಿಯನ್ನು ಈ ಸಿನಿಮಾಗಾಗಿ ಖರ್ಚು ಮಾಡುತ್ತಿದ್ದಾರೆ ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಿಪಳ್ಯ. ಇದೊಂದು ಅಪರೂಪದ ಕಥನವಾಗಿದ್ದರಿಂದ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.